Subscribe to Updates
Get the latest creative news from FooBar about art, design and business.
- ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
- ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
- ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ
- ಬೌದ್ಧ ಧರ್ಮವು ಸಮಾನತೆ, ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ: ಹರಾ ಮಹೇಶ್
- ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಹೆಣ್ಣು ಮಕ್ಕಳಿಗೆ ಉಚಿತ ಲಸಿಕೆ: ಶಾಸಕ ಡಾ.ಎಚ್.ಡಿ.ರಂಗನಾಥ್
- ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ
- ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ
- ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
Author: admin
ಬೆಳಗಾವಿ: ಪ್ರಸ್ತುತ ಸಂದರ್ಭದಲ್ಲಿ ಜೈನ ಧರ್ಮದ ಸಂದೇಶಗಳನ್ನು ಹೆಚ್ಚು ಹೆಚ್ಚು ಪ್ರಚಾರಗೊಳಿಸಬೇಕಾದ ಅಗತ್ಯವಿದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಮುತ್ನಾಳ ಗ್ರಾಮದಲ್ಲಿ ಶುಕ್ರವಾರ ನಡೆದ ಭಗವಾನ ಶ್ರೀ 1008 ಆದಿನಾಥ ತೀರ್ಥಂಕರ ಜಿನಬಿಂಬ ಪಂಚಕಲ್ಯಾಣ ಮಹಾ ಮಹೋತ್ಸವ ಹಾಗೂ ಭಗವಾನ ಶ್ರೀ ಬಾಹುಬಲಿ ಭವ್ಯ ಪ್ರತಿಮೆಯ ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡುತ್ತಿದ್ದರು. ಇಂದು ಸಮಾಜದಲ್ಲಿ ನಾವು ಬಯಸುವುದು ಶಾಂತಿಯನ್ನು. ತನ್ಮೂಲಕ ಎಲ್ಲರೂ ನೆಮ್ಮದಿಯಿಂದ ಬಾಳುವಂತಾಗಬೇಕು. ಜೈನ ಧರ್ಮದ ಸಂದೇಶದಲ್ಲಿ ಶಾಂತಿ, ಅಂಹಿಂಸೆಗೆ ಮೊದಲ ಆದ್ಯತೆ ನೀಡಲಾಗಿದೆ. ಎಲ್ಲರೂ ಅದನ್ನು ಅಳವಡಿಸಿಕೊಂಡಾಗ ಸುಖ, ಶಾಂತಿ, ನೆಮ್ಮದಿ ಕಾಣಲು ಸಾಧ್ಯವಿದೆ ಎಂದು ಅವರು ಹೇಳಿದರು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪರಮಪೂಜ್ಯ ಭಟ್ಟಾರಕ ಭಟ್ಟಾಚಾರ್ಯ ಸ್ವಸ್ತಿ ಶ್ರೀ ಭಟ್ಟಾಕಲಂಕ ಸ್ವಾಮೀಜಿ ಸೋಂದಾಮಠ, ಪರಮಪೂಜ್ಯ ಭಟ್ಟಾರಕ ಪಟ್ಟಾಚಾರ್ಯ ಸ್ವಸ್ತಿ ಅಭಿನವ ಲಕ್ಷ್ಮೀಸೇನ ಮಹಾಸ್ವಾಮೀಜಿ, ಕೊಲ್ಹಾಪುರ, ಷ ಭ್ರ ಶ್ರೀ ಶಿವಾನಂದ ಶಿವಾಚಾರ್ಯ ಮಹಾಸ್ವಾಮಿಗಳು ಕೇದಾರ ಶಾಖಾಪೀಠ ಮುತ್ನಾಳ ಇವರು ವಹಿಸಿದ್ದರು. ಈ ಸಮಯದಲ್ಲಿ ಗ್ರಾಮದ…
ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಬಿ.ವೈ.ವಿಜಯೇಂದ್ರಗೆ ಟಿಕೆಟ್ ನೀಡುವ ಸುಳಿವನ್ನು ಸಿಎಂ ಬಸವರಾಜ ಬೊಮ್ಮಾಯಿ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, ನನ್ನ ಕ್ಲಿಸ್ಟ ಪರಿಸ್ಥಿತಿಯಲ್ಲಿ, ಸವಾಲುಗಳನ್ನು ಎದುರಿಸುವಂತ ಶಕ್ತಿ ನೀಡಿದವರು ಬಿ.ಎಸ್.ಯಡಿಯೂರಪ್ಪ. ಅವರ ನನ್ನ ನಡುವೆ ತಂದೆ–ಮಕ್ಕಳ ಸಂಬಂಧವಿದೆ. ಅದು ಎಲ್ಲಾ ಭಾವನೆಯನ್ನು ಮೀರಿದ್ದಾಗಿದೆ ಎಂದರು. ಶಿಕಾರಿಪುರ ಮತ್ತೆ ಅವರಿಗೆ ಅವಿನಾಭಾವ ಸಂಬಂಧ. ಅವರನ್ನು ನಾನು ಎಷ್ಟು ಬಾರಿ ಮಾತನಾಡಿದರೂ ಶಿಕಾರಿಪುರದ ಅಭಿವೃದ್ಧಿಯ ಬಗ್ಗೆಯೇ ಮಾತನಾಡುತ್ತಾರೆ ಎಂಬುದಾಗಿ ತಿಳಿಸಿದರು. ಶಿವಶರಣೆ, ವೈಚಾರಿಕ ಕ್ರಾಂತಿ ನಡೆಸಿದ ಅಕ್ಕಮಹಾದೇವಿಯವರ ಪ್ರತಿಮೆ ಸ್ಥಾಪಿಸಿ, ಶಿವಶರಣರಿಗೆ ದೊಡ್ಡ ಕಾಣಿಕೆಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ತುರುವೇಕೆರೆ: ಪಟ್ಟಣದ ಮಹೇಂದ್ರ ರಸ್ತೆಯಲ್ಲಿರುವ ಪೊಲೀಸ್ ವೃತ ನಿರೀಕ್ಷಕರ ಕಚೇರಿಯದುರಿನ ಕಾರು ಚಾಲಕರ ಮತ್ತು ಮಾಲೀಕರ ಸಂಘವು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಜನ್ಮ ದಿನವನ್ನು ಆಚರಿಸಿತು. ತುರುವೇಕೆರೆ ವೃತ್ತದ ಪೊಲೀಸ್ ನಿರೀಕ್ಷಕರಾದ ಗೋಪಾಲ್ ನಾಯಕ್ ರವರು ಕೆಕ್ ಕತ್ತರಿಸುವ ಮೂಲಕ ಅಪ್ಪು ಹುಟ್ಟುಕ್ಕೆ ಚಾಲನೆ ನೀಡಿದರು. ಇದೇ ವೇಳೆ ಸಂಘದ ಆಟೋ ಚಾಲಕರು ಮತ್ತು ಮಾಲೀಕರ ಕಾರ್ಯವನ್ನುಶ್ಲಾಘಿಸಿ ಶುಭಾಶಯ ಕೋರಿದರು. ಇದೇ ಸಂದರ್ಭದಲ್ಲಿ ಸಾರ್ವಜನಿಕರಿಗೆ ನಾಯಕ್ ರವರು ಬಿರಿಯಾನಿ ಬಡಿಸಿದರು. ಈ ಸಂದರ್ಭದಲ್ಲಿ ನೂರಾರು ಪುನೀತ್ ರಾಜಕುಮಾರ್ ಅಭಿಮಾನಿಗಳು ಆಟೋ ಚಾಲಕರು ಮತ್ತು ಮಾಲೀಕರುಗಳು ಸಾರ್ವಜನಿಕರು ಉಪಸ್ಥಿತರಿದ್ದರು. ವರದಿ: ಸುರೇಶ್ ಬಾಬು ಎಂ. ತುರುವೇಕೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಕರ್ನಾಟಕ ರಾಷ್ಟ್ರ ಸಮಿತಿ(ಕೆಆರ್ ಎಸ್) ಪಕ್ಷದ ಕುಣಿಗಲ್ ತಾಲೂಕು ಘಟಕದ ವತಿಯಿಂದ ಇಂದು ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಘಟಕದ ಸಂಚಾಲಕರ ಶ್ರೀನಿವಾಸಮೂರ್ತಿ ಅವರು, ಕಳೆದ ಮೂರು ದಶಕದಲ್ಲಿ ರಾಜಕಾರಣ ಸರಿಪಡಿಸಲಾಗದ ಮಟ್ಟಕ್ಕೆ ಹಾಳಾಗಿದ್ದು, ತತ್ವ, ಸಿದ್ಧಾಂತ, ನೈತಿಕತೆ, ಸಾಮಾಜಿಕ ಕಳಕಳಿಗಳನ್ನು ಎಲ್ಲಾ ಪಕ್ಷಗಳು ಮೂಲೆಗುಂಪು ಮಾಡಿ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಕುಟುಂಬ ರಾಜಕಾರಣವನ್ನು ಎಗ್ಗಿಲ್ಲದೆ ನಡೆಸುತ್ತಿದ್ದಾರೆ. ಜನ ಸಾಮಾನ್ಯರ ಬದುಕನ್ನು ಆಯೋಮಯವನ್ನಾಗಿ ಮಾಡಿ, ಬರಿ ಹಣ ಹಾಕಿ, ಹಣ ತೆಗೆಯುವ ರಾಜಕಾರಣದಲ್ಲಿ ಮುಳುಗಿದ್ದು, ಎಲ್ಲಾ ಪಕ್ಷಗಳು ಒಂದು ರೀತಿಯ ಮೂರು ತಲೆಯ ಒಂದೇ ಹಾವು ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಸವಣ್ಣ ಗಾಂಧಿ ಇತ್ಯಾದಿ ಮಹಾಪುರುಷರ ಆಶಯದ ರಾಜಕಾರಣ ಮಾಡುವ ಸಲುವಾಗಿ ಕರ್ನಾಟಕ ಸಮಿತಿ ನಿರಂತರವಾಗಿ ಶ್ರಮಿಸುತ್ತಿದ್ದು, ನಮ್ಮ ತಾಲೂಕಿಗೆ ರಘು ಜಾಣಗೆರೆಯವರನ್ನು ಅಧಿಕೃತ ಅಭ್ಯರ್ಥಿಯನ್ನಾಗಿ ಪಕ್ಷವು ಘೋಷಿಸಿದೆ. ರಘು ಜಾಣಗೆರೆಯವರ ಅಧ್ಯಯನಶೀಲತೆ, ಸಾಮಾಜಿಕ ಕಳಕಳಿ ವಾಕ್ಚಾತುರ್ಯ, ಕಾನೂನಿನ ಅರಿವು , ಸಜ್ಜನ…
ತುರುವೇಕೆರೆ: ಹಾಲಿ ಶಾಸಕರಾಗಿರುವ ಮಸಾಲ ಜೈರಾಮ್ ರವರು ಮಹಾನ್ ಸುಳ್ಳುಗಾರ, ಯಾರೋ ಹುಟ್ಟಿಸಿದ ಮಗುವಿಗೆ ಯಾರದ್ದೋ ಹೆಸರು ಎಂದು ಮಾಜಿ ಶಾಸಕ ಎಂ.ಟಿ. ಕೃಷ್ಣಪ್ಪ ಹಾಲಿ ಶಾಸಕ ಮಸಾಲ ಜೈರಾಮ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತುರುವೇಕೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಐದು ವರ್ಷಗಳಲ್ಲಿ ಹಾಲಿ ಶಾಸಕರ ಸಾಧನೆ ನಮ್ಮ ತಾಲೂಕಿನಲ್ಲಿ ಶೂನ್ಯವಾಗಿದೆ, ನನ್ನ ಅಧಿಕಾರದ ಅವಧಿಯಲ್ಲಿ ಮಂಜೂರಾದ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಅದರಲ್ಲಿ ಕಮಿಷನ್ ಹೊಡೆಯುವುದೇ ದೊಡ್ಡ ಸಾಧನೆಯಾಗಿದೆ. ಆದರೆ ಕಣ್ಣೀರಿಟ್ಟು ನಾನೇ ಮಂಜೂರು ಮಾಡಿಸಿದೆ ಎಂದು ಜನರನ್ನು ನಂಬಿಸಿ ಗಿಮಿಕ್ ಮಾಡುತ್ತಿದ್ದಾರೆ, ಅವರಿಗೂ ಇದೆಲ್ಲದರ ಅರಿವಿದೆ ಎಂದರು. ಇನ್ನು ದಬ್ಬೇಘಟ್ಟ ಹೋಬಳಿಯ ಏತ ನೀರಾವರಿ ಯೋಜನೆಗೆ 2019ರಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಅವರ ಮೈತ್ರಿ ಸರ್ಕಾರದಲ್ಲಿ ನಾನು ಮಂಜೂರು ಮಾಡಿಸಿದ್ದೆ, ಗುಡ್ಡೇನಹಳ್ಳಿ , ಡಣನಾಯಕನಪುರ, ಕಾವಲ್ ಬಾಣಸಂದ್ರ, ಕಡೆಹಳ್ಳಿ ಕವಲ್, ಏತಾ ನೀರಾವರಿ ಯೋಜನೆಗಳಿಗೆ ಪ್ರಸ್ತಾವನೆಯನ್ನು 2017ರಲ್ಲಿ ಸಲ್ಲಿಸಲಾಗಿತ್ತು, ನಂತರ 2019…
ತುರುವೇಕೆರೆ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ತುಮಕೂರು ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹಾಗೂ ತುರುವೇಕೆರೆ ವಿಧಾನಸಭಾ ಕ್ಷೇತ್ರದ 2023ರ ಎಂಎಲ್ ಎ ಅಭ್ಯರ್ಥಿ ರಾಮಪ್ರಸಾದ್ ಪತ್ರಿಕಾ ಮಾಧ್ಯಮಗೋಷ್ಠಿ ನಡೆಸಿದರು. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿಗೆ ಯಾವೆಲ್ಲ ಯೋಜನೆಗಳನ್ನು ರೂಪಿಸಬೇಕು ಮತ್ತು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಬೇಕು, ಎನ್ನುವ ನಿಟ್ಟಿನಲ್ಲಿ ರಾಜ್ಯದ ಜನಸಾಮಾನ್ಯರ ಜೊತೆ ಮತ್ತು ಚಿಂತಕರು ಹಾಗೂ ತಜ್ಞರ ಜೊತೆ ಹಲವಾರು ಸಭೆಗಳು ಮತ್ತು ಸಂವಾದಗಳನ್ನು ನಡೆಸಿದ, ನಂತರ ನಮ್ಮ ಪಕ್ಷದ ವತಿಯಿಂದ ಪ್ರಣಾಳಿಕೆಯನ್ನು ಸಿದ್ಧಪಡಿಸಿದ್ದು ಅದರ ಪ್ರಮುಖ ಅಂಶಗಳನ್ನು ಈ ಪತ್ರಿಕಾ ಟಿಪ್ಪಣಿಯಲ್ಲಿ ವಿವರಿಸುತ್ತಿದ್ದೇನೆ ಎಂದರು. ಮೊದಲನೆಯದಾಗಿ ಭ್ರಷ್ಟಾಚಾರ ಮುಕ್ತ ದಕ್ಷ ಆಡಳಿತ ನೀಡುವುದು, ಮನೆ ಬಾಗಿಲಿಗೆ ಸರ್ಕಾರಿ ಸೇವೆ ಅಥವಾ ಆನ್ಲೈನ್ ಮೂಲಕ ಸಂಪೂರ್ಣ ಸೇವೆ ಲಭ್ಯ, ಪೋಲಿಸ್ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ, ಆರೋಗ್ಯದ ದೃಷ್ಟಿಯಿಂದ ರಾಜ್ಯದಲ್ಲಿ ಉತ್ಕೃಷ್ಟ ವೈದ್ಯಕೀಯ ಸಂಶೋಧನ ಕೇಂದ್ರ ಸ್ಥಾಪನೆ, ಶಿಕ್ಷಣಕ್ಕೆ ಸಂಬಂಧಿಸಿದಂತೆ ಎಲ್ಲಾ ಸರ್ಕಾರಿ ಶಾಲಾ ಕೊಠಡಿಗಳನ್ನು ಸ್ಮಾರ್ಟ್…
ತಾಲೂಕಿನ ಮಾಯಸಂದ್ರ ಹೋಬಳಿ ಶೆಟ್ಟಿಗೊಂಡನಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಶಾಸಕ ಮಸಾಲ ಜೈರಾಮ್ , ಈ ಹಿಂದೆ 15 ವರ್ಷಗಳ ಕಾಲ ಶಾಸಕರಾಗಿದ್ದ ಮಹನೀಯರು ಯಾಕೆ ಈ ತಾಲೂಕಿನಲ್ಲಿ ಅಭಿವೃದ್ಧಿಯ ಕೆಲಸಗಳನ್ನು ಈ ಭಾಗಕ್ಕೆ ಮಾಡಲಿಲ್ಲ ಎಂದು ಪ್ರಶ್ನಿಸಿದ್ದಾರೆ. ಒಮ್ಮೆ ಮಧ್ಯರಾತ್ರಿ ಹೇಮಾವತಿ ನೀರಿಗಾಗಿ ನಮ್ಮ ತಾಲೂಕಿನ ಒಂದು ಗ್ರಾಮದಲ್ಲಿ ಗಲಾಟೆಯಾದಾಗ ರಾತ್ರಿ 2 ಗಂಟೆಯಾದರೂ ಕೂಡ ನಾನು ಆ ಸ್ಥಳಕ್ಕೆ ಭೇಟಿ ನೀಡಿ, ಆ ಜಗಳವನ್ನು ಬಿಡಿಸಿ ಈ ತಾಲೂಕಿಗೆ ನೀರನ್ನು ಹರಿಸಲು ಎಷ್ಟು ಹೋರಾಟ ಮಾಡಿದ್ದೇನೆ ಎಂಬುದು ನಮ್ಮ ಶ್ರಮ ನಿಮಗೆ ಗೊತ್ತಿಲ್ಲ ನೀವು ನೋಡಿದರೆ ನಮ್ಮ ಅವಧಿಯಲ್ಲಿ ಕೆಲಸ ಆಗಿದೆ ಎಂದು ಹೇಳುತ್ತಿದ್ದೀರಾ ನಮ್ಮ ತಾಲೂಕಿಗೆ ಹೇಮಾವತಿ ನಿರ್ವಹಿಸಲು ಮುಖ್ಯ ಕಾರಣ ಯಾರೆಂಬುದು ನಿಮಗೆ ಗೊತ್ತಿದೆಯೇ ? ಸುಮ್ಮನೆ ನಾವು ಮಾಡಿದ್ದು ನಾವು ಮಾಡಿದ್ದು ಎಂದು ಹೇಳುತ್ತೀರಾ ಇದಕ್ಕೆ ಕಾರಣರಾದವರು ನಮ್ಮ ನಾಯಕರಾದ ಮಾಜಿ ಮುಖ್ಯಮಂತ್ರಿಗಳಾದ ಸದಾನಂದ ಗೌಡ ಎಂಬುದು…
ಕೆ.ಪಿ.ಟಿ. ಸಿ.ಎಲ್ ನೌಕರರು ವೇತನ ಪರಿಷ್ಕರಣೆಗೆ ಬೇಡಿಕೆ ಇಟ್ಟಿದ್ದರು. ನಮ್ಮ ಮಂತ್ರಿಗಳು ಸುದೀರ್ಘವಾಗಿ ಚರ್ಚಿಸಿ ಶೇ 20 ರಷ್ಟು ವೇತನ ಪರಿಷ್ಕರಣೆಗೆ ಒಪ್ಪಿದ್ದು, ಇಂದು ಆದೇಶ ಹೊರಡಿಸಲಾಗುವುದು ಎಂದರು. ಸಾರಿಗೆ ನೌಕರರಿಗೆ ಶೇ 15 ರಷ್ಟು ವೇತನ ಪರಿಷ್ಕರಣೆ ಸಾರಿಗೆ ಇಲಾಖೆ ನೌಕರರಿಗೆ ಶೇ 15 ರಷ್ಟು ವೇತನ ಪರಿಷ್ಕರಣೆ ಮಾಡಲು ತೀರ್ಮಾನ ಮಾಡಲಾಗಿದೆ. ಈ ಎರಡೂ ಆಜ್ಞೆ ಇಂದು ಹೊರಡಿಸಲಾಗುವುದು ಎಂದರು. ಕಾಡ್ಗಿಚ್ಚು ನಿಯಂತ್ರಣಕ್ಕೆ ಕ್ರಮ: ಬೇಸಿಗೆ ಕಾಲದಲ್ಲಿ ಅಲ್ಲಲ್ಲಿ ಕಾಡ್ಗಿಚ್ಚು ಆಗುವ. ಸಾಧ್ಯತೆಯಿರುವೆಡೆಯಲ್ಲಿ ಪೂರ್ವಭಾವಿ ತಾಂತ್ರಿಕ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ. ಪ್ರಸ್ತುತ ಕಾಡ್ಗಿಚ್ಚನ್ನು ನಂದಿಸುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು. ಕನ್ನಡಿಗರಿಗೆ ಆರೋಗ್ಯ ವಿಮೆ ಯೋಜನೆಯ ಮಹಾರಾಷ್ಟ್ರ ಸಚಿವ ಸಂಪುಟದ ನಿರ್ಣಯವನ್ನು ತೀವ್ರವಾಗಿ ಖಂಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL…
ಲಂಚ ಪಡೆಯುತ್ತಿದ್ದ ವೇಳೆ ಬೆಸ್ಕಾಂ ಎಇಇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಚಿತ್ರದುರ್ಗದ ಹೊಸದುರ್ಗದಲ್ಲಿ ಬೆಸ್ಕಾಂ ಎಎಇ ತಿರುಪತಿ ನಾಯ್ಕ್ ಎಂಬುವವರು ವಿದ್ಯುತ್ ಗುತ್ತಿಗೆದಾರರ ಬಳಿ ಸರ್ವೀಸ್ ಕನೆಕ್ಷನ್ ಗಾಗಿ 20 ಸಾವಿರ ರೂ. ಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಪೈಕಿ 10 ಸಾವಿರ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್ ಪಿ ವಾಸುದೇವ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಬಿ.ಎಸ್. ಯಡಿಯೂರಪ್ಪ ಅವರ ಆಪ್ತ ಮೋಹನ್ ಲಿಂಬಿಕಾಯಿ ಬಿಜೆಪಿಗೆ ರಾಜೀನಾಮೆ ನೀಡಿದ್ದು ಇಂದೇ ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮೋಹನ್ ಲಿಂಬಿಕಾಯಿ ಇಂದು ಬೆಳಗ್ಗೆ ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಸಹಾಯಕರ ಮೂಲಕ ಮಲ್ಲೇಶ್ವರದಲ್ಲಿರುವ ಬಿಜೆಪಿ ರಾಜ್ಯ ಕಚೇರಿಗೆ ರಾಜೀನಾಮೆ ಪತ್ರ ತಲುಪಿಸಿದ ಲಿಂಬಿಕಾಯಿ, ಇಂದು ಸಂಜೆ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ಬಿ.ಎಸ್.ಯಡಿಯೂರಪ್ಪ ಬಿಜೆಪಿ ತ್ಯಜಿಸಿ ಕೆಜೆಪಿ ಕಟ್ಟಿದ ವೇಳೆ ಮೊದಲನೆಯದಾಗಿ ರಾಜೀನಾಮೆ ಸಲ್ಲಿಸಿದ್ದು ಮೋಹನ್ ಲಿಂಬಿಕಾಯಿ ಅವರಾಗಿದ್ದರು. ಅಂದು ವಿಧಾನಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿ ಬಿಎಸ್ವೈ ಹಿಂದೆ ಸಾಗಿದ್ದರು. ಹುಬ್ಬಳ್ಳಿ – ಧಾರವಾಡ ಪಶ್ಚಿಮ ಕ್ಷೇತ್ರದಿಂದ ಕೆಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು ಸೋತಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA