Author: admin

ಬೆಂಗಳೂರು: ದ್ವಿತೀಯ ಪಿಯುಸಿ ತರಗತಿಯ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ನವೆಂಬರ್ 29ರಂದು ನಡೆಸಲು ಉದ್ದೇಶಿಸಲಾಗಿದ್ದ ರಾಜ್ಯಮಟ್ಟದ ಮಧ್ಯ ವಾರ್ಷಿಕ ಪರೀಕ್ಷೆಯನ್ನು ಮುಂದೂಡುವ ಸಾಧ್ಯತೆ ಇದೆ ಎನ್ನಲಾಗಿದೆ. ವರದಿಗಳ ಪ್ರಕಾರ,  ಪರೀಕ್ಷೆಯನ್ನು ಆತುರದಲ್ಲಿ ನಡೆಸಲಾಗುತ್ತಿದೆ, ಯಾವುದೇ ಪೂರ್ವಭಾವಿ ಸಿದ್ಧತೆಗಳನ್ನು ಕೈಗೊಳ್ಳದೆ ಅವೈಜ್ಞಾನಿಕವಾಗಿ ನಡೆಸಲಾಗುತ್ತಿದೆ ಎಂದು ವಿಧಾನ ಪರಿಷತ್ ನ ಬಿಜೆಪಿ ಸದಸ್ಯರು ಸೇರಿದಂತೆ ಹಲವು ಸಂಘಟನೆಗಳ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಪರೀಕ್ಷೆ ಮುಂದೂಡುವ ಬಗ್ಗೆ ಚರ್ಚೆಗಳಾಗಿವೆ. ಮುಂದೂಡುವ ಸಾಧ್ಯತೆಗಳಿವೆ. ಈ ಬಗ್ಗೆ ಗುರುವಾರ ಸ್ಪಷ್ಟವಾದ ನಿರ್ಧಾರ ಕೈಗೊಂಡು ಸುತ್ತೋಲೆ ಹೊರಡಿಸಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕಿ ಆರ್.ಸ್ನೇಹಲ್ ತಿಳಿಸಿದ್ದಾರೆ ಎಂದು ವರದಿಯಾಗಿದೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ಹುಣಸೆಹಳ್ಳಿ: ಶಾಸಕ ಡಾ.ಸಿ.ಎಂ.ರಾಜೇಶ್ ಗೌಡರವರು ಇಂದು ಹುಣಸೆಹಳ್ಳಿ ಪಂಚಾಯತ್ ನಾರಾಯಣ ಪುರ ಚೆಕ್ ಡ್ಯಾಮ್ ತುಂಬಿದ್ದು  ಗಂಗಾಪೂಜೆ ಮಾಡಿ ಭಾಗಿನ ಅರ್ಪಿಸಿದರು. ಇದೇ ವೇಳೆ ಗ್ರಾಮಸ್ಥರು ಅದ್ದೂರಿ ಸ್ವಾಗತದೊಂದಿಗೆ ಮಹಿಳೆಯರು ಆರತಿ ಬೆಳಗುವ ಮುಖಾಂತರ ಶಾಸಕರಿಗೆ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಗ್ರಾ. ಪಂ. ಅಧ್ಯಕ್ಷರು ಹನುಮಂತರಾಯಪ್ಪ, ಗ್ರಾ.ಪಂ.ಸದಸ್ಯರು ಆನಂದಪ್ಪ, ಹರೀಶ್, ಮೋಹನ್ ಗೌಡ, ಶಶಿದರ್, ನಾಗರಾಜ್, ಹುಣಸೆಹಳ್ಳಿ ಮಾಜಿ ಗ್ರಾ.ಪಂ. ಅಧ್ಯಕ್ಷರು ನಾಗರಾಜ್, ಟ್ರಜರಿ ನಾಗರಾಜ್,ಪ್ರಕಾಶ್ ಗೌಡ, ಮದ್ದೇವಳ್ಳಿ ನಾಗರಾಜ್, ಚಂಗಾವರ ಮಾರಣ್ಣ, ಹೊಸೂರು ಗ್ರಾ.ಪಂ.ಸದಸ್ಯ ಪ್ರಕಾಶ್, ಹೊಸೂರು ಕರಿಯಣ್ಣ ಹಾಗೂ  ಅನೇಕ ಮುಖಂಡರು ಕಾರ್ಯಕರ್ತರು ಗ್ರಾಮಸ್ಥರು ನೂರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ತುಮಕೂರು: ಜಿಲ್ಲೆಯ ಕುಣಿಗಲ್ ತಾಲ್ಲೂಕು ಕಗ್ಗೆರೆ ತಪ್ಪೋ ಕ್ಷೇತ್ರದಲ್ಲಿ ನಡೆದ ಜಿಲ್ಲಾಮಟ್ಟದ ಪತ್ರಕರ್ತರ ಕಾರ್ಯಗಾರ ಹಿರಿಯ ಪತ್ರಕರ್ತರಿಗೆ ಸನ್ಮಾನ ಸಮಾರಂಭದಲ್ಲಿ ತಿಪಟೂರಿನ ಈ ಸಂಜೆ ಪತ್ರಿಕೆ ಹಿರಿಯ ಪತ್ರಕರ್ತರಾದ ಹಾಗೂ ಕಿರುತೆರೆ ನಟ ದಯಾ ಸಾಗರ್ ಇವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಚಿವರಾದ ಸಿ.ಮಾಧುಸ್ವಾಮಿ ಕಾರ್ಯನಿರತ ಪತ್ರಕರ್ತ ಸಂಘದ ರಾಜ್ಯಾಧ್ಯಕ್ಷ ತುಮಕೂರು ಜಿಲ್ಲಾಧ್ಯಕ್ಷ ಚೀನಿ ಪುರುಷೋತ್ತಮ್ ಶಾಸಕ ಮಸಾಲೆ ಜಯರಾಮ್ ಹಾಜರಿದ್ದರು ಹಾಜರಿದ್ದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ಹೆಚ್.ಡಿ,ಕೋಟೆ: ಹಂಸಲೇಖರವರ ಬಗ್ಗೆ ಅವಹೇಳನಾಕಾರಿ ಹೇಳಿಕೆ  ನೀಡಿರುವ ಸಂಸದ ಪ್ರತಾಪಸಿಂಹ ಮತ್ತು ಮೀರಾ ರಾಘವೇಂದ್ರ ವಿರುದ್ಧ ಕೋಟೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರವರಿಂದ ಮಿನಿ ವಿಧಾನಸೌಧ  ಪ್ರತಿಭಟನೆ ನಡೆಸಿತು. ಹೆಚ್.ಡಿ.ಕೋಟೆ ತಾಲ್ಲೂಕಿನ ಮಿನಿ ವಿಧಾನಸೌಧ ಮುಂಭಾಗದಲ್ಲಿ ದಲಿತ ಸಂಘರ್ಷ ಸಮಿತಿ( ಅಂಬೇಡ್ಕರ್ ವಾದ) ಕೋಟೆ ಮತ್ತು ಸರಗೂರು ತಾಲ್ಲೂಕು ಸಮಿತಿದಿಂದ  ಪ್ರತಿಭಟನೆ ನಡೆಸಿದರು. ಡಾ.ಹಂಸಲೇಖರಂತಹ  ಸಾಧಕನೊಬ್ಬ ಬಹಿರಂಗವಾಗಿ ದಲಿತರ ಪರ ಮಾತನಾಡಿರುವುದು ಶೇಕಡ 2% ಜನವಿರುವ ಶಿಷ್ಯ ವೃಂದಕ್ಕೆ ನೋವುವಾಗಿದೆ ಅಷ್ಟೇ . ಆದರೂ ಸಹ ಹಂಸಲೇಖ ರವರು ಈಗಾಗಲೇ ಬಹಿರಂಗವಾಗಿ ಕ್ಷಮೆ ಯಾಚಿಸಿದ್ದಾರೆ. ಆದರೂ ಅವರ ವಿರುದ್ಧ  ಟೀಕೆಗಳನ್ನು ಮಾಡುತ್ತಿರುವುದು ದುರಂತ ಎಂದು ಜಿಲ್ಲಾ ಸಂಘಟನಾ ಸಂಚಾಲಕರಾದ ಚಾ.ಶಿವಕುಮಾರ್  ಹೇಳಿದರು. ಹಂಸಲೇಖ ಅವರನ್ನು  ತೇಜೋವಧೆ ಮಾಡುವ ಮೂಲಕ ಅಶಾಂತಿ ಉಂಟು ಮಾಡುತ್ತಿರುವ ಸಂಸದ ಪ್ರತಾಪಸಿಂಹ ಹಾಗೂ ಮೀರಾ ರಾಘವೇಂದ್ರ ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ತಾಲ್ಲೂಕು ಸಂಚಾಲಕರಾದ ಸಣ್ಣಕುಮಾರ್  ಒತ್ತಾಯಿಸಿದರು. ನಾದಬ್ರಹ್ಮ  ಮಹಾ ಮಾನವತಾವಾದಿ…

Read More

ತುಮಕೂರು: ಸ್ಯಾಂಡಲ್ ವುಡ್ ಫಿಲಂ ಇನ್ಸ್ಟಿಟ್ಯೂಟ್ ವತಿಯಿಂದ ತುಮಕೂರು ಸರಸ್ವತಿಪುರಂ ನಲ್ಲಿ ಪುನೀತ್ ನುಡಿ ನಮನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಪ್ಪು ನೆನಪಿಗಾಗಿ ಪುನೀತ್ ರಾಜ್ ಕುಮಾರ್ ಅಭಿನಯದ ಚಿತ್ರ ಗೀತೆಗಳು ಹಾಡಲಾಯಿತು. ಗುಲಾಮಗಿರಿ ಚಿತ್ರದ ನಾಯಕ ಟೈಗರ್ ನಾಗ್ ಅವರು “ಆ.. ದೇವರ ಹಾಡಿದು ನಮ್ಮಂತೆ ಎಂದು ಇರದು” ಎಂಬ ಗೀತೆ ಹಾಡುವ ಮೂಲಕ ಗೌರವ ಸಲ್ಲಿಸಿದರು.  ಕಾರ್ಯಕ್ರಮ ಸಂಸ್ಥಾಪಕ ಆನಂದ್, ಟೈಗರ್ ನಾಗ್, ಸುರೇಶ್, ಮಂಜುನಾಥ, ಸೂಪೀಯ, ಅರುಂಧತಿ ಲಾಲ್, ದಿನೇಶ್ ರಾಜ್, ರಂಗಣ್ಣ ಮೊದಲಾದವರು ಈ ಸಂದರ್ಭದಲ್ಲಿದ್ದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ಬೆಂಗಳೂರು:  ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಅಪಾರ್ಟ್ ಮೆಂಟ್ ವೊಂದರ ಎರಡು ಫ್ಲ್ಯಾಟ್ ಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಫ್ಲ್ಯಾಟ್ ಗಳು ಹೊತ್ತಿ ಉರಿದಿವೆ. ಎಲೆಕ್ಟ್ರಾನಿಕ್ ಸಿಟಿಯ ವಸುಂಧರಾ ಲೇಔಟ್ ನ ಅಪಾರ್ಟ್ ಮೆಂಟ್ ನಲ್ಲಿ ವಿ ಮ್ಯಾಕ್ಸ್ ಚಾಲೇಟ್ ಅಪಾರ್ಟ್ ಮೆಂಟ್ ನಲ್ಲಿ ಈ ದುರಂತ ಸಂಭವಿಸಿದ್ದು, ಅಪಾರ್ಟ್ ಮೆಂಟ್ ನ ಎರಡು ಫ್ಲ್ಯಾಟ್ ಗಳು ಬೆಂಕಿಗಾಹುತಿಯಾಗಿವೆ. ಫ್ಲ್ಯಾಟ್ ನಲ್ಲಿದ್ದ ಪೀಠೋಪಕರಣಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು,ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ .ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ಸಿರಾ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬನವರಿಗೆ ಸಿರಾ ನಗರದ ಶ್ರೀ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪ ಸಂತೆಪೇಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಭಿನಂದನೆ ಸಲ್ಲಿಸಲಾಯಿತು. ಶಾಸಕರಾರ ಡಾ.ಸಿ.ಎಂ.ರಾಜೇಶ್ ಗೌಡ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಹರೇಕಳ ಹಾಜಬ್ಬನವರನ್ನು ಸನ್ಮಾನಿಸಿ ಗೌರವಿಸಿದರು.  ಹರೇಕಳ ಹಾಜಬ್ಬನವರು ಕಿತ್ತಳೆ ಹಣ್ಣಗಳನ್ನು ಮಾರಿ ತನ್ನ ಊರಾದ ದಕ್ಷಿಣ ಕನ್ನಡ ಜಿಲ್ಲೆಯ ಹರೇಕಳದ ಬಡ ಮಕ್ಕಳಿಗೆ ಒಂದು ಶಾಲೆಯನ್ನೇ ಕಟ್ಟಿಸಿದವರು. ಅವರ ಈ ಸಾಧನೆಗೆ ಪದ್ಮಶ್ರೀ ಪ್ರಶಸ್ತಿಗೆ ಅವರು ಪಾತ್ರರಾಗಿ, ರಾಷ್ಟ್ರಪತಿಗಳು ಪ್ರಶಸ್ತಿ ಪ್ರದಾನ ಮಾಡಿದ್ದರು. ಸಿರಾದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ವರ್ಧಮಾನ್ ಪಬ್ಲಿಕ್ ಶಾಲೆಯ ಸಂಜಯ್ ಕುಮಾರ್ ಕಪಿಲ್ ದೇವ್ ಮತ್ತು ಶಾಲಾ ಶಿಕ್ಷಕರು ಸಿಬ್ಬಂದಿ ವರ್ಗದವರು ಹಾಜರಿದ್ದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ರಾಮನಗರ: ಸಮತಾ ಸೈನಿಕ ದಳ ದಲಿತ ಮತ್ತು ಪ್ರಗತಿಪರ ಸಂಘಟನೆಗಳ ವತಿಯಿಂದ ಹಂಸಲೇಖರವರನ್ನು ಡಾ. ಗೋವಿಂದಯ್ಯರವರ ನೇತೃತ್ವದಲ್ಲಿ  ಬೆಂಬಲಿಸುವ ಕಾರ್ಯಕ್ರಮವನ್ನು ನಡೆಸಲಾಯಿತು. ಇತ್ತೀಚೆಗೆ ಹಂಸಲೇಖ ಅವರು ನೀಡಿರುವ ಸಾಮಾಜಿಕ ಕಳಕಳಿಯ ಹೇಳಿಕೆಯನ್ನು ಮುಂದಿಟ್ಟು ಕೊಂಡು ಅವರ ಹೆಸರಿಗೆ ಮಸಿಬಳಿಯುವ ಪ್ರಯತ್ನ ನಡೆಸುತ್ತಿರುವ ಬಗ್ಗೆ ಸಂಘಟನೆಯ ಮುಖಂಡರು ಇದೇ ಸಂದರ್ಭದಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ಇನ್ನೂ ರಾಮನಗರ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ, ಹಂಸಲೇಖರವರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ಜಿಲ್ಲೆಯ ನೂರಾರು ಮುಖಂಡರು ಭಾಗವಹಿಸಿದ್ದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ಲಕ್ಷ್ಮೀಪುರ: ಹೆಚ್.ಡಿ.ಕೋಟೆ ತಾಲ್ಲೂಕಿನ ನೂಲ್ಲುಕುಪ್ಪೇ ಗ್ರಾಪಂ ವ್ಯಾಪ್ತಿಯ ಲಕ್ಷ್ಮೀಪುರ ಹಾಡಿಯಲ್ಲಿ ಜನರ ಸಂಕಷ್ಟದ ಬಗ್ಗೆ ‘ನಮ್ಮ ತುಮಕೂರು ಡಾಟ್ ಕಾಂ’ ವರದಿಯ ಬೆನ್ನಲ್ಲೇ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆದಿದ್ದಾರೆ. ಲಕ್ಷ್ಮೀಪುರ ಹಾಡಿಗೆ ಆಗಮಿಸಿದ ಹಿಂದುಳಿದ ವರ್ಗದ ಅಧಿಕಾರಿಗಳು ಹಾಡಿಯ ಜನರ ಸಂಕಷ್ಟಗಳನ್ನು ಆಲಿಸಿದರು. ಲಕ್ಷ್ಮೀಪುರ ಹಾಡಿಯಲ್ಲಿ ಜನರನ್ನು ಕೇಳುವವರ್ಯಾರು ಎಂಬ ವರದಿಯ ಬೆನ್ನಲ್ಲೇ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More

ತುಮಕೂರು: ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಭಾರೀ ಮಳೆಯಾಗಿದ್ದು, ಸಾಕಷ್ಟು ಸಂಖ್ಯೆಯಲ್ಲಿ ಕೆರೆ, ಕಟ್ಟೆಗಳು ಭರ್ತಿಯಾಗಿವೆ. ಪಾವಗಡ, ಶಿರಾ, ತಿಪಟೂರು ತಾಲ್ಲೂಕುಗಳನ್ನು ಹೊರತುಪಡಿಸಿದರೆ ಉಳಿದೆಡೆ ಮಳೆ ಬಿರುಸಾಗಿತ್ತು. ಕೊರಟಗೆರೆ, ತುಮಕೂರು, ಗುಬ್ಬಿ, ಕುಣಿಗಲ್, ತುರುವೇಕೆರೆ, ಮಧುಗಿರಿ ಭಾಗದಲ್ಲಿ ಭಾರಿ ಮಳೆಯಾಗಿದ್ದು, ಕೊರಟಗೆರೆ ತಾಲ್ಲೂಕಿನ ತೀತಾ ಬಳಿ 40 ವರ್ಷಗಳ ಹಿಂದೆ ಅಣೆಕಟ್ಟು ನಿರ್ಮಿಸಲಾಗಿತ್ತು.ಬಳಿಕ ಕೊಡಿಗೇನಹಳ್ಳಿ ಭಾಗಕ್ಕೆ ನೀರು ಹರಿಯುವುದು ಕಡಿಮೆಯಾಗಿತ್ತು. ಮಳೆ ಕಡಿಮೆಯಾದ ಕಾರಣ ನದಿ ಹರಿಯದೆ ಬರಡಾಗಿತ್ತು. ಪ್ರಮುಖ ನದಿಗಳಾದ ಸುವರ್ಣಮುಖಿ ನದಿ ಕೂಡ 15 ದಿನಗಳಿಂದ ತುಂಬಿ ಹರಿಯುತ್ತಿದೆ. ತಿಪಟೂರಿನಲ್ಲಿ 72 ಗಂಟೆಯಲ್ಲಿ ಸುಮಾರು 79 ಮಿ.ಮೀ ಮಳೆ ಬಿದ್ದಿದ್ದು ತಾಲ್ಲೂಕಿನ ಗಂಗನಘಟ್ಟದ ಶಿಂಶಾ ನದಿಯೂ ತುಂಬಿ ಹರಿಯುತ್ತಿದೆ. ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com ವಾಟ್ಸಾಪ್ ಗ್ರೂಪ್ ಸೇರಿ: https://chat.whatsapp.com/E7Brl0d8zXCJogP6c6GRcZ ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

Read More