Subscribe to Updates
Get the latest creative news from FooBar about art, design and business.
- ಸಿದ್ದರಬೆಟ್ಟ ಶ್ರೀಮಠದ 20ನೇ ವರ್ಷದ ಮಹೋತ್ಸವಕ್ಕೆ ಭರದ ಸಿದ್ಧತೆ: ಜೂ.21 ರಂದು ಧರ್ಮ ಜಾಗೃತಿ ಮತ್ತು ಉಚಿತ ಸಾಮೂಹಿಕ ವಿವಾಹ, “ಸಿದ್ಧಶ್ರೀ ಪ್ರಶಸ್ತಿ” ಪ್ರದಾನ
- ತುಮಕೂರು: ಝಾನ್ಸಿ ರಾಣಿ ಲಕ್ಷ್ಮೀಬಾಯಿ ಪುಣ್ಯಸ್ಮರಣೆ; ಮಹಿಳಾ ಶಕ್ತಿಯ ಪ್ರತೀಕ: ಎನ್.ಕೆ. ನಿಧಿ ಕುಮಾರ್
- ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ
- ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!
- ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ
- ಬೀದರ್: ಬೀಜ ವಿತರಣೆಯಲ್ಲಿ ರೈತರಿಗೆ ವಂಚನೆ
- ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್, ಲೇಖನಿ ಸಾಮಗ್ರಿ ವಿತರಣೆ
- ರದ್ದಾದ ಪತ್ರಿಕೆಗಳ ಶೀರ್ಷಿಕೆಗಳ ಮರುಸ್ಥಾಪನೆಗೆ ದಂಡ ಪಾವತಿಸಲು ಜೂನ್ 30 ಕೊನೆಯ ದಿನ
Author: admin
ಸರಗೂರು: ಪಟ್ಟಣದ ಒಂದನೇ ಮುಖ್ಯ ರಸ್ತೆಯ ಎಸ್ ಬಿಐ ಬ್ಯಾಂಕ್ ಪಕ್ಕದಲ್ಲಿರುವ ಅಂಚೆ ಕಚೇರಿ ಮುಂಭಾಗದಲ್ಲಿ ಖಾತೆದಾರರು ಹಾಗೂ ಪ್ರಗತಿಪರ ಸಂಘಟನೆಗಳು ಅಂಚೆ ಇಲಾಖೆ ಅಧಿಕಾರಿಗಳು ಹಾಗೂ ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಿದರು. ಆರ್ಯ ಈಡಿಗ ಸಮಾಜದ ತಾಲ್ಲೂಕು ಅಧ್ಯಕ್ಷ ಎಸ್.ಎನ್.ನಾಗರಾಜು ಮಾತನಾಡಿ, ಖಾತೆದಾರರ ಹಣವನ್ನು ಲೂಟಿ ಮಾಡಿರುವ ವ್ಯಕ್ತಿ ಯಾವುದೇ ಕ್ರಮ ಕೈಗೊಳ್ಳದೇ ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ. ಇಲಾಖೆ ತನಿಖಾಧಿಕಾರಿಗಳು, ಆರು ತಿಂಗಳು ಕಳೆದರೂ ಇವರ ಮೇಲೆ ದೂರು ದಾಖಲಿಸಿಲ್ಲ, ಇವರು ಅಂಚೆ ಇಲಾಖೆ ಅಧಿಕಾರಿಗಳು ತಾರತಮ್ಯ ಮಾಡುತ್ತಿದ್ದಾರೆ ದೂರಿದರು. ಖಾತೆದಾರಿಗೆ ಹಣವನ್ನು ವರ್ಗಾವಣೆ ಮಾಡಿಲ್ಲ ಎಂದಾದರೆ ಪಟ್ಟಣವನ್ನು ಬಂದ್ ಮಾಡಿಸಿ ನಂತರ ಅಂಚೆ ಕಚೇರಿಗೆ ಬೀಗ ಜಡಿದು ಮುತ್ತಿಗೆ ಹಾಕುವ ಮೂಲಕ ನಿರಂತರವಾಗಿ ಪ್ರತಿಭಟನೆ ನಡೆಸಲಾಗುವುದು. ಖಾತೆದಾರರು ಎಲ್ಲಾ ವಯಸ್ಸಾದವರಿಗೆ ಏನಾದರೂ ಸಮಸ್ಯೆಯಾದರೆ ಅಂಚೆ ಇಲಾಖೆ ಅಧಿಕಾರಿಗಳೇ ನೇರ ಹೊಣೆ ಎಂದು ಕಿಡಿಕಾರಿದ್ದರು. ವಯಸ್ಸಾರು ತಮ್ಮ ಜೀವನಕ್ಕೆ ಇಟ್ಟುಕೊಂಡಿದ್ದ ಹಣವನ್ನು ಅಂಚೆ ಕಚೇರಿ…
ಸರಗೂರು: ತಾಲೂಕಿನ ಹಂಚೀಪುರ ಹಾಗೂ ಹೆಗ್ಗನೂರು ಸಮೀಪ ಆಗಾಗ್ಗೆ ಕಾಣಿಸಿಕೊಂಡು, ಜಾನುವಾರುಗಳನ್ನು ಬಲಿಪಡೆಯುವ ಮೂಲಕ ಅಕ್ಕಪಕ್ಕದ ಗ್ರಾಮಸ್ಥರಿಗೆ ತಲೆನೋವಾಗಿ ಪರಿಣಮಿಸಿದ್ದ ಹುಲಿಯನ್ನು ಮಂಗಳವಾರ ಬೆಳಗಿನ ಜಾವ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಮಂಗಳವಾರ ಬೆಳಗ್ಗಿನ ಜಾವ 3 ಗಂಟೆ ಸಮಯದಲ್ಲಿ ಹೆಗ್ಗನೂರು ಸಮೀಪದ ದೇವಲಾಪುರದ ಪುರದಶೆಡ್ಡು ಬಳಿಯ ಅಳಗಂಚಿ ವಲಯದ ಕಾಡಂಚಿನ ಭಾಗದ ಜಮೀನೊಂದರಲ್ಲಿ ಹುಲಿ ಇರುವ ಖಚಿತ ಮಾಹಿತಿ ಮೇರಿಗೆ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆಯ ಸಿಬ್ಬಂದಿ ಸುಮಾರು 6–7 ವರ್ಷದ ಗಂಡು ಹುಲಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ಒಂದು ತಿಂಗಳಿನಿಂದ ಹಂಚೀಪುರ ಹಾಗೂ ಹೆಗ್ಗನೂರು ವ್ಯಾಪ್ತಿಯ ಗ್ರಾಮಗಳಲ್ಲಿ ಜಾನುವಾರುಗಳನ್ನು ಈ ಹುಲಿ ಬಲಿ ಪಡೆಯುತ್ತಿತ್ತು ಎನ್ನಲಾಗಿದೆ. ಅಲ್ಲದೇ ವಾರದ ಹಿಂದಷ್ಟೇ ಈ ಹುಲಿ ಸಂಚಾರ ಮಾಡಿದ ಫೋಟೋಗಳು ಅರಣ್ಯ ಇಲಾಖೆಯ ಕ್ಯಾಮೆರಾಗೆ ಸೆರೆಯಾಗಿತ್ತು. ಹುಲಿ ಚಿತ್ರ ನೋಡಿ ಆತಂಕಗೊಂಡ ಗ್ರಾಮಸ್ಥರು ಹುಲಿಯನ್ನು ಸೆರೆ ಹಿಡಿಯುವಂತೆ ಆಗ್ರಹಿಸಿದ್ದರು. ಹಂಚೀಪುರದಲ್ಲಿ ರಸ್ತೆ ತಡೆದು ಪ್ರತಿಭಟನೆಯನ್ನೂ ನಡೆಸಿದ್ದರು. ಸ್ಥಳೀಯರ ಒತ್ತಾಯಕ್ಕೆ…
ಕೊರಟಗೆರೆ: ತಾಲ್ಲೂಕಿನ ದಾಸಾಲುಕುಂಟೆ ಸಮೀಪದ ಬೆಟ್ಟದ ಶಂಭೋನಹಳ್ಳಿಯ ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ಡಿ.1, 2 ರಂದು ಶ್ರೀ ಹನುಮ ಜಯಂತಿ ಹಾಗೂ ದೇವಾಲಯದ 17 ನೇ ವರ್ಷದ ವಾರ್ಷಿಕೋತ್ಸವ ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ ಸ್ವಾಮಿಯ ಉತ್ಸವ ಹಾಗೂ 2ನೇ ವರ್ಷದ ಸೀತಾರಾಮ ಕಲ್ಯಾಣೋತ್ಸವ ಹಮ್ಮಿಕೊಳ್ಳಲಾಗಿದ್ದು, ಭಕ್ತರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ ಎಂದು ದೇವಸ್ಥಾನ ಸಮಿತಿಯವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ಭಾರತ್ ಸ್ಕೌಟ್ ಮತ್ತು ಗೈಡ್ಸ್ ರಾಜ್ಯ ಉಪಾಧ್ಯಕ್ಷರು (ಗೈಡ್), ಹಾಗೂ ಜಿಲ್ಲಾ ಮುಖ್ಯ ಆಯುಕ್ತರಾದ ಆಶಾ ಪ್ರಸನ್ನ ಕುಮಾರ್ ರವರು ಸ್ಕೌಟ್ ಸಂಸ್ಥೆಯಲ್ಲಿ ಸಕ್ರಿಯವಾಗಿ ಸತತ 35 ವರ್ಷಗಳಿಂದ ವಿವಿಧ ಹುದ್ದೆಗಳನ್ನು ಅಲಂಕರಿಸಿ ಸ್ಕೌಟ್ಸ್ ಸಂಸ್ಥೆಯ ಕಾರ್ಯ ಚಟುವಟಿಕೆಗಳು, ಬೆಳವಣಿಗೆಗಳು ಮತ್ತು ರಾಷ್ಟ್ರ, ರಾಜ್ಯ, ಜಿಲ್ಲಾ ಮಟ್ಟದ ಕಾರ್ಯಕ್ರಮಗಳಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ರಾಷ್ಟ್ರ ಸಂಸ್ಥೆಯವರು ರಾಷ್ಟ್ರಮಟ್ಟದ ಸಿಲ್ವರ್ ಸ್ಟಾರ್ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆಯುವ 75 ರಾಷ್ಟ್ರೀಯ ಜಾಂಬೂರಿಯಲ್ಲಿ ನ.26ರಂದು ರಾಜ್ಯಭವನದಲ್ಲಿ ರಾಜ್ಯಪಾಲರಾದ ಆನಂದಿ ಬೆನ್ ಪಟೇಲ್ ರವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಈ ವೇಳೆ ಆಶಾ ಪ್ರಸನ್ನ ಕುಮಾರ್ ಅವರನ್ನು ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್. ಸಿಂಧ್ಯಾ ಅಭಿನಂದಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಕನ್ನಡಿಗರು ಕಾನೂನನ್ನು ರೂಪಿಸಿ ನೀತಿ ಯೋಜನೆ ಜಾರಿಗೆ ತರಬೇಕು : ಚೇತನ್ ಅಹಿಂಸಾ ನೆಲಮಂಗಲ : ಪಟ್ಟಣದ ಶ್ರೀ ಪವಾಡ ಬಸವಣ್ಣ ದೇವರ ಮಠದ ಆವರಣದಲ್ಲಿ ಕರ್ನಾಟಕ ರಣಧೀರರ ವೇದಿಕೆಯ 6ನೇ ವರ್ಷದ ವೈಭವ ಕನ್ನಡ ರಾಜ್ಯೋತ್ಸವ ಹಾಗೂ ತಾಯಿ ಭುವನೇಶ್ವರಿಯ ಹಬ್ಬ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ 2025 ರ ಹೊಯ್ಸಳ ವಿಶಿಷ್ಟ ಸೇವಾ ಪ್ರಶಸ್ತಿ ಸಮಾರಂಭವು ನಡೆಯಿತು. ತಾಯಿ ಭುವನೇಶ್ವರಿಯನ್ನು ಬೆಳ್ಳಿ ಪಲ್ಲಕ್ಕಿಯಲ್ಲಿ ಕೂರಿಸಿ ಪಟ್ಟಣದ ರಾಜ ಬೀದಿಗಳಲ್ಲಿ ವಿವಿಧ ಸಾಂಸ್ಕೃತಿಕ ಕಲಾತಂಡಗಳೊಂದಿಗೆ ಮೆರವಣಿಗೆ ಮಾಡಲಾಯಿತು. ನಂತರ ಶ್ರೀ ಪವಾಡ ಬಸವಣ್ಣ ದೇವರ ಮಠದ ಆವರಣದಲ್ಲಿ ವೇದಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಅದ್ದೂರಿ ಕಾರ್ಯಕ್ರಮವನ್ನು ಶ್ರೀ ಪವಾಡ ಬಸವಣ್ಣ ದೇವರ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ಸಿದ್ದಲಿಂಗ ಮಹಾ ಸ್ವಾಮಿಜಿ, ಕುಂಚಿಟಿಗರ ಮಹಾಸಂಸ್ಥಾನ ಎಲೆರಾಂಪುರ ಮಠದ ಶ್ರೀ ಶ್ರೀ ಹನುಮಂತನಾಥ ಸ್ವಾಮೀಜಿ, ವನಕಲ್ಲು ಮಹಾಸಂಸ್ಥಾನ ಮಠದ ಶ್ರೀ ಶ್ರೀ ಬಸವ ರಮಾನಂದ ಸ್ವಾಮೀಜಿಗಳು ದೀಪ ಬೆಳಗುವ ಮೂಲಕ…
ತುಮಕೂರು: ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಧಾನಮಂತ್ರಿ ಮತ್ಸ ಸಂಪದ ಯೋಜನೆಯ ಧರ್ತಿ ಆಭಾ ಜನ ಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಯಡಿ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ ಹಾಗೂ ಜೀವಂತ ಮೀನು ಮಾರಾಟ ಮಳಿಗೆಗಾಗಿ ಸಹಾಯಧನ ಸೌಲಭ್ಯ ಕಲ್ಪಿಸಲು ಮೀನುಗಾರಿಕೆಯಲ್ಲಿ ತೊಡಗಿರುವ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕು ದೊಡ್ಡ ಎಣ್ಣೆಗೆರೆ ಗ್ರಾಮ ಪಂಚಾಯತಿಯ ದೊಡ್ಡಹುಲ್ಲೇನಹಳ್ಳಿ, ಮತ್ತಿಘಟ್ಟ ಗ್ರಾಪಂ, ಮಾದಾಪುರ, ಬರಕನಾಳು ಗ್ರಾಪಂ, ಹಂದಿಗನಾಡು ಹಾಗೂ ರಾಮನಹಳ್ಳಿ ಗ್ರಾಪಂ, ಜಾಣೇಹಾ, ಶಿರಾ ತಾಲ್ಲೂಕು ರಾಮಲಿಂಗಪುರ ಗ್ರಾಪಂ, ಕುಂಬಾರಹಳ್ಳಿ, ಮಾರಗೊಂಡನಹಳ್ಳಿ, ಗೋಪಾಲದೇವರಹಳ್ಳಿ ಗ್ರಾಪಂ, ಬಟ್ಟಿಗಾನಹಳ್ಳಿ ಸಿದ್ಧಕೋಣ, ಚಿನ್ನೇನಹಳ್ಳಿ ಗ್ರಾಪಂ, ಜೋಡಿದೇವರಹಳ್ಳಿ, ಸಲುಪರಹಳ್ಳಿ: ಪಾವಗಡ ತಾಲ್ಲೂಕು ಪೋತಗಾನಹಳ್ಳಿ ಗ್ರಾಪಂ. ದಳವಾಯಿಹಳ್ಳಿ, ಹೊಸದುರ್ಗ, ಚಿಕ್ಕನಹಳ್ಳಿ ಗ್ರಾಪಂ, ಹನುಮನಬೆಟ್ಟ, ರಂಗಸಮುದ್ರ ಗ್ರಾ.ಪಂ. ರಂಗಸಮುದ್ರ, ಬೆಳ್ಳಿಬಟ್ಟು, ಮರಿದಾಸನಹಳ್ಳಿ ಗ್ರಾಪಂ. ಹನುಮಂತನಹಳ್ಳಿ, ನ್ಯಾಯದಗುಂಟೆ ಗ್ರಾಪಂ. ಹೊಟ್ಟೆಬೊಮ್ಮನಹಳ್ಳಿ, ಮಧುಗಿರಿ ತಾಲ್ಲೂಕು ಹೊಸಕೆರೆ ಗ್ರಾಪಂ, ಬಸವನಹಳ್ಳಿ, ಚಿಕ್ಕದಾಳವಟ್ಟ ಗ್ರಾ.ಪಂ. ವಿಟ್ಲಾಪುರ, ಕೊಡಿಗೇನಹಳ್ಳಿ ಗ್ರಾಪಂ, ಗುಟ್ಟೆ, ಸಿಂಗನಹಳ್ಳಿ ಗ್ರಾ.ಪಂ.…
ತುಮಕೂರು: ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತು, ಸ್ವತಂತ್ರ ಸಂವಿಧಾನ ರಚನೆ ಮಾಡಿಕೊಂಡರೂ ನಗರಗಳು ಮಾತ್ರ ಸ್ವಚ್ಛವಾಗಿಲ್ಲ. ಸಂವಿಧಾನದ ಆಶಯದ ಅಡಿಯಲ್ಲಿ ಕೊಳೆಗೇರಿಗಳು ನವನಗರ ಆಗಬೇಕೆಂದು ತುಮಕೂರು ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನ ರಸಾಯನಶಾಸ್ತ್ರ ಪ್ರಾಧ್ಯಾಪಕ ಪ್ರೊ ಪ್ರಕಾಶ್ ಎಂ. ಶೇಟ್ ತಿಳಿಸಿದರು. ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣ ಸಮಿತಿ ಹಾಗೂ ತುಮಕೂರು ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜು ಕನ್ನಡ ವಿಭಾಗದ ಸಹಯೋಗದಲ್ಲಿ ಆಯೋಜಿಸಲಾಗಿದ್ದ `ಮನ-ಮನೆಗೂ ಸಂವಿಧಾನ ಕುರಿತು ಸಂವಾದ ಕಾರ್ಯಕ್ರಮ’ವನ್ನು ಸೋಮವಾರ ಉದ್ಘಾಟಿಸಿದರು. ಕೊಳಗೇರಿ ಎಂಬುದು ಭೌತಿಕವಾಗಿ ಮಾತ್ರವಲ್ಲದೆ, ಮಾನಸಿಕವಾಗಿಯೂ ಬದಲಾಗಬೇಕು. ಸಂವಿಧಾನದ ಆಶಯದ ಅಡಿಯಲ್ಲಿ ತಾರತಮ್ಯ ರಹಿತ ಸಮ ಸಮಾಜವನ್ನು ಕಟ್ಟಬೇಕು. ಹಾಗಾಗಿ ಈ ಮನ ಸಂವಿಧಾನ ಕಾರ್ಯಕ್ರಮ ಚಾಲನೆಯಾಗಿದೆ. ಅದರ ಅನುಕೂಲವನ್ನು ಪ್ರತಿಯೊಬ್ಬರು ಪಡೆದುಕೊಂಡು ಸಂವಿಧಾನವನ್ನು ಅರ್ಥೈಸಿಕೊಳ್ಳಬೇಕು. ಹಾಗಾದರೆ ಮಾತ್ರ ಸಂವಿಧಾನಕ್ಕೆ ಸಂವಿಧಾನ ರಚನಕಾರರಿಗೆ ನಾವು ನೀಡುವ ಗೌರವವಾಗುತ್ತದೆ ಎಂದು ತಿಳಿಸಿದರು. ಪ್ರಾಸ್ತಾವಿಕ ಮಾತುಗಳನ್ನಾಡಿದ ಕನ್ನಡ ಸಹಪ್ರಾಧ್ಯಾಪಕ ಡಾ. ನಾಗಭೂಷಣ ಬಗ್ಗನಡು, ಭಾರತದಲ್ಲಿ 3600 ಕ್ಕೂ ಅಧಿಕ ಜಾತಿಗಳಿವೆ. ಸಾಕಷ್ಟು…
ತುಮಕೂರು: ಕನ್ನಡ ರಾಜ್ಯೋತ್ಸವ ಆಚರಣೆ ಅಂಗವಾಗಿ ಕರ್ನಾಟಕ ಜನಸೈನ್ಯ ಸಂಘಟನೆಯಿಂದ ಒಂದು ಸಾವಿರ ಜನ ಆಟೋ, ಆಂಬುಲೆನ್ಸ್ ಹಾಗೂ ಟ್ಯಾಕ್ಸಿ ಚಾಲಕರಿಗೆ ಉಚಿತವಾಗಿ 10 ಲಕ್ಷ ರೂ. ಮೌಲ್ಯದ ಅಪಘಾತ ವಿಮಾ ಸೌಲಭ್ಯ ನೀಡಲಾಗುತ್ತಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ರಕ್ಷಿತ್ ಕರಿಮಣ್ಣೆ ತಿಳಿಸಿದ್ದಾರೆ. ನ.30ರಂದು ನಗರದ ಭದ್ರಮ್ಮ ವೃತ್ತದಲ್ಲಿ ಬೆಳಿಗ್ಗೆ 10:30ಕ್ಕೆ ಜನಸೈನ್ಯದಿಂದ ಕನ್ನಡ ರಾಜ್ಯೋತ್ಸವ ಏರ್ಪಡಿಸಲಾಗಿದೆ. ಸಿದ್ಧಗಂಗಾ ಮಠದ ಸಿದ್ಧಲಿಂಗಸ್ವಾಮೀಜಿಗಳು, ಹಿರೇಮಠದ ಡಾ. ಶಿವಾನಂದ ಶಿವಾಚಾರ್ಯ ಸ್ವಾಮೀಜಿಗಳ ದಿವ್ಯಸಾನಿಧ್ಯದ ಈ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಟಿ.ಆರ್.ರೇವಣ್ಣ ಕನ್ನಡ ಧ್ವಜಾರೋಹಣ ನೆರವೇರಿಸುವರು. ಸಂಘದ ರಾಜ್ಯಾಧ್ಯಕ್ಷ ಡಾ.ಕೆ.ಎರಿಸ್ವಾಮಿ ಅಧ್ಯಕ್ಷತೆವಹಿಸುವರು ಎಂದು ಹೇಳಿದ್ದಾರೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕೇಂದ್ರ ಸಚಿವ ವಿ.ಸೋಮಣ್ಣ, ಶಾಸಕ ಜಿ.ಬಿ.ಜ್ಯೋತಿಗಣೇಶ್, ಮುಖಂಡರಾದ ಎನ್.ಗೋವಿಂದರಾಜು, ಮುರಳಿಧರ ಹಾಲಪ್ಪ, ಇಟ್ಬಾಲ್ ಅಹ್ಮದ್, ನಗರಪಾಲಿಕೆ ಆಯುಕ್ತ ಅಶ್ವಿಜ, ಎಸ್ಪಿಕೆ.ವಿ.ಅಶೋಕ್, ಡಿವೈಎಸ್ ಪಿ ಚಂದ್ರಶೇಖರ್ ಮತ್ತಿತರರು ಅತಿಥಿಗಳಾಗಿ ಭಾಗವಹಿಸುವರು ಎಂದು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ನವೆಂಬರ್ 26ರಂದು ಜಿಲ್ಲಾ ಮಟ್ಟದ ಭಾರತ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 9:30 ಗಂಟೆಗೆ ನಗರದ ಟೌನ್ ಹಾಲ್ ನಲ್ಲಿರುವ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಗುವುದು. ದಿನಾಚರಣೆ ಪ್ರಯುಕ್ತ ಕಲಾ ತಂಡಗಳೊಂದಿಗೆ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ನಂತರ ಬೆಳಿಗ್ಗೆ 11:30 ಗಂಟೆಗೆ ಎಂಪ್ರೆಸ್ ಕಾಲೇಜು ಆಡಿಟೋರಿಯಂನಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಉದ್ಘಾಟಿಸುವರು. ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ವಾದಿ ಚಿಂತಕರು ಮತ್ತು ಸಾಮಾಜಿಕ ಹೋರಾಟಗಾರ ವಿ.ಎಲ್.ನರಸಿಂಹಮೂರ್ತಿ ಅವರು ಸಂವಿಧಾನ ದಿನಾಚರಣೆ ಕುರಿತು ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಸ್. ಕೃಷ್ಣಪ್ಪ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ತುಮಕೂರು: ತಂಬಾಕು ಸೇವನೆಯ ದುಷ್ಪರಿಣಾಮಗಳನ್ನು ಅರಿತು ಯುವಜನರು ಅವುಗಳ ಸೇವನೆಯಿಂದ ದೂರವಿರುವಂತೆ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ತುಮಕೂರು ಇದರ ಸಲಹೆಗಾರರಾದ ಹರೀಶ್ ಕರೆ ನೀಡಿದರು. ನಗರದ ಬಾಲಕರ ಸ.ಪ.ಪೂ.ಕಾಲೇಜಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಯೋಜಿಸಿದ್ದ ತಂಬಾಕು ಮುಕ್ತ ಯುವ ಅಭಿಯಾನ 3.0 ಅಡಿ, ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತಂಬಾಕು ಸೇವನೆಯಿಂದ ಶ್ವಾಸಕೋಶ, ಬಾಯಿ, ಗಂಟಲು, ಗರ್ಭಕೋಶ ಮೊದಲಾದ ಕ್ಯಾನ್ಸರ್ ರೋಗಗಳಿಗೆ ತುತ್ತಾಗಿ ಯುವ ಜನರು ಜೀವವನ್ನು ಕಳೆದುಕೊಳ್ಳುತ್ತಿರುವುದು ವಿಷಾದನೀಯವೆಂದರು. ಅದರಲ್ಲೂ 22% ಜನರು ಗುಟ್ಕಾ, ಪಾನ್ ಪರಾಗ್, ಜರ್ದಾ, ಹನ್ಸ್, ಬೀಡಾ, ಸಿಗರೇಟ್ ಮೊದಲಾದವುಗಳನ್ನು ಬಳಸುತ್ತಿರುವುದು ಸಮೀಕ್ಷೆಯಿಂದ ದೃಢಪಟ್ಟಿದೆ. ಆರೋಗ್ಯಕ್ಕೆ ಹಾನಿಕರವಾದ ಇಂತಹ ದುಶ್ಚಟಗಳಿಗೆ ಹೆಚ್ಚು ಯುವಕರು ಬಲಿಯಾಗುತ್ತಿದ್ದಾರೆ. ಆದ ಕಾರಣ ಯುವ ಜನತ ಎಚ್ಚೆತ್ತುಕೊಂಡು ದುಶ್ಚಟಗಳಿಂದ ಮುಕ್ತರಾಗಲು ಸಲಹೆ ನೀಡಿದರು. ಪ್ರಾಂಶುಪಾಲರಾದ ಎಂ.ಡಿ.ಶಿವಕುಮಾರ್ ಅಧ್ಯಕ್ಷೀಯ ನುಡಿಗಳನ್ನಾಡುತ್ತಾ, ವಿದ್ಯಾರ್ಥಿಗಳು ತಂಬಾಕು ಉತ್ಪನ್ನಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳನ್ನು ಅರಿತು ಜೀವನದಲ್ಲಿ ಒಳ್ಳೆಯ ಅಭ್ಯಾಸಗಳನ್ನು ರೂಢಿಸಿಕೊಂಡು ಆರೋಗ್ಯಕರ…