Subscribe to Updates
Get the latest creative news from FooBar about art, design and business.
- SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!
- 10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!
- ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!
- ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ
- ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
- ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ
- ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು
- ನಮ್ಮ ತುಮಕೂರು ಫಲಶ್ರುತಿ: ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣ: ಸಫಾಯಿ ಕರ್ಮಚಾರಿಗಳ ಆಯೋಗ ಸ್ಥಳಕ್ಕೆ ಭೇಟಿ
Author: admin
ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ರಾಹುಲ್ ಗಾಂಧಿ ಪ್ರಚಾರ ನಡೆಸಲಿದ್ದಾರೆ. ಕಾಂಗ್ರೆಸ್ ಭದ್ರಕೋಟೆ ದಾವಣಗೆರೆ ಜಿಲ್ಲೆಯ ಹರಿಹರ ನಗರದ ಗಾಂಧಿ ಮೈದಾನದಲ್ಲಿ ಪ್ರಚಾರ ಭಾಷಣ ಮಾಡಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಜಿಲ್ಲೆಯ 7 ಕ್ಷೇತ್ರಗಳ ಅಭ್ಯರ್ಥಿಗಳು ಇಂದಿನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಜೊತೆಗೆ ಕಾಫಿನಾಡು ಚಿಕ್ಕಮಗಳೂರು ನಗರದಲ್ಲಿ ರಾಹುಲ್ ಗಾಂಧಿ ರೋಡ್ ಶೋ ನಡೆಸಲಿದ್ದಾರೆ. ಹೆಚ್.ಡಿ.ತಮ್ಮಯ್ಯ ಪರ ಮತಯಾಚನೆ ಮಾಡಲಿದ್ದಾರೆ. ಕೆಇಬಿ ಸರ್ಕಲ್ ನಿಂದ ಅಜಾದ್ ಪಾರ್ಕ್ ಸರ್ಕಲ್ ವೆರೆಗೂ ರೋಡ್ ಶೋ ನಡೆಸಿ ಆಜಾದ್ ಪಾರ್ಕ್ ನಲ್ಲಿ ಬಹಿರಂಗ ಭಾಷಣ ಮಾಡಲಿದ್ದಾರೆ. ಮತ್ತೊಂದೆಡೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ರೋಡ್ ಶೋ ನಡೆಸಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಾ.ಎಂ.ಸಿ.ಸುಧಾಕರ್ ಪರ ಮತಯಾಚನೆ ಮಾಡಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಇಂದು ಚಾಮರಾಜನಗರ ಜಿಲ್ಲೆಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ಪ್ರಚಾರ ನಡೆಸಲಿದ್ದಾರೆ. ಹನೂರು, ಕೊಳ್ಳೇಗಾಲ ಬಿಜೆಪಿ ಅಭ್ಯರ್ಥಿಗಳ ಪರ ಮತಬೇಟೆ ಮಾಡಲಿದ್ದಾರೆ. ಹನೂರಿನ ಆರ್.ಎಸ್.ದೊಡ್ಡಿ ಬಳಿಯ ಮೈದಾನದಲ್ಲಿ ಬಿಜೆಪಿ ಸಮಾವೇಶ ಹಮ್ಮಿಕೊಳ್ಳಲಾಗಿದ್ದು ಹನೂರು ಬಿಜೆಪಿ ಅಭ್ಯರ್ಥಿ ಪ್ರೀತನ್ ನಾಗಪ್ಪ ಪರ ಮತಯಾಚನೆ ಮಾಡಲಿದ್ದಾರೆ. ಬಳಿಕ ಕೊಳ್ಳೇಗಾಲ ಕ್ಷೇತ್ರದ ಸಂತೇಮರಹಳ್ಳಿಯಲ್ಲಿ ಕೊಳ್ಳೇಗಾಲ ಅಭ್ಯರ್ಥಿ ಎನ್.ಮಹೇಶ್ ಪರ ಮತಯಾಚಿಸಲಿದ್ದಾರೆ. ಹಾಗೂ ಸಿದ್ದರಾಮಯ್ಯ ಮಣಿಸಲು ಕೇಂದ್ರ ಸಚಿವ ಅಮಿತ್ ಶಾ ರಣತಂತ್ರ ಹೆಣೆದಿದ್ದು ಬೆಳಗ್ಗೆ 11 ಗಂಟೆಗೆ ವರುಣ ಕ್ಷೇತ್ರದ ಹೊಸಕೋಟೆ ಬಳಿ ಸಮಾವೇಶ ನಡೆಸಲಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ, ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಭಾಗಿಯಾಗಲಿದ್ದಾರೆ. ಬೆಂಗಳೂರಿನಲ್ಲಿ ಅಮಿತ್ ಶಾ ರೋಡ್ ಶೋ ನಡೆಸಲಿದ್ದು ಆಡುಗೋಡಿ ಸಿಗ್ನಲ್ನಿಂದ ಆರಂಭವಾಗಿ ಹೊಸೂರು ರಸ್ತೆಯ ಟೋಟಲ್ ಮಾಲ್ವರೆಗೂ ಅಮಿತ್ ಶಾ ರೋಡ್ ಶೋ ನಡೆಸಲಿದ್ದಾರೆ. ರೋಡ್ ಶೋ ನಡೆಯುವ ಮಾರ್ಗದಲ್ಲಿ ವಾಹನ ಸಂಚಾರ ನಿರ್ಬಂಧ ಹೇರಲಾಗಿದೆ. ಸುಗಮ ಸಂಚಾರಕ್ಕೆ ವಾಹನಗಳ ಮಾರ್ಗ ಬದಲಾಯಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ಬೆಳಗಾವಿ: ದಕ್ಷಿಣ ಭಾಗದಲ್ಲಿ ಮತಪ್ರಚಾರ ಜೋರಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಪ್ರಭಾವತಿ ಮಾಸ್ತಮರಡಿ ಮಜಗಾವಿಯಲ್ಲಿ ಇಂದು ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸ್ಥಳೀಯರನ್ನು ಉದ್ದೇಶಿಸಿ ಮತ ನೀಡುವಂತೆ ಮನವಿ ಮಾಡಿದರು. ಭಾಗವಹಿಸಿದ್ದ ಹಿರಿಯರು, ಯುವಕರೆಲ್ಲರೂ ಹಾಲಿ ಸರ್ಕಾರದ ದುರಾಡಳಿತದಿಂದ ಬೇಸತ್ತಿದ್ದು, ಮೊದಲಿನಂತೆ ಜನಪರ ಕಾಂಗ್ರೆಸ್ ಸರ್ಕಾರವನ್ನು ಬಯಸುತ್ತಿದ್ದಾರೆ. ಎಲ್ಲೇ ಹೋದರೂ ಜನರು ಕುಡಿಯುವ ನೀರು, ಚರಂಡಿ ಅವ್ಯವಸ್ಥೆ, ಬೆಲೆ ಏರಿಕೆ ಮುಂತಾದವುಗಳ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಿದ್ದು, ಕಾಂಗ್ರೆಸ್ ಸರ್ಕಾರ ಮಾತ್ರ ಅದನ್ನು ಪರಿಹರಿಸಬಹುದು, ಹಾಗಾಗಿ ಈ ಬಾರಿ ಮತವನ್ನು ಕಾಂಗ್ರೆಸ್ ಪಕ್ಷಕ್ಕೆ ನೀಡುವ ನಿರ್ಧಾರ ಮಾಡಿರುವುದಾಗಿ ತಿಳಿಸಿದರು. ಕಾಂಗ್ರೆಸ್ನ ಜನಪರ ಆಡಳಿತ, 5 ಗ್ಯಾರಂಟಿಗಳು, ಬೆಳಗಾವಿ ದಕ್ಷಿಣಕ್ಕೆ ಯೋಜನೆ ಹಾಕಿಕೊಂಡಿರುವ ಯೋಜನೆಗಳ ಬಗ್ಗೆ ಮಾಹಿತಿ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಕ್ಕಾಗಿ ಕಳೆದ ವರ್ಷ ದಾಖಲಾದ 2022 ರ ಭಯೋತ್ಪಾದಕ ಸಂಚಿನ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮಂಗಳವಾರ 12 ಸ್ಥಳಗಳಲ್ಲಿ ದಾಳಿ ನಡೆಸಿತು. ಕಳೆದ ವರ್ಷ ಡಿಸೆಂಬರ್ 23 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ವಿವಿಧ ನಿಷೇಧಗಳು, ಭಯೋತ್ಪಾದಕ ಸಂಘಟನೆಗಳು ಭಯೋತ್ಪಾದಕ ಕಾರ್ಯಕ್ರಮಗಳನ್ನು ಹರಡುತ್ತಿವೆ ಎಂಬ ಮಾಹಿತಿಯ ಆಧಾರದ ಮೇಲೆ ದಾಖಲಾದ ಪ್ರಕರಣದಲ್ಲಿ ಎನ್ಐಎ ಕಾಶ್ಮೀರದ ಹಲವು ಸ್ಥಳಗಳಲ್ಲಿ ದಾಳಿ ನಡೆಸಿತು. ಸೈಬರ್ ಸ್ಪೇಸ್ ಬಳಸಿ, ಅಲ್ಪಸಂಖ್ಯಾತರು,ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ಧಾರ್ಮಿಕ ಸೌಹಾರ್ದತೆಯನ್ನು ಉತ್ತೇಜಿಸುವ ಭಯೋತ್ಪಾದಕ ದಾಳಿಗಳಲ್ಲಿ ಆತ ಭಾಗಿಯಾಗಿದ್ದಾನೆ ಎಂದು ಎನ್ಐಎ ಪತ್ತೆ ಮಾಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 29 ಮತ್ತು 30ರಂದು ರಾಜ್ಯದಲ್ಲಿ ಭರ್ಜರಿ ಪ್ರಚಾರ ನಡೆಸಿ ಧೂಳೆಬ್ಬಿಸಿ ಹೋಗಿದ್ದರು. ಇಂದು ಪುನಹ ರಾಜ್ಯಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಇಂದು, ನಾಳೆ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಪ್ರಧಾನಿ ಮೋದಿ ಬೆಳಗ್ಗೆ 10.25ಕ್ಕೆ ಚಿತ್ರದುರ್ಗಕ್ಕೆ ಆಗಮಿಸಲಿದ್ದು ಬೆಳಗ್ಗೆ 11 ಗಂಟೆಗೆ ಚಳ್ಳಕೆರೆಯಲ್ಲಿ ಪ್ರಚಾರ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಮಧ್ಯಾಹ್ನ 1 ಗಂಟೆಗೆ ಹೊಸಪೇಟೆ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಿ ಮಧ್ಯಾಹ್ನ 2.45ಕ್ಕೆ ಸಿಂಧನೂರು ಬಿಜೆಪಿ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ಸಂಜೆ 5 ಗಂಟೆಗೆ ಕಲಬುರಗಿಯಲ್ಲಿ ರೋಡ್ ಶೋ ನಡೆಸಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತವರಿನಲ್ಲಿ ಸುಮಾರು 45 ನಿಮಿಷ ರೋಡ್ ಶೋ ನಡೆಸಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ಇಂದು ರಾತ್ರಿ ಕಲಬುರಗಿಯಲ್ಲೇ ತಂಗಲಿದ್ದಾರೆ. ಇನ್ನು ಕಲಬುರಗಿಯಲ್ಲಿ ಪ್ರಧಾನಿ ಮೋದಿ ರೋಡ್ ಶೋ ಹಿನ್ನೆಲೆ ಕಲಬುರಗಿಯಲ್ಲಿ ಡ್ರೋನ್ ಕ್ಯಾಮರಾ ಹಾರಾಟ ನಿಷೇಧಿಸಿ ಡಿಸಿ ಯಶವಂತ್ ಗುರುಕರ್ ಆದೇಶ ಹೊರಡಿಸಿದ್ದಾರೆ. ನಾಳೆ ಮಧ್ಯಾಹ್ನ…
ಗುಬ್ಬಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಪ್ರಗತಿ ಬಂದು ಸ್ವಸಹಾಯ ಸಂಘದ ಫಲಾನುಭವಿಗಳಿಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು, ಅದರಂತೆ ನಿಮ್ಮ ಗ್ರಾಮದಲ್ಲಿ ನೂತನವಾಗಿ ಪ್ರಾರಂಭವಾಗುತ್ತಿರುವ ಪ್ರಗತಿ ಬಂಧು ಸಂಘದ ಮೂಲಕ ಉಳಿತಾಯ ಮಾಡುವ ಜೊತೆಗೆ ಸಂಘದ ಸದಸ್ಯರು ಆರ್ಥಿಕ ಚಟುವಟಿಕೆಗಳನ್ನು ಮಾಡಲು ಮುಂದಾಗುವ ಮೂಲಕ ಸಾಮಾಜಿಕ ಮತ್ತು ಆರ್ಥಿಕವಾಗಿ ಬೆಳವಣಿಗೆ ಆಗಲು ಸಹಕಾರಿಯಾಗುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಹರೀಶ್ ಸಲಹೆ ನೀಡಿದರು. ಗುಬ್ಬಿ ತಾಲೂಕಿನ ತೊರೆಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಅವರು ಭಾಗವಹಿಸಿ ಮಾತನಾಡಿದ ಅವರು ಗ್ರಾಮದಲ್ಲಿ ನೂತನ ಸಂಘವನ್ನು ಉದ್ಘಾಟಿಸಿದ್ದು ಅದರಂತೆ ಸಂಘದ ಉಳಿತಾಯ ಹಾಗೂ ಸಂಘದ ಹಣವನ್ನು ಕಟ್ಟಲು ಹೇರೂರು ಗ್ರಾಮದಲ್ಲಿ ಸಂದಾಯ ಕೇಂದ್ರ ಪ್ರತಿ ಬಾರಿ ಮಾಡುವ ಸಭೆಯಲ್ಲಿ ಉಳಿತಾಯಣವನ್ನು ಕಟ್ಟುವ ಮೂಲಕ ಸಂಘದ ಅಭಿವೃದ್ಧಿಗೆ ಸಂಘದ ಸದಸ್ಯರು ಸಹಕರಿಸುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…
ಹುಬ್ಬಳ್ಳಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರಿಗೆ ನಾನು ವಿಷಕನ್ಯೆ ಅಂದಿದ್ದೇನೆ. ನಾನು ಕ್ಷಮೆ ಕೇಳಲ್ಲ. ದೊರೆಸ್ವಾಮಿ ನಾಟಕ ಕಂಪನಿಗೆ ಕಾಂಗ್ರೆಸ್ ಏಜೆಂಟ್ ಅಂದಿದ್ದೆ. ನಾನು ರಾಜೀನಾಮೆ ಕೊಡುತ್ತೇನೆ. ಕ್ಷಮೆ ಕೇಳಲ್ಲ. ಪ್ರಧಾನಿ ಮೋದಿ ಬಗ್ಗೆ 91 ಸಾರಿ ಬೈದಿದ್ದಾರೆ. ಹೀಗಾಗಿ ವಿಷ ಸರ್ಪ ಅಂದಾಗ ನಾನು ವಿಷಕನ್ಯೆ ಅಂದಿದ್ದೇನೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಇನ್ನು ಮುಖ್ಯಮಂತ್ರಿಯಾಗುವ ವಿಚಾರವಾಗಿ ಮಾತನಾಡಿದ ಅವರು ಪಕ್ಷ ಯಾರನ್ನಾದರು ಮುಖ್ಯಮಂತ್ರಿ ಮಾಡಲಿ, ಬಸವರಾಜ ಬೊಮ್ಮಾಯಿ ಅವರನ್ನಾದರೂ ಮಾಡಲಿ ಅಥವಾ ನನ್ನನ್ನಾದರೂ ಮಾಡಲಿ ಎನ್ನುವ ಮೂಲಕ ಮುಖ್ಯಮಂತ್ರಿಯಾಗುವ ಇಂಗಿತವನ್ನು ವ್ಯಕ್ತಪಿಡಿಸದರು. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಎಲ್ಲರಕ್ಕಿಂತ ನಾನು ಗಟ್ಟಿಯಾಗಿದ್ದೇನೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರದು ನಮ್ಮ ತರಹ ಸ್ಟ್ರಾಂಗ್ ಹಿಂದೂತ್ವ ಅಲ್ಲ. ಅವರು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ನಾನು ಮುಖ್ಯಮಂತ್ರಿ ಆಗುವ ಕನಸು ಕಂಡಿಲ್ಲ ಎಂದು ಸ್ಪಷ್ಟಪಡಿಸಿದರು. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಪಕ್ಷ ಕಡೆಗಣನೆ ಮಾಡಿದೆ ಎನ್ನುವ ಹೇಳಿಕೆ ವಿಚಾರವಾಗಿ ಮಾತನಾಡಿದ…
ಕರ್ನಾಟಕದಲ್ಲಿರುವ ಬಿಜೆಪಿ ಸರ್ಕಾರ ನಿಮ್ಮ ಜೇಬಿನಿಂದ ಹಣವನ್ನು ಕಿತ್ತುಕೊಂಡಿದೆ. ಈಗ ಎಲ್ಲಾ ಕೆಲಸಗಳಿಗೆ 40 ಪರ್ಸೆಂಟ್ ಕಮಿಷನ್ ಕೊಡುವ ಪರಿಸ್ಥಿತಿ ಬಂದಿದೆ ಎಂದು ರಾಹುಲ್ ಗಾಂಧಿ ಬಿಜೆಪಿಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಪಟ್ಟಣದ ರಂಗಮಂದಿರದ ಆವರಣದಲ್ಲಿ ಆಯೋಜಿಸಿದ್ದ ಬೃಹತ್ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ನೀವು ಬಿಜೆಪಿಗೆ ಮತ ನೀಡಿಲ್ಲ, ಅವರನ್ನು ಆಯ್ಕೆ ಮಾಡಿಲ್ಲ. ಆದರೆ, ಬಿಜೆಪಿಯವರು, ಶಾಸಕರನ್ನು ಖರೀದಿ ಮಾಡಿ ಲೋಕತಂತ್ರವನ್ನು ಹಾಳು ಮಾಡಿದ್ದಾರೆ ಎಂದು ಹೇಳಿದರು. ಸರ್ಕಾರದ ಕೆಲಸ ಜನರಿಗೆ ಉದ್ಯೋಗ, ಶಿಕ್ಷಣ, ಆರೋಗ್ಯಕ್ಕೆ ಹಣ ನೀಡಬೇಕು. ಆದರೆ ಈ ಸರ್ಕಾರ ನಿಮ್ಮ ಜೇಬಿಗೆ ಕತ್ತರಿ ಹಾಕುತ್ತಿದೆ. ಎಲ್ಲಾ ಕೆಲಸದ ಮೇಲೆ 40 ಪರ್ಸೆಂಟ್ ಲಂಚ ತೆಗೆದುಕೊಂಡಿದ್ದಾರೆ. ನನ್ನ ಹತ್ತಿರ 40 ಪರ್ಸೆಂಟ್ ಕಮಿಷನ್ ತೆಗೆದುಕೊಂಡಿದ್ದಾರೆ ಅಂತ ದಿಂಗಾಲೇಶ್ವರ ಸ್ವಾಮೀಜಿ ಕೂಡ ಹೇಳಿದ್ದಾರೆ. ಬಿಜೆಪಿ ಶಾಸಕರೊಬ್ಬರು , ಈಗಿನವರು 2 ಸಾವಿರ ಕೋಟಿ ಕೊಟ್ಟು ಸಿಎಂ ಆಗಿದ್ದಾರೆ ಅಂತ ಸಾರ್ವಜನಿಕವಾಗಿ ಹೇಳಿದ್ದಾರೆ ಎಂದು ಅವರು ಹೇಳಿದರು.…
ಕೊರಟಗೆರೆ :ಬಿಜೆಪಿ ಅಭ್ಯರ್ಥಿ ಅನಿಲ್ ಕುಮಾರ್ ಪರ ಅಸ್ಸಾಂ ಮುಖ್ಯಮಂತ್ರಿ ಡಾ.ಹಿಮಂತ ಬಿಸ್ವಾ ಶರ್ಮಾ ರೋಡ್ ಶೋ ನಡೆಸಿದರು. ಬೃಹತ್ ಮೆರವಣಿಗೆಗೆ ಆಗಮಿಸಿದ ಅಸ್ಸಾಂ ಸಿಎಂ ರವರನ್ನು ವಿವಿಧ ಕಲಾ ತಂಡಗಳೊಂದಿಗೆ ಕೊರಟಗೆರೆ ಬಿಜೆಪಿ ಅಭ್ಯರ್ಥಿ ಅನಿಲ್ ಕುಮಾರ್ ಬರ ಮಾಡಿಕೊಂಡರು. ಕೊರಟಗೆರೆ ಪಟ್ಟಣದ ಕೆ ಎಸ್ ಆರ್ ಟಿ ಸಿ ವೃತದಿಂದ ಎಸ್ ಎಸ್ ಆರ್ ವೃತ್ತದವರೆಗೂ ಬೃಹತ್ ಮೆರವಣಿಗೆ ನಡೆಸಲಾಯಿತು. ಭಾರೀ ಭದ್ರತೆಯೊಂದಿಗೆ ನಡೆದ ರೋಡ್ ಶೋ ಯಶಸ್ವಿಯಾಯಿತು. ಇದೇ ವೇಳೆ ಮಾತನಾಡಿದ ಅನಿಲ್ ಕುಮಾರ್, ಕೊರಟಗೆರೆ ಕ್ಷೇತ್ರವನ್ನು ಈ ಬಾರಿ ಕಾಂಗ್ರೆಸ್ ಮುಕ್ತ ಕೊರಟಗೆರೆ ಕ್ಷೇತ್ರವನ್ನಾಗಿ ಮಾಡಬೇಕು. ಡಾ.ಜಿ.ಪರಮೇಶ್ವರ್ 2,600 ಕೋಟಿಯಲ್ಲಿ ಕೊರಟಗೆರೆ ಕ್ಷೇತ್ರವನ್ನು ಅಭಿವೃದ್ಧಿಗೊಳಿಸಲು ಅನುದಾನವನ್ನು ತಂದಿದ್ದೇವೆ ಎಂದು ಹೇಳುತ್ತಾರೆ, 2,600 ಕೋಟಿ ಹಣದಲ್ಲಿ ಕೊರಟಗೆರೆ ಕ್ಷೇತ್ರವನ್ನು ರಾಜಧಾನಿಯಂತೆ ಅಭಿವೃದ್ಧಿ ಗೊಳಿಸಬಹುದಿತ್ತು ಎಂದು ಲೇವಡಿ ಮಾಡಿದರು. ಕ್ಷೇತ್ರದ 330 ಹಳ್ಳಿಗಳಲ್ಲಿ ಶೇಕಡ 80 ರಷ್ಟು ಹಳ್ಳಿಗಳಿಗೆ ನಾನು ಭೇಟಿ ನೀಡಿದ್ದೇನೆ. ಸರಿಯಾದ ರಸ್ತೆಗಳಿಲ್ಲದೆ, ವಿದ್ಯಾರ್ಥಿಗಳಿಗೆ ಸರಿಯಾದ…
ಉಕ್ರೇನ್ನ ರಕ್ಷಣಾ ಸಚಿವಾಲಯವು ಪವಿತ್ರ ಹಿಂದೂ ದೇವತೆಯಾದ ‘ಮಾತೆ ಕಾಳಿ’ಯ ಫೋಟೋದೊಂದಿಗೆ ವಿವಾದಾತ್ಮಕ ಟ್ವೀಟ್ ಅನ್ನು ಪೋಸ್ಟ್ ಮಾಡಿದೆ. ಸ್ಕರ್ಟ್ ಧರಿಸಿರುವ ಆಕೃತಿಯ ಚಿತ್ರವನ್ನು ‘ಕಲಾಕೃತಿ’ ಎಂಬ ಶೀರ್ಷಿಕೆಯೊಂದಿಗೆ ಪೋಸ್ಟ್ ಮಾಡಲಾಗಿದೆ, ಆದರೆ ಭಾರತೀಯರಿಂದ ತೀವ್ರ ಟೀಕೆಗಳ ನಂತರ ಅದನ್ನು ತೆಗೆದುಹಾಕಲಾಗಿದೆ. ಇತ್ತೀಚೆಗೆ, ಉಕ್ರೇನ್ ರಷ್ಯಾದ ಇಂಧನ ಶೇಖರಣಾ ಸೌಲಭ್ಯವನ್ನು ಹೊಡೆದು ದೊಡ್ಡ ಹೊಗೆಯನ್ನು ಉಂಟುಮಾಡಿತು. ಈ ಹೊಗೆಯನ್ನು ಬಳಸಿ ಕಾಳಿ ದೇವಿಯಂತೆ ಕಾಣುವಂತೆ ಫೋಟೋವನ್ನು ಮಾರ್ಫ್ ಮಾಡಲಾಗಿದೆಯಂತೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy