Subscribe to Updates
Get the latest creative news from FooBar about art, design and business.
- ತುರುವೇಕೆರೆ: ವಿದ್ಯುತ್ ಖಾಸಗಿಕರಣ ತಿರಸ್ಕರಿಸಲು ಒತ್ತಾಯಿಸಿ ರೈತ ಸಂಘದಿಂದ ಮನವಿ
- ನಾಡಪ್ರಭು ಕೆಂಪೇಗೌಡರದು ಜಾತ್ಯತೀತ ಆಡಳಿತ: ಶಾಸಕ ಎಂ.ಟಿ.ಕೃಷ್ಣಪ್ಪ
- ಸಾರ್ವಜನಿಕ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ | ಹೆಗ್ಗರೆ ಗ್ರಾ.ಪಂ. ಪಿಡಿಒ ಅಮಾನತು
- ತುಮಕೂರು: ಜಿಲ್ಲಾ ಪತ್ರಕರ್ತರ ಸಂಘದಿಂದ ಶ್ರವಣ ತಪಾಸಣಾ ಶಿಬಿರ
- ಕೊರಟಗೆರೆ: 10,016 ಮಕ್ಕಳಿಗೆ ಪೋಲಿಯೋ ಲಸಿಕಾ ಗುರಿ: ಡಾ.ಜ್ಯೋತ್ಸ್ನಾ ರೆಡ್ಡಿ ಕರೆ
- ಜುಲೈ 3ರಂದು ‘ದಲಿತ ಜನಾಗ್ರಹ ಸಮಾವೇಶ’: ಸರಗೂರು ಪ್ರವಾಸಿ ಮಂದಿರದಲ್ಲಿ ಪೋಸ್ಟರ್ ಬಿಡುಗಡೆ
- ಮಧುಗಿರಿ: ಸಿದ್ಧಾರ್ಥ ವಸತಿ ಪ್ರೌಢಶಾಲೆಯಲ್ಲಿ 2006ರ ಬ್ಯಾಚ್ ಹಳೆಯ ವಿದ್ಯಾರ್ಥಿಗಳಿಂದ ಉಚಿತ ಸಮವಸ್ತ್ರ ವಿತರಣೆ
- SIR: ಅರ್ಹ ನಾಗರಿಕರ ಮತದಾನದ ಹಕ್ಕು ಕಸಿದುಕೊಳ್ಳುವ ಅಪಾಯ: ಹೆಚ್.ವಿ. ವಾಸು ಆತಂಕ
Author: admin
ಮಾಜಿ ಸಂಸದ ಹಾಗೂ ಗ್ಯಾಂಗ್ ಲೀಡರ್ ಅತೀಕ್ ಅಹ್ಮದ್ ಹತ್ಯೆಯ ಕುರಿತು ಕೇಂದ್ರ ಗೃಹ ಸಚಿವಾಲಯದಿಂದ ವರದಿ ಕೇಳಲಾಗಿತ್ತು . ಕೇಂದ್ರ ಸರ್ಕಾರವೂ ಅಗತ್ಯಬಿದ್ದರೆ ಹೆಚ್ಚಿನ ಕೇಂದ್ರ ಪಡೆಗಳನ್ನು ರಾಜ್ಯಕ್ಕೆ ಕಳುಹಿಸಬಹುದು ಎಂದು ಹೇಳಿದೆ. ಘಟನೆಯ ಹೆಸರಿನಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ತರುವ ಪ್ರಯತ್ನಗಳನ್ನು ತಡೆಯಲು ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನ. ಗ್ಯಾಂಗ್ಗಳನ್ನು ಹತ್ತಿಕ್ಕಲು ಕೇಂದ್ರವು ತನ್ನೆಲ್ಲ ಬೆಂಬಲವನ್ನು ನೀಡಿತು. ಕಳೆದ ರಾತ್ರಿ ಮಾಜಿ ಸಂಸದ ಮತ್ತು ಗ್ಯಾಂಗ್ ಲೀಡರ್ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅಹ್ಮದ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಇಬ್ಬರನ್ನೂ ವೈದ್ಯಕೀಯ ಚಿಕಿತ್ಸೆಗಾಗಿ ಪ್ರಯಾಗ್ರಾಜ್ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯುತ್ತಿದ್ದಾಗ ಗುಂಡು ಹಾರಿಸಲಾಗಿದೆ. ಮಾಜಿ ಸಂಸದರು ತಮ್ಮ ಪುತ್ರ ಅಸದ್ ಅಹ್ಮದ್ ಅವರ ಅಂತ್ಯಕ್ರಿಯೆಯ ಕೆಲವೇ ಗಂಟೆಗಳ ನಂತರ ಕೊಲ್ಲಲ್ಪಟ್ಟರು. ಅತೀಕ್ ಮಾಧ್ಯಮದ ಕಾರ್ಯಕರ್ತ ಎಂಬ ನೆಪದಲ್ಲಿ ಬಂದಿದ್ದರಿಂದ ಗುಂಡು ಹಾರಿಸಲಾಗಿತ್ತು. ಗುಂಡಿನ ದಾಳಿ ನಡೆಸಿದ ನಂತರ ದಾಳಿಕೋರರು ಶರಣಾಗಿದ್ದಾರೆ.ರಾಜ್ಯಾದ್ಯಂತ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.…
ಕೋಲಾರ: ರಾಜ್ಯ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಶುರುವಾಗಿದ್ದು ಇಂದಿನಿಂದ 2 ದಿನಗಳ ಕಾಲ ರಾಹುಲ್ ಗಾಂಧಿ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು(ಏಪ್ರಿಲ್ 16) ಕೋಲಾರದಲ್ಲಿ ನಡೆಯಲಿರುವ ಕಾಂಗ್ರೆಸ್ನ ಸತ್ಯಮೇವ ಜಯತೆ, ಜೈ ಭಾರತ್ ಸಮಾವೇಶದಲ್ಲಿ ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ. ಕೋಲಾರ ಹೊರವಲಯದ ಟಮಕ ಬಳಿ ಸಮಾವೇಶ ಆಯೋಜನೆ ಮಾಡಲಾಗಿದೆ. ಕಾಂಗ್ರೆಸ್ ಸಮಾವೇಶಕ್ಕೆ ಸುಮಾರು ಒಂದು ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಜನರು ಈ ಸಮಾವೇಶಕ್ಕೆ ಬರುವ ಸಾಧ್ಯತೆ ಇದೆ. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಕೆಸಿ ವೇಣುಗೋಪಾಲ್, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ರಾಷ್ಟ್ರ ಹಾಗೂ ರಾಜ್ಯದ ಎಲ್ಲಾ ನಾಯಕರು ಭಾಗಿಯಾಗಲಿದ್ದಾರೆ. 11.30ಕ್ಕೆ ಸಮಾವೇಶ ಆರಂಭವಾಗಲಿದ್ದು ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಕಾರವಾರ: ಪಕ್ಷ ಕಟ್ಟಿದವರಿಗೆ ಬಿಜೆಪಿ ಅನ್ಯಾಯ ಮಾಡಬಾರದಿತ್ತು. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗೆ ಟಿಕೆಟ್ ಕೊಡದೇ ಇರುವುದು ಸರಿಯಲ್ಲ. ಅವರು ನಮ್ಮ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಾರೆ ಎಂದರೆ ನಾವು ಅವರನ್ನು ಸ್ವಾಗತಿಸುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಶೆಟ್ಟರ್ ಅವರಿಗೆ ಅಧಿಕೃತವಾಗಿ ಕಾಂಗ್ರೆಸ್ಗೆ ಆಹ್ವಾನ ನೀಡಿದ್ದಾರೆ. ಹಳಿಯಾಳದಲ್ಲಿ ಮಾತನಾಡಿದ ಸಿದ್ದರಾಮಯ್ಯ, ನನಗೆ ಕ್ಷೇತ್ರವೇ ಇಲ್ಲ ಎಂದು ಈಶ್ವರಪ್ಪ ಈ ಹಿಂದೆ ಟೀಕಿಸಿದ್ದರು. ಆದರೆ ಅದೇ ಈಶ್ವರಪ್ಪ ಅವರಿಗೆ ಈಗ ಟಿಕೆಟ್ ಇಲ್ಲದಂತಾಗಿದೆ. ನನಗೆ ರಾಜ್ಯದ ಎಲ್ಲಾ ಕ್ಷೇತ್ರದಿಂದಲೂ ಸ್ಪರ್ಧೆ ಮಾಡುವಂತೆ ಆಹ್ವಾನ ನೀಡಿದ್ದಾರೆ ಎಂದು ಕಾಲೆಳೆದರು. ಓರ್ವ ಹಿರಿಯ ನಾಯಕ, ಮಾಜಿ ಡಿಸಿಎಂ ಈಶ್ವರಪ್ಪ ಅವರಿಗೆ ಪಕ್ಷ ಹೀಗೆ ಮಾಡಬಾರದಿತ್ತು. ಈಶ್ವರಪ್ಪ ಮಾತ್ರವಲ್ಲ, ಲಕ್ಷ್ಮಣ ಸವದಿ ಹಾಗೂ ಶೆಟ್ಟರ್ ಜೊತೆಗೆ ನಡೆದುಕೊಂಡ ರೀತಿಯೂ ಸರಿಯಲ್ಲ. ಶೆಟ್ಟರ್ ಕಾಂಗ್ರೆಸ್ ಸೇರುವ ಬಗ್ಗೆ ಇನ್ನೂ ಮಾತನಾಡಿಲ್ಲ. ಅವರು ಪಕ್ಷಕ್ಕೆ ಬರುತ್ತಾರಾದರೆ ನಾವು ಸ್ವಾಗತ ಮಾಡುತ್ತೇವೆ. ಇನ್ನೂ ಹಲವು ಬಿಜೆಪಿ ಶಾಸಕರು ಕಾಂಗ್ರೆಸ್ಗೆ ಬರುತ್ತಾರೆ ಎಂದು…
ಬಿಜೆಪಿ ಬಂಡಾಯ ನಿಲ್ಲುವ ಸೂಚನೆಗಳು ಕಾಣುತ್ತಿಲ್ಲ. ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಪಕ್ಷ ತೊರೆಯುತ್ತಿರುವವರ ಸಂಖ್ಯೆ ಹೆಚ್ಚಾಗಿದ್ದು ಆ ಪಟ್ಟಿಗೆ ಪ್ರಧಾನಿ ನರೇಂದ್ರ ಮೋದಿಯವರು ಕೈ ಮುಗಿದಿದ್ದ, ಮಾಜಿ ರೌಡಿ ಶೀಟರ್ ಫೈಟರ್ ರವಿ ಸೇರ್ಪಡೆಯಾಗಿದ್ದಾರೆ. ಅವರಿಂದು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ನಾಗಮಂಗಲ ಬಿಜೆಪಿ ಟಿಕೆಟ್ ಮೇಲೆ ಕಣ್ಣಿಟ್ಟು ಆರು ತಿಂಗಳ ಹಿಂದೆ ಪಕ್ಷ ಸೇರಿದ್ದ ಅವರು ಸಮಾಜ ಸೇವೆ ಹೆಸರಿನಲ್ಲಿ ಕೋಟ್ಯಾಂತರ ರೂ ಖರ್ಚು ಮಾಡಿದ್ದರು. ಅಷ್ಟು ಮಾತ್ರವಲ್ಲದೇ ಇದುವರೆಗೂ ನೆಲೆಯಿಲ್ಲದ ಬಿಜೆಪಿ ಪಕ್ಷಕ್ಕೆ ಒಂದಷ್ಟು ಸದಸ್ಯತ್ವ ಮಾಡಿಸುವ ಮೂಲಕ ಹೆಸರು ತಂದು ಕೊಟ್ಟಿದ್ದರು. ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಸಂದರ್ಭದಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಫೈಟರ್ ರವಿಗೆ ಟಿಕೆಟ್ ಎಂಬ ಆತ್ಮವಿಶ್ವಾಸದಲ್ಲಿ ಮಾತನಾಡಿದ್ದರು. ಇನ್ನು ಪ್ರಧಾನಿ ನರೇಂದ್ರ ಮೋದಿಯವರು ಮಂಡ್ಯಗೆ ಭೇಟಿ ನೀಡಿದ ಸಂದರ್ಭದಲ್ಲಿ ಫೈಟರ್ ರವಿರವರಿಗೆ ಕೈಮುಗಿಯುವ ಮೂಲಕ ಸುದ್ದಿಯಾಗಿದ್ದರು. ಆದರೆ ಎರಡು ವಾರದ ಹಿಂದಷ್ಟೇ ಬಿಜೆಪಿ ಸೇರಿದ ಎಲ್.ಆರ್ ಶಿವರಾಮೇಗೌಡರ ಪತ್ನಿ…
ತುಮಕೂರು: ಜಿಲ್ಲೆಯಲ್ಲಿ ಇಂದು ಒಟ್ಟು 11 ವಿಧಾನಸಭಾ ಕ್ಷೇತ್ರಗಳಲ್ಲಿ 11 ನಾಮಪತ್ರಗಳು ಸ್ವೀಕೃತಗೊಂಡಿವೆ. ಈ ಪೈಕಿ ನಾಲ್ಕು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿರುವುದು ಗಮನಾರ್ಹವಾಗಿದೆ. ಮುಖ್ಯವಾಗಿ ಇಂದು ಜಿಲ್ಲೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಂದಿದ್ದರಿಂದ ಅವರ ಸಮ್ಮುಖದಲ್ಲಿಯೇ ನಾಮಪತ್ರ ಸಲ್ಲಿಸಲು ನಿರ್ಧರಿಸಲಾಗಿತ್ತು. ಆದ್ರೆ ಕುಮಾರಸ್ವಾಮಿ ಬರುವುದು ತಡವಾದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಪೂರ್ವ ನಿಗದಿಯಂತೆ ನಾಮಪತ್ರಗಳನ್ನು ಸಲ್ಲಿಸಿದರು. ಅದರಲ್ಲಿ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಜನತಾದಳ(ಜಾತ್ಯಾತೀತ) ಪಕ್ಷದಿಂದ ಸಿ.ಬಿ.ಸುರೇಶ್ಬಾಬು ಅವರು 1 ನಾಮಪತ್ರ ಸಲ್ಲಿಸಿದ್ದರು. ಇಲ್ಲಿ ಕಾಂಗ್ರೆಸ್ ನಿಂದ ಕೆ.ಎಸ್. ಕಿರಣ್ ಕುಮಾರ್ ಮತ್ತು ಬಿಜೆಪಿಯಿಂದ ಮಾಜಿ ಸಚಿವ ಮಾಧುಸ್ವಾಮಿ ನಾಮಪತ್ರ ಸಲ್ಲಿಸಲು ಸಿದ್ದತೆ ನಡೆಸಿದ್ದಾರೆ. ಇನ್ನು ತಿಪಟೂರು ವಿಧಾನಸಭೆ ಕ್ಷೇತ್ರಕ್ಕೆ ಜನತಾದಳ(ಜಾತ್ಯತೀತ) ಪಕ್ಷದಿಂದ ಕೆ.ಟಿ. ಶಾಂತಕುಮಾರ ಅವರು 1 ನಾಮಪತ್ರ ಸಲ್ಲಿಸಿದರು. ಇಲ್ಲಿ ಬಿಜೆಪಿಯಿಂದ ಸಚಿವ ಬಿ.ಸಿ. ನಾಗೇಶ್ ಸ್ಪರ್ಧಿಸುತ್ತಿದ್ದಾರೆ. ತುರುವೇಕೆರೆ ವಿ.ಸ.ಕ್ಷೇತ್ರಕ್ಕೆ ಜನತಾದಳ ಜಾತ್ಯಾತೀತದಿಂದ ಎಂ.ಟಿ.ಕೃಷ್ಣಪ್ಪ 1 ನಾಮಪತ್ರ ಹಾಗೂ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ರಾಮ್ ಪ್ರಸಾದ್ ಅವರು…
ಕಾರವಾರ : ಪಕ್ಷಕ್ಕಾಗಿ ದುಡಿದ ನನಗೆ ಟಿಕೆಟ್ ತಪ್ಪಿಸಿ ತುಂಬಾ ಅನ್ಯಾಯ ಮಾಡಿದ್ದಾರೆ ಎಂದು ಮಾಜಿ ಶಾಸಕಿ, ಕುಮಟಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಶಾರದಾ ಶೆಟ್ಟಿ ದುಃಖಿತರಾಗಿ ಹೇಳಿಕೊಂಡಿದ್ದಾರೆ. ಶನಿವಾರ ಬಿಡುಗಡೆಯಾದ ಕಾಂಗ್ರೆಸ್ ನ ಮೂರನೇ ಪಟ್ಟಿಯಲ್ಲಿ ಕಾರವಾರ ಕ್ಷೇತ್ರಕ್ಕೆ ಮಾಜಿ ಸಚಿವ ಮಾರ್ಗರೇಟ್ ಆಳ್ವಾ ಅವರ ಪುತ್ರ ನಿವೇದಿತ್ ಆಳ್ವಾ ಅವರಿಗೆ ಟಿಕೆಟ್ ನೀಡಲಾಗಿದೆ. ಕಳೆದ 25 ವರ್ಷಗಳಿಂದ ನಮ್ಮ ಯಜಮಾನರು (ಮೋಹನ್ ಶೆಟ್ಟಿ), ಅವರ ಬಳಿಕ ನಾನು, ಮಕ್ಕಳೆಲ್ಲ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದ್ದೆವು. ನಾನು ಒಮ್ಮೆ ಶಾಸಕಿಯಾಗಿದ್ದೆ, ಆದರೆ ಕಳೆದ ಚುನಾವಣೆಯಲ್ಲಿ ಸೋತಿದ್ದೆ ಎಂದಿದ್ದಾರೆ. ಐದು ವರ್ಷ ಅಧಿಕಾರದಲ್ಲಿರುವಾಗ ಸುಮ್ಮನೆ ಕೂರದೆ ಐದು ವರ್ಷಗಳ ಕಾಲ ಪಕ್ಷ ಸಂಘಟನೆಗಾಗಿ, ಕಾರ್ಯಚಟುವಟಿಕೆಗಳಿಗಾಗಿ ದುಡಿದಿದ್ದೆ ಎಂದು ಹೇಳಿದರು. ಕಾಂಗ್ರೆಸ್ ಗೆ ಗೆಲುವಿನ ವೇದಿಕೆ ಕಟ್ಟಿಕೊಟ್ಟಿದ್ದೆ. ಹೀಗಾಗಿ ನನಗೆ ನಂಬಿಕೆ ಇತ್ತು ನನಗೆ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ಕೊಡುತ್ತಾರೆ ಎಂದು ಆದರೆ ಆ ನಂಬಿಕೆ ಸುಳ್ಳಾಗಿದ್ದು, ತುಂಬಾ ಬೇಸರವಾಗಿದೆ ಎಂದು ಮಾಜಿ…
ನಿಮ್ಮ ಸ್ಮಾರ್ಟ್ಫೋನ್ ಬ್ಯಾಟರಿ ಕಡಿಮೆ ಇದ್ದಾಗ ಉಬರ್ ಕ್ಯಾಬ್ ಬುಕ್ ಮಾಡುತ್ತೀದ್ದೀರಾ?. ಹಾಗಾದರೆ, ನೀವು ಹೆಚ್ಚು ಹಣವನ್ನು ಪಾವತಿಸಬೇಕಾಗುತ್ತದೆ.! ಹೌದು, ಇದನ್ನು ಕೇಳಿ ನಿಮಗೆ ಆಶ್ಚರ್ಯವಾಗಬಹುದು. ಆದರೆ, ಇಂತಹದೊಂದು ಆರೋಪವನ್ನು ಬೆಲ್ಜಿಯನ್ ಪತ್ರಿಕೆಯೊಂದು ವರದಿ ಮಾಡಿದೆ. ನಮ್ಮ ಸ್ಮಾರ್ಟ್ಫೋನ್ ಬ್ಯಾಟರಿ ಸಾಮರ್ಥ್ಯ ಕಡಿಮೆ ಇದ್ದ ವೇಳೆ ಉಬರ್ ಕ್ಯಾಬ್ ಬುಕ್ಕಿಂಗ್ ದರವನ್ನು ಹೆಚ್ಚಿಸುತ್ತದೆ. ಸ್ಮಾರ್ಟ್ಫೋನಿನಲ್ಲಿ ಬ್ಯಾಟರಿ ಶಕ್ತಿ ಕಡಿಮೆ ಇದ್ದಷ್ಟು ಕ್ಯಾಬ್ ದರಗಳು ಹೆಚ್ಚಾಗುತ್ತವೆ ಎಂದು ತಿಳಿಸಿದೆ . ಈ ಮೂಲಕ ಉಬರ್ ಸಂಸ್ಥೆ ಜನರಿಗೆ ಮೋಸಮಾಡುತ್ತಿದೆ ಎಂಬರ್ಥದಲ್ಲಿ ‘ಡೆರ್ನಿಯರ್ ಹ್ಯೂರ್’ ಎಂಬ ಪತ್ರಿಕೆಯು ಸಾಕ್ಷಿಯುತ ವರದಿಯನ್ನು ಪ್ರಕಟಿಸಿದೆ. ಇದರಿಂದ ಉಬರ್ ಸಂಸ್ಥೆ ತನ್ನ ಗ್ರಾಹಕರ ಸಂಕಷ್ಟದ ಸ್ಥಿತಿಯನ್ನು ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆಯಾ ಎಂಬ ಅನುಮಾನ ಕೂಡ ಮೂಡಿಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಶಾರುಖ್ ಖಾನ್ ಮತ್ತು ಎಸ್ಎಸ್ ರಾಜಮೌಳಿ ವಿಶ್ವದ ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರು. ಪಾಕಿಸ್ತಾನದ ಸಚಿವ ಶೆರ್ರಿ ರೆಹಮಾನ್ ಅವರೊಂದಿಗೆ ಜೋ ಬಿಡೆನ್ ಮತ್ತು ಉಕ್ರೇನ್ನ ಪ್ರಥಮ ಮಹಿಳೆ ಒಲೆನಾ ಝೆಲೆನ್ಸ್ಕಿ ಪಟ್ಟಿಯಲ್ಲಿದ್ದಾರೆ. ಟೈಮ್ ಮ್ಯಾಗಜೀನ್ ಬಿಡುಗಡೆ ಮಾಡಿದ 100 ಜನರ ಪಟ್ಟಿಯಲ್ಲಿ ಅವರನ್ನು ಸೇರಿಸಲಾಗಿದೆ. ಶಾರುಖ್ ಅವರನ್ನು ಹಾಲಿವುಡ್ ತಾರೆಗಳಾದ ಪೆಡ್ರೊ ಪಾಸ್ಕಲ್ ಮತ್ತು ಜೆನ್ನಿಫರ್ ಕೂಲಿಡ್ಜ್ ಅವರೊಂದಿಗೆ ಇರಿಸಲಾಗಿತ್ತು. ಶಾರುಖ್ ಖಾನ್ ಒಂದು ವಿದ್ಯಮಾನ ಎಂದು ದೀಪಿಕಾ ಪಡ್ಕನ್ ಸಾಮಾಜಿಕ ಮಾಧ್ಯಮದಲ್ಲಿ ಹೇಳಿದ್ದಾರೆ. ಆಸ್ಕರ್ ಸೇರಿದಂತೆ ಅಂತರಾಷ್ಟ್ರೀಯ ಪುರಸ್ಕಾರ ಪಡೆದಿರುವ ಆರ್ ಆರ್ ಆರ್ ನಿರ್ದೇಶಕ ಎಸ್ ಎಸ್ ರಾಜಮೌಳಿ ಅವರಿಗೂ ಪ್ರಶಸ್ತಿ ಲಭಿಸಿದೆ. ಯುಎಸ್ ಅಧ್ಯಕ್ಷ ಜೋ ಬಿಡೆನ್ ಮತ್ತು ಉಕ್ರೇನ್ನ ಪ್ರಥಮ ಮಹಿಳೆ ಒಲಿನಾ ಝೆಲೆನ್ಸ್ಕಿ ಈ ಪಟ್ಟಿಯಲ್ಲಿ ಪ್ರಮುಖರಾಗಿದ್ದಾರೆ. ಬೇಹುಗಾರಿಕೆ ಆರೋಪದ ಮೇಲೆ ರಷ್ಯಾದಿಂದ ಜೈಲಿನಲ್ಲಿರುವ ಪತ್ರಕರ್ತ ಇವಾನ್ ಗಾರ್ಷ್ಕೋವಿಚ್ ಕೂಡ ವಿಶ್ವದ ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದಾರೆ. ಬ್ರೆಜಿಲ್ ಅಧ್ಯಕ್ಷ ಲೂಯಿಸ್ ಇನಾಸಿಯೊ…
ಬಿಜೆಪಿ ವಿರುದ್ಧ ಪ್ರತಿಪಕ್ಷಗಳ ಒಗ್ಗಟ್ಟಿನ ಚಳುವಳಿಗಳು ಸಕ್ರಿಯವಾಗಿವೆ. 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಿದರೆ ದೇಶವೇ ಸರ್ವನಾಶವಾಗಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ. ಪ್ರತಿಪಕ್ಷಗಳ ಒಗ್ಗಟ್ಟು ಮೂಡಿಸಲು ಮುಂದಾಗುತ್ತಿದ್ದರೂ ಪ್ರಧಾನಿ ಹುದ್ದೆ ಬೇಡ ಎಂದು ನಿತೀಶ್ ಸ್ಪಷ್ಟಪಡಿಸಿದ್ದಾರೆ. ಬಿಜೆಪಿಯನ್ನು ಕೆಳಗಿಳಿಸಲು ಪ್ರತಿಪಕ್ಷಗಳನ್ನು ಒಗ್ಗೂಡಿಸುವುದೇ ತಮ್ಮ ಏಕೈಕ ಗುರಿ ಎಂದು ನಿತೀಶ್ ಹೇಳಿದ್ದಾರೆ. ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಅಂಗವಾಗಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ನಿತೀಶ್ ಕುಮಾರ್ ಮಾತನಾಡಿದರು. ನಿತೀಶ್ ಕುಮಾರ್ ಮತ್ತು ರಾಹುಲ್ ಗಾಂಧಿ ಸೋಮವಾರ ಮುಂಬೈನಲ್ಲಿ ಉದ್ಧವ್ ಠಾಕ್ರೆ ಅವರನ್ನು ಭೇಟಿ ಮಾಡಿ ವಿರೋಧ ಪಕ್ಷಗಳ ಏಕತೆಯನ್ನು ರಚಿಸಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಪೂರ್ವ ಉಕ್ರೇನ್ನಲ್ಲಿ ರಷ್ಯಾ ವೈಮಾನಿಕ ದಾಳಿಯನ್ನು ತೀವ್ರಗೊಳಿಸಿದೆ. ಸ್ಲೋವಿಯನ್ಸ್ಕ್ ಪ್ರದೇಶದಲ್ಲಿ ಕ್ಷಿಪಣಿ ದಾಳಿಯಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ.ಮೃತರಲ್ಲಿ ಮಗುವೂ ಸೇರಿದೆ. ಕ್ಷಿಪಣಿ ದಾಳಿಯು ಪಶ್ಚಿಮ ನಗರದ ಬಖ್ಮುತ್ನಲ್ಲಿರುವ ವಸತಿ ಪ್ರದೇಶದಲ್ಲಿ ನಡೆದಿದೆ. 21 ಮಂದಿ ಗಾಯಗೊಂಡಿದ್ದಾರೆ ಎಂದೂ ಸೇನೆ ವರದಿ ಮಾಡಿದೆ. ಕುಸಿದ ಕಟ್ಟಡಗಳಲ್ಲಿ ಸಿಲುಕಿರುವವರನ್ನು ರಕ್ಷಿಸುವ ಯತ್ನ ಮುಂದುವರಿದಿದೆ.ಶೆಲ್ ದಾಳಿಯಲ್ಲಿ ಐದು ಮನೆಗಳು ಮತ್ತು ಐದು ಫ್ಲಾಟ್ಗಳು ನಾಶವಾಗಿವೆ. ವ್ಯವಹಾರಗಳು ಮತ್ತು ಅಂಗಡಿಗಳು ಹಾನಿಗೊಳಗಾಗಿವೆ ,ಏಳು ಜನರು ನಾಪತ್ತೆಯಾಗಿದ್ದಾರೆ ಎಂದು ಗವರ್ನರ್ ಪಾವ್ಲೋ ಕಿರಿಲೆಂಕೊ ಹೇಳಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದ್ದು, ಎಸ್-300 ಕ್ಷಿಪಣಿಗಳನ್ನು ಬಳಸಿ ದಾಳಿ ನಡೆಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಕ್ರೂರ ದಾಳಿಯನ್ನು ಖಂಡಿಸಿದರು. “ಹಗಲಿನಲ್ಲಿ ಜನರನ್ನು ಕೊಲ್ಲುವುದು, ದೇಶದ ಇಡೀ ಜೀವನವನ್ನು ನಾಶಪಡಿಸುವುದು. ರಷ್ಯಾದ ದುಷ್ಟ ಆಡಳಿತವು ಮತ್ತೊಮ್ಮೆ ತನ್ನ ನೈಜ ಸ್ವರೂಪವನ್ನು ಪ್ರದರ್ಶಿಸಿದೆ, ”ಎಂದು ಅವರು ಟೆಲಿಗ್ರಾಮ್ನಲ್ಲಿ ಬರೆದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…