Author: admin

ಬೆಂಗಳೂರು: ಕೆಎಂಎಫ್​​ನ ನಂದಿನಿ ರಾಷ್ಟ್ರ ಮಟ್ಟದ ಬ್ರ್ಯಾಂಡ್. ದೇಶದಲ್ಲಿ ನಂ.1 ಸ್ಥಾನಕ್ಕೆ ಏಳಿಗೆ ಹೊಂದಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಯಲ್ಲಿ ಶನಿವಾರ ಹೇಳಿದರು. ಅಮುಲ್ ಉತ್ಪನ್ನಗಳು ಬೆಂಗಳೂರಿನಲ್ಲಿ ಮಾರಾಟವಾಗುವ ಬಗ್ಗೆ ತೀವ್ರ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಪ್ರತಿಕ್ರಿಯಿಸಿದ ಅವರು, ಅಮುಲ್ ವಿಚಾರದಲ್ಲಿ ಕಾಂಗ್ರೆಸ್​ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು. ಅಮುಲ್ ಬ್ರ್ಯಾಂಡ್​ ವಿಚಾರವಾಗಿ ಯಾರೂ ಆತಂಕಪಡಬೇಕಿಲ್ಲ. ನಂದಿನಿ ಬ್ರ್ಯಾಂಡ್ ಉತ್ಪನ್ನಗಳ ವೃದ್ಧಿಗೆ​ ಮತ್ತಷ್ಟು ಕ್ರಮಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು. ಈ ಮಧ್ಯೆ, ನಂದಿನಿ ಬ್ರ್ಯಾಂಡ್ ವಿಚಾರವಾಗಿ ಸ್ಪಷ್ಟನೆ ನೀಡಿದ ಸಚಿವ ಸುಧಾಕರ್, ಹಾಲಿಗೆ ಪ್ರೋತ್ಸಾಹ ಧನ‌ ಕೊಟ್ಟಿದ್ದರೆ‌ ಅದು‌ ಬಿಜೆಪಿ ಸರ್ಕಾರ. ಪ್ರತಿ‌ ಲೀಟರ್ ಗೆ 5 ರೂ. ಪ್ರೋತ್ಸಾಹ ಧನ ಬಿಜೆಪಿ ಸರ್ಕಾರ ಕೊಟ್ಟಿದೆ. ಕೆಎಂಎಫ್ ಆದಾಯದಲ್ಲಿ ಹಾಲು ಉತ್ಪಾದಕರಿಗೆ‌ ಕೊಡುವ ವ್ಯವಸ್ಥೆ ಮಾಡಲಾಗಿದೆ. ನಂದಿನಿ‌ ಹಾಲನ್ನು ಕೇವಲ ರಾಜ್ಯಕ್ಕೆ ಸೀಮಿತ ಮಾಡಬೇಡಿ. ಈಗಾಗಲೇ ಸೇನೆಗೆ, ತಿರುಪತಿ ತಿರುಮಲ,‌ ಮಹಾರಾಷ್ಟ್ರಕ್ಕೆ ನಮ್ಮ ಹಾಲು ಪೂರೈಕೆಯಾಗುತ್ತಿದೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ…

Read More

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಿನಗಳ ದಕ್ಷಿಣ ಭಾರತದ ಪ್ರವಾಸ ಇಂದಿನಿಂದ ಆರಂಭವಾಗಲಿದೆ. ತೆಲಂಗಾಣ, ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳಲ್ಲಿ ಪ್ರವಾಸ. ಪ್ರಧಾನಿ ಇಂದು ಬೆಳಗ್ಗೆ 11.45ಕ್ಕೆ ತೆಲಂಗಾಣದ ಸಿಕಂದರಾಬಾದ್‌ಗೆ ಆಗಮಿಸಿದ್ದು, ಸಿಕಂದರಾಬಾದ್-ತಿರುಪತಿ ವಂದೇಭಾರತ್ ರೈಲು ಸೇವೆಯನ್ನು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 12.15ಕ್ಕೆ ಹೈದರಾಬಾದ್ ಪರೇಡ್ ಮೈದಾನದಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ 11,360 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳನ್ನು ರಾಷ್ಟ್ರಕ್ಕೆ ಹಸ್ತಾಂತರಿಸಲಾಗುವುದು. ಬೀಬಿನಗರದಲ್ಲಿ ಏಮ್ಸ್‌ಗೆ ಶಂಕುಸ್ಥಾಪನೆಯನ್ನೂ ಪ್ರಧಾನಿ ನೆರವೇರಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ತಮಿಳುನಾಡಿಗೆ ಆಗಮಿಸಲಿರುವ ನರೇಂದ್ರ ಮೋದಿ ಅವರು ಚೆನ್ನೈ ವಿಮಾನ ನಿಲ್ದಾಣದಲ್ಲಿ ನವೀಕೃತ ಟರ್ಮಿನಲ್ ಅನ್ನು ಉದ್ಘಾಟಿಸಲಿದ್ದಾರೆ. 1260 ಕೋಟಿ ವೆಚ್ಚದಲ್ಲಿ ಟರ್ಮಿನಲ್‌ನ ಮೊದಲ ಹಂತದ ನವೀಕರಣ ಪೂರ್ಣಗೊಂಡಿದೆ. ಚೆನ್ನೈ-ಕೊಯಮತ್ತೂರು ವಂದೇಭಾರತ್ ರೈಲು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಸಂಜೆ 4:00 ಗಂಟೆಗೆ ಫ್ಲ್ಯಾಗ್ ಆಫ್ ಆಗಲಿದೆ. ಸಂಜೆ 4.45ಕ್ಕೆ ಶ್ರೀರಾಮಕೃಷ್ಣ ಮಠದ 125ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲೂ ಪ್ರಧಾನಿ ಭಾಗವಹಿಸಲಿದ್ದಾರೆ. ಅವರು 6:30 ಕ್ಕೆ ಅಲ್‌ಸ್ಟ್ರಾಮ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಸಾರ್ವಜನಿಕ…

Read More

ಎನ್‌ಸಿಪಿ ಮುಖ್ಯಸ್ಥ ಶರತ್ ಪವಾರ್ ಅದಾನಿಯನ್ನು ಬೆಂಬಲಿಸಿದ್ದಾರೆ. ಅದಾನಿ ವಿವಾದದಲ್ಲಿ ಜೆಪಿಸಿ ತನಿಖೆ ಅಗತ್ಯವಿಲ್ಲ ಎಂದು ಶರತ್ ಪವಾರ್ ಹೇಳಿದ್ದಾರೆ. ಹಿಂಡೆನ್‌ಬರ್ಗ್ ವರದಿಯ ವಿಶ್ವಾಸಾರ್ಹತೆಯನ್ನು ಪವಾರ್ ಪ್ರಶ್ನಿಸಿದ್ದಾರೆ. ಸುಪ್ರೀಂ ಕೋರ್ಟ್ ಈ ಬಗ್ಗೆ ತನಿಖೆಯನ್ನು ಘೋಷಿಸಿದೆ ಮತ್ತು ಅದಕ್ಕಾಗಿ ಸಮಿತಿಯನ್ನು ನೇಮಿಸಲಾಗಿದೆ ಮತ್ತು ಈ ಪರಿಸ್ಥಿತಿಯಲ್ಲಿ ಜೆಪಿಸಿ ತನಿಖೆ ಪ್ರಸ್ತುತವಲ್ಲ ಎಂದು ಪವಾರ್ ಹೇಳಿದರು. ಎನ್‌ಸಿಪಿ ಮುಖ್ಯಸ್ಥರು ವಿರೋಧ ಪಕ್ಷಗಳು ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸುತ್ತಿಲ್ಲ ಮತ್ತು ಸಾಮಾನ್ಯ ಜನರ ಅನೇಕ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಿವೆ ಎಂದು ಟೀಕಿಸಿದರು. 2024ರಲ್ಲಿ ಬಿಜೆಪಿಯನ್ನು ಕಡೆಗಣಿಸಲು ಸಾಧ್ಯವಿಲ್ಲ, ಸ್ಪಷ್ಟ ಮಾರ್ಗಸೂಚಿಗಳೊಂದಿಗೆ ಪ್ರತಿಪಕ್ಷಗಳು ಒಟ್ಟಾಗಿ ಕೆಲಸ ಮಾಡದಿದ್ದರೆ ಒಗ್ಗಟ್ಟಿನಿಂದ ಯಾವುದೇ ಪ್ರಯೋಜನವಾಗದು. ವಿರೋಧ ಪಕ್ಷಗಳ ನಡುವೆ ಒಮ್ಮತ ಅತ್ಯಗತ್ಯ ಎಂದು ಪವಾರ್ ಹೇಳಿದ್ದಾರೆ. ಇದೇ ವೇಳೆ ಪವಾರ್‌ಗೆ ಉತ್ತರ ನೀಡಲು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಮುಂದಾದರು. ಎನ್‌ಸಿಪಿ ಅವರ ದೃಷ್ಟಿಕೋನವನ್ನು ಹೊಂದಿರಬಹುದು, ಆದರೆ ಅದಾನಿ ಗ್ರೂಪ್ ವಿರುದ್ಧದ ಆರೋಪವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಂಬಂಧಿಸಿದೆ ಮತ್ತು…

Read More

ಇಂಡಿಗೋ ವಿಮಾನದಲ್ಲಿ ಮತ್ತೆ ಪ್ರಯಾಣಿಕರ ಅನುಚಿತ ವರ್ತನೆ. ಕುಡಿದ ಮತ್ತಿನಲ್ಲಿದ್ದ ಪ್ರಯಾಣಿಕನೊಬ್ಬ ಇಂಡಿಗೋ ವಿಮಾನದ ತುರ್ತು ಬಾಗಿಲು ತೆರೆಯಲು ಯತ್ನಿಸುತ್ತಿದ್ದ. ದೆಹಲಿ-ಬೆಂಗಳೂರು ವಿಮಾನದಲ್ಲಿ ಈ ಘಟನೆ ನಡೆದಿದೆ. ಪ್ರಯಾಣಿಕರನ್ನು ಬೆಂಗಳೂರಿನ ಸಿಐಎಸ್‌ಎಫ್‌ಗೆ ಹಸ್ತಾಂತರಿಸಲಾಗಿದೆ. ಘಟನೆಯ ಕುರಿತು ಇಂಡಿಗೋ ತನಿಖೆ ಆರಂಭಿಸಿದೆ. ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ 6ಇ 308 ವಿಮಾನದಲ್ಲಿ ಪಾನಮತ್ತ ಪ್ರಯಾಣಿಕನೊಬ್ಬ ತುರ್ತು ಬಾಗಿಲು ತೆರೆಯಲು ಯತ್ನಿಸಿದ್ದಾನೆ. ಇದನ್ನು ಗಮನಿಸಿದ ವಿಮಾನ ಸಿಬ್ಬಂದಿ ಕ್ಯಾಪ್ಟನ್‌ಗೆ ಮಾಹಿತಿ ನೀಡಿ ನಂತರ ಪ್ರಯಾಣಿಕರನ್ನು ಸ್ಥಳಾಂತರಿಸುತ್ತಾರೆ. ಇದರಿಂದಾಗಿ ವಿಮಾನದ ಸುರಕ್ಷಿತ ಕಾರ್ಯಾಚರಣೆಗೆ ಯಾವುದೇ ತೊಂದರೆಯಾಗಿಲ್ಲ ಮತ್ತು ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಏರ್ ಲೈನ್ ವಕ್ತಾರರು ಸ್ಪಷ್ಟಪಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರು: ಇಂದು ಮಧ್ಯಾಹ್ನ ರಾಜ್ಯ ಕಾಂಗ್ರೆಸ್ ನಾಯಕರ ಸುದ್ದಿಗೋಷ್ಠಿ ನಡೆಸಲಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಧ್ಯಾಹ್ನ 3 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಕಾಂಗ್ರೆಸ್​ ಎರಡನೇ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಕೈ ನಾಯಕರು ಬಂಡಾಯದ ಬಾವುಟ ಹಾರಿಸಿದ್ದಾರೆ. ಟಿಕೆಟ್ ಕೈ ತಪ್ಪಿದ ಆಕಾಂಕ್ಷಿಗಳು ಬಂಡಾಯ ಏಳುವ ಬೀತಿ ಹೆಚ್ಚುತ್ತಲೇ ಇರುವುದರಿಂದ ಬಂಡಾಯ ಶಮನಕ್ಕಾಗಿ ಸುದ್ದಿಗೋಷ್ಟಿ ನಡೆಸಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಅಧ್ಯಕ್ಷೆ ದ್ರೌಪದಿ ಮುರ್ಮು ಮಾತನಾಡಿ, ಆನೆ-ಮನುಷ್ಯರ ನಡುವಿನ ಸಂಘರ್ಷಕ್ಕೆ ಮನುಷ್ಯರೇ ಕಾರಣ. ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿಗಳು ಗಜ್ ಉತ್ಸವ-2023 ಅನ್ನು ಉದ್ಘಾಟಿಸುತ್ತಿದ್ದರು. ಆನೆ-ಮನುಷ್ಯ ಸಂಘರ್ಷ ಶತಮಾನಗಳ ಹಿಂದಿನ ಸಮಸ್ಯೆ. ಸಂಘರ್ಷದ ಮೂಲ ಕಾರಣ ಆನೆಗಳ ನೈಸರ್ಗಿಕ ಆವಾಸಸ್ಥಾನ ಅಥವಾ ಚಲನೆಗೆ ಅಡ್ಡಿಯಾಗಿದೆ. ಆನೆಗಳನ್ನು ಗೌರವಿಸುವುದು ಭಾರತೀಯ ಸಂಪ್ರದಾಯ. ಆನೆಗಳು ಸಮೃದ್ಧಿಯ ಸಂಕೇತಗಳಾಗಿವೆ. ಆನೆ ಭಾರತದ ರಾಷ್ಟ್ರೀಯ ಪಾರಂಪರಿಕ ಪ್ರಾಣಿಯೂ ಹೌದು. ಆನೆಗಳನ್ನು ರಕ್ಷಿಸುವುದು ನಮ್ಮ ರಾಷ್ಟ್ರೀಯ ಜವಾಬ್ದಾರಿಯ ಪ್ರಮುಖ ಭಾಗವಾಗಿದೆ. ಆನೆಗಳನ್ನು ಇತರ ಜೀವಿಗಳಂತೆಯೇ ಸಹಾನುಭೂತಿ ಮತ್ತು ಗೌರವದಿಂದ ನೋಡಿಕೊಳ್ಳಬೇಕು. ಭಾರತದಲ್ಲಿ ಪ್ರಕೃತಿ ಮತ್ತು ಸಂಸ್ಕೃತಿ ಒಂದಕ್ಕೊಂದು ಬೆಸೆದುಕೊಂಡಿದೆ. ಪ್ರಕೃತಿ, ಪ್ರಾಣಿ ಮತ್ತು ಪಕ್ಷಿಗಳ ಚಟುವಟಿಕೆಗಳು ಮಾನವೀಯತೆ ಮತ್ತು ಭೂಮಿ ತಾಯಿಯ ಹಿತದೃಷ್ಟಿಯಿಂದ ಕೂಡಿದೆ ಎಂದು ಅಧ್ಯಕ್ಷರು ಹೇಳಿದರು. ಆನೆ ಅಭಯಾರಣ್ಯಗಳಲ್ಲಿನ ಅರಣ್ಯಗಳು ಮತ್ತು ಹಸಿರು ಪ್ರದೇಶಗಳು ಅತ್ಯಂತ ಪರಿಣಾಮಕಾರಿ ಕಾರ್ಬನ್ ಸಿಂಕ್‌ಗಳಾಗಿವೆ. ಆದ್ದರಿಂದ, ಆನೆಗಳ ಸಂರಕ್ಷಣೆ ನಮಗೆಲ್ಲರಿಗೂ ಪ್ರಯೋಜನವನ್ನು ನೀಡುತ್ತದೆ. ಇದು ಹವಾಮಾನ ಬದಲಾವಣೆಯ…

Read More

ಕರ್ನಾಟಕ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ದೆಹಲಿಯಲ್ಲಿ ಸಭೆ ನಡೆಯಲಿದೆ. ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭಾಗವಹಿಸಲಿದ್ದಾರೆ. ಸಭೆಯಲ್ಲಿ ಪಾಲ್ಗೊಳ್ಳಲು ಬಿಎಸ್ ಯಡಿಯೂರಪ್ಪ ಅವರು ನಿನ್ನೆ ರಾತ್ರಿ ದೆಹಲಿಗೆ ಆಗಮಿಸಿದ್ದಾರೆ. ಒಂದೇ ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲು ಬಿಜೆಪಿ ನಿರ್ಧರಿಸಿದೆ. ಕೋರ್ ಗ್ರೂಪ್ ಸಭೆಯಲ್ಲಿ ಪ್ರತಿ ಕ್ಷೇತ್ರಕ್ಕೆ ಮೂರು ಅಭ್ಯರ್ಥಿಗಳ ಹೆಸರನ್ನು ಒಳಗೊಂಡ ಕಿರುಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಈ ಪಟ್ಟಿಯಿಂದ ಕೇಂದ್ರ ಚುನಾವಣಾ ಆಯೋಗ ಅಂತಿಮ ಪಟ್ಟಿಯನ್ನು ಸಿದ್ಧಪಡಿಸಲಿದೆ. ಇಂದು ಸಂಜೆ ಬಿಜೆಪಿ ರಾಷ್ಟ್ರೀಯ ಕೇಂದ್ರ ಕಚೇರಿಯಲ್ಲಿ ಸಭೆ ನಡೆಯಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA …

Read More

ಕಡೂರು: ಚಿಕ್ಕಮಗಳೂರಿನ ಕಡೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ವಿಚಾರವಾಗಿ ವೈಎಸ್‌ವಿ ದತ್ತಾ ಜತೆ ‘ಕೈ’ ಅಭ್ಯರ್ಥಿ ಆನಂದ್ ಶುಕ್ರವಾರ ನಡೆಸಿದ ಸಭೆ ವಿಫಲವಾಗಿದೆ. ಪಕ್ಷೇತರ ಅಭ್ಯರ್ಥಿಯಾಗುವ ಬಗ್ಗೆ ಆನಂದ್ ಸಮ್ಮುಖದಲ್ಲೇ ದತ್ತಾ ಸುಳಿವು ನೀಡಿದ್ದಾರೆ. ಇದು ಕಡೂರು ರಾಜಕೀಯದಲ್ಲಿ ಜಿದ್ದಾಜಿದ್ದಿನ ಪೈಪೋಟಿ ಏರ್ಪಡುವ ಸುಳಿವು ನೀಡಿದೆ. ಕಡೂರು ತಾಲೂಕಿನ ಯಗಟಿ ಗ್ರಾಮದಲ್ಲಿರುವ ದತ್ತಾ ಮನೆಗೆ ತೆರಳಿ ಅವರ ಮನವೊಲಿಸಲು ಆನಂದ್ ಮುಂದಾಗಿದ್ದರು. ಆದರೆ, ತನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲವೆಂದು ದತ್ತಾ ಸ್ಪಷ್ಟಪಡಿಸಿದ್ದಾರೆ. ಬೆಂಬಲಿಗರ ತೀರ್ಮಾನವೇ ಅಂತಿಮ. ಭಾನುವಾರ ಬೆಂಬಲಿಗರ ಜೊತೆ ಸಭೆ ನಡೆಸಿ ತೀರ್ಮಾನಿಸುತ್ತೇನೆ ಎಂದು ದತ್ತಾ ಹೇಳಿದ್ದಾರೆ. ಪಕ್ಷೇತರರಾಗುವಂತೆ ದತ್ತಾಗೆ ಬೆಂಬಲಿಗರು ಮನವಿ ಮಾಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಆನಂದ್ ಎದುರೇ ಬೆಂಬಲಿಗರು ಮನವಿ ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA…

Read More

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 10ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 7ರಂದು ಗದಗ ಜಿಲ್ಲೆ, ಬಾಗಲಕೋಟೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಕೊಪ್ಪಳ ಜಿಲ್ಲೆಯಲ್ಲಿ ಮೊದಲ ವರ್ಷಧಾರೆಯಾಗಿದೆ. ಗದಗ ಜಿಲ್ಲೆಯ ಹಲವೆಡೆ ಗುಡುಗು ಸಹಿತ ಮೋಡ ಮುಸುಕಿದ ವಾತಾವರಣ ಇದ್ದು, ತಾಲೂಕಿನ ಲಿಂಗದಾಳ ಗ್ರಾಮದಲ್ಲಿ ಸಿಡಿಲು ಸಹಿತ ಮಳೆಯಾಗಿದೆ.  ಈ ವೇಳೆ ಜಮೀನಿನಲ್ಲಿ ಕುರಿಗಳನ್ನು ಕಾಯುತ್ತಿದ್ದ ಇಬ್ಬರು ಯುವಕರಿಗೆ ಸಿಡಿಲು ಬಡಿದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶರಣಪ್ಪ ಪುರದ (20), ದೇವರಾಜ್ ಬಾಡಗಿ (16) ಮೃತಪಟ್ಟವರು. ಘಟನೆಯಲ್ಲಿ 12 ವರ್ಷದ ಸುನೀಲ್ ಪುರದ ಎಂಬ ಬಾಲಕನಿಗೂ ಗಾಯಗಳಾಗಿದ್ದು, ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಲ್ಲಿ ನಾಲ್ಕು ಕುರಿಗಳು, ಒಂದು ಆಡು ಕೂಡ ಸಾವನ್ನಪ್ಪಿವೆ. ಸದ್ಯ ಮೃತರಾಗಿರುವ ಶರಣಪ್ಪ ಹಾಗೂ ದೇವರಾಜ್ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಗದಗ ತಹಶೀಲ್ದಾರ್ ಮಲ್ಲಿಕಾರ್ಜುನ್ ಹೆಗ್ಗನ್ನವರ…

Read More

ರಾಮನಗರ: ಪಕ್ಷದ ಕಾರ್ಯಕರ್ತರೇ ನಮ್ಮ ಸ್ಟಾರ್‌ಗಳು, ನಾವು ಯಾವುದೇ ಸ್ಟಾರ್ ಪ್ರಚಾರಕರನ್ನು ಕರೆಸುವುದಿಲ್ಲ ಎಂದು ರಾಮನಗರ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಸಿಎಂ ಬೊಮ್ಮಾಯಿ ಪರ ನಟ ಕಿಚ್ಚ ಸುದೀಪ್ ಪ್ರಚಾರ ನಡೆಸುವ ವಿಚಾರದ ಬಗ್ಗೆ ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಯಾವುದೇ ಸ್ಟಾರ್ ಪ್ರಚಾರಕರನ್ನು ಕರೆಸುವುದಿಲ್ಲ. ನಮಗೆ ಪಂಚರತ್ನ ಯೋಜನೆಯೇ ಸ್ಟಾರ್ ಯೋಜನೆಗಳು. ನಮ್ಮ ಪಕ್ಷದ ಕಾರ್ಯಕರ್ತರೇ ಸ್ಟಾರ್‌ ಪ್ರಚಾರಕರು. ದೇವೇಗೌಡರ 60 ವರ್ಷದ ರಾಜಕಾರಣ, ಅಭಿವೃದ್ಧಿ ಕೊಡುಗೆಯನ್ನು ಜನ ಮರೆತಿಲ್ಲ. ಹೀಗಾಗಿ ನಾವು ಯಾವುದೇ ಸಿನಿಮಾ ಸ್ಟಾರ್ ಪ್ರಚಾರಕರನ್ನು ಕರೆಸುವುದಿಲ್ಲ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More