Subscribe to Updates
Get the latest creative news from FooBar about art, design and business.
- ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
- ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
- ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ
- ಬೌದ್ಧ ಧರ್ಮವು ಸಮಾನತೆ, ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ: ಹರಾ ಮಹೇಶ್
- ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಹೆಣ್ಣು ಮಕ್ಕಳಿಗೆ ಉಚಿತ ಲಸಿಕೆ: ಶಾಸಕ ಡಾ.ಎಚ್.ಡಿ.ರಂಗನಾಥ್
- ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ
- ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ
- ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
Author: admin
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿರುವ ಹಿಂದೆ ಷಡ್ಯಂತ್ರ ಅಡಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ರಾಹುಲ್ ಗಾಂಧಿ ಲೋಕಸಭೆ ಸದಸ್ಯತ್ವ ಅನರ್ಹತೆ ಮೂಲಕ ವ್ಯವಸ್ಥಿತವಾಗಿ ಸತ್ಯ ಹೇಳುವವರ ಬಾಯಿ ಮುಚ್ಚಿಸಲು ಕೇಂದ್ರಸರ್ಕಾರ ಯತ್ನಿಸುತ್ತಿದೆ. ಸತ್ಯ ಹೇಳಿದ್ದಕ್ಕೆ ರಾಹುಲ್ ಗಾಂಧಿ ಸದಸ್ಯತ್ವ ಅನರ್ಹಗೊಳಿಸಿದ್ದಾರೆ. ಆದರೆ ನಾವು ಜೈಲಿಗೆ ಹೋಗಲು ಸಿದ್ಧರಿದ್ದೇವೆ. ಪ್ರಜಾಪ್ರಭುತ್ವ ರಕ್ಷಣೆಗಾಗಿ ಹೋರಾಡುತ್ತೇವೆ ಎಂದು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ರಾಹುಲ್ ಗಾಂಧಿಗೆ ಸೂರತ್ ಕೋರ್ಟ್ 2 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದ ಹಿನ್ನೆಲೆ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ಅನರ್ಹಗೊಳಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ನಿರ್ಮಲಾನಂದನಾಥ ಶ್ರೀಗಳ ಬಗ್ಗೆ ತಾವು ನೀಡಿದ್ಧ ಹೇಳಿಕೆ ಬಗ್ಗೆ ಕ್ಷಮೆಯಾಚಿಸಿದ ಅಡ್ಡಂಡ ಕಾರ್ಯಪ್ಪ, ನಿರ್ಮಲಾನಂದ ಶ್ರಿಗಳು ಈ ನಾಡಿನ ಸಂತ ಅವರ ಬಗ್ಗೆ ನನಗೆ ಬಹಳ ಗೌರವವಿದೆ ಎಂದರು. ನಾನು ಹೇಳಿರುವ ಹೇಳಿಕೆಯನ್ನ ಮಾಧ್ಯಮಗಳು ಅವರಿಗೆ ಬೇಕಾದ ರೀತಿಯಲ್ಲಿ ತಿರುಚಿದ್ದಾರೆ. ನಾನು ನಿರ್ಮಲಾನಂದ ಶ್ರೀಗಳ ಕ್ಷಮೆಯಾಚಿಸುತ್ತೇನೆ. ನಿರ್ಮಲಾನಂದ ಶ್ರೀಗಳು ನಮ್ಮ ಸಂತರು. ನಾನು ಅವರ ವಿರುದ್ಧ ಯಾವುದೇ ಹೇಳಿಕೆ ನೀಡಿಲ್ಲ. ಅವರಿಗೆ ಅಪಮಾನ ಮಾಡುವಂತಹ ಕೆಲಸ ಮಾಡಿಲ್ಲ. ಆ ಹೇಳಿಕೆಯನ್ನ ರಾಜಕೀಯವಾಗಿ ಬಳಸಿಕೊಂಡಿದ್ದಾರೆ. ನಾನು ಅವರ ಭಕ್ತ ಕೋಟಿಗಳಿಗೆ ಕ್ಷಮೆ ಕೇಳಲ್ಲ. ನಾನು ನಿರ್ಮಲಾನಂದ ಶ್ರೀಗಳಿಗೆ ಮಾತ್ರ ಕ್ಷಮೆಯಾಚಿಸುವೆ ಎಂದರು. ನನಗೆ ಒಕ್ಕಲಿಗರ ಮೇಲೆ ಅಪಾರ ಪ್ರೀತಿ ಇದೆ. ನಾನು ಎಂದೂ ಒಕ್ಕಲಿಗರ ವಿರೋಧಿಯಲ್ಲ. ನಾನು ನಿರ್ಮಲಾನಂದ ಶ್ರೀಗಳ ಪರಮ ಭಕ್ತ. ರಾಜಕೀಯವಾಗಿ ಈ ವಿಚಾರ ಎಳೆದಿರುವುದು ಸರಿಯಲ್ಲ. ಇಲ್ಲಿ ಬಂದು ಪ್ರತಿಭಟನೆ ಮಾಡುವವರಿಗೆ ಕ್ಷಮೆ ಕೇಳುವುದಿಲ್ಲ. ಶ್ರೀಗಳಿಗೆ ನನ್ನ ಹೇಳಿಕೆಯಿಂದ ಬೇಸರವಾಗಿದ್ದರೆ ನಾನು ಅವರಿಗೆ ಕ್ಷಮೆಕೇಳುತ್ತೇನೆ ಎಂದು ಅಡ್ಡಂಡ ಕಾರ್ಯಪ್ಪ…
ಸುಮಲತಾ ಸ್ವಾಭಿಮಾನ ಪದ ಬಳಸಬಾರದು ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ಗೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಟಾಂಗ್ ನೀಡಿದ್ದಾರೆ. ಈ ಕುರಿತು ಮಾತನಾಡಿದ ಸಂಸದೆ ಸುಮಲತಾ ಅಂಬರೀಶ್, ಬಿಜೆಪಿ ಭಾರತದಲ್ಲಿಲ್ವಾ..? ಬಿಜೆಪಿ 8 ವರ್ಷದಿಂದ ದೇಶವನ್ನಾಳುತ್ತಿದೆ. ಒಂದು ಪಕ್ಷಕ್ಕೆ ಹೋದ್ರೆ ಸ್ವಾಭಿಮಾನ ಇಲ್ಲ. ಇನ್ನೊಂದು ಪಕ್ಷಕ್ಕೆ ಹೋದ್ರೆ ಸ್ವಾಭಿಮಾನ ಇದೆ ಅಂತಾನಾ..? ಎಂದು ಪ್ರಶ್ನಿಸಿದರು. ನನ್ನ ಬಗ್ಗೆ ಮಾತನಾಡಿದ್ರೆ ಮೈಲೇಜ್ ಹೆಚ್ಚಾಗುತ್ತದೆ. ಮೊದಲು ಜೆಡಿಎಸ್ ನವರು ಮಾತನಾಡಿದರು ಮಾತಾಡಿ ಮೈಲೇಜ್ ತೆಗೆದುಕೊಂಡರು . ಈಗ ಕಾಂಗ್ರೆಸ್ ನವರು ಮಾತನಾಡಿ ಮೈಲೇಜ್ ತೆಗದುಕೊಳ್ಳುತ್ತಿದ್ದಾರೆ ಎಂದು ಕುಟುಕಿದರು. ತಾವು ರಾಜ್ಯ ರಾಜಕೀಯಕ್ಕೆ ಬರುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಂಸದೆ ಸುಮಲತಾ ಅಂಬರೀಶ್, ನಾನಿನ್ನೂ ರಾಜ್ಯ ರಾಜಕೀಯದ ಬಗ್ಗೆ ಯೋಚಿಸಿಲ್ಲ ನಾನು ಬಿಜೆಪಿಯಿಂದ ಟಿಕೆಟ್ ಕೇಳಿಲ್ಲ. ಬಿಜೆಪಿ ಎದುರು ನಾನು ಯಾವುದೇ ಬೇಡಿಕೆ ಇಟ್ಟಿಲ್ಲ. ಪಕ್ಷದಲ್ಲಿ ಏನೆಲ್ಲಾ ಚರ್ಚೆ ಆಗುತ್ತೆ ಎಂಬುದನ್ನು ಗಮನಿಸಿ ಅಮೇಲೆ ನಿರ್ಧಾರ ಮಾಡುತ್ತೇನೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ಸಿದ್ಧರಾಮಯ್ಯ ವರುಣಾ ಮತ್ತು ಕೋಲಾರ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದು ಶಾಸಕ ಯತೀಂದ್ರ ಸಿದ್ಧರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ವರಿಷ್ಠರು ಕೋಲಾರ ಬೇಡ ವರುಣಾದಲ್ಲಿ ಸ್ಪರ್ಧಿಸಿ ಎಂದಿದ್ದರು. ಕೋಲಾರದಿಂದ ಹಿಂದೆ ಸರಿದರೆ ಹಿನ್ನೆಡೆ ಅಗುತ್ತೆ ಎಂದಿದ್ದಾರೆ ಇವತ್ತಿನ ಸ್ಥಿತಿಯಲ್ಲಿ ಸಿದ್ಧರಾಮಯ್ಯ ಕೋಲಾರ ಬಿಡುವಂತಿಲ್ಲ. ಹೈಕಮಾಂಡ್ ಸೂಚನೆಯಂತೆ ವರುಣಾ ಕ್ಷೇತ್ರವನ್ನ ಬಿಡಲು ಆಗಲ್ಲ. ಹೀಗಾಗಿ ಸಿದ್ಧರಾಮಯ್ಯ ವರುಣಾ ಕೋಲಾರದಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ವರುಣಾದಲ್ಲಿ ಮಾತ್ರ ಸ್ಪರ್ಧಿಸಿ ಅಂತಾ ನಾನು ಮೊದಲೇ ಸಲಹೆ ಕೊಟ್ಟಿದ್ದೆ ಎಂದರು. ಸಿದ್ಧರಾಮಯ್ಯ ಎಲ್ಲೇ ಸ್ಪರ್ಧಿಸಿದರೂ ವೈರಿಗಳು ಒಂದಾಗಿ ಸೋಲಿಸಲು ಯತ್ನಿಸುತ್ತಾರೆ. ಸಿದ್ಧರಾಮಯ್ಯ ವಿರುದ್ದ ನೀರಿನಂತೆ ಹಣ ಚೆಲ್ಲುತ್ತಾರೆ ಎಂದು ಯತೀಂದ್ರ ಸಿದ್ಧರಾಮಯ್ಯ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ನವರು ಅಪರೇಷನ್ ಹಸ್ತ ಮಾಡಿದರೇ ಚುನಾವಣೆ ಬಳಿಕ ಬಿಜೆಪಿಯವರು ಅಪರೇಷನ್ ಕಮಲ ಮಾಡುತ್ತಾರೆ ಎಂದು ಹೆಚ್.ಡಿ ಕುಮಾರಸ್ವಾಮಿ ಟೀಕಿಸಿದರು. ಯಾದಗಿರಿ ಗುರುಮಠಕಲ್ ನಲ್ಲಿ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಬಿಜೆಪಿಯಿಂದ ಕಾಂಗ್ರೆಸ್ ಗೆ ನಾಯಕರ ವಲಸೆ ಪ್ರಾರಂಭವಾಗಿದೆ. ಕಾಂಗ್ರೆಸ್ ನಿಂದ ಅಪರೇಷನ್ ಹಸ್ತ ಬಿಜೆಪಿಯಿಂದ ಅಪರೇಷನ್ ಕಮಲ ಇದರ ಬಗ್ಗೆ ನಾನು ವೈಯಕ್ತಿಕವಾಗಿ ಟೀಕೆ ಮಾಡಲ್ಲ ಎಂದರು. ಮಲ್ಲಿಕಾರ್ಜುನ ಖರ್ಗೆ ರಾಜಕೀಯ ಭವಿಷ್ಯ ಮುಗಿಸುತ್ತೇನೆಂದು ಬಾಬೂರಾವ್ ಚಿಂಚನಸೂರ್ ಹೇಳಿದ್ರು. ಆದರೆ ಈಗ ಚಿಂಚನಸೂರ್ ಅವರನ್ನೇ ಕಾಂಗ್ರೆಸ್ ನವರು ವಾಪಸ್ ಪಕ್ಷಕ್ಕೆ ಕರೆದುಕೊಂಡಿದ್ದಾರೆ. ಕಾಂಗ್ರೆಸ್ ನಲ್ಲಿ ಅಭ್ಯರ್ಥಿ ಕೊರತೆ ಎಷ್ಟಿದೆ. ಅಂತಾ ಗೊತ್ತಾಗುತ್ತೆ. ಅವರ ಕುತ್ತಿಗೆ ಕುಯ್ದವರನ್ನೇ ಮತ್ತೆ ತಬ್ಬಿಕೊಂಡು ಹೊರಟಿದ್ದಾರೆ. ಅಪರೇಷನ್ ಕಮಲ ಮಾಡುವ ಬಗ್ಗೆ ಬಿಜೆಪಿ ಸಂಖ್ಯೆ ತೆಗೆದು ನೋಡಿ ಅಪರೇಷನ್ ಮಾಡುವುದರಲ್ಲಿ ಬಿಜೆಪಿ ಗಿನ್ನಿಸ್ ದಾಖಲೆ ಮಾಡಬಹುದು ಎಂದು ವ್ಯಂಗ್ಯವಾಡಿದರು. ಸಿದ್ಧರಾಮಯ್ಯ ಕ್ಷೇತ್ರ ಫೈನಲ್ ಆಗದ ವಿಚಾರ ಕುರಿತು ಪ್ರತಿಕ್ರಿಯಿಸಿದ ಹೆಚ್.ಡಿ ಕುಮಾರಸ್ವಾಮಿ, ಸಿದ್ಧರಾಮಯ್ಯ ಬಗ್ಗೆ…
ಬಿಎಸ್ ಯಡಿಯೂರಪ್ಪರನ್ನ ಸೈಡ್ ಲೈನ್ ಮಾಡುವ ಪ್ರಶ್ನೆಯೇ ಇಲ್ಲ. ಅವರಿಗೆ ಪಕ್ಷ ಎಲ್ಲವನ್ನೂ ನೀಡಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದರು. ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ತಮ್ಮ ನಿವಾಸಕ್ಕೆ ಭೇಟಿ ನೀಡಿ ಉಪಹಾರ ಕೂಟದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ. ಅಮಿತ್ ಶಾ ಅವರು ಪ್ರೀತಿಯಿಂದ ಮಾತನಾಡಿಸಿದ್ರು. ಅಮಿತ್ ಶಾ ನಡೆಯಿಂದ ಆನೆ ಬಲ ಬಂದಂತಾಗಿದೆ. ಇನ್ನಷ್ಟು ಉತ್ಸಾಹದಿಂದ ಕೆಲಸ ಮಾಡುತ್ತೇನೆ ಎಂದರು. ಬಿಎಸ್ ವೈ ಹಿಂದಿನಿಂದಲೂ ಉತ್ಸಹದಲ್ಲಿದ್ದಾರೆ . ಬಿಎಸ್ ವೈ ಯಾರ ಜೊತೆ ಮಾತನಾಡಬೇಕೋ ಅವರ ಜೊತೆ ಮಾತನಾಡಿದ್ದಾರೆ. ಬಿಎಸ್ ವೈ ಮತ್ತು ಅಮಿತ್ ಶಾ ಅವರು ನಡುವೆ ರಾಜಕೀಯ ವಿಚಾರ ಚರ್ಚೆಯಾಗಿದೆ. ಈ ಬಾರಿ ಅತಂತ್ರ ಸರ್ಕಾರ ಬರಲು ಬಿಡಲ್ಲ. ಬಿಜೆಪಿ ಸರ್ಕಾರ ಬಹುಮತ ಪಡೆಯುವ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದರು. ಶಿಕಾರಿಪುರ ಕ್ಷೇತ್ರದಲ್ಲಿ ನಾನು ಓಡಾಡುತ್ತಿದ್ದೇನೆ. ವರುಣಾದಲ್ಲಿ ನನ್ನ ಸ್ಪರ್ಧೆ ಬಗ್ಗೆ ವರಿಷ್ಠರು ಹೇಳುತ್ತಾರೆ. ಅದನ್ನ…
ರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಚುನಾವಣೆಗೆ ಭರ್ಜರಿ ಸಿದ್ಧತೆಯಲ್ಲಿ ತೊಡಗಿವೆ. ಯಾವ ಕ್ಷಣದಲ್ಲಾದ್ರೂ ಚುನಾವಣಾ ವೇಳಾಪಟ್ಟಿ ಘೋಷಣೆಯಾಗಬಹುದು. ತುರ್ತು ಕಾರ್ಯಗಳನ್ನ ಪೂರ್ಣಗೊಳಿಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಚುನಾವಣಾ ಆಯೋಗ ಸೂಚನೆ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮುಖ್ಯ ಚುನಾವಣಾಧಿಕಾರಿ ಪತ್ರದ ಮೂಲಕ ತುರ್ತು ಸೂಚನೆ ನೀಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಪತ್ರದಲ್ಲಿ ಸಂದೇಶ ನೀಡಿದ್ದು, ಯಾವುದೇ ಕ್ಷಣಗಳಲ್ಲಿ ಚುನಾವಣೆ ಘೋಷಣೆಯಾಗಬಹುದು. ಹೀಗಾಗಿ ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗಳನ್ನು ಸಿದ್ದವಿಟ್ಟುಕೊಳ್ಳಿ ಎಂದು ಸಂದೇಶ ರವಾನಿಸಲಾಗಿದೆ ಎನ್ನಲಾಗುತ್ತಿದೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ ಮಾಡಲು ಕೇಂದ್ರ ಚುನಾವಣೆ ಆಯೋಗ ತಯಾರಿ ನಡೆಸಿದ್ದು, ಚುನಾವಣೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ರವಾನಿಸಿದೆ. ಯಾವುದೇ ಕ್ಷಣಗಳಲ್ಲಿ ಚುನಾವಣೆ ಘೋಷಣೆ ಆಗಬಹುದು. ಈ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಪ್ರಕ್ರಿಯೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ…
ಹಿಂದಿನ ಸರ್ಕಾರಗಳು ದೇಶದಲ್ಲಿ ಮಾದಕ ವಸ್ತು ನಿಯಂತ್ರಿಸುವಲ್ಲಿ ವಿಫಲವಾಗಿದ್ದವು. ಆದರೆ ದೇಶದಲ್ಲಿ ಮಾದಕ ವಸ್ತುಗಳ ಬಳಕೆ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಅಮಿತ್ ಶಾ ಹೇಳಿದರು. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ದಕ್ಷಿಣ ಭಾರತದ ರಾಜ್ಯಗಳ ಸಮ್ಮೇಳನದಲ್ಲಿ ಮಾತನಾಡಿದ ಕೇಂದ್ರ ಗೃಹಸಚಿವ ಅಮಿತ್ ಶಾ, ಮಾದಕ ವಸ್ತುಗಳ ನಿಯಂತ್ರಣ ಒಂದು ರೀತಿಯ ಸವಾಲಾಗಿತ್ತು. ಮಾದಕ ವಸ್ತುಗಳ ಮುಕ್ತ ಭಾರತಕ್ಕೆ ಮೋದಿ ಸರ್ಕಾರ ಪಣ ತೊಟ್ಟಿದೆ. ಮಾದಕ ವಸ್ತು ಮುಕ್ತ ಅಭಿಯಾನವನ್ನ ಕೇಂದ್ರ ಮಾಡುತ್ತಿದೆ ಎಂದರು. ನಶೆ ಮುಕ್ತ ಭಾರತಕ್ಕೆ ಶ್ರಮಿಸಿದ್ದೇವೆ. ದೇಶದ ಭದ್ರತೆಗೆ ಎಲ್ಲಾ ಇಲಾಖೆಗಳು ಒಟ್ಟಾಗಿ ಶ್ರಮಿಸಬೇಕು. ದಕ್ಷಿಣ ರಾಜ್ಯಗಳು ಡ್ರಗ್ಸ್ ತನಿಖೆ ಸ್ವರೂಪ ಬದಲಿಸಿಕೊಳ್ಳಬೇಕು. ಡ್ರಗ್ಸ್ ಸರಬರಾಜು ಮಾಡುವವರಿಗೆ ಕಠಿಣ ಶಿಕ್ಷೆಯಾಗಬೇಕು. ಎನ್ ಡಿಪಿಎಸ್ ಕಾನೂನು ಮತ್ತಷ್ಟು ಬಲಪಡಿಸಲಾಗುವುದು. ಸದ್ಯದ ದಿನಗಳಲ್ಲಿ ಕೇಂದ್ರದ ನೀತಿಯಿಂದ ಎಲ್ಲಾ ಬದಲಾಗಲಿದೆ ಎಂದು ಅಮಿತ್ ಶಾ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…
ಬೆಳಗಾವಿ ಜಿಲ್ಲಾ ಅಧಿಕಾರಿ ಕಚೇರಿಗೆ ಇಂದು ರಾಯಬಾಗ್ ತಾಲೂಕಿನ ಮುಗಳಖೋಡ ಪುರಸಭೆ ಪೌರಕಾರ್ಮಿಕರ 25 8 2018 ರಿಂದ ಆಗಸ್ಟ್ 2016 ಹಾಗೂ ಜುಲೈ 2018 ರವರೆಗೆ ಪೌರಕಾರ್ಮಿಕರಿಗೆ ವೇತನ ಸಲ್ಲಿಸದೆ ಅವರಿಂದ ಮುಗುಳ್ಕೊಡು ಪುರಸಭೆ ಪೌರಕಾರ್ಮಿಕರ ಸೇವೆಯನ್ನು ತೆಗೆದುಕೊಳ್ಳುತ್ತಾ ಇದೆ. ಎಂದು ಅಂಬೇಡ್ಕರ್ ಪೀಪಲ್ ಪಕ್ಷ ಯುವ ಘಟಕ ಅಧ್ಯಕ್ಷರಾದ ಕೃಷ್ಣ ಸಿಎಂ ಇಂದು ಬೆಳಗಾವಿ ಜಿಲ್ಲಾಧಿಕಾರಿಗಳ ಈ ವಿಷಯದ ಕುರಿತು ಚರ್ಚೆ ಮಾಡುತ್ತಾ ಕಾರ್ಮಿಕ ಆಯುಕ್ತರು ಬೆಳಗಾವಿ ವಿಭಾಗ ಈಗಾಗಲೇ 15 ದಿನಗಳ ಒಳಗಡೆನೆ ವೇತನ ಪಾವತಿ ಮಾಡಬೇಕೆಂದು ಆದೇಶ ಮಾಡಲಾಗಿತ್ತು . ಆದರೆ ಸ್ಥಳೀಯ ಆಡಳಿತ ಆದೇಶ ಉಲ್ಲಂಘನೆ ಮಾಡಿ ನ್ಯಾಯಾಲಯದ ಮೊರೆ ಹೋಗಿತ್ತು ಆದರೆ ಕರ್ನಾಟಕ ಉಚನ್ಯಾಯಾಲಯ ಪೌರ ಕಾರ್ಮಿಕರ ಪರವಾಗಿ ಕಾರ್ಮಿಕ ಆಯುಕ್ತರ ಆದೇಶವನ್ನು ಎತ್ತಿ ಹಿಡಿದಿರುವುದು ಗಮನಾರ್ಹ. ಈ ಅಂಶದಿಂದಾಗಿ ಕಾರ್ಮಿಕರಿಗೆ ನ್ಯಾಯ ದೊರಕಿಸುವ ಸಲುವಾಗಿ ಡಾ. ಅಂಬೇಡ್ಕರ್ ಪೀಪಲ್ಸ್ ಪಾರ್ಟಿಯ ಮುಂದಾಳತ್ವದಲ್ಲಿ ಪೌರ ಕಾರ್ಮಿಕರಿಗೆ ನ್ಯಾಯ ದೊರಕಿಸುವ ಸಲುವಾಗಿ ಇಂದು ಬೆಳಗಾವಿ…
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಕೇರಳದ ವಯನಾಡ್ ಸಂಸದ ಸ್ಥಾನದಿಂದ ಅನರ್ಹ ಮಾಡಲಾಗಿದೆ. ಮಾನನಷ್ಟ ಪ್ರಕರಣ ಸಂಬಂಧ ಸೂರತ್ ಕೋರ್ಟ್ 2 ವರ್ಷ ಜೈಲು ಶಿಕ್ಷೆ ವಿಧಿಸಿದ ಬೆನ್ನಲ್ಲೇ ಲೋಕಸಭೆ ಸಚಿವಾಲಯದ ಕಾರ್ಯದರ್ಶಿ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿ ಆದೇಶ ಹೊರಡಿಸಿದ್ದಾರೆ. 2019ರ ಲೋಕಸಭಾ ಚುನಾವಣೆಯ ವೇಳೆ ನರೇಂದ್ರ ಮೋದಿಯವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಗೆ ಸೂರತ್ ಕೋರ್ಟ್ ಗುರುವಾರ ಬೆಳಗ್ಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಶಿಕ್ಷೆ ವಿಧಿಸಿದ ಬೆನ್ನಲ್ಲೇ ರಾಹುಲ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು ಸೂರತ್ ಕೋರ್ಟ್ 30 ದಿನಗಳ ಜಾಮೀನು ಮಂಜೂರು ಮಾಡಿದೆ. ಕಳೆದ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಓರ್ವ ಕಳ್ಳ ಎಂದು ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ನಿರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಇವರೆಲ್ಲರ ಸರ್ನೇಮ್ ಒಂದೇ ಆಗಿದ್ದು,…