Author: admin

ಇಂದು, ಪ್ರಪಂಚದಾದ್ಯಂತದ ಕ್ರೈಸ್ತರು ಕ್ರಿಸ್ತನ ಕೊನೆಯ ಭೋಜನದ ನೆನಪಿಗಾಗಿ ಈಸ್ಟರ್ ಗುರುವಾರವನ್ನು ಆಚರಿಸುತ್ತಾರೆ. ವಿನಯಕ್ಕೆ ನಿದರ್ಶನವಾದ ಕ್ರಿಸ್ತನು ತನ್ನ ಶಿಷ್ಯರ ಪಾದಗಳನ್ನು ತೊಳೆದ ತ್ಯಾಗದ ನೆನಪಿಗಾಗಿ ಇಂದು ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಮತ್ತು ಕಾಲು ತೊಳೆಯುವ ಸೇವೆ ನಡೆಯಲಿದೆ. ಕೊನೆಯ ಭೋಜನದ ನೆನಪಿಗಾಗಿ ಚರ್ಚ್‌ಗಳು ಮತ್ತು ಮನೆಗಳಲ್ಲಿ ಸಂಜೆ ಬ್ರೆಡ್-ಬ್ರೇಕಿಂಗ್ ಸಮಾರಂಭವಿರುತ್ತದೆ. ಚರ್ಚ್ ಮುಖಂಡರು ವಿವಿಧ ದೇವಾಲಯಗಳಲ್ಲಿ ಸಮಾರಂಭಗಳ ಅಧ್ಯಕ್ಷತೆ ವಹಿಸುವರು. ಯೇಸು ಕ್ರಿಸ್ತ ತನ್ನ ಶಿಷ್ಯರ ಪಾದಗಳನ್ನು ತೊಳೆದು ಪ್ರಭು ಯೇಸು, ತಮ್ಮನ್ನು ಹಿಡಿದುಕೊಡಲಾದ ಆ ರಾತ್ರಿ, ರೊಟ್ಟಿಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ ಅದನ್ನು ಮುರಿದು, “ಇದು ನಿಮಗಾಗಿ ಒಪ್ಪಿಸಲಾಗುವ ನನ್ನ ಶರೀರ, ಇದನ್ನು ನನ್ನ ಸ್ಮರಣೆಗಾಗಿ ಮಾಡಿ, ” ಎಂದರು. ಅಂತೆಯೇ ಭೋಜನದ ಕೊನೆಯಲ್ಲಿ ಪಾನಪಾತ್ರೆಯನ್ನು ತೆಗೆದುಕೊಂಡು, ” ಈ ಪಾತ್ರ ನನ್ನ ರಕ್ತದಿಂದ ಮುದ್ರಿತವಾದ ಹೊಸ ಒಡಂಬಡಿಕೆ, ಇದನ್ನು ನೀವು ಪಾನಮಾಡುವಾಗಲೆಲ್ಲಾ ನನ್ನ ಸ್ಮರಣೆಗಾಗಿ ಮಾಡಿರಿ, ” ಎಂದರು. ಇಂದೇ ನೀವು ಈ ರೊಟ್ಟಿಯನ್ನು ಭುಜಿಸಿ…

Read More

ರಾಷ್ಟ್ರ ರಾಜಧಾನಿಯಲ್ಲಿ ಹದಿನಾರರ ಹರೆಯದ ಹುಡುಗಿಯೊಬ್ಬಳು ಕಿರುಕುಳಕ್ಕೊಳಗಾದಳು. ವಾಯುವ್ಯ ದೆಹಲಿಯ ಅಶೋಕ್ ವಿಹಾರ್‌ನಲ್ಲಿ ಮಂಗಳವಾರ ಈ ಘಟನೆ ನಡೆದಿದೆ. ಕಳ್ಳತನದ ವೇಳೆ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂಬುದು ದೂರು. ಸದ್ಯ ಪೊಲೀಸರು ಅತ್ಯಾಚಾರ ಮತ್ತು ದರೋಡೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಅಶೋಕ್ ವಿಹಾರ್‌ನಲ್ಲಿರುವ ಎಂಸಿಡಿ ಶಾಲಾ ಸಂಕೀರ್ಣದೊಳಗೆ ಈ ಕಿರುಕುಳ ನಡೆದಿದೆ. ಸಂತ್ರಸ್ತೆಯ ಪೋಷಕರು ಶಾಲೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದರು. ಕೆಲವು ದಿನಗಳ ಕಾಲ ಶಾಲೆಯನ್ನು ಮುಚ್ಚಲಾಗಿತ್ತು ಆದರೆ ಅವರು ಸಂಕೀರ್ಣದೊಳಗೆ ಉಳಿದುಕೊಂಡಿದ್ದರು. ಮಂಗಳವಾರ ದಂಪತಿ ಕೆಲಸದ ನಿಮಿತ್ತ ಬೇರೆಡೆ ಹೋಗಿದ್ದರು. ಮನೆಯಲ್ಲಿ ಇಬ್ಬರು ಹೆಣ್ಣು ಮಕ್ಕಳು ಮಾತ್ರ ಇದ್ದರು.ಬೆಳಗ್ಗೆ 11.30ರ ಸುಮಾರಿಗೆ ಅಪ್ರಾಪ್ತ ಬಾಲಕನೊಬ್ಬ ಮನೆಗೆ ನುಗ್ಗಿದ್ದಾನೆ. ದರೋಡೆ ಯತ್ನದ ಸಂದರ್ಭದಲ್ಲಿ, ಅವನು ಅಪ್ರಾಪ್ತ ಬಾಲಕಿ ಮತ್ತು ಆಕೆಯ 18 ವರ್ಷದ ಸಹೋದರಿಯನ್ನು  ಭೇಟಿಯಾದನು. ಈ ಸಂದರ್ಭದ ಲಾಭ ಪಡೆದ ಬಾಲಕ ಬಾಲಕಿಯರಿಗೆ ಚಾಕುವಿನಿಂದ ಬೆದರಿಸಿ 16 ವರ್ಷದ ಬಾಲಕಿಯನ್ನು ಕಟ್ಟಡದ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ…

Read More

ಮನೆಯಲ್ಲಿ ಮಾಡಿದ ಚಿಕನ್ ತಿನ್ನಲು ಬಿಡಲಿಲ್ಲ ಎಂಬ ಜಗಳದ ನಂತರ ತಂದೆ ತನ್ನ ಮಗನನ್ನು ಕೊಂದಿದ್ದಾನೆ. ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗೇರಿಯಲ್ಲಿ ಈ ಘಟನೆ ನಡೆದಿದೆ. 32 ವರ್ಷದ ಶಿವರಾಮ್ ಮಂಗಳವಾರ ಕೆಲಸ ಮುಗಿಸಿ ಮನೆಗೆ ಮರಳಿದ್ದಾರೆ. ಅಂದು ಶಿವರಾಂ ಬರುವ ಮೊದಲೇ ಮಾಡಿದ ಚಿಕನ್ ಕರಿ ತಿಂದು ಮುಗಿಸಿದ್ದರು. ಶಿವರಾಂ ಅವರಿಗೆ ಚಿಕನ್ ಕರಿ ಬಡಿಸದಿದ್ದಕ್ಕೆ ಮಾತಿನ ಚಕಮಕಿ ಆರಂಭವಾಯಿತು. ಆಗ ತಂದೆ ಮರದ ತುಂಡಿನಿಂದ ಮಗನ ತಲೆಗೆ ಹೊಡೆದಿದ್ದಾನೆ. ಆಗ ಸಾವು ಸಂಭವಿಸಿದೆ ಎಂದು ಹೇಳಲಾಗಿದೆ. ಈ  ಘಟನೆಗೆ  ಸಂಭಧಿಸಿದಂತೆ  ಸುಬ್ರಹ್ಮಣ್ಯ ಪೊಲೀಸರು ಶಿವರಾಂ ತಂದೆಯನ್ನು ಬಂಧಿಸಿದ್ದಾರೆ. ಶಿವರಾಮ್ ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ  ಎಂಬ ಮಾಹಿತಿ ಲಭ್ಯವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಪ್ರಿಯಕರನನ್ನು ನಂಬಿ ಮದುವೆಯಾಗಲು ಕೆನಡಾದಿಂದ ಭಾರತಕ್ಕೆ ಬಂದಿದ್ದ ಯುವತಿ ಹತ್ಯೆಯಾಗಿದ್ದಾಳೆ. ಕಳೆದ ವರ್ಷ ಜೂನ್‌ನಲ್ಲಿ 23 ವರ್ಷದ ನೀಲಂ ಎಂಬಾಕೆಯನ್ನು ಆಕೆಯ ಗೆಳೆಯ ಸುನಿಲ್ ಗುಂಡಿಟ್ಟು ಕೊಂದಿದ್ದು, ನಂತರ ಆಕೆಯನ್ನು ತನ್ನ ಹೊಲದಲ್ಲಿ ಹೂತು ಹಾಕಿದ್ದ. ಆಕೆಯ ಅಸ್ಥಿಪಂಜರದ ಅವಶೇಷಗಳು ಮಂಗಳವಾರ ಭಿವಾನಿಯಲ್ಲಿ ಪೊಲೀಸರಿಗೆ ಪತ್ತೆಯಾಗಿವೆ. ನೀಲಂ ಅವರನ್ನು ಅಪಹರಿಸಿ ಕೊಂದಿರುವುದಾಗಿ ಸುನೀಲ್ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ತನ್ನ ಅಪರಾಧವನ್ನು ಮರೆಮಾಚಲು ಆಕೆಯ ತಲೆಗೆ ಎರಡು ಬಾರಿ ಗುಂಡು ಹಾರಿಸಿ ನಂತರ ಶವವನ್ನು ತನ್ನ ಹೊಲದಲ್ಲಿ ಹೂತು ಹಾಕಿದ್ದಾನೆ ಎಂದು ಪೊಲೀಸ್ ಅಧಿಕಾರಿ ರವೀಂದ್ರ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಬೆಳಗಾವಿ: ಮಹಾರಾಷ್ಟ್ರ ಗಡಿಯ ಕೊಗನೋಳಿ ಚೆಕ್ ಪೋಸ್ಟ್ ನಲ್ಲಿ ಬಸ್ ಪ್ರಯಾಣಿಕನೋರ್ವನಿಂದ ಒಂದೂವರೆ ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ. ಕರ್ತವ್ಯ ನಿರತ ಪೊಲೀಸರು ಮತ್ತು ಚುನಾವಣೆ ಸಿಬ್ಬಂದಿ ಖಾಸಗಿ ಬಸ್ ಒಂದರಲ್ಲಿ ಮುಂಬೈನಿಂದ ಬರುತ್ತಿದ್ದ ಪ್ರಯಾಣಿಕನಲ್ಲಿದ್ದ ಹಣವನ್ನು ವಶಕ್ಕೆ ಪಡೆದರು. ಈ ಹಣಕ್ಕೆ ಆತನ ಬಳಿ ಯಾವುದೇ ದಾಖಲೆಗಳಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲಾಧಿಕಾರಿ ನಿತೇಶ ಪಾಟೀಲ ಹಾಗೂ ಎಸ್ಪಿ ಸಂಜೀವ ಪಾಟೀಲ ಅವರು ಕರ್ತವ್ಯ ನಿರತ ಸಿಬ್ಬಂದಿ ಕಾರ್ಯವನ್ನು ಶ್ಲಾಘಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಈ ಹಿಂದೆ 124 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದ ಕಾಂಗ್ರೆಸ್, ಈಗ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳ  ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ನಿಪ್ಪಾಣಿ ಕ್ಷೇತ್ರದಲ್ಲಿ ಕಾಕಾ ಸಾಹೇಬ್ ಪಾಟೀಲ್, ಗೋಕಾಕ್ ಕ್ಷೇತ್ರ-ಮಹಾಂತೇಶ್​ ಕಡಾಡಿ, ಬೀಳಗಿ ಕ್ಷೇತ್ರ – ಜೆ.ಟಿ.ಪಾಟೀಲ್, ಧಾರವಾಡ – ವಿನಯ್ ಕುಲಕರ್ಣಿ, ಗುರುಮಿಠಕಲ್ ಕ್ಷೇತ್ರ – ಬಾಬುರಾವ್ ಚಿಂಚನಸೂರ್, ಕಿತ್ತೂರು ಕ್ಷೇತ್ರ-ಬಾಬಾಸಾಹೇಬ್​ ಬಿ.ಪಾಟೀಲ್​ ಅವರನ್ನು ಕಾಂಗ್ರೆಸ್ ಅಭ್ಯರ್ಥಿಗಳನ್ನಾಗಿ ಘೋಷಣೆ ಮಾಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಇದ್ರೀಷ್ ಪಾಷಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ ಹಾಗೂ ಅವರ ನಾಲ್ವರು ಸಹಚರರನ್ನು ರಾಜಸ್ಥಾನದಲ್ಲಿ ಪೊಲೀಸರು ಬಂಧಿಸಿದ್ದಾರೆ. ಕನಕಪುರದ ಸಾತನೂರು ಬಳಿ ಪುನೀತ್‌ ಕೆರೆಹಳ್ಳಿ ಹಾಗೂ ತಂಡ ಗೋವುಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್‌ ತಡೆದು ಜಾನುವಾರು ರಕ್ಷಣೆ ಮಾಡಿದ್ದರು. ಆದರೆ, ಮರುದಿನ ಅಂದರೆ ಏಪ್ರಿಲ್‌ 1 ರಂದು ಕ್ಯಾಂಟರ್‌ನಲ್ಲಿದ್ದ ಮಂಡ್ಯದ ಗುತ್ತಲು ನಿವಾಸಿ ಇದ್ರೀಷ್‌ ಪಾಷಾ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಇದ್ರೀಷ್‌ ಪಾಷಾ ಅವರ ಮೃತದೇಹ ಸಾತನೂರು ಗ್ರಾಮದ ಬಳಿ ಶವವಾಗಿ ಪತ್ತೆಯಾಗಿದ್ದರು. ಈ ಕುರಿತು ಪ್ರಕರಣ ದಾಖಲಾಗಿತ್ತು.  ಕಳೆದ ಒಂದು ವಾರದಿಂದ ತಲೆಮರೆಸಿಕೊಂಡಿದ್ದ ಪುನೀತ್ ‌ಕೆರೆಹಳ್ಳಿ ಸೇರಿದಂತೆ ಒಟ್ಟು ಐವರನ್ನು ರಾಜಸ್ಥಾನದಲ್ಲಿ ಬಂಧಿಸುವಲ್ಲಿ ಸಾತನೂರು ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಸದ್ಯ ಆರೋಪಿಗಳನ್ನು ಅಲ್ಲಿಂದ ಕರೆತರಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಮಧುಗಿರಿ: ನಗರದ ಮೊದಲನೇ ವಾರ್ಡ್ ಆಶೂಖಾನ ಸಮೀಪದಲ್ಲಿರುವ ನೀರಿನ ಟ್ಯಾಂಕ್ ನ ನಲ್ಲಿಗಳು ಒಡೆದು ಹೋಗಿದ್ದು, ಕಳೆದ ಎರಡು ತಿಂಗಳಿಂದ ನೀರು ಪೋಲಾಗುತ್ತಿದೆ, ನಿತ್ಯ ವಾರ್ಡಿನ ಹಲವಾರು ಮನೆಗಳಿಗೆ ನೀರು ಪೂರೈಸುವ ಈ ನೀರಿನ ಟ್ಯಾಂಕ್ ದುರಸ್ತಿ ಭಾಗ್ಯ ಕಾಣದೆ ನೀರು ಅವ್ಯಾಹತವಾಗಿ ಪೋಲಾಗುತ್ತಿದ್ದು, ಪುರಸಭೆ ಅಧಿಕಾರಿಗಳು ಹಾಗೂ ವಾರ್ಡ ಸದಸ್ಯರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ. ದಿನೇ ದಿನೇ ಬಿಸಿಲಿನ ತಾಪ ಜಾಸ್ತಿಯಾಗುತ್ತಿದೆ. ವರ್ಷದಿಂದ ವರ್ಷಕ್ಕೆ ಉಷ್ಣಾಂಶದ ಪ್ರಮಾಣ ಏರುತ್ತಿದೆ. ಚಳಿಗಾಲ ಮುಗಿದು ಬೇಸಿಗೆ ಪ್ರಾರಂಭದ ದಿನಗಳಲ್ಲಿಯೇ ನೀರಿನ ಹಾಹಾಕಾರ ಎಲ್ಲೆಡೆ ಶುರುವಾಗಿದೆ. ಇಂತಹ ಸನ್ನಿವೇಶದಲ್ಲಿ ನೀರಿನ ಟ್ಯಾಂಕ್ ನಲ್ಲಿಗಳಿಂದ ದಿನವಿಡೀ ನಿರಂತರವಾಗಿ ನೀರು ಚರಂಡಿಗೆ ಸೇರುತ್ತಿದೆ,ಈ ಟ್ಯಾಂಕ್ ತುಂಬಾ ತೀರಾ ಹಳೆದಾಗಿದ್ದು, ಮೊದಲೇ ಪುರಸಭೆಯಿಂದ ಸರಿಯಾಗಿ ನಿರ್ವಹಣೆ ಸಹ ಇಲ್ಲ, ಟ್ಯಾಂಕಿನ ಮೇಲ್ಚಾವಣಿ ಸಹ ಕುಸಿದಿದ್ದು ಗಾಳಿಯಲ್ಲಿ ಬರುವ ಧೂಳಿನಿಂದ ಟ್ಯಾಂಕ್ ನೀರು ಕಲುಶ್ಚಿತಗೊಳ್ಳುತ್ತದೆ. ಇದರ ಬಗ್ಗೆ ಪುರಸಭೆ ಆರೋಗ್ಯ ಅಧಿಕಾರಿಗಳು ಗಮನಹರಿಸಿ ಎಚ್ಚೆತ್ತುಕೊಳ್ಳಬೇಕು. ಆದರೆ, ಈ…

Read More

ಮಧುಗಿರಿ: ರಾಜ್ಯ ವಿಧಾನಸಭಾ ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ದಿನಾಂಕ ಬುಧವಾರ ಸಂಜೆ 7 ಗಂಟೆ ಸುಮಾರಿಗೆ ಮಧುಗಿರಿ ತಾಲ್ಲೂಕಿನ ಐ ಡಿ ಹಳ್ಳಿ ಹೋಬಳಿಯ ಹೋಸಕೋಟೆ ಗ್ರಾಮದ ತಿಮ್ಮಯ್ಯ ಬಿನ್ ಭೀಮಯ್ಯ ರವರ ಪೆಟ್ಟಿಗೆ ಅಂಗಡಿ ಮೇಲೆ ದಾಳಿ ಮಾಡಿ 16,944 ರೂ ಮೌಲ್ಯದ ಒಟ್ಟು 34.560ಲೀ ಮದ್ಯ, ಜಪ್ತಿ ಮಾಡಲಾಗಿದೆ. ತುಮಕೂರು ಜಿಲ್ಲೆ  ಅಬಕಾರಿ ಉಪ ಆಯುಕ್ತ ರವರ ನಿರ್ದೇಶನದಂತೆ ಹಾಗೂ ಅಬಕಾರಿ ಉಪ ಅಧೀಕ್ಷಕರು ಮಧುಗಿರಿ ಉಪ ವಿಭಾಗರವರ ಮಾಗ೯ದಶ೯ನದಲ್ಲಿ ದಾಳಿ ನಡೆಸಿ ಮದ್ಯ ವಶಪಡಿಸಿಕೊಳ್ಳಲಾಗಿದ್ದು, ಆರೋಪಿತನ ವಿರುದ್ಧ CrPC -41(A)(1) ರಡಿಯಲ್ಲಿ ನೋಟಿಸ್ ಜಾರಿಗೊಳಿಸಿ ಪ್ರಕರಣವನ್ನು ದಾಖಲಿಸಲಾಗಿದೆ. ಅಬಕಾರಿ ಉಪ ನಿರೀಕ್ಷಕರಾದ ರಂಗದಾಮಯ್ಯ ಅವರು ಪ್ರಕರಣ ದಾಖಲಿಸಿದ್ದು, ಸಿಬ್ಬಂದಿಗಳಾದ ರಮೇಶ್, ಖಾನ್, ಶರಣಪ್ಪ , ನಿಂಗಣ್ಣ ಇವರುಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ವರದಿ: ಅಬಿದ್, ಮಧುಗಿರಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…

Read More

ತುಮಕೂರು : ಕ್ಯಾಂಟರ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ಗಂಭೀರ ಗಾಯಗೊಂಡ ಘಟನೆ ತುಮಕೂರು ತಾಲ್ಲೂಕಿನ ಓಬಳಾಪುರದಲ್ಲಿ ನಡೆದಿದೆ. ರವಿಕುಮಾರ್ ಗಂಭೀರವಾಗಿ ಗಾಯಗೊಂಡವರು. ಗಾಯಗೊಂಡ ರವಿಕುಮಾರ್ ಅವರನ್ನ ತುಮಕೂರಿನ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ. ಇನ್ನು ಗಾಯಗೊಂಡ ರವಿಕುಮಾರ್ ಮಧುಗಿರಿ ತಾಲ್ಲೂಕಿನ ಬಡಚೌಡನಹಳ್ಳಿ ಗ್ರಾಮದ ನಿವಾಸಿ. ಕ್ಯಾಂಟರ್   ಸ್ಟೇರಿಂಗ್ ಲಾಕ್ ಆದ ಪರಿಣಾಮ ಈ ಘಟನೆ ನಡೆದಿದೆ ಅಂತಾ ಸ್ಥಳೀಕರು ತಿಳಿಸಿದ್ದಾರೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More