Subscribe to Updates
Get the latest creative news from FooBar about art, design and business.
- ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
- ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
- ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ
- ಬೌದ್ಧ ಧರ್ಮವು ಸಮಾನತೆ, ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ: ಹರಾ ಮಹೇಶ್
- ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಹೆಣ್ಣು ಮಕ್ಕಳಿಗೆ ಉಚಿತ ಲಸಿಕೆ: ಶಾಸಕ ಡಾ.ಎಚ್.ಡಿ.ರಂಗನಾಥ್
- ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ
- ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ
- ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
Author: admin
ಸಚಿವ ಸೋಮಣ್ಣ ಅಸಮಾಧಾನ ವಿಚಾರ ಕುರಿತು ಮಾತನಾಡಿದ ಬಿಎಸ್ ಯಡಿಯೂರಪ್ಪ, ಯಾವುದೇ ಕಾರಣಕ್ಕೂ ಸಚಿವ ಸೋಮಣ್ಣ ಪಕ್ಷ ಬಿಡುವುದಿಲ್ಲ. ಸಚಿವಸೋಮಣ್ಣ ಆ ಭಾಗದಲ್ಲಿ ಒಳ್ಳೆ ಕೆಲಸ ಮಾಡಿದ್ದಾರೆ. ಅವರ ಬಗ್ಗೆ ಗೌರವವಿದೆ. ಹೀಗಾಗಿ ಸೋಮಣ್ಣ ನಮ್ಮ ಜೊತೆ ಇರ್ತಾರೆ. ಸೋಮಣ್ಣ ಸಹಕಾರದಿಂದಲೇ ನಾವು ಅಧಿಕಾರಕ್ಕೆ ಬಂದಿದ್ದು ಎಂದರು. ಕಾಂಗ್ರೆಸ್ ಸರ್ಕಾರವಿದ್ದಾಗ ತುರ್ತು ಪರಿಸ್ಥಿತಿ ಜಾರಿಗೆ ತಂದರು. ಅಟಲ್ ಬಿಹಾರಿ ವಾಜಿಪೇಯಿ ಸೇರಿ ಅನೇಕರನ್ನ ಆಗ ಬಂಧಿಸಿದ್ದರು. ಇವತ್ತು ಅದೇ ಕಾಂಗ್ರೆಸ್ ನವರು ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುತ್ತಾರೆ. ಮೋದಿ ಅಮಿತ್ ಶಾರನ್ನ ಎದುರಿಸುವಂತಹ ನಾಯಕರು ಯಾರು ಇಲ್ಲ. ಕಾಂಗ್ರೆಸ್ ನಲ್ಲಿ ಯಾರು ಇಲ್ಲ ಅನ್ನೋದು ಸಾಮಾನ್ಯ ಜನರ ಭಾವನೆ. ಹೀಗಾಗಿ ರಾಜ್ಯದಲ್ಲಿ 140ಕ್ಕೂ ಹೆಚ್ಚು ಸೀಟ್ ಗೆದ್ದು ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಬಿಎಸ್ ವೈ ತಿಳಿಸಿದರು. ಬಾಗಲಕೋಟೆಯಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ, ರಾಹುಲ್ ಗಾಂಧಿ ಹೆಚ್ಚು ಹೆಚ್ಚು ಪ್ರಚಾರ ಮಾಡಿದ್ದಷ್ಟು ನಾವು ಹೆಚ್ಚು ಹೆಚ್ಚು ಸ್ಥಾನಗಳನ್ನ ಗೆಲ್ಲುತ್ತೇವೆ. ನಾವು ಹೆಚ್ಚು ಸ್ಥಾನಗಳನ್ನ…
ವಿಧಾನ ಪರಿಷತ್ ಸದಸ್ಯ ಆರ್. ಶಂಕರ್ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಗೂ ಬಿಜೆಪಿಗೂ ಸಂಬಂಧವಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಆರ್.ಶಂಕರ್ ಮನೆ ಮೇಲಿನ ದಾಳಿಗೂ ಬಿಜೆಪಿಗೂ ಸಂಬಂಧವಿಲ್ಲ. ತನಿಖಾ ಸಂಸ್ಥೆಗಳು ಎಷ್ಟು ಮುಕ್ತವಾಗಿವೆ ಅನ್ನೋದಕ್ಕೆ ಇದು ಸಾಕ್ಷಿ. ಯಾರೇ ತಪ್ಪು ಮಾಡಿದ್ರೂ ಸರ್ಕಾರ ಶಿಕ್ಷಿಸುವ ಕೆಲಸ ಮಾಡುತ್ತೆ. ಆರ್ .ಶಂಕರ್ ಕೇಸ್ ನಲ್ಲೂ ತನಿಖಾ ಸಂಸ್ಥೆ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು. ಹಾವೇರಿಯ ಬೀರೇಶ್ವರ ನಗರದಲ್ಲಿರುವ ವಿಧಾನ ಪರಿಷತ್ ಸದಸ್ಯ ಆರ್.ಶಂಕರ್ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಶಂಕರ್ ಅವರ ಗೃಹ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕರಿಗೆ ವಿತರಣೆ ಮಾಡಲು ಸಂಗ್ರಹಿಸಿಟ್ಟಿದ್ದ ಶಂಕರ್ ಭಾವಚಿತ್ರ ಇರುವ ಸೀರೆ ಬಾಕ್ಸ್, ತಟ್ಟೆ– ಲೋಟ ಹಾಗೂ ಎಲ್ ಕೆಜಿಯಿಂದ ಪದವಿ ಕಾಲೇಜುಗಳವರೆಗೆ ಹಂಚಲು ತಂದಿರುವ ಸ್ಕೂಲ್ ಬ್ಯಾಗ್ಗಳನ್ನು ವಶಪಡಿಸಿಕೊಂಡಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…
ಬಿಜೆಪಿಯಲ್ಲಿ ನನಗೆ ಯಾವುದೇ ಅಸಮಾಧಾನವಿಲ್ಲ. ಬಿಜೆಪಿಗೆ ಮುಜುಗರ ತರುವ ಕೆಲಸ ಮಾಡುವುದಿಲ್ಲ ಎಂದು ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಸಚಿವ ವಿ.ಸೋಮಣ್ಣ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭೇಟಿಯಾಗಿ ವಾಪಸ್ ಬೆಂಗಳೂರಿಗೆ ಹೋಗುತ್ತೇನೆ. ನನ್ನ ಇತಿಮಿತಿಯಲ್ಲಿ ನಾನು ಜೀವನ ಮಾಡುತ್ತಿದ್ದೇನೆ. ನನ್ನಿಂದ ಬಿಜೆಪಿಗೆ ಅಪಚಾರವಾಗಬಾರದು. ನಾನು ಬಿಜೆಪಿ ಬಿಡಲ್ಲ. ಪಕ್ಷದ ಕೆಲಸ ಮಾಡುತ್ತೇನೆ ಎಂದು ಹೇಳಿದರು. ಇದೇ ವೇಳೆ ವಿಜಯೇಂದ್ರ ವಿರುದ್ದ ಅಸಮಾಧಾನ ಕುರಿತು ಪತ್ರರ್ಕತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಸೋಮಣ್ಣ, ವಿಜಯೇಂದ್ರ ಯಾರು..? ಅವರಿಗೂ ನನಗೂ ಏನು ಸಂಬಂಧ. ಬಿಎಸ್ ವೈ ಪುತ್ರ ವಿಜಯೇಂದ್ರ ಗೆ 40 ವರ್ಷ ನನಗೆ 70 ವರ್ಷ ವಿಜಯೇಂದ್ರ ಬಗ್ಗೆ ನನ್ನ ಪುತ್ರನಿಗೆ ಅಸಮಾಧಾನವಿದ್ದರೇ ಅವನನ್ನೇ ಕೇಳಿ ಎಂದು ವಿ.ಸೋಮಣ್ಣ ಹೇಳಿದರು . ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್…
2021ನೇ ಸಾಲಿನ ಹಿಂಬಾಕಿ ಶಿಷ್ಯ ವೇತನ ಬಿಡುಗಡೆ ಮಾಡುವಂತೆ ಆಗ್ರಹಿಸಿ ಎಸ್.ಸಿ ಮತ್ತು ಎಸ್.ಟಿ ಸಂಶೋಧನಾ ವಿದ್ಯಾರ್ಥಿಗಳು ಇಂದು ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಿದರು. ನಗರದ ಕ್ರಾಫರ್ಡ್ ಹಾಲ್ ಮುಂಭಾಗ ಪ್ರತಿಭಟನೆ ನಡೆಸಲಾಗುತ್ತಿದ್ದು, ಮೈಸೂರು ವಿಶ್ವ ವಿದ್ಯಾನಿಲಯದ ವಿರುದ್ಧ ಪ್ರತಿಭಟನಾನಿರತ ಸಂಶೋಧನಾ ವಿದ್ಯಾರ್ಥಿಗಳು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. 46 ಸಂಶೋಧನಾ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ನೀಡಿಲ್ಲ. ಸಂಶೋಧನಾ ವಿದ್ಯಾರ್ಥಿಗಳಿಗೆ ನೀಡಬೇಕಿರುವ ಶಿಷ್ಯ ವೇತನವನ್ನ ಇತರೆ ಕಾಮಗಾರಿಗಳಿಗೆ ಬಳಕೆ ಮಾಡಿದ್ದಾರೆ. ಸಂಶೋಧನಾ ವಿದ್ಯಾರ್ಥಿಗಳಿಗೆ ನೀಡುವ ಶಿಷ್ಯ ವೇತನದಲ್ಲೂ ಅಕ್ರಮ ನಡೆದಿದೆ. ಕೂಡಲೇ ಎಸ್ಸಿ ಎಸ್ಟಿ ಸಂಶೋಧನಾ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ಜಾರಿ ಮಾಡಬೇಕು. ಇಲ್ಲವಾದಲ್ಲಿ ನಮ್ಮ ಹೋರಾಟವನ್ನ ತೀವ್ರಗೊಳಿಸುತ್ತೇವೆ ಎಂದು ಸಂಶೋಧನಾ ವಿದ್ಯಾರ್ಥಿ ಕಲ್ಲಳ್ಳಿ ಕುಮಾರ್ ಎಚ್ಚರಿಕೆ ನೀಡಿದರು. ಈ ವೇಳೆ ಪ್ರತಿಭಟನೆಯಲ್ಲಿ ಕಿರಣ್, ನಟರಾಜು, ಸೋಮಶೇಖರ್, ಅಶ್ವಿನಿ, ಪ್ರಮೀಳಾ, ಭವ್ಯ, ಕುಶಲ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…
ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಬೈಕ್ ಟ್ಯಾಕ್ಸಿಯನ್ನು ನಿಷೇಧಿಸುವಂತೆ ಆಗ್ರಹಿಸಿ ಮಾರ್ಚ್ 20ರಂದು ಬೆಂಗಳೂರಿನಲ್ಲಿ ಆಟೋ ಸಂಚಾರ ಸಂಪೂರ್ಣ ಬಂದ್ ಮಾಡಿ ಪ್ರತಿಭಟನೆ ನಡೆಸಲು ಆಟೋ ಚಾಲಕರು ಮುಂದಾಗಿದ್ದಾರೆ. ಈ ಕುರಿತು ಮಾತನಾಡಿದ ಆದರ್ಶ ಆಟೋ ಯೂನಿಯನ್ ಅಧ್ಯಕ್ಷ ಮಂಜುನಾಥ್, ರ್ಯಾಪಿಡೋ ಬೈಕ್ ಟ್ಯಾಕ್ಸಿಯನ್ನು ನಿಷೇಧಿಸುವಂತೆ ನಗರದ 21 ಆಟೋ ಚಾಲಕರ ಸಂಘಟನೆಗಳು ರಾಜ್ಯ ಒತ್ತಾಯ ಮಾಡಿವೆ. ಈ ಹಿನ್ನಲೆ ಮಾ.20 ರಂದು ಬೆಂಗಳೂರಿನಲ್ಲಿ ಆಟೋ ಸಂಚಾರವನ್ನು ಸಂಪೂರ್ಣ ಬಂದ್ ಮಾಡಲು ನಿರ್ಧರಿಸಲಾಗಿದೆ ಎಂದಿದ್ದಾರೆ. ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿದ್ದನ್ನು ಖಂಡಿಸಿ ಪ್ರತಿಭಟನೆ ಮಾಡಲು ನಿರ್ಧರಿಸಿದ್ದೇವೆ. ಸಾರಿಗೆ ಇಲಾಖೆ ಓಲಾ, ಉಬರ್ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿದೆ. ಇದರಿಂದ ಆಟೋ ಚಾಲಕರ ಆದಾಯಕ್ಕೆ ಹೊಡೆತ ಬಿದ್ದಿದೆ. ಕೂಡಲೇ ರ್ಯಾಪಿಡೋ ಬೈಕ್ ಟ್ಯಾಕ್ಸಿ ಅನುಮತಿ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು. ಬೆಂಗಳೂರಲ್ಲಿ 21 ಆಟೋ ಚಾಲಕರ ಸಂಘಟನೆಗಳಿಂದ, ನಾಳೆ (ಮಾ.16) ರಿಂದ ಆಟೋಗಳಲ್ಲಿ ಕಪ್ಪು ಬಾವುಟ ಕಟ್ಟಿಕೊಂಡು ಪ್ರತಿಭಟನೆ ಮಾಡುತ್ತೇವೆ. 2 ದಿನಗಳ ಕಾಲ ಪ್ರತಿಭಟನೆ…
ಭಾರತ ಪ್ರಜಾಪ್ರಭುತ್ವದ ಬಗ್ಗೆ ವಿದೇಶ ನೆಲದಲ್ಲಿ ಅಪಮಾನ ಮಾಡಿರುವ ರಾಹುಲ್ ಗಾಂಧಿ ಕ್ಷಮೆಯಾಚಿಸಲಿ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಆಗ್ರಹಿಸಿದ್ದಾರೆ. ಲಂಡನ್ನ ಕೇಂಬ್ರಿಡ್ಜ್ ವಿವಿಯಲ್ಲಿ ಭಾಷಣ ಮಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಯುತ್ತಿದೆ ಎಂದು ಆರೋಪಿಸಿದ್ದರು. ಈ ಹೇಳಿಕೆಗೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದು ಲೋಕಸಭೆ ರಾಜ್ಯಸಭೆ ಕಲಾಪದಲ್ಲೂ ಈ ವಿಚಾರ ಪ್ರಸ್ತಾಪವಾಗಿ ಆಡಳಿತ ಪಕ್ಷದ ಸದಸ್ಯರು ರಾಹುಲ್ ಗಾಂಧಿ ಕ್ಷಮೆಯಾಚಿಸಲು ಆಗ್ರಹಿಸಿದ್ದವು. ಈ ಕುರಿತು ಮಾತನಾಡಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ, ರಾಹುಲ್ ಗಾಂಧಿ ಭಾರತದ ಪ್ರಜಾಪ್ರಭುತ್ವವನ್ನ ಪ್ರಶ್ನಿಸಿದ್ದಾರೆ. ವಿದೇಶಿ ನೆಲದಲ್ಲಿ ಅವಮಾನಿಸಿದ್ದಾರೆ. ಹೀಗಾಗಿ ರಾಹುಲ್ ಗಾಂಧಿ ಪ್ರತಿಯೊಬ್ಬ ಭಾರತೀಯರ ಬಳಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ:…
ಯುಗಾದಿ ಹಬ್ಬಕ್ಕೆಂದು ನಗರಗಳಿಂದ ತಮ್ಮ ತಮ್ಮ ಊರುಗಳಿಗೆ ತೆರೆಳುವ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್ ಕಾದಿದ್ದು ಮಾರ್ಚ್ 21 ರಂದು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ ಆರ್ ಟಿಸಿ ನೌಕರರು ಮುಷ್ಕರ ಹೂಡಿದ್ದಾರೆ. ರಾಜ್ಯ ಸರ್ಕಾರ ಸಾರಿಗೆ ನೌಕರರ ವೇತನ ಹೆಚ್ಚಳ ಮಾಡದ ಹಿನ್ನೆಲೆ ಹಾಗೂ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸದಿರುವುದಕ್ಕೆ ಮಾರ್ಚ್ 21 ರಿಂದು ಮುಷ್ಕರ ನಡೆಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ನೌಕರರು ಮುಂದಾಗಿದ್ದಾರೆ. ಈ ಕುರಿತು ಮಾತನಾಡಿರುವ ಸಾರಿಗೆ ನೌಕರರ ಸಂಘದ ಅಧ್ಯಕ್ಷ ಹೆಚ್.ವಿ. ಅನಂತ ಸುಬ್ಬರಾವ್, ವೇತನ ಪರಿಷ್ಕರಣೆ ಮಾಡುವಂತೆ ಆಗ್ರಹಿಸಿದ್ದವು. ಆದರೆ ಸರ್ಕಾರ ನೌಕರರ ಮನವಿಗೆ ಸ್ಪಂದಿಸುತ್ತಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಾರಿಗೆ ಸಚಿವ ಬಿ. ಶ್ರೀರಾಮುಲು ನಮ್ಮ ಎಲ್ಲ ಬೇಡಿಕೆಗಳನ್ನು ಈಡೇರಿಸುತ್ತೇವೆ ಎಂದು ಈ ಹಿಂದೆ ನಡೆದ ಹಲವು ಸಭೆಗಳಲ್ಲಿ ಹೇಳಿದ್ದರು. ಆದರೆ ಇದುವರೆಗೂ ನಮ್ಮ ಬೇಡಿಕೆಗಳನ್ನು ಈಡೇರಿಸಿಲ್ಲ. ಇತ್ತೀಚಿಗೆ ಸರ್ಕಾರಿ ನೌಕರರು, ವೇತನ ಹೆಚ್ಚಳ ಸಂಬಂಧ ಪ್ರತಿಭಟನೆ…
ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ಹೈವೇ ಕಾಮಗಾರಿ ಪೂರ್ಣವಾಗದಿದ್ದರೂ 1 ಕಿ.ಮೀಗೆ 2ರೂ. ನಂತೆ ಟೋಲ್ ಸಂಗ್ರಹ ಮಾಡುತ್ತಿದ್ದಾರೆ ಎಂದು ಸಂಸದ ಡಿ.ಕೆ ಸುರೇಶ್ ಕಿಡಿಕಾರಿದರು. ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಸುರೇಶ್, ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೈವೇ ಕಾಮಗಾರಿ ಇನ್ನೂ ಪೂರ್ಣ ಆಗಿಲ್ಲ. ಆದರೂ ಟೋಲ್ ಸಂಗ್ರಹಿಸುತ್ತಿದ್ದಾರೆ . ಯಾವ ವೈಜ್ಞಾನಿಕ ಆಧಾರದ ಮೇಲೆ ಟ್ಯಾಕ್ಸ್ ಹಾಕುತ್ತಿದ್ದಾರೆ ಎಂದು ಪ್ರಶ್ನಿಸಿದರು. ರಾಮನಗರದಿಂದ ತಮ್ಮ ಸ್ಪರ್ಧೆಗೆ ಒತ್ತಡ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿ.ಕೆ ಸುರೇಶ್, ವಿಧಾನಸಭಾ ಚುನಾವೆಯಲ್ಲಿ ನನ್ನ ಸ್ಪರ್ಧೆ ಬಗ್ಗೆ ರಾಷ್ಟ್ರೀಯ ನಾಯಕರು ಚರ್ಚೆ ಮಾಡಿಲ್ಲ. ನನ್ನ ವ್ಯಾಪ್ತಿಗೆ ಬರುವ ಎಲ್ಲಾ ಕ್ಷೇತ್ರಗಳಿಗೂ ನಾನೇ ಅಭ್ಯರ್ಥಿ . ಆರ್ ಆರ್ ನಗರ, ಆನೇಕಲ್, ರಾಮನಗರದಿಂದ ಒತ್ತಡವಿದೆ. ರಾಮನಗರಕ್ಕೆ ಇಕ್ಬಾಲ್ ಹುಸೇನ್ ಹೆಸರು ಶಿಫಾರಸು ಮಾಡಲಾಗಿದೆ ಎಂದರು. ಉರಿಗೌಡ ನಂಜೇಗೌಡರ ಬಗ್ಗೆ ಸಚಿವ ಅಶ್ವತ್ ನಾರಾಯಣ್ ಹೇಳಲಿ. ಉರಿಗೌಡ ದೊಡ್ಡ ನಂಜೇಗೌಡ ಎಲ್ಲಿ ಸಿಕ್ಕಿದರು ಎಂದು ಹೇಳಲಿ ಎಂದು ಅಶ್ವಥ್ ನಾರಾಯಣ್ ಗೆ…
ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕೀಯ ಚಟುವಟಿಕೆ ಬಿರುಸುಗೊಂಡಿದ್ದು, ಪಕ್ಷಗಳು ಸಿದ್ಧತೆಯಲ್ಲಿ ತೊಡಗಿವೆ. ಈ ಮಧ್ಯೆ ಬಳ್ಳಾರಿಯ ಕ್ಷೇತ್ರ ಬಾರಿ ಕುತೂಹಲಕ್ಕೆ ಕಾರಣವಾಗಿದ್ದು, ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಲು ಸಾರಿಗೆ ಸಚಿವ ಶ್ರೀರಾಮುಲು ನಿರ್ಧಾರ ಮಾಡಿದ್ದಾರೆ. ಬಳ್ಳಾರಿ ನಗರದಿಂದ ಕೆ ಆರ್ ಪಿ ಪಿ ಯಿಂದ ಜನಾರ್ಧನ ರೆಡ್ಡಿ ಪತ್ನಿ ಅರುಣಾ ಲಕ್ಷ್ಮಿ ಕಣಕ್ಕಿಳಿದಿದ್ದಾರೆ. ಇದೀಗ ಸಚಿವ ಶ್ರೀರಾಮುಲು ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ. ಮೊಳಕಾಲ್ಮೂರು ಕ್ಷೇತ್ರದ ಶಾಸಕರಾಗಿರುವ ಶ್ರೀರಾಮುಲು ಈ ಬಾರಿ ಸಂಡೂರಿನಿಂದ ಸ್ಪರ್ಧಿಸುವುದಾಗಿ ತಿಳಿಸಿದ್ದರು. ಈಗ ಬಳ್ಳಾರಿ ಗ್ರಾಮಿಣ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ದುಷ್ಕರ್ಮಿಗಳು ದೇವಾಲಯದ ಬಾಗಿಲು ಮುರಿದು ಹುಂಡಿ ಹಣ ಕಳವು ಮಾಡಿರುವ ಘಟನೆ ಮೈಸೂರು ಜಿಲ್ಲೆ ನಂಜಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚುಂಚನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಮಾದಯ್ಯನಗುಡಿಯ ಮಹದೇಶ್ವರಸ್ವಾಮಿ ದೇವಾಲಯದಲ್ಲಿ ಈ ಘಟನೆ ನಡೆದಿದೆ. ರಾತ್ರಿಯ ಸಮಯದಲ್ಲಿ ಕಳ್ಳರು ಒಳ ನುಗ್ಗಿ ಬಾಗಿಲು ಮುರಿದು, ಹುಂಡಿಯ ಬೀಗವನ್ನು ಒಡೆದು ಹುಂಡಿಯಲ್ಲಿದ್ದ ನಗದು ಹಣ ಹಾಗೂ ಚಿನ್ನಾಭರಣವನ್ನು ದೋಚಿ ಪರಾರಿಯಾಗಿದ್ದಾರೆ. ನಿನ್ನೆ ತಾನೇ ಎರಡು ದಿನಗಳ ಕಾಲ ಶ್ರೀ ಮಹದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ನಡೆದಿತ್ತು. ಇಂದು ಗ್ರಾಮಸ್ಥರು ಹುಂಡಿ ಎಣಿಕೆ ಕಾರ್ಯ ಮಾಡಬೇಕಾಗಿತ್ತು. ಆದರೆ, ಖದೀಮರು ಹುಂಡಿಯಲ್ಲಿದ್ದ ಹಣವನ್ನು ಕದ್ದು ಪರಾರಿಯಾಗಿದ್ದಾರೆ. ಕವಲಂದೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ.ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA