Author: admin

ಉರಿಗೌಡ, ನಂಜೇಗೌಡರ ವಿಚಾರಗಳು ಮುನ್ನೆಲೆಗೆ ಬಂದಿದ್ದು, ವಿಪಕ್ಷಗಳು ಇದನ್ನೇ ಅಸ್ತ್ರವಾಗಿಸಿಕೊಂಡು ಆಡಳಿತ ಪಕ್ಷದ ವಿರುದ್ಧ ಕೆಂಡಕಾರುತ್ತಿವೆ. ಇದೀಗ ಈ ಕುರಿತು ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಉರಿಗೌಡ, ನಂಜೇಗೌಡ ಸ್ವಾಭಿಮಾನಿಗಳು, ಅವರು ಧರ್ಮಕ್ಕಾಗಿ ಹೋರಾಟ ಮಾಡಿದವರಾಗಿದ್ದಾರೆ. ನಮ್ಮ ದೇವಸ್ಥಾನ ಉಳಿಸುವುದಾಕ್ಕಾಗಿ ಹೋರಾಟ ಮಾಡಿದ್ದಾರೆ ಎಂದಿದ್ದಾರೆ . ಹಿಂದುಗಳ ಕ್ರೈಸ್ತ ನರಮೇಧ ಖಂಡಿಸಿ ಹೋರಾಡಿದ್ದಾರೆ. ಹೀಗೆ ಉರಿಗೌಡ ನಂಜೇಗೌಡರ ಬಗ್ಗೆ ಹೆಮ್ಮೆಯ ಇದೆ ಎಂದು ಕಾಂಗ್ರೆಸ್ ಜೆಡಿಎಸ್ ಆರೋಪಕ್ಕೆ ಶೋಭಾ ಕರದ್ಲಾಂಜೆ ತಿರುಗೇಟು ನೀಡಿದ್ದಾರೆ. ಟಿಪ್ಪು ಸುಲ್ತಾನ್ ಮಂಗಳೂರಿನಲ್ಲಿ ಕ್ರೈಸ್ತರ ಹಾಗೂ ಕೊಡವರ ನರಮೇಧವನ್ನು ಕೊಡಗಿನಲ್ಲಿ ಮಾಡಿದ್ದಾರೆ. ನಂದಿ ಬೆಟ್ಡದ ಮೇಲೆ ಹಿಂದುಗಳನ್ನು ಕೊಂದು ಹಾಕಿದ್ದಾರೆ. ಕನ್ನಡ ವಿರೋಧಿಯಾಗಿದ್ದವರ ವಿರುದ್ಧ ಸೆಟೆದು ನಿಂತವವರು ನಂಜೇಗೌಡ ಉರಿಗೌಡರು ಎಂದು ಜೆಡಿಎಸ್‌, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…

Read More

ಕೆ.ಆರ್.ನಗರ: ತಾಲ್ಲೋಕಿನ ಸಿದ್ದಾಪುರ ಗ್ರಾಮದ ಪುಟ್ಟಸ್ವಾಮಪ್ಪ ಎಂಬುವವರ ಮಗ ಸುಮಾರು ನಲವತ್ತೇಳು ವರ್ಷದ ಅರವಿಂದ ಎಂಬುವವರು ಕರ್ತವ್ಯ ನಿರ್ವಹಿಸಿ ಮನೆಗೆ ತೆರಳುವ ಸಂಧರ್ಭದಲ್ಲಿ ದಿನಾಂಕ ಮಾರ್ಚ್ ಎಂಟರಂದು ಹೃದಯಾಘಾತದಿಂದ ಸಾವನಪ್ಪಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಹುಣಸೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತಿದ್ದ ಅರವಿಂದರವರ ಬಳಗದ ಗೋಳು ಮುಗಿಲು ಮುಟ್ಟಿದೆ. ಹುಣಸೂರು ಸಾರ್ವಜನಿಕ ಆಸ್ಪತ್ರೆಯ ಶವಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಸ್ವ ಗ್ರಾಮ ಸಿದ್ದಪುರದಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು. ಮೃತರಿಗೆ ಎರಡೂ ಮಕ್ಕಳು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಕೋಲಾರ ಬಿಟ್ಟು ವರುಣಾದಿಂದ ಸ್ಪರ್ಧಿಸುವಂತೆ ಸಿದ್ಧರಾಮಯ್ಯಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೂಚನೆ ನೀಡಿದ್ದು ಈ ಹಿನ್ನೆಲೆ ತಂದೆಗಾಗಿ ಕ್ಷೇತ್ರವನ್ನ ತ್ಯಾಗ ಮಾಡಲು ಶಾಸಕ ಯತೀಂದ್ರ ಸಿದ್ಧರಾಮಯ್ಯ ಮುಂದಾಗಿದ್ದಾರೆ. ಈ ಕುರಿತು ಮಾತನಾಡಿದ ಶಾಸಕ ಯತೀಂದ್ರ ಸಿದ್ಧರಾಮಯ್ಯ, ಅಪ್ಪ ವರುಣಾಗೆ ಬಂದ್ರೆ ನಾನು ಸ್ಪರ್ಧಿಸಲ್ಲ. ಸಿದ್ಧರಾಮಯ್ಯ ಅವರ ಪರ ಪ್ರಚಾರ ಮಾಡುತ್ತೇನೆ. ಸರ್ವೇಯಲ್ಲಿ ನೆಗೆಟಿವ್ ಫಲಿತಾಂಶ ಬಂದಿಲ್ಲ ನಾನು ಎರಡು ಬಾರಿ ಸರ್ವೇ ಮಾಡಿಸಿದ್ದೇನೆ. ಸರ್ವೇಯಲ್ಲಿ ತಂದೆ ಪರ ಫಲಿತಾಂಶ ಬಂದಿದೆ ಎಂದು ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಸಾರಿಗೆ ನೌಕರರಿಗೆ ಶೇ. 15 ರಷ್ಟು ವೇತನಕ್ಕೆ ರಾಜ್ಯ ಸರ್ಕಾರ ಸಮ್ಮತಿ ನೀಡಿರುವ ಹಿನ್ನೆಲೆಯಲ್ಲಿ ಮುಷ್ಕರ ವಾಪಸ್ ಪಡೆಯಲಾಗಿದೆ. ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 21ರಿಂದ ಸಾರಿಗೆ ನೌಕರರು ಮುಷ್ಕರ ನಡೆಸೋದಕ್ಕೆ ಕರೆ ನೀಡಿದ್ದರು. ಆದರೀಗ ಸಾರಿಗೆ ನೌಕರರು ಮುಷ್ಕರ ವಾಪಸ್ ಪಡೆದಿದ್ದಾರೆ ಎನ್ನಲಾಗಿದೆ. 8 ಟ್ರೇಡ್ ಯೂನಿಯನ್ ಗಳು 20 % ವೇತನ ಹೆಚ್ಚಳಕ್ಕೆ ಆಗ್ರಹಿಸಿ ಮುಷ್ಕರಕ್ಕೆ ಕರೆ ನೀಡಿದ್ದರು. 15 % ವೇತನ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದ್ದು, ಅಲ್ಲದೇ ನೌಕರರ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಒಪ್ಪಿಗೆ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರು ಮಹಾನಗರದ ಜನತೆಗೆ 1895ರಿಂದ ಇಲ್ಲಿಯವರೆಗೆ ನೀರು ಪೂರೈಸಲು ಕಾಲಕಾಲಕ್ಕೆ ಅಳವಡಿಸಿಕೊಂಡು ಬಂದಿರುವ ವ್ಯವಸ್ಥೆ ಮತ್ತು ತಂತ್ರಜ್ಞಾನಗಳನ್ನು ಸಮಗ್ರವಾಗಿ ಪ್ರದರ್ಶಿಸುವ ವಿನೂತನ ನೀರು ವಸ್ತು ಸಂಗ್ರಹಾಲಯ ಲೋಕಾರ್ಪಣೆಗೊಂಡಿತು. ದಿ. ನಟ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಮಲ್ಲೇಶ್ವರ 18ನೇ ಅಡ್ಡರಸ್ತೆಯಲ್ಲಿರುವ ಜಲಮಂಡಲಿಯ ನೆಲ ಮಟ್ಟದ ನೀರು ಸಂಗ್ರಹಗಾರದ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಶಾಸಕ ಮತ್ತು ಸಚಿವ ಡಾ.ಸಿ ಎನ್ ಅಶ್ವತ್ ನಾರಾಯಣ್ ಈ ಮ್ಯೂಸಿಯಂಗೆ ಹಸಿರು ನಿಶಾನೆ ತೋರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಸಮಾಜದ ಬಗ್ಗೆ ಕಳಕಳಿ ಇಟ್ಟುಕೊಂಡಿದ್ದ ನಟ ಪುನೀತ್‌ ಅವರು ನಮಗೆಲ್ಲ ಸ್ಫೂರ್ತಿಯಾಗಬೇಕು. ಅವರ ಗೌರವಾರ್ಥವಾಗಿ ಅವರ ಹುಟ್ಟುಹಬ್ಬದಂದೇ ಈ ಮ್ಯೂಸಿಯಂ ಅನ್ನು ಸಮಾಜಕ್ಕೆ ಅರ್ಪಿಸಲಾಗಿದೆ” ಎಂದು ನೆನಪಿಸಿಕೊಂಡರು. ದೆಹಲಿಯಲ್ಲಿರುವ ಇಂಡಿಯಾ ಹ್ಯಾಬಿಟೆಟ್‌ ಸೆಂಟರ್  ರೀತಿಯಲ್ಲೇ ಮಲ್ಲೇಶ್ವರ ಇಂಟರ್ ‌ನ್ಯಾಷನಲ್‌ ಸೆಂಟರ್    ನಿರ್ಮಿಸಲಾಗುವುದು. ಇದಕ್ಕಾಗಿ ಬಿಬಿಎಂಪಿ 20 ಕೋಟಿ ರೂ. ಕೊಡಲಿದ್ದು, ಜಲಮಂಡಲಿಯು ಅಗತ್ಯವಾದ ಜಾಗವನ್ನು ಕೊಡಲಿದೆ. ಇದು ಯುವಜನರು ಸಮರ್ಪಕ ಚಿಂತನೆ ರೂಪಿಸಿಕೊಳ್ಳುವಂತಹ…

Read More

ಜೆಎಸ್ ಎಸ್ ವೈದ್ಯಕೀಯ ಕಾಲೇಜಿನ ಸಮುದಾಯ ವೈದ್ಯಕೀಯ ವಿಭಾಗ, ಮೈಸೂರು ಜಿಲ್ಲಾ ಕ್ಷಯರೋಗ ಕಚೇರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ವಿಶ್ವ ಕ್ಷಯರೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾತನಾಡಿದ ಜಿಲ್ಲಾ ಕ್ಷಯರೋಗ ಅಧಿಕಾರಿ ಡಾ.ಮಹಮ್ಮದ್ ಶಿರಾಜ್ ಅಹಮದ್, ನಮ್ಮ ದೇಶದಲ್ಲಿ ಕ್ಷಯರೋಗದ ಹೊರೆ ಮತ್ತು ರೋಗವನ್ನು ಎದುರಿಸಲು ಪ್ರಯತ್ನಿಸುವುದು, 2025 ರ ವೇಳೆಗೆ ಕ್ಷಯ ರೋಗ ನಿವಾರಣೆಗೆ ಗುರಿಯತ್ತ ಶ್ರಮಿಸುತ್ತಿರುವ ವಿವಿಧ ಹಂತಗಳು, ವಿವಿಧ ವಿಭಾಗಗಳ ಕಾರ್ಯಗಳ ಬಗ್ಗೆ ಪ್ರತಿನಿಧಿಗಳ ಕುರಿತು ಮಾತನಾಡಿದರು. ಇದೇ ವೇಳೆ ಕ್ಷಯರೋಗ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ಡಾ. ಮೊಹಮ್ಮದ್ ಶಿರಾಜ್ ಅಹಮದ್ ಅವರನ್ನು ಸನ್ಮಾನಿಸಲಾಯಿತು. ಜೆಎಸ್ ಎಸ್ ವೈದ್ಯಕೀಯ ಕಾಲೇಜಿನ ಕಮ್ಯುನಿಟಿ ಮೆಡಿಸಿನ್ ವಿಭಾಗದ ಕಮ್ಯುನಿಟಿ ಮೆಡಿಸಿನ್ ಕ್ರಾನಿಕಲ್, ಮಾಸಿಕ ಇ-ಸುದ್ದಿಪತ್ರವನ್ನು (ಮೊದಲ ಸಂಚಿಕೆ) ಬಿಡುಗಡೆ ಮಾಡಲಾಯಿತು. ‘ವೀ ಕ್ಯಾನ್ ಎಂಡ್ ಟಿಬಿ’ ವಿಷಯದಡಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜೆಎಸ್ಎಸ್ ವೈದ್ಯಕೀಯ ಕಾಲೇಜಿನ ಉಪ ಪ್ರಾಂಶುಪಾಲರು (ಪ್ರಿ ಕ್ಲಿನಿಕಲ್) ಡಾ.ಸುಮಾ ಎಂ.ಎನ್,…

Read More

ಮಾರ್ಚ್ 26 ರಂದು ನಿಗದಿಯಾಗಿದ್ದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ರೋಡ್ ಶೋವನ್ನ ಜೆಡಿಎಸ್ ರದ್ಧುಪಡಿಸಿದೆ. ಮಾರ್ಚ್ 26 ರಂದು ಕುಂಬಳಗೋಡಿನಿಂದ ಮೈಸೂರಿನವರೆಗೆ ಹೆಚ್.ಡಿ ದೇವೇಗೌಡರ ನೇತೃತ್ವದಲ್ಲಿ ರೋಡ್ ಶೋ ನಡೆಸಲು ಜೆಡಿಎಸ್ ಮುಂದಾಗಿತ್ತು. ಆದರೆ ಹೆಚ್.ಡಿ ದೇವೇಗೌಡರ ಆರೋಗ್ಯ ದೃಷ್ಠಿಯಿಂದ ವೈದ್ಯರ ಸಲಹೆ ಮೇರೆಗೆ ರೋಡ್ ಶೋವನ್ನು ರದ್ದು ಮಾಡಲಾಗಿದೆ ಎನ್ನಲಾಗಿದೆ. ರೋಡ್ ಶೋ ರದ್ದಾದರೂ ಸಹ ಮೈಸೂರಿನಲ್ಲಿ 10 ಲಕ್ಷ ಕಾರ್ಯಕರ್ತರನ್ನ ಸೇರಿಸಿ ಸಮಾರೋಪ ಸಮಾರಂಭ ನಡೆಸಲು ಜೆಡಿಎಸ್ ತೀರ್ಮಾನಿಸಿದೆ. ರೋಡ್ ಶೋ ರದ್ದು ಕುರಿತು ಇಂದು ಹೆಚ್.ಡಿ ಕುಮಾರಸ್ವಾಮಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಚರ್ಚಿಸಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಕರ್ನಾಟಕ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ KRS ಪಕ್ಷವು ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಿಗೆ ಸ್ಪರ್ಧಿಸಲಿದೆ. ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಯಾವೆಲ್ಲಾ ಯೋಜನೆಗಳನ್ನು ರೂಪಿಸಬೇಕು ಮತ್ತು ಕಾರ್ಯಕ್ರಮಗಳನ್ನು ಅನುಷ್ಟಾನಕ್ಕೆ ತರಬೇಕು ಎನ್ನುವ ನಿಟ್ಟಿನಲ್ಲಿ ರಾಜ್ಯದ ಜನಸಾಮಾನ್ಯರ ಜೊತೆ ಮತ್ತು ಚಿಂತಕರು ಹಾಗೂ ತಜ್ಞರ ಜೊತೆ ಹಲವಾರು ಸಭೆಗಳು ಮತ್ತು ಸಂವಾದಗಳನ್ನು ನಡೆಸಿದ ನಂತರ ಪಕ್ಷವು ಪ್ರಣಾಳಿಕೆಯನ್ನು ಸಿದ್ದಪಡಿಸಿದ್ದು, ಅದರ ಪ್ರಮುಖ ಅಂಶಗಳನ್ನು ಈ ಪತ್ರಿಕಾ ಟಿಪ್ಪಣಿಯಲ್ಲಿ ವಿವರಿಸಲಾಗಿದೆ. ರಾಜ್ಯ ಸರ್ಕಾರದಲ್ಲಿ ಪ್ರಸ್ತುತ ಖಾಲಿ ಇರುವ 3 ಲಕ್ಷಕ್ಕಿಂತಲೂ ಹೆಚ್ಚಿನ ಹುದ್ದೆಗಳನ್ನು ಒಂದು ವರ್ಷದ ಒಳಗೆ ಭರ್ತಿ ಮಾಡಲಾಗುವುದು. ಭ್ರಷ್ಟಾಚಾರರಹಿತ, ಪಾರದರ್ಶಕ ಮತ್ತು ಜವಾಬ್ದಾರಿಯುತ ಆಡಳಿತಕ್ಕಾಗಿ ಮತ್ತು ಲಂಚ/ಭ್ರಷ್ಟಾಚಾರ ನಿಗ್ರಹಕ್ಕಾಗಿ ಲೋಕಾಯುಕ್ತ ಬಲಪಡಿಸಲು ಕ್ರಮ. ರಾಜ್ಯದಲ್ಲಿ ಬಡತನ ನಿವಾರಣೆಗಾಗಿ ಸಂಪೂರ್ಣ ಮದ್ಯ ನಿಷೇಧ. ಶಿಕ್ಷಣದ ಪ್ರತಿ ಹಂತದಲ್ಲಿಯೂ ಉಚಿತ ಮತ್ತು ಗುಣಮಟ್ಟದ ಶಿಕ್ಷಣಕ್ಕೆ ಕ್ರಮ. ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಕನಿಷ್ಠ ಒಂದು ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಮತ್ತು ತಾಲ್ಲೂಕಿಗೊಂದು ಸರ್ಕಾರಿ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ…

Read More

ಮೈಸೂರು -ಬೆಂಗಳೂರು ಎಕ್ಸ್ ಪ್ರೆಸ್ ಹೈವೇಯಲ್ಲಿ ಅವೈಜ್ಞಾನಿಕ ಟೋಲ್ ದರ ಸಂಗ್ರಹ ವಿರುದ್ಧ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ , ಮೈಸೂರಿನ ಮಣಿಪಾಲ್ ವೃತ್ತದ ಬಳಿ ಸಾಂಕೇತಿಕ ಪ್ರತಿಭಟನೆ ನಡೆಸಿದರು. ಬಳಿಕ ಮಾತನಾಡಿದ ಅವರು, ಎಕ್ಸ್ ಪ್ರೆಸ್ ಹೈವೇ ನಿರ್ಮಾಣ ಹಿನ್ನೆಲೆ 2600 ಎಕರೆ ರೈತರ ಜಮೀನು ಹೋಯ್ತು. ಮಂಡ್ಯ ಭಾಗದ ನೂರಾರು ಕುಟುಂಬಗಳು‌ ಬೀದಿಗೆ ಬಂದಿದೆ ಜನ ವಿರೋಧಿ ಯೋಜನೆ ಮಾಡಿ ಟೋಲ್ ಸಂಗ್ರಹ ನೆಪದಲ್ಲಿ ಹಗಲು ದರೋಡೆಗೆಳಿದಿದ್ದೀರಿ ರಸ್ತೆ ಬೇಕು ಅಂಥಾ ಯಾರು ಕೇಳಿದ್ರು ? ನಾಲ್ಕು ಪಥನೇ ಸಾಕಾಗಿತ್ತು. ಹತ್ತು ಪಥದ ರಸ್ತೆ ಮಾಡಿದ್ದೀರಾ ಆದರೆ ಬಡವರು ಓಡಾಡುವ ಸರ್ವಿಸ್ ರಸ್ತೆ ಎಲ್ಲಿದೆ ? ಅಪಘಾತವಾದರೆ ಚಿಕಿತ್ಸೆ ನೀಡಲು ಟ್ರಾಮಾ ಸೆಂಟರ್ ಎಲ್ಲಿದೆ ಎಂದು ಪ್ರಶ್ನಿಸಿದರು. ಬೆಂಗಳೂರು ಮೈಸೂರು ಟೋಲ್ ಸಂಗ್ರಹ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ವಿರುದ್ಧ ಕಿಡಿಕಾರಿದ ಎಚ್‌.ವಿಶ್ವನಾಥ್, ಸಂಸದ ಪ್ರತಾಪ ಸಿಂಹ ಮಿನಿ ಕಂಟ್ರ್ಯಾಕ್ಟರ್. ನಿನ್ನ ಕೆಲಸ ಏನು? ಹೆದ್ದಾರಿ…

Read More

ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಉರಿಗೌಡ ಮತ್ತು ನಂಜೇಗೌಡರ ವಿಚಾರ ಬಾರಿ ಸುದ್ದಿಯಾಗುತ್ತಿದ್ದು ಈ ಕುರಿತು ಮತ್ತೆ ಶಾಸಕ ಸಿ.ಟಿ ರವಿ ಪ್ರತಿಕ್ರಿಯಿಸಿ ಹೆಚ್.ಡಿ ಕುಮಾರಸ್ವಾಮಿಗೆ ಟಾಂಗ್ ನೀಡಿದ್ದಾರೆ. ಧಾರವಾಡದಲ್ಲಿ ಈ ಬಗ್ಗೆ ಮಾತನಾಡಿದ ಶಾಸಕ ಸಿ.ಟಿ ರವಿ, ಉರಿಗೌಡ ನಂಜೇಗೌಡ ಐತಿಹಾಸಿಕ ವ್ಯಕ್ತಿಗಳು ಟಿಪ್ಪುವನ್ನ ಉರಿಗೌಡ ನಂಜೇಗೌಡ ಕೊಂದಿದ್ದು ಐತಿಹಾಸಿಕ ಸತ್ಯ. ಟಿಪ್ಪು ಹಾಸನವನ್ನ ಕೈಮಾಬಾದ್ ಎಂದು ಕರೆದಿದ್ದ. ಹೆಚ್.ಡಿ ಕುಮಾರಸ್ವಾಮಿಗೂ ಹಾಸನವನ್ನ ಕೈಮಾಬಾದ್ ಎಂದು ಕರೆಯಲು ಇಷ್ಟವೇನು…? ಎಂದು ವ್ಯಂಗ್ಯವಾಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More