Author: admin

ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೆ ಬಿಜೆಪಿಯು ಪ್ರಚಾರಕ್ಕೆ ಸ್ಟಾರ್ ನಟರ ಮೊರೆ ಹೋಗಿದ್ದು , ಈ ನಡುವೆ ಎಲ್ಲಾ ಸ್ಟಾರ್ ನಟರು ಬಿಜೆಪಿ ಪರ ಪ್ರಚಾರಕ್ಕೆ ಬಂದರೆ ಸ್ವಾಗತ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ನಟ ಕಿಚ್ಚ ಸುದೀಪ್ ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ಪರ ಪ್ರಚಾರ ಮಾಡುವುದಾಗಿ ಹೇಳಿದ್ದಾರೆ. ಅಲ್ಲದೆ ಬೊಮ್ಮಾಯಿ ಅವರು ಹೇಳಿದ ಕಡೆಗಳಲ್ಲಿಯೂ ಪ್ರಚಾರ ಮಾಡುವುದಾಗಿ ತಿಳಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಸುಧಾಕರ್, ನಟ ಸುದೀಪ್ ಬಿಜೆಪಿ ಸ್ಟಾರ್ ಪ್ರಚಾರಕ ಪಕ್ಷದ ಸ್ಟಾರ್ ಕ್ಯಾಂಪೇನರ್ ಆಗಿಯೇ ಪ್ರಚಾರ ಮಾಡುತ್ತಾರೆ. ಈಗಾಗಲೇ ಸಿಎಂ ಬೊಮ್ಮಾಯಿ ಅವರಿಗೆ ಬೆಂಬಲ ಘೋಷಣೆ ಮಾಡಿದ್ದಾರೆ. ಸುದೀಪ್ ಎಲ್ಲೆಲ್ಲಿ ಪ್ರಚಾರ ಮಾಡ್ತಾರೆಂದು ಶೀಘ್ರವೇ ತೀರ್ಮಾನ ಮಾಡಲಾಗುತ್ತದೆ  ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA…

Read More

ಗೋಕಾಕ: ಕಾಂಗ್ರೆಸ್‌ ಹೈಕಮಾಂಡ್‌ 2ನೇ ಪಟ್ಟಿ ಇಂದು ಬಿಡುಗಡೆಗೊಳಿಸಿದ್ದು, ಶೀಘ್ರವೇ 3ನೇ ಪಟ್ಟಿ ಬಿಡುಗಡೆಗೊಳಿಸಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲಾ ಆಯಾಮಗಳಿಂದ ಸರ್ವೇ ಮಾಡಿ ಹೈಕಮಾಂಡ್‌ ಅಭ್ಯರ್ಥಿಗಳ ಆಯ್ಕೆ ಮಾಡಿದ್ದು, ಸ್ಥಳೀಯ ನಾಯಕರ ಅಭಿಪ್ರಾಯ ಕೂಡ ಪಡೆದಿದೆ. ಕೆಲವು ಕ್ಷೇತ್ರಗಳ ಆಕಾಂಕ್ಷಿಗಳು ಒಮ್ಮತ ಸೂಚಿಸಿದ್ದಾಗ ತಾವೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದಾರೆ ಎಂದು ತಿಳಿಸಿದರು. ನಾಳೆ 3ನೇ ಪಟ್ಟಿ ಪ್ರಕಟಗೊಳ್ಳುವ ಸಾಧ್ಯತೆ ಇದೆ. ಏಕೆಂದರೆ ಅಭ್ಯರ್ಥಿಗಳು ಮತದಾರರ ಮನೆ ಮನೆಗೆ ತಲುಪಬೇಕು. ಕೆಲವು ಕ್ಷೇತ್ರಗಳಲ್ಲಿ ಹೊಸಬರಿಗೆ ನೀಡಿದ್ದಾರೋ, ಹಳಬರಿಗೆ ಟಿಕೆಟ್‌ ನೀಡದ್ದಾರೋ ಅನ್ನುವುದು ಮುಖ್ಯವಲ್ಲ. ಪಕ್ಷದ ತೀರ್ಮಾನವೇ  ಅಂತಿಮವೆಂದು ಹೇಳಿದರು. ಚಿತ್ರ ನಟ ಸುದೀಪ್‌ ಅವರಿಗೆ ಯಾವುದೇ ಪಕ್ಷಕ್ಕೆ ಸೇರ್ಪಡೆಯಾಗಲು ಅಥವಾ ಯಾವುದೇ ಪಕ್ಷದ ಪರ ಪ್ರಚಾರ ಮಾಡಲು ನಿರ್ಬಂಧವಿಲ್ಲ. ನನಗೆ ಬೇಕಾದ ವ್ಯಕ್ತಿಗಳ ಪರ ಅಷ್ಟೇ ಪ್ರಚಾರ ಮಾಡುತ್ತೇನೆ ಎಂದು ಹೇಳಿದ್ದಾರೆ. ಕಾರಣ ಸುದೀಪ್‌ ನಿಲುವಿನಲ್ಲಿ ಸ್ಪಷ್ಟತೆ ಇಲ್ಲ ಎಂದರು.…

Read More

ಇಂದು ಜಗತ್ತಿನಾದ್ಯಂತ ಕ್ರೈಸ್ತರು ಕ್ರಿಸ್ತನ ಸಂಕಟದ ನೆನಪಿಗಾಗಿ ಶುಭ ಶುಕ್ರವಾರವನ್ನು ಆಚರಿಸುತ್ತಾರೆ. ದೇವಾಲಯಗಳಲ್ಲಿ ಬೆಳಗಿನ ಪ್ರಾರ್ಥನೆ ಮತ್ತು ವಿಶೇಷ ಸೇವೆಗಳು ನಡೆಯಲಿವೆ. ಇಡೀ ಪ್ರಪಂಚದ ಪಾಪಗಳನ್ನು ಕಳೆದುಕೊಳ್ಳಲು ಶಿಲುಬೆಗೇರಿಸಿದ ದೇವರ ಮಗನಾದ ಕ್ರಿಸ್ತನ ಸ್ಮರಣೆಯೊಂದಿಗೆ ವಿವಿಧ ಚರ್ಚ್‌ಗಳಲ್ಲಿ ವೇ ಆಫ್ ದಿ ಕ್ರಾಸ್ ಇರುತ್ತದೆ. ಯೊವಾನ್ನನು ಬರೆದ ಯೇಸು ಕ್ರಿಸ್ತರ ಪೂಜ್ಯ ಯಾತನೆಗಳ ವೃತ್ತಾಂತ 18:1–19:42 ನಿರೂಪಕ ಯೇಸು ತಮ್ಮ ಶಿಷ್ಯರೊಡನೆ ಹೊರಟು, ಕೆದ್ರೋನ್ ಹಳ್ಳವನ್ನು ದಾಟಿ, ಅಲ್ಲೇ ಇದ್ದ ತೋಟವನ್ನು ಹೊಕ್ಕರು. ಅವರು ತಮ್ಮ ಶಿಷ್ಯರೊಡನೆ ಆಗಾಗ ಬರುವುದು ವಾಡಿಕೆ. ಅವರನ್ನು ಹಿಡಿದುಕೊಡಲಿದ್ದ ಯೂದನಿಗೆ ಆ ಸ್ಥಳ ಚೆನ್ನಾಗಿ ಗೊತ್ತಿತ್ತು. ಆದುದರಿಂದ ಯೂದನು ಸೈನಿಕರ ಒಂದು ತಂಡವನ್ನೂ ಮುಖ್ಯ ಯಾಜಕರು ಮತ್ತು ಫರಿಸಾಯರು ಕಳುಹಿಸಿದ ಕಾವಲಾಳುಗಳನ್ನು ಕರೆದುಕೊಂಡು ದೀವಟಿಗೆ, ಪಂಜು ಮತ್ತು ಆಯುಧಗಳ ಸಮೇತ ಅಲ್ಲಿಗೆ ಬಂದನು. ಯೇಸುವಿಗೆ ತಮಗೆ ಸಂಭವಿಸಲಿರುವುದೆಲ್ಲವೂ ತಿಳಿದಿತ್ತು. ಎಂದೇ ಮುಂದೆ ಬಂದು, ಯೇಸು: ನೀವು ಯಾರನ್ನು ಹುಡುಕುತ್ತಿದ್ದೀರಿ ? ನಿರೂಪಕ: ಎಂದು ಕೇಳಿದರು, ಅವರು,…

Read More

ಬೆಂಗಳೂರು: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇರೆಗೆ ತೋಟಗಾರಿಕೆ ಸಚಿವ ಮುನಿರತ್ನ ವಿರುದ್ಧ ಬೆಂಗಳೂರಿನ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ತಮಿಳು ಭಾಷಿಕರು ಮತ್ತು ಕನ್ನಡಿಗರ ಮಧ್ಯೆ ಸಂಘರ್ಷಕ್ಕೆ ಎಡೆಮಾಡುವಂಥ ಪ್ರಚೋದನಾಕಾರಿ ಭಾಷಣ ಸಚಿವರು ಮಾಡಿದ್ದರು. ತಮಿಳು ಭಾಷಿಕರನ್ನು ಎತ್ತಿಕಟ್ಟಿ ಹಲ್ಲೆ ಮಾಡಲು ಸೂಚನೆ ನೀಡಿದ್ದರು ಎಂಬ ಆರೋಪ ಅವರ ಮೇಲಿದೆ. ಸಚಿವ ಮುನಿರತ್ನ ಮಾಡಿದ್ದು ಎನ್ನಲಾದ ಭಾಷಣ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದ ಆರ್​ಆರ್​ ನಗರ ಕಾಂಗ್ರೆಸ್ ಅಭ್ಯರ್ಥಿ ದೂರು ನೀಡಿದ್ದರು. ಇದರ ಮೇರೆಗೆ ಮುನಿರತ್ನ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಮಂಗಳೂರು: ವಿಧಾನಸಭೆ ಚುನಾವಣೆ ಹೊತ್ತಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಿಜೆಪಿ ಶಾಸಕ ಸಂಜೀವ್ ಮಠಂದೂರು ಮಹಿಳೆ ಜೊತೆ ಇರುವ ಅಶ್ಲೀಲ ಫೋಟೋಗಳು ವೈರಲ್ ಆಗುತ್ತಿದ್ದ, ಜಿಲ್ಲೆಯಲ್ಲಿ ಭಾರೀ ಸಂಚಲನ ಮೂಡಿಸಿದೆ. ಈ ಫೋಟೋಗಳು ವೈರಲ್ ಆಗುತ್ತಿದ್ದಂತೆಯೇ ಶಾಸಕ ಸಂಜೀವ್ ಮಠಂದೂರು ಉಪ್ಪಿನಂಗಡಿ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಇದರ ಬೆನಲ್ಲೇ ಇದೀಗ ಫೋಟೋದಲ್ಲಿ ಇರುವ ಮಹಿಳೆ ಸಹ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಮಹಿಳೆ, ನನ್ನ ವೈಯಕ್ತಿಕ ಫೋಟೋಗಳನ್ನು ಪುತ್ತೂರಿನ ಶಾಸಕರ ಫೋಟೋ ಜೊತೆ ಜೋಡಿಸಿದ್ದು, ಎಡಿಟ್ ಮಾಡಿದ ಫೋಟೋವನ್ನು ವೈರಲ್ ಮಾಡುತ್ತಿದ್ದಾರೆ. ಇದರಿಂದ ನನ್ನ ಹಾಗೂ ನನ್ನ ಕುಟುಂಬಕ್ಕೆ ತುಂಬಾ ನೋವಾಗಿದೆ. ಓರ್ವ ಮಹಿಳೆ ಮೇಲೆ ಈ ರೀತಿ ದೌರ್ಜನ್ಯ ಎಸಗುತ್ತಿದ್ದಾರೆ. ಶಾಸಕರಿಗೂ ನನಗೂ ಸಂಬಂಧವಿಲ್ಲ. ಆದರೂ ಫೋಟೋ ಎಡಿಟ್ ಮಾಡಿ ತೇಜೋವಧೆ ಮಾಡುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…

Read More

ಶಿಥಿಲಾವಸ್ಥೆಯಲ್ಲಿರುವ ಹಾಗೂ ನೂತನವಾಗಿ ನಿರ್ಮಿಸಲಾಗುತ್ತಿರುವ ಧಾರ್ಮಿಕ ಶ್ರದ್ಧಾಕೇಂದ್ರಗಳನ್ನು ಗುರುತಿಸಿ ಅದಕ್ಕೆ ಸೂಕ್ತ ಆರ್ಥಿಕ ನೆರವನ್ನು ಒದಗಿಸಿ ಅದರ ಕಾಯಕಲ್ಪಕ್ಕೆ ಕಂಕಣ ತೊಟ್ಟಿರುವ ಡಾ.ವೀರೇಂದ್ರ ಹೆಗ್ಗಡೆಯವರ ಕಾರ್ಯ ಪ್ರಶಂಸನೀಯ ಎಂದು ಶ್ರೀರಾಮ ಮಂದಿರ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ನಾಗೇಂದ್ರ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದರು. ತಾಲ್ಲೂಕಿನ ದೊಡ್ಡಪೇಟೆಯಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಶ್ರೀರಾಮ ಮಂದಿರದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಮಂಜೂರಾದ 2 ಲಕ್ಷ ಮೌಲ್ಯದ ಡಿ ಡಿ ಯನ್ನು ಸ್ವೀಕರಿಸಿ ಅವರು ಮಾತನ್ನಾಡಿದರು. ಯೋಜನೆಯ ಜಿಲ್ಲಾ ನಿರ್ದೇಶಕಿ ದಯಾಶೀಲ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ತಿಪಟೂರು ತಾಲ್ಲೂಕಿನಲ್ಲಿ ಕಳೆದ 12 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, 2022-23 ನೇ ಸಾಲಿನಲ್ಲಿ ಇಡೀ ರಾಜ್ಯದಲ್ಲೇ ಗುರುತಿಸಲ್ಪಟ್ಟಿದೆ. ತಾಲ್ಲೂಕಿನಲ್ಲಿ ಸುಮಾರು 120 ಕೋಟಿಯಷ್ಟೂ ಆರ್ಥಿಕ ವ್ಯವಹಾರ ನಡೆದಿದ್ದು, ಇದು ಪಾರದರ್ಶಕವಾಗಿಯೂ ಹಾಗೂ ಸಮರ್ಪಕ ಸದ್ವಿನಿಯೋಗವಾಗಿರುವುದು ಶ್ರೀ ಕ್ಷೇತ್ರದ ಆರ್ಥಿಕ ಶಿಸ್ತಿನ ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದರು ಸಂದರ್ಭದಲ್ಲಿ ಮಂದಿರ ಅಭಿವೃದ್ಧಿ ಸಮತಿಯ ಕಾರ್ಯಾಧ್ಯಕ್ಷ ರಮೇಶ್, ಕೋಶಾಧಿಕಾರಿ…

Read More

ತುರುವೇಕೆರೆ: 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯು ಮುಂಬರುವ  ಮೇ 10ರಂದು ನಡೆಯಲಿದ್ದು, ಸಾರ್ವಜನಿಕರು ನಿರ್ಭಯವಾಗಿ ತಮ್ಮ ಮತವನ್ನು ಚಲಾಯಿಸಬೇಕೆಂದು ತುರುವೇಕೆರೆ ವಿಧಾನಸಭಾ ಕ್ಷೇತ್ರ 130ರ ಚುನಾವಣಾಧಿಕಾರಿಗಳಾದ ಎಂ.ಎನ್.ಮಂಜುನಾಥ್ ಮನವಿ ಮಾಡಿದರು. ತುರುವೇಕೆರೆ ತಾಲೂಕಿನ ಮಾಯಸಂದ್ರ ಗ್ರಾಮದಲ್ಲಿ ತಡ ದಿನವಾದ ಬುಧವಾರ ಸಂಜೆ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ವತಿಯಿಂದ  “ಮತದಾನ ಜಾಗೃತಿ ಜಾಥಾ” (ಮೇಣದ ದೀಪ ಹಚ್ಚಿ ಹೆಜ್ಜೆ ಇಡುವ ಮೂಲಕ) ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ ಶೇಕಡ 100%ರಷ್ಟು ಮತದಾನ ಮಾಡಿಸುವ ಸಲುವಾಗಿ  ಮತದಾರರಿಗೆ ನಮ್ಮ ಮತದ ಹಕ್ಕಿನ ಪ್ರಾಮುಖ್ಯತೆಯನ್ನು ತಿಳಿಸಬೇಕೆಂಬ ಉದ್ಧೇಶದಿಂದ, ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಮತದಾನದ ಅರಿವನ್ನು ಮೂಡಿಸಲು ಹಲವಾರು ಇಲಾಖೆಗಳ ಸಹಯೋಗದೊಂದಿಗೆ ಸಾರ್ವಜನಿಕವಾಗಿ ಪ್ರಚಾರಪಡಿಸುತ್ತಾ, ಒಂದೊಳ್ಳೆ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಸಂಬಂಧ ಮತದಾರರು ಯಾವುದೇ ಆಮಿಷಕ್ಕೆ ಒಳಗಾಗದೆ, ನಿರ್ಭಯವಾಗಿ ಮತ್ತು ನಿರ್ಭೀತವಾಗಿ ತಮ್ಮ ಮತವನ್ನು ಚಲಾಯಿಸಿ, ಮತದಾನವು ಪವಿತ್ರವಾಗಿದ್ದು, ತಮ್ಮ ಹಕ್ಕು ಮತ್ತು  ತಮ್ಮ ಮತವನ್ನು ಮಾರಿಕೊಳ್ಳಬೇಡಿ, ತಮಗೆ ಸೂಕ್ತ ಅಭ್ಯರ್ಥಿಯನ್ನು…

Read More

ಅನೇಕ ಮಕ್ಕಳು ಪ್ರತಿ ಸಣ್ಣ ವಿಷಯಕ್ಕೂ ಕೋಪಗೊಳ್ಳುತ್ತಾರೆ. ಅವರು ತಮ್ಮ ತಂದೆ-ತಾಯಿ ಮತ್ತು ಕುಟುಂಬ ಸದಸ್ಯರ ಮೇಲೆ ಸುಮ್ಮನೆ ಕೋಪಗೋಳ್ಳುತ್ತಾರೆ. ಇದು ಅವರ ದೈಹಿಕ ಅಥವಾ ಮಾನಸಿಕ ಸಮಸ್ಯೆಯ ಕಾರಣದಿಂದಾಗಿರಬಹುದು. ಅನೇಕ ಬಾರಿ ಪೋಷಕರು ತಮ್ಮ ಮಕ್ಕಳ ಹಠಮಾರಿತನ ನಿರ್ಲಕ್ಷಿಸುತ್ತಾರೆ. ಆದ್ರೆ, ಪೋಷಕರಾಗಿ ಅದನ್ನ ನಿರ್ಲಕ್ಷಿಸುವುದು ಸರಿಯಲ್ಲ. ಏಕೆಂದರೆ ಇದು ಮಗುವಿನ ಆರೋಗ್ಯದ ಮೇಲೆ ಹಾಗೂ ಮಾನಸಿಕ ಸ್ಥಿತಿಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಅಂತಹ ಪರಿಸ್ಥಿತಿಯಲ್ಲಿ ಮೊದಲು ಅವರ ಸಮಸ್ಯೆಯನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಬೇಕು. ಅದರಂತೆ ಮಕ್ಕಳ ಕೋಪವನ್ನ ನಿಯಂತ್ರಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು. ಇದರ ಬಗ್ಗೆ ಗುರ್ಗಾಂವ್‌ನ ಆರ್ಟೆಮಿಲ್ ಆಸ್ಪತ್ರೆಯ ಶಿಶುವೈದ್ಯ ಡಾ.ರಾಜೀವ್ ಛಾಬ್ರಾ ಇದನ್ನ ವಿವರವಾಗಿ ವಿವರಿಸುತ್ತಾರೆ. ಮಕ್ಕಳಲ್ಲಿ ಕೋಪಕ್ಕೆ ಕಾರಣಗಳು.! ಮಕ್ಕಳು ತಮ್ಮ ಹೆತ್ತವರನ್ನ ಒಪ್ಪುವಂತೆ ಮಾಡಲು ಅನೇಕ ರೀತಿಯಲ್ಲಿ ಹಟ ಮಾಡುತ್ತಾರೆ. ಅದೇ ಸಮಯದಲ್ಲಿ, ಅವರು ಕೋಪಗೊಳ್ಳುತ್ತಾರೆ.  ಅದೇ ಸಮಯದಲ್ಲಿ ಅವರು ಶಾಲೆಗೆ ಹೋಗದಿರುವುದು, ಹೊಸ ಆಟಿಕೆಗಳನ್ನ ಖರೀದಿಸುವುದು ಅಥವಾ ಸ್ನೇಹಿತರೊಂದಿಗೆ ಆಟವಾಡಲು ಹೋಗುವುದು ಮುಂತಾದ ಬೇಡಿಕೆಗಳನ್ನ…

Read More

ಸಿಎಂ ಬಸವರಾಜ ಬೊಮ್ಮಾಯಿ ಅವರು ಕಷ್ಟಕಾಲದಲ್ಲಿ ನನ್ನ ಜೊತೆ ನಿಂತಿದ್ದರು. ಅದಕ್ಕಾಗಿ ನಾನು ಈಗ ಸಿಎಂ ಬಸವರಾ ಬೊಮ್ಮಾಯಿ ಅವರ ಪರ ನಿಂತಿದ್ದೇನೆ. ಅವರಿಗೆ ಬೆಂಬಲ ಕೊಡುತ್ತೇನೆ ಎಂದು ನಟ ಕಿಚ್ಚ ಸುದೀಪ್ ಹೇಳಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಜೊತೆ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ನಟ ಸುದೀಪ್, ನನಗೆ ಪಕ್ಷ ಮುಖ್ಯವಲ್ಲ ವ್ಯಕ್ತಿಗತ ಸಂಬಂಧ ಮುಖ್ಯ ಯಾವುದೇ ಪಕ್ಷದ ಪರ ನಾನು ನಿಂತಿಲ್ಲ. ಹಿಂದೆ ಅಂಬರೀಶ್ ಪರವೂ ನಾನು ಪ್ರಚಾರ ಮಾಡಿದ್ದೆ. ಕಷ್ಟ ಕಾಲದಲ್ಲಿ ನನ್ನ ಜೊತೆ ಕೆಲವರು ಇದ್ದರು. ಚಿತ್ರರಂಗಕ್ಕೆ ಬಂದಾಗ ಕೆಲವೇ ಕೆಲವರು ನನ್ನ ಪರ ನಿಂತಿದ್ದರು. ಕಷ್ಟದ ಸಮಯದಲ್ಲಿ ಸಿಎಂ ಬೊಮ್ಮಾಯಿ ಸಪೋರ್ಟ್​ ಮಾಡಿದ್ದಾರೆ. ಸಿಎಂ ಬೊಮ್ಮಾಯಿರನ್ನು ನಾನು ಚಿಕ್ಕಂದಿನಿಂದಲೂ ನೋಡಿದ್ದೇನೆ. ಸಿಎಂ ಬೊಮ್ಮಾಯಿಗೆ ನಾನು ಬೆಂಬಲ ಕೊಡಲು ಇಷ್ಟಪಡುತ್ತೇನೆ ಎಂದು ​ ಹೇಳಿದರು. ಸಿಎಂ ಬಸವರಾಜ ಬೊಮ್ಮಾಯಿ ಯಾವ ಪಕ್ಷದಲ್ಲಿದ್ದರೂ ಬೆಂಬಲ ನೀಡುತ್ತಿದ್ದೆ. ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುವುದು ಸಾಕಷ್ಟು…

Read More

ಬಿಜೆಪಿ ನಾಯಕರಿಗೆ ಈ ಬಾರಿ ಗೆಲುವು ಕಷ್ಟ ಅನ್ನೋದು ಗೊತ್ತಾಗಿದೆ. ಹೀಗಾಗಿ ಸಿನಿಮಾ ಸ್ಟಾರ್ ಗಳನ್ನ ಕರೆಸಿ ಪ್ರಚಾರ ಮಾಡಿಸಲು ಮುಂದಾಗಿದ್ದಾರೆ ಎಂದು ಹೆಚ್.ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರ ಜೊತೆ ನಟ ಕಿಚ್ಚ ಸುದೀಪ್ ಬಿಜೆಪಿ ಪರ ಪ್ರಚಾರ.ಈ ಕುರಿತು ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ನಟರ ಮುಖ ತೋರಿಸಿ ಮತ ಪಡೆಯಲು ಬಿಜೆಪಿ ಹೊರಟಿದೆ. ನಮಗೆ ನಮ್ಮ ಕಾರ್ಯಕರ್ತರು ನನ್ನ ಜನರೇ ಸ್ಟಾರ್ ಪ್ರಚಾರಕರು. ಸಿನಿಮಾ ನಟರ ಬಗ್ಗೆ ನಾನು ಲಘುವಾಗಿ ಮಾತನಾಡಲು ಹೋಗಲ್ಲ. ಒಂದು ಪಕ್ಷದ ಪರ ಪ್ರಚಾರ ಮಾಡಿ ಆ ಮೇಲೆ ಸುಮ್ಮನಾಗುತ್ತಾರೆ. ಸಿನಿಮಾ ನಟರು ಪ್ರಚಾರ ಮಾಡಿದ ಕೆಲವು ಕಡೆ ಸೋಲು ಆಗಿದೆ ಎಂದರು. ಸ್ಟಾರ್ ಗಳಿಂದ ನಿಖಿಲ್ ಸೋತಿದ್ದಾರೆ ಅಂತಿದ್ದಾರೆ. ಆದರೆ ಅದು ಸುಳ್ಳು. ನಿಖಿಲ್ ಸೋತಿದ್ದು ಬಿಜೆಪಿ ಕಾಂಗ್ರೆಸ್, ರೈತ ಸಂಘದ ಒಳ ಒಪ್ಪಂದದಿಂದ ಎಂದು ಹೆಚ್.ಡಿ ಕುಮಾರಸ್ವಾಮಿ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…

Read More