Subscribe to Updates
Get the latest creative news from FooBar about art, design and business.
- ಮುಖ್ಯಮಂತ್ರಿಗಳ ಸಾಧನ ಸಮಾವೇಶಕ್ಕೆ ಭರ್ಜರಿ ಸಿದ್ಧತೆ: ಹಳ್ಳಿ ಹಳ್ಳಿಗೂ ತಲುಪಿ ಆಹ್ವಾನ ನೀಡುತ್ತಿರುವ ಕಂದಾಯ ಅಧಿಕಾರಿಗಳು
- ನೀಟ್ ಯುಜಿ ಪರೀಕ್ಷೆ ರದ್ದು: ಲಕ್ಷಾಂತರ ವಿದ್ಯಾರ್ಥಿಗಳ ಬದುಕಿನೊಂದಿಗೆ NTA ಚೆಲ್ಲಾಟ: AIDSO
- ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
- ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
- ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ
- ಬೌದ್ಧ ಧರ್ಮವು ಸಮಾನತೆ, ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ: ಹರಾ ಮಹೇಶ್
- ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಹೆಣ್ಣು ಮಕ್ಕಳಿಗೆ ಉಚಿತ ಲಸಿಕೆ: ಶಾಸಕ ಡಾ.ಎಚ್.ಡಿ.ರಂಗನಾಥ್
- ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ
Author: admin
“ಶುಭ ಶುಕ್ರವಾರ ಅಥವಾ ಗುಡ್ ಫ್ರೈಡೇ ಎಂಬುದು ಯೇಸು ಕ್ರಿಸ್ತ ಶಿಲುಬೆಯ ಮೇಲೆ ಮರಣ ಹೊಂದಿದ ದಿನ. ಇದು ಸಾಮಾನ್ಯವಾಗಿ ಕ್ರೈಸ್ತರಿಗೆ ಸೂತಕದ ದಿನವಾಗಬೇಕಿತ್ತು; ಆದರೆ “ಶುಭ”ವಾಗಿರುವುದು ಏಕೆ?” ಈ ಕುರಿತು ಸರಳವಾಗಿ ತಿಳಿಸುವುದು ಈ ಲೇಖನದ ಉದ್ದೇಶ. ಕ್ರಿಸ್ತ ಜೀವಿಸಿದ್ದು ಇಸ್ರಯೇಲ್ ರೋಮ್ ಸಾಮ್ರಾಜ್ಯದ ವಸಹಾತುವಾಗಿದ್ದ ಕಾಲಘಟ್ಟದಲ್ಲಿ. ಜನರನ್ನು ಸಾಮಾಜಿಕ ಮತ್ತು ಆರ್ಥಿಕವಾಗಿ ಶೋಷಿಸುತ್ತಿದ್ದ ರೋಮ್ ಚಕ್ರಾಧಿಪತ್ಯ ಒಂದೆಡೆಯಾದರೆ, ತಮ್ಮದೇ ಜನರನ್ನು ಕಠಿಣ ಧಾರ್ಮಿಕ ಕಾನೂನು ಆಚರಣೆಗಳ ಮೂಲಕ ಹಿಂಸಿಸುತ್ತಿದ್ದ ಯೆಹೂದ್ಯ ಪುರೋಹಿತ ವರ್ಗ ಮತ್ತೊಂದೆಡೆ. ಇವರಿಬ್ಬರ ನಡುವೆ ಸಾಮಾನ್ಯ ಜನ ನಲುಗಿ ಹೋಗಿದ್ದರು. ತಮ್ಮನ್ನು ಈ ಎಲ್ಲಾ ಸಂಕೋಲೆಗಳಿಂದ ಬಿಡಿಸುವ “ಮೆಸ್ಸಾಯ” (ಉದ್ಧಾರಕ) ನ ಬರುವಿಕೆಯನ್ನು ನಿರೀಕ್ಷಿಸುತ್ತಿದ್ದರು. ಆಗ ಬಂದ ಯೇಸು ಕ್ರಿಸ್ತರು ಯೆಹೂದ್ಯ ಪುರೋಹಿತರ ಧಾರ್ಮಿಕ ಡಂಭಾಚಾರ, ಜನರನ್ನು ಮಾನಸಿಕವಾಗಿ ಹಿಂಸಿಸುವ ಕಟು ಆಚರಣೆಗಳನ್ನು ಖಂಡಿಸಿ, ದೇವರು ಮನುಷ್ಯರ ಹೃದಯದಲ್ಲಿದ್ದಾನೆ, ನಿಮ್ಮಂತೆಯೇ ಪರರನ್ನು ಪ್ರೀತಿಸಿದರೆ ಅದು ದೇವರನ್ನೇ ಪ್ರೀತಿಸಿದಂತೆ ಎಂಬ ಮಾನವತೆಯ ಸಂದೇಶವನ್ನು ಸಾರಿದರು. ಯೆಹೂದ್ಯ ಸಮಾಜ…
ಡಿಸೆಂಬರ್ 22, 2003 ರ ಮೊದಲು ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ ಮತ್ತು ಕೇಂದ್ರ ಸರ್ಕಾರಿ ನೌಕರರಿಗೆ ಹೊಸ ಕೊಡುಗೆ ಪಿಂಚಣಿ ಯೋಜನೆಯ ಅಧಿಸೂಚನೆಯ ನಂತರ ಉದ್ಯೋಗಕ್ಕೆ ಸೇರಿದ ನೌಕರರು ಹಳೆಯ ಪಿಂಚಣಿ ಯೋಜನೆಯ ಸದಸ್ಯರಾಗಲು ಅವಕಾಶವಿದೆ. ಈ ವರ್ಗಕ್ಕೆ ಒಳಪಡುವ ಕೇಂದ್ರ ನೌಕರರು ಹಳೆಯ ಪಿಂಚಣಿ ಯೋಜನೆಗೆ ಬದಲಾಯಿಸಲು ಕೇಂದ್ರ ಸರ್ಕಾರ ಆಗಸ್ಟ್ 31 ರವರೆಗೆ ಕಾಲಾವಕಾಶ ನೀಡಿದೆ. ಕೇಂದ್ರ ಸೇನಾ ಸಿಬ್ಬಂದಿ ಕೂಡ ಹಳೆಯ ಪಿಂಚಣಿ ಯೋಜನೆಗೆ ಬದಲಾಯಿಸಬಹುದು. 2003ರಲ್ಲಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ನಿವೃತ್ತಿ ವೇತನದ ಅರ್ಧದಷ್ಟು ಹಣವನ್ನು ಪಿಂಚಣಿಯಾಗಿ ಪಡೆಯುವ ಹಳೆಯ ಪಿಂಚಣಿ ಯೋಜನೆ ಕೊನೆಗೊಂಡಿತ್ತು. ಹೊಸ ಪಿಂಚಣಿ ಯೋಜನೆಯನ್ನು ಆಕರ್ಷಕಗೊಳಿಸಲು ಕೇಂದ್ರ ಸರ್ಕಾರ ಸಮಿತಿಯನ್ನೂ ನೇಮಿಸಿದೆ. ಸಮಿತಿಯು ಹಣಕಾಸು ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ನಾಲ್ಕು ಸದಸ್ಯರನ್ನು ಒಳಗೊಂಡಿರುತ್ತದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್…
ನಾಣ್ಯಗಳಂತಹ ವಸ್ತುಗಳನ್ನು ಅರಿವಿಲ್ಲದೆ ನುಂಗುವ ಘಟನೆಗಳನ್ನು ನೀವು ಕೇಳಿರಬಹುದು. ಆದರೆ ಇದೀಗ ಯುವತಿಯೊಬ್ಬಳು ಮೊಬೈಲ್ ನುಂಗಿರುವ ಅಸಾಮಾನ್ಯ ಪ್ರಕರಣ ಮಧ್ಯಪ್ರದೇಶದಿಂದ ಹೊರ ಬಿದ್ದಿದೆ. 2 ಗಂಟೆಗಳ ಶಸ್ತ್ರಚಿಕಿತ್ಸೆಯ ನಂತರ, ಅಂತಿಮವಾಗಿ ಫೋನ್ ಅನ್ನು ಯುವತಿಯ ಹೊಟ್ಟೆಯಿಂದ ತೆಗೆಯಲಾಯಿತು. 18 ವರ್ಷದ ಯುವತಿ ತನ್ನ ಸಹೋದರನೊಂದಿಗೆ ಜಗಳವಾಡಿದ ನಂತರ ತನ್ನ ಮೊಬೈಲ್ ಫೋನ್ ಅನ್ನು ನುಂಗಿದ್ದಾಳೆ. ಫೋನ್ ನುಂಗಿದ ತಕ್ಷಣ ಯುವತಿಗೆ ವಿಪರೀತ ನೋವು ಶುರುವಾಯಿತು. ಕೂಡಲೇ ಸಂಬಂಧಿಕರು ಆಕೆಯನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರಿಸ್ಥಿತಿ ಹದಗೆಟ್ಟಾಗ ಅವರನ್ನು ಗ್ವಾಲಿಯರ್ಗೆ ಕಳುಹಿಸಲಾಯಿತು. ಮೊಬೈಲ್ ಫೋನ್ ಪತ್ತೆ ಮಾಡಲು ಯುವತಿಯನ್ನು ಅಲ್ಟ್ರಾಸೌಂಡ್ ಮತ್ತು ಇತರ ಪರೀಕ್ಷೆಗಳಿಗೆ ಒಳಪಡಿಸಲಾಯಿತು. ಗ್ವಾಲಿಯರ್ನ ಜಿಲ್ಲಾ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ವಿಭಾಗದ ಎಚ್ಒಡಿ ಡಾ.ಪ್ರಶಾಂತ್ ಶ್ರೀವಾಸ್ತವ ನೇತೃತ್ವದ ವೈದ್ಯರ ತಂಡ ಆಪರೇಷನ್ ಮಾಡಿ ಆಕೆಯ ಹೊಟ್ಟೆಯಿಂದ ಮೊಬೈಲ್ ಹೊರತೆಗೆದಿದ್ದಾರೆ. ಈಗ ಅವಳ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದ್ದು, ಗಂಟಲಿನ ಮೂಲಕ ಇಷ್ಟು ದೊಡ್ಡ ವಸ್ತು ಹೊಟ್ಟೆ ಸೇರಿರುವುದು ಇದೇ ಮೊದಲು ಎಂದು ಡಾ.…
ಯಾದಗಿರಿ: ಬಿಜೆಪಿ ಶಾಸಕ ರಾಜುಗೌಡ ಸ್ವಗ್ರಾಮ ಯಾದಗಿರಿಯ ಕೊಡೇಕಲ್ನಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ಏರ್ಪಟ್ಟಿದೆ. ಈ ಹಿನ್ನೆಲೆ ಕೊಡೇಕಲ್, ಹುಣಸಗಿ ಹಾಗೂ ಸುರಪುರದಲ್ಲಿ ಖಾಕಿ ಪಡೆ ಸುತ್ತುವರಿದಿದೆ. ಗಲಾಟೆ ನಿಯಂತ್ರಣಕ್ಕಾಗಿ 2 ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಿ ಈಗಾಗಲೇ ಜಿಲ್ಲಾಧಿಕಾರಿ ಸ್ನೇಹಲ್ ಆರ್ ಆದೇಶ ನೀಡಿದ್ದು, ಸುರಪುರ ವಿಧಾನಸಭಾ ಕ್ಷೇತ್ರದಾದ್ಯಂತ ಸೆಕ್ಷನ್ 144 ಕಲಂ ಜಾರಿಯಾಗಿದೆ. ಸಂಘರ್ಷ ಹಿನ್ನೆಲೆ ಗುರುವಾರ ರಾತ್ರಿ ಕೊಡೇಕಲ್ಗೆ ಆಗಮಿಸಿರುವ ಕಲಬುರಗಿ ಈಶಾನ್ಯ ವಲಯ ಐಜಿಪಿ ಅನುಪಮ ಅಗರವಾಲ್ ಹಾಗೂ ಯಾದಗಿರಿ ಎಸ್ಪಿ ಡಾ. ಸಿಬಿ ವೇದಮೂರ್ತಿ ಗ್ರಾಮದಲ್ಲೇ ಮೊಕ್ಕಾಂ ಹೂಡಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಯತ್ನಿಸಿದ್ದಾರೆ. ನಿಷೇಧಾಜ್ಞೆ ಜಾರಿ ಹಿನ್ನೆಲೆ ಇಡೀ ಸುರಪುರ ವಿಧಾನಸಭಾ ಕ್ಷೇತ್ರದಾದ್ಯಂತ ಖಾಕಿ ಸರ್ಪಗಾವಲಿದ್ದು, ಪರಿಸ್ಥಿತಿ ನಿಯಂತ್ರಣಕ್ಕಾಗಿ 3 ಕೆಎಸ್ಆರ್ಪಿ ತುಕಡಿ, 1 ಪ್ಯಾರಾ ಮಿಲಿಟರಿ ಫೋರ್ಸ್ ಕಂಪನಿ, 2 ಡಿಎಸ್ಪಿ, 5 ಸಿಪಿಐ, 10 ಸಿಪಿಐ 100 ಕಾನ್ಸ್ಟೇಬಲ್ ನಿಯೋಜನೆ ಮಾಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ಬೀದರ್: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಅಪಾರ ಪ್ರಮಾಣದ ಬೆಳ್ಳಿ ಆಭರಣಗಳನ್ನು ಜಪ್ತಿ ಮಾಡಲಾಗಿದೆ. ಮಹಾರಾಷ್ಟ್ರ ಹಾಗೂ ಬೀದರ್ ಗಡಿ ಚೆಕ್ ಪೊಸ್ಟ್ ನಲ್ಲಿ ತಪಾಸಣೆ ವೇಳೆ 142 ಕೆ.ಜಿ ಬೆಳ್ಳಿಯ ಕಾಲು ಚೈನುಗಳು ಸೇರಿ 1 ಕೋಟಿ 5 ಲಕ್ಷ ಬೆಲೆ ಬಾಳುವ ಬೆಳ್ಳಿಯ ಆಭರಣಗಳ ಜೊತೆಗೆ ಕಾರು ಕೂಡ ಜಪ್ತಿ ಮಾಡಲಾಗಿದೆ. ಒಟ್ಟು 8 ಬ್ಯಾಗ್ ಗಳಲ್ಲಿ 142 ಕೆಜಿ ಬೆಳ್ಳಿಯ ಆಭರಣಗಳನ್ನು ಸಾಗಾಟ ಮಾಡಲಾಗುತ್ತಿತ್ತು. ಗಜಾನನ ಎಂಬವರಿಗೆ ಸೇರಿದ ಕಾರಿನಲ್ಲಿ ಅಪಾರ ಪ್ರಮಾಣದ ಬೆಳ್ಳಿಯ ಕಾಲು ಚೈನುಗಳು ಪತ್ತೆಯಾಗಿವೆ. ಕಾರಿನ ಮಾಲೀಕರು ನಿಖರವಾದ ದಾಖಲೆಗಳು ನೀಡದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಮತದಾರರಿಗೆ ಹಂಚಲು ತಂದಿರುವ ಶಂಕೆ ವ್ಯಕ್ತವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಬೆಳಗಾವಿ: ಕಿತ್ತೂರು ಕ್ಷೇತ್ರ ದಲ್ಲಿ ಕಾಂಗ್ರೆಸ್ ಟಿಕೆಟ್ ಘೋಷಣೆ ಬೆನ್ನಲ್ಲೆ ಅಸಮಾಧಾನ ಭುಗಿಲೆದಿದ್ದು, ಕಿತ್ತೂರು ಕ್ಷೇತ್ರಕ್ಕೆ ಬಾಬಾಸಾಹೇಬ್ ಪಾಟೀಲ್ಗೆ ಟಿಕೆಟ್ ಹಂಚಿಕೆಗೆ ಕ್ಷೇತ್ರದಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಲಾಬಿಗೆ ಮಣಿದು ಕಿತ್ತೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಹಂಚಿಕೆ ಮಾಡಲಾಗಿದೆ ಎಂದು ಆರೋಪ ಕೇಳಿಬಂದಿದೆ. ಟಿಕೆಟ್ ಹಂಚಿಕೆ ಬೆನ್ನಲ್ಲೆ ಕಾಂಗ್ರೆಸ್ ಮುಖಂಡ, ಸತೀಶ್ ಜಾರಕಿಹೊಳಿ ಆಪ್ತ ಹಬೀಬ್ ಶಿಲೇದಾರ್ ಅಸಮಾಧಾನ ಹೊರಹಾಕಿದ್ದು, ಹೈಕಮಾಂಡ್ ಮಾಡಿದ ಎಡುವಟ್ಟು ಕ್ಷೇತ್ರದಲ್ಲಿ ಸೋಲು ಅನುಭವಿಸುತ್ತದೆ ಎಂದು ಹೇಳಿದ್ದಾರೆ. ಕಿತ್ತೂರು ಕ್ಷೇತ್ರದಲ್ಲಿ ಬಂಡಾಯದ ಮುನ್ಸೂಚನೆಯನ್ನು ನೀಡಿರುವ ಮುಖಂಡ ಶಿಲೇದಾರ್ , ಪರೋಕ್ಷವಾಗಿ ಲಕ್ಷ್ಮಿ ಹೆಬ್ಬಾಳ್ಕರ್, ವಿನಯ ಕುಲಕರ್ಣಿ ವಿರುದ್ಧ ಹರಿಹಾಯ್ದರು. ಕಾಂಗ್ರೆಸ್ ಟಿಕೆಟ್ ಗಿಟ್ಟಿಸಿಕೊಂಡ ಬಾಬಾಸಾಹೇಬ್ ಪಾಟೀಲ್ಗೆ ಬಂಡಾಯದ ಭೀತಿ ಎದುರಾಗಿದ್ದು ಕಿತ್ತೂರಲ್ಲಿ ಡಿ.ಬಿ ಇನಾಮದಾರ್ ಸೊಸೆ ಲಕ್ಷ್ಮಿ ಇನಾಮದಾರ್, ಹಬೀಬ್ ಶಿಲೇದಾರ್ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆಗಿದ್ದರು.ಟಿಕೆಟ್ ಕೈ ತಪ್ಪಿದಕ್ಕೆ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಆಗಿ ಕಣಕ್ಕಿಳಿಯಲು ಲಕ್ಷ್ಮಿ, ಹಬೀಬ್ ನಿರ್ಧಾರ ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ತುಮಕೂರು: ಕಾಂಗ್ರೆಸ್ ಯಾವಾಗಲೂ ಪ್ರಾಮಾಣಿಕ ಅಭ್ಯರ್ಥಿಗಳನ್ನು ಗುರುತಿಸಿ ಅವಕಾಶ ಕೊಡುತ್ತಿದೆ, ಸತ್ಯಕ್ಕೆ, ಪ್ರಾಮಾಣಿಕತೆಗೆ ದೊರೆತಿರುವ ಗೆಲುವು ಅಂತಾ ಭಾವಿಸುತ್ತೇನೆ ಎಂದು ತುಮಕೂರು ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅಹ್ಮದ್ ಹೇಳಿದರು. ಕಾಂಗ್ರೆಸ್ ಟಿಕೆಟ್ ದೊರೆತ ಹಿನ್ನೆಲೆಯಲ್ಲಿ ಸಂತಸ ವ್ಯಕ್ತಪಡಿಸಿದ ಅವರು, ನನ್ನಂತಹ ಸಾಮಾನ್ಯ ಕಾರ್ಯಕರ್ತನನ್ನು ಗುರುತಿಸಿ ಪಕ್ಷ ಟಿಕೆಟ್ ಕೊಟ್ಟಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ್, ಡಿ.ಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಅವರು ಹೇಳಿದರು. ತುಮಕೂರು ನಗರದ ಏಳಿಗೆ ಹಾಗೂ ಶಾಂತಿಗಾಗಿ ಶ್ರಮಿಸುತ್ತೇನೆ. ಎಲ್ಲಾ ಪಕ್ಷದಲ್ಲೂ ಭಿನ್ನಾಭಿಪ್ರಾಯ ಇರುತ್ತದೆ. ಎಲ್ಲರನ್ನೂ ವಿಶ್ವಾಸದಿಂದ ತೆಗೆದುಕೊಂಡು ಹೋಗ್ತೇನೆ. ನಾನು ಹಿರಿಯ ಮುಖಂಡ ಷಫಿ ಅಹ್ಮದ್ ಜೊತೆ 20 ವರ್ಷಗಳಿಂದ ಕೆಲಸ ಮಾಡಿದ್ದೇನೆ. ಷಫಿ ಅಹ್ಮದ್ ಸೇರಿ ಎಲ್ಲಾ ಅಸಮಾನಿತರ ಜೊತೆ ಸೌಹಾರ್ದಯುತವಾಗಿ ಮಾತನಾಡ್ತೇನೆ. ಷಫಿ ಅಹ್ಮದ್ ಹಾಗೂ ಪಕ್ಷದ ಮುಖಂಡರ ಜೊತೆಯಲ್ಲೇ ಪ್ರಚಾರ ಕಾರ್ಯ ಮಾಡ್ತೇನೆ ಎಂದು ಅವರು ಹೇಳಿದರು. ಅರ್ಹರನ್ನು ಪಕ್ಷ…
ರಾಯಚೂರು: ಬಿಜೆಪಿ ಶಾಸಕನ ಭಾವಚಿತ್ರವಿದ್ದ ಅಂಬುಲೆನ್ಸ್ನ್ನು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಸೀಜ್ ಮಾಡಿದ ಪ್ರಕರಣ ದೇವದುರ್ಗದ ಅರಕೇರಾದಲ್ಲಿ ನಡೆದಿದೆ. ಶಾಸಕ ಶಿವನಗೌಡ ನಾಯಕ್ ಭಾವಚಿತ್ರವಿದ್ದ ಅಂಬುಲೆನ್ಸ್ ಅರಕೆರಾದ ನಾಡಗೌಡ ಆಸ್ಪತ್ರೆ ಬಳಿ ನಿಂತಿತ್ತು. ಈ ವೇಳೆ ನೀತಿ ಸಂಹಿತೆ ಜಾರಿಯಲ್ಲಿದ್ದ ಹಿನ್ನೆಲೆಯಲ್ಲಿ ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಅಂಬುಲೆನ್ಸ್ ವಶಕ್ಕೆ ಪಡೆದಿದ್ದಾರೆ. ಚಾಲಕ ಫಕೀರಯ್ಯ ಹಾಗೂ ಆಂಬ್ಯುಲೆನ್ಸ್ ಮಾಲೀಕ ಹನುಂತರಾಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ದೇವದುರ್ಗದ ಬಿಜೆಪಿ ಅಭ್ಯರ್ಥಿಯಾಗಿರುವ ಹಾಲಿ ಶಾಸಕನ ಭಾವಚಿತ್ರವನ್ನು ಅಂಬುಲೆನ್ಸ್ನಲ್ಲಿ ಬಳಸಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಲಾಗಿದೆ. ಈ ಸಂಬಂಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಮೈಸೂರು: ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ಧ್ರುವನಾರಾಯಣ ಅವರ ಪತ್ನಿ ವೀಣಾ ಶುಕ್ರವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಕಳೆದ ತಿಂಗಳಷ್ಟೇ ಕೆಪಿಸಿಸಿ ಕಾರ್ಯಧ್ಯಕ್ಷ ಧ್ರುವನಾರಾಯಣ ಅವರು ಹೃದಯಾಘಾತದಿಂದ ನಿಧನರಾಗಿದ್ದರು. ಕಳೆದ 2 ವರ್ಷಗಳಿಂದ ಧ್ರುವನಾರಾಯಣ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು. ಈ ಬಾರಿ ನಂಜನಗೂಡಿನಿಂದ ಸ್ಪರ್ಧಿಸಲು ಸಿದ್ಧತೆ ಮಾಡಿಕೊಂಡಿದ್ದರು. ಇವರು 2 ಬಾರಿ ಶಾಸಕರಾಗಿ 1 ಬಾರಿ ಸಂಸದರಾಗಿದ್ದರು ಎಂದು ಹೇಳಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಇಂದು ವಿಶ್ವ ಆರೋಗ್ಯ ದಿನ. ವಿಶ್ವ ಆರೋಗ್ಯ ಸಂಸ್ಥೆ ಅಸ್ತಿತ್ವಕ್ಕೆ ಬಂದು ಎಪ್ಪತ್ತೈದು ವರ್ಷಗಳು ಕಳೆದಿವೆ. ಜಾಗತಿಕ ಸವಾಲನ್ನು ಒಡ್ಡುವ ನೈಸರ್ಗಿಕ ವಿಕೋಪಗಳು ಮತ್ತು ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವುದು ಈ ದಿನದ ಉದ್ದೇಶವಾಗಿದೆ. ಆರೋಗ್ಯ ರಕ್ಷಣೆಯ ಮಹತ್ವವನ್ನು ಪ್ರತಿಯೊಬ್ಬರಿಗೂ ತಲುಪಿಸುವ ಉದ್ದೇಶದಿಂದ ಈ ದಿನವನ್ನು ಆಚರಿಸಲಾಗುತ್ತದೆ. ಪ್ರಪಂಚದಾದ್ಯಂತದ ಜನರ ಆರೋಗ್ಯವನ್ನು ಖಚಿತಪಡಿಸಿಕೊಳ್ಳಲು WHO ಗುರಿ ಹೊಂದಿದೆ. ಈ ವರ್ಷದ ಥೀಮ್ ಎಲ್ಲರಿಗೂ ಆರೋಗ್ಯಕರ ಜೀವನ. ವ್ಯಕ್ತಿಯ ಆರೋಗ್ಯದ ಗುಣಮಟ್ಟವು ಜೀವನ ಪರಿಸ್ಥಿತಿಗಳಿಗೆ ಸಂಬಂಧಿಸಿದೆ. ಆಫ್ರಿಕನ್ ದೇಶಗಳು ಸೇರಿದಂತೆ ಎಬೋಲಾ ಮತ್ತು ಸಾರ್ಸ್ ವೈರಸ್ನಂತಹ ಗಂಭೀರ ಸಾಂಕ್ರಾಮಿಕ ರೋಗಗಳು ಬಿಕ್ಕಟ್ಟಾಗುತ್ತಿವೆ. ಇದಕ್ಕೆ ಪರಿಹಾರ ಕಂಡುಕೊಳ್ಳಬೇಕಿದೆ. ಅದಕ್ಕೆ ಸಾಮೂಹಿಕ ಪ್ರಯತ್ನ ಬೇಕು. ದೇಶವು ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಪ್ರಗತಿ ಸಾಧಿಸಿರುವ ಸಂದರ್ಭದಲ್ಲಿ ವಿಶ್ವ ಆರೋಗ್ಯ ದಿನವನ್ನು ಆಚರಿಸಲಾಗುತ್ತದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್…