Author: admin

ಬೆಂಗಳೂರು: ಎರಡು ಮಕ್ಕಳ ತಾಯಿಯೊಬ್ಬರು ಪತಿ ಚಾಕೊಲೇಟ್ ತಂದು ಕೊಡಲಿಲ್ಲ ಎಂದು ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಂದಿನಿ‌(30) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದು, 6 ವರ್ಷದ ಹಿಂದೆ ಮದುವೆಯಾಗಿದ್ದ ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಏಪ್ರಿಲ್ 6ರಂದು ಬೆಳಗ್ಗೆ ಪತಿ ಕೆಲಸಕ್ಕೆ ಹೋಗುವಾಗ ಚಾಕೋಲೆಟ್ ತೆಗೆದುಕೊಂಡು ಬರುವಂತೆ ಹೇಳಿದ್ದಳಂತೆ. ಆದ್ರೆ, ಮಧ್ಯಾಹ್ನವಾದರೂ ಪತಿ ಚಾಕೋಲೆಟ್ ತಂದು ಕೊಟ್ಟಿಲ್ಲ. ಅಲ್ಲದೇ ಫೋನ್ ಮಾಡಿದ್ದರೂ ಪತಿ ಸ್ವೀಕರಿಸಿಲ್ವಂತೆ. ಇದರಿಂದ ಮನನೊಂದು ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ  ಎಂದು ಹೇಳಲಾಗಿದೆ. ಈ ಪ್ರಕರಣ ತೀರಾ ವಿಚಿತ್ರವಾಗಿದ್ದು, ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ವಿಚಾರಣೆಯಿಂದ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ಅಮುಲ್ ​ನಲ್ಲಿ ಕೆಎಂಎಫ್ ​​ಹಾಲು ಒಕ್ಕೂಟ ವಿಲೀನ ಚರ್ಚೆ ಮತ್ತೆ ಮುನ್ನಲೆಗೆ ಬಂದಿದೆ. ರಾಜ್ಯ ಬಿಜೆಪಿ ಸರ್ಕಾರ ಈ ವಿಚಾರವಾಗಿ ಸ್ಪಷ್ಟನೆ ನೀಡಿದ್ದರೂ, ಪ್ರತಿಪಕ್ಷಗಳು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿವೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಖಾರವಾಗಿ ಪ್ರತಿಕ್ರಿಯಿಸಿದ್ದು, ರಾಜ್ಯ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರ ವಿರುದ್ಧ ಹರಿಹಾಯ್ದಿದ್ದಾರೆ. “ಕರ್ನಾಟಕದಲ್ಲಿ ನಮ್ಮ ಹಿರಿಯರು ಕಟ್ಟಿ ಬೆಳೆಸಿದ್ದ ಬ್ಯಾಂಕುಗಳನ್ನು ತಿಂದು ಮುಕ್ಕಿದ್ದಾಯಿತು. ಈಗ ರೈತರ ಪಾಲಿನ ಸಂಜೀವಿನಿಯಾಗಿರುವ ನಂದಿನಿಯನ್ನು ಆಪೋಶನ ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್​ ಶಾ ಸಂಚು ಹೂಡಿದ್ದಾರೆ. ಕನ್ನಡಿಗರೇ ಎಚ್ಚರ…!!” ಎಂದು ಟ್ವೀಟ್​ ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಡಾ.ಜಿ.ಪರಮೇಶ್ವರ್ ಗೆ ಕೊರಟಗೆರೆ ಕ್ಷೇತ್ರದಲ್ಲಿ ಸೋಲಿನ ಭಯ ಕಾಡ್ತಿದೆ. ಅದಕ್ಕಾಗಿಯೇ ನಮ್ಮ ವೀರಶೈವ–ಲಿಂಗಾಯಿತ ಸಮಾಜದ ಸಮಾವೇಶ ಮಾಡ್ತಾ ಇದ್ದಾರೆ. ಕೊರಟಗೆರೆ ವೀರಶೈವ–ಲಿಂಗಾಯಿತರ ನಡೆ ಪರಮೇಶ್ವರ್ ಕಡೆ ಸಮಾವೇಶಕ್ಕೆ ನಮ್ಮ ಸಮಾಜದ ಮುಖಂಡರು ಬರುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರೈತಮೋರ್ಚ ಜಿಲ್ಲಾಧ್ಯಕ್ಷ ವಿಶ್ವನಾಥ್ ಅಪ್ಪಾಜಪ್ಪ ತಿಳಿಸಿದರು. ಕೊರಟಗೆರೆ ಪಟ್ಟಣದ ಕಾಮಧೇನು ಭವನದಲ್ಲಿ ಕೊರಟಗೆರೆ ವೀರಶೈವ ಲಿಂಗಾಯಿತ ಸಮುದಾಯದ ವತಿಯಿಂದ ಬುಧವಾರ ಏರ್ಪಡಿಸಲಾಗಿದ್ದ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ವೀರಶೈವ ಮತ್ತು ಲಿಂಗಾಯಿತ ಸಮುದಾಯ ಬೇರ್ಪಡಿಸುವ ಕೆಲಸವನ್ನು ಸಿದ್ದರಾಮಯ್ಯ ಸರಕಾರ ಮಾಡಿತ್ತು. ನಮ್ಮ ಸಮಾಜಕ್ಕೆ ಮೀಸಲಾತಿ ಹೆಚ್ಚಿಸಿರುವ  ಬೊಮ್ಮಾಯಿ ನೇತೃತ್ವದ ಬಿಜೆಪಿ ಪಕ್ಷದ ಪರವಾಗಿಯೇ ವೀರಶೈವ ಲಿಂಗಾಯಿತ ಸಮುದಾಯ ಇರಲಿದೆ. ಕೊರಟಗೆರೆ ಕ್ಷೇತ್ರದಲ್ಲಿ ಅತೀ ಶೀಘ್ರದಲ್ಲಿ ವೀರಶೈವ ಲಿಂಗಾಯಿತ ಸಮಾಜದ ಬೃಹತ್ ಸಮಾವೇಶ ಏರ್ಪಡಿಸುತ್ತೇವೆ ಎಂದು ಹೇಳಿದರು. ಬಿಜೆಪಿ ಯುವಮೋರ್ಚ ರಾಜ್ಯಕಾರ್ಯ ಕಾರಣಿ ಸದಸ್ಯ ರುದ್ರೇಶ್ ಮಾತನಾಡಿ, ವೀರಶೈವ ಲಿಂಗಾಯಿತ ಸಮಾಜವು ಬಿಜೆಪಿ ಸರಕಾರದ ಪರವಾಗಿಯೇ ಇದೆ. ನಮ್ಮ ಸಮಾಜಕ್ಕೆ ಕಾಂಗ್ರೆಸ್ ಮತ್ತು…

Read More

ತಿಪಟೂರು ತಾಲೂಕು ಕಾಂಗ್ರೆಸ್ ನಲ್ಲಿ ಲೋಕೇಶ್ವರ್ ಬಣ,  ಷಡಕ್ಷರಿ ಬಣ ಎಂಬುವುದು ಇಲ್ಲ, ಪಕ್ಷದ ಹೈಕಮಾಂಡ್ ನನ್ನನ್ನು ಅಭ್ಯರ್ಥಿ ಎಂದು ಘೋಷಿಸಿದ ಬಳಿಕ ಲೋಕೇಶ್ ಅವರು ಪಕ್ಷದ ನಿಯಮಕ್ಕೆ ಬದ್ಧರಾಗಿ ಗೆಲುವಿಗೆ ಹೆಗಲು ಕೊಟ್ಟಿದ್ದಾರೆ ಎಂದು ಮಾಜಿ ಶಾಸಕ ಕೆ.ಷಡಕ್ಷರಿ ತಿಳಿಸಿದರು. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಲೋಕೇಶ್ವರ್ ಹಾಗೂ ಕೆ.ಷಡಕ್ಷರಿ ಅವರು ಕರೆದ ಜಂಟಿ ಸುದ್ದಿಗೋಷ್ಠಿಯಲ್ಲಿ  ಕಾಂಗ್ರೆಸ್ ನಾಯಕರು ಒಗ್ಗಟ್ಟು ಪ್ರದರ್ಶಿಸಿದರು. ಕ್ಷೇತ್ರದ ಸಮಸ್ಯೆಗಳನ್ನು ಮುಂದಿಟ್ಟು ಮತಯಾಚಿಸುತ್ತೇವೆ, ಜೊತೆಯಾಗಿ ಕೆಲಸ ಮಾಡುತ್ತೇವೆ. ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದು ಕೆ.ಷಡಕ್ಷರಿ  ಹೇಳಿದರು. ಲೋಕೇಶ್ ಅವರು ಮಾತನಾಡಿ, ತಡವಾಗಿಯಾದರೂ ಒಳ್ಳೆ ನಿರ್ಧಾರ ಕೈಗೊಳ್ಳಲಾಗಿದೆ. ಸಣ್ಣ ಸಣ್ಣ ನದಿ ಸಮುದ್ರ ಸೇರಿದ ನಂತರ, ನೀರೆಲ್ಲ ಒಂದಾದಂತೆ, ನಾವು ಒಂದಾಗಿದ್ದೇವೆ. ನಮ್ಮಲ್ಲಿ ಯಾವುದೇ ಗೊಂದಲವಿಲ್ಲ ಎಂದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ಹೊಸ ಹಣಕಾಸು ನೀತಿಯನ್ನು ಘೋಷಣೆ ಮಾಡಿದ್ದು, ಏಕೀಕೃತ ಪಾವತಿಗಳ ಇಂಟರ್ಫೇಸ್ (UPI) ವ್ಯಾಪ್ತಿಯನ್ನು ವಿಸ್ತರಣೆ ಮಾಡಲಾಗಿದೆ. ಈ ಪ್ರಕಟಣೆಯ ಪ್ರಕಾರ, ಸಾಲಗಾರರು ಬ್ಯಾಂಕ್‌ಗಳಿಂದ ಡಿಜಿಟಲ್ ಕ್ರೆಡಿಟ್ ಲೈನ್‌ಗಳನ್ನು ಪ್ರವೇಶಿಸಲು UPI ಅನ್ನು ಬಳಸಲು ಸಾಧ್ಯವಾಗುತ್ತದೆ ಎಂದು ಹೇಳಲಾಗಿದೆ. ಆರ್‌ ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರ ಪ್ರಕಾರ ‘ಯುಪಿಐ ಭಾರತದಲ್ಲಿ ಚಿಲ್ಲರೆ ಪಾವತಿಗಳ ಮಾದರಿಯನ್ನು ಬದಲಾಯಿಸಿದೆ. ಕಾಲಕಾಲಕ್ಕೆ ಹೊಸ ಉತ್ಪನ್ನಗಳು ಮತ್ತು ವೈಶಿಷ್ಟ್ಯಗಳನ್ನು ಅಭಿವೃದ್ಧಿಪಡಿಸಲು ಯುಪಿಐನ ಬಲವನ್ನು ಬಳಸಿಕೊಳ್ಳಲಾಗಿದೆ. ಮಾರ್ಚ್ 2023 ರಲ್ಲಿ, UPI 8.7 ಶತಕೋಟಿ ವಹಿವಾಟುಗಳನ್ನು ದಾಖಲಿಸಿಕೊಂಡಿದೆ. ಅಲ್ಲದೆ, ವರ್ಷದಿಂದ ವರ್ಷಕ್ಕೆ, ನೈಜ-ಸಮಯದ ಪಾವತಿಗಳು 60 ಪ್ರತಿಶತದಷ್ಟು ಹೆಚ್ಚಾಗುತ್ತಿದೆ . UPI ಮೂಲಕ ಪಾವತಿಗಳು ಕಳೆದ 12 ತಿಂಗಳುಗಳಲ್ಲಿ ಗಣನೀಯವಾಗಿ ಬೆಳೆದಿದ್ದು, ದೈನಂದಿನ ವಹಿವಾಟು 36 ಕೋಟಿಗಳನ್ನು ದಾಟಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ತುರುವೇಕೆರೆ ವಿಧಾನಸಭಾ ಕ್ಷೇತ್ರದ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಅಭ್ಯರ್ಥಿಯಾಗಿ ಹಟ್ಟಯ್ಯ ಎನ್. ಅವರನ್ನು ಆಯ್ಕೆ ಮಾಡಲಾಯಿತು. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಡಾ.ಎನ್. ಮೂರ್ತಿ ಅವರು ಅಭ್ಯರ್ಥಿಯನ್ನು ಘೋಷಿಸಿದರು.  ಇದೇ ವೇಳೆ ಮಾತನಾಡಿದ ಹಟ್ಟಯ್ಯ ಅವರು, ಈ ಚುನಾವಣೆಯಲ್ಲಿ ನಮ್ಮ ಆರ್ ಪಿಐ ಪಕ್ಷದ ಚಿಹ್ನೆಯಾದ ಪೆನ್ನಿಗೆ ಮತ ಹಾಕುವಂತೆ ಮನವಿ ಮಾಡಿಕೊಂಡರು. ನಮ್ಮ ದೇಶಕ್ಕೆ ನಿರುದ್ಯೋಗ ಬಹುದೊಡ್ಡ ಸವಾಲಾಗಿದೆ, ಕೋಮು, ಜಾತಿ ಘರ್ಷಣೆ ತೀವ್ರಗೊಂಡಿವೆ, ಸ್ವಜನ ಪಕ್ಷಪಾತದ ದುರಾಡಳಿತ, ತೀವ್ರ ಭ್ರಷ್ಟಾಚಾರದಿಂದ ರಾಜಕಾರಣ ದಿವಾಳಿಯಾಗಿದೆ, ಜಾಗತಿಕ ಸಮೀಕ್ಷೆಯಂತೆ ಹಸಿವಿನಿಂದ ಭೀಕರ ಸಾವನ್ನಪ್ಪುವ 121 ದೇಶಗಳಲ್ಲಿ ಭಾರತ 107ನೇ ಸ್ಥಾನ ಪಡೆದಿದೆ ಎಂದರು. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಇಲ್ಲಿಯವರೆಗೂ, ಯಾವ ಪಕ್ಷವೂ ಮಾಡದ ಅಭಿವೃದ್ಧಿ ಕೆಲಸ ಮಾಡಲಾಗುವುದು, ನಮ್ಮ ಪಕ್ಷ ಜಿಲ್ಲೆಯಾದ್ಯಂತ 10 ಕ್ಷೇತ್ರಗಳಿಂದಲೂ  ಸ್ಪರ್ಧಿಸಲಿದ್ದು, ಐದರಿಂದ ಆರು ಕ್ಷೇತ್ರಗಳಲ್ಲಿ  ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಪುಟ್ಟಸ್ವಾಮಿ, ತಾಲೂಕು ಅಧ್ಯಕ್ಷರಾದ ಚಂದ್ರು,…

Read More

ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್​-19 ಪ್ರಕರಣಗಳು ಹೆಚ್ಚಾಗುತ್ತಿದ್ದು ರಾಜ್ಯಗಳಿಗೆ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಶುಕ್ರವಾರ ಇದರ ಬಗ್ಗೆ ಸಭೆ ನಡೆಸಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್​ ಮಾಂಡವೀಯಾ ಅಗತ್ಯ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಿದ್ಧಾರೆ ಎಂದು ತಿಳಿದು ಬಂದಿದೆ. ​ ಕೋವಿಡ್​ ಗುಣಲಕ್ಷಣ ಹೊಂದಿರುವವರ ಮೇಲೆ ತೀವ್ರ ನಿಗಾ ವಹಿಸಬೇಕು. ಅಗತ್ಯ ವಿದ್ದಲ್ಲಿ ಈ ಹಿಂದೆ ಕೋವಿಡ್​ ಸಂಭವಿಸಿದ ಸಮಯದಲ್ಲಿ ಅನುಸರಿಸಿದ್ದ ಮುನ್ನೆಚ್ಚರಿಕಾ ಕ್ರಮಗಳನ್ನು ಜಾರಿಗೆ ತರಬೇಕು ಎಂದು ಸಲಹೆ ನೀಡಿದ್ದಾರೆ. ಏಪ್ರಿಲ್​ 8 ಮತ್ತು9ರಂದು ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿ. ಏಪ್ರಿಲ್​ 10 ಮತ್ತು 11ರಂದು ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆಗಾಗಿ ಮಾಕ್​ ಡ್ರಿಲ್​ ನಡೆಸಿ ಎಂದು ರಾಜ್ಯ ಸರ್ಕಾರಗಳಿಗೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್​ ಮಾಂಡವೀಯ ಆದೇಶಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…

Read More

ತುಮಕೂರು: ಎರಡು ಬಾರಿ ಕಾಂಗ್ರೆಸ್ ಶಾಸಕರಾಗಿದ್ದ ಹಾಗೂ ಉತ್ತಮ ವಿದ್ಯಾರ್ಹತೆ ಹೊಂದಿರುವ ಹಾಗೂ ಒಮ್ಮೆ ತುಮಕೂರು ನಗರ ವಿಧಾನಸಭೆ ಕ್ಷೇತ್ರದ ಶಾಸಕರಾಗಿರುವ ತಮ್ಮ ಅಳಿಯ ರಫೀಕ್ ಅಹಮದ್ ಗೆ ಟಿಕೆಟ್ ನೀಡುವಂತೆ ಶಿಫಾರಸು ಮಾಡಿದ್ದರೂ ಸಹ ಮಾಜಿ ಉಪ ಮುಖ್ಯಮಂತ್ರಿ ಹಿರಿಯ ಕಾಂಗ್ರೆಸ್ ಮುಖಂಡರು ಟಿಕೆಟ್ ನೀಡದೇ ವಂಚನೆ ಮಾಡಿದ್ದಾರೆ ಎಂದು ಮಾಜಿ ಶಾಸಕ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಶಫಿ ಅಹಮದ್ ಆರೋಪಿಸಿದ್ದಾರೆ. ತುಮಕೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ಇದರಿಂದ ಮನನೊಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. ಚುನಾವಣೆಯನ್ನು ಎದುರಿಸಲು ಶಕ್ತಿ ಇಲ್ಲದಂತಹ ವ್ಯಕ್ತಿಯಾಗಿರುವ ಇಕ್ಬಾಲ್ ಅಹಮದ್ ಎಂಬವರಿಗೆ ಟಿಕೆಟ್ ನೀಡಿದ್ದು, ಈ ಹಿಂದೆ ಅನೇಕ ಬಾರಿ ಡಾ.ಜಿ.ಪರಮೇಶ್ವರ್ ಅವರ ಗಮನಕ್ಕೆ ತಂದಿದ್ದ ವೇಳೆ ಟಿಕೆಟ್ ನೀಡುವ ಸಂಬಂಧ ಸಾಕಷ್ಟು ಭರವಸೆ ನೀಡಿದ್ದ ಅವರು ಟಿಕೆಟ್ ಸಿಗದಂತೆ ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರಿಗೂ ಕೂಡ ಈ ಕುರಿತಂತೆ ಮನವಿ…

Read More

ತೀರ್ಥಹಳ್ಳಿ – ಕುಂದಾಪುರ ರಾಜ್ಯ ಹೆದ್ದಾರಿ 52ರ ಬಾಳೆಬರೆ ಘಾಟ್ ಮೂಲಕ ಸಂಚರಿಸುವ ವಾಹನ ಸವಾರರಿಗೆ ಸಂಚಾರ ನಿರ್ಬಂಧ ಆದೇಶವನ್ನು ಏಪ್ರಿಲ್ 15ರ ವರೆಗೆ ವಿಸ್ತರಿಸಲಾಗಿದೆ. ಘಾಟ್ ನಲ್ಲಿ ಕಾಂಕ್ರೀಟ್ ಕಾಮಗಾರಿ ನಡೆಯುತ್ತಿರುವ ಕಾರಣ ಈ ಮೊದಲು ಏಪ್ರಿಲ್ 5 ರ ವರೆಗೆ ವಾಹನಗಳ ಸಂಚಾರ ನಿರ್ಬಂಧಿಸಲಾಗಿತ್ತು.ನಂತರ ಕಾಮಗಾರಿ ವ್ಯತ್ಯಯವಾಗಿರುವುದರಿಂದ ನಿರ್ಬಂಧ ಆದೇಶವನ್ನು ಈಗ ಏ.15 ರ ವರೆಗೆ ವಿಸ್ತರಿಸಲಾಗಿದೆ. ಆದ್ದರಿಂದ ವಾಹನ ಸವಾರರು ಬೇರೆ ಮಾರ್ಗದ ಮೂಲಕ ಸಂಚರಿಸಬಹುದಾಗಿದೆ. ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆ ಹೋಗುವ ಲಘು ವಾಹನಗಳು ತೀರ್ಥಹಳ್ಳಿ – ಹಾಲಾಡಿ – ಬಸ್ರೂರು ಕುಂದಾಪುರ ರಸ್ತೆಯ ಮೂಲಕ, ತೀರ್ಥಹಳ್ಳಿ – ಹೆಬ್ರಿ – ಉಡುಪಿ – ಕುಂದಾಪುರ ರಸ್ತೆಯ ಮೂಲಕ ಸಂಚರಿಸಬಹುದಾಗಿ ಸೂಚಿಸಲಾಗಿದೆ. ಹಾಗೆಯೇ ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆಗೆ ಹೋಗುವ ಭಾರಿ ವಾಹನಗಳು ತೀರ್ಥಹಳ್ಳಿ – ಕಾನುಗೋಡು – ನಗರ – ಕೊಲ್ಲೂರು – ಕುಂದಾಪುರ ಮಾರ್ಗವಾಗಿ ಸಂಚರಿಸಲು ಅನುಮತಿ ನೀಡಲಾಗಿದೆ , ತೀರ್ಥಹಳ್ಳಿ -…

Read More

ಉಪನಗರ ರೈಲು ಯೋಜನೆಗಾಗಿ ಬೆಂಗಳೂರಿನಲ್ಲಿ 1200 ಮರಗಳನ್ನು ಶೀಘ್ರದಲ್ಲೇ ಕಡಿಯಲಾಗುವುದು. 2018 ರಿಂದ 2021 ರವರೆಗೆ ಕರ್ನಾಟಕದಾದ್ಯಂತ ರಸ್ತೆಗಳು ಮತ್ತು ಹೆದ್ದಾರಿಗಳ ನಿರ್ಮಾಣಕ್ಕಾಗಿ 1 ಲಕ್ಷಕ್ಕೂ ಹೆಚ್ಚು ಮರಗಳನ್ನು ಕಡಿಯಲಾಗಿದೆ ಎಂದು ರಾಜ್ಯ ಲೋಕೋಪಯೋಗಿ ಇಲಾಖೆ (PWD) ಪ್ರಕಟಿಸಿದೆ. ಹೊಸ ಬೆಂಗಳೂರು-ಮೈಸೂರು ಹೆದ್ದಾರಿ (NH 275) ಅಭಿವೃದ್ಧಿಗಾಗಿ 11,078 ಮರಗಳನ್ನು ಕಡಿಯಲಾಗಿದೆ. 2019 ರಲ್ಲಿ, ನಮ್ಮ ಮೆಟ್ರೋದ ಎರಡನೇ ಹಂತದಲ್ಲಿ – ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೆ 1,253 ಮರಗಳನ್ನು ಕತ್ತರಿಸಲಾಯಿತು. ರೈಲು ಮೂಲಸೌಕರ್ಯ ಅಭಿವೃದ್ಧಿ ಯೋಜನೆಯ ಪರವಾಗಿ ಆದೇಶ ಹೊರಡಿಸಿರುವುದರಿಂದ ಈ ವರ್ಷ ಬೆಂಗಳೂರಿನಲ್ಲಿ ಹೆಚ್ಚಿನ ಮರಗಳನ್ನು ಕಡಿಯಬೇಕಾಗುತ್ತದೆ. ಫೆಬ್ರವರಿಯಲ್ಲಿ ರೈಲು  ಇನ್‌ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಕಂಪನಿ (ಕರ್ನಾಟಕ) ಲಿಮಿಟೆಡ್ (ಕೆಆರ್‌ಐಡಿಇ) ಬೈಯಪ್ಪನಹಳ್ಳಿ ಮತ್ತು ಲೊಟೆಗೊಲ್ಲಹಳ್ಳಿ ನಡುವೆ 1,234 ಮರಗಳನ್ನು ಕಡಿಯಲು ಅನುಮತಿ ನೀಡಿತ್ತು. ಜನವರಿಯಲ್ಲಿ, ನೈಋತ್ಯ ರೈಲ್ವೆಯು ಯಶವಂತಪುರ ರೈಲು ನಿಲ್ದಾಣದಲ್ಲಿ 216 ಮೀಟರ್ ಅಗಲದ ಕಾನ್ಕೋರ್ಸ್, ಮಾಲ್ ಮತ್ತು ವಿಶೇಷ ಪ್ರವೇಶ ಮತ್ತು ನಿರ್ಗಮನ ಬಿಂದುಗಳನ್ನು ನಿರ್ಮಿಸಲು 141 ಮರಗಳನ್ನು…

Read More