Author: admin

ನಾನು ಮತ್ತೆ ಸಿಎಂ ಆಗುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೀಡಿದ ಹೇಳಿಕೆ ಕುರಿತು ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿದ ಬಿ.ಎಸ್ ಯಡಿಯೂರಪ್ಪ, ನಾನು ಮತ್ತೆ ಸಿಎಂ ಆಗುತ್ತೇನೆಂದು ಸಿಎಂ ಬಸವರಾಜ ಬೊಮ್ಮಾಯಿ ನೀಡಿರುವ ಹೇಳಿಕೆಯಲ್ಲಿ ತಪ್ಪೇನಿದೆ. ಸಿಎಂ ಬೊಮ್ಮಾಯಿ ಒಳ್ಳೆಯ ಕೆಲಸ ಮಾಡಿದ್ದಾರೆ. ಮತ್ತೊಮ್ಮೆ ಸಿಎಂ ಆಗುತ್ತೇನೆ ಎಂದು ಹೇಳಿರುವುದರಲ್ಲಿ ತಪ್ಪಿಲ್ಲ. ಸಿಎಂ ಬೊಮ್ಮಾಯಿ ಹೇಳಿಕೆ ಸ್ವಾಗತಿಸುತ್ತೇನೆ ಎಂದರು. ಸಿದ್ಧರಾಮಯ್ಯ ಕ್ಷೇತ್ರ ವಿಚಾರದಲ್ಲಿ ಗೊಂದಲ ಇಲ್ಲ. ಗೊಂದಲ ಅಂತ ಹೇಳಿ ಪ್ರಚಾರ ಪಡೆಯುತ್ತಿದ್ದಾರೆ. ನಾನು ಅಲ್ಲಿ ನಿಲ್ತೀನಿ ಇಲ್ಲಿ ನಿಲ್ಲುತ್ತೇನೆ ಅಂತಾ ಹೇಳುತ್ತಾರೆ. ಎಲ್ಲಿ ನಿಂತರೂ ಗೆಲ್ಲುತ್ತೇನೆ ಎನ್ನುತ್ತಾರೆ. ಇದರಿಂದಾಗುವ ಪ್ರಯೋಜನ ಏನು..? ಇದಕ್ಕೆಲ್ಲಾ ಉತ್ತರ ಕೊಡುವ ಅಗತ್ಯವಿಲ್ಲ ಎಂದು ನುಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಅದಾನಿ ವಿರುದ್ದ ತನಿಖೆ ನಡೆಸಲು ಧೈರ್ಯವಿಲ್ಲ. ಅದಾನಿ ಮನೆ ಮೇಲೆ ಸಿಬಿಐ,ಇಡಿ ದಾಳಿ ಮಾಡಿಲ್ಲ ಮೋದಿಯನ್ನ ಜನ ಕಳ್ಳರ ಸರ್ದಾರ್ ಎಂದು ಕರೆಯುತ್ತಿದ್ದಾರೆ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಗುಡುಗಿದರು. ಮಾಧ್ಯಮಗಳ ಜೊತೆ ಮಾತನಾಡಿದ ಅರವಿಂದ ಕೇಜ್ರಿವಾಲ್, ಬಿಜೆಪಿ ಸೇರ್ಪಡೆಯಾದರೇ ಎಲ್ಲಾ ಕೇಸ್ ಗಳು ಖುಲಾಸೆಯಾಗುತ್ತವೆ. ಮೋದಿ ಪ್ರತಿದಿನ ಯಾರನ್ನಾದರೂ ಕಾರಗೃಹಕ್ಕೆ ಕಳಿಸುತ್ತಿದ್ದಾರೆ. ಬೇರೆ ಪಕ್ಷದಲ್ಲಿದ್ದುಕೊಂಡು ನೀವು ಭ್ರಷ್ಟಾಚಾರ ಮಾಡಬೇಡಿ ಬಿಜೆಪಿಗೆ ಬಂದು ಭ್ರಷ್ಟಾಚಾರ ಮಾಡಿ ಎಂದು ಮೋದಿ ಹೇಳುತ್ತಿದ್ದಾರೆ. ಗುಜರಾತ್ ನಲ್ಲಿ ನಕಲಿ ಮದ್ಯ ಸೇವಿಸಿ ಹಲವು ಜನರು ಮೃತಪಟ್ಟಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. 10 ರಿಂದ 15 ಸಾವಿರ ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಆರೋಪಿಸಿದರು. ಮನೀಶ್ ಸಿಸೋಡಿಯ ಸತ್ಯೇಂದ್ರ ಜೈನ್ ಭ್ರಷ್ಟಾಚಾರ ಮಾಡಿಲ್ಲ. ಮೋದಿಗೆ ನಿದ್ರೆ ಬರದಿದ್ರೆ ಮಾತ್ರೆ ತೆಗೆದುಕೊಳ್ಳಲಿ . ಪ್ರಧಾನಿ ಮೋದಿ ನಿತ್ಯವೂ ಸಿಟ್ಟಿನಲ್ಲೇ ಇರ್ತಾರೆ ಎಂದು ಅರವಿಂದ ಕೇಜ್ರಿವಾಲ್ ವಾಗ್ದಾಳಿ ನಡೆಸಿದರು.…

Read More

ಸಿದ‍್ಧರಾಮಯ್ಯ ಎಲ್ಲೇ ಸ್ಪರ್ಧಿಸಿದರೂ ಅವರ ಪಕ್ಷದವರೇ ಅವರನ್ನ ಸೋಲಿಸುತ್ತಾರೆ ಕೆ.ಎಸ್ ಈಶ್ವರಪ್ಪ ಹೇಳಿದರು. ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ, ಸಿದ್ಧರಾಮಯ್ಯ ತಳ ಬುಡ ಇಲ್ಲದ ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ವರುಣಾ ಕ್ಷೇತ್ರದಿಂದ ಬಾದಾಮಿ, ಬಾದಾಮಿಯಿಂದ ಕೋಲಾರ, ಕೋಲಾರದಿಂದ ಕುಷ್ಟಗಿ, ಕುಷ್ಟಿಗಿಯಿಂದ ಮತ್ತೆ ವರುಣಾಗೆ ಓಡಾಡುತ್ತಿದ್ದಾರೆ. ಈ ಮೊದಲು ಹೈಕಮಾಂಡ್ ಹೇಳಿದ ಕಡೆ ಸ್ಪರ್ಧೆ ಮಾಡುತ್ತೇನೆ ಎಂದಿದ್ದರು. ಈಗ ಪತ್ನಿ ಮಗ ಹೇಳಿದ ಕ್ಷೇತ್ರದಲ್ಲಿ ಸ್ಪರ್ಧಿಸುತ್ತೇನೆ ಅಂತಿದ್ದಾರೆ. ಇವರಿಗೆ ಕ್ಷೇತ್ರ ಇಲ್ಲ ಬೇರೆಯವರಿಗೆ ಹೇಗೆ ಟಿಕೆಟ್ ಕೊಡ್ತಾರೆ ಎಂದು ಟೀಕಿಸಿದರು. ನಿಮ್ಮ ಬಸ್ ಯಾತ್ರೆ ಯಾವಾಗ ನಿಲ್ಲಿಸುತ್ತೀರಿ ಎಂದು ಕುಟುಕಿದ ಕೆ.ಎಸ್ ಈಶ್ವರಪ್ಪ, ಸಿದ್ಧರಾಮಯ್ಯ ಎಲ್ಲೇ ಸ್ಪರ್ಧಿಸಿದ್ರೂ ಅವರ ಪಕ್ಷದವರೇ ಸೋಲಿಸುತ್ತಾರೆ. ಚುನಾವಣೆಯಲ್ಲಿ ಸಿದ್ಧರಾಮಯ್ಯ ಸೋಲಬೇಕೆಂಬುದು ನನ್ನ ಆಸೆ. ಸಿದ್ಧರಾಮಯ್ಯ ಶಿವಮೊಗ್ಗದಲ್ಲಿ ಸ್ಪರ್ಧೆ ಮಾಡುವ ಮನಸು ಮಾಡಲ್ಲ ಎಂದು ಲೇವಡಿ ಮಾಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…

Read More

ಜಮ್ಮು ಮತ್ತು ಕಾಶ್ಮೀರದ ಸೋಪೋರ್‌ನಲ್ಲಿ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕನನ್ನು ಬಂಧಿಸಲಾಗಿದೆ. ಭದ್ರತಾ ಪಡೆಗಳೊಂದಿಗೆ ಜಮ್ಮು ಪೊಲೀಸರು ನಡೆಸಿದ ಜಂಟಿ ಶೋಧದಲ್ಲಿ ಭಯೋತ್ಪಾದಕ ಸಿಕ್ಕಿಬಿದ್ದಿದ್ದಾನೆ. ಆತನ ಬಳಿಯಿದ್ದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಭಯೋತ್ಪಾದಕ ಚಟುವಟಿಕೆಯ ಬಗ್ಗೆ ನಿರ್ದಿಷ್ಟ ಮಾಹಿತಿಯ ಮೇರೆಗೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಭಾರತೀಯ ಸೇನೆ (52RR) ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (177 Bn) ಜಂಟಿಯಾಗಿ ಪೇತ್ ಸೀರ್ ರೈಲು ನಿಲ್ದಾಣದ ಬಳಿ ಶೋಧ ಕಾರ್ಯಾಚರಣೆ ನಡೆಸಿತು. ಇದೇ ವೇಳೆ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ ಭಯೋತ್ಪಾದಕನನ್ನು ಜಂಟಿ ತಂಡ ವ್ಯೂಹಾತ್ಮಕವಾಗಿ ಬಂಧಿಸಿದೆ. ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್ ಜತೆ ನಂಟು ಹೊಂದಿರುವ ಮಂಚಸೀರ್ ನಿವಾಸಿ ಉಮರ್ ಬಶೀರ್ ಭಟ್ ಬಂಧಿತ ಆರೋಪಿ. ಆತನ ಬಳಿಯಿಂದ ಒಂದು ಹ್ಯಾಂಡ್ ಗ್ರೆನೇಡ್, ಪಿಸ್ತೂಲ್, ಪಿಸ್ತೂಲ್ ಮ್ಯಾಗಜೀನ್, 15 ಸುತ್ತಿನ ಪಿಸ್ತೂಲ್ ಮತ್ತು ಸಿಮ್ ಕಾರ್ಡ್ ಹೊಂದಿರುವ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಕಾಂಗ್ರೆಸ್ ನಾಯಕಿ ಹಾಗೂ ಕೇಂದ್ರದ ಮಾಜಿ ಸಚಿವೆ ರೇಣುಕಾ ಚೌಧರಿ ಹೇಳಿದ್ದಾರೆ. 2018ರಲ್ಲಿ ಮೋದಿ ಸಂಸತ್ತಿನಲ್ಲಿ ಶೂರ್ಪನಖಾ ಎಂದು ಕರೆದು ಅವಮಾನಿಸಿದ್ದಾರೆ ಮತ್ತು ಆಕೆಯ ದೂರಿನ ಬಗ್ಗೆ ನ್ಯಾಯಾಲಯ ಎಷ್ಟು ಬೇಗ ಕ್ರಮಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕು ಎಂದು ಟ್ವೀಟ್ ಮಾಡಿದ್ದಾರೆ. ಇದರ ವಿಡಿಯೋವನ್ನೂ ಶೇರ್ ಮಾಡಿದ್ದಾರೆ. ಮೋದಿ ಅವರು ತಮ್ಮ ಟೀಕೆಗಳಲ್ಲಿ ಶೂರ್ಪನಖಾ ಪದವನ್ನು ಬಳಸಲಿಲ್ಲ. ರೇಣುಕಾ ಚೌಧರಿ ಅವರ ಜೋರಾದ ನಗು ಸಂಸತ್ ಅಧ್ಯಕ್ಷ ವೆಂಕಯ್ಯ ನಾಯ್ಡು ಅವರನ್ನು ಕೆರಳಿಸಿತು. ಈ ವೇಳೆ, ‘ರೇಣುಕಾಜಿಗೆ ಏನೂ ಹೇಳಬೇಡಿ. ರಾಮಾಯಣ ಸರಣಿಯ ನಂತರ ನಾವು ಈ ರೀತಿಯ ನಗುವನ್ನು ಕೇಳಿದ್ದೇವೆ ಎಂದು ಮೋದಿ ಹೇಳಿದರು. ಇದರಿಂದ ಶೂರ್ಪನಖೆ ಎಂಬುದಾಗಿ ರೇಣುಕಾ ಸಿಂಗ್ ಆರೋಪಿಸಿದ್ದಾರೆ. ರಾಹುಲ್ ಗಾಂಧಿ ವಿರುದ್ಧದ ಕೋರ್ಟ್ ತೀರ್ಪಿನ ವಿರುದ್ಧ ಕಾಂಗ್ರೆಸ್ ಇಂದು ಪ್ರತಿಭಟನೆ ನಡೆಸಲಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧ ಪ್ರತಿಭಟನೆಗೆ ವಿರೋಧ ಪಕ್ಷಗಳ ಬೆಂಬಲವನ್ನು ಖಚಿತಪಡಿಸಿಕೊಳ್ಳಲು ವಿರೋಧ…

Read More

ಪುರಿಯ ಜಗನ್ನಾಥ ದೇಗುಲದಲ್ಲಿ ಇಲಿಗಳ ಕಾಟ ಅರ್ಚಕರ ನಿದ್ದೆ ಕೆಡಿಸಿದೆ. ದೇವಸ್ಥಾನದಲ್ಲಿರುವ ಪೂಜಾ ಮೂರ್ತಿಗಳ ಬಟ್ಟೆ, ಪೂಜಾ ಸಾಮಗ್ರಿಗಳನ್ನು ಇಲಿಗಳು ಕಚ್ಚಿ ತಿನ್ನುತ್ತವೆ. ಕೀಟನಾಶಕಗಳು ಲಭ್ಯವಿದೆ. ಆದರೆ ದೇವಸ್ಥಾನದ ಒಳಗೆ ಬಳಸುವಂತಿಲ್ಲ ಎಂದು ದೇವಸ್ಥಾನದ ಅರ್ಚಕರು ವಾದಿಸುತ್ತಾರೆ. ‘ಭಗವಂತನ ನಿದ್ದೆ ಕೆಡಿಸುತ್ತದೆ’ ಎಂಬುದು ಅವರ ವಾದವಾಗಿದೆ ಎಂದು ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ. ವಿಗ್ರಹಗಳನ್ನು ಇಲಿಗಳಿಂದ ರಕ್ಷಿಸಲು ಸ್ಟೀಲ್ ಗ್ರಿಲ್ ಅಗತ್ಯವಿದೆ ಎಂದು ಅರ್ಚಕರು ಈಗ ಹೇಳುತ್ತಾರೆ. ಅಂತಿಮವಾಗಿ, ಇಲಿಗಳನ್ನು ಹಿಡಿಯಲು ಬೆಲ್ಲದೊಂದಿಗೆ ಕಿರಿದಾದ ತಲೆಯ ಜಗ್ಗಳನ್ನು ಬಳಸಲಾಗುತ್ತದೆ. ಇಲಿಗಳನ್ನು ಆಕರ್ಷಿಸಲು ಬೆಲ್ಲವನ್ನು ಮಡಕೆಗಳಲ್ಲಿ ಇರಿಸಲಾಗುತ್ತದೆ. ಹಾಗೆಯೇ ಒಳಗೆ ಬಂದ ಇಲಿಗಳನ್ನು ಹಿಂಬದಿಯಿಂದ ಬಿಡಲಾಗುವುದು ಎನ್ನುತ್ತಾರೆ ದೇವಸ್ಥಾನದ ಅಧಿಕಾರಿಗಳು. ದೇವಾಲಯದ ಆವರಣ ಮತ್ತು ದೇವಾಲಯದ ಒಳಗೆ ಇಲಿಗಳು ಓಡುವುದರಿಂದ ಧಾರ್ಮಿಕ ಕ್ರಿಯೆಗಳಿಗೆ ತೊಂದರೆಯಾಗುತ್ತಿದೆ ಎಂದು ಅರ್ಚಕರು ದೂರುತ್ತಾರೆ. ಯಾಂತ್ರಿಕ ಸಹಾಯದಿಂದ ಇಲಿಗಳನ್ನು ನಿರ್ನಾಮ ಮಾಡಲು ಪ್ರಯತ್ನಿಸಲಾಯಿತು. ದೊಡ್ಡ ಶಬ್ದ ಮಾಡುವ ಯಂತ್ರವಿದೆ. ಈ ಶಬ್ದದಿಂದ ಇಲಿಗಳು ಹೆದರಿ ಓಡುತ್ತವೆ ಎಂದು…

Read More

ಸಿದ್ದರಾಮಯ್ಯ ಅವರ ಕ್ಷೇತ್ರ ಗೊಂದಲ ಭಾರಿ ಸುದ್ದಿಯಾಗಿದ್ದು ಈ ಬಗ್ಗೆ ಬಿಜೆಪಿ ನಾಯಕರ ಟೀಕೆ ಮುಂದುವರೆದಿದೆ . ಇದೀಗ ಈ ಕುರಿತು ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ. ಮಡಿಕೇರಿಯಲ್ಲಿ ಮಾತನಾಡಿರುವ ಸಂಸದ ಪ್ರತಾಪ್ ಸಿಂಹ, ‘ವಿವಿಧ ಭಾಗ್ಯಗಳನ್ನು ಕೊಟ್ಟ ಸಿದ್ದರಾಮಯ್ಯಗೆ ಕ್ಷೇತ್ರ ಭಾಗ್ಯವೇ ಇಲ್ಲ. ಕ್ಷೇತ್ರ ಹುಡುಕಿಕೊಳ್ಳಬೇಕಾದ ದಯನೀಯ ಸ್ಥಿತಿ ಬಂದಿದೆ ಅಂದರೆ ಸಿದ್ದರಾಮಯ್ಯರ ಭಾಗ್ಯಗಳಿಗೆ ಜನ ಬೆಲೆ ಕೊಟ್ಟಿಲ್ಲ ಎಂದಾಯಿತು. ಅವರ ಮೇಲೆ ಜನರಿಗೆ ವಿಶ್ವಾಸ ಇಲ್ಲ ಎಂಬುದು ಬಹಳ ಸ್ಪಷ್ಟವಾಗಿದೆ. ಅಂತಿಮವಾಗಿ ಸಿದ್ದರಾಮಯ್ಯ ವರುಣಾ ಕ್ಷೇತ್ರಕ್ಕೆ ಬರುತ್ತಾರೆ ಎಂದು ಲೇವಡಿ ಮಾಡಿದ್ದಾರೆ. ದಕ್ಷಿಣ‌ ಕರ್ನಾಟಕದ ಜನ ಕಾಂಗ್ರೆಸ್​, ಜೆಡಿಎಸ್​​ನಿಂದ‌ ಮಂಗಗಳಾಗಬೇಡಿ. ಯುಗಾದಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾಗಬೇಕಿತ್ತು. ಆದರೆ ಆಗಿಲ್ಲ. ಸಿದ್ದರಾಮಯ್ಯಗೆ ಕ್ಷೇತ್ರದ ಚಿಂತೆ, ಅವರ ಪತ್ನಿಗೆ ಮಗನ ಭವಿಷ್ಯದ ಚಿಂತೆಯಾಗಿದೆ. ಹೆಚ್​​.ಡಿ.ರೇವಣ್ಣಗೆ ಭವಾನಿ ರೇವಣ್ಣರ ಚಿಂತೆ, ಕುಮಾರಣ್ಣನಿಗೆ ನಿಖಿಲ್​​ ಚಿಂತೆ. ಕುಟುಂಬದ ಬಗ್ಗೆ ಚಿಂತೆ ಮಾಡುವವರಿಂದ ರಾಜ್ಯಕ್ಕೆ ಹಿತ ಸಿಗುವುದಿಲ್ಲ. ಆದ್ದರಿಂದ ಜನರು ಮಂಗ…

Read More

ದಿನಕ್ಕೆ ಎಷ್ಟು ಲೀಟರ್ ನೀರು ಕುಡಿಯಬೇಕು ಎಂಬುದು ಪ್ರತಿಯೊಬ್ಬ ವ್ಯಕ್ತಿಯ ದೇಹದ ಪ್ರಕಾರ, ವಾಸಿಸುವ ಪರಿಸರ ಇತ್ಯಾದಿಗಳನ್ನು ಅವಲಂಬಿಸಿರುತ್ತದೆ. ಕನಿಷ್ಠ 2 ಲೀಟರ್ ನೀರನ್ನು ಕುಡಿಯಲು ತಜ್ಞರು ಶಿಫಾರಸು ಮಾಡುತ್ತಾರೆ. ಶುದ್ಧ ನೀರು, ಹಣ್ಣಿನ ರಸಗಳು, ಹಾಲು ಮತ್ತು ಚಹಾದಂತಹ ನಾವು ಪ್ರತಿದಿನ ಸೇವಿಸುವ ಎಲ್ಲಾ ವಸ್ತುಗಳನ್ನು ಸೇರಿಸುವುದರಿಂದ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ನೀರು ಅತ್ಯಗತ್ಯ. ನಿಮ್ಮ ದೇಹಕ್ಕೆ ಸಾಕಷ್ಟು ನೀರು ಸಿಗುತ್ತಿದೆಯೇ ಎಂದು ತಿಳಿಯುವುದು ಹೇಗೆ ಎಂದು ನೀವು ಎಂದಾದರೂ ಯೋಚಿಸಿದ್ದೀರಾ? ಇದನ್ನು ಪತ್ತೆಹಚ್ಚಲು ಒಂದು ಸಾಧನವಿದೆಯೇ ಎಂದು ಹಲವರು ಆಶ್ಚರ್ಯ ಪಡುತ್ತಾರೆ. ಆದರೆ ನಮ್ಮ ದೇಹದಲ್ಲಿ ನೀರಿಲ್ಲದಿದ್ದರೆ ದೇಹವೇ ಕೆಲವು ಸಂಕೇತಗಳನ್ನು ನೀಡುತ್ತದೆ. ಕೆಲವು ರೋಗಲಕ್ಷಣಗಳು ಅಸಮಂಜಸವಾಗಿ ದಣಿದ ಭಾವನೆ, ತಲೆತಿರುಗುವಿಕೆ ಮತ್ತು ಒಣ ಬಾಯಿ ಮತ್ತು ತುಟಿಗಳನ್ನು ಒಳಗೊಂಡಿರುತ್ತದೆ. ಆದರೆ ಈ ಎಲ್ಲಾ ಲಕ್ಷಣಗಳು ಇತರ ಕಾರಣಗಳಿಂದಾಗಿರಬಹುದು. ಮೂತ್ರದ ಬಣ್ಣವನ್ನು ಪರೀಕ್ಷಿಸುವುದು ಸುಲಭವಾದ ಮಾರ್ಗವಾಗಿದೆ. ಮೂತ್ರವು ಹಳದಿ ಮಿಶ್ರಿತ ಬಿಳಿ ಬಣ್ಣದಲ್ಲಿದ್ದರೆ, ನಿಮ್ಮ ದೇಹವು ಸಾಕಷ್ಟು…

Read More

ಗೂಗಲ್ ಮುಷ್ಕರ ನಡೆಸಿತು. ಪ್ರಪಂಚದಾದ್ಯಂತದ ಅನೇಕ ಗ್ರಾಹಕರು YouTube, ಡ್ರೈವ್ ಮತ್ತು Gmail ನಂತಹ ಸೇವೆಗಳಲ್ಲಿ ಕಡಿತವನ್ನು ಅನುಭವಿಸುತ್ತಿದ್ದಾರೆ. ಡೌನ್ ಡಿಟೆಕ್ಟರ್ ಸುದ್ದಿಯನ್ನು ಖಚಿತಪಡಿಸಿದೆ. ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಗೂಗಲ್ ಸೇವೆಗಳು ಸಮಸ್ಯೆಯಿಂದ ಬಳಲುತ್ತಿವೆ. 82% ಅನುಭವಿ ಸರ್ವರ್ ಸಂಪರ್ಕ ವೈಫಲ್ಯ, 12% ಅನುಭವಿ ಲಾಗಿನ್ ತೊಂದರೆ, ಮತ್ತು 6% ಇ-ಮೇಲ್ ಸ್ವೀಕರಿಸಲು ವಿಫಲವಾಗಿದೆ. Google Workspace ಮತ್ತು Google ಡಾಕ್ಸ್ ಸಹ ಲಭ್ಯವಿಲ್ಲ. ಗೂಗಲ್ ಸ್ಟ್ರೈಕ್ ಬಗ್ಗೆ ಟ್ವಿಟ್ಟರ್ ನಲ್ಲಿ ಹಲವರು ಟ್ವೀಟ್ ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ದಾಖಲೆ ಇಲ್ಲದೆ ಪಿಕಪ್‌ನಲ್ಲಿ ಸಾಗಿಸುತ್ತಿದ್ದ 9 ಕೆ.ಜಿ. 300 ಗ್ರಾಂ ಚಿನ್ನವವನ್ನ ವಶಪಡಿಸಿಕೊಂಡಿರುವ ಘಟನೆ ಚಿಕ್ಕಮಗಳೂರಿನ ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಜಿಲ್ಲಾದ್ಯಂತ ಗಡಿಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ನಿರ್ಮಿಸಲಾಗಿದೆ. ಅದೇ ರೀತಿ ತರೀಕೆರೆ (Tarikere) ಪಟ್ಟಣದ ಪೊಲೀಸ್ ಚೆಕ್ ಪೋಸ್ಟ್ ಬಳಿ ತಪಾಸಣೆ ನಡೆಸಿದಾಗ ಇಬ್ಬರು ವ್ಯಕ್ತಿಗಳು ಪಿಕಪ್‌ ನಲ್ಲಿ ನಾಲ್ಕು ಬಾಕ್ಸ್ ಚಿನ್ನ ಅಕ್ರಮ ಸಾಗಾಟ ಮಾಡುತ್ತಿರುವುದು ಕಂಡುಬಂದಿದೆ. ಪಿಕಪ್ ವಾಹನದಲ್ಲಿ ಚಿನ್ನದ ಸರಗಳು ಹಾಗೂ ಚಿನ್ನದ ಬಿಸ್ಕೆಟ್ ಪತ್ತೆಯಾಗಿದೆ. ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಿ 2 ಕೋಟಿ 30 ಲಕ್ಷ ರೂ. ಬೆಲೆ ಬಾಳುವ 9 ಕೆ.ಜಿ. 300 ಗ್ರಾಂ ಚಿನ್ನವನ್ನೂ ವಶಪಡಿಸಿಕೊಂಡಿದ್ದಾರೆ. ಪಿಕಪ್ ವಾಹನ ಸವಾರ ಸೇರಿದಂತೆ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More