Subscribe to Updates
Get the latest creative news from FooBar about art, design and business.
- SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!
- 10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!
- ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!
- ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ
- ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
- ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ
- ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು
- ನಮ್ಮ ತುಮಕೂರು ಫಲಶ್ರುತಿ: ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣ: ಸಫಾಯಿ ಕರ್ಮಚಾರಿಗಳ ಆಯೋಗ ಸ್ಥಳಕ್ಕೆ ಭೇಟಿ
Author: admin
ಚಿತ್ರದ ಶೂಟಿಂಗ್ ವೇಳೆ ನಟ ಚಿಯಾನ್ ವಿಕ್ರಮ್ ಗಾಯಗೊಂಡಿದ್ದಾರೆ. ಹೊಸ ಚಿತ್ರ ತಂಗಳನ್ಗಾಗಿ ತಾಲೀಮು ನಡೆಸುತ್ತಿದ್ದಾಗ ಅವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪಕ್ಕೆಲುಬಿಗೆ ಗಾಯವಾಗಿದೆ. ಅಪಘಾತದಲ್ಲಿ ವಿಕ್ರಮ್ ಅವರ ಪಕ್ಕೆಲುಬುಗಳು ಮುರಿತವಾಗಿವೆ ಎಂದು ವ್ಯವಸ್ಥಾಪಕ ಸೂರ್ಯನಾರಾಯಣನ್ ಟ್ವೀಟ್ ಮಾಡಿದ್ದಾರೆ. ಅಪಘಾತದ ನಂತರ ಚಿತ್ರದ ಚಿತ್ರೀಕರಣವನ್ನು ನಿಲ್ಲಿಸಲಾಗಿತ್ತು. ವಿಕ್ರಮ್ ಕೆಲ ಕಾಲ ಚಿತ್ರೀಕರಣದಿಂದ ದೂರ ಇರಲಿದ್ದಾರೆ ಎಂದು ಅವರ ಮ್ಯಾನೇಜರ್ ಮಾಹಿತಿ ನೀಡಿದ್ದಾರೆ. ವಿಕ್ರಮ್ ಅವರು ಶೀಘ್ರದಲ್ಲೇ ಪೂರ್ಣ ಆರೋಗ್ಯಕ್ಕೆ ಮರಳಲಿದ್ದಾರೆ ಎಂದು ತಿಳಿಸಿದ್ದಾರೆ. ಎಲ್ಲರ ಪ್ರೀತಿಗೆ ವಿಕ್ರಮ್ ಧನ್ಯವಾದ ಹೇಳಿದ್ದು, ಆದಷ್ಟು ಬೇಗ ಹಿಂತಿರುಗುವುದಾಗಿ ಭರವಸೆ ನೀಡಿದ್ದಾರೆ ಎಂದು ಸೂರ್ಯನಾರಾಯಣ್ ಟ್ವೀಟ್ ಮಾಡಿದ್ದಾರೆ. ತಂಗಳನ್ ಪಾ ರಂಜಿತ್ ನಿರ್ದೇಶನದ ಚಿತ್ರ. ಚಿತ್ರಕ್ಕಾಗಿ ನಟ ಭಾರಿ ಮೇಕ್ ಓವರ್ ಮಾಡಿದ್ದಾರೆ. ಸ್ಟುಡಿಯೋ ಗ್ರೀನ್ ಮತ್ತು ನೀಲಂ ಪ್ರೊಡಕ್ಷನ್ಸ್ ನಿರ್ಮಾಣದ ಈ ಚಿತ್ರವನ್ನು ಕೆಇ ಜ್ಞಾನವೇಲ್ ರಾಜ ನಿರ್ಮಿಸಿದ್ದಾರೆ. ಮಲಯಾಳಂನ ಪಾರ್ವತಿ ಮತ್ತು ಮಾಳವಿಕಾ ಮೋಹನನ್ ಚಿತ್ರದಲ್ಲಿ ನಾಯಕಿಯರಾಗಿದ್ದಾರೆ. ‘ತಂಗಳನ್’ ಚಿತ್ರದಲ್ಲಿ ಪಶುಪತಿ, ಹರಿ…
ಆರು ಜಿಲ್ಲಾ ಪಂಚಾಯತ್ ಕ್ಷೇತ್ರಗಳಲ್ಲಿ ಕಳೆದ 3 ತಿಂಗಳಿಂದ 10 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಕಾಂಗ್ರೆಸ್ ಮತ್ತು ಜೆಡಿಎಸ್ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ಕೊರಟಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಹೆಚ್.ಅನಿಲ್ ಕುಮಾರ್ ತಿಳಿಸಿದರು. ಕೊರಟಗೆರೆ ಪಟ್ಟಣದ ಪಾಂಚಜನ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷವನ್ನು ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಭಾರತ ದೇಶದಲ್ಲಿ ಕಾಂಗ್ರೆಸ್ ಪಕ್ಷವು ಮುಳುಗಿದ ಹಡಗು, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರಕಾರ ಅಧಿಕಾರದಲ್ಲಿದೆ. ಕೊರಟಗೆರೆ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಗೆದ್ದರೆ ಅಭಿವೃದ್ಧಿ ತಾನಾಗಿಯೇ ಆಗಲಿದೆ ಎಂದು ತಿಳಿಸಿದರು. ಕೊರಟಗೆರೆ ಮಂಡಲ ಅಧ್ಯಕ್ಷ ಪವನ್ ಕುಮಾರ್ ಮಾತನಾಡಿ, ಕಾಂಗ್ರೆಸ್ ಪಕ್ಷದಲ್ಲಿ ಬಹಳ ವರ್ಷದಿಂದ ಕೆಲಸ ಮಾಡಿದವರು ಬಿಜೆಪಿ ಪಕ್ಷದ ಸಿದ್ಧಾಂತವನ್ನು ಒಪ್ಪಿ 200ಕ್ಕೂ ಕಾರ್ಯಕರ್ತರು ಸೇರಿದ್ದಾರೆ. ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಅವರಿಗೆ ಉತ್ತಮ ಸ್ಥಾನಮಾನ ನೀಡುತ್ತೇವೆ ಎಂದು ಭರವಸೆ ನೀಡಿದರು. ಜೆಟ್ಟಿಅಗ್ರಹಾರ ಮಾಜಿ ಗ್ರಾ.ಪಂ. ಅಧ್ಯಕ್ಷ…
ವಡಗಾವಿಯ ದತ್ತಾತ್ರೇಯ ಗಲ್ಲಿ, ಸಪ್ಪಾರ ಗಲ್ಲಿ ಪ್ರದೇಶಗಳಲ್ಲಿ ಇಂದು ಮನೆ-ಮನೆಗೆ ಹೋಗಿ ಪ್ರಚಾರ ಮಾಡಿದೆ. ಜನರು ಗೌರವಯುತವಾಗಿ ಬರಮಾಡಿಕೊಂಡು, ಈ ಚುನಾವಣೆಯಲ್ಲಿ ಬಹುಮತಗಳಿಂದ ಚುನಾಯಿಸಿ ತರುವ ಭರವಸೆ ನೀಡಿದರು. ದತ್ತಾತ್ರೇಯ ಗಲ್ಲಿ ಹಾಗೂ ಸಪ್ಪಾರ ಬೀದಿಗಳಲ್ಲಿ ರಸ್ತೆಗಳು ಹಾಳಾಗಿ, ಮನೆಗಳೆಲ್ಲ ಧೂಳಿನಿಂದ ಆವರಿಸುತ್ತಿವೆ. ಮೇಲಾಗಿ ನೀರಿನ ಸಮಸ್ಯೆಯನ್ನೂ ಸಹ ಸ್ಥಳೀಯರು ತಿಳಿಸಿದರು. ಯುವಕರು, ಮಹಿಳೆಯರು ಉದ್ಯೋಗದ ನಿರೀಕ್ಷೆಯಲ್ಲಿದ್ದಾರೆ. ಅವರೆಲ್ಲರ ಆಸೆಗಳಿಗೆ ಕಾಂಗ್ರೆಸ್ ಸರ್ಕಾರವು ಸಹಾಯ ಮಾಡಲಿದೆ ಎಂದು ಹೇಳಿದರು. ಕಾಂಗ್ರೆಸ್ ಪಕ್ಷವು ಘೋಷಿಸಿರುವ 5 ಗ್ಯಾರಂಟಿಗಳ ಬಗ್ಗೆ ಕೂಡ ವಿವರಿಸಿದೆ. ಜನರು ಈ ಪಂಚ ಯೋಜನೆಗಳ ಲಾಭ ಪಡೆಯಲು ಆಸಲ್ತಿ ತೋರುತ್ತಿದ್ದಾರೆ. ವಿಶೇವಾಗಿ ನೇಕಾರರು ಅನುಭವಿಸುತ್ತಿರುವ ಕಷ್ಟಗಳಿಗೆ ನಾನು ಶಾಸಕಿಯಾದರೆ ಪರಿಹಾರ ನೀಡುವ ಭರವಸೆ ನೀಡಿದ್ದು, ಅದನ್ನು ಜನರು ಮುಕ್ತಕಂಠದಿಂದ ಹೊಗಳುತ್ತಿದ್ದಾರೆ. ಏನೇ ಆಗಲಿ ಈ ಬಾರಿ ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಈ ಬಾರಿ ಹೆಣ್ಣುಮಗಳು ಗೆದ್ದು ಬರಲಿ ಎಂದು ಹಾರೈಕೆಯ ಮಾತುಗಳನ್ನಾಡುತ್ತಿದ್ದಾರೆ. ಜನರಿಂದ ಸಿಗುತ್ತಿರುವ ಪ್ರೀತಿ, ಬೆಂಬಲಕ್ಕೆ ಅವರಿಗೆ ಎಷ್ಟು…
ಬೆಳಗಾವಿ: ಮೇ 10ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತದಿಂದ ಅಧಿಕಾರಕ್ಕೆ ಬರಲಿದ್ದು, ರಾಜ್ಯದಲ್ಲಿ ತಾಂಡವವಾಡುತ್ತಿರುವ ಭ್ರಷ್ಠಾಚಾರ, ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆಗಳಿಗೆ ಮುಕ್ತಿ ಸಿಗಲಿದೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗಾವಿಯ ಮಣ್ಣೂರು ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಬುಧವಾರ ಪ್ರಚಾರ ನಡೆಸಿ ಅವರು ಮಾತನಾಡುತ್ತಿದ್ದರು. ಕಾಂಗ್ರೆಸ್ ಘೋಷಿಸಿರುವ ಗ್ಯಾರಂಟಿ ಯೋಜನೆಗಳು ಜನರು ಪ್ರಸ್ತುತ ಎದುರಿಸುತ್ತಿರುವ ಸಮಸ್ಯೆಗಳಿಂದ ಮುಕ್ತಿ ನೀಡಲಿವೆ. ಜೊತೆಗೆ ಪ್ರಣಾಳಿಕೆಯಲ್ಲಿ ಸಹ ಸಾಕಷ್ಟು ಜನೋಪಯೋಗಿ ಯೋಜನೆಗಳನ್ನು ಪ್ರಕಟಿಸಲಾಗಿದೆ. ರೈತರಿಗಾಗಿ, ಯುವಕರಿಗಾಗಿ, ಮಹಿಳೆಯರಿಗಾಗಿ ವಿವಿಧ ಯೋಜನೆಗಳನ್ನು ಘೋಷಿಸಲಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಈ ಎಲ್ಲ ಯೋಜನೆಗಳು ಜಾರಿಯಾಗಲಿವೆ ಎಂದು ಹೆಬ್ಬಾಳಕರ್ ತಿಳಿಸಿದರು. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಾದ ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ಮನೆಗೆ ಪ್ರತಿ ತಿಂಗಳು 200 ಯುನಿಟ್ ಉಚಿತ ವಿದ್ಯುತ್ ನೀಡಲಾಗುವುದು. ಗೃಹಲಕ್ಷ್ಮಿ ಯೋಜನೆ ಮೂಲಕ ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರದಂತೆ ವರ್ಷಕ್ಕೆ 24…
ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರನ್ನು ಸೇನೆ ಹತ್ಯೆ ಮಾಡಿದೆ. ಬಾರಾಮುಲ್ಲಾ ಜಿಲ್ಲೆಯ ಪಾಯೆನ್ ಕ್ರಿರಿ ಪ್ರದೇಶದಲ್ಲಿ ಎನ್ ಕೌಂಟರ್ ನಡೆದಿದೆ. ಈ ಪ್ರದೇಶದಲ್ಲಿ ಶೋಧ ನಡೆಸುತ್ತಿದ್ದ ಭದ್ರತಾ ಪಡೆಗಳ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಸೇನೆ ನಡೆಸಿದ ಪ್ರತಿದಾಳಿಯಲ್ಲಿ ಉಗ್ರರು ಹತರಾಗಿದ್ದಾರೆ. ಹತ್ಯೆಯಾದ ಉಗ್ರರಿಂದ ಎಕೆ 47 ರೈಫಲ್, ಹಲವಾರು ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚೆನ್ನೈನಲ್ಲಿ ನಿಧನರಾದ ಖ್ಯಾತ ನಟ ಹಾಗೂ ನಿರ್ದೇಶಕ ಮನೋಬಾಲಾ ಅವರಿಗೆ ಅಂತಿಮ ನಮನ ಸಲ್ಲಿಸಲು ವಿಜಯ್ ಖುದ್ದಾಗಿ ಆಗಮಿಸಿದ್ದರು. ಮನೋಬಾಲಾ ಹಲವಾರು ವಿಜಯ್ ಚಿತ್ರಗಳಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ. ತೇರಿ, ನನ್ಪನ್, ತುಪ್ಪಾಕಿ, ತಲೈವಾ, ವೆಟ್ಟೈಕಾರನ್ ಹೀಗೆ ಹಲವು ಚಿತ್ರಗಳು ಆ ಪಟ್ಟಿಯಲ್ಲಿವೆ. ನಟ, ನಿರ್ದೇಶಕರಾಗಿ ಮನರಂಜನಾತ್ಮಕವಾಗಿದ್ದ ಮನೋಬಾಲಾ ಅವರ ನಿಧನವನ್ನು ತಮಿಳಿಗರು ತುಂಬ ನೋವಿನಿಂದ ಹೊತ್ತುಕೊಂಡಿದ್ದಾರೆ. ಪಿತ್ತಜನಕಾಂಗದ ಕಾಯಿಲೆಯಿಂದ ನಿನ್ನೆ ಮಧ್ಯಾಹ್ನ 1 ಗಂಟೆಗೆ ಮನೋಬಾಲಾ ನಿಧನರಾಗಿದ್ದಾರೆ. ನಾಲ್ಕು ದಶಕಗಳ ಕಾಲದ ಚಿತ್ರರಂಗದಲ್ಲಿ 40 ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಮನೋಬಾಲಾ ತಮಿಳು, ಮಲಯಾಳಂ ಮತ್ತು ತೆಲುಗು ಸೇರಿದಂತೆ ಭಾಷೆಗಳಲ್ಲಿ ಇನ್ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಖ್ಯಾತ ನಿರ್ದೇಶಕ ಭಾರತಿರಾಜ ಅವರ ಸಹಾಯಕರಾಗಿ ಚಿತ್ರರಂಗ ಪ್ರವೇಶಿಸಿದ ಮನೋಬಾಲಾ ಅವರು 1982ರಲ್ಲಿ ಆಗಾಯ ಗಂಗಾ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿ ರಂಗ ಪ್ರವೇಶಿಸಿದರು. ನಂತರ ಪಿಳ್ಳೈ ನಿಲಾ, ಊರ್ಕಾವಲನ್, ಮಾಲ್ ವೆಟ್ಟಿ ಮೈನರ್ ಮುಂತಾದ ಹಲವು ಚಿತ್ರಗಳಲ್ಲಿ ನಟಿಸಿದರು. 2000 ರ ಮೊದಲಾರ್ಧದಲ್ಲಿ, ಮನೋಬಾಲಾ…
ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ಮತ್ತು ದೆಹಲಿ ಪೊಲೀಸರನ್ನು ತಳ್ಳಿಹಾಕುತ್ತಾರೆ. ಈ ಘರ್ಷಣೆಯಲ್ಲಿ ವಾಗ್ವಾದ ನಡೆದು ಪೊಲೀಸರು ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ನಡೆಸಿದ್ದರು. ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ಮುಂದುವರಿದಿದೆ. ಸಂಘರ್ಷದ ವೇಳೆ ಪೊಲೀಸರು ಥಳಿಸಿದ್ದಾರೆ ಎಂದು ಕುಸ್ತಿಪಟುಗಳು ದೂರಿದ್ದಾರೆ. ಕುಡಿದ ಮತ್ತಿನಲ್ಲಿದ್ದ ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಇದಕ್ಕೂ ಮುನ್ನ ಪ್ರತಿಭಟನಾಕಾರರು ರಾತ್ರಿ ವೇಳೆ ಪ್ರತಿಭಟನಾ ಪಂತದಲ್ಲಿ ವಿದ್ಯುತ್ ಕಡಿತಗೊಳಿಸಿದ್ದಾರೆ ಎಂದು ಆರೋಪಿಸಿದ್ದರು. ಮುಷ್ಕರದ ಆರಂಭದಿಂದಲೂ ದೆಹಲಿ ಪೊಲೀಸರ ಕಡೆಯಿಂದ ಕೆಲವು ಹಸ್ತಕ್ಷೇಪವಿದೆ ಎಂದು ಕುಸ್ತಿಪಟುಗಳು ಆರೋಪಿಸಿದ್ದಾರೆ. ಇದರ ಮುಂದುವರಿದ ಭಾಗವೇ ಈಗಿನ ಸಂಘರ್ಷ. ಲೈಂಗಿಕ ಕಿರುಕುಳದ ದೂರಿನಲ್ಲಿ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕುಸ್ತಿಪಟುಗಳ ಮುಷ್ಕರ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಇದೇ ವೇಳೆ ದೆಹಲಿ ಪೊಲೀಸರೊಂದಿಗೆ ವಾಗ್ವಾದ ನಡೆದಿದೆ. ಸದ್ಯ ಘರ್ಷಣೆ ಸಾಧ್ಯತೆ ಹಿನ್ನೆಲೆಯಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿಯೇ ಇದ್ದಾರೆ. ಪರಿಸ್ಥಿತಿ ಶಾಂತಗೊಳಿಸಲು ಪ್ರಯತ್ನಗಳು ನಡೆಯುತ್ತಿವೆ. ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು…
ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಕೋಳಾಲಾ ಹೋಬಳಿಯ ಮಲಗೋನಹಳ್ಳಿಯಲ್ಲಿ ಮತಗಟ್ಟೆಯ ಮೇಲ್ಛಾವಣಿ ಮುರಿದು ಬೀಳುವ ಸ್ಥಿತಿಯಲ್ಲಿದ್ದ ಬಗ್ಗೆ ನಮ್ಮತುಮಕೂರು ಮಾಧ್ಯಮ ವರದಿ ಮಾಡಿದ್ದು, ಈ ವರದಿಯ ಬೆನ್ನಲ್ಲೇ ಎಚ್ಚೆತ್ತುಕೊಂಡ ಅಧಿಕಾರಿಗಳು, ವರದಿ ಪ್ರಸಾರವಾಗಿ 14 ಗಂಟೆಗಳೊಳಗೆ ಕಟ್ಟಡದ ಮೇಲ್ಚಾವಣಿ ರಿಪೇರಿ ಕೆಲಸ ಮಾಡುತ್ತಿದ್ದಾರೆ. ಮಲಗೋನಹಳ್ಳಿ ಮತಗಟ್ಟೆಯು ಕಟ್ಟಡದ ಚಾವಣಿಯ ತೀರು ಮುರಿದು ಬೀಳುವ ಹಂತದಲ್ಲಿದ್ದರು ಸಹ ಅಧಿಕಾರಿಗಳು ಗಮನಿಸದೆ ಜಾಣಕುರುಡು ತೋರಿಸಿದ್ದರು. ರಾಜ್ಯ ಹಾಗೂ ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿನ ಎಲ್ಲಾ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಆದೇಶ ನೀಡಿತ್ತು ಅದಕ್ಕೂ ನಮಗೂ ಸಂಬಂಧವಿಲ್ಲ ಎಂಬಂತೆ ಅಧಿಕಾರಿಗಳು ನಿದ್ರೆಗೆ ಜಾರಿದ್ದರು. ಮತಗಟ್ಟೆ ಅವ್ಯವಸ್ಥೆಯ ಬಗ್ಗೆ ನಮ್ಮತುಮಕೂರು ವಾಹಿನಿಯು ಸವಿವರ ವಾದ ವರದಿ ಪ್ರಕಟಿಸಿದ್ದು, ವರದಿ ಪ್ರಕಟವಾದ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು ಮತಗಟ್ಟೆಗೆ ಮೂಲಭೂತ ಸೌಕರ್ಯ ಒದಗಿಸಲು ಮುಂದಾಗಿದ್ದು, ಇದೀಗ ಕಟ್ಟಡದ ಮೇಲ್ಛಾವಣಿ ರಿಪೇರಿ ಕೆಲಸ ಆರಂಭಿಸಿದ್ದಾರೆ. ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ಬೆಳಗಾವಿ :ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ ಚವ್ಹಾಣ್, ವಧಾನ ಪರಿಷತ್ ಸದಸ್ಯ ಸತೇಜ್ ಪಾಟೀಲ ( ಬಂಟಿ ಪಾಟೀಲ್ ) ಹಾಗೂ ಮಾಜಿ ಸಚಿವ ವಿಶ್ವಜಿತ್ ಕದಂ ಅವರು ಗುರುವಾರ ಬೆಳಗಾವಿಗೆ ಆಗಮಿಸಲಿದ್ದಾರೆ. ಸಂಜೆ 4 ಗಂಟೆಗೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳಕರ್ ಪರ ಪ್ರಚಾರ ಸಭೆಯಲ್ಲಿ ಅಶೋಕ ಚವ್ಹಾಣ, ಸತೇಜ್ ಪಾಟೀಲ್ ಮತ್ತು ವಿಶ್ವಜೀತ್ ಕದಂ ಪಾಲ್ಗೊಳ್ಳುವರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕೇಂದ್ರ ಸರ್ಕಾರವು ಸಲಿಂಗಕಾಮಿಗಳ ಹಕ್ಕುಗಳನ್ನು ನಿರ್ಧರಿಸಲು ಸಮಿತಿಯನ್ನು ನೇಮಿಸುತ್ತದೆ. ಸಮಿತಿಯ ಅಧ್ಯಕ್ಷರು ಸಂಪುಟ ಕಾರ್ಯದರ್ಶಿ ಸಲಿಂಗಕಾಮದ ವಿಷಯವನ್ನು ಸಂವಿಧಾನ ಪೀಠವು ಪರಿಗಣಿಸುತ್ತಿದೆ. ಈ ವಿಚಾರದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸುವ ಹಕ್ಕು ಇಲ್ಲ ಮತ್ತು ಸಂಸತ್ತು ಶಾಸನದ ಮೂಲಕ ಜಾರಿಗೊಳಿಸಬೇಕಾದ ವಿಷಯ ಎಂಬುದು ಕೇಂದ್ರ ಸರ್ಕಾರದ ನಿಲುವು. ಸಲಿಂಗಕಾಮಿ ಹಕ್ಕುಗಳು ಯಾವುವು ಮತ್ತು ಅಲ್ಲ ಎಂಬುದನ್ನು ಸಮಿತಿಯು ನಿರ್ಧರಿಸುತ್ತದೆ. ವಿಶೇಷ ವಿವಾಹ ಕಾಯ್ದೆಯ ಭಾಗವಾಗಿ ಸಲಿಂಗ ದಂಪತಿಗಳಿಗೆ ವಿವಾಹ ನೋಂದಣಿಗೆ ಅವಕಾಶ ನೀಡಬೇಕೆಂಬ ಮನವಿಯನ್ನು ಪರಿಗಣಿಸಬೇಡಿ ಎಂದು ಕೇಂದ್ರವು ನ್ಯಾಯಾಲಯಕ್ಕೆ ತಿಳಿಸಿದೆ. ಈ ಹಿಂದೆ ಕೇಂದ್ರ ಸರ್ಕಾರ ಸಲಿಂಗ ವಿವಾಹದ ವಿರುದ್ಧ ಸುಪ್ರೀಂ ಕೋರ್ಟ್ಗೆ ಅಫಿಡವಿಟ್ ಸಲ್ಲಿಸಿತ್ತು. ಸಲಿಂಗ ವಿವಾಹವು ಭಾರತದ ಸಂಪ್ರದಾಯ ಮತ್ತು ಸಂಸ್ಕೃತಿಗೆ ವಿರುದ್ಧವಾಗಿದೆ ಎಂದು ಉಲ್ಲೇಖಿಸಿ ದೇಶದಲ್ಲಿ ಸಲಿಂಗ ವಿವಾಹವನ್ನು ಗುರುತಿಸುವ ಅರ್ಜಿಯನ್ನು ವಿರೋಧಿಸಿ ಕೇಂದ್ರ ಸರ್ಕಾರ ಅಫಿಡವಿಟ್ ಸಲ್ಲಿಸಿದೆ. ಒಂದೇ ಲಿಂಗದ ವ್ಯಕ್ತಿಗಳ ನಡುವಿನ ದೈಹಿಕ ಸಂಭೋಗ ಮತ್ತು ಪಾಲುದಾರರಾಗಿ ಒಟ್ಟಿಗೆ ವಾಸಿಸುವುದು ಭಾರತೀಯ ಕುಟುಂಬದ ಪರಿಕಲ್ಪನೆಗೆ ಹೊಂದಿಕೆಯಾಗುವುದಿಲ್ಲ.…