Subscribe to Updates
Get the latest creative news from FooBar about art, design and business.
- ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
- ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
- ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ
- ಬೌದ್ಧ ಧರ್ಮವು ಸಮಾನತೆ, ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ: ಹರಾ ಮಹೇಶ್
- ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಹೆಣ್ಣು ಮಕ್ಕಳಿಗೆ ಉಚಿತ ಲಸಿಕೆ: ಶಾಸಕ ಡಾ.ಎಚ್.ಡಿ.ರಂಗನಾಥ್
- ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ
- ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ
- ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
Author: admin
ನೇಣುಬಿಗಿದುಕೊಂಡು ನಗರಸಭೆ ಸದಸ್ಯ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ನಡೆದಿದೆ.ಪುತ್ತೂರು ನಗರಸಭೆ ಸದಸ್ಯ ಶಿವರಾಮ ಸಫಲ್ಯ ಆತ್ಮಹತ್ಯೆಗೆ ಶರಣಾದವರು. ಉರಮಾಲ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುತ್ತೂರು ವಾರ್ಡ್ ನಂ.1ರ ಸದಸ್ಯರಾಗಿದ್ದ ಶಿವರಾಮ ಸಫಲ್ಯ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ತನಿಖೆ ನಂತರವಷ್ಟೇ ಆತ್ಮಹತ್ಯೆಯ ಹಿಂದಿನ ಕಾರಣ ತಿಳಿದು ಬರಬೇಕಿದೆ. ಸ್ಥಳಕ್ಕೆ ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್ ಸೇರಿದಂತೆ ಹಲವರು ಭೇಟಿ ನೀಡಿದ್ದಾರೆ. ಪುತ್ತೂರು ಟೌನ್ ಪೊಲೀಸರೂ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಮಹಾರಾಷ್ಟ್ರದಿಂದ ಬೆಳಗಾವಿ ಗಡಿ ಗ್ರಾಮಗಳಿಗೆ ಷಡ್ಯಂತ್ರದಿಂದ ಯೋಜನೆ ಘೋಷಣೆ ಮಾಡಿದ್ದಾರೆ ಇಷ್ಟಾದ್ರೂ ಸಿಎಂಗೆ ಜವಾಬ್ದಾರಿ ಇಲ್ಲವಾ…? ಎಂದು ಸಿಎಂ ಬಸವರಾಜ ಬೊಮ್ಮಾಯಿಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ತರಾಟೆ ತೆಗೆದುಕೊಂಡರು. ಸಿಎಂ ಬೊಮ್ಮಾಯಿ ಕೇಂದ್ರ ಅಡಿಯಾಳಾಗಿ ಕೆಲಸ ಮಾಡುತ್ತಿದ್ದಾರೆ. ನಾವು ಸ್ವತಂತ್ರ ರಾಜ್ಯವನ್ನ ಒಪ್ಪಿಕೊಂಡಿದ್ದೇವೆ. ಇದರ ಗಾಂಭೀರ್ಯತೆ ಸಿಎಂ ಬೊಮ್ಮಾಯಿ ತಿಳಿದುಕೊಳ್ಳಬೇಕು. ಸಿಎಂ ಆದವರು ಈ ರಾಜ್ಯದ ನೆಲೆ, ಜಲ,ಭಾಷೆ ಗೌರವ ಕಾಪಾಡಬೇಕು. ಮಹಾರಾಷ್ಟ್ರದವರು ಷಡ್ಯಂತ್ರದಿಂದ ಯೋಜನೆ ಘೋಷಿಸಿದ್ದಾರೆ. ಮಹಾರಾಷ್ಟ್ರದವರು ಅನಗತ್ಯವಾಗಿ ಕಾಲು ಕೆರೆಯುತ್ತಿದ್ದಾರೆ. ಇದು ಒಕ್ಕೂಟದ ವ್ಯವಸ್ಥೆಗೆ ಧಕ್ಕೆ. ಕನ್ನಡಿಗರಿಗೆ ಅನ್ಯಾಯ..? ಕೇಂದ್ರದ ಮೇಲೆ ಒತ್ತಡ ಹೇರಲು ಆಗದಿದ್ದರೇ ಸಿಎಂ ಆಗಿರಲು ನಾಲಾಯಕ್ ಎಂದು ಗುಡುಗಿದರು. ಮಾರ್ಚ್ 20 ರಂದು ಬೆಳಗಾವಿಯಲ್ಲಿ ಯುವಕಾಂಗ್ರೆಸ್ ಸಮಾವೇಶ ನಡೆಸುತ್ತೇವೆ. ಯುವಕರನ್ನುದ್ದೇಶೀಸಿ ರಾಹುಲ್ ಗಾಂಧಿ ಭಾಷಣ ಮಾಡಲಿದ್ದಾರೆ. ಐತಿಹಾಸಿಕ ರಾಲಿ ಮಾಡಲು ಇಂದು ಸಭೆಯಲ್ಲಿ ತೀರ್ಮಾನಿಸಿದ್ದೇವೆ. 4ರಿಂದ 5 ಲಕ್ಷ ಜನರು ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಚುನಾವಣೆ ಹಿನ್ನೆಲೆ ಯುವ ಕಾಂಗ್ರೆಸ್ ಸಮಾವೇಶ ಆಯೋಜಿಸಿದ್ದೇವೆ…
ಮಾರ್ಚ್ 20 ರಂದು ಬೆಳಗಾವಿಯಲ್ಲಿ ಯುವಕ್ರಾಂತಿ ರಾಲಿ ನಡೆಸುತ್ತೇವೆ. ಅಂದು ಯುವಕರಿಗೆ ಯೋಜನೆ ಘೋಷಣೆ ಮಾಡುತ್ತೇವೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದರು. ಮಾಧ್ಯಮಗಳ ಜೊತೆ ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ, ಮಾರ್ಚ್ 20ರ ಯುವಕ್ರಾಂತಿ ರಾಲಿಯನ್ನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಉದ್ಘಾಟಿಸಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನಖರ್ಗೆ ಪಾಲ್ಗೊಳ್ಳಲಿದ್ದಾರೆ. ಬೊಮ್ಮಯಿ ಸರ್ಕಾರ ಯುವಕರ ಭವಿಷ್ಯವನ್ನ ಹಾಳು ಮಾಡಿದೆ. ಪಿಎಸ್ ಐ ಹುದ್ದೆ ಸೇರಿದಂತೆ ಸರ್ಕಾರಿ ಹುದ್ದೆಯನ್ನ ಮಾರಾಟ ಮಾಡಿದ್ದಾರೆ. ಕೈಗಾರಿಕೋದ್ಯಮಗಳು ಅನ್ಯರಾಜ್ಯಗಳ ಪಾಲಾಗುತ್ತಿವೆ ಎಂದು ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ ರೋಡ್ ಶೋ ಮಾಡದಿದ್ದರೇ ಒಳ್ಳೆಯದು . ಮೋದಿ ರೋಡ್ ಶೋ ಮಾಡಿದ ದಿನವೇ ಬೆಲೆ ಏರಿಕೆ ಆಗಿದೆ. ಹೀಗಾಗಿ ಮೋದಿ ರೋಡ್ ಶೋ ಮಾಡದಿದ್ದರೇ ಒಳ್ಳೆಯದಾಗುತ್ತದೆ ಎಂದು ರಣದೀಪ್ ಸಿಂಗ್ ಸುರ್ಜೇವಾಲ ವ್ಯಂಗ್ಯವಾಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ಹೆಚ್.ಡಿ ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧಿಸಿದರೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಹ ಸ್ಪರ್ಧಿಸಲಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಮಂಡ್ಯ ಜಿಲ್ಲಾ ಕಾಂಗ್ರೆಸ್ ಮುಖಂಡರು ಮನವಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ನವದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನ ಭೇಟಿಯಾದ ಕಾಂಗ್ರೆಸ್ ಟಿಕೆಟ್ 16 ಆಕಾಂಕ್ಷಿಗಳು ಖರ್ಗೆಗೆ ಮನವಿ ಸಲ್ಲಿಸಿದ್ದಾರೆ. ಮಂಡ್ಯ ಕ್ಷೇತ್ರದಲ್ಲಿ ಹೆಚ್.ಡಿ ಕುಮಾರಸ್ವಾಮಿ ಸ್ಪರ್ಧಿಸಿದರೇ ಡಿಕೆಶಿಯೂ ಸ್ಪರ್ಧಿಸಲಿ. ಡಿಕೆ ಶಿವಕುಮಾರ್ ಸ್ಪರ್ಧಿಸದಿದ್ದರೇ ಮೂಲ ಕಾಂಗ್ರೆಸ್ಸಿಗರಿಗೆ ಆದ್ಯತೆ ನೀಡಿ ಎಂದು ಮಾಜಿ ಶಾಸಕ ಚಲುವರಾಯಸ್ವಾಮಿ, ರಮೇಶ್ ಬಂಡಿಸಿದ್ದೇಗೌಡ, ಅಮರಾವತಿ ಚಂದ್ರಶೇಖರ್ ಸತೀಶ್ ಗೌಡ ಸೇರಿ ಹಲವರು ಮನವಿ ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ತುಮಕೂರು:ಎತ್ತಿನಹೊಳೆ ಯೋಜನೆಯ ಮೊದಲ ಹಂತದ ನೀರು ಬರುವ ಜೂನ್ ತಿಂಗಳಿನಲ್ಲಿ ಚಿಕ್ಕನಾಯಕನಹಳ್ಳಿಗೆ ಹಾಗೂ ತಿಪಟೂರು ಕ್ಷೇತ್ರಗಳಿಗೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಚಿಕ್ಕನಾಯಕನಹಳ್ಳಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಚಿಕ್ಕನಾಯಕನಹಳ್ಳಿಯಲ್ಲಿ 31500 ರೈತರಿಗೆ ಕಿಸಾನ್ ಸಮ್ಮಾನ್: ನಮ್ಮ ಸರ್ಕಾರ ಮೂರು ವರ್ಷಗಳಲ್ಲಿ ಹಲವಾರುವ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದೆ. ಚಿಕ್ಕನಾಯಕನಹಳ್ಳಿಯಲ್ಲಿ 31500 ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆಯಡಿಕೃಷಿ ಸಮ್ಮಾನ್ ಯೋಜನೆ ಅಡಿಯಲ್ಲಿ ’53 ಲಕ್ಷ ರೈತರಿಗೆ 16000 ಕೋಟಿ ರೂ. ನೀಡಲಾಗಿದೆ. ಚಿಕ್ಕನಾಯಕನಹಳ್ಳಿಯಲ್ಲಿ 31500 ರೈತರಿಗೆ ಇಂದು ಕಿಸಾನ್ ಸಮ್ಮಾನ್ ಯೋಜನೆಯಡಿ 89 ಕೋಟಿ ರೂ. ದೊರೆತಿದೆ. ಪ್ರಧಾನ ಮಂತ್ರಿಕೃಷಿ ಸಿಂಚಯಿ ಯೋಜನೆಯಡಿ 3646 ರೈತರಿಗೆ ಲಾಭ ದೊರೆತಿದೆ. ನಗರಾಭಿವೃದ್ಧಿಯಡಿ ಹುಳಿಯಾರು, ಚಿಕ್ಕನಾಯಕನಹಳ್ಳಿ, ಹುಳಿಯಾರು ಪಟ್ಟಣಕ್ಕೆ ಅಮೃತ ಯೋಜನೆಯಡಿ15 ಕೋಟಿ ರೂವೆಚ್ಚದಲ್ಲಿ 38 ಕಾಮಗಾರಿ ಕೈಗೊಂಡಿದೆ. 176 ಮಹಿಳಾ ಸ್ವಸಹಾಯ ಸಂಘಕ್ಕೆ ರಾಜ್ಯದಲ್ಲಿ 17 ಲಕ್ಷ ರೂ.ಬಿಡುಗಡೆಯಾಗಿದೆ. ಜಲ್ ಜೀವನ್ ಮಿಷನ್…
ಕೊರಟಗೆರೆ : ಪಟ್ಟಣದ ಪ್ರವಾಸಿ ಮಂದರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯಲ್ಲಿ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಭಾಗದ ಯುವಕರು ಕರ್ನಾಟಕ ರಣಧೀರರ ವೇದಿಕೆಯ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಸಂಘಟನೆಯ ಕೆಲವೊಂದು ಹೋರಾಟಗಳನ್ನು ಗಮನಿಸಿ ತಾಲ್ಲೂಕು ಅಧ್ಯಕ್ಷರಾದ ಮಂಜುಸ್ವಾಮಿ ಎಂ.ಎನ್.ರವರ ನೇತೃತ್ವದಲ್ಲಿ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ.ಆರ್.ಶಂಕರ್ ಗೌಡ್ರು ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ತಿಮ್ಮಪ್ಪ ಗೌಡರವರ ಅಧ್ಯಕ್ಷತೆಯಲ್ಲಿ ಸಂಘಟನೆಗೆ ಸೇರ್ಪಡೆಯಾದರು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ.ಆರ್.ಶಂಕರ್ ಗೌಡ್ರು, ಕಳೆದ ಎರಡು ವರ್ಷಗಳಿಂದ ಕೊರಟಗೆರೆ ತಾಲ್ಲೂಕಿನಲ್ಲಿ ಸಂಘಟನೆಯು ನಾಡು ನುಡಿ ನೆಲ ಜಲ ಭಾಷೆಯ ವಿಚಾರದಲ್ಲಿ ಹಾಗೂ ತಾಲ್ಲೂಕಿನಲ್ಲಿರುವ ಜ್ವಲಂತ ಸಮಸ್ಯೆಗಳ ಕುರಿತು ಹೋರಾಟ ಮಾಡಿಕೊಂಡು ಬಂದಿದೆ. ಹಿಂದಿ ದಿವಸ್ ವಿರೋಧಿಸಿ ಬೃಹತ್ ಮಟ್ಟದ ಹೋರಾಟವನ್ನು ತಾಲ್ಲೂಕಿನಲ್ಲಿ ಮಾಡಲಾಗಿದೆ ಗ್ರಾಮೀಣ ಭಾಗದ ಬಡ ರೈತರ ಬಗರ್ ಹುಕ್ಕುಂ ಸಾಗುವಳಿ ಜಮೀನಿನ ವಿಚಾರವಾಗಿ ಸಂಘಟನೆಯು ಇಂದಿಗೂ ಸಹ ನಿರಂತರವಾದ ಹೋರಾಟವನ್ನು ಕೈಗೆತ್ತಿಕೊಂಡು ತಾಲ್ಲೂಕು ಅಧ್ಯಕ್ಷರಾದ ಮಂಜುಸ್ವಾಮಿ ಎಂ ಎನ್ ರವರ ಮತ್ತು ತಾಲ್ಲೂಕು…
ಸಲ್ಮಾನ್ ಯೂಸುಫ್ ಇಂದು ಬೆಳಿಗ್ಗೆ ತಮ್ಮ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು ಅದರಲ್ಲಿ ಕನ್ನಡದಲ್ಲಿ ಮಾತನಾಡದ್ದಕ್ಕೆ ವಿಮಾನ ನಿಲ್ದಾಣದಲ್ಲಿ ತನಗೆ ಹೇಗೆ ಕಿರುಕುಳ ನೀಡಲಾಯಿತು ಎಂಬುದನ್ನು ವಿವರಿಸಿದ್ದಾರೆ. ಕನ್ನಡದಲ್ಲಿ ಮಾತನಾಡಲು ಬರುವುದಿಲ್ಲ ಎಂಬ ಕಾರಣಕ್ಕೆ ಅಧಿಕಾರಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಸಲ್ಮಾನ್ ಲೈವ್ ಬಂದು ತಮ್ಮ ಅನುಭವವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ನಾನು ದುಬೈಗೆ ತೆರಳಲು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿದ್ದಾಗ ಈ ಘಟನೆ ನಡೆದಿದೆ. ನನಗೆ ಭಾಷೆ ಅರ್ಥವಾಗುತ್ತದೆ. ಆದರೆ ಚೆನ್ನಾಗಿ ಮಾತನಾಡಲು ಬರುವುದಿಲ್ಲ. ಆದರೂ ಕನ್ನಡದಲ್ಲೇ ಹೇಳಲು ಪ್ರಯತ್ನಿಸಿದೆ. ಆದರೂ ಅಧಿಕಾರಿ ಪಾಸ್ಪೋರ್ಟ್ ತೋರಿಸಿ ತಂದೆ ತಾಯಿಯ ಹೆಸರು, ಹುಟ್ಟಿದ ಊರು ಹೇಳಿ ನೀವು ಮತ್ತು ನಿಮ್ಮ ತಂದೆ ಬೆಂಗಳೂರಿನಲ್ಲಿ ಹುಟ್ಟಿದ್ದು ನಿಮಗೆ ಕನ್ನಡ ಭಾಷೆ ಬರುವುದಿಲ್ಲವೇ? ಅಧಿಕಾರಿಯ ಪ್ರಶ್ನೆಗೆ ಉತ್ತರಿಸುವಾಗ ನನಗೆ ಕನ್ನಡ ಬರುವುದಿಲ್ಲ ಎಂದು ಸಲ್ಮಾನ್ ವಿಡಿಯೋದಲ್ಲಿ ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.…
ಕೌಟುಂಬಿಕ ಕಲಹ ಹಿನ್ನೆಲೆ ತಂದೆ ನೇಣಿಗೆ ಶರಣಾಗಿದ್ದು ತಂದೆ ಸಾವಿನಿಂದ ಮನನೊಂದ ಮಗನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಎನ್.ಬೇಗೂರು ಸಮೀಪದ ಜಕ್ಕಳ್ಳಿ ಕಾಲೋನಿಯಲ್ಲಿ ನಡೆದಿದೆ. ನಾಗೇಗೌಡ ಮತ್ತು ಮಧು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದವರು.ಕೌಟುಂಬಿಕ ಕಲಹದಿಂದ ಬೇಸತ್ತ ತಂದೆ ನಾಗೇಗೌಡ(55) ನಿನ್ನೆ ಮನೆಯಲ್ಲಿ ಯಾರೂ ಇಲ್ಲದ ಬೇಳೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದರು. ತಂದೆ ಸಾವಿನ ಸುದ್ದಿ ತಿಳಿದು ಮನನೊಂದ ಮಗ ಮಧು (24) ತಡರಾತ್ರಿ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಒಂದೇ ಕುಟುಂಬದ ತಂದೆ ಮಗನ ಎರಡು ಮೃತದೇಹಗಳ ಅಂತ್ಯ ಸಂಸ್ಕಾರವನ್ನ ಗ್ರಾಮದಲ್ಲಿ ಏಕಕಾಲದಲ್ಲಿ ನೆರವೇರಿಸಲಾಯಿತು. ಅಂತರಸಂತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಅರಸೀಕೆರೆ: ಕಳೆದ ಎರಡು ಅವಧಿಯಲ್ಲಿ ರಾಜ್ಯವನ್ನಾಳಿದ ಕಾಂಗ್ರೆಸ್ ಹಾಗೂ ಬಿಜೆಪಿ ಸರ್ಕಾರಗಳು ಅಭಿವೃದ್ಧಿ ಹೆಸರಿನಲ್ಲಿ 5.65 ಲಕ್ಷ ಕೋಟಿ ರೂ.ಸಾಲ ಮಾಡಿ, ಅದನ್ನು ಜನರ ತಲೆ ಮೇಲೆ ಹೊರೆಸಿವೆ. ಇದು ರಾಷ್ಟ್ರೀಯ ಪಕ್ಷಗಳ ಸಾಧನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮತ್ತು ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯದ ಅಭಿವೃದ್ಧಿ ಹೆಸರಿನಲ್ಲಿ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದರಲ್ಲಿ ಶೇ.60 ಸರ್ಕಾರದ ಹಣ ಅರ್ಹ ಫಲಾನುಭವಿಗಳಿಗೆ ಸೇರದೆ ಮಧ್ಯವರ್ತಿ ಪಾಲಾಗಿದೆ. ಇಂತಹ ಯೋಜನೆಗಳ ಅನುಷ್ಠಾನಕ್ಕಾಗಿ ಈ ಸರ್ಕಾರಗಳು 5.65 ಲಕ್ಷ ಕೋಟಿ ರೂ. ಹಣವನ್ನು ಸಾಲ ತಂದು, ರಾಜ್ಯದ ಜನತೆ ತಲೆ ಮೇಲೆ ಹೊರೆಸಿದ್ದಾರೆ ಎಂದು ಹೇಳಿದರು. ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯಿಸಿ, ನನಗೆ ಕೊಟ್ಟಿದ್ದು, ಕಾಲು ಮುರಿದ ಕುದುರೆ, ಅದನ್ನು ನಾನು ಏರಿ ಧೀರನೂ, ಶೂರನೂ ಆಗಲು ಹೇಗೆ ಸಾಧ್ಯ? ಅವರನ್ನೇ ಕೇಳಿ ಎಂದು ಹರಿಹಾಯ್ದರು. ಐಟಿ, ಇಡಿ ದಾಳಿಗೆ…
ಬೆಳಗಾವಿ: ಯುವಕರಿಗೆ ಸ್ಪೂರ್ತಿ ನೀಡಲು ಮಾ.20 ರಂದು ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಗುರುವಾರ ಪೂರ್ವಭಾವಿ ಸಭೆ ನಡೆಸಲಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದರು. ಬೆಳಗಾವಿ ನಗರದ ಕಾಂಗ್ರೆಸ್ ಭವನದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಳಗಾವಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಿಪಿಎಡ್ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸಲಿದ್ದೇವೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದರು. ರಾಹುಲ್ ಗಾಂಧಿ ಅವರು ನಡೆಸಲಿರುವ ಸಮಾವೇಶದಲ್ಲಿ ಸುಮಾರು 10 ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಲಿದ್ದಾರೆ. ರೋಡ್ ಶೋ ನಡೆಸುವುದು ಬಿಡುವುದು ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದರು. ರಾಜ್ಯದಲ್ಲಿ 40% ಕಮಿಷನ್ ಸರಕಾರದ ವಿರುದ್ಧ ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ.ಬಿಜೆಪಿ ಸರಕಾರಕ್ಕೆ ಬದ್ಧತೆ ಇಲ್ಲ. ಇದರ ಕಾರ್ಯಕ್ರಮ ಭ್ರಷ್ಟಾಚಾರ. ಅಯೋಗ್ಯದ ಸರಕಾರ ವಿಜಯ ಸಂಕಲ್ಪ…