Author: admin

ಕೊಳ್ಳೇಗಾಲ: ತಾಲೂಕಿನ ಮಧುವನಹಳ್ಳಿ ಗ್ರಾಮದ ಜಿ.ವಿ.ಗೌಡ ನಗರದ ನಿವಾಸಿಯೊಬ್ಬನನ್ನು ತಲೆಗೆ ಹೊಡೆದು ಹತ್ಯೆ ಮಾಡಲಾಗಿದ್ದು ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹದೇವಸ್ವಾಮಿ( 45)  ಕೊಲೆಯಾದ ವ್ಯಕ್ತಿ. ಈತನಿಗೆ ಪತ್ನಿ , ಇಬ್ಬರು ಮಕ್ಕಳಿದ್ದಾರೆ. ಪತ್ನಿ ಹಾಗೂ ಮಗ ಪ್ರವಾಸಕ್ಕೆ ತೆರಳಿದ್ದರು. ಈ ನಡುವೆ ಮನೆಯಲ್ಲಿ ಯಾರು ಇಲ್ಲದ ವೇಳೆ ಮಹದೇವ ಸ್ವಾಮಿ ತಲೆಗೆ ಯಾರೋ ಹೊಡೆದು ಹತ್ಯೆಮಾಡಿದ್ದಾರೆ ಎನ್ನಲಾಗಿದೆ‌. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹವನ್ನು ಚಾಮರಾಜನಗರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತಮಿಳುನಾಡು : ಚೆಂಗಲ್ಪಟ್ಟು ಮೂಲದ ಕಟ್ಟಡ ಕಾರ್ಮಿಕನ ಪುತ್ರಿ 20 ವರ್ಷದ ರಕ್ಷಯಾ ಜೈಪುರದಲ್ಲಿ ನಡೆದ ‘ಮಿಸ್ ಇಂಡಿಯಾ’ ಸೌಂದರ್ಯ ಸ್ಪರ್ಧೆಯಲ್ಲಿ 2ನೇ ಸ್ಥಾನ ಗಳಿಸಿದ್ದಾಳೆ. ಕುಟುಂಬದ ಬಡತನದ ನಡುವೆಯೂ ತನ್ನ ಮಹತ್ವಾಕಾಂಕ್ಷೆಗಾಗಿ ಅರೆಕಾಲಿಕ ಕೆಲಸ ಮಾಡಿ ಸ್ಪರ್ಧೆಗೆ ಸಿದ್ಧಳಾದಳು. ಕಳೆದ ಸೆಪ್ಟಂಬರ್ ನಲ್ಲಿ ‘ಮಿಸ್ ತಮಿಳುನಾಡು’ ಪಟ್ಟ ಗೆದ್ದಿರುವುದು ಗಮನಾರ್ಹ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ತ್ರಿಶೂರ್: ವಡಕಂಚೇರಿ ಕುಂದನೂರ್ ಚುಂಗಟ್ ಹೋಟೆಲ್ ಗೆ ಕಾಲೇಜು ಬಸ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದಾನೆ, 12 ಮಂದಿ ಗಾಯಗೊಂಡಿದ್ದಾರೆ. ದೇಶಮಂಗಲಂ ಮಲಬಾರ್ ಕಾಲೇಜ್ ಆಫ್ ಇಂಜಿನಿಯರಿಂಗ್ ಬಸ್ ಅಪಘಾತಕ್ಕೀಡಾಗಿದೆ. ಹೋಟೆಲ್ ಉದ್ಯೋಗಿ ಮಾಂಗಾಡ್ ನಿವಾಸಿ ಸರಳಾ ಮೃತಪಟ್ಟಿದ್ದಾರೆ.. ಮಲಬಾರ್ ಇಂಜಿನಿಯರಿಂಗ್ ಕಾಲೇಜು ಬಸ್ ಇಂದು ಬೆಳಗ್ಗೆ ಕುಂದನೂರು ಚುಂಗಂ ಸೆಂಟರ್ ಬಳಿಯ ಪುಷ್ಪಾ ಹೋಟೆಲ್ ಗೆ ನುಗ್ಗಿದೆ. ಬಸ್ ವಡಕಂಚೇರಿಯಿಂದ ವಿದ್ಯಾರ್ಥಿಗಳು ಮತ್ತು ಶಿಕ್ಷಕರೊಂದಿಗೆ ಬರುತ್ತಿತ್ತು. ಅಪಘಾತದಲ್ಲಿ 11 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸೇರಿದ್ದಾರೆ. ಅಪಘಾತದ ನಂತರ ಬಸ್ಸಿನಲ್ಲಿದ್ದವರನ್ನು ಹಿಂಬದಿಯ ಗಾಜು ಒಡೆದು ಹೊರ ತೆಗೆಯಲಾಯಿತು.ವಡಕಂಚೇರಿ ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ. ಅಪಘಾತದಲ್ಲಿ ಹೋಟೆಲ್ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಚಾಲಕನಿಗೆ ತಲೆ ಸುತ್ತಿಕೊಂಡಿರುವುದೇ ಅಪಘಾತಕ್ಕೆ ಕಾರಣ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಚೀನಾದಲ್ಲಿ ಪ್ರಸ್ತುತ ಕರೋನಾ ಅಲೆಗಳ ಜೊತೆಗೆ ಮೂರು ತಿಂಗಳಲ್ಲಿ ಮೂರು ಅಲೆಗಳು ಬರುವ ಸಾಧ್ಯತೆಯಿದೆ ಎಂದು ಚೈನೀಸ್ ಸೆಂಟರ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ (ಸಿಡಿಸಿ) ಎಚ್ಚರಿಸಿದೆ. ಪ್ರಸ್ತುತ ಕರೋನಾ ಅಲೆಯು ಜನವರಿ ಮಧ್ಯದ ವೇಳೆಗೆ ಕೊನೆಗೊಳ್ಳಲಿದೆ ಎಂದು ಅದು ಹೇಳಿದೆ, ನಂತರ ಪ್ರಕರಣಗಳು ಮತ್ತೆ ಹೆಚ್ಚಾಗಲು ಪ್ರಾರಂಭವಾಗುತ್ತದೆ ಮತ್ತು ಎರಡನೇ ತರಂಗ ಅನುಸರಿಸುತ್ತದೆ. ಮೂರನೇ ತರಂಗ ಫೆಬ್ರವರಿ ಅಂತ್ಯದಲ್ಲಿ ಬರುವ ಅಂದಾಜಿದೆ. ಸಾರ್ವಜನಿಕ ಪ್ರತಿಭಟನೆಯಿಂದಾಗಿ ಚೀನಾದಲ್ಲಿ ಶೂನ್ಯ ಕೋವಿಡ್ ನೀತಿಯನ್ನು ತೆಗೆದುಹಾಕಿದ ನಂತರ, ಅಲ್ಲಿ ಕರೋನಾ ಪ್ರಕರಣಗಳ ಸಂಖ್ಯೆ ಘಾತೀಯವಾಗಿ ಹೆಚ್ಚುತ್ತಿದೆ. ಎಲ್ಲ ಆಸ್ಪತ್ರೆಗಳು ರೋಗಿಗಳಿಂದ ತುಂಬಿ ತುಳುಕುತ್ತಿವೆ. ಹಾಸಿಗೆ ಮತ್ತು ಔಷಧಿಗಳ ಕೊರತೆ ಇದೆ. ಸ್ಮಶಾನಗಳಲ್ಲಿ ರಾಶಿ ಬೀಳುವ ಶವಗಳ ಸಂಖ್ಯೆಯೂ ಹೆಚ್ಚಾಗಿದೆ ಎಂದು ಹಾಂಗ್ ಕಾಂಗ್ ಪೋಸ್ಟ್ ಇತ್ತೀಚೆಗೆ ವರದಿ ಮಾಡಿದೆ. ಪ್ರತಿದಿನ ಸುಮಾರು 50,000 ಕೊರೊನಾ ಸೋಂಕು ಪ್ರಕರಣಗಳು ವರದಿಯಾಗುತ್ತಿವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493…

Read More

ಕೇಂದ್ರ ಸಾಹಿತ್ಯ ಅಕಾಡೆಮಿಯು ಸಾಹಿತ್ಯ ಕೃತಿಗಳಿಗೆ ನೀಡುವ ಪ್ರಶಸ್ತಿಗಳನ್ನು ಘೋಷಿಸಿದೆ. ಪುಸ್ತಕ ಪ್ರಶಸ್ತಿಗೆ ಕನ್ನಡದ ಲೇಖಕ ಡಾ.ಮೂಾಕೂಡು ಚಿನ್ನಸ್ವಾಮಿ ಅವರ ‘ಬಹುತ್ವದ ಭಾರತ ಮತ್ತು ಬೌದ್ಧ ತಾತ್ವಿಕತೆ’ ಕೃತಿ, ಅನುವಾದ ಪ್ರಶಸ್ತಿಗೆ ಪದ್ಮರಾಜ ದಂಡಾವತಿ ಅವರ ‘ಸೀತಾ:ರಾಮಾಯಣದ ಸಚಿತ್ರ ಮರುಕಥನ’ ಕೃತಿ ಆಯ್ಕೆಯಾಗಿದೆ. ಪುಸ್ತಕ ಪ್ರಶಸ್ತಿ 11 ಲಕ್ಷ ನಗದು ಹಾಗೂ ಅನುವಾದ ಪ್ರಶಸ್ತಿ 50,000 ನಗದು, ಸನ್ಮಾನ ಒಳಗೊಂಡಿವೆ. ಮಾರ್ಚ್‌ನಲ್ಲಿ ದೆಹಲಿಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಅನುದಾನ ಮತ್ತು ಉಚಿತಗಳನ್ನು ಪರಿಸ್ಥಿತಿಗೆ ಅನುಗುಣವಾಗಿ ಮತ್ತು ಹಣಕಾಸಿನ ನಿಯಮಗಳ ಪ್ರಕಾರ ನೀಡಬೇಕು ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. “ಉಚಿತ” ಮತ್ತು ಅನುದಾನಗಳು ಸಾಂದರ್ಭಿಕವಾಗಿರಬೇಕು ಮತ್ತು ಬಜೆಟ್ ವ್ಯವಸ್ಥೆಗಳು ಹಣಕಾಸಿನ ನಿಯಮಗಳಿಗೆ ಅನುಗುಣವಾಗಿದ್ದರೆ ಅಂತಹ ಭರವಸೆಗಳನ್ನು ಯಾರೂ ವಿರೋಧಿಸುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.ರಾಜ್ಯಸಭೆಯಲ್ಲಿ ಅನುದಾನಕ್ಕೆ ಪೂರಕ ಬೇಡಿಕೆಗಳ ಮೇಲಿನ ಚರ್ಚೆಗೆ ಉತ್ತರಿಸಿದ ಸಚಿವರು, ಪಾರದರ್ಶಕತೆ ಮತ್ತು ಶಾಸನಬದ್ಧ ಹಣಕಾಸು ನಿಯಮಗಳು ಮತ್ತು ಶಿಸ್ತಿನ ಅನುಸರಣೆ ಇರಬೇಕು. ಚರ್ಚೆಯ ಸಂದರ್ಭದಲ್ಲಿ, ಆಮ್ ಆದ್ಮಿ ಪಕ್ಷದ ನಾಯಕ ರಾಘವ್ ಚಡ್ಡಾ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು, ಅನುದಾನಕ್ಕಾಗಿ ಪೂರಕ ಬೇಡಿಕೆಗಳಲ್ಲಿನ ಕಲ್ಯಾಣ ಯೋಜನೆಗಳು “ಸಬ್ಸಿಡಿ” ಆಗಿದ್ದರೆ, ಪ್ರತಿಪಕ್ಷಗಳು ಸಾರ್ವಜನಿಕ ಕಲ್ಯಾಣಕ್ಕಾಗಿ ಖರ್ಚು ಮಾಡುವುದನ್ನು ಬಿಜೆಪಿಯು ಉಚಿತವೆಂದು ಪರಿಗಣಿಸಿದೆ ಎಂದು ಹೇಳಿದರು. ಅನುದಾನಗಳು ಮತ್ತು ಉಚಿತಗಳು ಸಾಂದರ್ಭಿಕವಾಗಿರಬೇಕು. ನಿಮ್ಮ ಬಜೆಟ್‌ನಲ್ಲಿ ಅದನ್ನು ಹಾಕಿದರೆ ಮತ್ತು ನಿಮ್ಮ ಆದಾಯ ಬಂದಾಗ ಅದಕ್ಕೆ ವ್ಯವಸ್ಥೆ ಮಾಡಿದರೆ, ಯಾರಾದರೂ…

Read More

ಚೀನಾ ಸೇರಿ ಹಲವು ದೇಶಗಳಲ್ಲಿ ಕೊರೋನಾ ಹೆಚ್ಚುತ್ತಿದ್ದು, ರಾಜ್ಯದಲ್ಲೂ ಕೋವಿಡ್ ಆತಂಕ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಜತೆ ಚರ್ಚಿಸಿ ಮಾರ್ಗಸೂಚಿ ಬಿಡುಗಡೆ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ಸುಧಾಕರ್, ಈಗಾಗಲೇ ಕೇಂದ್ರ ಆರೋಗ್ಯ ಸಚಿವರಿಗೆ ಪತ್ರ ಬರೆಯಲಾಗಿದೆ. ರಾಜ್ಯದಲ್ಲಿ 3ನೇ ಡೋಸ್ ಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ನಿನ್ನೆ ಮುಖ್ಯಕಾರ್ಯದರ್ಶಿ ಜೊತೆ ಸಭೆ ನಡೆಸಿದ್ದೇನೆ. ಮುಂದಿನ ಕ್ರಮಗಳ ಬಗ್ಗೆ ಸಭೆ ನಡೆಸಿ ಚರ್ಚಿಸಲಾಗುತ್ತದೆ ಎಂದರು. ಜಿನೋಮಿಕ್ ಟೆಸ್ಟ್ ಗೆ ಸೂಚಿಸಿದ್ದೇನೆ. ಜನದಟ್ಟಣೆ ಇರುವ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗುತ್ತದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ 3ನೇ ಡೋಸ್ ಲಸಿಕೆ ಪಡೆಯದವರ ಬಗ್ಗೆಯೂ ನಿಗಾ ವಹಿಸುತ್ತೇವೆ ಎಂದು ಸಚಿವ ಸುಧಾಕರ್ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ಸೇರಿ ಐವರು ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೈಸೂರು ಎಸ್.ಪಿ ಆರ್.ಚೇತನ್ ಅವರನ್ನ ಗುಪ್ತಚರ ವಿಭಾಗದ ಎಸ್ ಪಿ ಆಗಿ ವರ್ಗಾವಣೆ ಮಾಡಲಾಗಿದೆ. ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೀಮಾ ಲಟ್ಕರ್ ಅವರನ್ನ ವರ್ಗಾಯಿಸಲಾಗಿದೆ. ಶಿವಪ್ರಕಾಶ್ ಅವರನ್ನ ಸಿಸಿಬಿ ಬೆಂಗಳೂರು ವಿಭಾಗದ ಎಐಜಿಪಿಯಾಗಿ, ಎಂ. ಮುತ್ತುರಾಜ್ ಅವರನ್ನ ಮೈಸೂರು ಕಾನೂನು ಸುವ್ಯವಸ್ಥೆ ಡಿಸಿಪಿಯಾಗಿ ಹಾಗೂ ಬಾಬುಸಾಬ್ ನೇಮೆಗೌಡ ಅವರನ್ನ ಗದಗ ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಯೂನಿವರ್ಸಿಟಿ ಗ್ರ್ಯಾಂಟ್ಸ್ ಕಮೀಷನ್ (ಯುಜಿಸಿ) ಇತ್ತೀಚೆಗೆ ದೇಶದಾದ್ಯಂತ ವಿದ್ಯಾರ್ಥಿಗಳು ಶೀಘ್ರದಲ್ಲೇ ತಮ್ಮ ಮಾತೃ ಭಾಷೆಯಲ್ಲಿ ಪರೀಕ್ಷೆಗಳನ್ನು ಬರೆಯುವ ಅವಕಾಶ ಪಡೆದುಕೊಳ್ಳಬಹುದು ಎಂದು ತಿಳಿಸಿದೆ. ಕನ್ನಡ, ಮಲಯಾಳಂ, ಮರಾಠಿ, ಒಡಿಯಾ, ಬಂಗಾಳಿ, ಗುಜರಾತಿ, ತಮಿಳು ಹಾಗೂ ತೆಲುಗು ಸೇರಿದಂತೆ ಒಟ್ಟು ೧೨ ಭಾಷೆಗಳಿಗೆ ವಿವಿಧ ಕೋರ್ಸ್ಗಳ ಪಠ್ಯಪುಸ್ತಕಗಳನ್ನು ಅನುವಾದಿಸುವ ಕಾರ್ಯ ಆರಂಭಿಸುವ ಸಿದ್ಧತೆಗಳು ನಡೆಯುತ್ತಿವೆ. ಕೇಂದ್ರ ಶಿಕ್ಷಣ ಇಲಾಖೆಯ ಅಡಿಯಲ್ಲಿಯುಜಿಸಿ, ಆಂಗ್ಲ ಭಾಷೆಯ ಪಠ್ಯಪುಸ್ತಕಗಳನ್ನು ವಿವಿಧ ಭಾರತೀಯ ಭಾಷೆಗಳಿಗೆ ಅನುವಾದ ಮಾಡಿಸುವ ನಿಟ್ಟಿನಲ್ಲಿ ಹಲವು ಪ್ರಕಾಶರಿಗೆ ಜವಾಬ್ದಾರಿ ವಹಿಸುವ ಕಾರ್ಯವನ್ನು ಆರಂಭಿಸಿದೆ. ಪ್ರಸ್ತುತ ಬೆಂಗಳೂರಿನಲ್ಲಿರುವ ವಿಶ್ವವಿದ್ಯಾಲಯಗಳು ಹಾಗೂ ಕಾಲೇಜುಗಳಲ್ಲಿ ಬಿ.ಎ., ಬಿ.ಎಸ್‌ಸಿ, ಅಥವಾ ಬಿ.ಕಾಂ. ವಿದ್ಯಾರ್ಥಿಗಳಿಗೆ ವಿಶೇಷವಾಗಿ ಕನ್ನಡ ಮಾಧ್ಯಮದ ಬೋಧನೆ ಲಭ್ಯವಿಲ್ಲ. ಆದಾಗ್ಯೂ, ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆಯನ್ನು ಕನ್ನಡ ಅಥವಾ ಆಂಗ್ಲ ಭಾಷೆಯಲ್ಲಿ ಉತ್ತರಿಸುವ ಆಯ್ಕೆಯನ್ನು ಒದಗಿಸಲಾಗುತ್ತಿದೆ. “ದೆಹಲಿ, ಉತ್ತರ ಪ್ರದೇಶ ಹಾಗೂ ಬಿಹಾರ ರಾಜ್ಯಗಳಲ್ಲಿ ಈಗಾಗಲೇ ಅನೇಕ ಕೋರ್ಸುಗಳನ್ನು ಅಧಿಕೃತವಾಗಿ ಹಿಂದಿಯಲ್ಲೇ ಬೋಧನೆ ಮಾಡಲಾಗುತ್ತಿದೆ. ತಾಂತ್ರಿಕ ಹಾಗೂ ವೈದ್ಯಕೀಯ ಕೋರ್ಸುಗಳನ್ನು…

Read More

ಚೀನಾ ಸೇರಿ ಹಲವು ದೇಶಗಳಲ್ಲಿ ಮಹಾಮಾರಿ ಕೊರೋನಾ ಉಲ್ಪಣವಾಗುತ್ತಿದ್ದು ಭಾರತಕ್ಕೂ ಆತಂಕ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಮುಂದಾಗಿದೆ. ಇಂದು ಮಧ್ಯಾಹ್ನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಹಿರಿಯ ಅಧಿಕಾರಿಗಳು ತಜ್ಞರು ಪಾಲ್ಗೊಳ್ಳಲಿದ್ದಾರೆ. ದೇಶದಲ್ಲಿ ಕೋವಿಡ್ ಪರಿಸ್ಥಿತಿ ಬಗ್ಗೆ ಪ್ರಧಾನಿ ಮೋದಿ ಅವರು ಅಧಿಕಾರಿಗಳು ಮತ್ತು ತಜ್ಞರ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ಈಗಾಗಲೇ ಕೋವಿಡ್ ತಡೆಗಾಗಿ ಕಟ್ಟಚ್ಚರ ವಹಿಸಿದ್ದು ಚೀನಾದಿಂದ ಬರುವ ಪ್ರವಾಸಿಗರ ಮೇಲೆ ನಿಗಾವಹಿಸಲಾಗುತ್ತಿದೆ. ಚೀನಾ ಸೇರಿದಂತೆ ಇತರ ದೇಶಗಳಿಂದ ಆಗಮಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ವಿಮಾನ ನಿಲ್ದಾಣಗಳಲ್ಲಿ ಮತ್ತೆ ಕೋವಿಡ್ ಪರೀಕ್ಷೆಗೆ ಕೇಂದ್ರ ಆರೋಗ್ಯ ಇಲಾಖೆ ಆದೇಶ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More