Author: admin

ಹೆಚ್.ಡಿ.ಕೋಟೆ: ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ತಾಲ್ಲೂಕು ಆಡಳಿತ ವತಿಯಿಂದ ಗುಲಾಬಿ ಆಂದೋಲನ ಜಾಥಾ ಕಾರ್ಯಕ್ರಮ ನಡೆಯಿತು. ತಾಲ್ಲೂಕು ಉಪ  ದಂಡಾಧಿಕಾರಿಗಳಾದ ಸಣ್ಣ ರಾಮಪ್ಪ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್ ಜಾಥಾಕ್ಕೆ  ಚಾಲನೆ ನೀಡಿದರು. ಕಾರ್ಯಕ್ರಮದ ಅಂಗವಾಗಿ ಶಾಲೆ ಮತ್ತು ಕಾಲೇಜಿನ ಮಕ್ಕಳು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ತಂಬಾಕು ಸೇವನೆಯಿಂದ ಆಗುವ ಮತ್ತು ಆಗಿರುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಿದರು. ರಸ್ತೆ ಬದಿ ವ್ಯಾಪಾರಿಗಳಿಗೆ ಗುಲಾಬಿ ನೀಡಿ ಈ ದಿನದಿಂದಲೇ ಬಿಡಿ ಸಿಗರೇಟ್ ಮತ್ತು ತಂಬಾಕಿಗೆ ಸಂಬಂಧಿಸಿದಂತೆ ಇತರ ವಸ್ತುಗಳನ್ನು ಮಾರಾಟ ಮಾಡದಂತೆ ಹಾಗೂ ಸೇವಿಸಿದಂತೆ ಮನವಿ ಮಾಡಿದರು. ಇದೇ ವೇಳೆ ತಾಲ್ಲೂಕು ಆರೋಗ್ಯಾಧಿಕಾರಿ  ಡಾ.ಟಿ .ರವಿಕುಮಾರ್  ಮಾತನಾಡಿ, ಇಂದಿನ ಯುವ ಜನಾಂಗದಲ್ಲಿ ಮೋಜಿಗಾಗಿ ಶುರು ಮಾಡುವ ಬೀಡಿ, ಸಿಗರೇಟ್ ಸೇವನೆ ಮುಂದಿನ ದಿನಗಳಲ್ಲಿ ಅವು ನಮ್ಮ ದೇಹವನ್ನೇ ತಿನ್ನುತ್ತವೆ ಎನ್ನುವ ಅರಿವು ಕೂಡ ಇರುವುದಿಲ್ಲ. ಧೂಮಪಾನದಿಂದ ಸ್ವಲ್ಪಮಟ್ಟಿಗೆ ಒತ್ತಡ ಕಡಿಮೆ…

Read More

ಪಾವಗಡ: ಶಾಸಕರಾದ ವೆಂಕಟರಮಣಪ್ಪ ನವರು ಇಂದು ಪಾವಗಡ ತಾಲ್ಲೂಕಿನ ರಂಗಸಮುದ್ರ ಗ್ರಾಮದಲ್ಲಿ 10 ಲಕ್ಷ ವೆಚ್ಚದ ಸಮುದಾಯ ಭವನ ಉದ್ಘಾಟನೆ ಹಾಗೂ ವಿವಿಧೆಡೆಗಳಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು. ದೊಡ್ಡೇನಹಳ್ಳಿಯಲ್ಲಿ 13.90 ವೆಚ್ಚದ ಸರ್ಕಾರಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ, ಚಳ್ಳಕೆರೆ-ಪಾವಗಡ ರಸ್ತೆಯ ಚಿಕ್ಕತಿಮ್ಮನಹಟ್ಟಿ ಗ್ರಾಮದ 50 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ, ಗೋವರ್ಧನ ಗಿರಿ ಬಳಿ 15 ಲಕ್ಷ ವೆಚ್ಚದ ರಸ್ತೆಗೆ ಗುದ್ದಲಿ ಪೂಜೆ, ವದನಕಲ್ ತಿಪ್ಪೆರುದ್ರ ಸ್ವಾಮಿ ದೇವಸ್ಥಾನ ಬಳಿ 10 ವೆಚ್ಚದ ಸಮುದಾಯ ಭವನ ನಿರ್ಮಾಣಕ್ಕೆ ಗುದ್ದಲಿ ಪೂಜೆ ಮತ್ತು ವದನಕಲ್ ಗ್ರಾಮದಲ್ಲಿ 30 ಲಕ್ಷ ವೆಚ್ಚದ ಸಿಸಿ ರಸ್ತೆಗೆ ಗುದ್ದಲಿ ಪೂಜೆ, ಮಲ್ಲಮ್ಮನಹಳ್ಳಿ ಗ್ರಾಮದಲ್ಲಿ 10 ಲಕ್ಷ ವೆಚ್ಚದ ಶಾಲಾ ಕೊಠಡಿ ನಿರ್ಮಾಣಕ್ಕೆ ಗುದ್ದಲಿ ಪೂಜೆ, ಲಿಂಗದಹಳ್ಳಿ-ಸಾಸಲಕುಂಟೆ (ಮುಂದುವರೆದ) 1.50 ಕೋಟಿ ವೆಚ್ಚದ ರಸ್ತೆಗೆ ಗುದ್ದಲಿ ಪೂಜೆ, ಸಾಸಲಕುಂಟೆ ಗ್ರಾಮದಲ್ಲಿ 13.90 ಲಕ್ಷ ವೆಚ್ಚದ ನೂತನ ಶಾಲಾ…

Read More

2002ರ ಗೋಧ್ರಾ ಗಲಭೆಯಲ್ಲಿ ಬಿಲ್ಕಿಸ್ ಬಾನೊ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಆಕೆಯ ಕುಟುಂಬ ಸದಸ್ಯರನ್ನು ಕೊಂದ 11 ಆರೋಪಿಗಳ ಬಿಡುಗಡೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಮತ್ತೆ ಹಿಂದೆ ಸರಿದಿದ್ದಾರೆ. ಇದಕ್ಕೆ ಕಾರಣವನ್ನು ನಿರ್ದಿಷ್ಟಪಡಿಸಲಾಗಿಲ್ಲ. ಕಳೆದ ತಿಂಗಳು ಕೂಡ ನ್ಯಾಯಮೂರ್ತಿ ಬೇಲಾ ತ್ರಿವೇದಿ ಅವರು ಬಾನೊ ಅವರ ಮರುಪರಿಶೀಲನಾ ಅರ್ಜಿಯ ವಿಚಾರಣೆಯಿಂದ ಹಿಂದೆ ಸರಿದಿದ್ದರು. ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಆರೋಪಿಗಳ ಬಿಡುಗಡೆ ವಿರುದ್ಧದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಫೆಬ್ರವರಿಗೆ ಮುಂದೂಡಿದೆ. ಸಂತ್ರಸ್ತ ಬಿಲ್ಕಿಸ್ ಅವರ ಅರ್ಜಿಯೊಂದಿಗೆ ಸಾಮಾಜಿಕ ಕಾರ್ಯಕರ್ತರು ಸಲ್ಲಿಸಿರುವ ಅರ್ಜಿಗಳನ್ನೂ ಪರಿಗಣಿಸಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಬುಧವಾರ ನಡೆದ ವಿಚಾರಣೆಯಲ್ಲೂ ಗುಜರಾತ್ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಸಿಪಿಐಎಂ ನಾಯಕಿ ಸುಭಾಷಿಣಿ ಅಲಿ, ಪತ್ರಕರ್ತೆ ರೇವತಿ ಲಾಲ್, ಲಕ್ನೋ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ರೂಪ ರೇಖಾ ವರ್ಮಾ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ…

Read More

ಮಾಜಿ ಸಿಎಂ ಎಸ್.ಎಂ. ಕೃಷ್ಣ ರಾಜಕೀಯದಿಂದ ನಿವೃತ್ತಿ ಘೋಷಣೆ ಮಾಡಿದ್ದು, ವಯೋ ಸಹಜ ಕಾರಣಗಳಿಂದಾಗಿ ರಾಜಕೀಯದಲ್ಲಿ ಸಕ್ರಿಯವಾಗಿ ಇರಲು ಸಾಧ್ಯವಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ರಾಜ್ಯ ವಿಧಾನಸಭೆ ಚುನಾವಣೆಗೆ ತಿಂಗಳುಗಳು ಬಾಕಿ ಉಳಿದಿರುವಂತೆಯೇ ಮಾಜಿ ಸಿಎಂ, ಬಿಜೆಪಿ ಮುಖಂಡ ಎಸ್.ಎಂ. ಕೃಷ್ಣ ರಾಜಕೀಯದಿಂದ ನಿವೃತ್ತಿ ಘೋಷಣೆ ಮಾಡಿದ್ದು, ನನಗೆ ಪ್ರಸ್ತುತ 90 ವರ್ಷ ವಯಸ್ಸಾಗಿದೆ. ವಯೋ ಸಹಜ ಕಾರಣಗಳಿಂದಾಗಿ ರಾಜಕೀಯದಲ್ಲಿ ಸಕ್ರಿಯವಾಗಿ ಇರಲು ಸಾಧ್ಯವಾಗುವುದಿಲ್ಲ. ಹೀಗಾಗಿ ರಾಜಕೀಯದಿಂದ ನಿವೃತ್ತಿ ಪಡೆಯುತ್ತಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಬಲವರ್ಧನೆ ವಿಚಾರವಾಗಿ ಕೇಳಿದಾಗ ಪ್ರತಿಕ್ರಿಯಿಸಿ ಅವರು, ಪಕ್ಷದ ಕಾರ್ಯಕ್ರಮಗಳ ಸಂದರ್ಭಗಳಲ್ಲಿ ಅದರಲ್ಲಿ ಭಾಗಿಯಾಗುವ ಸಂದರ್ಭ ಬಂದಲ್ಲಿ ಆಗ ನೋಡೋಣ. ವರಿಷ್ಠರೇನಾದರೂ ಸಲಹೆಗಳನ್ನು ಕೇಳಿದಲ್ಲಿ ಖಂಡಿತವಾಗಿಯೂ ಅನುಭವದ ಮೇರೆಗೆ ಅದನ್ನು ಹಂಚಿಕೊಳ್ಳಬಲ್ಲೆ ಎಂದು ತಿಳಿಸಿದರು. ಪಕ್ಷದಲ್ಲಿ ನಿಮ್ಮನ್ನು ಕಡೆಗಣಿಸಲಾಗುತ್ತಿದೆಯೇ ಎಂಬ ಬಗ್ಗೆ ಸುದ್ದಿಗಾರರು ಕೇಳಿದಾಗ, ನಾನೇ ರಾಜಕೀಯದಿಂದ ನಿವೃತ್ತಿಯಾಗುತ್ತಿರುವಾಗ ಕಡೆಗಣಿಸುವ ಮಾತೆಲ್ಲಿಂದ ಬಂತು ಎಂದು ಅವರು ಪ್ರತಿಕ್ರಿಯಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಸಹಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಕ್ಕಾಗಿ ಏರ್ ಇಂಡಿಯಾ 30 ದಿನಗಳವರೆಗೆ ಪ್ರಯಾಣಿಕನನ್ನು ನಿಷೇಧಿಸಿ ಪ್ರಕರಣ ದಾಖಲಿಸಲಾಗಿದೆ. ನವೆಂಬರ್ 26 ರಂದು ಈ ಘಟನೆ ನಡೆದಿದೆ. 70 ವರ್ಷದ ಯೋಧಿಕಾ ಅವರು ಏರ್ ಇಂಡಿಯಾದ ಬಿಸಿನೆಸ್ ಕ್ಲಾಸ್‌ನಲ್ಲಿ ನ್ಯೂಯಾರ್ಕ್‌ನಿಂದ ದೆಹಲಿಗೆ ಪ್ರಯಾಣಿಸುತ್ತಿದ್ದರು. ಊಟ ಮುಗಿಸಿ ಮಲಗಲು ತಯಾರಾಗುತ್ತಿದ್ದ ಪ್ರಯಾಣಿಕನ ಬಳಿಗೆ ಮತ್ತೊಬ್ಬ ಪ್ರಯಾಣಿಕ ನಡೆದುಕೊಂಡು ಬಂದು ಪ್ಯಾಂಟ್ ಜಿಪ್ ಬಿಚ್ಚಿ ಸೀಟಿನ ಮೇಲೆ ಕುಳಿತು ಸಹಪ್ರಯಾಣಿಕನ ಮೈಮೇಲೆ ಮೂತ್ರ ವಿಸರ್ಜನೆ ಮಾಡಿ ಮತ್ತೆ ಬಟ್ಟೆ ಹಾಕಿಕೊಳ್ಳಲು ನಿರಾಕರಿಸಿದ. ನಂತರ ಪ್ರಯಾಣಿಕರು ವಿಮಾನ ಅಧಿಕಾರಿಗಳಿಗೆ ದೂರು ನೀಡಿದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಬೇರೆ ಸೀಟುಗಳು ಲಭ್ಯವಿಲ್ಲ ಎಂದು ಪ್ರಯಾಣಿಕರು ತನ್ನ ಸ್ವಂತ ಸೀಟಿಗೆ ಹಿಂತಿರುಗುವಂತೆ ಒತ್ತಾಯಿಸಿದರು. ಮೂತ್ರ ವಿಸರ್ಜನೆಗೊಂಡಿದ್ದ ಸೀಟಿನ ಮೇಲೆ ಶೀಟ್‌ಗಳಿಂದ ವೃದ್ಧೆಯನ್ನು ಕೂರಿಸಲು ಅಧಿಕಾರಿಗಳು ಯತ್ನಿಸಿದ್ದಾರೆ. ಆದರೆ ಅದೇ ಸೀಟಿನಲ್ಲಿ ಕುಳಿತುಕೊಳ್ಳುವುದಿಲ್ಲ ಎಂದು ಹಠ ಹಿಡಿದ ಪ್ರಯಾಣಿಕನಿಗೆ ಅಧಿಕಾರಿಗಳು ಮತ್ತೊಂದು ಸೀಟು ನೀಡಿದರು. ವಿಮಾನ ಸಿಬ್ಬಂದಿಯ ಬೇಜವಾಬ್ದಾರಿ ವರ್ತನೆಯ…

Read More

ತುಮಕೂರು: ಜಿಲ್ಲೆಯ ತುರುವೇಕೆರೆಯಲ್ಲಿ ಇಂದು ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಿತು. ಕಾರ್ಯಕ್ರಮದಲ್ಲಿ ಮಾಜಿ ಸಿಎಂ, ವಿಪಕ್ಷನ ನಾಯಕ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಮಧು ಬಂಗಾರಪ್ಪ, ಮಾಜಿ ಸಚಿವರಾದ ಟಿ.ಬಿ. ಜಯಚಂದ್ರ, ಶಾಸಕರಾದ ರಾಜೇಂದ್ರ, ಬೈರತಿ ಸುರೇಶ್, ನಾಗರಾಜ ಯಾದವ್, ಮಾಜಿ ಶಾಸಕರಾದ ರಾಜಣ್ಣ, ಷಡಕ್ಷರಿ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು. ತುರುವೇಕೆರೆಗೆ ಆಗಮಿಸಿದ ಸಂದರ್ಭದಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಜನರು ಸೇಬು, ಜೋಳ, ಕೊಬ್ಬರಿ, ಕಂಬಳಿ ಹಾರಗಳನ್ನು ಹಾಕುವ ಮೂಲಕ ಕಾಂಗ್ರೆಸ್ ನಾಯಕರಿಗೆ ಆತ್ಮೀಯ ಸ್ವಾಗತ ಕೋರಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಪಾವಗಡ: ತಾಲೂಕಿನ ಯನ್ನಾ ಹೊಸಕೋಟೆ ಗ್ರಾಮದ ಸಂತೆಬೀದಿ ರಸ್ತೆಯಲ್ಲಿರುವ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ಸೋಮವಾರದಂದು ವೈಕುಂಠ ಏಕಾದಶಿಯನ್ನು ವೈಭವದಿಂದ ಆಚರಿಸಲಾಯಿತು. ಮುಂಜಾನೆಯಿಂದಲೇ ಭಕ್ತಾಧಿಗಳು ದೇವರ ದರ್ಶನ ಪಡೆದರು. ಹಬ್ಬದ ಹಿನ್ನೆಲೆಯಲ್ಲಿ ದೇವರಿಗೆ ತುಳಸಿ ಮತ್ತು ಹೂವಿನ ವಿಶೇಷ ಅಲಂಕಾರ, ಪಂಚಾಮೃತ ಅಭಿಷೇಕ ಮಾಡಲಾಗಿತ್ತು. ಭಜನೆ ಕೀರ್ತನೆ ನೆರವೇರಿದವು. ಭಕ್ತರಿಗೆ ಲಾಡು ಪ್ರಸಾದ ವಿನಿಯೋಗ ಮಾಡಲಾಯಿತು. ಈ ಸಂದರ್ಭದಲ್ಲಿ ಅರ್ಚಕರಾದ ರಾಮದಾಸು, ಧರ್ಮದರ್ಶಿಗಳಾದ ಹೆಚ್.ಆರ್.ಶ್ರೀನಿವಾಸಮೂರ್ತಿ, ಹೆಚ್.ಆರ್.ಗೋಪಾಲ್, ಅನಿಲ್ ಕುಮಾರ್ ಇದ್ದರು. ವರದಿ: ನಂದೀಶ್ ನಾಯ್ಕ್, ಪಾವಗಡ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಪಾಲಕ್ಕಾಡ್ ವಾಳಯಾರ್ ನಲ್ಲಿ ಮೀನು ಸಾಗಿಸುತ್ತಿದ್ದ ಗಾಡಿಯಲ್ಲಿ ಗಾಂಜಾ ವಶಪಡಿಸಿಕೊಳ್ಳಲಾಗಿದ್ದು, ಅಬಕಾರಿ ತಂಡ ನಡೆಸಿದ ತಪಾಸಣೆಯಲ್ಲಿ ಗಾಂಜಾ ಸಾಗಿಸುತಿರುವುರು ಬೆಳಕಿಗೆ ಬಂದಿದೆ.ಈ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಇಬ್ಬರು ತಮಿಳುನಾಡು ಮೂಲದ ಆರೋಪಿಗಳನ್ನು ಬಂಧಿಸಿದ್ದಾರೆ. ಪಾಲಕ್ಕಾಡ್ ಅಬಕಾರಿ ಇಂಟೆಲಿಜೆನ್ಸ್ ಬ್ಯೂರೋ ಇನ್ಸ್‌ಪೆಕ್ಟರ್ ನೌಫಲ್ ಅವರಿಗೆ ದೊರೆತ ಗೌಪ್ಯ ಮಾಹಿತಿಯ ಆಧಾರದ ಮೇಲೆ ವಾಲಾಯರ್‌ನಲ್ಲಿ ತಪಾಸಣೆ ನಡೆಸಲಾಯಿತು. ಆಂಧ್ರಪ್ರದೇಶದಿಂದ ಕೋಝಿಕ್ಕೋಡ್‌ಗೆ ಮೀನು ತುಂಬಿಕೊಂಡು ಬರುತ್ತಿದ್ದ ಲಾರಿಯಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ನಡೆದಿದೆ. ಮೀನಿನ ಪೆಟ್ಟಿಗೆಗಳ ನಡುವೆ ಪೊಟ್ಟಣಗಳಲ್ಲಿ ಇರಿಸಲಾಗಿದ್ದ 156 ಕೆಜಿ ಗಾಂಜಾವನ್ನು ಅಬಕಾರಿ ತಂಡ ವಶಪಡಿಸಿಕೊಂಡಿದ್ದಾರೆ. ಲಾರಿಯಲ್ಲಿದ್ದ ತಮಿಳುನಾಡಿನ ಅಕ್ಕೂರು ಮೂಲದ ಮರಿಮುತ್ತು, ಮಾಯಿಲತುಂಪರೆ ಮೂಲದ ಸೆಲ್ವನ್‌ ಇದ್ದರು. ಅವರ ಬಂಧನವನ್ನು ದಾಖಲಿಸಲಾಗಿದೆ. ಕೋಝಿಕ್ಕೋಡ್ ಗೆ ಲಾರಿಯನ್ನು ಹಸ್ತಾಂತರಿಸುವ ಪ್ರಸ್ತಾವನೆ ಇತ್ತು ಎಂದು ಬಂಧಿತರು ತಿಳಿಸಿದ್ದಾರೆ. ಈ ಪ್ರಕರಣದ ಇತರೆ ಆರೋಪಿಗಳ ಬಗ್ಗೆ ಹಾಗೂ ಯಾರಿಗಾಗಿ ಗಾಂಜಾ ಸಾಗಾಟ ಮಾಡಲಾಗಿದೆ ಎಂಬ ಬಗ್ಗೆ ಅಬಕಾರಿ ಇಲಾಖೆ ತನಿಖೆ ಆರಂಭಿಸಿದೆ. ಐಬಿ ಪ್ರಿವೆಂಟಿವ್ ಅಧಿಕಾರಿಗಳಾದ ವಿಶ್ವನಾಥ್,…

Read More

ಕೊರಟಗೆರೆ: ‘ಹುಲಿಬೇಟೆ’ ಚಿತ್ರವು ಇದೇ  ಶುಭ ಶುಕ್ರವಾರದಂದು ರಾಜ್ಯಾದ್ಯಂತ ಏಕಕಾಲದಲ್ಲಿ 30 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು  ಚಿತ್ರತಂಡವು ಹೇಳಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಚಿತ್ರತಂಡ, ಕೊರೊನ ಎಂಬ ಮಹಾಮಾರಿಯಿಂದ ಹುಲಿ ಬೇಟೆ ಚಿತ್ರೀಕರಣ ಅರ್ಧಕ್ಕೆ ನಿಲ್ಲಿಸಲಾಗಿತ್ತು.  ಇದೀಗ  ಚಿತ್ರೀಕರಣ ಸಂಪೂರ್ಣ ಮುಕ್ತಾಯವಾಗಿದ್ದು,  ಇದೇ  ಶುಭ ಶುಕ್ರವಾರದಂದು ರಾಜ್ಯದ್ಯಂತ ಏಕಕಾಲದಲ್ಲಿ 30 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ ಎಂದು ತಿಳಿಸಿದರು. ಸ್ಥಳೀಯ ಪ್ರತಿಭೆಗಳು ನಿರ್ಮಿಸಿ ನಟಿಸಿರುವ ಈ ಚಿತ್ರವನ್ನು  ಚಿತ್ರಮಂದಿರದಲ್ಲೇ ನೋಡಿ ಸ್ಥಳೀಯ ಪ್ರತಿಭೆಗಳನ್ನು ಅರಸಿ ಆಶೀರ್ವದಿಸಿ  ಎಂದು  ಚಿತ್ರತಂಡದ ಕಲಾವಿದರು  ಕೇಳಿಕೊಂಡರು. ಹುಲಿಬೇಟೆ ಚಿತ್ರದ ನಾಯಕ  ವಿಶ್ವನಾಥ್ ಚೌಹಾಣ್  ಮಾತನಾಡಿ, ಹುಲಿ ಬೇಟೆ ಚಿತ್ರವು ರಾಯರ ಸನ್ನಿಧಾನದಲ್ಲಿ ಮುಹೂರ್ತವನ್ನು ಮುಗಿಸಿ ಕೊರಟಗೆರೆ ಸೇರಿದಂತೆ  ರಾಜ್ಯದ ವಿವಿಧ ಭಾಗಗಳಲ್ಲಿ ಚಿತ್ರೀಕರಿಸಿದ್ದು, ಹುಲಿ ಬೇಟೆ ಚಿತ್ರವು ತುಂಬಾ ಅದ್ಭುತವಾಗಿ ಮೂಡಿ ಬಂದಿದ್ದು, ಈ ಚಿತ್ರವು  ಸಂಪೂರ್ಣ ಸಂಸಾರಿಕ ಹಾಗೂ ಪ್ರೀತಿ ವಾತ್ಸಲ್ಯದ  ಚಿತ್ರವಾಗಿದ್ದು ಚಿತ್ರ ನೋಡುವ ವೀಕ್ಷಕರಿಗೆ ಸಂಪೂರ್ಣ ಇಷ್ಟವಾಗುತ್ತದೆ ಎಲ್ಲರೂ ಚಿತ್ರಮಂದಿರದಲ್ಲಿ ಚಿತ್ರವನ್ನು…

Read More

ಬಹ್ರೇನ್‌ ನಲ್ಲಿ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಭಿಕ್ಷುಕನಿಗೆ ಮೇಲ್ಮನವಿ ನ್ಯಾಯಾಲಯ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಸೆಪ್ಟೆಂಬರ್‌ನಲ್ಲಿ, ಭಿಕ್ಷುಕರನ್ನು ಬಂಧಿಸುವ ಜಂಟಿ ಪ್ರಯತ್ನದ ಭಾಗವಾಗಿ ಮುಹರಕ್‌ನ ಖಲಾಲಿಗೆ ಆಗಮಿಸಿದ್ದ ಗಸ್ತು ತಂಡದಲ್ಲಿದ್ದ ಪೊಲೀಸರ ಮೇಲೆ ದಾಳಿ ನಡೆಸಲಾಯಿತು. ಜೈಲು ಶಿಕ್ಷೆಯ ನಂತರ ಆರೋಪಿಯನ್ನು ಗಡಿಪಾರು ಮಾಡಲಾಗುವುದು. ಕಳೆದ ಸೆಪ್ಟೆಂಬರ್‌ನಲ್ಲಿ ಈ ಘಟನೆ ನಡೆದಿದೆ. ಆರೋಪಿ ಮಸೀದಿಯೊಂದರ ಮುಂದೆ ನಿಂತಿರುವುದನ್ನು ಕಂಡ ಪೊಲೀಸರು ಆತನನ್ನು ಬಂಧಿಸಲು ಮುಂದಾದರು. ಆದರೆ ಅನುಮಾನಗೊಂಡ ಭಿಕ್ಷುಕ ಅಧಿಕಾರಿ ಬರುವುದನ್ನು ಕಂಡು ಓಡಿ ಹೋಗಲು ಯತ್ನಿಸಿದ್ದಾನೆ. ಆರೋಪಿಯನ್ನು ತಡೆದರೂ ಪೊಲೀಸರಿಗೆ ಥಳಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ. ಪೇದೆಯನ್ನು ಆರೋಪಿಯನ್ನು ಬಗ್ಗುಬಡಿದಿದ್ದಾರೆ. ಮೇಲ್ಮನವಿ ನ್ಯಾಯಾಲಯವು ಆರೋಪಿಯನ್ನು ಒಂದು ವರ್ಷದವರೆಗೆ ಜೈಲಿನಲ್ಲಿರಿಸಿ ನಂತರ ದೇಶದಿಂದ ಶಾಶ್ವತವಾಗಿ ಗಡೀಪಾರು ಮಾಡುವ ಮೊದಲ ನಿದರ್ಶನ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More