Subscribe to Updates
Get the latest creative news from FooBar about art, design and business.
- ತುರುವೇಕೆರೆ: ವಿದ್ಯುತ್ ಖಾಸಗಿಕರಣ ತಿರಸ್ಕರಿಸಲು ಒತ್ತಾಯಿಸಿ ರೈತ ಸಂಘದಿಂದ ಮನವಿ
- ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ
- ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು
- ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ
- ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ
- ಜುಲೈ 3ರಂದು ‘ದಲಿತ ಜನಾಗ್ರಹ ಸಮಾವೇಶ’: ಸರಗೂರು ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಬಿಡುಗಡೆ
- ಮಧುಗಿರಿ: ಸಿದ್ಧಾರ್ಥ ವಸತಿ ಪ್ರೌಢಶಾಲೆಯಲ್ಲಿ 2006ರ ಬ್ಯಾಚ್ ಹಳೆಯ ವಿದ್ಯಾರ್ಥಿಗಳಿಂದ ಉಚಿತ ಸಮವಸ್ತ್ರ ವಿತರಣೆ
- SIR: ಅರ್ಹ ನಾಗರಿಕರ ಮತದಾನದ ಹಕ್ಕು ಕಸಿದುಕೊಳ್ಳುವ ಅಪಾಯ: ಹೆಚ್.ವಿ. ವಾಸು ಆತಂಕ
Author: admin
19 ವರ್ಷದ ನಂದಿನಿ ಗುಪ್ತಾ ತಮ್ಮ ಬುದ್ಧಿವಂತಿಕೆ ಮತ್ತು ಸೌಂದರ್ಯಕ್ಕಾಗಿ ಮಿಸ್ ಇಂಡಿಯಾ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಮಣಿಪುರದ ಇಂಫಾಲ್ ಸ್ಟೇಡಿಯಂನಲ್ಲಿ ನಡೆದ ಸಮಾರಂಭದಲ್ಲಿ ರಾಜಸ್ಥಾನದ ಕೋಟಾ ಮೂಲದ ನಂದಿನಿ ಮಿಸ್ ಇಂಡಿಯಾ ಆಗಿ ಆಯ್ಕೆಯಾದರು. ನಂದಿನಿ ಗುಪ್ತಾ ಚಿಕ್ಕಂದಿನಿಂದಲೂ ವಿಷಯಗಳನ್ನು ಯೋಜಿಸಿ ಜನರನ್ನು ರಂಜಿಸುವಲ್ಲಿ ನಿಪುಣರಾಗಿದ್ದರು ಎಂದು ಸಂಬಂಧಿಕರು ಹೇಳುತ್ತಾರೆ. ನಂದಿನಿ ರಾಜಸ್ಥಾನದ ಸೇಂಟ್ ಪಾಲ್ಸ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು ಮತ್ತು ಲಾಲಾ ಲಜಪತ್ ರಾಯ್ ಕಾಲೇಜಿನಲ್ಲಿ ವ್ಯವಹಾರ ನಿರ್ವಹಣೆಯಲ್ಲಿ ಪದವಿ ಪಡೆದರು. ಜೀವನದಲ್ಲಿ ಹಿನ್ನಡೆಗಳು ವ್ಯಕ್ತಿತ್ವವನ್ನು ಬೆಳೆಸುತ್ತವೆ ಎನ್ನುತ್ತಾರೆ ನಂದಿನಿ. ಮುಂದೆ ಜೀವನದಲ್ಲಿ ಎದುರಾಗಬಹುದಾದ ಕಷ್ಟಗಳು, ನಿರಾಸೆಗಳು ಮತ್ತು ನಿರ್ಲಕ್ಷ್ಯಗಳನ್ನು ನಿವಾರಿಸುವ ಸಾಮರ್ಥ್ಯ ಹೊಂದಿದ್ದೇನೆ ಎಂದು ನಂದಿನಿ ಮಿಸ್ ಇಂಡಿಯಾ ವೇದಿಕೆಯಲ್ಲಿ ಹೇಳಿದರು. ಫೆಮಿನಾ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ 30 ಸ್ಪರ್ಧಿಗಳು ಭಾಗವಹಿಸಿದ್ದರು. ದೆಹಲಿ ಸೇರಿದಂತೆ 29 ರಾಜ್ಯಗಳ ಸ್ಪರ್ಧಿಗಳು ಪ್ರತಿನಿಧಿಸಿದ್ದರು. ಅಲ್ಲದೆ ಕೇಂದ್ರಾಡಳಿತ ಪ್ರದೇಶಗಳ ಪ್ರತಿನಿಧಿಯೂ ಅಂತಾರಾಷ್ಟ್ರೀಯ ಸೌಂದರ್ಯ ಸ್ಪರ್ಧೆಯ ಭಾಗವಾಗಿದ್ದರು. ಫ್ಯಾಶನ್ ಸೆಲೆಬ್ರಿಟಿಗಳಾದ…
ಅಲಪ್ಪುಳದಲ್ಲಿ ರೈಲು ಚಲಿಸಲು ಪ್ರಾರಂಭಿಸಿದಾಗ ಹತ್ತಲು ಪ್ರಯತ್ನಿಸುತ್ತಿದ್ದ ಮಹಿಳೆಯ ರಕ್ಷಣೆಗೆ ರೈಲ್ವೆ ಪೋರ್ಟರ್ ಬಂದರು. ಅಲಪ್ಪುಳ ರೈಲು ನಿಲ್ದಾಣದಿಂದ ತಿರುವನಂತಪುರಕ್ಕೆ ಬೆಳಗ್ಗೆ 6.30ರ ಇಂಟರ್ಸಿಟಿ ಎಕ್ಸ್ಪ್ರೆಸ್ ಹತ್ತುತ್ತಿದ್ದ ಮಹಿಳೆಯನ್ನು ಪೋರ್ಟರ್ ಶಮೀರ್ ರಕ್ಷಿಸಿದರು. ರೈಲು ಬರುವ ಮುನ್ನವೇ ಐವರ ಕುಟುಂಬ ರೈಲು ನಿಲ್ದಾಣ ತಲುಪಿತ್ತು. ರೈಲು ನಿಂತಾಗ, ಅವರು ಹತ್ತಲು ಕೋಚ್ ಅನ್ನು ಹುಡುಕುತ್ತಿದ್ದರು. ರೈಲು ಚಲಿಸಲು ಪ್ರಾರಂಭಿಸಿದಾಗ, ಅವರು ಹತ್ತಲು ಪ್ರಯತ್ನಿಸಿದರು. ಸಿಕ್ಕಿಬಿದ್ದರೆ ರೈಲಿನ ಕೆಳಗೆ ಬೀಳುತ್ತಾರೆ. ಇದನ್ನು ಕಂಡ ಹಮಾಲಿ ಶಮೀರ್ ಓಡಿ ಬಂದು ಅವರನ್ನು ರಕ್ಷಿಸಿದ್ದಾರೆ. ಇಬ್ಬರೂ ಪ್ಲಾಟ್ಫಾರ್ಮ್ ಮೇಲೆ ಬಿದ್ದಿದ್ದರೂ ಯಾವುದೇ ಗಾಯಗಳಾಗಿಲ್ಲ. ತಾಯಿ ಹತ್ತದ ಕಾರಣ ಮಗಳೂ ರೈಲಿನಿಂದ ಜಿಗಿದಿದ್ದಾಳೆ. ಹಿರಿಯ ಮಹಿಳೆಯ ಪತಿ ಅದೇ ರೈಲಿನಲ್ಲಿ ತಿರುವನಂತಪುರಕ್ಕೆ ಪ್ರಯಾಣ ಮುಂದುವರಿಸಿದರು. ತಾಯಿ, ಮಗಳು, ಮಗಳ ಗಂಡ ಮತ್ತು ಚಿಕ್ಕ ಮಗು ಟ್ಯಾಕ್ಸಿ ಕರೆದು ತಿರುವನಂತಪುರಕ್ಕೆ ಹೋದರು. ಕುಟುಂಬದವರು ತಮಿಳು ಮಾತನಾಡುವವರು. ಸಕಾಲದಲ್ಲಿ ರಕ್ಷಕನಾಗಿ ಹೊರಹೊಮ್ಮಿದ ಶಮೀರ್ ಅವರನ್ನು ಎಲ್ಲರೂ ಅಭಿನಂದಿಸಿದರು. ನಮ್ಮತುಮಕೂರು.ಕಾಂನ ಕ್ಷಣ…
ಪ್ರಯಾಗ್ ರಾಜ್ನಲ್ಲಿ ಮಾಜಿ ಸಂಸದ ಮತ್ತು ದರೋಡೆಕೋರ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅಹ್ಮದ್ ಅವರನ್ನು ಗುಂಡಿಕ್ಕಿ ಕೊಂದಿರುವ ಬಗ್ಗೆ ಎಐಎಂಎಂ ನಾಯಕ ಅಸಾದುದ್ದೀನ್ ಓವೈಸಿ ಪ್ರತಿಕ್ರಿಯಿಸಿದ್ದಾರೆ. ಇದು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರದ ದೊಡ್ಡ ವೈಫಲ್ಯವಾಗಿದೆ. ಅಲ್ಲದೆ ಯೋಗಿ ರಾಜೀನಾಮೆ ನೀಡಬೇಕು ಎಂದು ಆರೋಪಿಸಿದರು. ಉತ್ತರ ಪ್ರದೇಶದಲ್ಲಿ ಬಿಜೆಪಿ ಆಡಳಿತ ನಡೆಸುತ್ತಿರುವುದು ಬಂದೂಕಿನ ಮೂಲಕವೇ ಹೊರತು, 2017ರಲ್ಲಿ ಬಿಜೆಪಿ ಸರ್ಕಾರ ರಚನೆಯಾದಾಗಿನಿಂದ ಇದು ನಡೆಯುತ್ತಿದೆ ಎಂದು ಓವೈಸಿ ಆರೋಪಿಸಿದರು. ಘಟನೆಯ ಬಗ್ಗೆ ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯ ತನಿಖೆ ಅಗತ್ಯವಿದೆ ಎಂದು ಓವೈಸಿ ಸುದ್ದಿಗಾರರಿಗೆ ತಿಳಿಸಿದರು. ಈ ಘಟನೆ ಕಾನೂನು ಸುವ್ಯವಸ್ಥೆಯ ಬಗ್ಗೆ ದೊಡ್ಡ ಪ್ರಶ್ನೆಯನ್ನು ಹುಟ್ಟುಹಾಕಿದೆ. ಇದಾದ ನಂತರ ದೇಶದ ಸಂವಿಧಾನ ಮತ್ತು ಕಾನೂನು ಸುವ್ಯವಸ್ಥೆ ಮೇಲೆ ಸಾರ್ವಜನಿಕರಿಗೆ ನಂಬಿಕೆ ಮೂಡುತ್ತದೆಯೇ? ಉತ್ತರ ಪ್ರದೇಶದ ಮುಖ್ಯಮಂತ್ರಿ ರಾಜೀನಾಮೆಗೆ ನಾವು ಒತ್ತಾಯಿಸುತ್ತೇವೆ. ಸುಪ್ರೀಂ ಕೋರ್ಟ್ ಈ ವಿಷಯವನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಳ್ಳಬೇಕು ಮತ್ತು ಘಟನೆಯ ತನಿಖೆಗೆ ತಂಡವನ್ನು…
ಪುಲ್ವಾಮಾ ದಾಳಿಯಲ್ಲಿ ಸರ್ಕಾರ ವಿಫಲವಾಗಿದೆ ಎಂದು ಮಾಜಿ ಸೇನಾ ಮುಖ್ಯಸ್ಥ ಜನರಲ್ ಶಂಕರ್ ರಾಯ್ ಚೌಧರಿ ಹೇಳಿದ್ದಾರೆ. ಈ ಘಟನೆಗೆ ನರೇಂದ್ರ ಮೋದಿ ಸರಕಾರವೇ ಪ್ರಮುಖ ಹೊಣೆ. ಗುಪ್ತಚರ ವೈಫಲ್ಯಕ್ಕೆ ರಾಷ್ಟ್ರೀಯ ಭದ್ರತಾ ಸಲಹೆಗಾರರನ್ನೂ ದೂಷಿಸಿದರು. ಪಾಕಿಸ್ತಾನದ ಗಡಿಯಲ್ಲಿರುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸೇನಾ ವಾಹನಗಳು ಸಂಚರಿಸಲು ಅವಕಾಶವಿರಲಿಲ್ಲ. ಸೈನಿಕರು ವಿಮಾನದಲ್ಲಿ ಪ್ರಯಾಣಿಸಿದ್ದರೆ ಘಟನೆಯನ್ನು ತಪ್ಪಿಸಬಹುದಿತ್ತು. ನಡೆದದ್ದು ದೊಡ್ಡ ಹಿನ್ನಡೆ. ಗುಪ್ತಚರ ವೈಫಲ್ಯಕ್ಕೆ ರಾಷ್ಟ್ರೀಯ ಭದ್ರತಾ ಸಲಹೆಗಾರರನ್ನೂ ದೂಷಿಸಿದರು. ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಅವರ ಬಹಿರಂಗಪಡಿಸುವಿಕೆಯ ಹಿನ್ನೆಲೆಯಲ್ಲಿ ಪ್ರತಿಕ್ರಿಯೆಯಾಗಿದೆ. ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಕೇಂದ್ರ ಗೃಹ ಸಚಿವಾಲಯ ಭದ್ರತಾ ಲೋಪವನ್ನು ಅನುಭವಿಸಿದೆ ಎಂದು ಸತ್ಯಪಾಲ್ ಮಲಿಕ್ ಆರೋಪಿಸಿದ್ದಾರೆ. ಪ್ರಧಾನಿ ಮೋದಿ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರು ಈ ವಿಷಯದ ಬಗ್ಗೆ ಮೌನವಾಗಿರುವಂತೆ ಕೇಳಿಕೊಂಡರು ಎಂದು ಸತ್ಯಪಾಲ್ ಮಲಿಕ್ ಬಹಿರಂಗಪಡಿಸಿದ್ದಾರೆ. ದಿ ವೈರ್ಗೆ ನೀಡಿದ ಸಂದರ್ಶನದಲ್ಲಿ ಇದನ್ನು ಹೇಳಲಾಗಿದೆ. ಫೆಬ್ರವರಿ 14, 2019 ರಂದು ನಡೆದ ಪುಲ್ವಾಮಾ ದಾಳಿಯಲ್ಲಿ…
ವಿಜಯಪುರ: ಬಿಜೆಪಿ ನಿಮ್ಮನ್ನು ಸಚಿವರು, ಉಪಮುಖ್ಯಮಂತ್ರಿ, ಮುಖ್ಯಮಂತ್ರಿಯನ್ನಾಗಿ ಮಾಡಿದೆ. ಇಷ್ಟೆಲ್ಲಾ ಅನುಭವಿಸಿ ಈಗ ಕಾಂಗ್ರೆಸ್ಗೆ ಹೋಗುತ್ತೀರಲ್ಲ ನಿಮಗೆ ಮಾನ, ಮರ್ಯಾದೆ, ಸ್ವಾಭಿಮಾನ ಇದೆಯಾ? ಎಸ್ಡಿಪಿಐ ಸಂಘಟನೆ ಜೊತೆ ಮೈತ್ರಿ ಮಾಡಿಕೊಂಡ ಕಾಂಗ್ರೆಸ್ ಪಕ್ಷಕ್ಕೆ ನಿಮಗೆ ನಾಚಿಕೆ ಆಗುತ್ತೋ ಇಲ್ವೋ ಎಂದು ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದರು. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರ ದಲಿತರು, ಮುಸ್ಲಿಮರು, ಮರಾಠರು, ಬ್ರಾಹ್ಮಣರಿಗೆ ಸೇರಿದಂತೆ ಎಲ್ಲಾ ಸಮುದಾಯಗಳಿಗೆ ಅನುಕೂಲ ಕಲ್ಪಿಸಿದೆ. ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮೋಸ ಮಾಡುವ ಯೋಜನೆ, ಪಿಎಫ್ಐನ ಸ್ವರೂಪವಾದ ಎಸ್ಡಿಪಿಐ ಜೊತೆಗೆ ಕಾಂಗ್ರೆಸ್ ಒಪ್ಪಂದ ಮಾಡಿಕೊಂಡಿದೆ. 2047ಕ್ಕೆ ಭಾರತವನ್ನು ಮುಸ್ಲಿಂ ರಾಷ್ಟ್ರ ಮಾಡಲು ಹುನ್ನಾರ ನಡೆದಿದೆ. 2047ಕ್ಕೆ ಭಾರತದ ಹಿಂದೂಗಳನ್ನು ಮತಾಂತರ ಮಾಡುವುದು, ನಿರ್ನಾಮ ಮಾಡುವುದು ಎಸ್ಡಿಪಿಐ ಕೆಲಸವಾಗಿದೆ. ಪಿಎಫ್ಐ ಸಂಘಟನೆಯು ಕರ್ನಾಟಕವನ್ನು ಇಸ್ಲಾಂ ರಾಜ್ಯವನ್ನಾಗಿಸುವ ಯೋಜನೆ ಹಾಕಿಕೊಂಡಿದೆ ಎಂದು ಕಿಡಿ ಕಾರಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…
ತಿಪಟೂರು : ತಿಪಟೂರು ಜೆ.ಡಿ.ಎಸ್ ನಾಯಕರುಗಳು ನನಗೆ ಜೆ.ಡಿ.ಎಸ್ ಟಿಕೆಟ್ ದೊರಕಿಸಿಕೊಡುತ್ತೇವೆ ಎಂದು ನನ್ನ ಬಳಿ ಹಣವನ್ನು ತೆಗೆದುಕೊಂಡು ನನಗೆ ಅನ್ಯಾಯ ಮಾಡಿದ್ದಾರೆ. ಅವರ ಹೆಸರುಗಳನ್ನು ಮುಂದಿನದಿನಗಳಲ್ಲಿ ತಿಳಿಸುತ್ತೇನೆ ಹಾಗೂ ಜೆ.ಡಿ.ಎಸ್ ಬಂಡಾಯವಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಸುತ್ತೇನೆ ಎಂದು ಜೆ.ಡಿ.ಎಸ್ ಮುಖಂಡ ಎಂ.ರವಿ (ಬಂಡೆರವಿ) ತಿಳಿಸಿದರು. ನಗರದ ಖಾಸಗಿ ಹೋಟೆಲ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನ ಜನತೆಯ ಸೇವೆ ಮಾಡಬೇಕೆಂಬ ಉದ್ದೇಶದಿಂದ ಸಮಾಜ ಸೇವಕನಾಗಿ ಕೈಲಾಗದವರ ಧನಿಯಾಗಿ ಕೈಲಾದ ಸಮಾಜಸೇವೆಯನ್ನು ಮಾಡುತ್ತಾ ಬರುತ್ತಿದ್ದೇನೆ. ಈ ಹಿನ್ನೆಲೆಯಲ್ಲಿಯೇ ನನಗೆ ಕುಮಾರಸ್ವಾಮಿಯವರ ಪರಿಚಯವಿದ್ದು, ಈ ಬಗ್ಗೆ ತಿಳಿದ ಇಲ್ಲಿನ ಪ್ರಭಾವಿ ಜೆ.ಡಿ.ಎಸ್. ಮುಖಂಡರು ನೀವು ಜೆ.ಡಿ.ಎಸ್ ನಿಂದ ನೀವೇ ಅಭ್ಯರ್ಥಿಯಾಗಿ ಎಂದು ಹೇಳಿ 2022ರ ಯುಗಾದಿಯಲ್ಲಿ ಹಲವಾರು ಕಡೆ ಫ್ಲೆಕ್ಸ್ ಹಾಕಿಸಿದರು ಹಾಗೂ ನನ್ನಿಂದ ಹಣವನ್ನು ಪಡೆದರು. ಹೀಗೆ ಹಣ ಪಡೆದವರು ನನಗೆ ಮೋಸಮಾಡಿ ಈಗ ಜೆ.ಡಿ.ಎಸ್ ನಾಯಕನ ಹಿಂದೆ ಓಡಾಡುತ್ತಿದ್ದಾರೆ ಅವರು ಯಾರೆಂದು ಇದೇ ತಿಂಗಳ 20ರ…
ಧಾರವಾಡ: ರಾಜಕೀಯದ ನಂತರ ಜಗದೀಶ್ ಶೆಟ್ಟರ್ ಕಾರ್ಯಕರ್ತರ ಜೊತೆ ಸೇರಿ ಬಿಜೆಪಿ ಪಕ್ಷ ಇನ್ನಷ್ಟು ಬಲಪಡಿಸುವ ಕೆಲಸ ಮಾಡುತ್ತಾರೆ ಎಂದುಕೊಂಡಿದ್ದೆವು. ಆದರೆ ಅವರ ರಾಜೀನಾಮೆ ಪಕ್ಷಕ್ಕೆ ಬಹಳ ದುಃಖದ ಸಂಗತಿ. ಹಾಗೆಂದು ಪಕ್ಷಕ್ಕೆ ಯಾವುದೇ ಡ್ಯಾಮೇಜ್ ಆಗಿಲ್ಲ ಎಂದು ಶಾಸಕ ಅರವಿಂದ ಬೆಲ್ಲದ್ ಹೇಳಿದ್ದಾರೆ. ಧಾರವಾಡದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಬಿಜೆಪಿಯ ಹಿರಿಯ ನಾಯಕರಾಗಿದ್ದರು. ವಕೀಲರಾಗಿದ್ದ ಅವರಿಗೆ ಬಿಜೆಪಿ ಪಕ್ಷ ಕರೆದು ಟಿಕೆಟ್ ನೀಡಿ, ಶಾಸಕರನ್ನಾಗಿ ಮಾಡಿತ್ತು. ಜೊತೆಗೆ ಮುಖ್ಯಮಂತ್ರಿಯನ್ನಾಗಿಯೂ ಮಾಡಿತ್ತು. ಆದರೆ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರುತ್ತಿರುವುದರಿಂದ ನಮಗೆ ಬಹಳ ನೋವಾಗಿದೆ ಎಂದು ಹೇಳಿದರು. ಬಿಜೆಪಿ ಪಕ್ಷ ಇಂದು ದೊಡ್ಡ ಪ್ರಮಾಣದಲ್ಲಿ ಬೆಳೆದಿದೆ. ಹಿರಿಯರೊಬ್ಬರು ಮನೆ ತೊರೆದಿದ್ದಕ್ಕೆ ಬೇಜಾರಾಗಿದೆ. ಕೇಂದ್ರದಲ್ಲಿ ರಾಜ್ಯಸಭಾ ಸದಸ್ಯರನ್ನಾಗಿ ಮಾಡುತ್ತೇವೆ ಎಂದರೂ ಶೆಟ್ಟರ್ ಕೇಳಲಿಲ್ಲ. ಲಿಂಗಾಯತರನ್ನು ಸಿಎಂ ಮಾಡಿದ್ದೇ ಬಿಜೆಪಿ ಪಕ್ಷ. ಬಿಜೆಪಿ 67 ಸೀಟುಗಳನ್ನು ಲಿಂಗಾಯತರಿಗೆ ಕೊಟ್ಟಿದೆ. ಲಿಂಗಾಯತರಿಗೆ ಮಾನ್ಯತೆ ಕೊಟ್ಟಿದ್ದು ಯಾವ ಪಕ್ಷ ಎಂಬುದು ಜನರಿಗೆ…
ಬೆಳಗಾವಿ: ಜಗದೀಶ್ ಶೆಟ್ಟರ್ ಎಲ್ಲಾ ಹುದ್ದೆಗಳನ್ನು ಅನುಭವಿಸಿದ್ದರೂ ಸಹ ಬಿಜೆಪಿ ತೊರೆದಿದ್ದಾರೆ. ಅವರೇನೂ ದೊಡ್ಡ ನಾಯಕರಲ್ಲ ಎಂದು ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ. ನಗರದ ಧರ್ಮನಾಥ್ ಭವನದಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷದಲ್ಲಿ ಎಲ್.ಕೆ ಅಡ್ವಾಣಿಯಂತಹ ದೊಡ್ಡ ನಾಯಕರೇ ಬಹು ದೊಡ್ಡ ತ್ಯಾಗಗಳನ್ನು ಮಾಡಿದ್ದಾರೆ. ಆದರೆ ಎಲ್ಲಾ ಅಧಿಕಾರವನ್ನು ಅನುಭವಿಸಿ ಕೆಲವರು ಪಕ್ಷವನ್ನು ತೊರೆಯುತ್ತಿದ್ದಾರೆ. ಬಿಜೆಪಿ ವಿರುದ್ಧ ಮಾತನಾಡುತ್ತಿದ್ದಾರೆ. ಹೋಗುವವರು ಹೋಗಲಿ ಪಕ್ಷ ಸ್ವಚ್ಛ ಆಗುತ್ತದೆ ಎಂದಿದ್ದಾರೆ. ಮಾಜಿ ಶಾಸಕ ಸಂಜಯ್ ಪಾಟೀಲ್ ಹಾಗೂ ಧನಂಜಯ ಜಾಧವ್ ಇಬ್ಬರೂ ಬೆಳಗಾವಿ ಗ್ರಾಮೀಣ ಬಿಜೆಪಿ ಟಿಕೆಟ್ ಪ್ರಬಲ ಆಕಾಂಕ್ಷಿಗಳಾಗಿದ್ದರು. ಆದರೆ ಮೂರನೇಯವರಿಗೆ ಟಿಕೆಟ್ ಸಿಕ್ಕರೂ ಸಭೆಯಲ್ಲಿ ಮನಪೂರ್ವಕವಾಗಿ ಭಾಗವಹಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ರೀತಿಯ ಸನ್ನಿವೇಶ ಬಿಜೆಪಿಯಲ್ಲಿ ಮಾತ್ರ ನೋಡಲು ಸಾಧ್ಯ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…
ಬೆಂಗಳೂರು: ಕೆಜೆಪಿ ಕಟ್ಟಿದ್ದು ನನ್ನ ಬದುಕಿನಲ್ಲಿ ಮಾಡಿದ ಅಕ್ಷಮ್ಯ ಅಪರಾಧ. ಈ ಕುರಿತಾಗಿ ನಾನು ಹಿಂದೆ ಜನರಿಗೆ ಕ್ಷಮೆ ಕೇಳಿದ್ದೇನೆ ಎಂದು ಬಿ.ಎಸ್ಯಡಿಯೂರಪ್ಪ ಹೇಳಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿವೃತ್ತಿಯಾಗಿ ಅಂತಾ ಜಗದೀಶ್ ಶೆಟ್ಟರ್ಗೆ ಯಾರೂ ಹೇಳಿಲ್ಲ. ಶೆಟ್ಟರ್ ಕುಟುಂಬಕ್ಕೆ ಟಿಕೆಟ್ ನೀಡುವುದಾಗಿ ಭರವಸೆ ಕೊಟ್ಟಿದ್ದರು. ಆದರೂ ಅವರು ಬಿಜೆಪಿ ಬಿಟ್ಟಿದ್ದಾರೆ. ಜನ ಅವರನ್ನ ಕ್ಷಮಿಸಲ್ಲ. ನಾನು ಅವರೊಂದಿಗೆ ಎರಡು ಮೂರು ಸಲ ಮಾತಾಡಿದೆ. ಯಾರೇ ಪಕ್ಷ ಬಿಟ್ಟರೂ ನಮಗೆ ಸಮಸ್ಯೆ ಆಗಲ್ಲ. ಅಧಿಕಾರಕ್ಕೆ ಬಂದಾಗ ಸವದಿಗೆ ಸಚಿವ ಸ್ಥಾನ ನೀಡುವುದಾಗಿ ಹೇಳಿದ್ದೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಇವರ ಬಣ್ಣ ಬಯಲು ಮಾಡುತ್ತೇನೆ ಎಂದು ವಾಗ್ದಾಳಿ ಮಾಡಿದರು. ನನಗೆ 80 ವರ್ಷ ಆಗಿದೆ. ನಾನಿನ್ನೂ ಗಟ್ಟಿ ಇದ್ದೇನೆ. ಕಾರ್ಯಕರ್ತರು ನಮ್ಮ ಜೊತೆ ಇದ್ದಾರೆ. ಬಿಜೆಪಿ ಅಭ್ಯರ್ಥಿಗಳನ್ನ ಗೆಲ್ಲಿಸಿಕೊಂಡು ಬರುತ್ತೇವೆ. ಉತ್ತರ ಕರ್ನಾಟಕ ಭಾಗದಲ್ಲೂ ಸುತ್ತಿ ಪಕ್ಷ ಗೆಲ್ಲುವ ಕೆಲಸ ಮಾಡುತ್ತೇನೆ ಎಂದು ಹೇಳಿದರು. ನನ್ನ ಸಂಪೂರ್ಣ ಬದುಕನ್ನು ಬಿಜೆಪಿ, ದೇಶಕ್ಕೆ…
ಕೋಲಾರ: ಚುನಾವಣೆಯಲ್ಲಿ ರಾಜ್ಯವನ್ನು ರಕ್ಷಣೆ ಮಾಡುವ ಪಕ್ಷಕ್ಕೆ ಅಧಿಕಾರ ಕೊಡಿ ಎಂದು ಸಿದ್ದರಾಮಯ್ಯ ತಿಳಿಸಿದರು. ಕಾಂಗ್ರೆಸ್ ಜೈಭಾರತ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ 4 ವರ್ಷಗಳಿಂದ ಬಿಜೆಪಿ ಸರ್ಕಾರ ಇದೆ. ಮೇ 10ರಂದು ಚುನಾವಣೆ ನಡೆಯಲಿದೆ. ರಾಜ್ಯದ ನೆಲ, ಜಲ, ಭಾಷೆಯನ್ನು ಯಾರು ರಕ್ಷಣೆ ಮಾಡುತ್ತಾರೆ ಅಂತ ನೀವು ವಿಚಾರ ಮಾಡಿ ಎಂದು ಹೇಳಿದರು. ಮೋದಿ 9 ವರ್ಷದಿಂದ ಅಧಿಕಾರ ಮಾಡುತ್ತಿದ್ದಾರೆ. ಈ 5 ವರ್ಷದಲ್ಲಿ ರಾಜ್ಯದಲ್ಲಿ 3 ಜನ ಸಿಎಂ ಆದರು. ಕುಮಾರಸ್ವಾಮಿ, ಯಡಿಯೂರಪ್ಪ, ಬೊಮ್ಮಾಯಿ ಸಿಎಂ ಆಗಿದ್ದರು. ಮೋದಿ ಅವರು ಬೊಮ್ಮಾಯಿ ಅವರು ಡಬಲ್ ಎಂಜಿನ್ ಸರ್ಕಾರ ಅಂತಾರೆ. ಎರಡು ಕಡೆ ಸರ್ಕಾರ ಇರುವುದರಿಂದ ರಾಜ್ಯದ ಅಭಿವೃದ್ಧಿ ವೇಗವಾಗಿ ಆಗುತ್ತದೆ ಅಂತಾರೆ. ಆದರೆ ಡಬಲ್ ಎಂಜಿನ್ ಸರ್ಕಾರ ಬಂದ ಮೇಲೆ ರಾಜ್ಯ ಕೆಟ್ಟ ಹೆಸರು ತೆಗೆದುಕೊಂಡಿದೆ ಎಂದು ಕಿಡಿಕಾರಿದರು. ರಾಜ್ಯದ ಗೌರವವನ್ನು, ಮಾನ ಮರ್ಯಾದೆಯನ್ನು ಕಾಂಗ್ರೆಸ್ ಅವರು ಹಾಳು ಮಾಡಿದ್ದಾರೆ ಎಂದು ಬಾಯಿ ತಪ್ಪಿ ಹೇಳಿದ ಅವರು,…