Author: admin

ಬೆಳಗಾವಿ: ಪದವಿ ಓದಿದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 3 ಸಾವಿರ ರೂ. ಭತ್ಯೆ ನೀಡುವುದಾಗಿ ಕಾಂಗ್ರೆಸ್‌ ಘೋಷಿಸಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಯುವಕ್ರಾಂತಿ ಸಮಾವೇಶದಲ್ಲಿ ರಾಹುಲ್‌ ಗಾಂಧಿ ಕಾಂಗ್ರೆಸ್‌ನ 4ನೇ ಗ್ಯಾರಂಟಿಯನ್ನು ಘೋಷಿಸಿದರು. ಮುಂದೆ ಕರ್ನಾಟಕದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಪ್ರತಿ ತಿಂಗಳು ಪದವಿ ಓದಿದವರಿಗೆ ನಿರುದ್ಯೋಗ ಭತ್ಯೆಯಾಗಿ 3 ಸಾವಿರ ರೂ., ಡಿಪ್ಲೋಮಾ ಓದಿದವರಿಗೆ 1,500 ರೂ. ನೀಡಲಾಗುವುದು ಎಂದು ಕಾಂಗ್ರೆಸ್‌ ʼಯುವ ನಿಧಿʼ ಯೋಜನೆಯನ್ನು ಘೋಷಣೆ ಮಾಡಿದೆ. ಈಗಾಗಲೇ ಕಾಂಗ್ರೆಸ್‌ ಮೂರು ಗ್ಯಾರಂಟಿಯನ್ನು ಘೋಷಣೆ ಮಾಡಿದೆ. ಪ್ರತಿ ತಿಂಗಳು ಕುಟುಂಬಕ್ಕೆ 10 ಕೆಜಿ ಅಕ್ಕಿ ಉಚಿತ, 200 ಯೂನಿಟ್‌ ವಿದ್ಯುತ್‌ ಉಚಿತ, ಕುಟುಂಬದ ಓರ್ವ ಮಹಿಳೆಗೆ 2 ಸಾವಿರ ರೂ. ನೀಡಲಾಗುವುದು ಎಂದು ಕಾಂಗ್ರೆಸ್‌ ಈಗಾಗಲೇ ಘೋಷಣೆ ಮಾಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ:…

Read More

ತುರುವೇಕೆರೆ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜೆ ಡಿ ಎಸ್ ಪಕ್ಷದ ತಾಲೂಕು ಯುವ ಘಟಕದ ಅಧ್ಯಕ್ಷರಾದ ಬಾಣಸಂದ್ರ ರಮೇಶ್ ವೀರಶೈವ ಸಮಾಜದ ಮುಖಂಡರಾದ ವಿಶ್ವನಾಥ್ ರವರ ನೇತೃತ್ವದಲ್ಲಿ ಹುಲ್ಲೇ ಕೆರೆ ಗ್ರಾಮದ ವೀರಶೈವ ಯುವಕರುಗಳಾದ ಹೇಮಂತ್, ಯುವರಾಜ್, ಯಶ್ವಂತ್, ಪ್ರಜ್ವಲ್, ಮಹೇಶ್, ಜ್ಞಾನೇಶ ,ಚರಣ್ ಮತ್ತು ಕೆಲ ಯುವಕರು ಬಿಜೆಪಿ ಪಕ್ಷದ ತತ್ವ ಸಿದ್ಧಾಂತದಿಂದ ಹಾಲಿ ಶಾಸಕರ ಆಡಳಿತ ವೈಕರಿಯಿಂದ ಬೇಸತ್ತು ಮಾಜಿ ಶಾಸಕರಾದ ಎಂ.ಟಿ. ಕೃಷ್ಣಪ್ಪನವರ ಆಡಳಿತ ವೈಕರಿನ ಮೆಚ್ಚಿ ಇಂದು ಪಕ್ಷ ಸೇರ್ಪಡೆಯಾದರು. ಈ ಸಂದರ್ಭದಲ್ಲಿ ವೆಂಕಟಾಪುರ ಯೋಗೀಶ್, ಹರೀಶ್ ,ಕಣತೂರು ಪ್ರಸನ್ನ ,ಆನಂದ ಮರಿಯ, ಶಶಿ, ತೊರೆಮಾವಿನಹಳ್ಳಿ ರಾಮಕೃಷ್ಣ ,ತಂಡಗ ಗ್ರಾಮ ಪಂಚಾಯತಿ ಸದಸ್ಯರಾದ ಚನ್ನಬಸವೇಗೌಡ ಇದ್ದರು. ವರದಿ: ಸುರೇಶ್ ಬಾಬು ಎಂ. ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ:…

Read More

ಮುಂಬೈ: ಹುಲಿ ಮತ್ತು ಚಿರತೆಗಳ ದಾಳಿಗೆ 2022ರಲ್ಲಿ ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ 53 ಜನರು ಮೃತಪಟ್ಟಿದ್ದಾರೆ ಎಂದು ರಾಜ್ಯ ಅರಣ್ಯ ಸಚಿವ ಸುಧೀರ್ ಮುಂಗಂತಿವಾರ್ ತಿಳಿಸಿದ್ದಾರೆ. ಶಾಸಕ ಬಂಟಿ ಭಂಗಾಡಿಯಾ ಕೇಳಿದ ಪ್ರಶ್ನೆಗೆ ವಿಧಾನಸಭೆಯಲ್ಲಿ ಉತ್ತರಿಸಿದ ಅವರು, ಚಂದಾಪುರ ಜಿಲ್ಲೆಯೊಂದರಲ್ಲೇ ಹುಲಿಗಳ ದಾಳಿಗೆ 44 ಮಂದಿ ಹಾಗೂ ಚಿರತೆ ದಾಳಿಗೆ ಒಂಬತ್ತು ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. 2022ರಲ್ಲಿ ಚಿರತೆ, ಜಿಂಕೆ, ಕರಡಿ, ಮತ್ತು ನವಿಲುಗಳ ಸೇರಿದಂತೆ ಒಟ್ಟು 53 ವನ್ಯಜೀವಿಗಳು ಮೃತಪಟ್ಟಿವೆ. ಇವುಗಳಲ್ಲಿ 9 ಹುಲಿಗಳು ಮತ್ತು 3 ಚಿರತೆಗಳು ನೈಸರ್ಗಿಕ ಕಾರಣಗಳಿಂದ ಮೃತಪಟ್ಟಿವೆ. ಅದೇ ವರ್ಷದಲ್ಲಿ ಕನಿಷ್ಠ ಐದು ಚಿಟಾಲ್ಗಳು ಮತ್ತು ಮೂರು ಕಾಡುಹಂದಿಗಳನ್ನು ಕಳ್ಳ ಬೇಟೆಗಾರರು ಕೊಂದಿದ್ದಾರೆ ಎಂದು ಸಚಿವರು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ವಿಜಯಪುರ : ‘ಒಂದನೇ ತರಗತಿಯಿಂದ ಎಂಟನೇ ತರಗತಿಯವರೆಗೆ ಪರಿಶಿಷ್ಟ ಜಾತಿ ಮತ್ತು ಪಂಗಡ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನವನ್ನು ಕೇಂದ್ರ ಸರ್ಕಾರ ರದ್ದುಪಡಿಸಿರುವುದು ದಲಿತ ವಿರೋಧಿ ಕ್ರಮ’ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ. ಕಳೆದ ವರ್ಷ ಸುಮಾರು 60 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ರದ್ದು ಮಾಡಲಾಗಿದೆ. ಸುಮಾರು 2000 ಸಂಶೋಧನಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿಲ್ಲ. ಜೊತೆಗೆ ವಿದೇಶಗಳಿಗೆ ಹೋಗುವ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿ ವೇತನ ನಿಲ್ಲಿಸಲಾಗಿದೆ. ಇದೆಲ್ಲವನ್ನು ಗಮನಿಸಿದರೆ ಹಿಂದುಳಿದ, ಧಾರ್ಮಿಕ ಅಲ್ಪಸಂಖ್ಯಾತ ಹಾಗೂ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಬೇಕೆನ್ನುವುದುಕೇಂದ್ರದ ಉದ್ದೇಶವಾಗಿದೆ. ಬಡವರ ಮಕ್ಕಳು ಶಿಕ್ಷಣ ಪಡೆಯದೇ ಗುಲಾಮರಾಗಬೇಕೆನ್ನುವುದು ಬಿಜೆಪಿಯ ಉದ್ದೇಶ’ ಎಂದು ದಲಿತ ಸಂಘರ್ಷ ಸಮಿತಿ(ರಿ) ಪ್ರೊ. ಬಿ. ಕೃಷ್ಣಪ್ಪನವರು ಸ್ಥಾಪಿಸಿದ. ವಿಜಯಪುರ ಜಿಲ್ಲಾ ಸಂಚಾಲಕರು ಕಂಠೀರವ ಹೊಸಮನಿ ಪತ್ರಿಕಾ ಪ್ರಕಟಣೆಯಲ್ಲಿ ಟೀಕಿಸಿದ್ದಾರೆ. ಇನ್ನು ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಉಪ…

Read More

ರಾಜ್ಯ ವಿಧಾನಸಭೆ ಸಮೀಪಿಸುತ್ತಿದ್ದು, ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೇರುವ ಕನಸು ಕಟ್ಟಿಕೊಂಡಿರುವ ಬಿಜೆಪಿ ಮತದಾರರನ್ನ ಸೆಳೆಯಲು ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. ಈ ನಡುವೆ ಇದೀಗ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಮೋದಿ ಮುಖ ನೋಡಿ ಮತ ಹಾಕಿ ಇಲ್ಲದಿದ್ದರೆ ಭಿಕ್ಷೆ ಬೇಡಬೇಕಾಗುತ್ತದೆ ಎಂದು ಹೇಳಿಕೆ ನೀಡಿದ್ದಾರೆ. ವಿಜಯಪುರದಲ್ಲಿ ನಡೆದ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಚುನಾವಣೆ ದಿನ ಮೋದಿ ಮುಖ ನೋಡುವುದು, ಮತದಾನ ಮಾಡುವುದು ಅಷ್ಟೆ. ಮೋದಿಗೆ ಮತ ಹಾಕಿದರೆ ಸುರಕ್ಷಿತವಾಗಿ ಇರುತ್ತೀರಿ. ಇಲ್ಲದಿದ್ದರೆ ಪಾಕಿಸ್ತಾನ ದೇಶದಂತೆ ಎಲ್ಲರೂ ದಿವಾಳಿಯಾಗಬೇಕಾಗುತ್ತದೆ, ಭಿಕ್ಷೆ ಬೇಡಬೇಕಾಗುತ್ತೆ ಎಂದಿದ್ದಾರೆ. ಅಲ್ಲದೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಪಡೆದಿರುವುದು ನಮ್ಮ ಸುದೈವ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಜನರಿಗೆ ಕಾಂಗ್ರೆಸ್ ನೀಡುತ್ತಿರುವುದು ಗ್ಯಾರಂಟಿ ಕಾರ್ಡ್ ಅಲ್ಲ, ಅದು ಬೋಗಸ್ ಕಾರ್ಡ್ ಎಂದು ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದರು. ಮಡಿಕೇರಿಯಲ್ಲಿ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಶಾಲೆಗೆ ತೆರಳುವ ಹೆಣ್ಣುಮಕ್ಕಳಿಗಾಗಿ ಉಚಿತ ಬಸ್ ಪಾಸ್ ಒದಗಿಸಲಾಗುತ್ತಿದೆ. 8 ಲಕ್ಷ ವಿದ್ಯಾರ್ಥಿನಿಯರಿಗೆ ಇದರಿಂದ‌ ಲಾಭವಾಗಿದೆ. ಸಾಮಾಜಿಕ‌ ನ್ಯಾಯ ಹೆಚ್ಚಿಸಲು ಕ್ರಮ‌ಕೈಗೊಳ್ಳಲಾಗಿದೆ. ಹಾಗಾಗಿ ಜೇನು ಗೂಡಿಗೆ ಕೈ ಹಾಕುವ ಕೆಲಸ‌ಮಾಡಿದ್ದೇನೆ. ಬರೇ ಭಾಷಣದಲ್ಲಿ ಸಾಮಾಜಿಕ‌ನ್ಯಾಯ ಸಾಧ್ಯವಿಲ್ಲ. ಕೆಲವರನ್ನ ಕೆಲವು ಸಮಯ ಮೋಸ ಮಾಡಬಹುದು.‌ ಆದರೆ ಜನರನ್ನ ಎಲ್ಲಾ‌ ಸಮಯದಲ್ಲಿ ಮೋಸ ಮಾಡಲು ಸಾಧ್ಯವಿಲ್ಲ. ಕಾಂಗ್ರೆಸ್​ಗೆ ಅಧಿಕಾರವಿದ್ದಾಗ ಯಾಕೆ ಸೌಲಭ್ಯ ನೀಡಲಿಲ್ಲ. ಅದು ಗ್ಯಾರಂಟಿ ಕಾರ್ಡ್ ಅಲ್ಲ, ಅದು ಬೋಗಸ್ ಕಾರ್ಡ್ ಎಂದು ಲೇವಡಿ ಮಾಡಿದರು. ಯಡಿಯೂರಪ್ಪ ಅವರು ನಿಜವಾದ ಸಾಮಾಜಿಕ ನ್ಯಾಯ ಕೊಟ್ಟವರಾಗಿದ್ದಾರೆ. ಭಾಗ್ಯ ಲಕ್ಷ್ಮೀ ಯೋಜನೆ, ಕಾಗಿನೆಲೆ ಅಭಿವೃದ್ಧಿ, ತಾಂಡಾ ಅಭಿವೃದ್ಧಿ ನಿಗಮ ಮಾಡಿದ್ದು ಯಡಿಯೂರಪ್ಪನವರು ಎಂದು ಸಿಎಂ ಬೊಮ್ಮಾಯಿ ಯಡಿಯೂರಪ್ಪ ಅವರ ಸಾಧನೆಗಳನ್ನು ಗುಣಗಾನ ಮಾಡಿದರು. ನಮ್ಮತುಮಕೂರು.ಕಾಂನ ಕ್ಷಣ…

Read More

ಕೋಲಾರದಿಂದ ಸಿದ‍್ಧರಾಮಯ್ಯ ಸ್ಪರ್ಧಿಸದಿದ್ದರೇ ನಾನು ರಾಜಕೀಯ ನಿವೃತ್ತಿ ಪಡೆಯುವೆ ಎಂದು ಕೋಲಾರ ಶಾಸಕ ಶ್ರೀನಿವಾಸ್ ಗೌಡ ಹೇಳಿಕೆ ನೀಡಿದ್ದಾರೆ. ಕೋಲಾರದಿಂದ ಸ್ಪರ್ಧಿಸದಂತೆ ಸಿದ್ದರಾಮಯ್ಯಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ ಎಂಬ ವಿಚಾರ ಕುರಿತು ಮಾತನಾಡಿದ ಶಾಸಕ ಶ್ರೀನಿವಾಸ್ ಗೌಡ, ಸಿದ್ಧರಾಮಯ್ಯ ಕೋಲಾರದಿಂದ ಸ್ಪರ್ಧಿಸಿದರೇ ಕೆಲಸ ಮಾಡುವೆ ಎಂದು ತಿಳಿಸಿದ್ದಾರೆ. ಕೋಲಾರದಿಂದ 2ನೇ ಮುಖ್ಯಮಂತ್ರಿಯನ್ನು ರಾಜ್ಯಕ್ಕೆ ಕೊಡಬೇಕು ಎಂಬ ಆಸೆ ಇತ್ತು. ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ನನ್ನನ್ನು ಕರೆದು ಮಾತಾಡಿದ ಬಳಿಕ ಕ್ಷೇತ್ರ ಬಿಟ್ಟು ಕೊಟ್ಟಿದ್ದೇನೆ. ಈಗ ನನ್ನನ್ನು ಕೇಳದೆ ನಿರ್ಧಾರ ಕೈಗೊಂಡರೆ ಮಾತನಾಡುವುದಿಲ್ಲ ಎಂದು ಅವರು ಹೇಳಿದ್ದಾರೆ. ಈಗ ನನ್ನನು ಏನೂ ಕೇಳದೆ ಈ ನಿರ್ಧಾರ ತೆಗೆದುಕೊಂಡರೆ ನಾನು ಆ ಬಗ್ಗೆ ಮಾತನಾಡುವುದಿಲ್ಲ ಎಂದರು. ಜೆಡಿಎಸ್ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದ ಶಾಸಕ ಶ್ರೀನಿವಾಸಗೌಡ, ಈ ಬಾರಿ ವಿಧಾನಸಭಾ ಚುನಾವಣೆಗೆ ಕೋಲಾರ ಕ್ಷೇತ್ರವನ್ನ ಸಿದ‍್ಧರಾಮಯ್ಯಗೆ ಬಿಟ್ಟುಕೊಟ್ಟಿದ್ದಾರೆ. ಸಿದ್ದರಾಮಯ್ಯ ಅವರು ಈ ಬಾರಿ ವಿಧಾನಸಭೆ ಚುನಾವಣೆಗೆ ಕೋಲಾದಿಂದ ಸ್ಪರ್ಧಿಸುವುದು…

Read More

ರಾಹುಲ್ ಗಾಂಧಿಗೆ ಉತ್ತರ ಪ್ರದೇಶ ಅಮೇಥಿಯಲ್ಲಿ ಸೋಲಿನ ಅನುಭವವಿದೆ. ಹೀಗಾಗಿ ಸಿದ್ಧರಾಮಯ್ಯಗೆ ಕೋಲಾರದಿಂದ ಸ್ಪರ್ಧಿಸದಂತೆ ಸಲಹೆ ನೀಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲೇವಡಿ ಮಾಡಿದರು. ವಿಜಯಪುರದಲ್ಲಿ ಇಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಉತ್ತರ ಪ್ರದೇಶ ಅಮೇಥಿ ಕ್ಷೇತ್ರದಿಂದ ಸ್ಪರ್ಧಿಸಿ ಗೆಲ್ಲುತ್ತಿದ್ದ ರಾಹುಲ್ ಗಾಂಧಿ ಸೋತಿದ್ದಾರೆ. ಈ ಅನುಭವದ ಆಧಾರದ ಮೇಲೆ ಸಿದ್ಧರಾಮಯ್ಯಗೆ ಕೋಲಾರದಿಂಧ ಸ್ಪರ್ಧೆ ಬೇಡ ಎಂದು ಸಲಹೆ ನೀಡಿದ್ದಾರೆ .ಕಾಂಗ್ರೆಸ್ ಅಷ್ಟರ ಮಟ್ಟಿಗೆ ಸೋತು ಸುಣ್ಣವಾಗಿದೆ  ಎಂದು ಟೀಕಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ರಾಜ್ಯದ ರಾಮನಗರ, ರಾಯಚೂರು, ವಿಜಯಪುರ, ಕಲಬುರಗಿ, ಬೀದರ್, ಮಂಡ್ಯ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಇಂದು ಕೂಡ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ. ಹೌದು. ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕಾಲಿಕ ಮಳೆಗೆ ಅಪಾರ ಪ್ರಮಾಣದ ಬೆಳೆ ನಾಶವಾಗಿದ್ದು, ಸಿಡಿಲಿಗೆ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಸೋನಾಳ ಗ್ರಾಮದಲ್ಲಿ ಸಿಡಿಲಿಗೆ ಲಹು ಮಾಧವರಾವ ಬೀರ್ಗೆ (36) ಮೃತಪಟ್ಟಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮೆದಕಿನಾಳ ಗ್ರಾಮದಲ್ಲಿ ತುಂಬಿ ಹರಿಯುತ್ತಿದ್ದ ಚರಂಡಿಯಲ್ಲಿ ಬಿದ್ದು ಭೀರಪ್ಪ ಶಿವರಾಜ (2) ಸಾವನ್ನಪ್ಪಿದ್ದ ಘಟನೆ ನಡೆದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಮಾರ್ಚ್ 20, 2023ರಂದು ಅಂತರರಾಷ್ಟ್ರೀಯ ಮಹಿಳಾ ದಿನವನ್ನು ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಆಚರಿಸಲಾಗುತ್ತಿದೆ. ಈ ದಿನದಂದು ಬೆಂಗಳೂರು ನಗರ ವ್ಯಾಪ್ತಿಯ ಮಹಿಳಾ ಸರ್ಕಾರಿ ನೌಕರರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಸರ್ಕಾರ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದ ಉಪ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ. ಮಾ.20ರಂದು ಸರ್ಕಾರಿ ನೌಕರರ ಸಂಘದಿಂದ ಬೆಂಗಳೂರಿನ ವಿಧಾನ ಸೌಧದಲ್ಲಿರುವಂತ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಬೆಂಗಳೂರು ನಗರ ವ್ಯಾಪ್ತಿಯ ಮಹಿಳಾ ಅಧಿಕಾರಿ, ಸರ್ಕಾರಿ ನೌಕರರು ಕಡ್ಡಾಯವಾಗಿ ಹಾಜರಾತಿ ಪ್ರಮಾಣಪತ್ರವನ್ನು ಸಲ್ಲಿಸುವ ಷರತ್ತಿಗೆ ಒಳಪಟ್ಟು, ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More