Subscribe to Updates
Get the latest creative news from FooBar about art, design and business.
- SIR ಪ್ರಕ್ರಿಯೆಯಲ್ಲಿ ಭಾಗವಹಿಸಿದ ಸಿಎಂ ಡಿ.ಕೆ. ಶಿವಕುಮಾರ್!
- 10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ನಿರಾಕರಣೆ, ನೊಂದು ಶಾಲೆಯಲ್ಲೇ ತಾಯಿ ವಿಷ ಸೇವನೆ..!
- ಚಪ್ಪಲಿ ಎಸೆತ ಪ್ರಕರಣ: ಸಿದ್ದರಾಮಯ್ಯ ಮುಂದೆ ಕಣ್ಣೀರು ಹಾಕಿದ ಶಾಸಕ ಪ್ರದೀಪ್ ಈಶ್ವರ್!
- ದಲಿತರಿಂದ ಮಲಗುಂಡಿ ಸ್ವಚ್ಛಗೊಳಿಸಿದ ಕೃತ್ಯ: ಡಿಸಿಎಂ ಪರಮೇಶ್ವರ್ ರಾಜೀನಾಮೆಗೆ ಬಿಜೆಪಿ ಎಸ್ ಸಿ ಮೋರ್ಚಾ ಒತ್ತಾಯ
- ಸಮಸ್ಯೆಯನ್ನು ಆಲಿಸಲು ಪ್ರತಿನಿತ್ಯ ಪೋತಿ ಖಾತೆ ಅಭಿಯಾನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
- ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ
- ಇಂದಿರಾ ಗಾಂಧಿ ವಸತಿ ಶಾಲೆ ದುರವಸ್ಥೆ: ಅಧಿಕಾರಿಗಳ ನಿರ್ಲಕ್ಷ್ಯ ಕಂಡು ವಿದ್ಯಾರ್ಥಿಗಳು, ಪೋಷಕರು ಕಂಗಾಲು
- ನಮ್ಮ ತುಮಕೂರು ಫಲಶ್ರುತಿ: ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣ: ಸಫಾಯಿ ಕರ್ಮಚಾರಿಗಳ ಆಯೋಗ ಸ್ಥಳಕ್ಕೆ ಭೇಟಿ
Author: admin
ತಂಪಾಗಿಸಲು ನಾವು ನೀರನ್ನು ಫ್ರಿಜ್ನಲ್ಲಿ ಇಡುತ್ತೇವೆ. ನಾವು ಐಸ್ ಕ್ರೀಮ್ ಕೂಡ ಇಡುತ್ತೇವೆ. ಅಲ್ಲದೆ ಫ್ರಿಜ್ ನಲ್ಲಿ ತರಕಾರಿ ಮತ್ತು ಹಣ್ಣುಗಳನ್ನು ಇಡುವುದರಿಂದ ತಾಜಾತನದಿಂದ ಕೂಡಿರುತ್ತದೆ. ಆದರೆ ಫ್ರಿಜ್ನಲ್ಲಿ ತಾಪಮಾನವನ್ನು ಹೊಂದಿಸುವಲ್ಲಿ ನಾವು ತಪ್ಪು ಮಾಡುತ್ತೇವೆ. ಪರಿಣಾಮವಾಗಿ ಫ್ರಿಜ್ನ ಶೀತದಿಂದ ತರಕಾರಿಗಳು ಹಾಳಾಗುತ್ತವೆ ಎಂದು ತಜ್ಞರು ಸಲಹೆ ನೀಡುತ್ತಾರೆ. ಗ್ರಾಹಕರು ಫ್ರಿಜ್ನಲ್ಲಿನ ತಾಪಮಾನವನ್ನು ಹೆಚ್ಚಿಸುವ ಅಥವಾ ಕಡಿಮೆ ಮಾಡುವತ್ತ ಗಮನಹರಿಸಬೇಕು. 37 ಮತ್ತು 40 ಫ್ಯಾರನ್ಹೀಟ್ ನಡುವಿನ ರೆಫ್ರಿಜರೇಟರ್ ತಾಪಮಾನವು ಚಳಿಗಾಲ ಅಥವಾ ಬೇಸಿಗೆಯಲ್ಲಿ ಉತ್ತಮವಾಗಿರುತ್ತದೆ. ಫ್ರೀಜರ್ನಲ್ಲಿ ತಾಪಮಾನವನ್ನು ಯಾವಾಗಲೂ ಶೂನ್ಯ ಫ್ಯಾರನ್ಹೀಟ್ನಲ್ಲಿ ಇರಿಸಬೇಕು. ಕೆಲವರು ರಾತ್ರಿ ಮಲಗುವಾಗ ಫ್ರಿಜ್ ಆಫ್ ಮಾಡುತ್ತಾರೆ. ಹೀಗೆ ಮಾಡುವುದರಿಂದ ಫ್ರಿಜ್ ನಲ್ಲಿರುವ ಆಹಾರ ಪದಾರ್ಥಗಳು ಕೆಡುವುದಿಲ್ಲ ಎಂದು ಭಾವಿಸುತ್ತಾರೆ. ಆದರೆ ಇಲ್ಲಿ ದೊಡ್ಡ ತಪ್ಪು ನಡೆಯುತ್ತಿದೆ. ಫ್ರಿಜ್ ಆಫ್ ಮಾಡಿ ಬಾಗಿಲು ಮುಚ್ಚುವುದರಿಂದ ಸ್ವಲ್ಪ ಸಮಯದ ನಂತರ ಫ್ರಿಜ್ ಒಳಗಿನ ತಾಪಮಾನ ಹೆಚ್ಚಾಗುತ್ತದೆ. ಪರಿಣಾಮವಾಗಿ ಫ್ರಿಜ್ನಲ್ಲಿರುವ ಪದಾರ್ಥಗಳು ಹಾಳಾಗುತ್ತವೆ. ಅಲ್ಲದೇ…
ತೆಲುಗು, ತಮಿಳು ಭಾಷೆಗಳಲ್ಲಿ ಹಲವು ಚಿತ್ರಗಳಲ್ಲಿ ನಟಿಸಿ ಉತ್ತಮ ನಟನಾಗಿ ಗುರುತಿಸಿಕೊಂಡಿದ್ದ ಶರತ್ ಬಾಬು ಅನಾರೋಗ್ಯಕ್ಕೆ ತುತ್ತಾಗಿದ್ದರು. ಚೆನ್ನೈನಲ್ಲಿ ನೆಲೆಸಿರುವ ಅವರು ಕೆಲ ದಿನಗಳಿಂದ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉತ್ತಮ ಚಿಕಿತ್ಸೆಗಾಗಿ ಕುಟುಂಬಸ್ಥರು ಶುಕ್ರವಾರ ಹೈದರಾಬಾದ್ಗೆ ಕರೆತಂದಿದ್ದಾರೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸ್ಥಿತಿ ಚಿಂತಾಜನಕವಾಗಿದ್ದು, ಐಸಿಯುನಲ್ಲಿ ವೆಂಟಿಲೇಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಖಲಿಸ್ತಾನ್ ನಾಯಕ ಮತ್ತು ‘ವಾರಿಸ್ ಪಂಜಾಬ್ ದೇ’ ಮುಖ್ಯಸ್ಥ ಅಮೃತ್ ಪಾಲ್ ಸಿಂಗ್ ಬಂಧನ. ಪಂಜಾಬ್ನ ಮೋಗಾ ಪೊಲೀಸರ ಮುಂದೆ ಶರಣಾಗಿದ್ದಾನೆ ಎಂದು ವರದಿಯಾಗಿದೆ. ಅಮೃತ್ ಪಾಲ್ ಸಿಂಗ್ ಅವರನ್ನು ವಿಚಾರಣೆ ನಡೆಸಲಾಗುತ್ತಿದೆ. ಅಮೃತ್ ಪಾಲ್ ಸಿಂಗ್ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪೊಲೀಸರಿಗೆ ಬೇಕಾಗಿದ್ದ ಅಮೃತಪಾಲ್ ಸಿಂಗ್ ಅವರ ಎಂಟು ಮಂದಿ ಸಹಾಯಕರನ್ನು ಈಗಾಗಲೇ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಈತ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಹಲವು ದಿನಗಳಿಂದ ಪಂಜಾಬ್ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಅಮೃತಪಾಲ್ ಅವರ ಅನುಯಾಯಿ ಲೋಕಪ್ರೀತ್ ತೂಫಾನ್ ಅವರನ್ನು ಪಂಜಾಬ್ ಪೊಲೀಸರು ಈ ವರ್ಷದ ಫೆಬ್ರವರಿಯಲ್ಲಿ ಬಂಧಿಸಿದ್ದರು. ಇದಾದ ಬಳಿಕ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ನಮ್ಮತುಮಕೂರು ವಿಶೇಷ ಸುದ್ದಿ ತುಮಕೂರು : ಸಿದ್ದಗಂಗಾ ಮಠ ದಲ್ಲಿ ನಡೆಯುತ್ತಿರುವ ಸಭಾ ಕಾರ್ಯಕ್ರಮದಲ್ಲಿ ಮಠದ ಉತ್ತರಾಧಿಕಾರಿಗೆ ನೂತನ ಅಭಿದಾನ ನೀಡಲಾಗಿದ್ದು ಸಿದ್ದಗಂಗಾ ಮಠದ ಉತ್ತರಾಧಿಕಾರಿಯಾಗಿ ಶ್ರೀ ಶಿವಸಿದ್ದೇಶ್ವರವಸ್ವಾಮೀಜಿ(ಪೂರ್ವಾಶ್ರಮದ ಹೆಸರು ಮನೋಜ್ ಕುಮಾರ್) ಎಂದು ಘೋಷಣೆ ಮಾಡಲಾಯಿತು. ಅದೇ ರೀತಿ ಬಂಡೇ ಮಠದ ಉತ್ತರಾಧಿಕಾರಿಯಾಗಿ ಮಹಾಲಿಂಗ ಸ್ವಾಮೀಜಿ(ಪೂರ್ವಾಶ್ರಮದ ಹೆಸರು ಹರ್ಷ), ದೇವನಹಳ್ಳಿಯ ಬಸವ ಕಲ್ಯಾಣ ಮಠದ ಉತ್ತರಾಧಿಕಾರಿಯಾಗಿ ಸದಾಶಿವ ಸ್ವಾಮೀಜಿ( ಪೂರ್ವಾಶ್ರಮದ ಹೆಸರು ಗೌರೀಶ್ ಕುಮಾರ್) ಎಂದು ಸಭೆಯಲ್ಲಿ ವಿವಿಧ ಮಠಾಧ್ಯಕ್ಷರು ಹಾಗೂ ಮಠದ ಪ್ರಮುಖರು ಘೋಷಿಸಿದರು. ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲು ಸಿದ್ದಗಂಗಾ ಮಠದ ಆಡಳಿತ ಮಂಡಳಿ ನಿರ್ಧರಿಸಿತ್ತು. ನೂತನವಾಗಿ ಆಯ್ಕೆಯಾಗಿರುವ ಮೂವರಿಗೂ ಇಂದು ಉತ್ತರಾಧಿಕಾರಿ ಪಟ್ಟಾಭಿಷೇಕ ಮಾಡಲಾಯಿತು. ಸಿದ್ದಗಂಗಾ ಮಠದ ಆಡಳಿತ ಮಂಡಳಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇಂದು ಬಸವ ಜಯಂತಿ ಹಿನ್ನೆಲೆಯಲ್ಲಿ ಸಿದ್ದಗಂಗಾ ಮಠದಲ್ಲಿ ಆಯೋಜಿಸಲಾಗಿದ್ದ ಪಟ್ಟಾಭಿಷೇಕ ಕಾರ್ಯಕ್ರಮದಲ್ಲಿ ಶ್ರೀ ಮಠದ ಭಕ್ತಾದಿಗಳು, ಸಾರ್ವಜನಿಕರು ಹಾಗೂ ಹಿತೈಷಿಗಳು ಭಾಗಿಯಾಗಿದ್ದರು. ಬೆಳಿಗ್ಗೆಯಿಂದಲೇ ಶಿವಕುಮಾರ ಶ್ರೀ ಗಳ…
ಮಧುಗಿರಿ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಮುಸ್ಲಿಂ ಬಾಂಧವರು ಶನಿವಾರ ಈದ್-ಉಲ್- ಫಿತರ್ ಹಬ್ಬದ ಅಂಗವಾಗಿ ಶ್ರದ್ಧಾ–ಭಕ್ತಿಯಿಂದ ಸಾಮೂಹಿಕವಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಪಟ್ಟಣದ ಕಂಜೂಲ್ ಉಲೂಮ್ ಮದರಸಾ ಸಮೀಪದಲ್ಲಿರುವ ಈದ್ಗಾ ಮೈದಾನಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಮುಸ್ಲಿಂ ಬಾಂಧವರು ಲೋಕ ಕಲ್ಯಾಣಾರ್ಥವಾಗಿ ಸಾಮೂಹಿಕವಾಗಿ ನಮಾಜ್ ಮಾಡಿದರು. ಇದು ಇಸ್ಲಾಂ ಧರ್ಮದಲ್ಲಿ ಅತ್ಯಂತ ಮಹತ್ವದ ಹಬ್ಬಗಳಲ್ಲಿ ಒಂದಾಗಿದೆ. ಈ ದಿನದಂದು ಮುಸ್ಲಿಮರು ಉಪವಾಸವನ್ನು ಅಂತ್ಯಗೊಳಿಸುತ್ತಾರೆ. ಹೊಸ ಬಟ್ಟೆ ಧರಿಸುವುದು, ವಿಶೇಷ ಭಕ್ಷ್ಯಗಳನ್ನು ತಯಾರಿಸುವುದು, ದಾನ ಮಾಡುವುದು ಈ ಹಬ್ಬದ ವಿಶೇಷ. ಸಾಮೂಹಿಕ ಪ್ರಾರ್ಥನೆಯಲ್ಲಿ ನೂತನ ವಸ್ತ್ರಗಳನ್ನು ಧರಿಸಿ ನೂತನ ಟೋಪಿ, ಅರಬ್ ರಾಷ್ಟ್ರಗಳ ಮಾದರಿಯಲ್ಲಿ ರುಮಾಲು ಸುತ್ತಿದ್ದ ಚಿಣ್ಣರು, ಯುವಕರು ಎಲ್ಲರ ಗಮನ ಸೆಳೆದರು. ನಮಾಜ್ ಬಳಿಕ ಆಶೀರ್ವಚನ ನೀಡಿದ ಧರ್ಮಗುರುಗಳು, ದೇಶದಲ್ಲಿ ಉತ್ತಮ ಮಳೆ, ಬೆಳೆ ಆಗಬೇಕು. ವಿಶ್ವದಲ್ಲಿ ಶಾಂತಿ-ಸೌಹಾರ್ದತೆ ನೆಲೆ ನಿಲ್ಲಬೇಕು. ಈದ್ ಉಲ್ ಫಿತರ್ ಆಚರಣೆಯಿಂದ ಸಮಾಜದಲ್ಲಿ ಸೌಹಾರ್ದ, ಸಹನೆ, ಪರಸ್ಪರ ಪ್ರೀತಿ- ವಿಶ್ವಾಸ ವೃದ್ಧಿಯಾಗಬೇಕು. ಉಳ್ಳವರು ಬಡವರಿಗೆ…
ಜಮ್ಮು ಮತ್ತು ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಅವರನ್ನು ಸಿಬಿಐ ವಿಚಾರಣೆಗೆ ಕರೆದಿದೆ. ಈ ಪ್ರಕರಣವು ಜಮ್ಮು ಮತ್ತು ಕಾಶ್ಮೀರದಲ್ಲಿ ರಿಲಯನ್ಸ್ ವಿಮಾ ಹಗರಣಕ್ಕೆ ಸಂಬಂಧಿಸಿದೆ. ಸತ್ಯಪಾಲ್ ಮಲಿಕ್ ಈ ತಿಂಗಳ 28 ರಂದು ಸಿಬಿಐ ಮುಂದೆ ಹಾಜರಾಗಬೇಕು. ಇದೇ ವೇಳೆ, ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಹಾಗೂ ಬಿಜೆಪಿ ನಾಯಕ ಸತ್ಯಪಾಲ್ ಮಲಿಕ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಬಹಿರಂಗಪಡಿಸಿರುವ ಕುರಿತು ತನಿಖೆ ನಡೆಸುವಂತೆ ಶರತ್ ಪವಾರ್ ಆಗ್ರಹಿಸಿದ್ದಾರೆ. ಈ ಪ್ರಕರಣದಲ್ಲಿ ಇನ್ನೂ ಯಾವುದೇ ತನಿಖೆ ನಡೆದಿಲ್ಲ. ಸತ್ಯಪಾಲ್ ಮಲಿಕ್ ಆರೋಪ ಗಂಭೀರವಾಗಿದೆ. 40 ಯೋಧರು ಪ್ರಾಣ ಕಳೆದುಕೊಂಡಿದ್ದಾರೆ. ಸೇನೆಯು ವಿಮಾನವನ್ನು ಕೇಳಿದೆ ಆದರೆ ಅದನ್ನು ನಿರಾಕರಿಸಲಾಯಿತು ಎಂದು ಅವರು ಸೂಚಿಸಿದರು. ಪುಲ್ವಾಮಾ ಭಯೋತ್ಪಾದಕ ದಾಳಿಗೆ ಕೇಂದ್ರ ಗೃಹ ಸಚಿವಾಲಯದ ವೈಫಲ್ಯವೇ ಕಾರಣ ಮತ್ತು ಸರ್ಕಾರ ಮತ್ತು ಬಿಜೆಪಿಗೆ ಚುನಾವಣಾ ಲಾಭ ಪಡೆಯಲು ಭಯೋತ್ಪಾದನಾ ದಾಳಿಯನ್ನು ಬಳಸಲಾಗಿದೆ ಎಂದು ಸತ್ಯಪಾಲ್ ಮಲಿಕ್…
ಆಲ್ಡರ್ವುಡ್ ಮಾಲ್ನಲ್ಲಿರುವ ಆಪಲ್ ಸ್ಟೋರ್ನಲ್ಲಿ ಆಘಾತಕಾರಿ ಕಳ್ಳತನ ನಡೆದಿದೆ. ವಾಶ್ ರೂಂ ನಿಂದ ಸುರಂಗ ಮಾರ್ಗದ ಮೂಲಕ ಆ್ಯಪಲ್ ಸ್ಟೋರ್ ಪ್ರವೇಶಿಸಿದ ಕಳ್ಳರು 5 ಲಕ್ಷ ಡಾಲರ್ ಮೌಲ್ಯದ 436 ಐಫೋನ್ ಗಳನ್ನು ಕದ್ದೊಯ್ದಿದ್ದಾರೆ. ಅಂಗಡಿಯ ಸಮೀಪದಲ್ಲಿರುವ ಸಿಯಾಟಲ್ ಕಾಫಿ ಗೇರ್ ಕಾಫಿ ಅಂಗಡಿಗೆ ಇಬ್ಬರು ಕಳ್ಳರು ಬೀಗ ಮುರಿದು ಒಳ ನುಗ್ಗಿದ್ದಾರೆ. ಬಳಿಕ ಇಲ್ಲಿನ ಶೌಚಾಲಯದ ಗೋಡೆ ಒಡೆದು ಆ್ಯಪಲ್ ಸ್ಟೋರ್ ಗೆ ಸುರಂಗ ಮಾರ್ಗ ನಿರ್ಮಿಸಿದ್ದಾರೆ. ಹೀಗಾಗಿ ಕಳ್ಳರು ಅಂಗಡಿಗೆ ನುಗ್ಗಿದ್ದಾರೆ. ದರೋಡೆಯ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಕುರಿತು ವಿಸ್ತೃತ ತನಿಖೆ ನಡೆಯುತ್ತಿದ್ದು, ಶೀಘ್ರವೇ ಕಳ್ಳರನ್ನು ಬಂಧಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆ್ಯಪಲ್ ಸ್ಟೋರ್ ನ ಬಾಗಿಲು ಒಡೆದು ಹಾಕುವ ಯತ್ನ ನಡೆದರೆ ಅಲಾರಾಂ ಮೊಳಗುತ್ತದೆ ಎಂದು ಭಾವಿಸಿ ಸುರಂಗ ಮಾರ್ಗ ಮಾಡಿ ಕಳ್ಳತನಕ್ಕೆ ಯೋಜನೆ ರೂಪಿಸಲಾಗಿತ್ತು ಎಂದು ತೀರ್ಮಾನಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…
ಸವದತ್ತಿ: ಭಾರೀ ಕುತೂಹಲ ಕೆರಳಿಸಿದ್ದ ಸವದತ್ತಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ನಾಮಪತ್ರ ಅಂಗೀಕಾರವಾಗಿದೆ. ರತ್ನಾ ಮಾಮನಿ 2018ರ ಹಳೆಯ ಅಫಿಡವಿಟ್ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ವಿಶ್ವಾಸ ವೈದ್ಯ ಹಾಗೂ ಆಪ್ ಅಭ್ಯರ್ಥಿ ಬಾಪುಗೌಡ ಪಾಟೀಲ ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ 10 ಗಂಟೆಯಿಂದ ವಿಚಾರಣೆ ಆರಂಭವಾಗಿತ್ತು. ವಿಚಾರಣೆಯ ನಂತರ ಚುನಾವಣಾಧಿಕಾರಿ ಡಾ.ರಾಜೀವ ಕೊಲೇರ್ ತೀರ್ಪು ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಚಾಮರಾಜನಗರ: ಯಾವನ್ ರೀ ಅವನು ಪ್ರತಾಪ್ ಸಿಂಹ ಇಲ್ಲಿ ಯಾಕೆ ಬಂದು ಪ್ರಚಾರ ಮಾಡುತ್ತಿದ್ದಾರೆ. ಇದು ಚಾಮರಾಜನಗರ ಲೋಕಸಭಾ ಕ್ಷೇತ್ರ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಾಪ್ ಸಿಂಹ ಪ್ರತಿನಿಧಿಸುವ ಕ್ಷೇತ್ರ ವ್ಯಾಪ್ತಿಯಲ್ಲಿ ಅವರಿಗೆ ಸೋಲಿನ ಭಯ ಶುರುವಾಗಿದೆ. ಹೀಗಾಗಿ ಇಲ್ಲಿಗೆ ಬಂದು ಓಡಾಡುತ್ತಿದ್ದಾನೆ. ನನಗ್ಯಾಕೆ ಸೋಲಿನ ಭಯ. ಒಳ ಒಪ್ಪಂದ ಮಾಡಿಕೊಂಡವರು ಬಿಜೆಪಿ, ಜೆಡಿಎಸ್ನವರು. ಸಿಎಂ ಬಸವರಾಜ ಬೊಮ್ಮಾಯಿ ಅವರ ಕ್ಷೇತ್ರ ನೋಡಿಕೊಳ್ಳಿ. ನಾವು ಯಾರೊಂದಿಗೂ ಮೈತ್ರಿ ಮಾಡಿಕೊಂಡಿಲ್ಲ ಎಂದು ವಾಗ್ದಾಳಿ ನಡೆಸಿದರು. ವರುಣಾ ಕ್ಷೇತ್ರ ಮತದಾರರು ಹಿಂದೆಂದಿಗಿಂತಲೂ ಹೆಚ್ಚಿನ ಪ್ರೀತಿ ವಿಶ್ವಾಸ ತೋರಿಸುತ್ತಿದ್ದಾರೆ. ಆ ಕಾರಣ ಚುನಾವಣೆಯಲ್ಲಿ ಅಂತಹ ವ್ಯತ್ಯಾಸ ಕಾಣಿಸುತ್ತಿಲ್ಲ. 1978ರಿಂದಲೂ ನಾನು ವರುಣಾ ಹೋಬಳಿ ಪ್ರತಿನಿಧಿಸುತ್ತಿದ್ದೇನೆ. ಇಲ್ಲಿನ ಜನ ನನ್ನ ಮೇಲೆ ಪ್ರೀತಿ ಇರಿಸಿಕೊಂಡಿದ್ದಾರೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1…
ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕಾಂಗ್ರೆಸ್ ಆಡಳಿತ ಶೇ.200 ಖಚಿತ. ಮುಖ್ಯಮಂತ್ರಿ ಅಭ್ಯರ್ಥಿಯನ್ನು ಹೈಕಮಾಂಡ್ ನಿರ್ಧರಿಸುತ್ತದೆ. ಬಿಜೆಪಿ ನಾಯಕರು ನನ್ನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ಮಾತನಾಡಿದ ಡಿ.ಕೆ.ಶಿವಕುಮಾರ್, ಅಲ್ಪಸಂಖ್ಯಾತರ ಹಿತಾಸಕ್ತಿ ಕಾಪಾಡುವುದು ಕಾಂಗ್ರೆಸ್ ನ ಜವಾಬ್ದಾರಿಯಾಗಿದೆ. ಬಿಜೆಪಿ ನಾಯಕರು ತಮ್ಮ ವಿರುದ್ಧ ಸುಳ್ಳು ಭ್ರಷ್ಟಾಚಾರ ಆರೋಪ ಮಾಡುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕಚೇರಿ ಚುನಾವಣಾಧಿಕಾರಿಗಳಿಗೆ ಒತ್ತಡ ಹೇರುತ್ತಿದೆ ಎಂದು ಶಿವಕುಮಾರ್ ಆರೋಪಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy