Author: admin

ಭಾರತ್ ಜೋಡೋ ಯಾತ್ರೆ ನಡುವೆ ದೆಹಲಿಯ ಕೆಂಪು ಕೋಟೆಯಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಇದು ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರವಲ್ಲ, ಅಂಬಾನಿ ಮತ್ತು ಅದಾನಿ ಸರ್ಕಾರ” ಎಂದು ಆರೋಪಿಸಿದ್ದಾರೆ. ಭಾರತವನ್ನು ಒಗ್ಗೂಡಿಸುವುದು ಯಾತ್ರೆಯ ಗುರಿಯಾಗಿದೆ. ನಾವು ಈ ಯಾತ್ರೆಯನ್ನು ಕನ್ಯಾಕುಮಾರಿಯಿಂದ ಪ್ರಾರಂಭಿಸಿದಾಗ, ದ್ವೇಷವನ್ನು ಅಳಿಸಬೇಕು ಎಂದು ನಾವು ಯೋಚಿಸಿದ್ದೆವು. ನಾನು ಇದನ್ನು ಮನಸ್ಸಿನಲ್ಲಿಟ್ಟುಕೊಂಡು ನಡೆದಿದ್ದೇನೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಈ ದೇಶದಲ್ಲಿ ದ್ವೇಷ ಎಲ್ಲೆಲ್ಲೂ ಇದೆ. ಆದರೆ ನಾನು ನಡೆಯಲು ಆರಂಭಿಸಿದಾಗ ಸತ್ಯ ದರ್ಶನವಾಯಿತು. 24×7 ಹಿಂದೂ, ಮುಸ್ಲಿಂ ದ್ವೇಷ ಹರಡಲಾಗುತ್ತಿದೆ ಎಂದು ರಾಹುಲ್ ಆತಂಕ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಫೆಬ್ರವರಿಯಲ್ಲಿ ರಾಜ್ಯ ಬಜೆಟ್ ಮಂಡನೆ ಮಾಡುತ್ತೇನೆ. ಬಜೆಟ್ ನಲ್ಲಿ ಬಡವರು, ರೈತರು, ಕಾರ್ಮಿಕರ ಪರ ಯೋಜನೆಗಳಿಗೆ ಆದ್ಯತೆ ನೀಡುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಹಾವೇರಿ ಜಿಲ್ಲೆ ಸವಣೂರು ತಾಲ್ಲೂಕು ಕಾರಡಗಿ ಗ್ರಾಮದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಕಾರಡಗಿ ಗ್ರಾಮದ ಅಭಿವೃದ್ದಿಗೆ ಅನೇಕ ಯೋಜನೆ ರೂಪಿಸಿದ್ದೇವೆ. ಒಂದುವರೆ ಕೋಟಿ ವೆಚ್ಚದಲ್ಲಿ ಯಾತ್ರಿ ನಿವಾಸ ಪ್ರಾರಂಭಿಸಿದ್ದೇನೆ. ಒಂದು ಕೋಟಿ ವೆಚ್ಚದಲ್ಲಿ ಸಭಾಭವನ ನಿರ್ಮಾಣ ಮಾಡುತ್ತೇವೆ. ಕಾರಡಗಿಯಲ್ಲಿ 8 ಕೋಟಿ  30 ಬೆಡ್ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತದೆ ಎಂದರು. ಸ್ವಯಂ ಉದ್ಯೋಗಕ್ಕೆ ಆದ್ಯತೆ ನೀಡುತ್ತೇವೆ. ನಮ್ಮ ಸರ್ಕಾರದಲ್ಲಿ 8 ಸಾವಿರ ಶಾಲಾ ಕೊಠಡಿ ತೆರೆದಿದ್ದೇವೆ. 4 ಸಾವಿರ ಹೊಸ ಅಂಗನವಾಡಿ ನಿರ್ಮಿಸಲಾಗುತ್ತಿದೆ. 12 ಲಕ್ಷ ಮಕ್ಕಳಿಗೆ ವಿದ್ಯಾಸಿರಿ ಯೋಜನೆ ದೊರೆತಿದೆ. ರೈತರ ಮಕ್ಕಳಿಗೆ ವಿದ್ಯಾಸಿರಿ ಕೊಡ್ತಿದ್ದೇವೆ. ಕೂಲಿಕಾರರ ಮಕ್ಕಳಿಗೂ ವಿದ್ಯಸಿರಿ ಯೋಜನೆ ತಲುಪಲಿದೆ. ಆರೋಗ್ಯ, ಶಿಕ್ಷಣ, ಪೌಷ್ಟಿಕ ಆಹಾರಕ್ಕೆ ಒತ್ತು ನೀಡಲಾಗುತ್ತಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…

Read More

ಬೆಂಗಳೂರು : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮೀಸಲಾತಿ ಹೆಚ್ಚಳ ಮಾಡಿದ ಹಿನ್ನೆಲೆಯಲ್ಲಿ 36 ಇಲಾಖೆಗಳಲ್ಲಿ ರೋಸ್ಟರ್ ಬಿಂದು ಪರಿಷ್ಕರಣೆ ವಿಳಂಬವಾಗಿದ್ದು, ಸುಮಾರು 25 ಸಾವಿರ ಹೊಸ ನೇಮಕಾತಿ ಪ್ರಕ್ರಿಯೆಗೆ ತಡೆ ಬಿದ್ದಿದೆ. 11,133 ಪೌರ ಕಾರ್ಮಿಕರ ಕಾಯಂಗೊಳಿಸುವುದು ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳ ಸುಮಾರು 25 ಸಾವಿರ ಹೊಸ ನೇಮಕಾತಿಗೆ ತಡೆ ಬಿದ್ದಿದೆ.ರಾಜ್ಯ ಸರ್ಕಾರವು ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳಿಗೆ ನವೆಂಬರ್ 1 ರಿಂದ ಜಾರಿಯಾಗುವಂತೆ ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ಸೇವೆಗಳಲ್ಲಿ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ ಹೆಚ್ಚಿಸಿ ಆದೇಶ ಹೊರಡಿಸಿತ್ತು. ಈ ಪ್ರಕಾರ ರೋಸ್ಟರ್ ಬಿಂದುಗಳನ್ನು ಗುರುತಿಸುವ ಪ್ರಕ್ರಿಯೆ ಅಂತಿಮಗೊಂಡು ಅಧಿಕೃತವಾಗಿ ಪ್ರಕಟವಾಗುವವರೆಗೆ ಎಲ್ಲ ನೇಮಕಾತಿ ಪ್ರಕ್ರಿಯೆಗಳನ್ನು ತಡೆಹಿಡಿಯಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Read More

ಬೆಳಗಾವಿ: ಅಂಗಡಿಯಲ್ಲಿ ಶಾರ್ಟ್​ ಸರ್ಕ್ಯೂಟ್ ಆಗಿ ಹತ್ತಿಕೊಂಡ ಬೆಂಕಿ ಅಕ್ಕಪಕ್ಕದಲ್ಲಿದ್ದ ಅಂಗಡಿಗಳಿಗೂ ಆವರಿಸಿದ ಪರಿಣಾಮ 10ಕ್ಕೂ ಹೆಚ್ಚು ಅಂಗಡಿಗಳು ಹೊತ್ತಿ ಉರಿದ ಘಟನೆ ನಗರದ ಪೋರ್ಟ್​ ರಸ್ತೆಯಲ್ಲಿ ನಡೆದಿದೆ. 2 ಟೈರ್​ ಅಂಗಡಿಗಳು, ಬ್ಯಾಟರಿ ಅಂಗಡಿ, ಟ್ರಾನ್ಸ್​ಪೋರ್ಟ್ ಶಾಪ್​, ಟೂಲ್ಸ್ ಅಂಗಡಿ ಸೇರಿ 10ಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಹೋಗಿವೆ.ಸ್ಥಳಕ್ಕೆ 12 ಅಗ್ನಿಶಾಮಕ ವಾಹನಗಳೊಂದಿಗೆ ಸ್ಥಳಕ್ಕೆ ದೌಡಾಯಿಸಿದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ. ಸ್ಥಳಕ್ಕೆ ಶಾಸಕ ಅನಿಲ್ ಬೆನಕೆ ಭೇಟಿ ನೀಡಿ ಘಟನೆ ಬಗ್ಗೆ ಮಾಹಿತಿ ಸಂಗ್ರಹಿಸಿದ್ದು, ಇಬ್ಬರು ಡಿಸಿಪಿ ಸೇರಿದಂತೆ 100ಕ್ಕೂ ಹೆಚ್ಚು ಪೊಲೀಸರಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಕೊರಟಗೆರೆ : ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ 1993ರಲ್ಲಿ ನನಗೆ ವೈದ್ಯಕೀಯ ಸೀಟ್ ನೀಡಿ ಶಿಕ್ಷಣಕ್ಕೆ ಸಹಾಯಹಸ್ತ ನೀಡಿದ್ರು. 2013 ರಲ್ಲಿ ನಾನು ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕನಾಗಲು ಪ್ರಮುಖ ಕಾರಣವೇ ಡಾ.ಜಿ.ಪರಮೇಶ್ವರ. ಕರ್ನಾಟಕದ ಮುತ್ಸದ್ದಿ ನಾಯಕರ ರಾಜಕೀಯ ಜೀವನವೇ ನನ್ನ ಕೆಲಸಕ್ಕೆ ಪ್ರಮುಖ ಆದರ್ಶ.2023ಕ್ಕೆ ಕೊರಟಗೆರೆ ಕ್ಷೇತ್ರದ ಆರೋಗ್ಯ ವಿಭಾಗಕ್ಕೆ ವಿಶೇಷ ಅನುದಾನ ನೀಡುತ್ತೇನೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಭರವಸೆ ನೀಡಿದರು. ಕೊರಟಗೆರೆ ತಾಲೂಕಿನ ದೊಡ್ಡಸಾಗ್ಗೆರೆ, ತೋವಿನಕೆರೆ, ಬುಕ್ಕಾಪಟ್ಟಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಏರ್ಪಡಿಸಲಾಗಿದ್ದ 5 ಕೋಟಿ ವೆಚ್ಚದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ನೂತನ ಕಟ್ಟಡದ ಉದ್ಘಾಟನೆ ಹಾಗೂ 12 ಕೋಟಿ 50ಲಕ್ಷ ವೆಚ್ಚದ ತೋವಿನಕೆರೆ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡದ ಶಂಕುಸ್ಥಾಪನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಕೊರಟಗೆರೆ ಕ್ಷೇತ್ರದಲ್ಲಿ ಡಾ.ಜಿ.ಪರಮೇಶ್ವರ್ ಋಣ ತಿರಿಸುವ ಅವಕಾಶ ಸಿಕ್ಕಿದ್ದು ನನ್ನ ಪುಣ್ಯ. ಎಲ್ಲರನ್ನ ಪ್ರೀತಿಸುವ ಜನನಾಯಕ ಅಂದ್ರೇ ಪರಮೇಶ್ವರ್ ಸಾಹೇಬ್ರು. 2013ರ ಡಾ.ಜಿ.ಪರಮೇಶ್ವರ ಸೋಲು ದುರಾದುಷ್ಟಕರ. ಅದಕ್ಕಾಗಿ ಅವರಿಗೆ…

Read More

ಮೈಸೂರು: ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ತಿ.ನರಸೀಪುರ ವಿಧಾನ ಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಸಾಮಾಜಿಕ ಹೋರಾಟಗಾರ ಸೋಸಲೆ ಸಿದ್ದರಾಜು ಅವರು ಸಿದ್ಧರಾಗಿದ್ದು, ಶೀಘ್ರದಲ್ಲೇ ತಮ್ಮ ಸ್ಪರ್ಧೆಯ ಬಗ್ಗೆ ಬಹಿರಂಗವಾಗಿ ಘೋಷಿಸಲಿದ್ದಾರೆ ಎಂದು ತಿಳಿದು ಬಂದಿದೆ. ಸುಮಾರು 20 ವರ್ಷಗಳ ಕಾಲ ಬಹುಜನ ಚಳುವಳಿಯಲ್ಲಿ ಸೇವೆ ಸಲ್ಲಿಸಿರುವ ಸೋಸಲೆ ಸಿದ್ದರಾಜು ಅವರು ಸಾರ್ವಜನಿಕ ಜೀವನದಲ್ಲಿ ಚಿರಪರಿಚಿತರಾಗಿದ್ದಾರೆ. ಬಹುಜನ ವಿದ್ಯಾರ್ಥಿ ಸಂಘದ ಮೂಲಕ ವಿದ್ಯಾರ್ಥಿ ಮುಖಂಡರಾಗಿ ಹಲವಾರು ಹೋರಾಟಗಳಲ್ಲಿ ಪಾಲ್ಗೊಂಡಿದ್ದರು. ಸೋಸಲೆ ಸಿದ್ದರಾಜು ಅವರು ಯಾವ ಪಕ್ಷದಿಂದ ಸ್ಪರ್ಧಿಸಲಿದ್ದಾರೆ ಎಂಬ ಬಗ್ಗೆ ಸ್ಪಷ್ಟವಾದ ಮಾಹಿತಿ ಲಭ್ಯವಾಗಿಲ್ಲ. ಆದರೆ, ಪಕ್ಷೇತರರಾಗಿ ಅವರು ಕಣಕ್ಕಿಳಿಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.ಮಾಜಿ ಸಚಿವ, ಕೊಳ್ಳೇಗಾಲ ಶಾಸಕರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಸೋಸಲೆ ಸಿದ್ದರಾಜು ಅವರು, 2023ರ ವಿಧಾನ ಸಭಾ ಚುನಾವಣೆಯಲ್ಲಿ ರಾಜಕೀಯ ಅಖಾಡಕ್ಕೆ ಧುಮುಕುವ ಮುನ್ಸೂಚನೆ ನೀಡಿದ್ದಾರೆ. ಇನ್ನೂ ಚುನಾವಣೆಗೆ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪತ್ರಿಕೆಯೊಂದಕ್ಕೆ ಹೇಳಿಕೆ ನೀಡಿರುವ ಅವರು, ಮುಂಬರುವ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಬೇಕು ಎಂದು ತೀರ್ಮಾನಿಸಿದ್ದೇನೆ,…

Read More

ಬಾಗಲಕೋಟೆ: ಜವಾಬ್ದಾರಿ ಸ್ಥಾನದಲ್ಲಿರುವವರು ಯಾರದೋ ಮಾತು ಕೇಳಿ ಬಾಯಿ ಚಪಲಕ್ಕೆ ಮಾತನಾಡಬಾರದು ಎಂದು ಮೀಸಲಾತಿ ಕೈತಪ್ಪಲು ಸಚಿವ ಮುರುಗೇಶ್ ನಿರಾಣಿ ಕಾರಣ ಎಂಬ ಆರೋಪಗಳ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಜಿಲ್ಲೆಯ ನಮ್ಮ ಸಮಾಜದ ಒಬ್ಬ ಸಚಿವರಿಂದ ಪಂಚಮಸಾಲಿ 2ಎ ಮೀಸಲಾತಿ ಘೋಷಣೆ ತಪ್ಪಿತು ಎಂಬ ಹೇಳಿಕೆ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ನಾನು ಪಂಚಮಸಾಲಿ ಮೀಸಲಾತಿ ತಪ್ಪಿಸಿದ್ದೇನೆ. ಮೀಸಲಾತಿ ತಪ್ಪಿಸಲೆಂದು ಇಂಥವರ ಜೊತೆಗೆ ಮಾತನಾಡಿದ್ದೇನೆ. ಇಂಥ ಜಾಗದಲ್ಲಿ ಭಾಷಣ ಮಾಡಿದ್ದೇನೆ ಎಂದು ಸ್ವಾಮೀಜಿ ಸಾಬೀತು ಮಾಡಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು, ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಒಂದು ವೇಳೆ ಸಾಕ್ಷಿ ನೀಡಲು, ಸಾಬೀತುಪಡಿಸಲು ಅವರು ವಿಫಲರಾದರೆ ಸನ್ಯಾಸತ್ವ ತ್ಯಜಿಸಿ ರಾಜಕೀಯಕ್ಕೆ ಬರಬೇಕು ಎಂದು ಬಸವಜಯಮೃತ್ಯುಂಜಯ ಸ್ವಾಮೀಜಿಗೆ ಸವಾಲು ಹಾಕಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಂಗಳೂರು: ಹಿಂದುಳಿದ ಜಾತಿಗಳಿಗೆ ಅನ್ಯಾಯವಾದರೆ ಸಹಿಸೊಲ್ಲ,‌ ಅಧಿಕಾರಕ್ಕಾಗಿ ಅಂಟಿಕೊಂಡು ಕೂರುವುದಿಲ್ಲ. ಸಾಮಾಜಿಕ ನ್ಯಾಯದ ಪರವಾಗಿ ಹೋರಾಟ ನಡೆಸುತ್ತೇನೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಹಿಂದುಳಿದ ಸಮುದಾಯದಲ್ಲಿ 102 ಜಾತಿಗಳಿವೆ, ಒಟ್ಟು ಜನಸಂಖ್ಯಾ ಪ್ರಮಾಣ ಶೇಕಡಾ 52ರಷ್ಟಿದ್ದರೂ ಕೇವಲ ಶೇಕಡಾ 27ರಷ್ಟು ಮೀಸಲಾತಿ ನಿಗದಿಪಡಿಸಲಾಗಿದೆ. ಶೇಕಡಾ 4ರಷ್ಟಿರುವವರಿಗೆ ಶೇಕಡಾ 10ರಷ್ಟು ಮೀಸಲಾತಿ ನೀಡಲಾಗಿದೆ, ಇದು ತಪ್ಪು ಎಂದು ಅವರು ಹೇಳಿದ್ದಾರೆ. ಬೇರೆ ರಾಜ್ಯಗಳಲ್ಲಿ ಶೇಕಡಾ 50ರ ಮಿತಿಯನ್ನು ಮೀರಿ ಮೀಸಲಾತಿ ನೀಡಿದರೆ ರದ್ದು ಪಡಿಸಲಾಗುತ್ತದೆ. ಆದರೆ ರಾಜ್ಯದ ಬಿಜೆಪಿ ಸರ್ಕಾರ ಎಲ್ಲ ನಿಯಮಾವಳಿಗಳನ್ನು ಮೀರಿ ಮೀಸಲಾತಿ ಹೆಚ್ಚಿಸುವ ಘೋಷಣೆ ಮಾಡುತ್ತಿದ್ದರೂ ಕ್ರಮ ಕೈಗೊಳ್ಳಲಾಗುತ್ತಿಲ್ಲ ಎಂದು ಆರೋಪಿಸಿದ್ದಾರೆ. ಹಿಂದುಳಿದ ಜಾತಿಗಳಿಗೆ 2ಎನಲ್ಲಿ ಮೀಸಲಾತಿ ನೀಡಲಾಗಿದ್ದರೂ ಇತ್ತೀಚೆಗೆ ಬೇರೆ ಜಾತಿಗಳು ಈ ಗುಂಪಿಗೆ ಸೇರಿಕೊಳ್ಳಲು ಪ್ರಯತ್ನ‌ ಮಾಡುತ್ತಿವೆ. ಹಿಂದೆ ಲಿಂಗಾಯತ ಸಾದರರು ಹಿಂದೂ ಸಾದರ ಹೆಸರಲ್ಲಿ ಜಾತಿ ಪ್ರಮಾಣ ಪತ್ರ ಪಡೆದು ಮೀಸಲಾತಿ ಸೌಲಭ್ಯ ಪಡೆಯಲು ಪ್ರಯತ್ನಿಸಿದ್ದರು. ಮೀಸಲಾತಿ ದುರುಪಯೋಗ ತಡೆಯಬೇಕು…

Read More

ಸುರತ್ಕಲ್: ಇತ್ತೀಚೆಗಷ್ಟೇ ಸುರತ್ಕಲ್ ನಲ್ಲಿ ಫಾಝಿಲ್ ಹತ್ಯೆ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಇದೀಗ ಇದೇ ಸುರತ್ಕಲ್ ನಲ್ಲಿ ವ್ಯಕ್ತಿಯೊಬ್ಬರನ್ನು ಇರಿದು ಬರ್ಬರವಾಗಿ ಹತ್ಯೆ ನಡೆಸಲಾಗಿದೆ. ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾಪುರ 4ನೆ ಬ್ಲಾಕ್ ನೈತಂಗಡಿ ಬಳಿ ಈ ಘಟನೆ ನಡೆದಿದ್ದು, ಇಬ್ಬರು ದುಷ್ಕರ್ಮಿಗಳ ತಂಡವೊಂದು ಜಲೀಲ್ ಎಂಬ ವ್ಯಕ್ತಿಗೆ ಇರಿದು ಪರಾರಿಯಾಗಿದೆ. ಜಲೀಲ್ ಅವರು, ಅಂಗಡಿಯಲ್ಲಿದ್ದ ವೇಳೆ ಅವರ ಎದೆಯ ಭಾಗಕ್ಕೆ ಚೂರಿ ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

Read More

ಹಾಸನ: ಅಂಗನವಾಡಿ ಆವರಣದಲ್ಲಿ ಹಾವು ಕಚ್ಚಿದ ಪರಿಣಾಮ ಬಾಲಕನೊಬ್ಬ ದಾರುಣವಾಗಿ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡಕಲ್ಲೂರು ಗ್ರಾಮದಲ್ಲಿ ನಡೆದಿದೆ. ಯಶವಂತ್ ಹಾಗೂ ಗೌರಿ ದಂಪತಿಯ ಪುತ್ರ 4 ವರ್ಷ ವಯಸ್ಸಿನ ರೋಶನ್ ಹಾವು ಕಡಿತದಿಂದ ಸಾವನ್ನಪ್ಪಿದ ಬಾಲಕನಾಗಿದ್ದು, ಹಾವು ಕಚ್ಚಿದ ವೇಳೆ ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿದ್ದು, ಆದರೆ, ಸರಿಯಾದ ಸಮಯಕ್ಕೆ ಚಿಕಿತ್ಸೆ ಲಭಿಸದ ಹಿನ್ನೆಲೆಯಲ್ಲಿ ಬಾಲಕ ಸಾವನ್ನಪ್ಪಿದ್ದಾನೆ. ಮಕ್ಕಳನ್ನು ಕರೆತರಲು ಅಂಗನವಾಡಿ ಕಾರ್ಯಕರ್ತೆ ಹೊರಗೆ ಹೋದ ವೇಳೆ ಅಂಗನವಾಡಿಯ ಆವರಣದಲ್ಲಿದ್ದ ಹಾವು ಬಾಲಕನಿಗೆ ಕಚ್ಚಿದೆ. ತಕ್ಷಣವೇ ಬೈಕ್ ನಲ್ಲಿ ಬಾಲಕನನ್ನು ಹೆತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೈಕ್ ಮೂಲಕ ಸಾಗಿಸಲಾಗಿದೆ. ಬಳಿಕ ವೈದ್ಯರ ಸಲಹೆಯಂತೆ ಸಕಲೇಶಪುರ ಆಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಬೈಕ್ ಅರ್ಧ ದಾರಿ ತಲುಪುವ ವೇಳೆ ಆ್ಯಂಬುಲೆನ್ಸ್ ಬಂದಿದೆ. ಆದರೆ, ಬಾಲಕ ಅಷ್ಟರಲ್ಲಾಗಲೇ ಮೃತಪಟ್ಟಿದ್ದ ಎಂದು ತಿಳಿದು ಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…

Read More