Author: admin

ಸರಗೂರು:  ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸೋಮವಾರದಂದು ನ.26 ಸಂವಿಧಾನ ದಿನಾಚರಣೆ ಹಾಗೂ ಡಿ.6ರಂದು ಅಂಬೇಡ್ಕರ್ ಅವರ ಪರಿನಿರ್ವಾಣ ದಿನದ ಪೂರ್ವಭಾವಿ ತಹಶೀಲ್ದಾರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಸಂವಿಧಾನ ದಿನದ ಪೂರಕವಾಗಿ ಚರ್ಚಿಸಿದ ಆದಿಕರ್ನಾಟಕ ಮಹಾಸಭಾ  ಮಾಜಿ ಅಧ್ಯಕ್ಷ ಶಿವಣ್ಣ, ಟ್ರಸ್ಟ್ ಅಧ್ಯಕ್ಷ ನಾಗರಾಜು, ಸಣ್ಣಸ್ವಾಮಿ, ಗೋವಿಂದರಾಜು ಮಾತನಾಡಿ ಕಾರ್ಯಕ್ರಮ ಅತ್ಯಂತ ಅರ್ಥಪೂರ್ಣವಾಗಿ ಮತ್ತು ಸರ್ವ ಜನಾಂಗದ ಭಾಗವಹಿಸಿ ಮಾಡೋಣ ಪಟ್ಟಣದ ಮುಖ್ಯ ರಸ್ತೆಯಲ್ಲಿ  ಸಂವಿಧಾನ ರಥದ ಮೂಲಕ ಮೆರವಣಿಗೆ ಹೊರಟು ನಂತರ ಅಂಬೇಡ್ಕರ್ ಭವನದ ಆವರಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಸಿ ಅಲ್ಲಿ ನುರಿತರಿಂದ ಸಂವಿಧಾನ ಮಹತ್ವದ ಬಗ್ಗೆ ಉಪನ್ಯಾಸ ಮಾಡಿಸಬೇಕು ಎಂದರು. ತಹಶೀಲ್ದಾರ್ ಮೋಹನಕುಮಾರಿ ಮಾತನಾಡಿ, ಇದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಸಂವಿಧಾನ ಚೌಕಟ್ಟಿನಲ್ಲಿ ನಾವೆಲ್ಲರೂ ಕೆಲಸ ಮಾಡಬೇಕು, ಹಾಗಾಗಿ ಯಾವುದೇ ಗೊಂದಲವಾಗದಂತೆ ಎಲ್ಲರೂ ಎಚ್ಚರಿಕೆಯಿಂದ ಮತ್ತು ಅರ್ಥಪೂರ್ಣವಾಗಿ ಕಾರ್ಯಕ್ರಮ ನಡೆಸೋಣ ಮತ್ತೆ ಅಧಿಕಾರಿಗಳು ಯಾವುದೇ ಸಬೂಬು ಹೇಳದೆ ಕಾರ್ಯಕ್ರಮಕ್ಕೆ ಹಾಜರಾಗಬೇಕು ಮತ್ತು ಸಹಕಾರ ನೀಡಬೇಕು ಎಂದು ಎಚ್ಚರಿಸಿದರು. ಸಭೆಗೆ ಗೈರುಹಾಜರಿಯಾಗಿದ್ದ…

Read More

ತುಮಕೂರು: ಲಯನ್ ಮಾರ್ಷಲ್ ಆರ್ಟ್ಸ್ ಅಸೋಸಿಯೇಷನ್‌ ವತಿಯಿಂದ ವಿಶ್ವವಿದ್ಯಾಲಯದಲ್ಲಿ ಭಾನುವಾರ ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿ ಆಯೋಜಿಸಲಾಗಿತ್ತು. 15ಕ್ಕೂ ಹೆಚ್ಚು ರಾಜ್ಯಗಳ ಸುಮಾರು 1,200 ಕರಾಟೆ ಪಟುಗಳು ಭಾಗವಹಿಸಿದ್ದರು. ಸಬ್‌ ಜೂನಿಯರ್, ಜೂನಿಯರ್ ಮತ್ತು ಸಿನಿಯರ್ ವಿಭಾಗದಲ್ಲಿ ಬಾಲಕ, ಬಾಲಕಿಯರು ಪಂದ್ಯಗಳು ನಡೆದವು. ಎಲೆರಾಂಪುರದ ಕುಂಚಿಟಿಗ ಮಹಾಸಂಸ್ಥಾನ ಮಠದ ಹನುಮಂತನಾಥ ಸ್ವಾಮೀಜಿ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿ, ಮಕ್ಕಳಿಗೆ ಶಿಕ್ಷಣದ ಜತೆಗೆ, ಕಲೆ, ಸಾಹಿತ್ಯ, ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸಬೇಕು. ಇದರಿಂದ ಮಕ್ಕಳ ಸಮಗ್ರ ವಿಕಾಸ ಸಾಧ್ಯ ಎಂದು ಅಭಿಪ್ರಾಯಪಟ್ಟರು. ಕನ್ನಡ ಸೇನೆಯ ಜಿಲ್ಲಾ ಅಧ್ಯಕ್ಷ ಧನಿಯಾಕುಮಾರ್, ಗುರುಕುಲ ಗ್ರೂಪ್ ಆಫ್ ಇನ್‌ಸ್ಟಿಟ್ಯೂಟ್‌ ಅಧ್ಯಕ್ಷ ಟಿ.ಎಸ್‌.ಮಧು ಜೈನ್‌, ವಕೀಲರ ಸಂಘದ ಜಂಟಿ ಕಾರ್ಯದರ್ಶಿ ಹಿರೇಹಳ್ಳಿ ಮಹೇಶ್‌, ಕರಾಟೆ ಡೂ-ಟ್ರೈನಿಂಗ್ ಸ್ಕೂಲ್ ಅಧ್ಯಕ್ಷ ಪ್ರಕಾಶ್, ಲಯನ್ ಮಾರ್ಷಲ್ ಆರ್ಟ್ಸ್ ಅಸೋಸಿಯೇಷನ್‌ ಪ್ರಕಾಶ್, ವೀರಶೈವ ಬ್ಯಾಂಕ್ ಉಪಾಧ್ಯಕ್ಷ ಹೆಬ್ಬಾಕ ಮಲ್ಲಿಕಾರ್ಜುನಯ್ಯ, ಮುಖಂಡರಾದ ಹಿಮಾನಂದನ್‌, ನೇತಾಜಿ ಶ್ರೀಧರ್, ಬೆಳಗುಂಬ ಮಂಜುನಾಥ್, ಲೋಕೇಶ್ ಆಚಾರ್ಯ, ಟಿ.ಕೆ.ಆನಂದ್‌…

Read More

ತುಮಕೂರು: ನಗರದ ಸಿದ್ಧಗಂಗಾ ಮಠದಲ್ಲಿ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿ ಪುತ್ಥಳಿ ಪ್ರತಿಷ್ಠಾಪನಾ ಕಾರ್ಯಕ್ಕೆ ಭಾನುವಾರ ಭೂಮಿ ಪೂಜೆ ನೆರವೇರಿಸಲಾಯಿತು. ಸಿದ್ಧಗಂಗಾ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ 60 ವರ್ಷ ಯಶಸ್ವಿಯಾಗಿ ಮುಂದುವರಿದಿದೆ. ಇದರ ಪ್ರಯುಕ್ತ 8 ಅಡಿ ಎತ್ತರದ ಪುತ್ಥಳಿ ನಿರ್ಮಿಸಲಾಗುತ್ತಿದೆ. ಇದಕ್ಕಾಗಿ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನದ ಟ್ರಸ್ಟ್ ವತಿಯಿಂದ 1 ಕೋಟಿ ವೆಚ್ಚ ಮಾಡಲಾಗುತ್ತಿದೆ. ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಪೂಜೆ ನೆರವೇರಿಸಿ ಮಾತನಾಡಿ, ಪುತ್ಥಳಿ ಜತೆಗೆ ವಿಶೇಷವಾಗಿ ಉದ್ಯಾನವನ ನಿರ್ಮಿಸಲಾಗುತ್ತದೆ. ಇದಕ್ಕೆ ಮಠದ ಹಳೇ ವಿದ್ಯಾರ್ಥಿಗಳು ಸಹ ಕೈಜೋಡಿಸಿದ್ದಾರೆ ಎಂದರು. ಪುತ್ಥಳಿ ಪ್ರತಿಷ್ಠಾಪನೆಗೆ ತಲಾ 10 ಲಕ್ಷ ನೀಡಲಾಗುವುದು ಎಂದು ಶಾಸಕರಾದ ಬಿ.ಸುರೇಶ್‌ಗೌಡ, ಜಿ.ಬಿ.ಜ್ಯೋತಿಗಣೇಶ್ ಭರವಸೆ ನೀಡಿದರು. ಮಠದ ಆಡಳಿತಾಧಿಕಾರಿ ವಿಶ್ವನಾಥಯ್ಯ, ವಸ್ತು ಪ್ರದರ್ಶನದ ಕಾರ್ಯದರ್ಶಿ ಜಿ.ಗಂಗಾಧರಯ್ಯ, ಜಂಟಿ ಕಾರ್ಯದರ್ಶಿಗಳಾದ ಕೆಂ.ಬ.ರೇಣುಕಯ್ಯ, ಎಸ್‌.ಶಿವಕುಮಾರ್, ಸಿದ್ಧಗಂಗಾ ವಿದ್ಯಾಸಂಸ್ಥೆ ನಿರ್ದೇಶಕ ಜಯವಿಭವಸ್ವಾಮಿ, ಎಸ್‌ ಐಟಿ ಸಿಇಒ ಶಿವಕುಮಾರಯ್ಯ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್‌.ಸಿದ್ಧಲಿಂಗಪ್ಪ, ಪತ್ರಕರ್ತ…

Read More

ತುಮಕೂರು: ರೈತರು ಬದುಕು ಕಟ್ಟಿಕೊಳ್ಳಲು ನಗರಗಳ ಕಡೆಗೆ ವಲಸೆ ಬರುತ್ತಿದ್ದು, ಸರ್ಕಾರ ಇದನ್ನು ತಡೆಯಬೇಕು. ಹಳ್ಳಿಗಳಲ್ಲಿಯೇ ಕೆಲಸ ನಿರ್ವಹಿಸಲು ಪೂರಕ ವಾತಾವರಣ ಕಲ್ಪಿಸಬೇಕು ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಹೇಳಿದರು. ನಗರದಲ್ಲಿ ಶನಿವಾರ ಐಕ್ಯ ಫೌಂಡೇಶನ್, ಇನ್ನರ್ ವ್ಹೀಲ್ ಸಂಸ್ಥೆ ಸಹಯೋಗದಲ್ಲಿ ಆಯೋಜಿಸಿದ್ದ ಕಲ್ಪತರು ಉತ್ಸವದಲ್ಲಿ ಪ್ರಗತಿಪರ ರೈತರನ್ನು ಸನ್ಮಾನಿಸಿ ಮಾತನಾಡಿದರು. ಪ್ರಸ್ತುತ ಕೃಷಿ ಲಾಭದಾಯಕವಾಗಿಲ್ಲ, ರೈತರು ವ್ಯವಸಾಯದಿಂದ ವಿಮುಖರಾಗುವ ಪರಿಸ್ಥಿತಿ ಬಂದಿದೆ. ಹೇಮಾವತಿ ನೀರು ಜಿಲ್ಲೆಗೆ ಬರದಿದ್ದರೆ ಇಲ್ಲಿನ ಜನರ ಪರಿಸ್ಥಿತಿ ಚಿಂತಾಜನಕವಾಗಿರುತ್ತಿತ್ತು. ಕುಡಿಯುವ ನೀರು, ಕೃಷಿ, ಅಂತರ್ಜಲ ವೃದ್ಧಿಗೆ ಹೇಮಾವತಿ ವರದಾನವಾಗಿ, ರೈತರ ಬದುಕು ಹಸನಾಗಿದೆ ಎಂದರು. ರೈತ ಹೋರಾಟಗಾರ ಗಂಗಾಧರ ಕಾಸರಘಟ್ಟ, ಕಡಿಮೆ ಅವಧಿಯಲ್ಲಿ ಹೆಚ್ಚು ಇಳುವರಿ ಪಡೆಯಬೇಕು ಎಂಬ ಕಾರಣಕ್ಕೆ ಭೂಮಿಗೆ ರಾಸಾಯನಿಕ ಗೊಬ್ಬರ ಹಾಕಿ ಆಹಾರ ವಿಷ ಮಾಡುತ್ತಿದ್ದೇವೆ. ಇದರಿಂದ ಜನರು ಅನೇಕ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ಕೃಷಿಯಲ್ಲಿ ಈ ಹಿಂದಿನಂತೆ ಸಾವಯವ ಪದ್ಧತಿ ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ಮಾಡಿದರು. ನಟರಾದ ಹನುಮಂತೇಗೌಡ, ಅರ್ಜುನ್ ಯೋಗೇಶ್‌ರಾಜ್,…

Read More

ತಿಪಟೂರು: ನಗರದ ಸತ್ಯಗಣಪತಿ ಆಸ್ಥಾನ ಮಂಟಪದಲ್ಲಿ ಗಣೇಶ ಚತುರ್ಥಿಯಂದು ಪ್ರತಿಷ್ಠಾಪಿಸಿದ್ದ ಸತ್ಯಗಣಪತಿ ವಿಸರ್ಜನಾ ಮಹೋತ್ಸವ ಭಾನುವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಿತು. ಶನಿವಾರ ರಾತ್ರಿ ಆಸ್ಥಾನ ಮಂಟಪದಿಂದ ಹೊರಟ ಮೆರವಣಿಗೆ ದೊಡ್ಡಪೇಟೆ, ಕನ್ನಿಕಾ ಪರಮೇಶ್ವರಿ ದೇವಾಸ್ಥಾನ ರಸ್ತೆ, ಕೋಟೆ, ನೀಲಕಂಠಸ್ವಾಮಿ ಸರ್ಕಲ್ ಮೂಲಕ ಸಾಗಿತು. ಭಾನುವಾರ ಮುಂಜಾನೆ ಗಾಂಧಿನಗರ, ಕಾರ್ಪೊರೇಷನ್ ರಸ್ತೆ, ರಾಮಮಂದಿರ ರಸ್ತೆ, ರೈಲ್ವೆ ನಿಲ್ದಾಣದ ರಸ್ತೆಯಲ್ಲಿ ಸಾಗಿ ಸಿಂಗ್ರಿ ನಂಜಪ್ಪ ವೃತ್ತದಿಂದ ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಅಮಾನಿಕೆರೆಯ ಬಳಿವರೆಗೆ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಸತ್ಯಗಣಪತಿಗೆ ಕೊಬ್ಬರಿ, ಕಿತ್ತಳೆ, ಸೇಬು, ಕಜ್ಜಾಯ, ಸೇವಂತಿಗೆ, ಚಕ್ಕುಲಿ, ಕರಿಕಡುಬು, ಕರಿದ ಪದಾರ್ಥಗಳಿಂದ ಮಾಡಿದ ಭಾರಿ ಗಾತ್ರದ ಹಾರಗಳು ಸೇರಿದಂತೆ ವಿವಿಧ ಬಗೆಯ ದೊಡ್ಡ ಹಾರಗಳನ್ನು ಭಕ್ತರು ಸಮರ್ಪಸಿದರು. ಪ್ರತಿ ಅಂಗಡಿಗಳ ಮುಂದೆ ಮಾವಿನ ತೋರಣ, ಬಾಳೆಗಿಡಗಳ ಅಲಂಕಾರದೊಂದಿಗೆ ಅನ್ನದಾನ, ಫಲಹಾರ, ಮಜ್ಜಿಗೆ, ಪಾಯಸ ನೀಡಲಾಯಿತು. ನೂರಾರು ತೆಂಗಿನ ಕಾಯಿ ಈಡುಗಾಯಿ, ನಗರದ ರಸ್ತೆಯ ಮೇಲೆ ವಿವಿಧ ಬಣ್ಣದ ರಂಗೋಲಿ ಹಾಕಲಾಗಿತ್ತು. ಗಣೇಶೋತ್ಸವದಲ್ಲಿ ಕೋಲಾಟ,…

Read More

ಕೊರಟಗೆರೆ: ತಾಲ್ಲೂಕಿನ ಗ್ರಾಮೀಣ ಭಾಗಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಸರ್ಕಾರ ಸೂಚಿಸಿದ್ದು, ತುರ್ತು ಕ್ರಮ ಕೈಗೊಂಡು ಗ್ರಾಮೀಣ ಭಾಗದ ಜನರಿಗೆ ಶೀಘ್ರ ಶುದ್ಧ ನೀರು ಒದಗಿಸಿ ಜಿಪಿಎಸ್‌ ಆಧಾರಿತ ಫೋಟೊ ಹಾಗೂ ದಾಖಲೆ ಕಳಿಸುವಂತೆ ಆದೇಶಿಸಿದೆ. ಗ್ರಾಮೀಣ ಭಾಗಗಳಲ್ಲಿ ಶುದ್ದೀಕರಣ ಘಟಕಗಳು ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ ಎನ್ನುವ ಮಾಧ್ಯಮ ವರದಿಗಳ  ಬೆನ್ನಲ್ಲೇ  ಮುಖ್ಯಮಂತ್ರಿ ವಿಶೇಷ ಕರ್ತಾವ್ಯಾಧಿಕಾರಿ ಕೆ.ವೈಷ್ಣವಿ ಅವರು ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಸರ್ಕಾರದ ಕಾರ್ಯದರ್ಶಿಗೆ ಕೂಡಲೇ ಅಗತ್ಯ ಕ್ರಮ ಕೈಗೊಂಡು ಜಿಪಿಎಸ್ ಛಾಯಾಚಿತ್ರಗಳೊಂದಿಗೆ ಅನುಪಾಲನಾ ವರದಿಯನ್ನು ಕಚೇರಿಗೆ ಸಲ್ಲಿಸುವಂತೆ ಆದೇಶಿಸಿದ್ದಾರೆ. ಗೃಹ ಸಚಿವ ಜಿ.ಪರಮೇಶ್ವರ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗಾಗಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿರ್ದೇಶಕರಿಗೆ ಅನುದಾನ ಬಿಡುಗಡೆಗೆ ಸೂಚಿಸಿದ್ದಾರೆ. ನೀರಿನ ಘಟಕಗಳ ದುರಸ್ತಿ ಕಾರ್ಯಾಚರಣೆ ಮತ್ತು ನಿರ್ಹವಣೆ ವೆಚ್ಚ ಸೇರಿದಂತೆ ಪರಿಷ್ಕೃತ ಕ್ರಿಯಾ ಯೋಜನೆ ಅಂದಾಜು ಪಟ್ಟಿಯನ್ನು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ…

Read More

ತುಮಕೂರು: ನಗರದ ಶ್ರೀ ಸಿದ್ದಾರ್ಥ ಹೈಯರ್ ಎಜುಕೇಶನ್ ಅಕಾಡೆಮಿಯ 14ನೇ ವಾರ್ಷಿಕ ಘಟಿಕೋತ್ಸವದಲ್ಲಿ ಡಾ.ಇಂಪನಾ ಬಿ. ವರ್ಧನ್ ಅವರು ಅತ್ಯುತ್ತಮ ವಿದ್ಯಾರ್ಥಿನಿ ಪ್ರಶಸ್ತಿ ಮತ್ತು ಚಿನ್ನದ ಪದಕ ಪಡೆಯುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ. ಡಾ. ಚೈತನ್ಯ ವರ್ಧನ್ ಮತ್ತು ಡಾ.ಅನಿತಾ ವರ್ಧನ್ ಅವರ ಪುತ್ರಿಯಾಗಿರುವ ಇಂಪನಾ, ಶ್ರೀ ಸಿದ್ದಾರ್ಥ ದಂತ ವೈದ್ಯಕೀಯ ಮಹಾವಿದ್ಯಾಲಯದ ಮತ್ತು ಆಸ್ಪತ್ರೆ ಯಲ್ಲಿ ಬಿ.ಡಿ.ಎಸ್. ಪದವಿ ಪೂರೈಸಿದ್ದಾರೆ. ಇಂಪಾನ ಅವರು ನಾಲ್ಕು ವರ್ಷದ ಬಿ.ಡಿ.ಎಸ್. ಕೋರ್ಸಿನಲ್ಲಿ 19 ವಿಷಯಗಳಲ್ಲಿ 15 ವಿಷಯಗಳಲ್ಲಿ ಪ್ರಥಮ ಸ್ಥಾನ ಗಳಿಸುವ ಮೂಲಕ ನಾಲ್ಕೂ ವರ್ಷಗಳಲ್ಲಿ ಕಾಲೇಜಿನ ಟಾಪರ್ ಆಗಿ ಹೊರಹೊಮ್ಮಿದ್ದಾರೆ. ಅವರ ಈ ಶೈಕ್ಷಣಿಕ ಸಾಧನೆಗಾಗಿ ಚಿನ್ನದ ಪದಕ ಮತ್ತು ಅತ್ಯುತ್ತಮ ವಿದ್ಯಾರ್ಥಿನಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು. ಪ್ರಶಸ್ತಿಗಳನ್ನು ಮಾಜಿ ಕೇಂದ್ರ ಸಚಿವರು ಹಾಗೂ ರಾಜ್ಯಸಭಾ ಸದಸ್ಯರಾದ ಜೈರಾಮ್ ರಮೇಶ್ ಮತ್ತು ಶ್ರೀಸಿದ್ದಾರ್ಥ ಹೈಯರ್ ಎಜುಕೇಶನ್ ಅಕಾಡೆಮಿಯ ಚಾನ್ಸೆಲರ್ ಮತ್ತು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಪ್ರಶಸ್ತಿ ಪ್ರಧಾನ ಮಾಡಿದರು.…

Read More

ತುಮಕೂರು: ತಾಲ್ಲೂಕಿನ ಪಂಡಿತನ ಹಳ್ಳಿ ಸಮೀಪದ ಮಂದರ ಗಿರಿ ಬೆಟ್ಟದಲ್ಲಿರುವ ಗುರು ಮಂದಿರ ದೇವಾಲಯದ 450 ಮೆಟ್ಟಿಲುಗಳನ್ನು 2 ವರ್ಷ 2 ತಿಂಗಳ ಮಗು ಭುವನ್‌ ರೆಡ್ಡಿ 23 ನಿಮಿಷ 8 ಸೆಕೆಂಡ್‌ ಗಳಲ್ಲಿ ಹತ್ತಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. 2 ವರ್ಷ 2 ತಿಂಗಳ ಮಗು ಆಗಿರುವ ಭುವನ್ ರೆಡ್ಡಿ,  ವಿ. ಅನುಷಾ ಮತ್ತು ಡಿ. ರೆಡ್ಡಿ ಜಗದೀಶ್ ಎಂಬವರ ಪುತ್ರ.  ಇಂಡಿಯಾ ಬುಕ್ ಆಫ್ ರೆಕಾರ್ಡ್ ಕೀರ್ತಿಗೆ ಪಾತ್ರನಾಗಿರುವ ಈ ಮಗು ಭಾರತೀಯ ವಿಶ್ವದಾಖಲೆಯ ಪ್ರಮಾಣ ಪತ್ರವನ್ನು ಸಹ ಮುಡಿಗೇರಿಸಿಕೊಂಡಿದೆ. ಈ ಪ್ರಶಸ್ತಿ ಪಡೆಯುವಾಗ ಭುವನ್ ರೆಡ್ಡಿಗೆ 1 ವರ್ಷ 4 ತಿಂಗಳಾಗಿತ್ತು. 20 ಕ್ಕೂ ಹೆಚ್ಚು ನಿಮಿಷಗಳ ಕಾಲ ವಿರಾಮವಿಲ್ಲದೆ ನಿರಂತರವಾಗಿ ಬರಿಗಾಲಿನಲ್ಲಿ ಏರಿದ್ದು, 1.5 ಕ್ಕೂ ಹೆಚ್ಚು ಕಿ.ಮೀ. ದೂರವನ್ನು ಕ್ರಮಿಸಿ ಇಂಡಿಯನ್ ಬುಕ್ ಆಫ್ ರೆಕಾರ್ಡ್ ನಲ್ಲಿ ದಾಖಲೆ ಸೃಷ್ಟಿಸಿದ. ನ್ಯಾಯಾಧೀಶರಾದ ಕೆ. ಮಾಧವ ರೆಡ್ಡಿ, ಡಾ.ಜೆ. ಪಾವನಿ ಮತ್ತು…

Read More

ಪಾವಗಡ: ನಿರುದ್ಯೋಗಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದ ಕುವೆಂಪು ನಗರದ ಕೆಇಬಿ ಕಚೇರಿ ಪಕ್ಕದಲ್ಲಿ ಸೋಮವಾರ ಬೆಳಗ್ಗೆ ವರದಿಯಾಗಿದೆ. 27 ವರ್ಷದ ಚಂದನ್ ಕುಮಾರ್ ಮೃತ ವ್ತಕ್ತಿ ಎಂದು ಗುರುತಿಸಲಾಗಿದೆ. ಕಳೆದ ಹಲವು ವರ್ಷಗಳಿಂದ ತುಮಕೂರಿನಲ್ಲಿ ಇವರು ಕುಟುಂಬ ಸಮೇತ ವಾಸವಿದ್ದು ಇತ್ತೀಚಿಗಷ್ಟೇ ಇವರ ಚಿಕ್ಕಮ್ಮನ ಮನೆಗೆ ಬಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸರಿಯಾದ ಉದ್ಯೋಗವಿಲ್ಲದೆ ಅವಮಾನಕ್ಕೀಡಾಗಿದ್ದೆನೆಂದು ಮನನೊಂದ ಚಂದನ್ ಮಧ್ಯರಾತ್ರಿ ರಸ್ತೆ ಪಕ್ಕದಲ್ಲಿರುವ ಹುಣಿಸೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಮುಂದಿನ  ಮಗಳನ್ನು ಕೈಗೊಂಡಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತುಮಕೂರು: ನಗರದ ಸರಸ್ವತಿಪುರಂನಲ್ಲಿ ನಿರ್ಮಾಣಗೊಂಡಿರುವ ಸುಸಜ್ಜಿತ ಜಿಲ್ಲಾ ಬಂಜಾರ ಭವನದ ಉದ್ಘಾಟನೆಯನ್ನು ಡಿಸೆಂಬರ್ 14ರಂದು  ನೆರವೇರಿಸಲಿದ್ದು, ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಜಿಲ್ಲಾ ಬಂಜಾರ ಭವನವನ್ನು ಲೋಕಾರ್ಪಣೆ ಮಾಡಲಿದ್ದಾರೆ ಎಂದು ತುಮಕೂರು ಜಿಲ್ಲಾ ಬಂಜಾರ ಸಂಘದ ಅಧ್ಯಕ್ಷ ನಾರಾಯಣ್ ನಾಯ್ಕ ಡಿ. ತಿಳಿಸಿದ್ದಾರೆ. ಜಿಲ್ಲಾ ಬಂಜಾರ ಭವನದ ಉದ್ಘಾಟನೆಗೆ ಸಂಬಂಧಿಸಿದಂತೆ ಭಾನುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸುಮಾರು 3 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಸುಂದರ ಬಂಜಾರ ಭವನದ ಜೊತೆಗೆ ಜಿಲ್ಲಾ ಬಂಜಾರ ಸಂಘದ ಕೇಂದ್ರ  ಕಚೇರಿಯ ಉದ್ಘಾಟನೆಯೂ ಇದೇ ಸಂದರ್ಭದಲ್ಲಿ ನಡೆಯಲಿದೆ. ತುಮಕೂರು ಜಿಲ್ಲೆಯ 11  ವಿಧಾನಸಭಾ ಕ್ಷೇತ್ರದ ಬಂಜಾರ ಸಮುದಾಯದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಅವರು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಬಂಜಾರ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ್ ಬಿ., ಉಪಾಧ್ಯಕ್ಷ ಕುಬೇಂದ್ರನಾಯ್ಕೆ ಎಲ್. ಮಾತನಾಡಿದರು.  ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಇಂದಿರಾ ದೇನಾ ನಾಯ್ಕ್ ಸೇರಿದಂತೆ ಅನೇಕ…

Read More