Author: admin

ಕೊರಟಗೆರೆ: ಸರ್ಕಾರದಲ್ಲಿ ಗುಂಡಿ ಮುಚ್ಚಲು ಹಣವಿಲ್ಲ. ಅಭಿವೃದ್ಧಿ ಕಡೆಗೆ ಗಮನ ಹರಿಸಬೇಕಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೀದಿ ಜಗಳ ಮಾಡುತ್ತಿದ್ದಾರೆ ಎಂದು ಶಾಸಕ ಬಿ.ಸುರೇಶ್‌ಗೌಡ ಆರೋಪಿಸಿದರು. ತಾಲ್ಲೂಕಿನ ಮಾವತ್ತೂರು ಗ್ರಾಮದಲ್ಲಿ ಸೋಮವಾರ ಸಂಜೆ ನಡೆದ ಗಂಗಾರತಿ ಕಾರ್ಯಕ್ರಮದಲ್ಲಿ  ಅವರು ಮಾತನಾಡಿದರು. ಸರ್ಕಾರದ ಪರಿಸ್ಥಿತಿ ನವೆಂಬರ್ ಕ್ರಾಂತಿ, ಡಿಸೆಂಬರ್ ಶಾಂತಿ, ಜನವರಿ ವಾಂತಿ ಎಂಬಂತಾಗಿದೆ. ಸರ್ಕಾರ ಯಾವಾಗ ಮಖಾಡೆ ಮಲಗುತ್ತದೆ ಎಂಬುದು ಗೊತ್ತಿಲ್ಲ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್‌ ಮೈತ್ರಿಯಿಂದ 150 ಸ್ಥಾನ ಗೆಲ್ಲುತ್ತೇವೆ. ಎಚ್.ಡಿ.ಕುಮಾರಸ್ವಾಮಿ, ಬಿ.ವೈ.ವಿಜಯೇಂದ್ರ ಅವರಲ್ಲಿ ಯಾರಾದರೂ ಮುಖ್ಯಮಂತ್ರಿಯಾಗಲಿ. ಎರಡು ಪಕ್ಷದವರು ಒಟ್ಟಿಗೆ ಹೋಗುತ್ತೇವೆ. ನಾವೇ ಅಧಿಕಾರಕ್ಕೆ ಬರುತ್ತೇವೆ, ರೈತರ ಪರವಾಗಿ ಕೆಲಸ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿದರು. ಜನರ ತೆರಿಗೆ ಹಣವನ್ನು ಗ್ಯಾರಂಟಿ ಹೆಸರಿನಲ್ಲಿ ಸಿಕ್ಕ ಸಿಕ್ಕವರಿಗೆ ನೀಡುತ್ತಿದ್ದಾರೆ. ಕಾಂಗ್ರೆಸ್‌ನವರೇ ಸರ್ಕಾರದ ಯೋಜನೆಗಳನ್ನು ಟೀಕಿಸುತ್ತಿದ್ದಾರೆ. 13 ಸಾವಿರ ಕೆಎಸ್‌ ಆರ್‌ ಟಿಸಿ ಬಸ್‌ ಕೆಟ್ಟು ನಿಂತಿದ್ದು, ಶಾಲೆಗೆ ಹೋಗುವ ಮಕ್ಕಳಿಗೂ ಬಸ್‌ ಸೌಲಭ್ಯ ಇಲ್ಲವಾಗಿದೆ ಎಂದರು.…

Read More

ಬೀದರ್: ಬೀದರ್ ಜಿಲ್ಲೆಯ ಔರಾದ ತಾಲೂಕಿನ ಬೆಳಕುಣಿ ಚೌದ್ರಿ ಗ್ರಾಮದ ವಾರ್ಡ್ ನಂಬರ್ 2ರಲ್ಲಿ  ರಸ್ತೆ ಇಲ್ಲದೇ ಸಾರ್ವಜನಿಕರು ಪಡುತ್ತಿರುವ ಸಂಕಷ್ಟದ  ಬಗ್ಗೆ ಇತ್ತೀಚೆಗೆ ನಮ್ಮ ತುಮಕೂರು ಮಾಧ್ಯಮ ವರದಿ ಮಾಡಿತ್ತು. ಈ ವರದಿಯ ಬೆನ್ನಲ್ಲೇ ಇದೀಗ ಗ್ರಾಮ ಪಂಚಾಯತ್ ಹೊಸ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಟ್ಟಿದೆ. “ಗದ್ದೆಯಂತಾದ ರಸ್ತೆ: ಬೆಳಕುಣಿ ಚೌದ್ರಿ ಗ್ರಾಮದ ವಾರ್ಡ್ ನಂಬರ್ 2ರಲ್ಲಿ ಅವ್ಯವಸ್ಥೆ, ಗಾಢ ನಿದ್ರೆಯಲ್ಲಿರುವ ಅಧಿಕಾರಿಗಳು” ಎಂಬ ಶೀರ್ಷಿಕೆಯಡಿಯಲ್ಲಿ ಸೆ.14ರಂದು ನಮ್ಮ ತುಮಕೂರು ಸವಿವರವಾದ ವರದಿಯನ್ನು ಪ್ರಕಟ ಮಾಡಿತ್ತು. ಈ ವರದಿ ಪ್ರಕಟವಾದ ಬೆನ್ನಲ್ಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಶೀಘ್ರವೇ ಸಿಸಿ ರಸ್ತೆ ನಿರ್ಮಾಣ ಮಾಡಿಕೊಡುವುದಾಗಿ ಭರವಸೆ ನೀಡಿದ್ದರು. ಇದೀಗ ಕೊಟ್ಟ ಮಾತಿನಂತೆ ಅಧಿಕಾರಿಗಳು ನಡೆದುಕೊಂಡಿದ್ದು, ಸಿಸಿ ರಸ್ತೆ ನಿರ್ಮಾಣ ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಸಂಬಂಧಿಸಿದ ವರದಿ ಓದಿ: ಗದ್ದೆಯಂತಾದ ರಸ್ತೆ: ಬೆಳಕುಣಿ ಚೌದ್ರಿ ಗ್ರಾಮದ ವಾರ್ಡ್ ನಂಬರ್ 2 ರಲ್ಲಿ ಅವ್ಯವಸ್ಥೆ:…

Read More

ಸರಗೂರು:  ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ 78ನೇ ವರ್ಷದ ಜನ್ಮದಿನವನ್ನು  ಮಂಗಳವಾರದಂದು ಹುಲ್ಲಳ್ಳಿ ಯೋಜನಾ ಕಚೇರಿಯ ಮುಳ್ಳೂರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಕಚೇರಿಯಲ್ಲಿ ಆಚರಿಸಲಾಯಿತು. ನಂತರ ಮಾತನಾಡಿದ ಮುಳ್ಳೂರು ವಲಯದ ಮೇಲ್ವಿಚಾರಕ ನರಸಿಂಹಮೂರ್ತಿ,  ಧರ್ಮಸ್ಥಳದ ಧರ್ಮಾಧಿಕಾರಿಗಳು ನಾಡಿನ ಜನತೆಯ ನೆಮ್ಮದಿಗಾಗಿ ಹಗಲಿರಲು ಶ್ರಮಿಸುತ್ತಿದ್ದು, ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳು ಶಿಕ್ಷಣ ಕ್ಷೇತ್ರದಲ್ಲಿ ಅಭೂತಪೂರ್ವ ಸಾಧನೆ ಅತ್ಯಂತ ಕಷ್ಟಕರವಾಗಿ ಜೀವಿಸಿರುವ ಜನರಿಗೆ ಆಶ್ರಯ ನೀಡುವುದು ಪ್ರಾಣಿ ಪಕ್ಷಿ ಪಶು ಸಂಕುಲಕ್ಕೆ ವಿಶೇಷವಾದ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ ಕೆರೆ ಹೂಳೆತ್ತುವ ಕೆಲಸ ಪರಿಸರ ಸಂರಕ್ಷಣಾಗಾಗಿ ಶಾಲಾ–ಕಾಲೇಜುಗಳಲ್ಲಿ ಗಿಡ ನೀಡುವ ಕಾರ್ಯಕ್ರಮಗಳು ಉಚಿತ ಆರೋಗ್ಯ ತಪಾಸಣಾ ಶಿಬಿರಗಳು ಮನೆ ಇಲ್ಲದೆ ಬಳಲುತ್ತಿರುವ ಕುಟುಂಬಗಳಿಗೆ ವಾತ್ಸಲ್ಯ ಮನೆ ನಿರ್ಮಾಣ ಮಾಡಿಕೊಟ್ಟಿದ್ದಾರೆ ಎಂದರು. ಹತ್ತು ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದರ ಜೊತೆಯಲ್ಲಿ ಸ್ವಸಹಾಯ ಸಂಘಗಳನ್ನು ರಚನೆ ಮಾಡಿ ಬ್ಯಾಂಕುಗಳಿಂದ ವಿಶೇಷವಾಗಿ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಯಾವುದೇ ದಾಖಲಾತಿ ಇಲ್ಲದೆ  ಸುಲಭ ಸಾಲ…

Read More

ಸರಗೂರು:  ವಿಶ್ವದಲ್ಲೇ ಅತ್ಯಂತ ಶ್ರೇಷ್ಠವಾದ ಭಾರತದ ಸಂವಿಧಾನವು ಸರ್ವರಿಗೂ ಸಮಬಾಳು–ಸಮಪಾಲು ನೀಡಿದೆ ಎಂದು ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ವೈ.ಡಿ.ರಾಜಣ್ಣ ಎಂದು ತಿಳಿಸಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ತಾಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯಿತಿ ಪ.ಪಂ. ಹಾಗೂ ಸಮಾಜ ಕಲ್ಯಾಣ ಇಲಾಖೆರವರ ಸಂಯುಕ್ತ ಆಶ್ರಯದಲ್ಲಿ ಬುಧವಾರದಂದು ನಡೆದ ಸಂವಿಧಾನ ಸಮರ್ಪಣಾ ದಿನಾಚರಣೆ ಆಯೋಜಿಸಿದ್ದು, ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿ ಹಾಗೂ ಅಂಬೇಡ್ಕರ್ ಅವರ ಪೋಟೋ ಮತ್ತು ಸಂವಿಧಾನ ಪೀಠಿಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ದೇಶದ ಏಕತೆ ಮತ್ತು ಸಮಗ್ರತೆಗಾಗಿ ಎಲ್ಲರಲ್ಲೂ ಸಹೋದರತೆ ಮೂಡಿಸುವುದಕ್ಕೆ ರಾಷ್ಟ್ರಕ್ಕೆ ಸಂವಿಧಾನ ಅರ್ಪಣೆಗೊಂಡಿರುತ್ತದೆ. ಇದರಿಂದ ದೇಶದ ಎಲ್ಲ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯವನ್ನು, ವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ ಮತ್ತು ಉಪಾಸನೆಯ ಸ್ವಾತಂತ್ರ್ಯವನ್ನು ಸ್ಥಾನ–ಮಾನ ಮತ್ತು ಅವಕಾಶಗಳ ಸಮಾನತೆಯ ಅವಕಾಶ ಲಭಿಸಿದೆ ಎಂದರು. ಭಾರತೀಯರಾದ ಎಲ್ಲರೂ ವಿಶೇಷವಾಗಿ ವಿದ್ಯಾರ್ಥಿ, ಯುವ ಸಮುದಾಯ ಭಾರತದ ಮೂಲ ಪೀಠಿಕೆಯನ್ನು ಓದಿ ಅರ್ಥಮಾಡಿಕೊಂಡು ದೇಶದಲ್ಲಿ ಎಲ್ಲರೂ ಗೌರವ, ಘನತೆ,…

Read More

ತುಮಕೂರು:   ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ ಕರ್ನಾಟಕ ರಾಜ್ಯ ಸರ್ಕಾರವು 40,000ಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ ಎಂದು ಎಐಡಿಎಸ್ ಓ ತುಮಕೂರು ಜಿಲ್ಲಾ ಸಮಿತಿ ಆರೋಪಿಸಿದೆ. ಈ ಸಂಬಂಧ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಮುಖಂಡರು, ಗ್ರಾಮ ಪಂಚಾಯಿತಿಗೆ ಒಂದರಂತೆ ರಾಜ್ಯದಲ್ಲಿ 6,000 ಕೆಪಿಎಸ್ ಮ್ಯಾಗ್ನೆಟ್ ಶಾಲೆಯನ್ನು ಸ್ಥಾಪಿಸುವ ಗುರಿಯನ್ನು ಸರ್ಕಾರವು ಹೊಂದಿದೆ. ಮೊದಲ ಹಂತದಲ್ಲಿ ರಾಜ್ಯದ 800 ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳೆಂದು ಗುರುತಿಸಲಾಗಿದೆ.( ಗಣಿಬಾಧಿತ ಜಿಲ್ಲೆಗಳಲ್ಲಿ 100, ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ 200 ಹಾಗೂ ಇತರೆ ಭಾಗದಲ್ಲಿ 500) ದಿ. 15/10/2025ರಂದು ಹೊರಡಿಸಿರುವ ಸುತ್ತೋಲೆಯಲ್ಲಿ ಈ ಕುರಿತು ಆದೇಶಿಸಲಾಗಿದೆ ಎಂದು ಅವರು ಹೇಳಿದರು. ಈ ಯೋಜನೆಯನ್ನು Pilot Project ಅಡಿ ಜಾರಿಗೊಳಿಸಲು ರಾಮನಗರದ ಚನ್ನಪಟ್ಟಣ ತಾಲೂಕಿನ ಹೊಂಗನೂರಿನ ಶಾಲೆಯನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಯೆಂದು ಗುರುತಿಸಲಾಗಿದೆ. ಹೊಂಗನೂರಿನಿಂದ 6 ಕಿಮೀ ವ್ಯಾಪ್ತಿಯೊಳಗಿರುವ, 77 ವಿದ್ಯಾರ್ಥಿಗಳಿರುವ ಹೊಡಿಕೆ ಹೊಸಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆ, 82 ವಿದ್ಯಾರ್ಥಿಗಳಿರುವ ಕನ್ನಿ…

Read More

ಸರಗೂರು:  ಈ ಸಂವಿಧಾನವನ್ನು ಡಾ.ಬಿ.ಆರ್.ಅಂಬೇಡ್ಕರ್ ಅವರು ಸುದೀರ್ಘವಾಗಿ ಎಲ್ಲ ದೇಶದ ಸಂವಿಧಾನ ಅಧ್ಯಯನ ಮಾಡಿ ಭಾರತ ದೇಶಕ್ಕೆ ಬೇಕಾದಂತಹ ಎಲ್ಲಾ ಧರ್ಮ ಜಾತಿ ಮತಕ್ಕೆ ಬೇಕಾಗುವಂತ ಸಂವಿಧಾನವನ್ನು ರಚನೆ ಮಾಡದಿದ್ದರೆ,  ನಾವು ಸ್ವತಂತ್ರರಾಗಿ ಸಮಾನರಾಗಿ ಅರ್ಥಪೂರ್ಣವಾದ ಬದುಕನ್ನು ನಡೆಸಲು ಸಾಧ್ಯವಾಗುತ್ತಿರಲಿಲ್ಲ ಎಂದು ಅಂಬೇಡ್ಕರ್ ಭವನ ಟ್ರಸ್ಟ್ ಅಧ್ಯಕ್ಷ ಎಸ್.ಡಿ.ಸಣ್ಣಸ್ವಾಮಿ ಎಂದರು. ಪಟ್ಟಣದ ನಾಲ್ಕನೇ ವಾರ್ಡಿನ ಅಂಬೇಡ್ಕರ್ ಭವನದಲ್ಲಿ ಬುಧವಾರದಂದು ಸಂವಿಧಾನ ಸಮರ್ಪಣಾ ದಿನವನ್ನು ಸಂವಿಧಾನ ಪೀಠಿಕೆ ಹಾಗೂ ಅಂಬೇಡ್ಕರ್ ರವರ ಪೋಟೋ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಭಾರತ ಸಂವಿಧಾನ ನವೆಂಬರ್ 26– 1949 ನೇ ದಿನದಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ಭಾರತ ಸರ್ಕಾರಕ್ಕೆ ಅರ್ಪಣೆ ಮಾಡಿದ ದಿನದ ಅಂಗವಾಗಿ ನಾವು ಸಂವಿಧಾನ ಸಮರ್ಪಣ ದಿನ ಎಂದು ಆಚರಿಸುತ್ತೇವೆ ಎಂದರು. ಈ ಸಂವಿಧಾನವನ್ನು ಯಥಾವತ್ತಾಗಿ ಜಾರಿ ಮಾಡಿದರೆ, ಇಂದು ಭಾರತೀಯರೆಲ್ಲರೂ ಶ್ರೀಮಂತಿಕೆಯಿಂದ ಉತ್ತಮ ಜೀವನವನ್ನು ಮಾಡಬಹುದಿತ್ತು. ಆದರೆ ಅಂಬೇಡ್ಕರ್ ಅವರ ಸಂವಿಧಾನವನ್ನು ಸಂಪೂರ್ಣ ಜಾರಿ ಮಾಡಲು ಅಂದಿನ ಮತ್ತು ಇಂದಿನ ಸರಕಾರಗಳು ವಿಫಲವಾಗಿವೆ. ಹಾಗಾಗಿ…

Read More

ತುಮಕೂರು: ತಾಲ್ಲೂಕಿನ ಬೆಳ್ಳಾವಿಯಲ್ಲಿ ನ.27 ರಂದು ಸಂಜೆ 4 ಗಂಟೆಗೆ ಬಸ್ ನಿಲ್ದಾಣ, ಬೆಳ್ಳಾವಿ ಇಲ್ಲಿ 538ನೇ ದಾಸಶ್ರೇಷ್ಠ ಶ್ರೀ ಕನಕದಾಸರ ಜಯಂತಿ ಮತ್ತು 70ನೇ ಕನ್ನಡ ರಾಜ್ಯೋತ್ಸವ ಹಮ್ಮಿಕೊಳ್ಳಲಾಗಿದೆ. ಕನಕ ಯುವಕ ಸಂಘ ಹಾಗೂ ಹಾಲು ಮತ ಮಹಾಸಭಾ ತುಮಕೂರು ಗ್ರಾಮಾಂತರ ಘಟಕ ಇವರ ವತಿಯಿಂದ ಹಮ್ಮಿಕೊಳ್ಳಲಾಗಿರುವ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಕಾಗಿನೆಲೆ ಮಹಾ ಸಂಸ್ಥಾನ ಮಠದ ಶ್ರೀ ನಿರಂಜನಾನಂದಪುರಿ ಸ್ವಾಮಿಗಳು, ಹೊಸದುರ್ಗ ಶಾಖಾ ಮಠದ ಶ್ರೀ ಈಶ್ವರಾನಂದಪುರಿ ಸ್ವಾಮಿಗಳು, ಶ್ರೀ ರೇವಣಸಿದ್ದೇಶ್ವರ ಮಠದ ಶ್ರೀ ಬಿಂದುಶೇಖರ ಒಡೆಯರ್, ಕಾರದೇಶ್ವರ ಮಠದ ಶ್ರೀ ಕಾರದವೀರಬಸವ ಸ್ವಾಮಿಗಳು ವಹಿಸುವರು. ಅಧ್ಯಕ್ಷತೆಯನ್ನು ಮಾಜಿ ವಿ.ಪ.ಸದಸ್ಯರಾದ ಡಾ.ಎಂ.ಆರ್.ಹುಲಿನಾಯ್ಕರ್ ವಹಿಸಲಿದ್ದು, ಉದ್ಘಾಟನೆಯನ್ನು ತುಮಕೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಎಸ್‌.ಟಿ. ಶ್ರೀನಿವಾಸ್ ನೆರವೇರಿಸುವರು. ಬಿಎಂಟಿಸಿ ವಕ್ತಾರ ನಿಖಿತಾಜ್ ಮಾರ್ಯ ಭಾಷಣಕಾರರಾಗಿ ಆಗಮಿಸುವರು. ಮುಖ್ಯ ಅತಿಥಿಗಳಾಗಿ ಡಾ.ಎಸ್.ನಾಗಣ್ಣ, ಲಕ್ಷ್ಮೀನರಸಿಂಹರಾಜು, ಟಿ.ಆರ್. ಸುರೇಶ್‌, ಮೈಲಪ್ಪ, ಸತೀಶ್, ರಘುರಾಂ, ಪುಟ್ಟರಾಜು, ಅನಿಲ್‌ಕುಮಾರ್, ಬಿ.ಸಿ.ಉಮೇಶ್, ಇಂದ್ರಣ್ಣ, ಬಿ.ಎಸ್.ಮಂಜುನಾಥ್, ಗರುಡಪ್ಪ, ಮೂರ್ತಪ್ಪ…

Read More

ತಿಪಟೂರು: ನಗರದಲ್ಲಿ ನಡೆದ 96ನೇ ವರ್ಷದ ಸತ್ಯ ಗಣಪತಿ ಮಹೋತ್ಸವ ಹಾಗೂ ಕಲ್ಪೋತ್ಸವ ಕಾರ್ಯಕ್ರವಕ್ಕೆ ಲಕ್ಷಾಂತರ ಭಕ್ತರು ಸಾಕ್ಷಿಯಾಗಿದ್ದರು. ಕಳೆದ ಐದು ದಿನಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಿಂದ ಜನ ಆಗಮಿಸಿದ್ದರು. ಮಹೋತ್ಸವದ ಮೆರವಣಿಗೆ, ಧಾರ್ಮಿಕ ಕಾರ್ಯಕ್ರಮಗಳು, ಮನರಂಜನಾ ಹಾಗೂ ಅನ್ನಸಂತರ್ಪಣೆ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳಲ್ಲಿ ಭಕ್ತರು ಭಾರಿ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಮಹೋತ್ಸವದ ಸಂದರ್ಭದಲ್ಲಿ ನಗರದಾದ್ಯಂತ ಅನ್ನಪ್ರಸಾದ ವಿತರಣೆ, ಆಟಿಕೆ ಮತ್ತು ಭಕ್ತಸಾಮಗ್ರಿಗಳ ಖರೀದಿ ಜೋರಾಗಿದ್ದು, ಅದರ ಪರಿಣಾಮವಾಗಿ ರಸ್ತೆಗಳಲ್ಲಿ ಬಿಸಾಡಿದ ಪ್ಲಾಸ್ಟಿಕ್ ತಟ್ಟೆಗಳು, ಆಟಿಕೆಗಳ ಪ್ಲಾಸ್ಟಿಕ್ ಕವರ್‌ಗಳು, ಮಸುಕಿದ ಹೂವಿನ ಹಾರಗಳು, ಹರಿದುಬಿದ್ದ ಪ್ಲೆಕ್ಸ್ ಬೋರ್ಡ್‌ಗಳು ಮತ್ತು ಇತರೆ ಕಸದ ರಾಶಿ ಕಂಡುಬಂದಿದ್ದವು. ನಗರಸಭೆಯ ಪೌರಕಾರ್ಮಿಕರು ನಿನ್ನೆ ಬೆಳಗಿನ ಜಾವ ನಾಲ್ಕು ಗಂಟೆಯಿಂದಲೇ ಕಾರ್ಯಪ್ರವೃತ್ತರಾಗಿ ಸಂಜೆವರೆಗೂ ನಿರಂತರವಾಗಿ ಶ್ರಮಿಸಿ, ಸಂಪೂರ್ಣವಾಗಿ ನಗರವನ್ನು ಸ್ವಚ್ಛಗೊಳಿಸಿದರು. ಪ್ರತಿಯೊಂದು ಉತ್ಸವಗಳು ಜಾತ್ರೆಗಳು ನಡೆದ ನಂತರ ನಗರವನ್ನು ಸ್ವಚ್ಛವಾಗಿಡಲು, ನಗರದ ನೈರ್ಮಲ್ಯ ಕಾಪಾಡಲು ರಸ್ತೆಗಿಳಿಯುವ ಪೌರಕಾರ್ಮಿಕರು ಸ್ವಚ್ಛತಾ ಸೈನಿಕರಾಗಿ ಕೆಲಸ ಮಾಡುತ್ತಾರೆ. ಅವರಿಗೆ ಸಮಾಜದಲ್ಲಿ ಗೌರವ ನೀಡಬೇಕಿರುವುದು…

Read More

ಸರಗೂರು:  ಪಟ್ಟಣದ ಒಂದನೇ ಮುಖ್ಯ ರಸ್ತೆಯ ಎಸ್‌ ಬಿಐ ಬ್ಯಾಂಕ್  ಪಕ್ಕದಲ್ಲಿರುವ ಅಂಚೆ ಕಚೇರಿ ಮುಂಭಾಗದಲ್ಲಿ ಖಾತೆದಾರರು ಹಾಗೂ ಪ್ರಗತಿಪರ ಸಂಘಟನೆಗಳು ಅಂಚೆ ಇಲಾಖೆ ಅಧಿಕಾರಿಗಳು ಹಾಗೂ ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಿದರು. ಆರ್ಯ ಈಡಿಗ ಸಮಾಜದ ತಾಲ್ಲೂಕು ಅಧ್ಯಕ್ಷ ಎಸ್.ಎನ್.ನಾಗರಾಜು ಮಾತನಾಡಿ, ಖಾತೆದಾರರ ಹಣವನ್ನು ಲೂಟಿ ಮಾಡಿರುವ ವ್ಯಕ್ತಿ ಯಾವುದೇ ಕ್ರಮ ಕೈಗೊಳ್ಳದೇ ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ. ಇಲಾಖೆ ತನಿಖಾಧಿಕಾರಿಗಳು, ಆರು ತಿಂಗಳು ಕಳೆದರೂ ಇವರ ಮೇಲೆ ದೂರು ದಾಖಲಿಸಿಲ್ಲ, ಇವರು ಅಂಚೆ ಇಲಾಖೆ ಅಧಿಕಾರಿಗಳು ತಾರತಮ್ಯ ಮಾಡುತ್ತಿದ್ದಾರೆ ದೂರಿದರು. ಖಾತೆದಾರಿಗೆ ಹಣವನ್ನು ವರ್ಗಾವಣೆ ಮಾಡಿಲ್ಲ ಎಂದಾದರೆ ಪಟ್ಟಣವನ್ನು ಬಂದ್ ಮಾಡಿಸಿ ನಂತರ ಅಂಚೆ ಕಚೇರಿಗೆ ಬೀಗ ಜಡಿದು ಮುತ್ತಿಗೆ ಹಾಕುವ ಮೂಲಕ ನಿರಂತರವಾಗಿ ಪ್ರತಿಭಟನೆ ನಡೆಸಲಾಗುವುದು.  ಖಾತೆದಾರರು ಎಲ್ಲಾ ವಯಸ್ಸಾದವರಿಗೆ ಏನಾದರೂ ಸಮಸ್ಯೆಯಾದರೆ ಅಂಚೆ ಇಲಾಖೆ ಅಧಿಕಾರಿಗಳೇ ನೇರ ಹೊಣೆ ಎಂದು ಕಿಡಿಕಾರಿದ್ದರು. ವಯಸ್ಸಾರು ತಮ್ಮ ಜೀವನಕ್ಕೆ ಇಟ್ಟುಕೊಂಡಿದ್ದ ಹಣವನ್ನು ಅಂಚೆ ಕಚೇರಿ…

Read More

ಸರಗೂರು: ತಾಲೂಕಿನ ಹಂಚೀಪುರ ಹಾಗೂ ಹೆಗ್ಗನೂರು ಸಮೀಪ ಆಗಾಗ್ಗೆ ಕಾಣಿಸಿಕೊಂಡು, ಜಾನುವಾರುಗಳನ್ನು ಬಲಿಪಡೆಯುವ ಮೂಲಕ ಅಕ್ಕಪಕ್ಕದ ಗ್ರಾಮಸ್ಥರಿಗೆ ತಲೆನೋವಾಗಿ ಪರಿಣಮಿಸಿದ್ದ ಹುಲಿಯನ್ನು ಮಂಗಳವಾರ ಬೆಳಗಿನ ಜಾವ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಮಂಗಳವಾರ ಬೆಳಗ್ಗಿನ ಜಾವ 3 ಗಂಟೆ ಸಮಯದಲ್ಲಿ ಹೆಗ್ಗನೂರು ಸಮೀಪದ ದೇವಲಾಪುರದ ಪುರದಶೆಡ್ಡು ಬಳಿಯ ಅಳಗಂಚಿ ವಲಯದ ಕಾಡಂಚಿನ ಭಾಗದ ಜಮೀನೊಂದರಲ್ಲಿ ಹುಲಿ ಇರುವ ಖಚಿತ ಮಾಹಿತಿ ಮೇರಿಗೆ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆಯ ಸಿಬ್ಬಂದಿ ಸುಮಾರು 6–7 ವರ್ಷದ ಗಂಡು ಹುಲಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ಹಂಚೀಪುರ ಹಾಗೂ ಹೆಗ್ಗನೂರು ವ್ಯಾಪ್ತಿಯ ಗ್ರಾಮಗಳಲ್ಲಿ ಜಾನುವಾರುಗಳನ್ನು ಈ ಹುಲಿ ಬಲಿ ಪಡೆಯುತ್ತಿತ್ತು ಎನ್ನಲಾಗಿದೆ. ಅಲ್ಲದೇ ವಾರದ ಹಿಂದಷ್ಟೇ ಈ ಹುಲಿ ಸಂಚಾರ ಮಾಡಿದ ಫೋಟೋಗಳು ಅರಣ್ಯ ಇಲಾಖೆಯ ಕ್ಯಾಮೆರಾಗೆ ಸೆರೆಯಾಗಿತ್ತು. ಹುಲಿ ಚಿತ್ರ ನೋಡಿ ಆತಂಕಗೊಂಡ ಗ್ರಾಮಸ್ಥರು ಹುಲಿಯನ್ನು ಸೆರೆ ಹಿಡಿಯುವಂತೆ ಆಗ್ರಹಿಸಿದ್ದರು. ಹಂಚೀಪುರದಲ್ಲಿ ರಸ್ತೆ ತಡೆದು ಪ್ರತಿಭಟನೆಯನ್ನೂ ನಡೆಸಿದ್ದರು. ಸ್ಥಳೀಯರ ಒತ್ತಾಯಕ್ಕೆ…

Read More