Subscribe to Updates
Get the latest creative news from FooBar about art, design and business.
- ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
- ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
- ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ
- ಬೌದ್ಧ ಧರ್ಮವು ಸಮಾನತೆ, ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ: ಹರಾ ಮಹೇಶ್
- ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಹೆಣ್ಣು ಮಕ್ಕಳಿಗೆ ಉಚಿತ ಲಸಿಕೆ: ಶಾಸಕ ಡಾ.ಎಚ್.ಡಿ.ರಂಗನಾಥ್
- ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ
- ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ
- ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
Author: admin
ನವದೆಹಲಿ: ದೇಶದಲ್ಲಿ ಕಳೆದ ಕೆಲ ದಿನಗಳಿಂದ ಕೋವಿಡ್ ಹಾಗೂ H3N2 ಪ್ರಕರಣ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಯಲ್ಲಿ 1000ಕ್ಕೂ ಅಧಿಕ ಪ್ರಕರಣಗಳು ದೇಶದಲ್ಲಿ ದಾಖಲಾಗಿದೆ. ಇತ್ತ 5 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ದಿನದಿಂದ ದಿನಕ್ಕೆ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹಲವು ರಾಜ್ಯಗಳು ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ ದೇಶದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿಡಲು ಪ್ರಧಾನಿ ನರೇಂದ್ರ ಮೋದಿ ಸಂಜೆ 4.30ಕ್ಕೆ ಮಹತ್ವದ ಸಭೆ ಕರೆದಿದ್ದಾರೆ. ಸದ್ಯ ಭಾರತದಲ್ಲಿರುವ ಪ್ರಕರಣಗಳು ಹರಡುತ್ತಿರುವ ವೇಗ, ಪರಿಸ್ಥಿತಿ ಎದುರಿಸಲು ಕೈಗೊಂಡಿರುವ ಮುನ್ನಚ್ಚರಿಕೆ ಕ್ರಮಗಳ ಕುರಿತು ಈ ಸಭೆಯಲ್ಲಿ ಚರ್ಚಿಸಲಾಗುತ್ತದೆ. ಇಷ್ಟೇ ಅಲ್ಲ ಪ್ರಧಾನಿ ಮೋದಿ ಕೆಲ ಸೂಚನೆ ನೀಡುವ ಸಾಧ್ಯತೆ ಇದೆ.ಅಧಿಕಾರಿಗಳಿಂದ ಭಾರತದಲ್ಲಿನ ಕೋವಿಡ್ ಹಾಗೂ H3N2 ಪ್ರಕರಣಗಳ ಸಂಖ್ಯೆ ಮಾಹಿತಿ ಪಡೆಯಲಿರುವ ಮೋದಿ, ಆಯಾ ರಾಜ್ಯದಲ್ಲಿನ ಪರಿಸ್ಥಿತಿ ಅವಲೋಕಿಸಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್…
ಬೆಳಗಾವಿ: ಹಿಂಡಲಗಾ ಗಣಪತಿ ಮಂದಿರ ಮತ್ತು ಸುಳೇಭಾವಿಯ ಆದಿಶಕ್ತಿ ಶ್ರೀ ಮಹಾಲಕ್ಷ್ಮಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳಕರ್ ಅವರು ಯುಗಾದಿಯ ದಿನ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಿದರು. ಬುಧವಾರ ಬೆಳಗ್ಗೆ ಹಿಂಡಲಗಾ ಗಣಪತಿ ಗುಡಿಗೆ ತೆರಳಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಪಕ್ಷದ ಮುಖಂಡರು, ವಿಘ್ನ ವಿನಾಯಕನಿಗೆ ಪೂಜೆ ಸಲ್ಲಿಸಿದರು. ಪ್ರಚಾರ ಕಾರ್ಯ ಮತ್ತು ಚುನಾವಣೆಗಳು ನಿರ್ವಿಘ್ನವಾಗಿ ನಡೆಯಲಿ, ಸರ್ವರಿಗೂ ಒಳಿತಾಗಲಿ ಎಂದು ಪ್ರಾರ್ಥಿಸಿದರು. ನಂತರ ಸುಳೇಭಾವಿಯ ಆದಿಶಕ್ತಿ ಶ್ರೀ ಮಹಾಲಕ್ಷ್ಮಿ ದೇವಿಯ ಸನ್ನಿಧಿಗೆ ತೆರಳಿ, ವಿಶೇಷ ಪೂಜೆ ಸಲ್ಲಿಸಿದರು. ವಿಶೇಷವಾಗಿ ವಿನ್ಯಾಸಗೊಳಿಸಿದ ಪ್ರಚಾರ ವಾಹನಕ್ಕೂ ಸಹ ಪೂಜೆ ಸಲ್ಲಿಸಿ ಚುನಾವಣೆಯ ಪ್ರಚಾರಕ್ಕೆ ಅಧಿಕೃತವಾಗಿ ಚಾಲನೆಯನ್ನು ನೀಡಿದರು. ಇದೇ ವೇಳೆ ಕಳೆದ 5 ವರ್ಷದ ತಮ್ಮ ಸಾಧನೆ, ಅದಕ್ಕೆ ಜನರು ನೀಡಿದ ಸಹಕಾರ, ತಾವು ಅನುಭವಿಸದ ಸಂಕಷ್ಟ, ಜನರ ಪ್ರೀತಿ ವಿಶ್ವಾಸ ಎಲ್ಲವನ್ನೂ ಸಂಕ್ಷಿಪ್ತವಾಗಿ ವಿವರಿಸುವ ಮತ್ತು ಬರಲಿರುವ ಚುನಾವಣೆಯಲ್ಲಿ ತಮ್ಮನ್ನು…
ಇಂದು ಭಾರತೀಯ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಧೀರ ಹೋರಾಟಗಾರ ಭಗತ್ ಸಿಂಗ್ ಅವರ ಹುತಾತ್ಮ ದಿನ. ದೇಶಕ್ಕೆ ಭಗತ್ ಸಿಂಗ್ ಅವರು ತಮ್ಮ ಜೀವ ತ್ಯಾಗದ ಮೂಲಕ ನೀಡಿದ ಕೊಡುಗೆಯನ್ನು ತಲೆಮಾರುಗಳ ನಂತರವೂ ಗೌರವದಿಂದ ಸ್ಮರಿಸಲಾಗುತ್ತದೆ. ವೀರ ಸೇನಾನಿಗಳಾದ ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ಅವರನ್ನು ಬ್ರಿಟಿಷ್ ಸರ್ಕಾರವು ಮಾರ್ಚ್ 23, 1931 ರಂದು ಗಲ್ಲಿಗೇರಿಸಿತು. ಜಾನ್ ಸೌಂಡರ್ಸ್ ಎಂಬ ಬ್ರಿಟಿಷ್ ಪೊಲೀಸ್ ಅಧಿಕಾರಿಯನ್ನು ಗುಂಡಿಕ್ಕಿ ಕೊಂದ ಆರೋಪ ಅವರ ಮೇಲಿತ್ತು. ಲಾಲಾ ಲಜಪತ್ ರಾಯ್ ಅವರ ಸಾವಿಗೆ ಕಾರಣವಾದ ಜೇಮ್ಸ್ ಸ್ಕಾಟ್ ಅವರನ್ನು ಕೊಲ್ಲುವುದು ಮೂವರ ಉದ್ದೇಶವಾಗಿತ್ತು. ಆದರೆ ಅವನು ಅದನ್ನು ಸ್ಕಾಟ್ ಎಂದು ತಪ್ಪಾಗಿ ಭಾವಿಸಿ ಸೌಂಡರ್ಸ್ನನ್ನು ಕೊಂದನು. ಸೇಡು ತೀರಿಸಿಕೊಳ್ಳುವುದಾಗಿ ಘೋಷಿಸಿದ ಭಗತ್ ಸಿಂಗ್ ತಿಂಗಳುಗಟ್ಟಲೆ ತಲೆಮರೆಸಿಕೊಂಡ. ಏಪ್ರಿಲ್ 1929 ರಲ್ಲಿ, ಸೆಂಟ್ರಲ್ ಲೆಜಿಸ್ಲೇಟಿವ್ ಅಸೆಂಬ್ಲಿ ಕಟ್ಟಡದಲ್ಲಿ ಬಾಂಬ್ ಸ್ಫೋಟಗೊಂಡಿತು ಮತ್ತು ಮತ್ತೆ ಫ್ಲ್ಯಾಶ್ ಪಾಯಿಂಟ್ ಆಯಿತು. ಭಗತ್ ಸಿಂಗ್ ಅಂತಿಮವಾಗಿ ಇಂಕ್ವಿಲಾಬ್ ಜಿಂದಾಬಾದ್ ಎಂಬ…
ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಇವತ್ತು ಬಿಡುಗಡೆ ಮಾಡುತ್ತಿಲ್ಲ, ಆದರೆ ಇನ್ನೂ ಎರಡು, ಮೂರು ದಿನಗಳಲ್ಲಿ ಮೊದಲ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದರು. ಮಂಗಳವಾರ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಿತ್ತು. ಆದರೆ ಹಲವು ರಾಜಕೀಯ ಬೆಳವಣಿಗೆಗಳ ಬೆನ್ನಲ್ಲೇ ಪಟ್ಟಿ ಬಿಡುಗಡೆಯನ್ನು ಮುಂದೂಡಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವತ್ತು ಮೊದಲ ಪಟ್ಟಿ ಬಿಡುಗಡೆ ಮಾಡಬೇಕಿತ್ತು. ಮಲ್ಲಿಕಾರ್ಜುನ ಖರ್ಗೆ ಅವರು ಹಬ್ಬಕ್ಕೆ ಬೆಂಗಳೂರಿಗೆ ಬಂದಿದ್ದಾರೆ. ಹೀಗಾಗಿ ಎರಡು ಮೂರು ದಿನಗಳಲ್ಲಿ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಭರವಸೆ ನೀಡಿದರು. ಕಳೆದ 3 ವರ್ಷಗಳಿಂದ ಜನ ಸಾಕಷ್ಟು ಸಂಕಷ್ಟ ಅನುಭವಿಸುತ್ತಿದ್ದಾರೆ. ಯುಗಾದಿ ಸಂದರ್ಭದಲ್ಲಿ ಈ ಕೆಟ್ಟ ಆಡಳಿತ ತೊಲಗಲಿ. ಈ ರೀತಿ ನೀವೂ ಹಾರೈಸಿ. ಕಾಂಗ್ರೆಸ್ ಸರ್ಕಾರ ಜನಪರವಾಗಿರಲಿದೆ. ಹಲವಾರು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೀವಿ. ಬಿಜೆಪಿಯವರ ತರಹ ನಾವು ಸುಳ್ಳು ಆಶ್ವಾಸನೆ ಕೊಡಲ್ಲ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ…
ವೋಟರ್ ಐಡಿ ಮತ್ತು ಆಧಾರ್ ಜೋಡಿಸುವುದಕ್ಕೆ ಇದ್ದ ಅಂತಿಮ ಗಡುವನ್ನು ಒಂದು ವರ್ಷದ ಅವಧಿಗೆ ವಿಸ್ತರಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಇದರಂತೆ, ಈ ವರ್ಷ ಏಪ್ರಿಲ್ 1ಕ್ಕೆ ಇದ್ದ ಕೊನೇ ದಿನ 2024ರ ಮಾರ್ಚ್ 31ರ ತನಕ ವಿಸ್ತರಣೆ ಆಗಿದೆ. ಮತದಾರರು ಈ ಅವಧಿಯನ್ನು ಸದುಪಯೋಗ ಮಾಡಿಕೊಂಡು ತಮ್ಮ ಮತದಾರರ ಚೀಟಿ ಮತ್ತು ಆಧಾರ್ ಜೋಡಿಸುವ ಕೆಲಸವನ್ನು ಮಾಡಬೇಕು ಎಂದು ಸರ್ಕಾರ ಕೇಳಿಕೊಂಡಿದೆ. ಬಳಕೆದಾರರು ತಮ್ಮ ಆಧಾರ್ ಜತೆಗೆ ವೋಟರ್ ಐಡಿ ಜೋಡಿಸುವ ಕೆಲಸವನ್ನು ಆನ್ಲೈನ್ ಮೂಲಕ ಅಥವಾ ಎಸ್ಎಂಎಸ್ ಮೂಲಕ 2024ರ ಮಾರ್ಚ್ 31ರ ಒಳಗೆ ಪೂರ್ಣಗೊಳಿಸಬೇಕು. ಆಧಾರ್ ಜತೆಗೆ ವೋಟರ್ ಐಡಿ ಜೋಡಿಸುವ ಕೆಲಸ ಕಡ್ಡಾಯ ಅಲ್ಲದೇ ಹೋದರೂ, ಒಂದಕ್ಕಿಂತ ಹೆಚ್ಚು ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರು ಇದ್ದರೆ ಅದನ್ನು ರದ್ದುಗೊಳಿಸುವುದಕ್ಕೆ ಇದು ನೆರವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…
ಬೀದರ್ ಜಿಲ್ಲೆಯ ಔರಾದ ತಾಲೂಕಿನ ಕರಕ್ಯಾಳ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಿಂದ ಜನರು ಪರದಾಡುತ್ತಿದ್ದಾರೆ. ಅವರ ಸಮಸ್ಯೆಗಳನ್ನು ತಕ್ಷಣವೇ ಬಗೆ ಹರಿಸುವಂತೆ ಸುಧಾಕರ್ ಕೊಳ್ಳುರ ಆಗ್ರಹಿಸಿದರು. ಇಂದು ಗ್ರಾಮಕ್ಕೆ ಭೇಟಿ ನೀಡಿದ ಸುಧಾಕರ್ ಅವರು, ಗ್ರಾಮದ ನೀರಿನ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಬಳಿ ದೂರವಾಣಿ ಮೂಲಕ ಮಾತನಾಡಿ, ಸಮಸ್ಯೆಯನ್ನು ಬಗೆಹರಿಸುವಂತೆ ಒತ್ತಾಯಿಸಿದರು. ಗ್ರಾಮದಲ್ಲಿ ಜನರು ಹನಿ ನೀರಿಗಾಗಿ ಪರದಾಡುತ್ತಿದ್ದಾರೆ. ಆದರೆ ಸಂಬಂಧಪಟ್ಟ ಅಧಿಕಾರಿಗಳು ಈ ಕಡೆಗೆ ಗಮನ ನೀಡುತ್ತಿಲ್ಲ ಎಂದು ಸುಧಾಕರ್ ಕೊಳ್ಳುರ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ನಗರ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶಂಕು ನಿಷ್ಪತೆ, ಹರಿದೇವ ಸಂಗನಾಳ, ಇಬ್ರಾಹಿಂ, ನಬಿ ಮುಲ್ಲಾ, ಸೈಯದ್ ಇಸ್ಮೈಲ್, ರಂಜಿತ್, ಶಾಮ, ಸಂಜು ಕಂಬಳೆ ಮತ್ತಿತರರು ಉಪಸ್ಥಿತರಿದ್ದರು. ವರದಿ: ಅರವಿಂದ ಮಲ್ಲಿಗೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಲು ಮುಂದಾಗಿರುವ ಬಾಬೂರಾವ್ ಚಿಂಚನಸೂರ್ ಅವರ ವಿರುದ್ದ ಕಂದಾಯ ಸಚಿವ ಆರ್.ಅಶೋಕ್ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಆರ್.ಅಶೋಕ್, ಚಿಂಚನಸೂರ್ ಗೆ ಅಧಿಕಾರದ ಮೇಲೆ ಆಸೆ. ಚಿಂಚನಸೂರ್ ಮಾತಿಗೆ ಯಾವುದೇ ಬೆಲೆ ಇಲ್ಲ. ಮಲ್ಲಿಕಾರ್ಜುನ ಖರ್ಗೆ ಸೋಲಿಸಲು ಬಿಜೆಪಿಗೆ ಬಂದಿದ್ದಾಗೆ ಹೇಳಿದ್ರು. ಎಂಎಲ್ ಸಿ ಆದರೂ ವಿಧಾನಸಭೆ ಟಿಕೆಟ್ ಕೇಳುತ್ತಿದ್ದಾರೆ. ಚಿಂಚನಸೂರ್ ಮಾತಿನ ಮೇಲೆ ನಿಲ್ಲಲ್ಲ ಎಂದು ವಾಗ್ದಾಳಿ ನಡೆಸಿದರು. ಚಾಮರಾಜನಗರದಿಂದ ಸಚಿವ ವಿ.ಸೋಮಣ್ಣ ಸ್ಪರ್ಧೆ ಕುರಿತು ಪ್ರತಿಕ್ರಿಯಿಸಿದ ಸಚಿವ ಆರ್.ಅಶೋಕ್, ನಿನ್ನೆ ಸಂಜೆ ಸೋಮಣ್ಣ ಕರೆ ಮಾಡಿದ್ರು.ನಿಮ್ಮ ಜೊತೆ ಮಾತಾಡಬೇಕಂದರು ಚಾಮರಾಜನಗರಿಂದ ಸೋಮಣ್ಣ ಸ್ಪರ್ಧಿಸುವುದಾಗಿ ಹೇಳಿದರು. ಸೋಮಣ್ಣ ಬಿಜೆಪಿಯಲ್ಲಂದಲೇ ಸ್ಪರ್ಧಿಸುತ್ತಾರೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುರುವೇಕೆರೆಯಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯು ಐತಿಹಾಸಿಕವಾಗಿ ಅಚ್ಚಳಿಯದೇ ಉಳಿಯುವಂತಹ ಕಾರ್ಯಕ್ರಮವಾಗಿದ್ದು, ತುರುವೇಕೆರೆ ಇತಿಹಾಸದಲ್ಲಿಯೇ ಯಾವ ಪಕ್ಷಗಳು ಮಾಡಿರದಂತಹ ಕಾರ್ಯಕ್ರಮವಾಗಿದೆ ಎಂದು ಶಾಸಕ ಮಸಾಲ ಜಯರಾಮ್ ಹೇಳಿದರು. ತಮ್ಮ ಫಾರ್ಮ್ ಹೌಸ್ ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಯಡಿಯೂರಪ್ಪ. ಮಾಧುಸ್ವಾಮಿ, ಸಿ ಟಿ ರವಿ, ವಿಧಾನ ಪರಿಷತ್ ಸದಸ್ಯ ರವಿಕುಮಾರ್, ಸಂಸದರಾದ ಜಿ.ಎಸ್ .ಬಸವರಾಜ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಂ.ಡಿ.ಲಕ್ಷ್ಮೀನಾರಾಯಣ್ , ಮಾಜಿ ಸಂಸದರಾದ ಮುದ್ದಹನುಮೇಗೌಡ, ಆರ್ .ದೇವೇಗೌಡ , ವೈ.ಎ.ನಾರಾಯಣ ಸ್ವಾಮಿ, ವಿಧಾನ ಪರಿಷತ್ ಸದಸ್ಯರು ಪಕ್ಷದ ಹಲವು ಮುಖಂಡರು ಹಾಗೂ ಕಾರ್ಯಕರ್ತ ಎಲ್ಲರೂ ಸೇರಿ ಈ ಕಾರ್ಯಕ್ರಮವನ್ನು ಅತ್ಯಂತ ಅದ್ಭುತವಾಗಿ ಯಶಸ್ವಿಗೊಳಿಸಿದ್ದಾರೆ ಎಂದರು. ತಾಲೂಕಿನಲ್ಲಿ ಭಾರತೀಯ ಜನತಾ ಪಕ್ಷವು ಬಹಳ ಸದೃಢವಾಗಿದೆ. ಇಡೀ ಜಿಲ್ಲೆಯೇ ನಮ್ಮ ತಾಲೂಕನ್ನು ಒಮ್ಮೆ ತಿರುಗಿ ನೋಡುವಂತಾಗಿದೆ. ನನ್ನ ಆತ್ಮೀಯ ಎಲ್ಲಾ ಕಾರ್ಯಕರ್ತರುಗಳಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಮತ್ತು ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಾರ್ವಜನಿಕರಿಗೂ ಸಹ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಕ್ಕಾಗಿ ಧನ್ಯವಾದಗಳು ಅರ್ಪಿಸುತ್ತೇನೆ…
ಸರ್ಕಾರ ಕಾರ್ಮಿಕ ಕಿಟ್ ನೀಡುವ ಮೂಲಕ ಕಟ್ಟಡ ಕಾರ್ಮಿಕರ ನೆರವಿಗೆ ಧಾವಿಸಿದ್ದು, ನೋಂದಣಿಗೊಂಡ ಕಟ್ಟಡ ಕಾರ್ಮಿಕರು ಕಿಟ್ ನ್ನು ಪಡೆದುಕೊಳ್ಳುವಂತೆ ಸಂಘದ ಅಧ್ಯಕ್ಷ ಸೂರ್ಯಕಾಂತ ಸಾದುರೆ ತಿಳಿಸಿದರು. ಬೀದರ್ ಜಿಲ್ಲೆಯ ಮಂಗಲಪೇಟ ಹತ್ತಿರದ ಇಡೇನ್ ಕಾಲೋನಿಯಲ್ಲಿ ಕಟ್ಟಡ ಕಾರ್ಮಿಕರಿಗೆ ಸಂಘಟನೆಯ ವತಿಯಿಂದ ಕಾರ್ಮಿಕ ಕಿಟ್ ವಿತರಿಸಿ ಅವರು ಮಾತನಾಡಿದರು. ಈ ವೇಳೆ ಕಾರ್ಮಿಕ ಸಂಘಟನೆಯ ಗೌರವ ಅಧ್ಯಕ್ಷ ಪಂಡರಿ ಪೂಜಾರಿ, ಕಾರ್ಮಿಕ ಅಧ್ಯಕ್ಷ ಸೂರ್ಯಕಾಂತ ಸಾದುರೆ, ಉಪಾಧ್ಯಕ್ಷರಾದ ಯೇಸುದಾಸ್ ಬೆಳ್ಳೋರ, ಅನಿಲಕುಮಾರ ಗಂಜ್ಕರ್, ತುಕಾರಾಮ ಗೌರೆ, ಸಂತೋಷ ಸಿಂಧೆ, ಪ್ರಬುರಾವ್ ಬಾಚೆಪಳ್ಳಿ, ಶಿವರಾಜ ಜಮಸ್ತಾನ ಪುರ, ಪ್ರಕಾಶ ಚಿಕಪೇಟ ಕರ್ ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು. ವರದಿ: ಅರವಿಂದ ಮಲ್ಲಿಗೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಇತ್ತೀಚೆಗೆ ನಿಧನರಾದ ಚಾಮರಾಜನಗರ ಲೋಕಸಭಾ ಮಾಜಿ ಸಂಸದರಾದ ಆರ್. ಧ್ರುವನಾರಾಯಣ ಅವರಿಗೆ ಹನ್ನೊಂದನೇ ದಿನದ ಪ್ರಯುಕ್ತ ಹೆಚ್.ಡಿ.ಕೋಟೆಯ ಹೆಚ್.ಮಟಕೆರೆಗ್ರಾಮದ ಅಭಿಮಾನಿಗಳು ನಮನ ಸಲ್ಲಿಸಿದರು. ಈ ವೇಳೆ ಮಾತನಾಡಿದ ಧ್ರುವನಾರಾಯಣರವರ ಅಭಿಮಾನಿ, ಗ್ರಾಮದ ಮುಖಂಡ ಶಿವರಾಜು, ಆರ್. ಧ್ರುವನಾರಾಯಣ ಅವರು, ಇಡೀ ರಾಜ್ಯದ ರಾಜಕಾರಣಿಗಳಿಗೆ ಮಾದರಿ ಸಂಸದರು. ಅಭಿವೃದ್ಧಿ ಕೆಲಸಗಳಿಂದ ಅವರು ಎಲ್ಲರ ಮನಸ್ಸನ್ನು ಗೆದ್ದ ಧ್ರುವತಾರೆಯಾಗಿದ್ದಾರೆ. ಇಂದು ಅವರನ್ನ ಕಳೆದು ಕೊಂಡು ಇಡೀ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದರು. ಈ ಸಂಧರ್ಭದಲ್ಲಿ ಯಜಮಾನ ಮಹದೇವಯ್ಯ, ಗ್ರಾಮಪಂಚಾಯಿತಿ ಸದಸ್ಯರಾದ ವೆಂಕಟೇಶ, ವಸಂತ ಬಸಪ್ಪ, ಮುಖಂಡರಾದ ಗೋಪಾಲಸ್ವಾಮಿ, ಜಯಪಾಲ, ಕೃಷ್ಣಮಟಕೆರೆ, ಶಿವರಾಜು, ಶಿವಣ್ಣ, ಶಂಕರಯ್ಯ ಹಾಜರಿದ್ದರು. ವರದಿ: ಮಲಾರ ಮಹದೇವಸ್ವಾಮಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy