Subscribe to Updates
Get the latest creative news from FooBar about art, design and business.
- SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!
- 10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!
- ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!
- ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ
- ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
- ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ
- ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು
- ನಮ್ಮ ತುಮಕೂರು ಫಲಶ್ರುತಿ: ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣ: ಸಫಾಯಿ ಕರ್ಮಚಾರಿಗಳ ಆಯೋಗ ಸ್ಥಳಕ್ಕೆ ಭೇಟಿ
Author: admin
ರೆಫ್ರಿಜರೇಟರ್ ನ ಆಹಾರದ ಅಡ್ಡಪರಿಣಾಮಗಳು : ಬೇಸಿಗೆಕಾಲ ಪ್ರಾರಂಭವಾಗಿದೆ. ಮನೆಗಳಲ್ಲಿ ರೆಫ್ರಿಜರೇಟರ್ ಬಳಕೆಯು ವರ್ಧಿಸಿದೆ. ಬೇಸಿಗೆ ಕಾಲದಲ್ಲಿ ಆಹಾರ ಕೆಡದೆ ಇಟ್ಟುಕೊಳ್ಳುವ ಏಕಮಾರ್ಗ ರೆಫ್ರಿಜರೇಟರ್ ಆಗಿದೆ. ಆದರೆ ದೀರ್ಘಾವಧಿಯಲ್ಲಿ ರೆಫ್ರಿಜರೇಟರ್ ನಲ್ಲಿ ಆಹಾರವನ್ನು ಸಂಗ್ರಹಿಸುವುದು ಆರೋಗ್ಯಕ್ಕೆ ಹಾನಿಕರವಾಗಬಹುದು. ರೆಫ್ರಿಜರೇಟರ್ ನಲ್ಲಿ ಆಹಾರವನ್ನು ಸಂಗ್ರಹಿಸುವುದು ಒಂದು ಪರಿಮಿತಿಯವರೆಗೆ ಸರಿಯೆಂದರೆ ದೀರ್ಘಾವಧಿಯ ಆಹಾರವನ್ನು ಮತ್ತೆ ಬಿಸಿಮಾಡಿ ಸೇವಿಸಿದರೆ ಅದರ ಪೋಷಕಾಂಶಗಳು ನಷ್ಟವಾಗುತ್ತದೆ . ದೀರ್ಘ ಸಮಯ ಫ್ರಿಡ್ಜ್ ನಲ್ಲಿ ಇರಿಸಿಕೊಳ್ಳುವ ಆಹಾರ ಸೇವಿಸುವಾಗ ಅಸಿಡಿಟಿ ಮುಂತಾದ ಸಮಸ್ಯೆಗಳಿಗೆ ಕಾರಣವಾಗಬಹುದು. ಇದರೊಂದಿಗೆ ಫ್ರಿಡ್ಜ್ ನಲ್ಲಿ ಇಡಬಾರದಂತಹ ಕೆಲವು ತರಕಾರಿಗಳಿವೆ. ಆಲೂಗಡ್ಡೆ, ಈರುಳ್ಳಿ, ಬೆಳ್ಳುಳ್ಳಿಯನ್ನು ಫ್ರಿಡ್ಜ್ ನಲ್ಲಿ ಇಡುವುದು ದೋಷಕರ. ಫ್ರಿಡ್ಜ್ ನಲ್ಲಿನಲ್ಲಿಡುವ ತಂಪಾದ ನೀರು ಕುಡಿಯುವದಕ್ಕಿಂತ ಮಣ್ಣಿನ ಪಾತ್ರೆಯಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ಉತ್ತಮ. ದೆಹಲಿಯಂತಹ ದೊಡ್ಡ ನಗರಗಳಲ್ಲಿ ವಾಸಿಸುವವರು ಅಡುಗೆ ಮನೆಯಲ್ಲಿ ನೀರು ಇಡಲು ಫ್ರಿಡ್ಜ್ ಗೆ ಬದಲಾಗಿ ಮಣ್ಣಿನ ಪಾತ್ರೆಗಳನ್ನು ಬಳಸುತ್ತಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ನಾಸಿಕ್: ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎಂಬ ಮಾತಿದೆ ಆದರೆ ಈ ಮಾತಿಗೆ ತಕ್ಕಂತೆ 3 ಅಡಿ ಎತ್ತರದ ಮಹಿಳೆ ಪೂಜಾ ಘೋಡ್ಕೆ ಅವರು ತಾನೇ ಸ್ವಂತ ಉದ್ಯಮವನ್ನು ಆರಂಭಿಸಿ ಇತರ ಮಹಿಳೆಯರಿಗೆ ಉದ್ಯೋಗವನ್ನು ನೀಡಿ ಯಶಸ್ವಿ ಮಹಿಳೆಯಾಗಿದ್ದಾರೆ. ಪೂಜಾ ಘೋಡ್ಕೆ ಹಲವಾರು ತೊಂದರೆಗಳನ್ನು ಎದುರಿಸಿದ್ದಾರೆ. ಪೂಜಾ ಜೀವನದಲ್ಲಿ ಏನು ಮಾಡುತ್ತಾಳೆ ಎಂಬುದು ಮನೆಯವರ ಆತಂಕ ಮತ್ತು ನರೆಹೊರೆಯವರ ಪ್ರಶ್ನೆಯಾಗಿತ್ತು. ಅಲ್ಲದೇ ಕಡಿಮೆ ಎತ್ತರದ ಕಾರಣದಿಂದ ಅನೇಕರು ಪೂಜಾರನ್ನು ಹೀಯಾಳಿಸುತ್ತಿದ್ದರು . ಅಂತಹ ಪರಿಸ್ಥಿತಿಯಲ್ಲಿ ಪೂಜಾಳ ಪೋಷಕರು ಅವಳ ಬೆಂಬಲವಾಗಿ ನಿಂತು, ಉತ್ತಮ ಶಿಕ್ಷಣ ಕೊಡಿಸಿದ್ದಾರೆ. ಆದ್ದರಿಂದ ಪೂಜಾ ಎಂಕಾಂ ಪದವೀಧರೆಯಾಗಿದ್ದಾರೆ. ಬಳಿಕ ಪೂಜಾ ಉದ್ಯೋಗಕ್ಕಾಗಿ ಹಲವಾರು ಕಂಪನಿಗಳ ಸಂದರ್ಶನವನ್ನು ಎದುರಿಸಿದರು.ಆದರೆ ಪೂಜಾಳ ಎತ್ತರವನ್ನು ನೋಡಿ ಕಂಪನಿಗಳು ಇವರನ್ನು ರಿಜೆಕ್ಟ್ ಮಾಡುತ್ತಿದ್ದವು. ಇದರಿಂದ ಪೂಜಾಳ ಪೋಷಕರು ಚಿಂತೆಗೀಡಾಗಿದ್ದರು. ಮಗಳಿಗೆ ಉತ್ತಮ ಉದ್ಯೋಗ ಸಿಕ್ಕು ಯಾರ ಹಂಗು ಇಲ್ಲದೇ ಬದುಕುತ್ತಾಳೆ ಎಂದುಕೊಂಡಿದ್ದ ಅವರ ಆಸೆ ನಿರಾಸೆಯಾಯಿತು ಎಂದು ಕೊರಗುತ್ತಿದ್ದರು. ಆದರೆ ಛಲಬಿಡದೆ ಪೂಜಾ…
ತುಮಕೂರು: ಭೂಮಿಯ ಅಳತೆಗೆ ತೆರಳಿದ್ದ ಸರ್ವೇಯರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕುಣಿಗಲ್ ತಾಲ್ಲೂಕಿನ ಬಿದನಗೆರೆ ಗ್ರಾಮದಲ್ಲಿ ಗುರುವಾರ ನಡೆಸಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಿರೀಶ್ ಎಂಬವರು ಹಲ್ಲೆಗೆ ಒಳಗಾದ ಲೈಸೆನ್ಸ್ ಸರ್ವೆಯರ್ ಆಗಿದ್ದು, ಬಿದನಗೆರೆ ನಿವಾಸಿ ರತ್ನಮ್ಮ ಎಂಬುವವರು. ತಮ್ಮ ಜಮೀನು ಬಿದನಗೆರೆ ಸರ್ವೆ ನಂಬರ್ 94 ಮತ್ತು 74 ರ ಜಮೀನಿಗೆ ಸಂಬಂಧಿಸಿದಂತೆ. ಭೂಮಿ ಅಳತೆಗೆ ಸರ್ವೆಗೆ ಅರ್ಜಿ ಕೊಟ್ಟು ಭೂಮಿ ಸರ್ವೆ ಮಾಡಿಸಲು ಮುಂದಾಗಿದ್ರು. ಈ ವೇಳೆ ಪಕ್ಕದ ಜಮೀನಿನ ಕೃಷ್ಣಪ್ಪ ಹಾಗೂ ಆತನ ಪುತ್ರ. ನಮಗೆ ನೋಟಿಸ್ ಕೊಡದೇ ಭೂಮಿ ಸರ್ವೆಗೆ ಬಂದಿದ್ದೀರಾ ಎಂದು ಗಲಾಟೆ ಮಾಡಿದ್ದಾರೆ. ಭೂಮಿ ಸರ್ವೆ ಮಾಡುತ್ತಿದ್ದ ಸರ್ವೆಯರ್ ಮೇಲೆ ಕಲ್ಲು ಹಾಗೂ ಇಟ್ಟಿಗೆಯಿಂದ. ಹಿಗ್ಗಾಮುಗ್ಗ ಥಳಿಸಿ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ನಾಲ್ಕೈದು ಜನರು ಸೇರಿ ಗಿರೀಶ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಹಲ್ಲೆಯಿಂದ ರಕ್ತ ಸ್ರಾವವಾಗಿ ಬಿದ್ದಿದ್ದ ಗಿರೀಶ್…
ಮಧುಗಿರಿ: ಕರ್ನಾಟಕ ರಾಜ್ಯದ ಜನಪ್ರಿಯ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರ ಅವಧಿಯಲ್ಲಿ ಅಲ್ಪಸಂಖ್ಯಾತ ರ ಅಭಿವೃದ್ಧಿ ಗಾಗಿ 3150 ಕೋಟಿ ರೂ ಅನುದಾನ ನಿಗಧಿ ಮಾಡಿ ಸಮುದಾಯಗಳ ಅಭಿವೃದ್ಧಿಗೆ ಪೂರಕವಾಗಿದ್ದರು ಆದರೆ ಈ ಅನುದಾನವನ್ನು ಇಳಿಕೆಗೆ ಕುಮಾರಸ್ವಾಮಿಯೇ ಕಾರಣ ಎಂದು ಮಾಜಿ ಸಚಿವ ಬಿ.ಝೆಡ್ ಜಮೀರ್ ಅಹಮದ ಖಾನ್ ತಿಳಿಸಿದರು. ಪಟ್ಟಣದ ದಂಡೂರು ಬಾಗಿಲು ಸಮೀಪ ಇರುವ ಆಶುಕಾಣದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಈ ಹಿಂದೆ ಅಲ್ಪಸಂಖ್ಯಾತ ರ ಅಭಿವೃದ್ಧಿ ಗಾಗಿ ಸಿದ್ದರಾಮಯ್ಯ ನವರು 400 ಕೋಟಿ ಇದ್ದ ಅನುದಾನವನ್ನು 3150 ಕೋಟಿಗೆ ಹೆಚ್ಚಿಸಿ ಅಲ್ಪಸಂಖ್ಯಾತರ ಅಭಿವೃದ್ಧಿ ಗಾಗಿ ಹತ್ತು ಹಲವಾರು ಕಾರ್ಯಕ್ರಮಗಳನ್ನು ಸಮುದಾಯದ ವಿದ್ಯಾರ್ಥಿಗಳಿಗಾಗಿ , ಚಾಲಕರಿಗಾಗಿ, ಉನ್ನತ ವ್ಯಾಸಂಗಕ್ಕೆ ಹೊರದೇಶಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿ ಹಲವಾರು ಯೋಜನೆಗಳನ್ನು ಜಾರಿಗೆ ಮಾಡಿದ್ದೇನೆ ಎಂದರು. ನಿಮ್ಮ ಮನೆ ಮಗ ಜಮೀರ್ ಮೇಲೆ ನಂಬಿಕೆ ಇಟ್ಟು ನಾಲ್ಕು ಖಾತೆಗಳನ್ನು ನೀಡಿದ್ದು ಕಾಂಗ್ರೆಸ್ ಸರಕಾರ ಆದರೆ ಕುಮಾರ ಸ್ವಾಮಿ ಅಧಿಕಾರ…
ಸನ್ಮಾನ್ಯ ಕಾರ್ಯಸಾಮ್ರಾಜ್ಞಿ ಶಾಸಕಿ ಡಾಕ್ಟರ್ ಅಂಜಲಿ ಹೇಮಂತ್ ನಿಂಬಾಳ್ಕರ್ ರವರು ಇಂದು ಖಾನಾಪುರ್ ತಾಲೂಕಿನ ಬಿಡಿ ಗ್ರಾಮದಲ್ಲಿ ಕಕ್ಕೇರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಈ ಕೆಳಕಂಡ ಗ್ರಾಮಗಳಾದ ಭೊಗುರ, ಗಂದಿಗವಾಡ್, ಗುಂಡನಟ್ಟಿ, ಹಿಡಕಲ್, ಗಸ್ಟೋಳಿ ದಡ್ಡಿ, ಹಿಂಡಲಗಿ, ಕಸಮಳಗಿ, ಗ್ರಾಮದಿಂದ ನೂರಾರು ಕಾರ್ಯಕರ್ತರು ಬಿಜೆಪಿಯ ದ್ವಂದ ನಿಲುವುಗಳನ್ನು ಹಾಗೂ ಬಿಜೆಪಿಯ ಒಡೆದಾಳುವ ನೀತಿಯಿಂದ ಬೇಸತ್ತು ಖಾನಾಪುರ್ ಮತಕ್ಷೇತ್ರದ ಶಾಸಕಿ ಡಾಕ್ಟರ್ ಅಂಜಲಿ ಹೇಮಂತ್ ನಿಂಬಾಳ್ಕರ್ ಅವರ ಅಭಿವೃದ್ಧಿ ಕಾಮಗಾರಿಗಳನ್ನು ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ತಿಪಟೂರು: ಶತ್ರುಗಳು ಇರಬೇಕು, ಆದರೆ ಹಿತಶತ್ರುಗಳು ಹೇಗೆ ಇರಬಾರದೋ ಅದೇ ರೀತಿ ಜೆ.ಡಿ.ಎಸ್.ನಲ್ಲಿ ಅಧಿಕಾರ ಅನುಭವಿಸಿದ ಕೆಲವು ಜಳ್ಳುಗಳು ಉದುರಿದರೇನು ಚಿಂತೆಯಿಲ್ಲ, ಗಟ್ಟಿಕಾಳುಗಳಿಂದ ಜೆ.ಡಿ.ಎಸ್ ಬಲಿಷ್ಟವಾಗುತ್ತಿದೆ ಎಂದು ಜೆ.ಡಿ.ಎಸ್ ಅಭ್ಯರ್ಥಿ ಕೆ.ಟಿ.ಶಾಂತಕುಮಾರ್ ತಿಳಿಸಿದರು. ನಗರದ ಗೃಹಕಛೇರಿಯಲ್ಲಿ ಗಂಗಾವತರಣದ ಪ್ರಯುಕ್ತ ಗಂಗಾಮಾತೆ ಹಾಗೂ ಭಗೀರಥನ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದ ಅವರಿಂದು, ಗಂಗಾವತರಣ ದಿನವಾಗಿದೆ ಇಂದಿನಿಂದ ಜೆ.ಡಿ.ಎಸ್. ಪಕ್ಷ ಗಂಗೆಯಂತೆ ಪಾವಿತ್ರ್ಯಯತೆಯನ್ನು ಉಂಟುಮಾಡಿದೆ ಎಂದರೆ ತಪ್ಪಾಗುವುದಿಲ್ಲ. ಏಕೆಂದರೆ ಜೆ.ಡಿ.ಎಸ್. ನಿಂದ ಗೆದ್ದ ಅಭ್ಯರ್ಥಿ ಪಕ್ಷದಿಂದ ಸ್ಥಾನಮಾನಗಳನ್ನು ಅನುಭವಿಸಿ ಇಂದು ಪಕ್ಷ ಬಿಟ್ಟಿರುವುದು ಒಂದು ರೀತಿಯ ಸಂತಸವಾಗಿದೆ. ಏಕೆಂದರೆ ಪಕ್ಷದಲ್ಲಿದ್ದುಕೊಂಡೇ ಹಿತಶತ್ರುಗಳಾಗುವ ಬದಲು ಇಂದು ಪಕ್ಷವನ್ನು ಬಿಟ್ಟಿರುವುದರಿಂದ ನಾವು ಧೈರ್ಯವಾಗಿ ಎದುರಿಸಬಹುದು ಎಂದು ಮಾಜಿ ಜಿ.ಪಂ ಸದಸ್ಯ ರಾಧಾ ನಾರಾಯಣಗೌಡರಿಗೆ ಟಾಮಗ್ ನೀಡಿದರು. ಇನ್ನೊಂದೆಡೆ ನನಗೆ ಜೆ.ಡಿ.ಎಸ್. ಪಕ್ಷದ ಟಿಕೆಟ್ ತಪ್ಪಿಸಬೇಕೆಂದು ಹಲವಾರು ಜನರು ಪ್ರಯತ್ನಪಟ್ಟರೂ, ಕುಮಾರಸ್ವಾಮಿ ನನ್ನ ಮೇಲೆ ಭರವಸೆಯಿಟ್ಟು ಟಿಕೆಟ್ ನೀಡಿದ್ದಾರೆ. ಇದರಿಂದಲೇ ಜೆ.ಡಿ.ಎಸ್. ಎಷ್ಟು ಗಟ್ಟಿಯಾಗಿದೆ ಎಂಬುದು ತಿಳಿಯುತ್ತದೆ. ಇನ್ನು…
10 ವರ್ಷಗಳ ಬಳಿಕ ನಟಿ ಜಿಯಾ ಖಾನ್ ಆತ್ಮಹತ್ಯೆ ಪ್ರಕರಣದ ತೀರ್ಪು ನೀಡಲು ಮುಂಬೈ ವಿಶೇಷ ಸಿಬಿಐ ನ್ಯಾಯಾಲಯ ಸಜ್ಜಾಗಿದೆ. ಜಿಯಾ ಖಾನ್ ಅವರನ್ನು ಆತ್ಮಹತ್ಯೆಗೆ ಪ್ರೇರೇಪಿಸಿದ ಪ್ರಕರಣದಲ್ಲಿ ನಟ ಆದಿತ್ಯ ಪಾಂಚೋಲಿ ಮತ್ತು ಅವರ ತಾಯಿ ಜರೀನಾ ವಹಾಬ್ ಆರೋಪಿಗಳಾಗಿದ್ದಾರೆ. ಜಿ ಅವರು ಜುಹುದಲ್ಲಿನ ತಮ್ಮ ನಿವಾಸದಲ್ಲಿ ಹಗ್ಗದಿಂದ ನೇಣು ಹಾಕಿಕೊಳ್ಳುವ ಮೊದಲು ಸೂರಜ್ ಪಾಂಚೋಲಿ ವಿರುದ್ಧ ಗಂಭೀರ ಆರೋಪಗಳನ್ನು ಒಳಗೊಂಡ ಆರು ಪುಟಗಳ ಆತ್ಮಹತ್ಯೆ ಟಿಪ್ಪಣಿಯನ್ನು ಬರೆದಿದ್ದಾರೆ. ಸೂರಜ್ನೊಂದಿಗಿನ ಸಂಬಂಧ ಮತ್ತು ನಟನಿಂದ ತಾನು ಎದುರಿಸಿದ ದೈಹಿಕ ಮತ್ತು ಮಾನಸಿಕ ಕಿರುಕುಳದ ಬಗ್ಗೆ ಜಿಯಾ ತನ್ನ ಆತ್ಮಹತ್ಯೆ ಟಿಪ್ಪಣಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಈ ಚಿತ್ರಹಿಂಸೆಗಳು ಆತ್ಮಹತ್ಯೆಗೆ ಕಾರಣವಾಯಿತು ಎಂದು ಜಿಯಾ ಹೇಳುತ್ತಾರೆ. ವಿಶೇಷ ಸಿಬಿಐ ನ್ಯಾಯಾಧೀಶ ಎಎಸ್ ಸೈಯದ್ ಪ್ರಕರಣದ ತೀರ್ಪು ನೀಡಲಿದ್ದಾರೆ. ಜೂನ್ 13, 2013 ರಂದು, ಜಿಯಾ ಖಾನ್ ಮುಂಬೈನ ಜುಹುದಲ್ಲಿನ ತನ್ನ ಅಪಾರ್ಟ್ಮೆಂಟ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಜಿಯಾ ಸಾವಿನ ನಂತರ ಸೂರಜ್ ಪಾಂಚೋಲಿಯನ್ನು ಬಂಧಿಸಲಾಯಿತು.…
ಶಾಂಘೈ ಸಹಕಾರ ಸಂಸ್ಥೆ (ಎಸ್ಸಿಒ) ಸದಸ್ಯ ರಾಷ್ಟ್ರಗಳ ರಕ್ಷಣಾ ಸಚಿವರ ಶೃಂಗಸಭೆ ಇಂದು ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ದೆಹಲಿಯಲ್ಲಿ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಾದೇಶಿಕ ಶಾಂತಿ ಮತ್ತು ಭದ್ರತೆ, ಭಯೋತ್ಪಾದನೆ ತಡೆ ಮತ್ತು ದ್ವಿಪಕ್ಷೀಯ ಬಾಂಧವ್ಯ ಬಲವರ್ಧನೆ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ. ಚೀನಾದ ರಕ್ಷಣಾ ಸಚಿವ ಲಿ ಶಾಂಗ್ಫು, ತಾಜಿಕ್ ರಕ್ಷಣಾ ಸಚಿವ ಕರ್ನಲ್ ಜನರಲ್ ಶೆರಾಲಿ ಮಿರ್ಜೊ, ಇರಾನ್ ರಕ್ಷಣಾ ಸಚಿವ ಬ್ರಿಗೇಡಿಯರ್ ಜನರಲ್ ಮೊಹಮ್ಮದ್ ರೆಜಾ ಘರಾಯ್ ಅಸ್ಟಿಯಾನಿ ಮತ್ತು ಕಜಕಿಸ್ತಾನ್ ರಕ್ಷಣಾ ಸಚಿವ ಕರ್ನಲ್ ಜನರಲ್ ರಜ್ಲಾನ್ ಸಕ್ಸಿಲ್ನಿಕೋವ್ ಅವರು ಸಮಾವೇಶದಲ್ಲಿ ಭಾಗವಹಿಸಲು ದೆಹಲಿಗೆ ಆಗಮಿಸಿದ್ದಾರೆ. ಸಭೆಯಲ್ಲಿ ರಷ್ಯಾದ ರಕ್ಷಣಾ ಸಚಿವ ಸೆರ್ಗೆಯ್ ಶೋಯಿಗು ಮತ್ತು ಉಜ್ಬೇಕಿಸ್ತಾನ್ ಮತ್ತು ಕಿರ್ಗಿಸ್ತಾನ್ನ ರಕ್ಷಣಾ ಮಂತ್ರಿಗಳು ಭಾಗವಹಿಸಲಿದ್ದಾರೆ. ಸಮಾವೇಶಕ್ಕೂ ಮುನ್ನ ರಾಜನಾಥ್ ಸಿಂಗ್ ಅವರು ಇಂದು ಸದಸ್ಯ ರಾಷ್ಟ್ರಗಳ ರಕ್ಷಣಾ ಸಚಿವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ರಕ್ಷಣಾ ಸಂಬಂಧಿತ ವಿಷಯಗಳು ಮತ್ತು ಪರಸ್ಪರ ಆಸಕ್ತಿಯ ಇತರ…
ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಸೂರತ್ ಸೆಷನ್ಸ್ ಕೋರ್ಟ್ ಆದೇಶದ ವಿರುದ್ಧ ರಾಹುಲ್ ಗಾಂಧಿ ಸಲ್ಲಿಸಿರುವ ಮೇಲ್ಮನವಿಯನ್ನು ಗುಜರಾತ್ ಹೈಕೋರ್ಟ್ ನಾಳೆ ವಿಚಾರಣೆ ನಡೆಸಲಿದೆ. ಅರ್ಜಿಯನ್ನು ಆರಂಭದಲ್ಲಿ ಏಕ ಪೀಠದ ಮುಂದೆ ಪಟ್ಟಿ ಮಾಡಲಾಗಿತ್ತು, ಆದರೆ ನ್ಯಾಯಮೂರ್ತಿ ಗೀತಾ ಗೋಪಿ ಹಿಂತೆಗೆದುಕೊಂಡರು. ಇದರ ಬೆನ್ನಲ್ಲೇ ನ್ಯಾಯಮೂರ್ತಿ ಹೇಮಂತ್ ಪ್ರಚಕ್ ಅವರು ಪ್ರಕರಣದ ವಿಚಾರಣೆಯನ್ನು ನಾಳೆ ನಡೆಸಲಿದ್ದಾರೆ. ಇದಕ್ಕೂ ಮುನ್ನ ಏಪ್ರಿಲ್ 26 ರಂದು ನ್ಯಾಯಮೂರ್ತಿ ಗೀತಾ ಗೋಪಿ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದಿದ್ದರು. ಮಾನನಷ್ಟ ಮೊಕದ್ದಮೆಯಲ್ಲಿ ತಾವು ದೋಷಿ ಎಂದು ಸಾಬೀತಾದ ತೀರ್ಪನ್ನು ಅಮಾನತುಗೊಳಿಸಲು ಸೂರತ್ ಮುಖ್ಯ ನ್ಯಾಯಿಕ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಮತ್ತು ಸೂರತ್ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಸಿದ್ಧವಿಲ್ಲದಿದ್ದಾಗ ರಾಹುಲ್ ಗಾಂಧಿ ಗುಜರಾತ್ ಹೈಕೋರ್ಟ್ನ ಮೊರೆ ಹೋಗಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಪಶ್ಚಿಮ ಬಂಗಾಳದ ಐದು ಜಿಲ್ಲೆಗಳಲ್ಲಿ ಸಿಡಿಲು ಬಡಿದು 14 ಮಂದಿ ಸಾವನ್ನಪ್ಪಿದ್ದಾರೆ. ಪೂರ್ವ ಬರ್ಧಮಾನ್ ಜಿಲ್ಲೆಯಲ್ಲಿ ನಾಲ್ವರು ಮತ್ತು ಮುರ್ಷಿದಾಬಾದ್ ಮತ್ತು ಉತ್ತರ-24 ಪರಗಣಗಳಲ್ಲಿ ಇಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ ಎಂದು ವಿಪತ್ತು ನಿರ್ವಹಣಾ ಇಲಾಖೆ ತಿಳಿಸಿದೆ. ಸತ್ತವರಲ್ಲಿ ಹೆಚ್ಚಿನವರು ರೈತರು ಎಂದು ಹೇಳಿದ್ದಾರೆ. ಪಶ್ಚಿಮ ಮಿಡ್ನಾಪುರ ಮತ್ತು ಹೌರಾ ಗ್ರಾಮಾಂತರ ಜಿಲ್ಲೆಗಳಲ್ಲಿ ಇನ್ನೂ ಆರು ಸಾವುಗಳು ವರದಿಯಾಗಿವೆ ಎಂದು ಪಶ್ಚಿಮ ಬಂಗಾಳ ಪೊಲೀಸರು ತಿಳಿಸಿದ್ದಾರೆ. ಕೋಲ್ಕತ್ತಾ, ಹೌರಾ, ಉತ್ತರ 24 ಪರಗಣಗಳು, ಪುರ್ಬಾ ಬರ್ಧಮಾನ್ ಮತ್ತು ಮುರ್ಷಿದಾಬಾದ್ ಸೇರಿದಂತೆ ದಕ್ಷಿಣ ಬಂಗಾಳ ಜಿಲ್ಲೆಗಳಲ್ಲಿ ಗುರುವಾರ ಸಂಜೆ ಗುಡುಗು ಸಹಿತ ಭಾರಿ ಮಳೆಯಾಗಿದೆ. ಸತ್ತವರಲ್ಲಿ ಹೆಚ್ಚಿನವರು ಹೊಲದಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದ ರೈತರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA…