Subscribe to Updates
Get the latest creative news from FooBar about art, design and business.
- ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
- ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
- ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ
- ಬೌದ್ಧ ಧರ್ಮವು ಸಮಾನತೆ, ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ: ಹರಾ ಮಹೇಶ್
- ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಹೆಣ್ಣು ಮಕ್ಕಳಿಗೆ ಉಚಿತ ಲಸಿಕೆ: ಶಾಸಕ ಡಾ.ಎಚ್.ಡಿ.ರಂಗನಾಥ್
- ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ
- ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ
- ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
Author: admin
ಬೆಳಗಾವಿಯಲ್ಲಿ ನಡೆದ ಯುವ ಕ್ರಾಂತಿ ಸಮಾವೇಶ ಚುನಾವಣೆ ಆಕಾಂಕ್ಷಿಗಳ ನಾಯಕರುಗಳಿಗೆ ಒಂದು ಉತ್ಸಾಹ ವಾತಾವರಣವನ್ನು ಸೃಷ್ಟಿಸಿತ್ತು. ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ ವೇದಿಕೆಯನ್ನೆರಿದ್ದೆ ತಡ ಅವರ ಬಳಿ ಹೋಗಲು ಮತ್ತು ಅವರನ್ನು ಸನ್ಮಾನಿಸಿ ಸತ್ಕರಿಸಲು ಕಾಂಗ್ರೆಸ್ ನಾಯಕರುಗಳು ತುದಿಗಾಲಮೇಲೆ ನಿಂತಿದ್ದರು. ಚುನಾವಣೆ ಅಭ್ಯರ್ಥಿ ಆಕಾಂಕ್ಷಿಗಳಂತು ನಾ ಮುಂದು ತಾ ಮುಂದು ಎಂದು ದುಂಬಾಲು ಬಿದ್ದು ಹಂಬಲಿಸುತ್ತಿದ್ದರು. ಆದರೆ ಯಾರನ್ನೂ ರಾಹುಲ್ ಗಾಂಧಿ ಅವರ ಸಮೀಪ ಬಿಡದಂತೆ ಕಣ್ಗಾವಲು ಇರಿಸಲಾಗಿತ್ತು. ಇದೆಲ್ಲರ ನಡುವೆಯೇ ಜಿಲ್ಲಾ ಕಾಂಗ್ರೆಸ್ ವತಿಯಿಂದ ವಿನಯ್ ನವಲಗಟ್ಟಿ ಹಾಗೂ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಲಕ್ಷ್ಮಣ್ ರಾವ್ ಚಿಗಳೆ ಅವರ ಜೊತೆ ಬೆಳಗಾವಿ ದಕ್ಷಿಣ್ ಮತಕ್ಷೇತ್ರದ ಅಭ್ಯರ್ಥಿ ಆಕಾಂಕ್ಷಿ ಯಾದ ಪ್ರಭಾವತಿ ಚಾವಡಿ ವೇದಿಕೆ ಏರಿ ರಾಹುಲ್ ಗಾಂಧಿ ಅವರ ಸಮ್ಮುಖಕ್ಕೆ ಹೋಗಿದ್ದಾರೆ. ಇದು ಪ್ರೋಟೋಕೋಲ್ ಉಲ್ಲಂಘನೆ ಎಂದು ಸಾರ್ವಜನೀಕವಾಗಿ ಚರ್ಚೆಗಳಾಗುತ್ತಿವೆ. ಸ್ಥಳೀಯ ಕಾರ್ಯಕರ್ತರಲ್ಲಿ ಅಸಮಾಧಾನ ಹಾಗೂ ಆಕ್ರೋಶ ವ್ಯಕ್ತವಾಗಿದ್ದು ಕಂಡುಬಂತು ನಮಗಿಲ್ಲದ ಅವಕಾಶ ಪ್ರಭಾವತಿಗೆ ಹೇಗೆ ದೊರಕಿತು! ಎಂದು…
ಕೊರಟಗೆರೆ : 2023ರ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಕೂಡಾ ಏರುತ್ತಿದೆ. ಶಾಸಕ ಪಟ್ಟವನ್ನು ಪಡೆಯಲೇಬೇಕು ಎಂಬ ಮಹದಾಸೆಯಿಂದ ಪಕ್ಷದ ಹಿರಿಯ ನಾಯಕರ ಮೇಲೆ ಆಕಾಂಕ್ಷಿಗಳು ಮೇಲಿಂದ ಮೇಲೆ ಒತ್ತಡ ಹಾಕುತ್ತಿರುವುದು ಕಂಡು ಬರುತ್ತಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ವಿಧಾನಸಭಾ ಕ್ಷೇತ್ರ ಜೆಡಿಎಸ್ ಹಾಗೂ ಕಾಂಗ್ರೆಸ್ ಭದ್ರ ಕೋಟೆಯಾಗಿದ್ದು, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೂ ಕೂಡಾ ಪ್ರತಿಷ್ಠೆಯ ಕಣವಾಗಿದೆ. ಹೌದು, ಕೊರಟಗೆರೆ ಕ್ಷೇತ್ರದಲ್ಲಿ ಹಾಲಿ ಕಾಂಗ್ರೆಸ್ ಪಕ್ಷದ ಶಾಸಕರು ಇದ್ದು ಶತಾಯ-ಗತಾಯ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಲೇ ಬೇಕು ಎಂದು ರಾಜ್ಯ ಹಾಗೂ ರಾಷ್ಟçಮಟ್ಟದ ಬಿಜೆಪಿ ನಾಯಕರು ಒಂದಿಲ್ಲೊಂದು ತಂತ್ರವನ್ನು ಹೆಣೆಯುತ್ತಿದ್ದಾರೆ. ಆದರೆ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದ್ದು ಹಿರಿಯ ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ. ಆದರೆ, ಕೊರಟಗೆರೆ ಕ್ಷೇತ್ರದಿಂದ ಕೆ.ಎಂ ಮುನಿಯಪ್ಪ ರವರಿಗೆ ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚಾಗಿದ್ದು, ಮುನಿಯಪ್ಪ ಹಾಗೂ ತಂಡ ಉತ್ತರ ಪ್ರದೇಶದ ಮುಖ್ಯಮಂತ್ರಿ…
ಕೊರಟಗೆರೆ : ಹೊಸದಾಗಿ ನಿರ್ಮಿಸಿರುವ ಕಟ್ಟಡ ಎಷ್ಟು ಸುಂದರವಾಗಿದಿಯೋ ಅಷ್ಟೇ ಸುಂದರವಾಗಿ ಇಲ್ಲಿನ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಜಿ. ಪರಮೇಶ್ವರ್ ಹೇಳಿದರು. ಅವರು ತಾಲ್ಲೂಕಿನ ಅಕ್ಕಿರಾಂಪುರ ಗ್ರಾಮದಲ್ಲಿ ನೂತನ ಗ್ರಾಮ ಪಂಚಾಯತ್ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿ ಇಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ನಡೆಯಬಾರದು, ಗ್ರಾಮಸ್ಥರಿಗೆ ಮನೆ ಮುಂಜೂರು ಮಾಡುವಾಗ ಹಣ ತೆಗೆದುಕೊಳ್ಳಬಾರದು ಕಷ್ಟ ಎಂದು ನಿಮ್ಮ ಬಳಿ ಬಂದಾಗ ಅವರಿಗೆ ಸರಿಯಾದ ರೀತಿಯಲ್ಲಿ ಕೆಲಸ ಮಾಡಿಕೊಡುವುದು ನಿಮ್ಮ ಜವಾಬ್ದಾರಿಯಾಗಿದೆ. ಕಳೆದ 5 ವರ್ಷಗಳಲ್ಲಿ ಅಕ್ಕಿರಾಂಪುರ ಗ್ರಾಮ ಪಂಚಾಯತ್ ನಲ್ಲಿ 6 ಕೋಟಿ 42 ಲಕ್ಷದ ಕಾಮಗಾರಿಗಳನ್ನು ಮಾಡಿದ್ದೇವೆ. ಮುಖ್ಯಮಂತ್ರಿಯವರ ಬಳಿ ಮಾತನಾಡಿ ವಿಶೇಷವಾಗಿ ಕೊರಟಗೆರೆ ಕ್ಷೇತ್ರಕ್ಕೆ 30 ಕೋಟಿ ಹಣವನ್ನು ತಂದು ಯಾವುದೇ ಪಕ್ಷ ಭೇದವಿಲ್ಲದೆ 36 ಪಂಚಾಯಿತಿಗಳಿಗೂ ಭೇಟಿ ಕೊಟ್ಟು ಪ್ರತ್ಯೇಕವಾಗಿ 50 ರಿಂದ 60 ಲಕ್ಷ ಹಣವನ್ನು ಕೊಟ್ಟಿದ್ದೇವೆ. ಕೊರಟಗೆರೆ ತಾಲ್ಲೂಕಿನ ಸಮಗ್ರ ಅಭಿವೃದ್ಧಿಗಾಗಿ ಸುಮಾರು 2500 ಕೋಟಿ ಹಣವನ್ನು ಖರ್ಚು…
ಕಾಂಗ್ರೆಸ್ ಸೇರ್ಪಡೆ ವಿಚಾರ ಮುಗಿದ ಅಧ್ಯಾಯ ಎಂದು ಸಚಿವ ವಿ.ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ.ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ವಿ.ಸೋಮಣ್ಣ, ನಾನು ಡೈರೆಕ್ಟ್ ರಾಜಕಾರಣಿ, ಏನೇ ಇದ್ದರೂ ನೇರವಾಗಿ ಹೇಳುತ್ತೇನೆ. ಕಾಂಗ್ರೆಸ್ ಗೆ ಸೇರುವ ವಿಷಯ ನನ್ನ ತಲೆಯಲ್ಲೇ ಇಲ್ಲ. ಅವೆಲ್ಲಾ ಮುಗಿದ ಅಧ್ಯಾಯ ಎಂದು ತಿಳಿಸಿದರು. ಇನ್ನು ಚಾಮರಾಜನಗರ ಜಿಲ್ಲೆಯಲ್ಲಿ ಸ್ಪರ್ಧೆ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಸೋಮಣ್ಣ, ರಾಜ್ಯದ 224 ಕ್ಷೇತ್ರಗಳಲ್ಲಿ ಸೋಮಣ್ಣಗೆ ಹಲವಾರು ಕ್ಷೇತ್ರಗಳ ಪರಿಚಯ ಇದೆ. ಜಿಲ್ಲೆಯಿಂದ ಸ್ಪರ್ಧಿಸುವ ಯೋಚನೆ ಇಲ್ಲ. ಚಾಮರಾಜನಗರ ನನ್ನ ಪ್ರೀತಿಯ ಜಿಲ್ಎಲ ಹೌದು. ಆದರೆ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಪಕ್ಷ ತೀರ್ಮಾನ ಮಾಡುತ್ತದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಮಾರ್ಚ್ ಅಂತ್ಯದಲ್ಲಿ ಆಕಾಶದಲ್ಲಿ ಅದ್ಭುತ ದೃಶ್ಯವು ನಿಮ್ಮನ್ನು ಕಾಯುತ್ತಿದೆ. ಮಾರ್ಚ್ 28 ರಂದು, ಮನಾತ್ನಲ್ಲಿ ಐದು ಗ್ರಹಗಳು ಒಟ್ಟಿಗೆ ಗೋಚರಿಸುತ್ತವೆ. ಮಂಗಳ, ಶುಕ್ರ, ಬುಧ, ಗುರು ಮತ್ತು ಯುರೇನಸ್ ಗ್ರಹಗಳನ್ನು ನೋಡಬಹುದು. ಗುರುವು ಬುಧಕ್ಕಿಂತ ಪ್ರಕಾಶಮಾನವಾಗಿ ಗೋಚರಿಸುತ್ತದೆ ಎಂದು ವರದಿಯಾಗಿದೆ. ಐದು ಗ್ರಹಗಳಲ್ಲಿ ಶುಕ್ರವು ಅತ್ಯಂತ ಪ್ರಕಾಶಮಾನವಾಗಿದೆ. ಶುಕ್ರನನ್ನು ಬರಿಗಣ್ಣಿನಿಂದ ನೋಡಬಹುದು. ಇತರ ಗ್ರಹಗಳು ಸಹ ಗೋಚರಿಸುತ್ತವೆ ಆದರೆ ಶುಕ್ರನಂತೆ ಪ್ರಕಾಶಮಾನವಾಗಿಲ್ಲ. ಯುರೇನಸ್ ನೋಡಲು ಕಷ್ಟವಾಗುತ್ತದೆ. ಇದಕ್ಕೂ ಮುನ್ನ ಮಾರ್ಚ್ 1 ರಂದು ಶುಕ್ರ ಮತ್ತು ಗುರು ನೇರ ರೇಖೆಯನ್ನು ತಲುಪಿತ್ತು. ಮತ್ತು ಫೆಬ್ರವರಿಯಲ್ಲಿ, ಗುರು ಮತ್ತು ಶುಕ್ರವು ಹುಣ್ಣಿಮೆಯೊಂದಿಗೆ ನೇರ ಸಾಲಿನಲ್ಲಿದ್ದರು ಎಂಬ ಮಾಹಿತಿ ಲಭ್ಯವಾಗಿದೆ . ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಇಂದು ವಿಶ್ವ ಅರಣ್ಯ ದಿನ. ಜೀವಿಗಳ ಆರೋಗ್ಯದಲ್ಲಿ ಅರಣ್ಯಗಳ ಪಾತ್ರ ಈ ಅರಣ್ಯ ದಿನದ ಸಂದೇಶವಾಗಿದೆ. ಪ್ರತಿ ಅರಣ್ಯ ದಿನವು ಅರಣ್ಯ ಮತ್ತು ಅರಣ್ಯ ಸಂಪತ್ತನ್ನು ರಕ್ಷಿಸುವ ಮತ್ತು ಪ್ರಕೃತಿಯ ಜೀವವೈವಿಧ್ಯತೆಯನ್ನು ಸಂರಕ್ಷಿಸುವ ಮಹತ್ವವನ್ನು ನೆನಪಿಸುತ್ತದೆ. ಅರಣ್ಯಗಳು ಭೂಮಿಯ ಜೀವವೈವಿಧ್ಯದ ಮೂಲವಾಗಿದೆ. ಸುಮಾರು 1.6 ಶತಕೋಟಿ ಜನರು ಆಹಾರ, ಆಶ್ರಯ, ಶಕ್ತಿ ಮತ್ತು ಔಷಧಕ್ಕಾಗಿ ಅರಣ್ಯಗಳನ್ನು ಅವಲಂಬಿಸಿದ್ದಾರೆ, ಆದರೆ ಇಂದು ಸಂಭವಿಸುತ್ತಿರುವ ಅರಣ್ಯನಾಶದ ಪ್ರಮಾಣವು ಆತಂಕಕಾರಿಯಾಗಿದೆ. ಪ್ರತಿ ವರ್ಷ ಸರಾಸರಿ ಒಂದು ಕೋಟಿ ಹೆಕ್ಟೇರ್ ಅರಣ್ಯವನ್ನು ಕಳೆದುಕೊಳ್ಳುತ್ತಿದ್ದೇವೆ. 1990ರಿಂದಲೇ 42 ಕೋಟಿ ಹೆಕ್ಟೇರ್ ಅರಣ್ಯ ನಾಶವಾಗಿದೆ ಎಂದು ಅಂದಾಜಿಸಲಾಗಿದೆ. ಸಂಪೂರ್ಣವಾಗಿ ಕಳೆದುಹೋದ ಅಥವಾ ನಾಶವಾದ ಅರಣ್ಯ ಆವಾಸಸ್ಥಾನವನ್ನು ಮರುಸ್ಥಾಪಿಸುವುದು ಎಂದಿಗಿಂತಲೂ ಹೆಚ್ಚು ಮಹತ್ವದ್ದಾಗಿರುವ ಈ ಸಂದರ್ಭದಲ್ಲಿ ಮತ್ತೊಂದು ಅರಣ್ಯ ದಿನವು ಹಾದುಹೋಗುತ್ತದೆ. ವಿಶ್ವಸಂಸ್ಥೆಯ ನೇತೃತ್ವದಲ್ಲಿ ಪ್ರಪಂಚದಾದ್ಯಂತ ಈ ದಿನವನ್ನು ಆಚರಿಸಲಾಗುತ್ತದೆ. ಸಸಿಗಳನ್ನು ನೆಡುವುದು, ಮರಗಳ ಆರೈಕೆ ಮತ್ತು ವಿಚಾರ ಸಂಕಿರಣಗಳು ಮತ್ತು ತರಗತಿಗಳನ್ನು ಆಯೋಜಿಸುವ ಮೂಲಕ ಅರಣ್ಯ ಸಂರಕ್ಷಣೆಯನ್ನು ಖಚಿತಪಡಿಸಿಕೊಳ್ಳಲಾಗುತ್ತದೆ. ಜೀವದ…
ಕ್ರಿಮಿಯನ್ ಪರ್ಯಾಯ ದ್ವೀಪದ ಉತ್ತರದಲ್ಲಿರುವ ಧಂಕೋದಲ್ಲಿ ನಡೆದ ಸ್ಫೋಟದಲ್ಲಿ ರಷ್ಯಾದ ಕ್ರೂಸ್ ಕ್ಷಿಪಣಿಗಳು ನಾಶವಾದವು ಎಂದು ಉಕ್ರೇನ್ ಹೇಳಿದೆ. ರಷ್ಯಾದ ಕಪ್ಪು ಸಮುದ್ರದ ನೌಕಾಪಡೆಯ ಬಳಕೆಗಾಗಿ ರೈಲು ಮೂಲಕ ಸಾಗಿಸುತ್ತಿದ್ದ ಕ್ಷಿಪಣಿಗಳ ಮೇಲೆ ಸೋಮವಾರ ತಡರಾತ್ರಿ ದಾಳಿ ನಡೆದಿದೆ ಎಂದು ಸೇನಾ ಗುಪ್ತಚರ ಸಂಸ್ಥೆ ತಿಳಿಸಿದೆ. ಅನೇಕ ಕಲಿಬರ್-ಕೆಎನ್ ಕ್ರೂಸ್ ಕ್ಷಿಪಣಿಗಳನ್ನು ನಾಶಪಡಿಸಲಾಗಿದೆ ಎಂದು ಉಕ್ರೇನ್ನ ಮಿಲಿಟರಿ ಏಜೆನ್ಸಿಯ ಹೇಳಿಕೆ ತಿಳಿಸಿದೆ. ಕ್ಷಿಪಣಿಗಳನ್ನು ರೈಲಿನ ಮೂಲಕ ಸಾಗಿಸಲಾಯಿತು ಮತ್ತು ಜಲಾಂತರ್ಗಾಮಿ ಉಡಾವಣೆಗಾಗಿ ಉದ್ದೇಶಿಸಲಾಗಿದೆ ಎಂದು ಹೇಳಿದೆ. ಸ್ಫೋಟ ಸಂಭವಿಸಿರುವುದು ದೃಢಪಟ್ಟಿದ್ದರೂ ಉಕ್ರೇನ್ ಹೊಣೆಯೇ ಅಥವಾ ಯಾವ ಆಯುಧ ಬಳಸಲಾಗಿದೆ ಎಂಬುದು ಸ್ಪಷ್ಟವಾಗಿಲ್ಲ. ಉಕ್ರೇನ್ ದಾಳಿಯ ಹಿಂದೆ ಉಕ್ರೇನ್ ಕೈವಾಡವಿದೆ ಎಂದು ದೃಢಪಡಿಸಿದರೆ ಅದು ಕ್ರೈಮಿಯಾಕ್ಕೆ ಉಕ್ರೇನ್ ಪಡೆಗಳ ಅಪರೂಪದ ಆಕ್ರಮಣವಾಗಿದೆ. , ಧನ್ಕೋಯ್ ನಗರದಲ್ಲಿ ಡ್ರೋನ್ ದಾಳಿ ನಡೆದಿದೆ ಎಂದು ರಷ್ಯಾದಿಂದ ನೇಮಕಗೊಂಡ ಗವರ್ನರ್ ಹೇಳಿದ್ದಾರೆ. ಆದರೆ ಅದು ಕ್ರೂಸ್ ಕ್ಷಿಪಣಿಗಳನ್ನು ದಾಳಿಯ ಗುರಿಯಾಗಿ ಉಲ್ಲೇಖಿಸಿಲ್ಲ.ದಾಳಿಯಲ್ಲಿ 33 ವರ್ಷದ ವ್ಯಕ್ತಿ ಗಂಭೀರವಾಗಿ…
ಬೆಂಗಳೂರು: ರಾಜ್ಯ ಸರಕಾರವು ನೂತನವಾಗಿ ಸ್ಥಾಪಿಸಿರುವ ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ ಮತ್ತು ಬಾಗಲಕೋಟೆ ವಿಶ್ವವಿದ್ಯಾಲಯಗಳಿಗೆ ಕುಲಪತಿಗಳನ್ನು ನೇಮಿಸಿ, ಸೋಮವಾರ ಆದೇಶ ಹೊರಡಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಇದರಂತೆ ಬೆಂಗಳೂರು ವಿವಿ ಪತ್ರಿಕೋದ್ಯಮ ವಿಭಾಗದ ಡಾ.ಬಿ ಕೆ ರವಿ ಅವರನ್ನು ಕೊಪ್ಪಳ ವಿವಿ, ಬಾಗಲಕೋಟೆಯ ತೋಟಗಾರಿಕೆ ವಿ.ವಿ.ದ ಡಾ.ಅಶೋಕ ಸಂಗಪ್ಪ ಆಲೂರು ಅವರನ್ನು ಕೊಡಗು ವಿವಿ, ಮೈಸೂರು ವಿವಿ ಮಾನವಶಾಸ್ತ್ರ ವಿಭಾಗದ ಡಾ.ಎಂ ಆರ್ ಗಂಗಾಧರ ಅವರನ್ನು ಚಾಮರಾಜನಗರ ವಿವಿ, ಬೆಳಗಾವಿಯ ಕೆ.ಎಸ್.ಗೋಗಟೆ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಆನಂದ್ ಶರದ್ ದೇಶಪಾಂಡೆ ಅವರನ್ನು ಬಾಗಲಕೋಟೆ ವಿವಿ, ಕುವೆಂಪು ವಿ.ವಿ.ದ ಡಾ.ಬಿ ಎಸ್ ಬಿರಾದಾರ್ ಅವರನ್ನು ಬೀದರ್ ವಿವಿ, ಬಾಗಲಕೋಟೆಯ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ಡಾ.ಸುರೇಶ್ ಎಚ್ ಜಂಗಮಶೆಟ್ಟಿ ಅವರನ್ನು ಹಾವೇರಿ ವಿವಿ ಮತ್ತು ಧಾರವಾಡದ ಕರ್ನಾಟಕ ವಿ.ವಿ.ದ ನಿವೃತ್ತ ಪ್ರೊಫೆಸರ್ ಆಗಿರುವ ಡಾ.ಟಿ ಸಿ ತಾರಾನಾಥ್…
ಬೆಳಗಾವಿಯಲ್ಲಿ ಸೋಮವಾರ ಯುವಕ್ರಾಂತಿ ಸಮಾವೇಶದಲ್ಲಿ ಅವರು ಮಾತನಾಡುತ್ತಿದ್ದರು. ಬಿಜೆಪಿ ಸರಕಾರ 40 ಪರ್ಸೆಂಟ್ ಸರಕಾರ. ಈ ಸರಕಾರದಿಂದ ಜನರು ಬೇಸತ್ತಿದ್ದಾರೆ. ಯಾವುದರಲ್ಲಿ ನೋಡಿದರೂ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದರು. ಕರ್ನಾಟಕದ ಸರಕಾರ ಭ್ರಷ್ಟ ಸರಕಾರ, 40 ಪರ್ಸೆಂಟ್ ಸರಕಾರ ಎಂದು ಇಲ್ಲಿನ ಗುತ್ತಿಗೆದಾರರು ಹೇಳಿದ್ದಾರೆ. ಕರ್ನಾಟಕದ ಯಾವುದೇ ಯುವಕರನ್ನು ಕೇಳಿದರೂ ಹೇಳುತ್ತಾರೆ. ಪಿಎಸ್ಐ ಹುದ್ದೆಯಲ್ಲಿ ಭ್ರಷ್ಟಾಚಾರ, ಉಪನ್ಯಾಸಕರ ಹುದ್ದೆಯಲ್ಲಿ ಭ್ರಷ್ಟಾಚಾರ, ಮೈಸೂರು ಸ್ಯಾಂಡಲ್ ನಲ್ಲಿ ಶಾಸಕರ ಮಗನ ಬಳಿಯೆ 8 ಕೋಟಿ ರೂ. ಸಿಕ್ಕಿತು. ಯಾವುದರಲ್ಲಿ ನೋಡಿದರೂ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಜನಸಾಮಾನ್ಯರ ಸರಕಾರವನ್ನು ಕರ್ನಾಟಕದ ಜನರು ಬಯಸಿದ್ದಾರೆ. ಹಾಗಾಗಿ ಈ ಬಾರಿ ಸ್ಪಷ್ಟ ಬಹುಮತದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ವೇಳೆ ಮಾತನಾಡಿ, ವೇದಿಕೆಯ ಮೇಲಿರುವ ನಮ್ಮ ಪಕ್ಷದ ನಾಯಕರ ವಿಶ್ವಾಸ ನೋಡಿ ನನಗೆ ಖುಷಿಯಾಗುತ್ತಿದೆ. ಬೆಳಗಾವಿಯ 18ಕ್ಕೆ 18 ಸ್ಥಾನಗಳನ್ನೂ ಕಾಂಗ್ರೆಸ್ ಗೆಲ್ಲಬೇಕು. ಅದೇನೂ ಕಷ್ಟದ ವಿಚಾರವಲ್ಲ.…
ಬೆಳಗಾವಿ: ಬಿಜೆಪಿಯ ವಾಟ್ಸಪ್ ಯುನಿವರ್ಸಿಟಿ ಹೊಸ ಇತಿಹಾಸ ಬರೆಯಲು ಯತ್ನಿಸುತ್ತಿದೆ. ಮಹನೀಯರ ಜೀವನ ಚರಿತ್ರೆ ಬಗ್ಗೆ ಸುಳ್ಳು ಹೇಳಲು ಹೊರಟಿದೆ. ಕಾಲ್ಪನಿಕ ಕಥೆಗಳ ಮೂಲಕ ತಪ್ಪು ಸಂದೇಶವನ್ನು ರವಾನಿಸಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ. ನಗರದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಅಶ್ವಥ್ ನಾರಾಯಣ್ ಹಾಗೂ ಶೋಭಾ ಕರಂದ್ಲಾಜೆ ಟಿಪ್ಪು ಬಗ್ಗೆ ತಪ್ಪು ಮಾಹಿತಿ ನೀಡಲು ಹೊರಟಿದ್ದಾರೆ. ಟಿಪ್ಪು ಸಾಧನೆ ಬಗ್ಗೆ ಇತಿಹಾಸವೇ ಇದೆ. ಇದರ ಕುರಿತು ಸಾಕಷ್ಟು ಗ್ರಂಥಗಳಿವೆ. ಈಗ ಉರಿಗೌಡ, ನಂಜೇಗೌಡ ಬಗ್ಗೆ ಚಿತ್ರ ಮಾಡುತ್ತಿದ್ದಾರೆ. ಒಕ್ಕಲಿಗರ ಮತ ಸೆಳೆಯಲು ಮತ್ತು ಅವರ ಭಾವನೆಗಳಿಗೆ ಧಕ್ಕೆ ತರಲು ಬಿಜೆಪಿಯವರು ಮುಂದಾಗಿದ್ದಾರೆ. ನಿರ್ಮಲಾನಂದ ಸ್ವಾಮೀಜಿ ಇದರ ಬಗ್ಗೆ ಹೋರಾಟ ಮಾಡಬೇಕು. ಸಾಹಿತಿಗಳು, ಹೋರಾಟಗಾರರು ಹಾಗೂ ಎಲ್ಲಾ ಸಮಾಜಗಳ ಮಠಾಧೀಶರು ಇದಕ್ಕೆ ಕೈಜೋಡಿಸಬೇಕು ಎಂದರು. ಹೆಸರುಗಳನ್ನು ಬದಲಾವಣೆ ಮಾಡಲು ಸಾಧ್ಯವೇ? ಬಿಜೆಪಿಯ ವಾಟ್ಸಪ್ ಯುನಿವರ್ಸಿಟಿ ಹೊಸ ಇತಿಹಾಸ ಬರೆಯಲು ಯತ್ನಿಸುತ್ತಿದೆ. ಇದನ್ನು ಖಂಡಿಸಲು ನಿರ್ಮಲಾನಂದ ಸ್ವಾಮೀಜಿ ಸಭೆ…