Author: admin

ಮುಂಬೈ: “ಹಿಂದೂಗಳ ವಿರುದ್ಧ ಯಾರೇ ಮಾತನಾಡಿದರೂ, ಅವರನ್ನು ಸುಮ್ಮನೆ ಬಿಡುವುದಿಲ್ಲ. ನಮ್ಮ ಹಿಂದೂರಾಷ್ಟ್ರದಲ್ಲಿ ನೀವು ನಿತ್ಯ ಐದು ಬಾರಿ ನಮಾಜ್ ಮಾಡುವುದಕ್ಕೂ ಲೌಡ್ ಸ್ಪೀಕರ್ ಸಿಗುವುದಿಲ್ಲ ‘ ಎಂದು ಮುಸ್ಲಿಂ ಸಮುದಾಯಕ್ಕೆ ಬೆದರಿಕೆ ಹಾಕಿರುವ ಆರೋಪದ ಬಿಜೆಪಿ ಉಚ್ಚಾಟಿತ ಶಾಸಕ ಟಿ.ರಾಜಾ ವಿರುದ್ಧ ಕೇಸು ದಾಖಲಿಸಲಾಗಿದೆ. ತೆಲಂಗಾಣ ಮೂಲದ ಉಚ್ಚಾಟಿತ ಶಾಸಕ ಇತ್ತೀಚೆಗೆ ಮಹಾರಾಷ್ಟ್ರದ ಅಹ್ಮದ್‌ನಗರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ “ಹಿಂದೂಗಳನ್ನು ವಿರೋಧಿಸುವವರಿಗೆ, ಗೋವುಗಳನ್ನು ಕೊಲ್ಲುವವರನ್ನು ಮಟ್ಟಹಾಕಲು ಶಿವಾಜಿ ಸೇನೆ ಸಿದ್ಧವಾಗಿದೆ. ಭಾರತವನ್ನು 2026ರ ವೇಳೆಗೆ ಅಖಂಡ ಹಿಂದೂರಾಷ್ಟ್ರವೆಂದು ಘೋಷಿಸಲಾಗುವುದು. ಅಹ್ಮದ್‌ನಗರವನ್ನು ಅಹಲ್ಯಾಬಾಯಿ ನಗರ, ಹೈದರಾಬಾದ್‌ನಲ್ಲಿ ಭಾಗ್ಯನಗರವೆಂದು ಮರುನಾಮಕರಣ ಮಾಡಲಾಗುವುದು’ ಎಂದು ಹೇಳಿಕೆ ನೀಡಿದ್ದಾರೆ. ರಾಜಾ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ, ದೂರು ಸಲ್ಲಿಕೆ, ದೂರಿನ ಆಧಾರದ ಮೇಲೆ ಸೆಕ್ಷನ್ 295 ಧಾರ್ಮಿಕ ಭಾವನೆಗಳಿಗೆ ಧಕ್ಕೆ, 504 ಉದ್ದೇಶಪೂರಿತ ದ್ವೇಷ ಭಾಷಣ, 506 ಕ್ರಿಮಿನಲ್ ಬೆದರಿಕೆ ಅರ್ಜಿ ಸಲ್ಲಿಸಲಾಗಿದೆ ಎಂದು ಅರ್ಜಿ ಸಲ್ಲಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…

Read More

ತುಮಕೂರು:  ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಲ್ಲದೇ ಕಾನೂನು ಬಾಹಿರವಾಗಿ  ಬಾಲ್ಯವಿವಾಹವಾದ ಆರೋಪಿಗೆ ಗೌರವಾನ್ವಿತ ಅಧಿಕ ಜಿಲ್ಲಾ ಸತ್ರ ಮತ್ತು  FTSC1 ನ್ಯಾಯಾಲಯ (ವಿಶೇಷ ಮಕ್ಕಳ ಸ್ನೇಹಿ ನ್ಯಾಯಾಲಯ) ವು ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡ ವಿಧಿಸಿದೆ. 25/07/2021ರಂದು ಆರೋಪಿ  ಹನುಮಂತರಾಜು ಎಂಬಾತ ತಾನು ಎರಡು ಮಕ್ಕಳ ತಂದೆಯಾಗಿದ್ದರೂ ಸಹ  15 ವರ್ಷದ ಬಾಲಕಿಯನ್ನು ಸೀತಕಲ್ಲು ಬೈಲಾಂಜನೇಯ ಸ್ವಾಮಿ ದೇವಸ್ಥಾನಕ್ಕೆ ಪೂಜೆಯ ನೆಪದಲ್ಲಿ ಬಾಲಕಿಯನ್ನು ಕರೆದೊಯ್ದು ಬಾಲಕಿಯನ್ನು ವಿವಾಹವಾಗಿದ್ದ. ಅದಕ್ಕೂ ಮೊದಲು ಬಾಲಕಿಯ ಮನೆಗೆ ಹೋಗಿ ಬಾಲಕಿಯ ಮೇಲೆ ಹಲವಾರು ಬಾರಿ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದ. ಮದುವೆ ಬಳಿಕ ಆರೋಪಿಯು ಬಾಲಕಿಯನ್ನು ತನ್ನ ಮನೆಯಲ್ಲಿಟ್ಟುಕೊಂಡಿದ್ದು, ಬಾಲಕಿಯನ್ನು ಪೊಲೀಸರು ಬಳಿಕ ಆಕೆಯ ಮನೆಗೆ ಕರೆದುಕೊಂಡು ಬಂದು ಬಿಟ್ಟಿದ್ದಾರೆ. ನಂತರ ಬಾಲಕಿಯ ತಂದೆ ಆರೋಪಿಯ ವಿರುದ್ಧ  ತುಮಕೂರು ಮಹಿಳಾ ಪೊಲೀಸ್ ಠಾಣೆಯಲ್ಲಿ  ದೂರು ದಾಖಲಿಸಿದ್ದರು. ನಂತರ ತನಿಖೆ ನಡೆಸಿದ ಮಹಿಳಾ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್…

Read More

ಗುಬ್ಬಿ: ತಾಲೂಕಿನ ಕಲ್ಲೂರು ಅನಾದಿ  ಕಾಲದಿಂದಲೂ ಕಲೆಗಳ ತವರೂರು  ಎಂದೇ ಪ್ರಸಿದ್ಧಿ ಪಡೆದಿದೆ. ಇಲ್ಲಿ 20 ಕ್ಕೂ ಹೆಚ್ಚು ದೇವಾಲಯ ಗಳಿದ್ದು, ಕೆಲವು – ಐತಿಹಾಸಿಕಗಳಾಗಿವೆ. ಕಡಬ ಹೋಬಳಿ… ಕಲ್ಲೂರು ಗ್ರಾಮದ ಶ್ರೀ ಆಂಜನೇಯ ಸ್ವಾಮಿ  ದೇವಾ ಲಯಕ್ಕೆ ಸಾವಿರ ವರ್ಷಕ್ಕಿಂತ  ಹಳೆಯ ಇತಿಹಾಸವಿದ್ದು, ಇದು ಕೃಷ್ಣದೇವ ರಾಯನ ಕಾಲದಲ್ಲಿ  ವೇದವ್ಯಾಸರಾಯರಿಂದ ಪ್ರತಿಷ್ಠಾಪನೆ ಯಾಗಿದ್ದು, ಕಪ್ಪು ಶಿಲೆಯಿಂದ ವಿಗ್ರಹದ ಕೆತ್ತನೆ ಮಾಡಲಾಗಿದೆ. ಇದು ಸರಕಾರದ ಮುಜಾರಾಯಿ,  ಇಲಾಖೆಗೆ ಸೇರ್ಪಡೆಯಾಗಿದೆ. ಒಂಬತ್ತು ದಿನಗಳು ನಡೆಯುವ ಉತ್ಸವದಲ್ಲಿ ಇಂದು ಬ್ರಹ್ಮ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು ಸುಮಾರು ವರ್ಷಗಳ ಹಿಂದೆ ಬಹಳ ವೈಭವದಿಂದ ಜಾತ್ರೆ ಸೇರುತ್ತಿತ್ತು ಭಾರಿ ದನಗಳ ಜಾತ್ರೆಯು ಸೇರುತಿತ್ತು ಹತ್ತಾರು ಫಿಲಂ ಟೆಂಟ್ ಗಳು ಅಂದಿನ ಕಾಲದಲ್ಲಿ ಜಾತ್ರೆಯ ಅಂಗವಾಗಿ ಹಾಕುತ್ತಿದ್ದರು ಎಂದು ಹಿರಿಯರು ಹಳೆಯ ಜಾತ್ರೆಯ ಸೊಗಡನ್ನು ಮೆಲುಕು ಹಾಕಿದರು ವಿಶೇಷ ಪೂಜೆ, ಹೋಮ, ಹವನ ನಡೆಯಿತು. ಉರಿಯುವ ಬಿಸಿಲಿನಲ್ಲಿಯು ಭಕ್ತರು ಉತ್ಸಾಹದಿಂದ ಪಾಲ್ಗೊಂಡಿದ್ದರು. ರಥೋತ್ಸವ ದ…

Read More

2019-20ನೇ/2020-21ನೇ/2021-22ನೇ(ಜನವರಿ ಆವೃತ್ತಿ)  ಶೈಕ್ಷಣಿಕ ಸಾಲಿನಲ್ಲಿ ಕರಾಮುವಿಯಲ್ಲಿ ಪ್ರವೇಶಾತಿ ಪಡೆದ ಸ್ನಾತಕ /ಸ್ನಾತಕೋತರ ಪದವಿ ವಿದ್ಯಾರ್ಥಿಗಳಿಗೆ ಪ್ರವೇಶಾತಿ ನವೀಕರಣಕ್ಕೆ ಬೋಧನಾ ಶುಲ್ಕ ಪಾವತಿಸಲು ಅರ್ಜಿ ಆಹ್ವಾನಿಸಲಾಗಿದೆ. 2022-23ನೇ  (ಜನವರಿ ಆವೃತ್ತಿ) ಸಾಲಿಗೆ ದ್ವಿತೀಯ ವರ್ಷದ B.A/B.Com/BBA/BCA/B.Sc ಹಾಗೂ ತೃತೀಯ ವರ್ಷದ B.A/B.Com ಮತ್ತು ಅಂತಿಮ ವರ್ಷದ M.A/MCJ/M.Com/M.Sc/MBA/B.Ed ತರಗತಿಯ ಪ್ರವೇಶಾತಿ ನವೀಕರಣಕ್ಕೆ ಬೋಧನಾ ಶುಲ್ಕ  ಪಾವತಿಸಲು ದಂಡ ಶುಲ್ಕವಿಲ್ಲದೆ 2023ರ ಮಾರ್ಚ್ 31, 200ರೂ ದಂಡ ಶುಲ್ಕದೊಂದಿಗೆ 2023ರ ಏಪ್ರಿಲ್ 14 ಹಾಗೂ 400ರೂ ದಂಡ ಶುಲ್ಕದೊಂದಿಗೆ 2023ರ ಏಪ್ರಿಲ್ 29 ಕೊನೆಯ ದಿನಾಂಕವಾಗಿದೆ. ವಿದ್ಯಾರ್ಥಿಗಳು ಕರಾಮುವಿ ಅಧಿಕೃತ ವೆಬ್ ಸೈಟ್ www.ksoumysuru.ac.in  or http://ksouportal.com/views/StudentHome.aspx  ಮುಖಾಂತರ ಬೋಧನಾ ಶುಲ್ಕ ಪಾವತಿಸಿ ನಂತರ ಅರ್ಜಿಯನ್ನು ತಾವು ಮೊದಲು ಪ್ರವೇಶಾತಿ ಪಡೆದ ಕೇಂದ್ರಕ್ಕೆ ಕಡ್ಡಾಯವಾಗಿ ಸಲ್ಲಿಸುವುದು. ಹೆಚ್ಚಿನ ವಿವರಗಳಿಗಾಗಿ: ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರ, ಟೂಡಾ ಲೇಔಟ್, ರಾಜೀವ್‍ಗಾಂಧಿ ನಗರ, ಗಂಗಸಂದ್ರ ಮುಖ್ಯರಸ್ತೆ, ಮೆಳೆಕೋಟೆ, ತುಮಕೂರು-572105 ದೂರವಾಣಿ ಸಂಖ್ಯೆ- 0816–2955580, 9844506629, 9886112434, 7349474339…

Read More

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್‌ ಪ್ರೆಸ್‌ ವೇ ರಸ್ತೆ ಕಿತ್ತುಬಂದಿಲ್ಲ, ನ್ಯೂನ್ಯತೆಯನ್ನು ಸರಿಪಡಿಸಲಾಗುತ್ತಿದೆ ಎಂದು ರಸ್ತೆ ಕಿತ್ತು ಬಂದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ. ಎಕ್ಸ್‌ ಪ್ರೆಸ್‌ ವೇ ರಸ್ತೆ ಕಿತ್ತುಬಂದಿದೆ ಎಂಬ ಸುದ್ದಿಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ರಸ್ತೆ ಕಿತ್ತು ಬಂದಿಲ್ಲ, ಎಕ್ಸ್‌ಪನ್ಶನ್‌ ಜಾಯಿಂಟ್‌ ಬಳಿ ಇದ್ದ ಸಣ್ಣ ನ್ಯೂನತೆಯನ್ನು ಸರಿಪಡಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಇನ್ನೂ ಪ್ರತಾಪ್ ಸಿಂಹ ಹೇಳಿಕೆಯ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಮಾನ್ಯ ಸಂಸದರೇ, ಯಾರ ಕಿವಿಗೆ ಹೂವು ಇಡ್ತೀದಿರಿ? ಒಂದರಲ್ಲಿ ಹಳದಿ ಪಟ್ಟಿ, ಮತ್ತೊಂದರಲ್ಲಿ ಬಿಳಿ ಪಟ್ಟಿ, ಜನರ ದಿಕ್ಕು ತಪ್ಪಿಸುವುದಕ್ಕೂ ಮಿತಿ ಬೇಡವೇ? ಎಂದು ಪ್ರಶ್ನೆಸಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಅದಾನಿ ಸಮೂಹ ಸಂಸ್ಥೆಗಳ ಮೇಲಿನ ವಂಚನೆ ಆರೋಪ ತನಿಖೆಗೆ ಒತ್ತಾಯಿಸಿ ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಲು ಸಂಸತ್ ಭವನದಿಂದ ಪ್ರತಿಭಟನೆ ನಡೆಸಲು ಮುಂದಾಗಿದ್ದ  ನಾಯಕರು ಪ್ರತಿಭಟನೆ ರದ್ದುಪಡಿಸಿದ್ದಾರೆ. 18 ವಿರೋಧ ಪಕ್ಷಗಳ ನಾಯಕರು ಸಂಸತ್ತಿನಿಂದ ಇಂದು ಮಧ್ಯಾಹ್ನ ಮೆರವಣಿಗೆ ಆರಂಭಿಸಿದ್ದರು. ಮೆರವಣಿಗೆ ಆರಂಭವಾಗುತ್ತಿದ್ದಂತೆಯೇ ದೆಹಲಿ ಪೊಲೀಸರು ನಾಯಕರನ್ನು ತಡೆದರು. ಪ್ರತಿಭಟನಾನಿರತ ನಾಯಕರು ಇ.ಡಿ ಕಚೇರಿ ಕಡೆಗೆ ಮೆರವಣಿಗೆ ಸಾಗುವುದನ್ನು ತಡೆಯಲು ದೆಹಲಿ ಪೊಲೀಸರು ಬ್ಯಾರಿಕೇಡ್‌ ಗಳನ್ನು ಅಳವಡಿಸಿದ್ದು, ಭಾರೀ ಪ್ರಮಾಣದಲ್ಲಿ ಸಿಬ್ಬಂದಿಯನ್ನು ನಿಯೋಜಿಸಿದ್ದರು.  ಅಲ್ಲದೆ, ಸ್ಥಳದಲ್ಲಿ ಸೆಕ್ಷನ್ 144ನ್ನೂ ಜಾರಿಗೊಳಿಸಿದ್ದರು. ಬಿಗಿ ಪೊಲೀಸ್ ಬಂದೋ ಬಸ್ತ್ ಹಿನ್ನೆಲೆಯಲ್ಲಿ ನಾಯಕರು ಪ್ರತಿಭಟನಾ ಮೆರವಣಿಗೆ ನಡೆಸಲು ಸಾಧ್ಯವಾಗಲಿಲ್ಲ ಎಂದು ವರದಿಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ವೇತನ ಹೆಚ್ಚಿಸುವಂತೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ನೌಕರರ ಸಂಘ ನೀಡಿದ ಗಡುವು ಇಂದಿಗೆ ಅಂತ್ಯವಾಗಿ ಸರ್ಕಾರದಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ಸಿಗದಿದ್ದಾಗ ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದರು. ನೌಕರರರು ಮುಷ್ಕರ ಆರಂಭಿಸುವುದಕ್ಕೂ ಮುನ್ನ ರಾಜ್ಯ ಸರ್ಕಾರ ಕೆಪಿಟಿಸಿಎಲ್ ಮತ್ತು ಎಲ್ಲಾ ಎಸ್ಕಾಂಗಳ ನೌಕರರ ವೇತನ ಪರಿಷ್ಕರಣೆ ಮಾಡಿದೆ. ಈ ಹಿನ್ನೆಲೆ ಕೆಪಿಟಿಸಿಎಲ್ ನೌಕರರು ನಾಳೆಯ ಮುಷ್ಕರನ್ನು ವಾಪಸ್ ಪಡೆದಿದ್ದಾರೆ. 2022ರ ಏಪ್ರಿಲ್ ನಿಂದ ಅನ್ವಯವಾಗುವಂತೆ, ಈಗಿರುವ ವೇತನದ ಮೇಲೆ ಶೇಕಡಾ 20ರಷ್ಟು ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ ಎಂದು ಇಂಧನ ಖಾತೆ ಸಚಿವ ಸುನಿಲ್ ಕುಮಾರ್ ಕಾರ್ಕಳ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ತುರುವೇಕೆರೆ: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಬಗ್ಗೆ ರಾಜ್ಯದ ಜನರಿಗೆ ಗ್ಯಾರಂಟಿ ಇಲ್ಲ ಆದರೂ 200 ಯೂನಿಟ್ ವಿದ್ಯುತ್ ಹಾಗೂ 2000 ರೂ ಮಹಿಳೆಯರಿಗೆ ಕೊಡುತ್ತೇವೆ ಎಂದು ಹೊರಟಿದ್ದಾರೆ, ಮನೆಯಲ್ಲಿ ಅತ್ತೆ ಸೊಸೆ ನಡುವೆ ಜಗಳ ಶುರುವಾಗುವ ಹಾಗೆ ಮಾಡಿದ್ದಾರೆ ಎಂದು ಜೆ.ಡಿ.ಎಸ್. ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಆರೋಪಿಸಿದರು. ಪಟ್ಟಣದ ಗುರುಭವನ ಆವರಣದಲ್ಲಿ ತಾಲೂಕು ಜೆಡಿಎಸ್ ಪಕ್ಷದಿಂದ ಆಯೋಜಿಸಿದ್ದ ಮುಸ್ಲಿಂ ಸಮಾವೇಶದಲ್ಲಿ ಮಾತನಾಡಿದ ಅವರು, ಜೆಡಿಎಸ್ ಪಕ್ಷ ಬಡವರ ದೀನದಲಿತರ ಪಕ್ಷ. ಜೆಡಿಎಸ್ ಅಧಿಕಾರಕ್ಕೆ ಬಂದರೆ ಈಗಾಗಲೇ ಕುಮಾರಸ್ವಾಮಿ ಅವರು ಹೇಳಿರುವಂತೆ ಪಂಚರತ್ನ ಯೋಜನೆಗಳನ್ನು ಜಾರಿಗೆ ತರಲಿದ್ದಾರೆ. ಆಸ್ಪತ್ರೆ ರೈತರಿಗೆ ಒಂದು ಎಕರೆ ಜಮೀನು ಇರುವಂತವರಿಗೆ 10,000 ಗಳು ಉಚಿತ ವೃದ್ದರಿಗೆ ಮಹಿಳೆಯರಿಗೆ ತಿಂಗಳಿಗೆ 5,000ಗಳನ್ನು ನೀಡಲಿದ್ದಾರೆ. ಬಿ.ಜೆ.ಪಿ ಸರ್ಕಾರ ಲೂಟಿ ಮಾಡಿ, 5 ಲಕ್ಷ ಕೋಟಿ ಸಾಲವನ್ನು ರಾಜ್ಯದ ಜನತೆಯ ಮೇಲೆ ಹೋರಿಸಿದ್ದಾರೆ, ನಮ್ಮ ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಸರ್ಕಾರದಲ್ಲಿ ಹಣವಿಲ್ಲದಂತಾಗಿದೆ ಎಂದು ಅವರು ಹೇಳಿದರು. ಬಿಜೆಪಿ ಪಕ್ಷ…

Read More

2023 /24ರ ಸಾಲಿನ ಬೆಳಗಾವಿ ಮಹಾನಗರ ಪಾಲಿಕೆ ಬಜೆಟ್ ಮಂಡಿಸಿದ್ದು ಈ ಬಜೆಟ್ ವಿರುದ್ಧವಾಗಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಹಾಗೂ ರಮೇಶ್ ಕುಡಚಿ ಅವರು ಬಜೆಟ್ ಮಂಡನೆ ಪ್ರಕ್ರಿಯೆಗೆ ತೀವ್ರವಾದ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಹಾನಗರ ಪಾಲಿಕೆಯ ಸಭಾಂಗಣದ ಶಿಷ್ಟಾಚಾರವನ್ನು ಗಾಳಿಗೆ ತೂರಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರ. ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ್ ಘಾಳಿ ಅವರ ಮೇಲೆ ತಿವರ ವಾಗ್ದಾಳಿ ನಡೆಸಿದರು. ಸಭಾಂಗಣದಲ್ಲಿ ನಿಮ್ಮ ಕೆಲಸ ಏನು ಮಹಾನಗರ ಪಾಲಿಕೆಯ ಮಹಾಪೌರರು ಆದೇಶದ ಮೇರೆಗೆ ನಡೆಯುವಂತ ನೀವು ಮಹಾಪೌರರ ಹುದ್ದೆಗೆ ಅಗೌರವ ತಂದಿದ್ದೀರಿ ಸಭಾಂಗಣದ ಅಧ್ಯಕ್ಷರ ಉಪಸ್ಥಿತಿಯಲ್ಲಿ ಸದಸ್ಯರ ಪ್ರಶ್ನೆಗಳಿಗೆ ಉತ್ತರ ನೀಡುವುದು ಸಭಾಂಗಣದ ಶಿಷ್ಟಾಚಾರದ ವಿರುದ್ಧವಾಗಿದೆ. ಈ ಅಧಿಕಾರವನ್ನು ನೀಡಿದವರು ಯಾರು ? ನಿಮಗೆ ಎಂದು ಖಾರವಾಗಿ ಪ್ರಶ್ನೆ ಮಾಡಿದ್ದಾರೆ. ಸ್ಥಾಯಿ ಸಮೀತಿ ರಚನೆ ಆಗದಿರುವುದರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಮಹಾನಗರ ಪಾಲಿಕೆ ಸಂಪೂರ್ಣವಾಗಿ ಸಂವಿಧಾನ ನೇಮಾವಳಿಗಳನ್ನು ಗಾಳಿಗೆ ತೂರಿದ್ದಾರೆ. ಸ್ಥಳೀಯ ಸಂಸ್ಥೆಗಳ ಕಾನೂನು ತಜ್ಞರು ಇದನ್ನು ಒಪ್ಪುವುದಿಲ್ಲ ಮಹಾನಗರ ಪಾಲಿಕೆ…

Read More

ಬೆಳಗಾವಿ: ಹಲಗಾ ಗ್ರಾಮದಲ್ಲಿ ನೂತನ ಜೈನ್ ಸಮುದಾಯ ಭವನದ ನಿರ್ಮಾಣಕ್ಕಾಗಿ ಅಲ್ಪ ಸಂಖ್ಯಾತರ ನಿಧಿಯಿಂದ 50 ಲಕ್ಷ ರೂ,ಗಳನ್ನು ಮಂಜೂರಾಗಿದ್ದು, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಮಂಗಳವಾರ ಸಮುದಾಯ ಭವನ ನಿರ್ಮಾಣದ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು. ಈ ಸಂಬಂಧ ನಡೆದ ಸರಳ ಕಾರ್ಯಕ್ರಮದಲ್ಲಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ್, ಜೈನ ಧರ್ಮ ಅಹಿಂಸಾ ಧರ್ಮವಾಗಿದ್ದು, ಜನರು ಅತ್ಯಂತ ಸೌಮ್ಯವಾದಿಗಳು. ಇಡೀ ವಿಶ್ವಕ್ಕೆ ಅಹಿಂಸೆಯ ತತ್ವಗಳನ್ನು ಸಾರಿರುವ, ಎಲ್ಲರನ್ನೂ ಸಮಾನವಾಗಿ, ಪ್ರೀತಿ, ವಿಶ್ವಾಸದಿಂದ ಕಾಣುವ ಧರ್ಮವಾಗಿದೆ. ಕ್ಷೇತ್ರದಾದ್ಯಂತ ಜೈನ ಸಮುದಾಯದವರಿಗೆ ಅನೇಕ ಸೌಲಭ್ಯಗಳನ್ನು ಒದಗಿಸಿಕೊಟ್ಟಿದ್ದೇನೆ. ನಿಮ್ಮ ಸಹಕಾರ ಎಂದಿನಂತೆ ಮುಂದಿನ ದಿನಗಳಲ್ಲಿ ಸಹ ಇರಲಿ ಎಂದು ವಿನಂತಿಸಿದರು. ಈ ಸಮಯದಲ್ಲಿ ಬಾಲ ಆಚಾರ್ಯ ಶ್ರೀ 108 ಸಿದ್ದಸೇನಾ ಮುನಿ ಮಹಾರಾಜರು, ಸಹೋದರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಗ್ರಾಮದ ಹಿರಿಯರು, ಜೈನ ಸಮಾಜದ ಎಲ್ಲ ಮುಖಂಡರು, ಧನ್ಯಕುಮಾರ ದೇಸಾಯಿ, ಸುಕುಮಾರ ಹುಡೇದ, ಬಾಬು ದೇಸಾಯಿ, ಚಾರುಕೀರ್ತಿ ಸೈಬಣ್ಣವರ, ಸಂತೋಷ ಪಾಟೀಲ, ಮಹಾವೀರ ಅಲಾರವಾಡ,…

Read More