Subscribe to Updates
Get the latest creative news from FooBar about art, design and business.
- ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
- ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
- ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ
- ಬೌದ್ಧ ಧರ್ಮವು ಸಮಾನತೆ, ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ: ಹರಾ ಮಹೇಶ್
- ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಹೆಣ್ಣು ಮಕ್ಕಳಿಗೆ ಉಚಿತ ಲಸಿಕೆ: ಶಾಸಕ ಡಾ.ಎಚ್.ಡಿ.ರಂಗನಾಥ್
- ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ
- ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ
- ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
Author: admin
ತುರುವೇಕೆರೆ : ತಾಲೂಕಿನ ಮಾಯಸಂದ್ರ ಗ್ರಾಮದಲ್ಲಿ ಮಂಗಳವಾರ ಜೈನ ತೀರ್ಥಂಕರ ವರ್ಧಮಾನ ಮಹಾವೀರರವರ ಜಯಂತಿಯನ್ನು ತುಂಬಾ ಸರಳವಾಗಿ ಆಚರಿಸಲಾಯಿತು. ಜಯಂತಿ ಅಂಗವಾಗಿ ಜೈನ ಸಮಾಜದ ಬಂಧುಗಳು ಗ್ರಾಮದ ಅಂಚೆ ಕಚೇರಿ ಮುಂಭಾಗದಲ್ಲಿ ಸಾರ್ವಜನಿಕರಿಗೆ ಬೆಳಿಗ್ಗೆಯಿಂದಲೂ ಮಧ್ಯಾಹ್ನ 2 ಗಂಟೆಯವರೆಗೆ ಮಜ್ಜಿಗೆ ಮತ್ತು ಹೆಸರು ಬೇಳೆಯನ್ನು ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಜೈನ ಸಮಾಜದ ಮುಖಂಡ ವಿಪುಲ್ ಜೈನ್ ಈ ಬಾರಿ ಮಹಾವೀರದ ಜಯಂತಿಯನ್ನು ಚಾರು ಕೀರ್ತಿ ಭಟ್ಟಾರಕ ಶ್ರೀಗಳ ಅಗಲಿಕೆ ಹಿನ್ನೆಲೆಯಲ್ಲಿ ಜಯಂತಿಯನ್ನು ಬಹಳ ಸರಳವಾಗಿ ಆಚರಿಸುತ್ತಿದ್ದೇವೆ. ಶ್ರೀಗಳು ಜೈನ ಧರ್ಮ ಇಂದಿಗೂ ತನ್ನತನವನ್ನು ಉಳಿಸಿಕೊಂಡು ಬರುವುದಕ್ಕೆ ಪ್ರಮುಖ ಕಾರಣವೆಂದರೆ, ಜೈನ ತತ್ವಶಾಸ್ತ್ರದ ಗ್ರಂಥಗಳು ಹಾಗೂ ಜೈನ ವಾಸ್ತು ಶಿಲ್ಪ ಕಲೆ ಎಂಬುದನ್ನು ಅರಿತು ಜೈನ ಬಸದಿಗಳ ಜೀರ್ಣೋದ್ಧಾರ ಜೈನ ಸಾಹಿತ್ಯದ ಪ್ರಕಟಣೆಗೆ ವಿಶೇಷವಾಗಿ ಹೊತ್ತು ನೀಡುವುದರ ಜೊತೆಗೆ ಅವುಗಳ ಸಂರಕ್ಷಣೆ ಮಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದರು ಎಂದು ಶ್ರೀಗಳ ಬಗ್ಗೆ ಮಾತನಾಡಿ ನಾಡಿನ ಜನತೆಗೆ ವರ್ಧಮಾನ ಮಹಾವೀರರ ಜಯಂತಿಯ ಶುಭಾಶಯಗಳು…
ಯಮಕನಮರಡಿ: ಹತ್ತರಗಿ ಗ್ರಾಮದ ಸರ್ವೇ ನಂ. 445 ರಲ್ಲಿ ಸರ್ಕಾರಿ ಜಾಗವನ್ನು ಅತಿಕ್ರಮಣ ಮಾಡಿದ ಯಮಕನಮರಡಿ ಅರ್ಬನ್ ಬ್ಯಾಂಕ್ ಅಧ್ಯಕ್ಷ, ಬಿಜೆಪಿ ಮುಖಂಡ ರವೀಂದ್ರ ಹಂಜಿ ಅವರ ವಿರುದ್ಧ ಸರ್ಕಾರ ಕ್ರಿಮಿನಲ್ ಕೇಸ್ ದಾಖಲಿಸಿ, ಕಠಿಣ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್ ಮುಖಂಡ ಕಿರಣ ರಜಪೂತ್ ಆಗ್ರಹಿಸಿದರು. ಪಟ್ಟಣದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಮಕನಮರಡಿ ಅರ್ಬನ್ ಬ್ಯಾಂಕ್, ರಾಜೀವ್ ಗಾಂಧಿ ಆಸ್ಪತ್ರೆ, ವಿದ್ಯಾ ವರ್ಧಕ್ ಸಂಸ್ಥೆ ಹೆಸರಲ್ಲಿ ಒಟ್ಟರೆ 8 ಗುಂಟೆ ಜಾಗ ಸರ್ವೇ ನಂ. 445ರಲ್ಲಿ 1996ರಲ್ಲಿ ಖರೀದಿ ಮಾಡಿದ್ದಾರೆ. ಆದರೆ ಈ ಮೂರು ಸಂಸ್ಥೆಗಳ ಹೆಸರಲ್ಲಿ ಹೆಚ್ಚುವರಿಯಾಗಿ 26 ಗುಂಟೆ ಜಾಗ ಅತಿಕ್ರಮಣ ಮಾಡಿದ್ದಾರೆಂದು ದಾಖಲೆ ಸಮೇತ ಆರೋಪ ಮಾಡಿದರು. ಈ ಜಾಗ ಖರೀದಿಸುವಾಗ ಐದು ಜನ ಬಿಡುದಾರರು ಭಾಗವಹಿಸಿದ್ದು, ಅವರ ಗಮನಕ್ಕೆ ಬಾರದೆ ನಕಲಿ ಸಹಿ ಮಾಡಿ 4 ಗುಂಟೆ ಜಾಗವನ್ನು ಖರೀಸಿದ್ದಾರೆ. 2007-2008ರಿಂದ 2023ರವರೆ ಸಾಲಿನಲ್ಲಿ ಇದೇ ಆಸ್ತಿಗೆ ಸಂದಂಧಿಸಿದಂತೆ ಗ್ರಾಪಂಗೆ ತೆರಿಗೆ ಕಟ್ಟಿದ್ದು, 2011-12ರಲ್ಲಿ…
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿ ಅಭಿವೃದ್ಧಿಗೆ ಚಾಲನೆ ನೀಡಲಾಗಿದ್ದು, ಪುಷ್ಕರಣಿ ಮಧ್ಯಭಾಗದಲ್ಲಿರುವ ಕಟ್ಟೆಯ ಕೆಳಭಾಗದಲ್ಲಿ ವರುಣ ದೇವರ ಶಿಲಾಮಯ ಪೀಠವೊಂದು ಪತ್ತೆ ಆಗಿದೆ ಇದು ಜನರಲ್ಲಿ ಸಂಚಲನ ಮೂಡಿಸಿದೆ. ಈಗಾಗಲೇ ಪುಷ್ಕರಣಿಯ ಮಧ್ಯಭಾಗದಲ್ಲಿರುವ ಕಟ್ಟೆಯನ್ನು ತೆಗೆಯಾಲಾಗಿದ್ದು, ನೂತನ ಶಿಲಾಮಯ ಕಟ್ಟೆಗೆ ಚಾಲನೆಯನ್ನೂ ನೀಡಲಾಗಿದೆ. ಇದೀಗ ಶಿಲಾಮಯ ಕಂಬಗಳನ್ನು ಕಟ್ಟೆಯ ನಾಲ್ಕು ಬದಿಗಳಲ್ಲಿ ಇಡಲು ಆಳವಾದ ಗುಂಡಿಗಳನ್ನು ತೆಗೆಯುವ ಸಂದರ್ಭ ದಲ್ಲಿ ದೊಡ್ಡದಾದ ಪಾಣಿಪೀಠ ಹಾಗೂ ಒಂದು ತಾಮ್ರದ ಸಣ್ಣ ಕರಡಿಗೆ ಪತ್ತೆಯಾಗಿದೆ ಎಂದು ಹೇಳಲಾಗಿದೆ ಹಿಂದೆ ದೇವಸ್ಥಾನದ ಜೀರ್ಣೋದ್ಧಾರ ಸಂದರ್ಭದಲ್ಲಿ ಶಿಲಾಶಾಸನ, ಕೆತ್ತನೆ ಶಿಲ್ಪಗಳು, ರಾಜರ ಕಾಲದ ನಾಣ್ಯಗಳು, ಗರ್ಭಗುಡಿಯಲ್ಲಿ ಪ್ರಭಾವಳಿ ಪತ್ತೆಯಾಗಿದ್ದವು. ಇದೀಗ ಪುಷ್ಕರಣಿ ಅಭಿವೃದ್ಧಿ ಸಂದರ್ಭದಲ್ಲೂ ಹೊಸ ವಿಸ್ಮಯಗಳು ಬೆಳಕಿಗೆ ಬಂದಿವೆ. ಈ ಮೂಲಕ ದೇವಸ್ಥಾನದ ಮಹಿಮೆ ಜನರಿಗೆ ಗೋಚರವಾಗುತ್ತಿದೆ. ಕೆರೆಯಲ್ಲಿದ್ದ ವರುಣ ದೇವರ ಮೂರ್ತಿ ಸುತ್ತಲು ಕಟ್ಟಿದ ಮುರ ಕಲ್ಲನ್ನು ತೆರವುಗೊಳಿಸಿದ ಸಂದರ್ಭ ದಲ್ಲಿ ಶಿಲಾಮಯವಾದ ಮತ್ತೊಂದು ಪಾಣಿಪೀಠ ಪತ್ತೆಯಾಗಿದೆ. ಪ್ರತಿ ದಿನವೂ…
ತುಮಕೂರು: ಜಿಲ್ಲೆಯ ಮಧುಗಿರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ.ವಿ. ವೀರಭದ್ರಯ್ಯ ಮತ್ತು ಜೆಡಿಎಸ್ ಪಕ್ಷದ ಹಲವು ಮುಖಂಡರುಗಳು ಮತದಾರರನ್ನು ತಮ್ಮತ್ತ ಸೆಳೆಯಲು ಧರ್ಮಸ್ಥಳ ಪ್ಯಾಕೇಜ್ ಪ್ರವಾಸಕ್ಕೆ ಕಳುಹಿಸಿಕೊಡುತ್ತಿದ್ದ ವಿಡಿಯೋ ಒಂದು ಕಳೆದ ಮೂರು ದಿನಗಳ ಹಿಂದೆ ಅಷ್ಟೇ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಮಧುಗಿರಿ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ನಿಂದ ಸ್ಪರ್ಧೆಗಿಳಿದಿರುವ ಎಂ.ವಿ. ವೀರಭದ್ರಯ್ಯ ಮತದಾರರಿಗೆ ತಮ್ಮ ಪರ ಮತ ಹಾಕಲು ಎರಡು ದಿನಗಳ ಧರ್ಮಸ್ಥಳ ಪ್ಯಾಕೇಜ್ ಪ್ರವಾಸ ಏರ್ಪಡಿಸಿದ್ದಾರೆ ಹಾಗೂ ರಾತ್ರಿ ವೇಳೆ ಬಸ್ ಕಳುಹಿಸುತ್ತಿದ್ದಾರೆ ಎಂದು ಚುನಾವಣಾ ಅಧಿಕಾರಿಗಳಿಗೆ ಘಟನೆಗೆ ಸಂಬಂಧಿಸಿದಂತೆ ದೂರು ನೀಡಲಾಗಿತ್ತು. ಇಂದು ಬೆಳ್ಳಂ ಬೆಳಗ್ಗೆ ಪ್ರವಾಸಕ್ಕೆ ಹೊರಟಿದ್ದ ಮೂರು ಬಸ್ ಗಳನ್ನು ದೊಡ್ಡೇರಿ ಹೋಬಳಿಯ ಗಿಡದಾಗಲನಹಳ್ಳಿ ಹತ್ತಿರ ಮಧುಗಿರಿ ಉಪವಿಭಾಗಾಧಿಕಾರಿ ರಿಷಿ ಆನಂದ್ ನೇತೃತ್ವದ ಚುನಾವಣಾ ಅಧಿಕಾರಿಗಳ ತಂಡ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರವಾಸಕ್ಕೆ ತೆರಳುತ್ತಿದ್ದ ಅಮಾಯಕ ಜನರು ಐ.ಡಿ.ಹಳ್ಳಿ ಹೋಬಳಿಯ ಯರಮನಹಳ್ಳಿ ಮತ್ತು ಕಸಬಾ ಹೋಬಳಿಯ ಶೆಟ್ಟಿಹಳ್ಳಿ ಮತ್ತು ಮರಬಳ್ಳಿ ಗ್ರಾಮದ ಗ್ರಾಮಸ್ಥರು…
ದೇವರ ಪೂಜೆ ಹಕ್ಕು ಪಡೆಯುವ ವಿಚಾರದಲ್ಲಿ ಇಬ್ಬರು ಅರ್ಚಕರ ನಡುವೆ ಗಲಾಟೆ ಯಿಂದಾಗಿ ಅರ್ಚಕರೊಬ್ಬರು ದೇಗುಲಕ್ಕೆ ಬೀಗ ಹಾಕಿ ಕಣ್ಮರೆಯಾಗಿರುವ ಘಟನೆ ಕೊರಟಗೆರೆ ತಾಲೂಕು ಕುರಂಕೋಟೆ ಗ್ರಾಮದಲ್ಲಿ ನಡೆದಿದೆ. ದೊಡ್ಡಕಾಯಪ್ಪ ಸ್ವಾಮಿಯ ಗರ್ಭಗುಡಿ ಮತ್ತು ದೇವಾಲಯಕ್ಕೆ ಬೀಗ ಜಡಿದು ಅರ್ಚಕ ಶ್ರೀನಿವಾಸಮೂರ್ತಿ ಪರಾರಿಯಾಗಿದ್ದಾರೆ. ಒಂದು ವರ್ಷದ ಅವಧಿಗೆ ಅರ್ಚಕ ಶ್ರೀನಿವಾಸ್ ಮೂರ್ತಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಕಳೆದ ಶನಿವಾರ ಶ್ರೀನಿವಾಸ್ ಮೂರ್ತಿಯ ಪೂಜೆ ಅವಧಿ ಮುಗಿದಿದೆ. ಮತ್ತೊರ್ವ ಅರ್ಚಕ ವೆಂಕಟೇಶ್ ಗೆ ಪೂಜೆ ಅಧಿಕಾರ ಹಸ್ತಾಂತರವಾಗಬೇಕಿತ್ತು. ಆದರೆ ಅಧಿಕಾರ ಹಸ್ತಾಂತರ ಮಾಡದೆ ದೇವಾಲಯಕ್ಕೆ ಬೀಗ ಜಡಿದ ಶ್ರೀನಿವಾಸ್ ಮೂರ್ತಿ ಕಣ್ಮರೆಯಾಗಿದ್ದಾರೆ. ದೊಡ್ಡಕಾಯಪ್ಪ ಸೇವಾ ಸಮಿತಿ ಮತ್ತು ಗ್ರಾಮಸ್ಥರಿಂದ ತಹಶೀಲ್ದಾರ್ ಮತ್ತು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ತಹಶೀಲ್ದಾರ್ ಹಾಗೂ ಮುಜರಾಯಿ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದು, ಗ್ರಾಮಸ್ಥರೊಂದಿಗೆ ಸಭೆ ನಡೆಸಿದ್ದಾರೆ. ದೇವಾಲಯಕ್ಕೆ ಬೀಗ ಜಡಿದ ಪರಿಣಾಮ ದೊಡ್ಡಕಾಯಪ್ಪ ಸ್ವಾಮಿಯ ದರ್ಶನ ಸಿಗದೆ ಭಕ್ತರು ಪರದಾಡುತ್ತಿದ್ದು, ದೊಡ್ಡಕಾಯಪ್ಪ ಅರ್ಚಕ ಶ್ರೀನಿವಾಸಮೂರ್ತಿ…
ತುಮಕೂರು: ಜಿಲ್ಲೆಯ ಕೊರಟಗೆರೆ ತಾಲ್ಲೂಕು ಕಸಬಾ ಹೋಬಳಿ ಹುಲಿಕುಂಟೆ ಗ್ರಾಮದ ಅಲೆಮಾರಿ ಕುಟುಂಬಗಳು ಚುನಾವಣೆ ವೇಳೆ ವಿಶೇಷ ಬೇಡಿಕೆಯನ್ನಿಟ್ಟಿದ್ದು, ಪ್ರತಿ ಗುಡಿಸಲಿನಲ್ಲೂ ಭೂಮಿ, ವಸತಿ ಕೊಡದೇ ನಮ್ಮ ಓಟು ಕೊಡೆವು ಎಂಬ ಕರಪತ್ರವನ್ನು ಅಳವಡಿಸಿದ್ದಾರೆ. ಅನೇಕ ವರ್ಷಗಳಿಂದ ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕು ಕಸಬಾ ಹೋಬಳಿ ಹುಲಿಕುಂಟೆ ಗ್ರಾಮದ ಅಲೆಮಾರಿ ಕುಟುಂಬಗಳು ಸೇರಿದಂತೆ ತಾಲೂಕಿನ ಇತರೆ ಹೋಬಳಿಯ ಅಲೆಮಾರಿ ಕುಟುಂಬಗಳು ನಿವೇಶನ ವಸತಿಗಾಗಿ ಜನಪ್ರತಿನಿಧಿಗಳಲ್ಲಿ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಸೂರು ಕಲ್ಪಿಸಿಕೊಡಲು ಅಲೆದು ಕಂಗಾಲಾಗಿದ್ದೇವೆ, ಹಾಗಾಗಿ ಈ ಬಾರಿ 2023 ನೇ ಮೇ 10 ನೇ ದಿನಾಂಕದಂದು ನಡೆಯಲಿರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಗೆ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳು ಅಥವಾ ಮುಖಂಡರುಗಳು ನಮ್ಮಲ್ಲಿ ಮತ ಕೇಳಲು ಬಂದಾಗ ನಾವುಗಳು ನಮ್ಮ ಮತಗಳನ್ನು ಹಣ ಹೆಂಡಕ್ಕೆ ಮಾರಿಕೊಳ್ಳಬಾರದೆಂದು ತೀರ್ಮಾನಿಸಿದ್ದು, ಜೊತೆಗೆ ಭೂಮಿ ವಸತಿ ಕೊಡದೆ ನಾವು ನಮ್ಮ ಮತಗಳನ್ನು ನೀಡಬಾರದೆಂದು ನಿರ್ಧರಿಸಿದ್ದೇವೆ ಎಂದು ಘೋಷಿಸಿಕೊಂಡಿದ್ದಾರೆ. ನಾವುಗಳು ವಾಸವಿರುವ ಜಾಗಗಳಲ್ಲಿ ಪ್ಲಕ್ಸ್ ಮತ್ತು ಮನೆಗಳ ಬಾಗಿಲುಗಳಿಗೆ…
ನವದೆಹಲಿ: ಭಾರತೀಯ ಕಂಪನಿಯಿಂದ ತಯಾರಿಸಲ್ಪಟ್ಟ ಐಡ್ರಾಪ್ಗಳನ್ನು ಯುಎಸ್ಎ ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸಿದೆ. ಈ ಐಡ್ರಾಪ್ಸ್ ನಿಂದ ಹಲವು ಜನರಲ್ಲಿ ಸೋಂಕು ಹರಡುತ್ತಿದೆ ಎಂದು ಯುಎಸ್ಎ ವರದಿ ಮಾಡಿದೆ . ಚೆನ್ನೈ ಮೂಲದ ಗ್ಲೋಬಲ್ ಫಾರ್ಮಾ ಹೆಲ್ತ್ಕೇರ್ ಎಜ್ರಿಕೇರ್ ಆರ್ಟಿಫಿಶಿಯಲ್ ಟಿಯರ್ಸ್ ಎಂಬ ಬ್ರಾಂಡ್ನಲ್ಲಿ ತಯಾರಿಸಿದ ಐಡ್ರಾಪ್ಸ್ ನಿಂದ ಮೂರು ಸಾವು, ಎಂಟು ಕುರುಡುತನ ಮತ್ತು ಹಲವರಲ್ಲಿ ಸೋಂಕುಗಳು ಪತ್ತೆಯಾಗಿವೆ ಎನ್ನಲಾಗಿದೆ. ಕಲುಷಿತ ಕೃತಕ ಐಡ್ರಾಪ್ಸ್ ಬಳಕೆಯಿಂದ ಕಣ್ಣಿನ ಸೋಂಕಿನ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಯುಎಸ್ ಫುಡ್ ಅಂಡ್ ಡ್ರಗ್ ಅಡ್ಮಿನಿಸ್ಟ್ರೇಷನ್ ಹೇಳಿದೆ. ಚೆನ್ನೈನಿಂದ ದಕ್ಷಿಣಕ್ಕೆ ಸುಮಾರು 40 ಕಿಮೀ ದೂರದಲ್ಲಿರುವ ಗ್ಲೋಬಲ್ ಫಾರ್ಮಾ ಹೆಲ್ತ್ಕೇರ್ ಫೆಬ್ರವರಿಯಲ್ಲಿ ಯುಎಸ್ ಮಾರುಕಟ್ಟೆಗೆ ಲಿಂಕ್ ಮಾಡಿದ ಐಡ್ರಾಪ್ಗಳ ಉತ್ಪಾದನೆಯನ್ನು ನಿಲ್ಲಿಸಿತ್ತು. ಇದು ಗ್ರಾಹಕರ ಮಟ್ಟದಲ್ಲಿ ಅವಧಿ ಮೀರಿದ ಕೃತಕ ಐಡ್ರಾಪ್ ಗಳನ್ನುಸ್ವಯಂಪ್ರೇರಣೆಯಿಂದ ಹಿಂಪಡೆದಿದೆ ಎಂದು ಹೇಳಿದೆ. ಅದ್ದರಿಂದ ಇಂತಹ ಐಡ್ರಾಪ್ಗಳಿಂದ ಸೋಂಕುಗಳು ಪತ್ತೆಯಾದರೆ ಚಿಕಿತ್ಸೆ ನೀಡುವುದು ಕಷ್ಟಕರವಾಗಿದೆ ಎಂದು ಸಾಂಕ್ರಾಮಿಕ ರೋಗ ತಜ್ಞರು ಹೇಳಿದ್ದಾರೆ. ನಮ್ಮತುಮಕೂರು.ಕಾಂನ…
ಗುವಾಹಟಿ : ಸಿಕ್ಕಿಂನ ನಾಥು ಲಾ ಪರ್ವತ ಪಾಸ್’ನಲ್ಲಿ ಇಂದು ಮಂಗಳವಾರ ಮಧ್ಯಾಹ್ನ 12:20 ರ ಸುಮಾರಿಗೆ ಭಾರಿ ಹಿಮಪಾತ ಸಂಭವಿಸಿದ್ದು, ಅದರಲ್ಲಿ ನಾಲ್ವರು ಪುರುಷರು,ಓರ್ವ ಮಹಿಳೆ, ಒಂದು ಮಗು ಸೇರಿದಂತೆ ಒಟ್ಟು 6 ಪ್ರವಾಸಿಗರು ಮೃತ ಪಟ್ಟಿದ್ದಾರೆ ಇನ್ನು ಹಲವಾರು ಪ್ರವಾಸಿಗರು ಹಿಮದ ಅಡಿಯಲ್ಲಿ ಸಿಲುಕಿದ್ದಾರೆ ಎಂದು ಹೇಳಲಾಗಿದೆ . ಆದರೆ ಈ ಹಿಮಪಾತ ಸಂಭವಿಸಿದಾಗ 150ಕ್ಕೂ ಹೆಚ್ಚು ಪ್ರವಾಸಿಗರು ಈ ಪ್ರದೇಶದಲ್ಲಿದ್ದರು ಎಂದು ವರದಿಯಾಗಿದೆ. ಇನ್ನು ಹಿಮದಡಿ ಸಿಲುಕಿದ್ದ 22 ಪ್ರವಾಸಿಗರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಇನ್ನು ಹೆಚ್ಚು ಮಂದಿ ಹಿಮದಡಿ ಸಿಲುಕಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಅದ್ದರಿಂದ ಇಂದು ಸಿಕ್ಕಿಂನ ನಾಥು ಲಾ ಪರ್ವತ ಪಾಸ್’ನಲ್ಲಿ ರಕ್ಷಣಾ ಕಾರ್ಯಾಚರಣೆಗಳನ್ನುಆರಂಭಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯ ಪಜಶಿವರಂ ಗ್ರಾಮಕ್ಕೆ ಭೇಟಿ ನೀಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಡುಗೆ ಅನಿಲದ ಬೆಲೆಯನ್ನು ಕಡಿಮೆ ಮಾಡುವಂತೆ ಗೃಹಿಣಿಯರು ಮನವಿ ಮಾಡಿದರು. 2024 ರ ಚುನಾವಣೆಗೆ ಮುನ್ನ ‘ಗೋಡೆಯಿಂದ ಗೋಡೆ’ ಅಭಿಯಾನದ ಭಾಗವಾಗಿ ವಿತ್ತ ಸಚಿವ ಸೀತಾರಾಮನ್ ರಾಜ್ಯ ಸಚಿವ ಎಲ್ ಮುರುಗನ್ ಅವರೊಂದಿಗೆ ಗ್ರಾಮಕ್ಕೆ ಭೇಟಿ ನೀಡಿದರು. ಕೇಂದ್ರ ಹಣಕಾಸು ಸಚಿವರು ಗ್ರಾಮಕ್ಕೆ ಭೇಟಿ ನೀಡಿದಾಗ ಗ್ರಾಮಸ್ಥರೊಂದಿಗೆ ಸಂವಾದ ನಡೆಸಿ ಸರ್ಕಾರ ಘೋಷಿಸಿರುವ ಸವಲತ್ತುಗಳು ಸಿಕ್ಕಿವೆಯೇ ಎಂದು ಕೇಳಿದರು. ಆಗ ಅಡುಗೆ ಅನಿಲ ಬೆಲೆಯನ್ನು ಕಡಿಮೆ ಮಾಡುವಂತೆ ಕುಟುಂಬಗಳ ಗುಂಪು ಕೇಂದ್ರ ಹಣಕಾಸು ಸಚಿವರಿಗೆ ಮನವಿ ಮಾಡಿದೆ. ಅವರಿಗೆ ಉತ್ತರಿಸಿದ ಹಣಕಾಸು ಸಚಿವರು, ಅಡುಗೆ ಅನಿಲದ ಬೆಲೆಯನ್ನು ಅಂತಾರಾಷ್ಟ್ರೀಯ ಮಾರುಕಟ್ಟೆ ನಿರ್ಧರಿಸುತ್ತದೆ. “ನಮ್ಮ ದೇಶದಲ್ಲಿ ಅಡುಗೆ ಅನಿಲ ಇಲ್ಲ. ನಾವು ಅದನ್ನು ಆಮದು ಮಾಡಿಕೊಳ್ಳುತ್ತೇವೆ. ನಾವು ಆಮದು ಮಾಡಿಕೊಳ್ಳುವಾಗ ಅಲ್ಲಿ ಬೆಲೆ ಹೆಚ್ಚಾದರೆ ಇಲ್ಲಿಯೂ ಏರುತ್ತದೆ. ಅಲ್ಲಿ ಕಡಿಮೆಯಾದರೆ ಇಲ್ಲಿ ಕಡಿಮೆಯಾಗುತ್ತದೆ. ಆದರೆ ಕಳೆದ…
ಐಪಿಎಲ್ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆಲುವು ಸಾಧಿಸಿದೆ. ಚೆನ್ನೈ 12 ರನ್ಗಳ ಜಯ ಸಾಧಿಸಿತು. ಚೆನ್ನೈ ನೀಡಿದ 218 ರನ್ಗಳ ಗುರಿ ಬೆನ್ನತ್ತಿದ ಲಕ್ನೋ ನಿಗದಿತ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 205 ರನ್ ಗಳಿಸಲಷ್ಟೇ ಶಕ್ತವಾಯಿತು. 22 ಎಸೆತಗಳಲ್ಲಿ 53 ರನ್ ಗಳಿಸಿದ ಕೈಲ್ ಮೈಯರ್ಸ್ ಲಕ್ನೋ ಪರ ಅಗ್ರ ಸ್ಕೋರರ್ ಎನಿಸಿಕೊಂಡರು ಚೆನ್ನೈ ಪರ ಮೊಯಿನ್ ಅಲಿ 4 ವಿಕೆಟ್ ಪಡೆದರು. ಕೊನೆಯ ಪಂದ್ಯದಲ್ಲಿ ಅವರು ನಿಲ್ಲಿಸಿದ ಸ್ಥಳವನ್ನು ಎತ್ತಿಕೊಂಡ ಮೈಯರ್ಸ್ ಲಕ್ನೋಗೆ ಉತ್ತಮ ಆರಂಭವನ್ನು ನೀಡಿದರು. ಮೊದಲ ಎಸೆತದಿಂದಲೇ ದಾಳಿ ನಡೆಸಿದ ಆಟಗಾರ ಕೇವಲ 21 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಮೈಯರ್ಸ್ ಜೊತೆ ಬರದಿದ್ದರೂ ರಾಹುಲ್ ಕೂಡ ಒಡೆದು ಹಾಕಿದರು. ಪವರ್ ಪ್ಲೇನ ಕೊನೆಯ ಓವರ್ನಲ್ಲಿ ಮೈಯರ್ಸ್ ಅವರನ್ನು ಮೊಯಿನ್ ಅಲಿ ವಾಪಸ್ ಕಳುಹಿಸಿದರು. ಆದರೆ, ಲಕ್ನೋ ಮೊದಲ 6 ಓವರ್ಗಳಲ್ಲಿ 80 ರನ್ ಗಳಿಸಿ ಚೆನ್ನೈನ ಪವರ್ ಪ್ಲೇ…