Subscribe to Updates
Get the latest creative news from FooBar about art, design and business.
- ಕಬ್ಬು ಬೆಳೆಗಾರರ ಸಮಸ್ಯೆ ಸೇರಿ ಹಲವು ಸಮಸ್ಯೆ ಬಗ್ಗೆ ಪ್ರಧಾನಿಗಳ ಜತೆ ಸಿಎಂ ಚರ್ಚೆ: ಸಚಿವ ಪರಮೇಶ್ವರ್
- ಆಗ್ನೆಯ ಪದವೀಧರರ ಮತದಾರರರ ನೋಂದಣಿ: ನ.25ರಿಂದ ಡಿ.10ರವರೆಗೆ ಮುಂದೂಡಿಕೆ
- ಮಹಿಳೆಯ ಸಾವಿನ ಬಗ್ಗೆ ಅನುಮಾನ: ಪುತ್ರನಿಂದ ದೂರು
- ವಿವಿಧ ಬ್ಯಾಂಕ್ ಗಳ ನಿಷ್ಕ್ರಿಯ ಖಾತೆಗಳಲ್ಲಿದೆ 110.45 ಕೋಟಿ ಹಣ!
- ಎಗ್ಗಿಲ್ಲದೆ ನಡೆಯುತ್ತಿದೆ ಗಣಿಗಾರಿಕೆ: ಅರಣ್ಯ ಇಲಾಖೆ ನಿದ್ರಾವಸ್ಥೆಗೆ ಜಾರಿದೆ: ಅಧಿಕಾರಿಗಳಿಗೆ ಉಪಲೋಕಾಯುಕ್ತರಿಂದ ತರಾಟೆ
- ಮುಖ್ಯ ಶಿಕ್ಷಕಿಯಿಂದ ಕಿರುಕುಳ ಆರೋಪ: ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
- ಎರಡೂವರೆ ವರ್ಷದಲ್ಲಿ 5,800 ಬಸ್ ಖರೀದಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
- ಜೀವ ಪರವಾದ ಸುಸ್ಥಿರ ಸಂಶೋಧನೆಗಳತ್ತ ಗಮನ ಹರಿಸಬೇಕಿದೆ: ಪ್ರೊ.ಎ.ಎಚ್.ರಾಜಾಸಾಬ್
Author: admin
ಮಧುಗಿರಿ: ತಾಲ್ಲೂಕು ಆಸ್ಪತ್ರೆಯಲ್ಲಿ ನಿರಂತರವಾಗಿ ಲಂಚದ ಹಣಕ್ಕಾಗಿ ನಡೆಯುತ್ತಿರುವ ನಕಲಿ ವಯಸ್ಸಿನ ದೃಢೀಕರಣ ಪತ್ರ ಮತ್ತು ಅಂಗವಿಕಲ ದೃಡೀಕರಣ ಪತ್ರ ನೀಡುತ್ತಿರುವ ಬಗ್ಗೆ ಈ ದಿನ ಮಧುಗಿರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ ಠಾಣಾಧಿಕಾರಿಗಳು FIR ದಾಖಲಿಸುವ ಭರವಸೆ ನೀಡಿದ್ದಾರೆ ಒಂದು ವೇಳೆ FIR ದಾಖಲಿಸದಿದ್ದಲ್ಲಿ ಮುಂದಿನ ಕಾನೂನು ಹೋರಾಟ ಮುಂದುವರೆಸಲಾಗುವುದು ಎಂದು ಸಾಮಾಜಿಕ ಹೋರಾಟಗಾರ ಹಂದ್ರಾಳ್ ನಾಗಭೂಷಣ್ ಹೇಳಿದ್ದಾರೆ. ಮಧುಗಿರಿ ಪಟ್ಟಣದ ಲಿಂಗೇನಹಳ್ಳಿ ಬಡಾವಣೆಯ ಹನುಮಂತರಾಯಪ್ಪ ಎಂಬುವರು 2018 ರಲ್ಲಿ ಮರಣ ಹೊಂದಿದ್ದು, ಇವರ ಮಗನಾದ ಮಹೇಶ್ ಎಂಬುವರು ಮೊದಲಿನಿಂದಲೂ ಹೋರಾಟದ ಮನೋಭಾವ ಹೊಂದಿರುವ ಪ್ರಜ್ಞಾವಂತ ನಾಗರಿಕರಾಗಿದ್ದು, ಇಂತಹ ಅಕ್ರಮ ಎಸಗಿರುವವರಿಗೆ ಪಾಠ ಕಲಿಸಬೇಕೆಂಬ ಉದ್ದೇಶದಿಂದ ಸದರಿ ತಾಲ್ಲೂಕು ಆಸ್ಪತ್ರೆಯ ನೌಕರನೆಂದು ಹೇಳಿಕೊಳ್ಳುವ ರಾಜಣ್ಣ ಎಂಬುವ ವ್ಯಕ್ತಿಯನ್ನು ಸಂಪರ್ಕಿಸಿದಾಗ ಸದರಿ ರಾಜಣ್ಣ 5,000 ರೂ. ಹಾಗೂ ಆಧಾರ್ ಕಾರ್ಡ್ ನೀಡಿ ನಿಮ್ಮ ತಂದೆಯವರ ವಯಸ್ಸಿನ ದೃಡೀಕರಣ ಪತ್ರ ಮಾಡಿಸಿ ಕೊಡುತ್ತೇನೆಂದು ತಿಳಿಸಿರುತ್ತಾರೆ. ಅದರಂತೆ ಒಟ್ಟು ಹತ್ತು ಸಾವಿರ ಹಣ ನೀಡಿ…
ಚಳಿಗಾಲದ ಚಂಡಮಾರುತ ಮತ್ತು ಹಿಮದಲ್ಲಿ ಸಾವಿನ ಸಂಖ್ಯೆ 56 ಕ್ಕೆ ಏರಿದೆ ನ್ಯೂಯಾರ್ಕ್ ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಜಪಾನ್ ಮತ್ತು ಕೆನಡಾದಲ್ಲಿ ಜನರ ಜೀವನ ಬಿಕ್ಕಟ್ಟಿನಲ್ಲಿದೆ. 45 ವರ್ಷಗಳಲ್ಲಿ ಅಮೆರಿಕದ ಅತ್ಯಂತ ಭೀಕರ ಚಂಡಮಾರುತ ಜಪಾನಿನಲ್ಲಿ ತೀವ್ರ ಚಳಿಯಿಂದ 17 ಮಂದಿ ಸಾವನ್ನಪ್ಪಿದ್ದಾರೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಬಿಗಡಾಯಿಸುವ ಎಚ್ಚರಿಕೆ ಇದೆ. ಅಮೆರಿಕದಲ್ಲಿ ಅನೇಕ ಜನರು ತಮ್ಮ ಮನೆಗಳಲ್ಲಿ ಸಿಲುಕಿಕೊಂಡಿದ್ದಾರೆ. ಸಾವಿರಾರು ಮನೆಗಳು ಮತ್ತು ವ್ಯಾಪಾರಗಳು ವಿದ್ಯುತ್ ಕಳೆದುಕೊಂಡಿವೆ. ಗಂಟೆಗೆ 64 ಕಿ.ಮೀ.ಗೂ ಹೆಚ್ಚು ವೇಗದಲ್ಲಿ ಬೀಸುತ್ತಿರುವ ಚಳಿ ಚಂಡಮಾರುತದಿಂದಾಗಿ ದೇಶೀಯ ಹಾಗೂ ಅಂತಾರಾಷ್ಟ್ರೀಯ ವಿಮಾನ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಬಫಲೋ ನಗರವು ಹೆಚ್ಚಿನ ಹಾನಿಯನ್ನು ವರದಿ ಮಾಡಿದೆ. ಹಿಮದ ಹೊದಿಕೆಯಿಂದಾಗಿ ವಿವಿಧೆಡೆ ರಕ್ಷಣಾ ಕಾರ್ಯಾಚರಣೆ ಬಿಕ್ಕಟ್ಟಿನಲ್ಲಿದೆ. ಕೆನಡಾ ಬಳಿಯ ಗ್ರೇಟ್ ಲೇಕ್ಸ್ನಿಂದ ಮೆಕ್ಸಿಕನ್ ಗಡಿಯಲ್ಲಿರುವ ರಿಯೊ ಗ್ರಾಂಡೆವರೆಗೆ ಶೀತ ಗಾಳಿಯ ಅನುಭವವಾಯಿತು. ಈ ಪ್ರದೇಶದಲ್ಲಿ ವಾತಾವರಣದ ಒತ್ತಡ ಕಡಿಮೆಯಾಗುತ್ತಿರುವುದು ಚಂಡಮಾರುತದ ಬಲವರ್ಧನೆಯ ಸೂಚನೆಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…
ಅಮೆರಿಕದ ಅರಿಜೋನಾದಲ್ಲಿ ಸರೋವರಕ್ಕೆ ಬಿದ್ದು ಓರ್ವ ಮಹಿಳೆ ಸೇರಿದಂತೆ ಮೂವರು ಭಾರತೀಯ ಪ್ರಜೆಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಹೆಪ್ಪುಗಟ್ಟಿದ ಸರೋವರದ ಉದ್ದಕ್ಕೂ ನಡೆಯುವಾಗ, ಮಂಜುಗಡ್ಡೆ ಒಡೆದು ಸರೋವರಕ್ಕೆ ಬೀಳುತ್ತದೆ. ಈ ಘಟನೆಯು ಅರಿಜೋನಾದ ಕೊಕೊನಿನೊ ಕೌಂಟಿಯ ವುಡ್ಸ್ ಕಣಿವೆಯ ಸರೋವರದಲ್ಲಿ ಡಿಸೆಂಬರ್ 26 ರಂದು ಮಧ್ಯಾಹ್ನ 3:35 ಕ್ಕೆ ಸಂಭವಿಸಿದೆ. ಮೃತರನ್ನು ನಾರಾಯಣ ಮುದ್ದಣ (49), ಗೋಕುಲ್ ಮೇಡಿಸೆಟ್ಟಿ (47) ಮತ್ತು ಹರಿತಾ ಮುದ್ದಣ ಎಂದು ಗುರುತಿಸಲಾಗಿದೆ. ಹರಿತಾಳನ್ನು ತಕ್ಷಣವೇ ನೀರಿನಿಂದ ಹೊರತೆಗೆದು ಜೀವರಕ್ಷಕ ಕ್ರಮಗಳನ್ನು ಕೈಗೊಂಡರೂ ಫಲಕಾರಿಯಾಗದೆ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಕೆಲವರು ಶವವಾಗಿ ಪತ್ತೆಯಾಗಿದ್ದಾರೆ. ಮೃತಪಟ್ಟ ಮೂರು ಜನರು ಅರಿಜೋನಾದ ಚಾಂಡ್ಲರ್ನಲ್ಲಿ ವಾಸಿಸುತ್ತಿದ್ದರು. “ಇವರು ಭಾರತೀಯರು” ಎಂದು ಕೊಕೊನಿನೊ ಕೌಂಟಿ ಶೆರಿಫ್ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ. ಚಾಂಡ್ಲರ್ ಫೀನಿಕ್ಸ್ನ ಉಪನಗರವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತಿರುವನಂತಪುರಂ: ಕೇರಳದ ವ್ಯಕ್ತಿಯೋರ್ವ ತನ್ನ ಅಪ್ರಾಪ್ತ ವಯಸ್ಸಿನ ಪ್ರೇಯಸಿಯನ್ನು ಕತ್ತು ಸೀಳಿ ಹತ್ಯೆ ಮಾಡಿದ ಘಟನೆ ವರ್ಕಲದ ಬಳಿಯ ವಡೆಸ್ಸೆರಿಕೋಣಂ ನಲ್ಲಿ ನಡೆದಿದೆ. 17 ವರ್ಷದ ಸಂಗೀತಾ ಮೃತ ದುರ್ದೈವಿಯಾಗಿದ್ದಾಳೆ. ಗೋಪು ಎಂಬ ಭಗ್ನ ಪ್ರೇಮಿ ಈ ಕೃತ್ಯ ನಡೆಸಿದ್ದು, ಪ್ರೇಯಸಿ ತನಗೆ ದ್ರೋಹ ಬಗೆಯುತ್ತಿದ್ದಾಳೆ ಎಂದು ಭಾವಿಸಿ ಹತ್ಯೆ ಮಾಡಿದ್ದಾನೆ ಎಂದು ಹೇಳಲಾಗಿದೆ. ಸಂಗೀತಾಳನ್ನು ತನ್ನ ಮನೆಯಿಂದ ಹೊರಗೆ ಕರೆದ ವ್ಯಕ್ತಿ, ಆಕೆ ಬಂದೊಡನೆ ಚಾಕು ತೆಗೆದುಕೊಂಡು ಕತ್ತು ಸೀಳಿದ್ದಾನೆ. ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಯುವತಿ ತಕ್ಷಣವೇ ಮನೆಯೊಳಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಾಳೆ, ಆಕೆಗೆ ರಕ್ತಸ್ರಾವವಾಗುತ್ತಿರುವುದನ್ನು ಕಂಡ ಪೋಷಕರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಆದರೆ ಮಾರ್ಗ ಮಧ್ಯೆಯೇ ಯುವತಿ ಮೃತಪಟ್ಟಿದ್ದಳು. ಸಂಗೀತಳನ್ನು ಪರೀಕ್ಷಿಸಲು ಗೋಪು ಬೇರೊಂದು ಮೊಬೈಲ್ ನಿಂದ ಬೇರೊಬ್ಬ ಯುವಕನ ರೀತಿಯಲ್ಲಿ ಮಾತನಾಡತೊಡಗಿದ್ದು, ಇದನ್ನರಿಯದ ಸಂಗೀತ ಹೊಸ ಹುಡುಗನೊಂದಿಗೆ ನಿರಂತರವಾಗಿ ಮಾತನಾಡಲು ಪ್ರಾರಂಭಿಸಿದ್ದಳು. ಮತ್ತೋರ್ವನಂತೆ ನಟಿಸುತ್ತಿದ್ದ ಗೋಪು ಆಕೆಯನ್ನು ಮನೆಯಿಂದ ಹೊರಗೆ ಕರೆದು ಕತ್ತು ಸೀಳಿ ಹತ್ಯೆ…
ಡಿಸೆಂಬರ್ 29 ರಂದು ಮಂಡ್ಯದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲ್ಗೊಳ್ಳಲಿದ್ದು ಡಿ.29 ಮತ್ತು 30 ರಂದು ಮಂಡ್ಯ ವಿವಿಗೆ ರಜೆ ಘೋಷಣೆ ಮಾಡಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಡಿಸೆಂಬರ್ 29 ಮತ್ತು 30 ರಂದು ರಾಜ್ಯ ಪ್ರವಾಸ ಕೈಗೊಂಡಿದ್ದು, ಮಂಡ್ಯದಲ್ಲಿ ಬಿಜೆಪಿ ಬೃಹತ್ ಸಮಾವೇಶ ನಡೆಯಲಿದೆ. ಡಿಸೆಂಬರ್ 29 ರಂದು ಮಂಡ್ಯದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲ್ಗೊಳ್ಳಲಿದ್ದು ಅಂದು ಮಂಡ್ಯ ವಿವಿ ಆವರಣದಲ್ಲಿ ಬಿಜೆಪಿ ಬೃಹತ್ ಸಮಾವೇಶ ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಡಿಸೆಂಬರ್ 29 ಮತ್ತು 30 ರಂದು ಮಂಡ್ಯ ವಿವಿಗೆ ರಜೆ ಘೋಷಣೆ ಮಾಡಿ ಮಂಡ್ಯ ಜಿಲ್ಲಾಧಿಕಾರಿ ಗೋಪಾಲಕೃಷ್ಣ ಆದೇಶ ಹೊರಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ: ನಗರದ ಕೇಂದ್ರಿಯ ಬಸ್ ನಿಲ್ದಾಣ ಕಳೆದ ಆರೇಳು ವರ್ಷಗಳಿಂದ ನಿರ್ಮಾಣಗೊಳ್ಳುತ್ತಿದ್ದು, ಅನೇಕ ಕಾರಣಗಳಿಂದಾಗಿ ವಿಳಂಬ ಹಾಗೂ ಕಾಮಗಾರಿ ಹಿನ್ನಡೆ ಉಂಟಾಗುತ್ತಿತ್ತು.ಈಗ ಬೆಳಗಾವಿ ಬಸ್ ನಿಲ್ದಾಣ ನೂತನ ಕಟ್ಟಡ ಹಾಗೂ ಸುರಕ್ಷಿತ ಎಲ್ಲಾ ಸೇವೆಗಳನ್ನು ಒಳಗೊಂಡಿರುವ ಒಂದು ಸುಂದರವಾದ ಕಟ್ಟಡ ಬೆಳಗಾವಿ ಜನತೆಯ ಸೇವೆಗಾಗಿ ಸಜ್ಜಾಗಿ ನಿಂತಿದೆ. ಬಸ್ ನಿಲ್ದಾಣವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನನ್ನ ವೃತ್ತಿ ಜೀವನದ ಪ್ರಾರಂಭದ ದಿನಗಳಲ್ಲಿ ಪುಣೆಯಿಂದ ಬೆಳಗಾವಿ ಮೂಲಕ ನಮ್ಮೂರಿಗೆ ನಾನು ಪ್ರಯಾಣಿಸುತ್ತಿದ್ದೆ. ಈ ಬಸ್ ನಿಲ್ದಾಣ ಆಗ ದುಃಸ್ಥಿತಿಯಲ್ಲಿ ಇರೋದನ್ನು ನಾನು ನೋಡಿದ್ದೇನೆ. ಆದರೆ ಈಗ ಎಲ್ಲಾ ಸೇವೆಗಳನ್ನು ಒಳಗೊಂಡಿರುವ ನಿಲ್ದಾಣ ಜನರ ಸೇವೆಗಾಗಿ ಸಜ್ಜಾಗಿದೆ. ಹುಬ್ಬಳ್ಳಿ – ಬೆಳಗಾವಿಗೆ ವಂದೇ ಭಾರತ್ ವಿಸ್ತರಣೆ ಮಾಡಲಾಗುವುದು. ಅತಿ ಹೆಚ್ಚು ಸೇವೆ ನೀಡುವುದರ ಮೂಲಕ ಲಾಭದಾಯಕವಾಗಿ ಈ ಸಂಸ್ಥೆಯನ್ನು ಪರಿವರ್ತಿಸುತ್ತೇವೆ.ಮುಂಬರುವ ದಿನಗಳಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿ ಬೆಳಗಾವಿ ವಂದೇ ಭಾರತ್ ರೈಲು ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದರು. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ…
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಯಡಿ ರಾಜ್ಯದ 6 ಕಡೆ ಜವಳಿ ಪಾರ್ಕ್ ಈಗಾಗಲೇ ನಿರ್ಮಿಸಲಾಗಿದೆ. ಹಾವೇರಿ, ಉಡುಪಿ ಹಾಗೂ ರಾಯಚೂರಿನಲ್ಲೂ ಸಹ ಜವಳಿ ಪಾರ್ಕ್ ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ ಎಂದು ಕೈಮಗ್ಗ ಮತ್ತು ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಹೇಳಿದರು. ಮಂಗಳವಾರ ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯರಾದ ಕೆ.ಎಸ್.ನವೀನ್ ಹಾಗೂ ಚನ್ನರಾಜ್ ಬಸವರಾಜ್ ಹಟ್ಟಿಹೊಳಿ ಅವರ ಚುಕ್ಕೆ ಗುರುತಿನ ಪ್ರಶ್ನೆಗಳಿಗೆ ಸಚಿವರು ಉತ್ತರಿಸಿದರು.ರಾಜ್ಯ ಸರ್ಕಾರ 2019ರಲ್ಲಿ ನೂತನ ಜವಳಿ ಹಾಗೂ ಸಿದ್ಧಉಡುಪು ನೀತಿಯನ್ನು ಜಾರಿಗೊಳಿಸಿದೆ. ಇದರ ಅನ್ವಯ ಪ್ರತ್ಯೇಕ ಉದ್ಯಮಿ ಅಥವಾ ಎಸ್.ಪಿ.ವಿಗಳು 15 ಎಕರೆ ಜಾಗ ಹೊಂದಿ ಜವಳಿ ಪಾರ್ಕ್ ಸ್ಥಾಪಿಸಲು ಮುಂದಾದರೆ ಸರ್ಕಾರದಿಂದ ಸಹಾಯ ನೀಡಲಾಗುವುದು ಎಂದರು. ಶಾಸಕ ಕೆ.ಎಸ್. ನವೀನ್ ಮಾತನಾಡಿ ಜಾಗತಿಕವಾಗಿ ಪಾಕಿಸ್ತಾನ ಹಾಗೂ ಚೈನಾ ಬಂಡವಾಳ ಹೂಡಿಕೆದಾರರ ವಿಶ್ವಾಸ ಕಳೆದುಕೊಂಡಿವೆ. ಮುಂದಿನ ದಿನಗಳಲ್ಲಿ ಭಾರತ ಸಿದ್ಧ ಉಡುಪು ತಯಾರಿಕೆ ಕೇಂದ್ರವಾಗಿ ಜಗತ್ತಿಗೆ ಹೊರಹೊಮ್ಮಲಿದೆ. ರಾಜ್ಯ…
ಬೆಳಗಾವಿ : ಉದ್ಯೋಗ ಖಾತರಿ ಯೋಜನೆಯಡಿ ಜಲ ಸಂಜೀವಿನಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ಹಿನ್ನೆಲೆಯಲ್ಲಿ, ತಾತ್ಕಾಲಿಕವಾಗಿ ಹೊರಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಮಟ್ಟದಲ್ಲಿ ಜಲ ಸಂಜೀವಿನಿ ಜಿಲ್ಲಾ ಸಂಯೋಜಕರ ಒಂದು ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಷರತ್ತುಗಳು : ಪದವಿಧರರಾಗಿರಬೇಕು. ಕೃಷಿ/ಜಲಾನಯನ ಅಭಿವೃದ್ದಿ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ನಿವೃತ್ತ ಅಧಿಕಾರಿಗಳು ಜಲಾನಯನ ಅಭಿವೃದ್ದಿ ಕಾರ್ಯಕ್ರಮಗಳ ಅನುಷ್ಠಾನದ ಕನಿಷ್ಠ 10 ವರ್ಷ ಅನುಭವ ಹೊಂದಿರಬೇಕು. ಕನಿಷ್ಠ ಸಹಾಯಕ ಕೃಷಿ ನಿರ್ದೇಶಕ ಹುದ್ದೆಯಲ್ಲಿ ನಿವೃತ್ತಿ ಹೊಂದಿರುವ ಅಧಿಕಾರಿಗಳಾಗಿದ್ದು, ಜಿಲ್ಲಾ ಪಂಚಾಯತ್ ಹಾಗೂ ಇತರೆ ಅನುಷ್ಠಾನ ಇಲಾಖೆಗಳೊಡನೆ ಸಮನ್ವಯ ಸಾಧಿಸುವ ಸಾಮಥ್ರ್ಯ, ಸತತವಾಗಿ ಕ್ಷೇತ್ರ ಭೇಟಿ ಮಾಡುವ ಹಾಗೂ ಎಲ್ಲಾ ಅಧಿಕಾರಿ/ಸಿಬ್ಬಂದಿಗಳಿಗೆ ಮಾರ್ಗದರ್ಶನ ನೀಡುವ ಸಾಮಥ್ರ್ಯ ಹೊಂದಿರಬೇಕು. ಗರಿಷ್ಠ 65 ವರ್ಷ ವಯೋಮಿತಿ ಮೀರಿರಬಾರದು. Bsc (Aghriculture) Or B.Tech(Agriculture Engneering) ಪದವೀಧರರು, GUS ತಂತ್ರಾಂಶದ ಪರಿಣ ತಿ ಹೊಂದಿರಬೇಕು. ಸರ್ಕಾರೇತರ ಸಂಸ್ಥೆಗಳು/ಇತರೆ ಸಂಸ್ಥೆಗಳಲ್ಲಿ ಜಲಾನಯನ ಅಭಿವೃದ್ದಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿದ್ದು, ಕನಿಷ್ಠ 10 ವರ್ಷಗಳ ಅನುಭವ ಹೊಂದಿರಬೇಕು. ಸರ್ಕಾರೇತರ ಸಂಸ್ಥೆಗಳು/ಇತರೆ…
ಮುಂಬೈ: ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ಮತ್ತೆ ಕ್ಯಾತೆ ತೆಗೆದಿದ್ದು, ಮಹಾರಾಷ್ಟ್ರ ವಿಧಾನಸಭೆಯಲ್ಲಿ ಗಡಿ ಬಗ್ಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ನಿಲುವಳಿ ಮಂಡಿಸಿದ್ದಾರೆ. ಕರ್ನಾಟಕ ವಿಧಾನಸಭೆ ಸರ್ವಾನುಮತದಿಂದ ಮಹಾರಾಷ್ಟ್ರದೊಂದಿಗಿನ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ನಿರ್ಣಯವನ್ನು ಅಂಗೀಕರಿಸಿದ ಕೆಲವು ದಿನಗಳ ನಂತರ, ಮುಖ್ಯಮಂತ್ರಿ ಏಕನಾಥ್ ಶಿಂಧೆ ಖಂಡಿಸಿ, ವಿಧಾನಸಭೆಯಲ್ಲಿ ಇದೇ ರೀತಿಯ ನಿರ್ಣಯವನ್ನು ಮಂಡಿಸಿದರು. ಇದನ್ನು ಸಹ ಸರ್ವಾನುಮತದಿಂದ ಅಂಗೀಕರಿಸಲಾಯಿತು. ಬೆಳಗಾವಿ, ನಿಪ್ಪಾಣಿ, ಕಾರವಾರದ ಸೇರಿದಂತೆ 865 ಹಳ್ಳಿಗಳು ಮಹಾರಾಷ್ಟ್ರಕ್ಕೆ ಸೇರಬೇಕೆಂದು ಸಿಎಂ ಏಕನಾಥ್ ಶಿಂಧೆ ವಿಧಾನಸಭೆಯಲ್ಲಿ ನಿಲುವಳಿ ಮಂಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಳೆಗಾಲದಲ್ಲಿ ಮೋಡ ಬಿತ್ತನೆಯಿಂದ ಕೃತಕವಾಗಿ ಮಳೆಯನ್ನು ಸೃಷ್ಟಿಸುವುದೇ ಕೃತಕ ಮಳೆ. ನೆಲದ ಮೇಲಿನ ನೀರು ಆವಿಯಾಗಿ ಮತ್ತು ಮೇಲೆದ್ದಂತೆ, ಅದು ತಂಪಾಗುತ್ತದೆ ಮತ್ತು ಮೋಡವಾಗುತ್ತದೆ.ಮೋಡಗಳಲ್ಲಿನ ನೀರಿನ ಅಣುಗಳು ಕೆಲವು ಋತುಗಳಲ್ಲಿ ಸಂಭವಿಸುವ ತಂಪಾದ ಗಾಳಿಯಿಂದ ದ್ರವರೂಪಕ್ಕೆ ಬದಲಾಗುತ್ತವೆ ಮತ್ತು ಮಳೆಯಾಗುತ್ತದೆ. ಕೆಲವೊಮ್ಮೆ ಈ ನೀರಿನ ಅಣುಗಳು ಅತಿಯಾಗಿ ತಣ್ಣಗಾದಾಗ ಮೋಡದಲ್ಲಿನ ತೇವಾಂಶವು ನೀರಾಗಿ ಬದಲಾಗುವುದಿಲ್ಲ. ಆಗ ಮೋಡ ಕವಿದಿದ್ದರೂ ಮಳೆ ಬರುವುದಿಲ್ಲ. ಈ ಸಮಯದಲ್ಲಿ ಪೊಟ್ಯಾಸಿಯಮ್ ಅಯೋಡೈಡ್, ಸಿಲ್ವರ್ ಅಯೋಡೈಡ್, ದ್ರವ ಪ್ರೋಪೇನ್ ಅಥವಾ ಕಾರ್ಬನ್ ಡೈಆಕ್ಸೈಡ್ ಅನ್ನು ಸಣ್ಣ ವಿಮಾನಗಳ ಮೂಲಕ ಮೋಡಗಳ ಮೇಲೆ ಸಿಂಪಡಿಸಲಾಗುತ್ತದೆ. ಅಥವಾ ಅದೇ ರಾಸಾಯನಿಕಗಳನ್ನು ಕೆಳಗಿನಿಂದ ಯಂತ್ರದಿಂದ ಬಿಸಿ ಮಾಡಿ ಮತ್ತು ಮೇಲಕ್ಕೆ ಉಡಾಯಿಸಿ. ಅವರು ತೇವಾಂಶವನ್ನು ಸರಿಪಡಿಸುತ್ತಾರೆ ಮತ್ತು ಮಳೆ ಸುರಿಯುತ್ತಾರೆ. ಇದು ಮೋಡ ಬಿತ್ತನೆಯ ವಿಧಾನವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy