Subscribe to Updates
Get the latest creative news from FooBar about art, design and business.
- ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
- ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
- ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ
- ಬೌದ್ಧ ಧರ್ಮವು ಸಮಾನತೆ, ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ: ಹರಾ ಮಹೇಶ್
- ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಹೆಣ್ಣು ಮಕ್ಕಳಿಗೆ ಉಚಿತ ಲಸಿಕೆ: ಶಾಸಕ ಡಾ.ಎಚ್.ಡಿ.ರಂಗನಾಥ್
- ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ
- ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ
- ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
Author: admin
ಚಿಕ್ಕಬಳ್ಳಾಪುರ ಜನರ ಬಹು ದಿನಗಳ ಕೂಗಿಗೆ ಜಯ ಸಿಕ್ಕಿದ್ದು ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಸಂಚರಿಸಲು ಕೆಎಸ್ ಆರ್ ಟಿಸಿ ಅನುಮತಿ ನೀಡಿದೆ. ಕೇವಲ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮಾತ್ರ ಸೀಮಿತವಾಗಿದ್ದ ಬಿಎಂಟಿಸಿ ಬಸ್ ಗಳು ಚಿಕ್ಕಬಳ್ಳಾಪುರಕ್ಕೂ ಸಂಚರಿಸುವ ಮೂಲಕ ಬಿಎಂಟಿಸಿ ವ್ಯಾಪ್ತಿಯನ್ನ ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ಜನವರಿ 4ರಂದು ನಡೆದ ಬಿಎಂಟಿಸಿ ಆಡಳಿತ ಮಂಡಳಿ ಸಭೆಯಲ್ಲಿ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿತ್ತು. ಬಿಎಂಟಿಸಿ ಬಸ್ ಸೇವೆಯನ್ನು ಚಿಕ್ಕಬಳ್ಳಾಪುರಕ್ಕೆ ವಿಸ್ತರಿಸಿದ್ದಕ್ಕೆ ಕೆಎಸ್ ಆರ್ಟಿಸಿ ಆಕ್ಷೇಪ ವ್ಯಕ್ತಪಡಿಸಿತ್ತು. ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ಸುಮಾರು 60 ಕಿ.ಮೀ ಅಂತರವಿದೆ. ಹೀಗಾಗಿ ಬಸ್ ಸಂಚಾರ ವಿಸ್ತರಿಸಲು ಅವಕಾಶ ಇಲ್ಲ ಎಂದು ಕೆಎಸ್ಆರ್ಟಿಸಿ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದರು. ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಸಂಚಾರ ಮಾಡಿದರೆ ಕೆಎಸ್ ಆರ್ ಟಿಸಿ ಆದಾಯಕ್ಕೆ ಹೊಡೆತ ಬೀಳುವ ಸಾಧ್ಯತೆ ಇತ್ತು. ಹೀಗಾಗಿ ಕೆಎಸ್ ಆರ್ ಟಿಸಿ ಆಕ್ಷೇಪ ವ್ಯಕ್ತಪಡಿಸಿತ್ತು. ಇದೀಗ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ಬಸ್ ಸಂಚರಿಸಲು ಕೆಎಸ್ ಆರ್ ಟಿಸಿ ಅನುಮತಿ…
ಬೆಂಗಳೂರು ಕರಗವನ್ನ ನಾಟಕ ಎಂದು ಹೇಳಿಕೆ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್ ಶಾಸಕ ಹ್ಯಾರಿಸ್ ಇದೀಗ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಕ್ಷಮೆಯಾಚನೆ ಕೇಳಿದ್ದಾರೆ. ಕಾಂಗ್ರಸ್ ಕಾರ್ಯಕ್ರಮವೊಂದರಲ್ಲಿ ಶಾಸಕ ಹ್ಯಾರಿಸ್ ಬೆಂಗಳೂರು ಕರಗವನ್ನ ನಾಟಕ ಎಂದಿದ್ದರು. ಈ ಹೇಳಿಕೆಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಬಳಿಕ ಈ ಬಗ್ಗೆ ಕ್ಷಮೆಯಾಚನೆಯೂ ಮಾಡಿದ್ದರು. ಆದರೆ ಸುಮ್ಮನಾಗದ ತಿಗಳರ ಸಮಾಜದ ಮುಖಂಡರು ಸಾಮಾಜಿಕ ಜಾಲತಾಣದಲ್ಲಿ ಮತ್ತೆ ಮತ್ತೆ ಅಸಮಾಧಾನ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ನೇರವಾಗಿ ಶಾಸಕ ಹ್ಯಾರಿಸ್ ತಿಗಳರ ಪೇಟೆಯಲ್ಲಿರುವ ಶ್ರೀಧರ್ಮರಾಯಸ್ವಾಮಿ ದೇವಾಲಯಕ್ಕೆ ತೆರಳಿ ಕ್ಷಮೆಯಾಚಿಸಿದ್ದಾರೆ. ದೇವರ ಮೇಲೆ ನನಗೆ ಅಪಾರ ಭಕ್ತಿ ಗೌರವವಿದೆ ಧರ್ಮಾರಾಯಸ್ವಾಮಿ ದೇವಾಲಯದಲ್ಲಿ ನಾನು ಕ್ಷಮೆ ಕೇಳಿದ್ದೇನೆ ಎಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚಲಿಸುತ್ತಿದ್ದ ಕಾರು ಹಳ್ಳಕ್ಕೆ ಬಿದ್ದು ದಂಪತಿ ದುರ್ಮರಣಕ್ಕೀಡಾಗಿರುವ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರದಲ್ಲಿ ನಡೆದಿದೆ. ಶ್ರೀನಿವಾಸಪುರದ ಲಕ್ಷ್ಮೀಪುರ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಆಂಧ್ರ ಮೂಲದ ಶಫಿ(55), ಶಮಾ(50) ಮೃತಪಟ್ಟವರು. ಕೆಂಪೇಗೌಡ ಏರ್ ಪೋರ್ಟ್ ನಿಂದ ಮದನಪಲ್ಲಿಗೆ ತೆರಳುತ್ತಿದ್ದ ಕಾರು ಲಕ್ಷ್ಮೀಪುರ ಕ್ರಾಸ್ ಬಳಿ 20ರಿಂದ 25 ಅಡಿ ಹಳ್ಳಕ್ಕೆ ಬಿದ್ದಿದೆ. ಏರ್ ಪೋರ್ಟ್ ನಲ್ಲಿ ಮಗಳನ್ನ ಬಿಟ್ಟು ವಾಪಸ್ ಬರುವಾಗ ಈ ಘಟನೆ ಸಂಭವಿಸಿದೆ. ಅಪಘಾತ ಸ್ಥಳಕ್ಕೆ ಗೌನಿಪಲ್ಲಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನ ಶ್ರೀನಿವಾಸಪುರ ಆಸ್ಪತ್ರೆಗೆ ರವಾನಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಮಾರ್ಚ್ 20, 2023ರಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಆಚರಿಸಲಾಗುತ್ತಿದೆ. ಈ ದಿನದಂದು ಬೆಂಗಳೂರು ನಗರ ವ್ಯಾಪ್ತಿಯ ಮಹಿಳಾ ಸರ್ಕಾರಿ ನೌಕರರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಸರ್ಕಾರ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದ ಉಪ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ. ಮಾ.20ರಂದು ಸರ್ಕಾರಿ ನೌಕರರ ಸಂಘದಿಂದ ಬೆಂಗಳೂರಿನ ವಿಧಾನ ಸೌಧದಲ್ಲಿರುವಂತ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ. ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ವ್ಯಾಪ್ತಿಯ ಮಹಿಳಾ ಅಧಿಕಾರಿ, ಸರ್ಕಾರಿ ನೌಕರರು ಕಡ್ಡಾಯವಾಗಿ ಹಾಜರಾತಿ ಪ್ರಮಾಣಪತ್ರವನ್ನು ಸಲ್ಲಿಸುವ ಷರತ್ತಿಗೆ ಒಳಪಟ್ಟು, ಒಂದು ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ ಎಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಉರಿಗೌಡ ನಂಜೇಗೌಡ ಸಿನಿಮಾ ಕುರಿತು ಭಾರಿ ವಾದ ವಿವಾದಗಳು ನಡೆಯುತ್ತಿದ್ದು ಸಿನಿಮಾ ವಿರುದ್ದ ಮಾಜಿ ಸಿಎಂ ಕುಮಾರಸ್ವಾಮಿ ಸಾಲು ಸಾಲು ಟ್ವಿಟ್ ಮಾಡಿದ್ದಾರೆ. ಮುನಿರತ್ನ ಅವರು ಈ ಸಿನೇಮಾ ನಿರ್ಮಾಣಕ್ಕೆ ಮುಂದಾಗಿದ್ದು ಇವರ ವಿರುದ್ಧವು ಎಚ್.ಡಿಕೆ ಟ್ವಿಟ್ ಮಳೆಗೈದಿದ್ದಾರೆ. ಕಲ್ಪಿತ ಕಥೆ, ಸುಳ್ಳುಗಳಿಂದಲೇ ಜನರ ಮನಸ್ಸಿನಲ್ಲಿ ವಿಷ ಬೀಜ ಬಿತ್ತಿ, ಕರ್ನಾಟಕವನ್ನು ಅಲ್ಲೋಲಕಲ್ಲೋಲ ಮಾಡುತ್ತಿರುವ ಬಿಜೆಪಿ ವಕ್ರದೃಷ್ಟಿ ಸದ್ಯಕ್ಕೆ ಒಕ್ಕಲಿಗರ ಮೇಲೆ ಬಿದ್ದಿದೆ. ಸ್ವಾಭಿಮಾನಿ ಒಕ್ಕಲಿಗರನ್ನು ಹೇಗಾದರೂ ಹಳ್ಳ ಹಿಡಿಸಲೇಬೇಕೆಂಬ ಹಿಡೆನ್ ಅಜೆಂಡ ಬಿಜೆಪಿಗೆ ಇರುವುದಂತೂ ಸತ್ಯ ಎಂದು ಟ್ವೀಟ್ ಮಾಡಿದ್ದಾರೆ ಕುಮಾರಸ್ವಾಮಿ. ಸಚಿವರು ವೃತ್ತಿಯಲ್ಲಿ ಚಿತ್ರ ನಿರ್ಮಾಪಕರಾದ ಮುನಿರತ್ನ ಅವರು ತಮ್ಮ ವೃಷಭಾದ್ರಿ ಪ್ರೊಡಕ್ಷನ್ ಮೂಲಕ ಉರಿಗೌಡ-ನಂಜೇಗೌಡ’ ಹೆಸರನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನೋಂದಾಯಿಸಿ ಸಿನಿಮಾ ಮಾಡಲು ಹೊರಟಿದ್ದಾರೆ. ಈ ಮೂಲಕ ಒಕ್ಕಲಿಗರ ಗೌರವವನ್ನು ಬೆಳ್ಳಿತೆರೆಯ ಮೇಲೆಯೂ ಮೂರಾಬಟ್ಟೆ ಮಾಡಲು ಸಂಚು ರೂಪಿಸಿದ್ದಾರೆ’ ಎಂದು ಮತ್ತೊಂದು ಟ್ವೀಟ್ ಮಾಡಿದ್ದಾರೆ ಕುಮಾರಸ್ವಾಮಿ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…
ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡ್ತಾರೆ. ಪಟ್ಟಿ ರಿಲೀಸ್ ಬಳಿಕ ಭಿನ್ನಮತ ಸ್ಪೋಟವಾಗುತ್ತದೆ ಎಂದು ಬಿಜೆಪಿ ಶಾಸಕ ಕೆ.ಎಸ್ ಈಶ್ವರಪ್ಪ ಭವಿಷ್ಯ ನುಡಿದರು. ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಎಸ್ ಈಶ್ವರಪ್ಪ, ಟಿಕೆಟ್ ಸಿಗದೇ ಇದ್ರೆ ನಿಮ್ಮದು ಯಾವುದೋ ಜನ್ಮದ ಪುಣ್ಯ. ಟಿಕೆಟ್ ತೆಗೆದುಕೊಂಡು ಯಾಕೆ ಸೋಲುತ್ತೀರಿ. ಹೆಸರು ಕೈಬಿಟ್ಟರೇ ನೀವು ಪುಣ್ಯವಂತರು ಎಂದು ತಿಳಿದುಕೊಳ್ಳಿ ಎಂದು ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಗೆ ಹೇಳಿದರು. ಸಿದ್ಧರಾಮಯ್ಯಗೆ ಈಗಾಗಲೇ ಗೊತ್ತಾಗಿದೆ ಚುನಾವಣೆಯಲ್ಲಿ ಗೆಲ್ಲಲ್ಲ ಅಂತಾ. ಒಂದು ಕಡೆ ಲಿಂಗಾಯತರನ್ನ ಒಡೆದರು. ಪರಮೇಶ್ವರ್ ಮುನಿಯಪ್ಪರನ್ನ ಸೋಲಿಸಿದರು. ಹೀಗಾಗಿ ದಲಿತರ ವೋಟು ಕಾಂಗ್ರೆಸ್ ಗೆ ಬೀಳಲ್ಲ. ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಒಕ್ಕಲಿಗ ವಿರೋಧಿ. ಹೀಗಾಗಿ ಕಾಂಗ್ರೆಸ್ ಗೆ ಒಕ್ಕಲಿಗ ಸಮುದಾಯದ ವೋಟು ಬರಲ್ಲ ಈಗ ಮುಸ್ಲೀಂ ವೋಟ್ ಪಡೆಯಲು ಯತ್ನಿಸುತ್ತಿದ್ದಾರೆ. ಮುಸ್ಲೀಂ ವೋಟ್ ಬರೋದು ಡೌಟ್. ಕಾಂಗ್ರೆಸ್ ನವರು ಅಲೆಮಾರಿಗಳಾಗಿದ್ದಾರೆ ಎಂದು ಕೆ.ಎಸ್ ಈಶ್ವರಪ್ಪ ಲೇವಡಿ ಮಾಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್…
ಕಲ್ಪಿತಕಥೆ, ಸುಳ್ಳುಗಳಿಂದಲೇ ಜನರ ಮನಸ್ಸಿನಲ್ಲಿ ವಿಷಬೀಜ ಬಿತ್ತಿ ಕರ್ನಾಟಕವನ್ನು ಅಲ್ಲೋಲಕಲ್ಲೋಲ ಮಾಡುತ್ತಿರುವ ಬಿಜೆಪಿ ವಕ್ರದೃಷ್ಟಿ ಸದ್ಯಕ್ಕೆ ಒಕ್ಕಲಿಗರ ಮೇಲೆ ಬಿದ್ದಿದೆ. ಸ್ವಾಭಿಮಾನಿ ಒಕ್ಕಲಿಗರನ್ನು ಹೇಗಾದರೂ ಹಳ್ಳ ಹಿಡಿಸಲೆಬೇಕೆಂಬ ಹಿಡೆನ್ ಅಜೆಂಡಾ ಬಿಜೆಪಿಗೆ ಇರುವುದಂತು ಸತ್ಯ ಎಂದು ಬಿಜೆಪಿ ನಾಯಕರ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಉರಿಗೌಡ ಮತ್ತು ನಂಜೇಗೌಡ ವಿಚಾರಕ್ಕೆ ಸಂಬಂಧಿಸಿದಂತೆ ಸರಣಿ ಟ್ವೀಟ್ ಮಾಡಿ ಬಿಜೆಪಿ ನಾಯಕರ ವಿರುದ್ಧ ಗುಡುಗಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಒಕ್ಕಲಿಗರನ್ನು ಹೇಗಾದರೂ ಹಳ್ಳ ಹಿಡಿಸಲೆಬೇಕೆಂಬ ಮಹಾ ಷಡ್ಯಂತ್ರದ ಭಾಗವೇ ಉರಿಗೌಡ, ನಂಜೇಗೌಡ ಎಂಬ ಸುಳ್ಳುಪಾತ್ರಗಳ ಸೃಷ್ಟಿ. ಟಿಪ್ಪುವನ್ನು ಕೊಂದವರೆಂದು ಸೃಷ್ಟಿಸಲಾದ ಕಲ್ಪಿತ ಒಕ್ಕಲಿಗ ಹೆಸರುಗಳ ಮೂಲಕ ಒಕ್ಕಲಿಗ ಸಮುದಾಯವನ್ನು ಕಳಂಕದ ದಳ್ಳುರಿಗೆ ತಳ್ಳುವ, ಐತಿಹಾಸಿಕ ನಂಜಿನ ವಿಷವರ್ತುಲಕ್ಕೆ ನೂಕುವ ಹೇಯ ಕೃತ್ಯವನ್ನು ಬಿಜೆಪಿ ಮಾಡುತ್ತಿದೆ. ಹೆದ್ದಾರಿ ಲೋಕಾರ್ಪಣೆಗೆ ಆಗಮಿಸಿದ್ದ ಪ್ರಧಾನಿಗಳ ಸ್ವಾಗತ ಕಮಾನಿಗೆ ಉರಿಗೌಡ-ನಂಜೇಗೌಡ ಕಲ್ಪಿತ ಹೆಸರುಗಳನ್ನು ಇಟ್ಟಿತ್ತು ಬಿಜೆಪಿ ಸರಕಾರ. ಮೊದಲೇ ಇದ್ದ ಪರಮಪೂಜ್ಯ ಶ್ರೀಶ್ರೀಶ್ರೀ ಬಾಲಗಂಗಾಧರನಾಥ…
ಮೊದಲು ಜೆಡಿಎಸ್ ರಾಜ್ಯಕ್ಕೆ ಸೀಮಿತವಾಗಿತ್ತು. ನಂತರ ಮಂಡ್ಯ, ಹಾಸನಕ್ಕೆ ಸೀಮಿತವಾಗಿದೆ. ಹೆಚ್.ಡಿ ಕುಮಾರಸ್ವಾಮಿ ಹೆಚ್.ಡಿ ದೇವೇಗೌಡರು ಒಂದು ವರ್ಗಕ್ಕೆ ಸೀಮಿತರಾಗಿದ್ದಾರೆ. ಜೆಡಿಎಸ್ ಇನ್ನಷ್ಟು ಕುಗ್ಗಿ ಜಿಲ್ಲೆಗೆ ಸೀಮಿತವಾಗೋದು ಬೇಡ ಎಂದು ಕಂದಾಯ ಸಚಿವ ಆರ್.ಅಶೋಕ್ ವ್ಯಂಗ್ಯವಾಡಿದರು. ಉರಿಗೌಡ ನಂಜೇಗೌಡ ಸಿನಿಮಾಗೆ ಎಚ್ ಡಿಕೆ ವಿರೋಧ ಕುರಿತು ಮಾತನಾಡಿದ ಆರ್. ಅಶೋಕ್, ಒಕ್ಕಲಿಗರನ್ನು ಹೀಯಾಳಿಸುವ ಉದ್ದೇಶವಿಲ್ಲ ನಾವೂ ಒಕ್ಕಲಿಗ ಸಮಾಜದಿಂದ ಬಂದವರು ಬಿಜೆಪಿ ಇತಿಹಾಸ ಪರವಾಗಿ ನಿಲ್ಲುತ್ತದೆ. ಇತಿಹಾಸ ಏನು ಅಂತಾ ನೋಡುತ್ತೇನೆ. ಹೆಚ್ ಡಿಕುಮಾರಸ್ವಾಮಿಗೆ ಅನುಮಾನವಿದ್ದರೇ ಇತಿಹಾಸವನ್ನ ಮತ್ತೊಮ್ಮೆ ಪರಿಶೀಲಿಸೋಣ ಎಂದರು. ಯಾರೂ ಸಮುದಾಯವನ್ನ ಗುತ್ತಿಗೆ ಪಡೆಯಲು ಆಗಲ್ಲ. ಕುಮಾರಸ್ವಾಮಿ ಪದೇ ಪದೇ ಜಾತಿ ಹೆಸರು ಹೇಳುವುದು. ಜಾತಿ ಹೆಸರಲ್ಲಿ ಮತ ಕೇಳುವ ಗಿಮಿಕ್ ಮಾಡಬಾರದು ಎಂದು ಆರ್.ಅಶೋಕ್ ಟಾಂಗ್ ನೀಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ರಾಜ್ಯ ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುತ್ತಿರುವ ಕಾಂಗ್ರೆಸ್ ತಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಇಂದು ಎಐಸಿಸಿ ಕಚೇರಿಯಲ್ಲಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯುತ್ತಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ,ರಾಜ್ಯಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಾಜಿ ಸಿಎಂ ಸಿದ್ಧರಾಮಯ್ಯ ಪಾಲ್ಗೊಂಡಿದ್ದಾರೆ. ಈ ನಡುವೆ ಶಿಗ್ಗಾಂವಿ ಕ್ಷೇತ್ರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ದ ಸ್ಪರ್ಧೆಗೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಕೆಲ ನಾಯಕರು ಒತ್ತಡ ಹೇರಿದ್ದಾರೆ ಎನ್ನಲಾಗಿದೆ. ಸಿಎಂ ವಿರುದ್ಧ ವಿನಯ್ ಕುಲಕರ್ಣಿ ಸ್ಪರ್ಧೆಗೆ ಕಾಂಗ್ರೆಸ್ ಸ್ಕ್ರೀನಿಂಗ್ ಕಮಿಟಿಯೂ ಒಪ್ಪಿಗೆ ಸೂಚಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ವಿರೋದ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕ್ಷೇತ್ರ ಬದಲಾವಣೆ ಕುರಿತು ಹೈಕಮಾಂಡ್ ನಲ್ಲಿ ಚರ್ಚೆ ನಡೆಯುತ್ತಿದ್ದು ಕಾಂಗ್ರೆಸಿನ ಹಿರಿಯ ನಾಯಕರುಗಳು ಸಿದ್ದರಾಮಯ್ಯನವರಿಗೆ ಕೋಲಾರದಿಂದ ಸ್ಪರ್ಧೆ ಮಾಡಬೇಡಿ ಎಂಬ ಸಲಹೆಯನ್ನು ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಇದರ ಜೊತೆಗೆ ರಾಜ್ಯದ ಹಾಗೂ ಸ್ಥಳೀಯ ನಾಯಕರುಗಳ ಜೊತೆ ಚರ್ಚೆ ನಡಿಸಲು ಸಿದ್ದರಾಮಯ್ಯನವರು ಮುಂದಾಗಿದ್ದಾರೆ. ಸಿದ್ದರಾಮಯ್ಯ ಅವರಿಗೆ ಉತ್ತರ ಕರ್ನಾಟಕದ ಬಾದಾಮಿ ಅಥವಾ ವಾರಣ ಚಾಮುಂಡೇಶ್ವರಿ ,ಈ ಮೂರು ಕ್ಷೇತ್ರಗಳಲ್ಲಿ ಆಯ್ಕೆ ಮುಂದಿದೆ ಮುಂದಿನ ರಾಜಕೀಯ ಬದಲಾವಣೆಗಳಲ್ಲಿ ಸಿದ್ದರಾಮಯ್ಯ ಅವರ ನಿರ್ಧಾರ ರಾಜ್ಯ ಚುನಾವಣಾ ರಾಜ್ಯ ರಾಜಕೀಯಕ್ಕೆ ಹೊಸ ತಿರುಗೇಟು ನೀಡಲಿದೆ ಎಂಬುದು ಸ್ಪಷ್ಟವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy