Author: admin

ಮಂಗಳೂರು : 23 ಪ್ರಕರಣಗಳಲ್ಲಿ ಬೇಕಾಗಿದ್ದ ಮೋಸ್ಟ್ ವಾಟೆಂಡ್ ವಾರಂಟ್ ಆರೋಪಿ ಅಜರುದ್ದೀನ್ ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿ ಅಜರುದ್ದೀನ್ ಅಲಿಯಾಸ್ ಅಜರ್ (ನಾಥು)(29) ಕೃಷ್ಣಾಪುರ, ಕಾಟಿಪಳ್ಳ ಗ್ರಾಮದವನಾಗಿದ್ದು, ಈತನ ಮೇಲೆ ಮಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 23 ಪ್ರಕರಣಗಳಲ್ಲಿ ಜಾಮೀನು ರಹಿತ ವಾರಂಟ್ ಇದೆ. ಮಂಗಳೂರು ಪೊಲೀಸ್   ಆಯುಕ್ತರ ಆದೇಶದ ಮೇರೆಗೆ ಮಂಗಳೂರು ಉತ್ತರ ಉಪವಿಭಾಗದ ಸಹಾಯಕ ಆಯುಕ್ತರಾದ ಮನೋಜ್‌ ಕುಮಾರ್‌ರವರ ನಿರ್ದೇಶನದಂತೆ ಮಾರ್ಚ್ 22 ರಂದು ಸುರತ್ಕಲ್ ಪೊಲೀಸ್ ಠಾಣೆಯ ನಿರೀಕ್ಷಕರಾದ ಮಹೇಶ್‌ ಪ್ರಸಾದ್‌ ನೇತೃತ್ವದಲ್ಲಿ, ಉಪನಿರೀಕ್ಷಕರಾದ ಮಲ್ಲಿಕಾರ್ಜುನ್‌, ಸಿಬಂದಿಗಳಾದ ಅಜಿತ್ ಮ್ಯಾಥ್, ಮಣಿಕಂಠ, ಕಾರ್ತಿಕ್ ಅವರ ತಂಡ ಬಂಧಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA…

Read More

ನವದೆಹಲಿ: ಕಾರ್ಪೊರೇಟ್ ಆಡಳಿತ ಮತ್ತು ಲೆಕ್ಕಪತ್ರ ವಂಚನೆ ಆರೋಪದಿಂದಾಗಿ ಗೌತಮ್ ಅದಾನಿ ಅವರ ಭವಿಷ್ಯದ ಮೇಲೆ ತೀವ್ರ ಹಿನ್ನಡೆಯನ್ನುಂಟು ಮಾಡಿದೆ. ಇದರಿಂದಾಗಿ ರಿಲಯನ್ಸ್ ಇಂಡಸ್ಟ್ರೀಸ್ನ ಮುಖೇಶ್ ಅಂಬಾನಿ ದೇಶದ ನಂಬರ್ 1 ಶ್ರೀಮಂತ ಸ್ಥಾನ ಅಲಂಕರಿಸಿದ್ದಾರೆ. ಎಂ3ಎಂ ಹುರುನ್ ಗ್ಲೋಬಲ್ ರಿಚ್ ಲಿಸ್ಟ್ ಪ್ರಕಾರ, ಅದಾನಿ ಕಳೆದ ವರ್ಷದಿಂದ ಪ್ರತಿ ವಾರ 3,000 ಕೋಟಿ ಸಂಪತ್ತನ್ನು ಕಳೆದುಕೊಂಡಿದ್ದಾರೆ ಮತ್ತು ಅವರ ಒಟ್ಟಾರೆ ನಿವ್ವಳ ಮೌಲ್ಯವು ಅವರ ಗರಿಷ್ಠ ಸಂಪತ್ತಿನ ಮಟ್ಟಕ್ಕಿಂತ ಶೇ.60 ರಷ್ಟು ಕಡಿಮೆಯಾಗಿದೆ. ಮಾರ್ಚ್ ಮಧ್ಯದಲ್ಲಿ ಅವರ ಒಟ್ಟಾರೇ ಸಂಪತ್ತು 53 ಬಿಲಿಯನ್ ಡಾಲರ್ ನಷ್ಟಾಗಿದೆ. ಅಂಬಾನಿ ಅವರ ಸಂಪತ್ತಿನಲ್ಲಿಯೂ ಕುಸಿತವಾಗಿದೆ. ಆದರೆ, ಅವರ ನಿವ್ವಳ ಮೌಲ್ಯವು ಶೇ. 20 ರಷ್ಟು ಕುಸಿತದೊಂದಿಗೆ 82 ಬಿಲಿಯನ್ ಡಾಲರ್ ನಷ್ಟಾಗಿದೆ. ಇದರಿಂದಾಗಿ ಅವರು ಅದಾನಿಯನ್ನು ಹಿಂದಿಕ್ಕಿ ದೇಶದ ಅತ್ಯಂತ ಶ್ರೀಮಂತ ಎನ್ನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಅದಾನಿ ಉದ್ಯಮ ಸಮೂಹ ಸಂಸ್ಥೆಗಳು ದೊಡ್ಡ ಪ್ರಮಾಣದಲ್ಲಿ ಲೆಕ್ಕಪತ್ರ ವಂಚನೆ ಮಾಡಿದ್ದು, ಮಾರುಕಟ್ಟೆಯಲ್ಲಿ ಅಂಕಿಅಂಶ ತಿರುಚಲಾಗಿದೆ…

Read More

ಬೆಳಗಾವಿ: “ಗ್ರಾಮೀಣ ಕ್ಷೇತ್ರದ ಶಾಸಕಿಯಾಗಿ ಆಯ್ಕೆಯಾದ ಮೊದಲ ಅವಧಿಯಲ್ಲೇ ಈವರೆಗೆ ಆಗದಷ್ಟು ಗರಿಷ್ಠ ಪ್ರಮಾಣದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು ಜನತೆ ಸಹಕಾರದೊಂದಿಗೆ ಕ್ಷೇತ್ರವನ್ನು ಇನ್ನೂ ಹೆಚ್ಚು ಅಭಿವೃದ್ಧಿ ಕಾರ್ಯಗಳ ಮೂಲಕ ನೈಜ ಮಾದರಿಯಾಗಿ ಮುನ್ನಡೆಸುವ ಗುರಿ ಹೊಂದಿದ್ದೇನೆ” ಎಂದು ಶಾಸಕಿ ಲಕ್ಷ್ಮೀ  ಹೆಬ್ಬಾಳಕರ್  ಹೇಳಿದರು. ಅರಳೀಕಟ್ಟಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಅವರು ಈಗಾಗಲೇ 20 ಲಕ್ಷ ರೂ. ಮಂಜೂರು ಮಾಡಿಸಿದ್ದು ಈ ಅನುದಾನದ ಕಾಮಗಾರಿಗಳಿಗೆ ಇಂದು ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಇದೇ ಸಮಯದಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕರಪತ್ರಗಳ ವಿತರಣೆಗೆ ಲಕ್ಷ್ಮೀ  ಹೆಬ್ಬಾಳಕರ್  ಚಾಲನೆ ನೀಡಿದರು. ಈ ಸಮಯದಲ್ಲಿ ಶಿವಮೂರ್ತಿ ಅಜ್ಜನವರು, ಗ್ರಾಮದ ಹಿರಿಯರು, ಸಿ.ಸಿ. ಪಾಟೀಲ, ಅಡಿವೇಶ ಇಟಗಿ, ಸಿದ್ದಣ್ಣ ಸಿಂಗಾಡಿ, ಶಿವಾನಂದ ಹಲಕರ್ಣಿಮಠ, ರಾಜು ಉಪ್ಪಾರ, ನಾಗಣ್ಣ ಮೆನೆನಿ, ರಾಜು ಕಟ್ಟಿಕರ್ ಹಾಗೂ ಮುಂತಾದವರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…

Read More

ಬೆಂಗಳೂರು: ‘ಮಿಸಲಾತಿ ಹೆಚ್ಚಳ ಕುರಿತ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸದೇ, ಸಂವಿಧಾನದ 9ನೇ ಶೆಡ್ಯುಲ್ ನಲ್ಲಿ ಸೇರಿಸದೇ ಮೀಸಲಾತಿ ಹೆಚ್ಚಳ ಮಾಡುತ್ತೇವೆ ಎಂದು ಸುಳ್ಳು ಹೇಳುವ ಮೂಲಕ ಬಿಜೆಪಿ ಸರ್ಕಾರ ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಸಮುದಾಯದ ಜನರ ಕಿವಿಗೆ ಹೂವ ಇಟ್ಟು, ಮೋಸ ಮಾಡುತ್ತಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ಗುರುವಾರ ಈ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿ, ‘ರಾಜ್ಯ ಸರ್ಕಾರ ಪರಿಶಿಷ್ಟರಿಗೆ ಮೀಸಲಾತಿ ವಿಚಾರದಲ್ಲಿ ಮಾಡುತ್ತಿರುವ ಮೋಸವನ್ನು ಖಂಡಿಸಿ ಕಾಂಗ್ರೆಸ್ ಪಕ್ಷ ನಾಳೆ (ಶುಕ್ರವಾರ) ಬೆಳಗ್ಗೆ 10 ಗಂಟೆಗೆ ರಾಜಭವನದ ಮುಂದೆ ಪ್ರತಿಭಟನೆ ಹಮ್ಮಿಕೊಂಡಿದೆ’ ಎಂದರು. ‘ಬಿಜೆಪಿ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಮೀಸಲಾತಿ ಹೆಚ್ಚಳ ಮಾಡುವ ವಿಚಾರದಲ್ಲಿ ಕರ್ನಾಟಕ ರಾಜ್ಯ ಸರ್ಕಾರದಿಂದ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಕೇಂದ್ರ ಬಿಜೆಪಿ ಸಚಿವರು ಸಂಸತ್ತಿನಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ. ಈ ಸರ್ಕಾರ ಪ್ರಸ್ತಾವನೆ ಸಲ್ಲಿಸದೇ. ಸಂಸತ್ತಿನಲ್ಲಿ ಸಂವಿಧಾನದ 9ನೇ ಶೆಡ್ಯುಲ್…

Read More

ಬೆಂಗಳೂರು: ಹರಿಹರ ಪಂಚಮಸಾಲಿ ಪೀಠದ ಸತತ ಹೋರಾಟದ ಫಲವಾಗಿ ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರಕಾರದಿಂದ ಅತ್ಯುತ್ತಮ ಕೊಡುಗೆ ಘೋಷಣೆಯಾಗುವ ವಿಶ್ವಾಸವಿದೆ ಎಂದು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮೀಜಿಗಳು ಹೇಳಿದರು. ಬೆಂಗಳೂರು ನಗರದ ಶ್ವಾಸ ಯೋಗ ಕೇಂದ್ರದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಪ್ರಮುಖ ಸಮುದಾಯಗಳಲ್ಲಿ ಒಂದಾಗಿರುವ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎನ್ನುವುದರ ಹೋರಾಟದ ಹಿಂದೆ 3 ದಶಕಗಳ ಇತಿಹಾಸವಿದೆ. ಹಂತಹಂತಗಳಲ್ಲಿ ನಡೆಸಿದ ಹೋರಾಟ ಅಂತಿಮ ಹಂತಕ್ಕೆ ಬಂದು ಸೇರಿದೆ. 2 ಡಿ ಹಾಗೂ 2 ಸಿ ಮೀಸಲಾತಿಯನ್ನು ಘೋಷಣೆ ಮಾಡಿದ್ದನ್ನು ನಾವು ಸ್ವಾಗತಿಸುವುದಾಗಲಿ ಅಥವಾ ತಿರಸ್ಕರಿಸುವುದಾಗಲಿ ಮಾಡಿರಲಿಲ್ಲ. ಈ ಘೋಷಣೆಯಲ್ಲಿ ಸ್ಪಷ್ಟತೆಯ ಅಗತ್ಯತೆಯನ್ನು ಒತ್ತಿ ಹೇಳಿದ್ದೇವು. ಈ ಹಿನ್ನಲೆಯಲ್ಲಿ ರಾಜ್ಯ ಸರಕಾರ ಹಿಂದುಳಿದ ಆಯೋಗದ ಮಧ್ಯಂತರ ವರದಿಯನ್ನು ಪಡೆದುಕೊಂಡಿದೆ. ಮಧ್ಯಂತರ ವರದಿಯನ್ನ ಸಮಗ್ರವಾಗಿ ಪರಿಶೀಲಿಸಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ…

Read More

ತುಮಕೂರು: 7 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಅಪರಾಧಿಗೆ ಗೌರವಾನ್ವಿತ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್.ಟಿ.ಎಸ್.ಸಿ.(ಪೋಕ್ಸೋ) 20 ವರ್ಷಗಳ ಸಜೆ ಮತ್ತು 75000 ರೂಪಾಯಿ ದಂಡ ವಿಧಿಸಿದೆ. ಪಾವಗಡ ತಾಲ್ಲೂಕು ದೊಮ್ಮತ್ತಮರಿ ಗ್ರಾಮ ವ್ಯಾಪ್ತಿಯ ಯಲಗಾನಗುಟ್ಟೆ ಮಜರೆ ಗ್ರಾಮ ನಿವಾಸಿ ಕೃಷ್ಣಮೂರ್ತಿ ಎಂಬಾತ ದಿನಾಂಕ 30–07–2021ರಂದು ಮಧ್ಯಾಹ್ನ 2:30 ಗಂಟೆಯ ಸುಮಾರಿಗೆ 7 ವರ್ಷದ ಬಾಲಕಿ ತನ್ನ ತಮ್ಮನ ಜೊತೆಗೆ ಮನೆಯ ಪಕ್ಕದಲ್ಲಿ ಆಟವಾಡುತ್ತಿದ್ದ ವೇಳೆ ನೇರಳೆ ಹಣ್ಣು ಕೊಡುವ ನೆಪದಲ್ಲಿ ಇಬ್ಬರನ್ನೂ ತನ್ನ ಮನೆಯ ಪಕ್ಕದಲ್ಲಿರುವ ನೇರಳೆ‌ ಮರದ ಬಳಿ ಕರೆದೊಯ್ದು ಬಾಲಕಿಗೆ ಲೈಂಗಿಕ ‌ದೌರ್ಜನ್ಯ ಎಸಗಿದ್ದ ಎಂದು ತನಿಖಾಧಿಕಾರಿಗಳಾದ ಲಕ್ಷ್ಮೀಕಾಂತ್ ಎಸ್. ಅವರು ದೋಷರೋಪಣ ಪಟ್ಟಿ ಕಲಂ 376 ಐಪಿಸಿ ಕಲಂ6 ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ನ್ಯಾಯಾಲಯದ ವಿಚಾರಣೆಯಲ್ಲಿ ಕೃಷ್ಣಮೂರ್ತಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವುದು ರುಜುವಾತಾದ ಕಾರಣ ಅಧಿಕ ಸತ್ರ ನ್ಯಾಯಾಲಯದ ಎಫ್.ಟಿ.ಎಸ್.ಸಿ.(ಪೋಕ್ಸೋ) ಗೌರವಾನ್ವಿತ ನ್ಯಾಯಾಧೀಶರಾದ ಸಂಧ್ಯಾ…

Read More

ಉತ್ತರ ಪ್ರದೇಶ: ಅಮೇಥಿ ರಾಮಗಂಜ್ ಪ್ರದೇಶದ ಹಳ್ಳಿಯೊಂದರಲ್ಲಿ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ಗುರುವಾರ ನಡೆದಿದೆ. ತಮ್ಮ ಮಗಳು ಮನೆಗೆ ಬೇಕಾದ ವಸ್ತುಗಳನ್ನು ಖರೀದಿಸಲು ಮಾರ್ಚ್ 21ರಂದು ಸಂಜೆ ಮನೆಯಿಂದ ಹೊರಗೆ ಹೋಗಿದ್ದು, ಅದೇ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ವಾಹನದಲ್ಲಿ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರ ಎಸಗಿರುವುದಾಗಿ ಸಂತ್ರಸ್ತೆಯ ತಾಯಿ ಆರೋಪಿಸಿದ್ದಾರೆ. ಘಟನೆಯ ಮರುದಿನ ಬೆಳಗ್ಗೆ ಬಾಲಕಿ ಮನೆಗೆ ಹಿಂದಿರುಗಿದಾಗ ಈ ಬಗ್ಗೆ ತಾಯಿಗೆ ಮಾಹಿತಿ ನೀಡಿದ್ದು. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಪ್ರಕರಣ ದಾಖಲಿದ ಪೊಲೀಸರು ಎಫ್ ಐಆರ್ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ರಾಮ್ಗಂಜ್ ಠಾಣಾಧಿಕಾರಿ ಪಂಕಜ್ ದ್ವಿವೇದಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಮನುಷ್ಯ, ಮನುಷ್ಯನನ್ನು ಪ್ರೀತಿಸುವುದೇ ನಿಜ ಧರ್ಮ. ಧರ್ಮದ ಸತ್ವ ಅಡಗಿರುವುದೇ ಪ್ರೀತಿಯಲ್ಲಿ, ಸಮಾಜದಲ್ಲಿನ ಎಲ್ಲ ಸಮುದಾಯದವರು ಸಮಾನತೆಯಿಂದ ಕೂಡಿ ಬಾಳಿದಾಗ ಶಾಂತಿ ನೆಮ್ಮದಿಯ ಜೀವನ ಸಾಧ್ಯ ಎಂದು ಶಾಸಕ ಎಂ.ವಿ.ವೀರಭದ್ರಯ್ಯ ತಿಳಿಸಿದರು. ಮಧುಗಿರಿ ತಾಲೂಕಿನ ಸಿದ್ದಾಪುರ ಗ್ರಾಮದ ಸಮೀಪದ ಮದರಸದಲ್ಲಿ, ಸುಮಾರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಕಾಮಗಾರಿಯನ್ನು 40 ಲಕ್ಷ ರೂಪಾಯಿ ವೆಚ್ಚದಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಉದ್ಘಾಟಿಸಿ ಶಾಸಕರು ಮಾತನಾಡಿದರು. ಇದೇ ವೇಳೆ ಮದರಸದ ಗುರುಗಳಾದ ಮುಫ್ತಿ ಅಫ್ತಾಬ್ ಮೌಲನಾ ಮಾತನಾಡಿ, ಹಲವು ವರ್ಷಗಳಿಂದ ಸ್ಥಗಿತಗೊಂಡಿದ್ದ ಕಾಮಗಾರಿಯನ್ನು ಪೂರ್ಣಗೊಳಿಸಿದ್ದಕ್ಕಾಗಿ ಶಾಸಕರಿಗೆ ಮೆಚ್ಚುಗೆ ವ್ಯಕ್ತಪಡಿಸಿದರಲ್ಲದೇ, ಶಾಸಕರ ಧರ್ಮ ಸಹಿಷ್ಣುತೆಯನ್ನು ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ಮಕ್ಕ ಮಸೀದಿ ಅಧ್ಯಕ್ಷರಾದ ಬಷೀರ್ ಹಜರತ್, ಮದೀನಾ ಮಸೀದಿ ಅಧ್ಯಕ್ಷರಾದ ಷರೀಫ್ ಹಾಜರತ್, ನಾಸಿರ್, ಜೆಡಿಎಸ್ ಪಕ್ಷದ ಮುಖಂಡರಾದ ತುಂಗೋಟಿ ರಾಮಣ್ಣ, ಪುರಸಭಾ ಅಧ್ಯಕ್ಷ ತಿಮ್ಮರಾಜು, ಸದಸ್ಯರಾದ ಚಂದ್ರಶೇಖರ್ ಬಾಬು ನಾರಾಯಣ, ಗಂಗರಾಜು ಅಲ್ಪಸಂಖ್ಯಾತ ಜೆಡಿಎಸ್ ಅಧ್ಯಕ್ಷರಾದ ಶಫಿಖ್, ದಾದು, ಶಿವಪ್ಪ, ಮೋಹನ್, ಧನಪಾಲ್, ರಘು ಮತ್ತು…

Read More

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಪಂಪ್ ವೆಲ್ ಸಮೀಪದ ನಾಗುರಿ ಎಂಬಲ್ಲಿ ಕಳೆದ ವರ್ಷದ ನವೆಂಬರ್ 19ರಂದು ಸಂಜೆ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪುರುಷೋತ್ತಮ ಪೂಜಾರಿಯ ಕುಟುಂಬಕ್ಕೆ ಗುರು ಬೆಳದಿಂಗಳು ಫೌಂಡೇಶನ್ ವತಿಯಿಂದ ನಿರ್ಮಿಸಲಾದ ನವೀಕೃತ ಮನೆಯನ್ನು ಹಸ್ತಾಂತರಿಸಲಾಯಿತು. ಸುಮಾರು 6 ಲಕ್ಷ ರೂಪಾಯಿ ವೆಚ್ಚದಲ್ಲಿ ನವೀಕರಿಸಲಾದ ಈ ಮನೆಯನ್ನು ಯುಗಾದಿ ಹಬ್ಬದ ಕೊಡುಗೆಯಾಗಿ ಪುರುಷೋತ್ತಮ ಪೂಜಾರಿ ಹಾಗೂ ಕುಟುಂಬದ ಸದಸ್ಯರು, ಸಂಬಂಧಿಕರ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಗುರು ಬೆಳದಿಂಗಳು ಫೌಂಡೇಶನ್ ಅಧ್ಯಕ್ಷ ಪದ್ಮರಾಜ್ ಆರ್., ಜೆಪ್ಪು ಸಂತ ಅಂತೋನಿ ಆಶ್ರಮದ ನಿರ್ದೇಶಕ ಫಾದರ್ ಜೆ.ಬಿ.ಕ್ರಾಸ್ತಾ, ಮಾಜಿ ರಾಜ್ಯಸಭಾ ಸದಸ್ಯ ಬಿ.ಇಬ್ರಾಹೀಂ, ಉದ್ಯಮಿಗಳಾದ ರೋಹನ್ ಮೊಂತೆರೋ, ರಘುನಾಥ್ ಮಾಬೆನ್, ಧರ್ಮರಾಜ ಅಮ್ಮುಂಜೆ, ಕಾರ್ಪೊರೇಟರ್ ಪ್ರವೀಣ್ ಚಂದ್ರ ಆಳ್ವ, ಮಾಜಿ ಕಾರ್ಪೊರೇಟರ್ ಡಿ.ಕೆ.ಅಶೋಕ್ ಕುಮಾರ್, ಇಂಡಿಯಾನ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಯೂಸುಫ್ ಕುಂಬ್ಳೆ, ಸತ್ಯಜಿತ್ ಸುರತ್ಕಲ್, ಪ್ರಮುಖರಾದ ದೇವೇಂದ್ರ ಪೂಜಾರಿ, ಮೋಹನ್ ನೆಕ್ಕರೆಮಾರು, ಸೂರ್ಯಕಾಂತಿ…

Read More

ಚಾಮರಾಜನಗರದ ಪ್ರಸಿದ್ಧ ಯಾತ್ರಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆಯ ರಥೋತ್ಸವವು ನಡೆದಿದ್ದು ಲಕ್ಷಾಂತರ ಮಂದಿ ಭಕ್ತರು ಮಹದೇಶ್ವರನಿಗೆ ಜೈಕಾರ ಹಾಕಿ ಪ್ರಾರ್ಥಿಸಿದರು. ಕರ್ನಾಟಕದ ಲಕ್ಷಾಂತರ ಭಕ್ತರು ಕಾಲ್ನಡಿಗೆ ಮೂಲಕ ಶ್ರೀಕ್ಷೇತ್ರಕ್ಕೆ ಆಗಮಿಸಿದ್ದು ತಮಿಳುನಾಡಿನಿಂಲೂ ಲಕ್ಷಾಂತರ ಭಕ್ತರು ರಥೋತ್ಸವದಲ್ಲಿ ಭಾಗಿಯಾಗಿದ್ದಾರೆ. ಈ ಬಾರಿ ಮಹದೇಶ್ವರನ 108 ಪ್ರತಿಮೆ ಕ್ಷೇತ್ರದ ಹೊಸ ಆಕರ್ಷಣೆಯಾಗಿದೆ. ರಥೋತ್ಸವ ಹಿನ್ನೆಲೆ ಪೊಲೀಸ್ ಇಲಾಖೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿತ್ತು . ಜೊತೆಗೆ, ಪ್ರಾಧಿಕಾರವು ಸಕಲ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More