Author: admin

ಬೆಳಗಾವಿ: ಬೆಳಗಾವಿ ಜಿಲ್ಲೆ ಖಾನಾಪೂರ ತಾಲೂಕಿನ ಮಲಪ್ರಭಾ ನದೀ ತೀರದ ಚಿಕ್ಕಹಟ್ಟಿಹೊಳಿ ವೀರಭದ್ರೇಶ್ವರ ಜಾತ್ರೆ ಅದ್ದೂರಿಯಾಗಿ ಸಂಭ್ರಮದಿಂದ ಜರುಗಿತು. ರಥೋತ್ಸವ ಜರುಗುವ ಸಂಭ್ರಮದಲ್ಲಿ ಲಕ್ಷ್ಮೀ ಹೆಬ್ಬಾಳಕರ ತವರೂರು ಅಭಿಮಾನಿ ಬಳಗ ಚಿಕ್ಕಹಟ್ಟಿಹೊಳಿಯ ಅಧ್ಯಕ್ಷರು ಸರ್ವ ಸದಸ್ಯರು ಸೇರಿ ಬಾಳೆಹಣ್ಣಿನ ಮೇಲೆ “” ಲಕ್ಷ್ಮೀ ಅಕ್ಕಾ 2023 ಮಂತ್ರಿ ಪಕ್ಕಾ “” ಎಂದು ಬರೆದು 111 ಬಾಳೆ ಹಣ್ಣುಗಳನ್ನು ರಥೋತ್ಸವ ಜರುಗುವ ಸಂಭ್ರಮದಲ್ಲಿ ಭಕ್ತಿಯಿಂದ ಶ್ರೀ ವೀರಭದ್ರೇಶ್ವರನಲ್ಲಿ ಬೇಡಿಕೊಂಡು ಭಕ್ತಿಯಿಂದ ರಥಕ್ಕೆ ಬಾಳೇಹಣ್ಣನ್ನು ಸಮರ್ಪಿಸಿದರು. ಈ ವೇಳೆ ಲಕ್ಷ್ಮಿ ಹೆಬ್ಬಾಳಕರ ತವರೂರು ಅಭಿಮಾನಿ ಬಳಗದ ಅಧ್ಯಕ್ಷರಾದ ವೀರಭದ್ರ ಸಣ್ಣಕ್ಕಿ, ಜಗದೀಶ ಕಾದ್ರೊಳ್ಳಿ , ಮಂಜುನಾಥ್ ಮಾಸ್ತಮರಡಿ, ಈರಯ್ಯ ಹಾಲಗಿಮರ್ಡಿ, ನಾಗರಾಜ ಸಣ್ಣಕ್ಕಿ, ಶ್ರೀಧರ ಜೈನರ, ಪ್ರಕಾಶ ತಳವಾರ, ಸೇರಿದಂತೆ ಗ್ರಾಮದ ಹಿರಿಯರು ಹಾಜರಿದ್ದರು. ಕುಕಡೊಳ್ಳಿ, ಎಮ್ ಕೆ ಹುಬ್ಬಳ್ಳಿ, ಪಾರೀಶ್ವಾಡ ಹಿರೆಬಾಗೇವಾಡಿ, ಅರಳಿಕಟ್ಟಿ,ಬಸ್ಸಾಪೂರ, ಸೇರಿದಂತೆ ಜಿಲ್ಲೆಯ ವಿವಿದ ಗ್ರಾಮಗಳ ಭಕ್ತರು ಸೇರಿದಂತೆ ಧಾರವಾಡ, ಬಾಗಲಕೋಟಿ, ಹಾವೇರಿ, ವಿಜಯಪೂರ, ಜಿಲ್ಲೆಗಳಿಂದ ಮತ್ತು ಮಹಾರಾಷ್ಟ್ರ ರಾಜ್ಯದ…

Read More

ಪೋಪ್ ಅವರ ಈಸ್ಟರ್ ಸಂದೇಶವು ಎಲ್ಲಾ ಯುದ್ಧಗಳನ್ನು ಕೊನೆಗೊಳಿಸಲು ಕರೆ ನೀಡುತ್ತದೆ. ಪೋಪ್ ಸಂದೇಶವು ಮತ್ತೊಮ್ಮೆ ಉಕ್ರೇನ್ ಜನರನ್ನು ಹುತಾತ್ಮರೆಂದು ಉಲ್ಲೇಖಿಸುತ್ತದೆ. ಈಸ್ಟರ್ ಭರವಸೆಯೊಂದಿಗೆ ಮುನ್ನಡೆಯಲು ಸ್ಫೂರ್ತಿಯಾಗಿದೆ ಎಂದು ಪೋಪ್ ಫ್ರಾನ್ಸಿಸ್ ಹೇಳಿದ್ದಾರೆ. ವಿಪರೀತ ಚಳಿ ಮತ್ತು ಅನಾರೋಗ್ಯದ ಕಾರಣ, ವ್ಯಾಟಿಕನ್‌ನ ಸೇಂಟ್ ಪೀಟರ್ಸ್ ಬೆಸಿಲಿಕಾದ ಹೊರಗಿನ ಸಮಾರಂಭಕ್ಕೆ ಪೋಪ್ ಗೈರುಹಾಜರಾಗಿದ್ದರು. ಪ್ರಪಂಚದಾದ್ಯಂತದ ಕ್ರೈಸ್ತರು ಇಂದು ಈಸ್ಟರ್ ಅನ್ನು ಆಚರಿಸುತ್ತಿದ್ದಾರೆ. ನಿನ್ನೆ ಮಧ್ಯರಾತ್ರಿಯಿಂದ ಪ್ರಾರ್ಥನಾ ಸ್ಥಳಗಳಲ್ಲಿ ವಿಶೇಷ ಪ್ರಾರ್ಥನೆಗಳು ಮತ್ತು ಪುನರುತ್ಥಾನ ದಿನದ ಸೇವೆಗಳು ನಡೆದವು. ಸಿರೋ-ಮಲಬಾರ್ ಚರ್ಚ್‌ನ ಪ್ರಧಾನ ಕಛೇರಿಯಾದ ಕಾಕ್ಕನಾಡು ಮೌಂಟ್ ಸೇಂಟ್ ಥಾಮಸ್‌ನಲ್ಲಿ ಕಾರ್ಡಿನಲ್ ಮಾರ್ ಜಾರ್ಜ್ ಅಲೆಂಚೇರಿ ಮತ್ತು ಕರಿಕೋಟ್ ಸೈಂಟ್ ಥಾಮಸ್ ಚರ್ಚ್‌ನಲ್ಲಿ ಜೋಸೆಫ್ ಮಾರ್ ಗ್ರೆಗೋರಿಯೋಸ್ ಮೆಟ್ರೋಪಾಲಿಟನ್ ಅವರು ಪ್ರಾರ್ಥನೆಯನ್ನು ನೆರವೇರಿಸಿದರು. ಈಸ್ಟರ್ ಪ್ರೀತಿ, ಸಹಿಷ್ಣುತೆ ಮತ್ತು ಭರವಸೆಯ ದಿನವಾಗಿದೆ. ಮೂರನೇ ದಿನ ಗಾಗುಲ್ತಮಾಲಾದಲ್ಲಿ ಶಿಲುಬೆಗೇರಿಸಿದ ಕ್ರಿಸ್ತನ ಪುನರುತ್ಥಾನದ ಸ್ಮರಣಾರ್ಥ ಶನಿವಾರ ಮಧ್ಯರಾತ್ರಿಯಿಂದಲೇ ದೇಗುಲಗಳಲ್ಲಿ ವಿಶೇಷ ಪ್ರಾರ್ಥನೆಗಳು ನಡೆದವು. ಚರ್ಚ್, ಕುಟುಂಬ ಮತ್ತು…

Read More

ಬೆಳಗಾವಿ: ಟಿಕೆಟ್‌ ನೀರಿಕ್ಷೆಯಲ್ಲಿದ್ದ ಅಭ್ಯರ್ಥಿಗಳು ಕೈ ತಪ್ಪಿದರಿಂದ ನಿರಾಸೆಯಾಗುವುದು ಸಹಜ, ಅವರನ್ನು ಮನವೊಲಿಸುವ ಪ್ರಯತ್ನಗಳು ನಡೆಯಲಿವೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ ಜಾರಕಿಹೊಳಿ ಅವರು ಹೇಳಿದರು. ಜಿಲ್ಲಾ ಕಾಂಗ್ರೆಸ್‌ ಭವನದಲ್ಲಿ ಪ್ರತಿಕಾಗೋಷ್ಠಿಯಲ್ಲಿ ಮಾತಾಡಿದ ಅವರು, ಕಾಂಗ್ರೆಸ್‌ ನಿಂದ ಗೋಕಾಕ ಕ್ಷೇತ್ರದಿಂದ ಸ್ಪರ್ಧಿಸಲು ಕಡಾಡಿ ಅವರನ್ನು ಕಣಕ್ಕೆ ಇಳಿಸಲಾಗಿದೆ. ಅವರಿಗೆ, ಯಾವ ಆಧಾರದ ಮೇಲೆ ಟಿಕೆಟ್ ಸಿಕ್ಕಿದೆ ನನಗೆ ಗೊತ್ತಿಲ್ಲ, ಹೈಕಮಾಂಡ್ ತೀರ್ಮಾನ ಅಂತಿಮ ತೀರ್ಮಾನ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಹೇಳಿದರು. ಯಾವ ಕ್ಷೇತ್ರದಕ್ಕೆ ಯಾವ ಅಭ್ಯರ್ಥಿ ಸೂಕ್ತ ಎಂದು ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ನಾವು ಕೇಳಿದ ವ್ಯಕ್ತಿಗೆ ಟಿಕೆಟ್ ಸಿಗಬೇಕೆಂಬವುದು ನಿರ್ಧಾರ ಇಲ್ಲ ಎಂದ ಅವರು, ಬಂಡಾಯದ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮುಖಂಡರನ್ನು ಮನವೊಲಿಸುವ ಪ್ರಯತ್ನಗಳು ನಡೆದಿವೆ. ಟಿಕೆಟ್‌ ನೀಡಿದ ಅಭ್ಯರ್ಥಿಯ ಗೆಲುವಿಗೆ ಸಹಕರಿಸಬೇಕೆಂದು ಸೂಚನೆ ನೀಡಲಾಗಿದೆ. ಆಕಾಂಕ್ಷಿಗಳಪಟ್ಟಿ ಬಳಹ ಇದೆ ಆತ್ಮೀಯರಿಗೆ ಸಿಗಬೇಕೆಂಬುವ ನಿರ್ಧಾರ ನಮ್ಮ ಕೈಯಲಿಲ್ಲ ಅದು ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು…

Read More

ಬೆಂಗಳೂರು: ಅಮುಲ್ ​ನಲ್ಲಿ, ಕೆಎಂಎಫ್ ​​ಹಾಲು ಒಕ್ಕೂಟ ವಿಲೀನ ಚರ್ಚೆ ಮತ್ತೆ ಮುನ್ನಲೆಗೆ ಬಂದಿದೆ. ರಾಜ್ಯ ಬಿಜೆಪಿ ಸರ್ಕಾರ ಈ ವಿಚಾರವಾಗಿ ಸ್ಪಷ್ಟನೆ ನೀಡಿದ್ದರೂ, ಪ್ರತಿಪಕ್ಷಗಳು ಚುನಾವಣೆ ಹೊತ್ತಿಲಿನಲ್ಲಿ ಪ್ರತಿರೋಧದ ದಾಳವಾಗಿ ಬಳಸಿಕೊಳ್ಳುತ್ತವೆ. ಈ ವಿಚಾರವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್​ ಮಾಡಿ ರಾಜ್ಯ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರ ವಿರುದ್ಧ ಹರಿಹಾಯ್ದಿದ್ದಾರೆ. “ಕರ್ನಾಟಕದಲ್ಲಿ ನಮ್ಮ ಹಿರಿಯರು ಕಟ್ಟಿ ಬೆಳೆಸಿದ್ದ ಬ್ಯಾಂಕುಗಳನ್ನು ತಿಂದು ಮುಕ್ಕಿದ್ದಾಯಿತು. ಈಗ ರೈತರ ಪಾಲಿನ ಸಂಜೀವಿನಿಯಾಗಿರುವ ನಂದಿನಿಯನ್ನು ಆಪೋಶನ ತೆಗೆದುಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್​ ಶಾ ಸಂಚು ಹೂಡಿದ್ದಾರೆ. ಕನ್ನಡಿಗರೇ ಎಚ್ಚರ…!!” ಎಂದು ಟ್ವೀಟ್​ ಮಾಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಗುಬ್ಬಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ಅಪಘಾತದಲ್ಲಿ ದ್ವಿಚಕ್ರ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುಬ್ಬಿ ತಾಲೂಕಿನ ನಿಟ್ಟೂರು ಬಳಿ ನಡೆದಿದೆ. ರೈಲ್ವೆ ಇಲಾಖೆಯ ನಿವೃತ್ತ ನೌಕರ ತಿಮ್ಮಯ್ಯ(70) ಮೃತಪಟ್ಟವರು  ಎನ್ನಲಾಗಿದೆ.  ಟಿವಿಎಸ್ ನಲ್ಲಿ ತೆರಳುತ್ತಿದ್ದ ವೇಳೆ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಂ ತಿಮ್ಮಯ್ಯ ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ. ಘಟನಾ ಸ್ಥಳಕ್ಕೆ ಗುಬ್ಬಿ ಪಿಎಸ್ಐ ಮುತ್ತುರಾಜ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಭೀಕರ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭೀಕರ ಅಪಘಾತ ಕಂಡು ಜನ ಬೆಚ್ಚಿಬಿದ್ದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಹುಬ್ಬಳ್ಳಿ: 73 ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಮತಕ್ಷೇತ್ರದಲ್ಲಿ ವಿಧಾನಸಭಾ ಚುನಾವಣೆಗೆ ಸಕಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಪ್ರಜಾಪ್ರಭುತ್ವದ ಹಬ್ಬವನ್ನು ಎಲ್ಲರೂ ಸೇರಿ ಆಚರಿಸಬೇಕು ಎಂದು 73 ಹುಬ್ಬಳ್ಳಿ-ಧಾರವಾಡ ಕೇಂದ್ರ ವಿಧಾನಸಭಾ ಮತಕ್ಷೇತ್ರದ ಚುನಾವಣಾಧಿಕಾರಿಯಾದ ಡಾ.ಬಿ.ಗೋಪಾಲಕೃಷ್ಣ ಹೇಳಿದರು. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರ ಸಭಾಭವನದಲ್ಲಿ 73 ಮತಕ್ಷೇತ್ರ ವ್ಯಾಪ್ತಿ, ಚುನಾವಣಾ ಸಿದ್ಧತೆ, ಸಿಬ್ಬಂದಿ ನೇಮಕ, ಅಕ್ರಮ ತಡೆಗೆ ಕೈಗೊಂಡ ಕ್ರಮಗಳು, ಚೆಕ್ ಪೋಸ್ಟ್ ಹಾಗೂ ಇತರ ವಿಷಯಗಳ ಕುರಿತು ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಜಿಲ್ಲಾ ಸ್ವೀಪ್ ಯೋಜನೆಯಡಿ ಮತದಾನದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಏಪ್ರಿಲ್ 1ಕ್ಕೆ 18 ವರ್ಷ ಪೂರ್ಣಗೊಂಡಿರುವ ಅರ್ಹ ಯುವ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಅಲ್ಲದೇ ಮತದಾನ ನಡೆಯುವ 10 ದಿನ ಮುಂಚಿತವಾಗಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರ್ಪಡೆಗೊಳಿಸಲು ಅವಕಾಶವಿರುವುದು. ಎಲ್ಲಾ ಮತಗಟ್ಟೆಗಳಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತಿದೆ ಎಂದರು. ಈ ಕ್ಷೇತ್ರದ ವ್ಯಾಪ್ತಿಯಲ್ಲಿ 2,46,120 ಮತದಾರರು ಇದ್ದು, ಅದರಲ್ಲಿ 1,22,006 ಪುರುಷರು, 1,24,076…

Read More

ಬೆಂಗಳೂರು: ಕೆಎಂಎಫ್​​ನ ನಂದಿನಿ ರಾಷ್ಟ್ರ ಮಟ್ಟದ ಬ್ರ್ಯಾಂಡ್. ದೇಶದಲ್ಲಿ ನಂ.1 ಸ್ಥಾನಕ್ಕೆ ಏಳಿಗೆ ಹೊಂದಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಯಲ್ಲಿ ಶನಿವಾರ ಹೇಳಿದರು. ಅಮುಲ್ ಉತ್ಪನ್ನಗಳು ಬೆಂಗಳೂರಿನಲ್ಲಿ ಮಾರಾಟವಾಗುವ ಬಗ್ಗೆ ತೀವ್ರ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಪ್ರತಿಕ್ರಿಯಿಸಿದ ಅವರು, ಅಮುಲ್ ವಿಚಾರದಲ್ಲಿ ಕಾಂಗ್ರೆಸ್​ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು. ಅಮುಲ್ ಬ್ರ್ಯಾಂಡ್​ ವಿಚಾರವಾಗಿ ಯಾರೂ ಆತಂಕಪಡಬೇಕಿಲ್ಲ. ನಂದಿನಿ ಬ್ರ್ಯಾಂಡ್ ಉತ್ಪನ್ನಗಳ ವೃದ್ಧಿಗೆ​ ಮತ್ತಷ್ಟು ಕ್ರಮಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು. ಈ ಮಧ್ಯೆ, ನಂದಿನಿ ಬ್ರ್ಯಾಂಡ್ ವಿಚಾರವಾಗಿ ಸ್ಪಷ್ಟನೆ ನೀಡಿದ ಸಚಿವ ಸುಧಾಕರ್, ಹಾಲಿಗೆ ಪ್ರೋತ್ಸಾಹ ಧನ‌ ಕೊಟ್ಟಿದ್ದರೆ‌ ಅದು‌ ಬಿಜೆಪಿ ಸರ್ಕಾರ. ಪ್ರತಿ‌ ಲೀಟರ್ ಗೆ 5 ರೂ. ಪ್ರೋತ್ಸಾಹ ಧನ ಬಿಜೆಪಿ ಸರ್ಕಾರ ಕೊಟ್ಟಿದೆ. ಕೆಎಂಎಫ್ ಆದಾಯದಲ್ಲಿ ಹಾಲು ಉತ್ಪಾದಕರಿಗೆ‌ ಕೊಡುವ ವ್ಯವಸ್ಥೆ ಮಾಡಲಾಗಿದೆ. ನಂದಿನಿ‌ ಹಾಲನ್ನು ಕೇವಲ ರಾಜ್ಯಕ್ಕೆ ಸೀಮಿತ ಮಾಡಬೇಡಿ. ಈಗಾಗಲೇ ಸೇನೆಗೆ, ತಿರುಪತಿ ತಿರುಮಲ,‌ ಮಹಾರಾಷ್ಟ್ರಕ್ಕೆ ನಮ್ಮ ಹಾಲು ಪೂರೈಕೆಯಾಗುತ್ತಿದೆ ಎಂದು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ…

Read More

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಿನಗಳ ದಕ್ಷಿಣ ಭಾರತದ ಪ್ರವಾಸ ಇಂದಿನಿಂದ ಆರಂಭವಾಗಲಿದೆ. ತೆಲಂಗಾಣ, ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳಲ್ಲಿ ಪ್ರವಾಸ. ಪ್ರಧಾನಿ ಇಂದು ಬೆಳಗ್ಗೆ 11.45ಕ್ಕೆ ತೆಲಂಗಾಣದ ಸಿಕಂದರಾಬಾದ್‌ಗೆ ಆಗಮಿಸಿದ್ದು, ಸಿಕಂದರಾಬಾದ್-ತಿರುಪತಿ ವಂದೇಭಾರತ್ ರೈಲು ಸೇವೆಯನ್ನು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 12.15ಕ್ಕೆ ಹೈದರಾಬಾದ್ ಪರೇಡ್ ಮೈದಾನದಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ 11,360 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳನ್ನು ರಾಷ್ಟ್ರಕ್ಕೆ ಹಸ್ತಾಂತರಿಸಲಾಗುವುದು. ಬೀಬಿನಗರದಲ್ಲಿ ಏಮ್ಸ್‌ಗೆ ಶಂಕುಸ್ಥಾಪನೆಯನ್ನೂ ಪ್ರಧಾನಿ ನೆರವೇರಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ತಮಿಳುನಾಡಿಗೆ ಆಗಮಿಸಲಿರುವ ನರೇಂದ್ರ ಮೋದಿ ಅವರು ಚೆನ್ನೈ ವಿಮಾನ ನಿಲ್ದಾಣದಲ್ಲಿ ನವೀಕೃತ ಟರ್ಮಿನಲ್ ಅನ್ನು ಉದ್ಘಾಟಿಸಲಿದ್ದಾರೆ. 1260 ಕೋಟಿ ವೆಚ್ಚದಲ್ಲಿ ಟರ್ಮಿನಲ್‌ನ ಮೊದಲ ಹಂತದ ನವೀಕರಣ ಪೂರ್ಣಗೊಂಡಿದೆ. ಚೆನ್ನೈ-ಕೊಯಮತ್ತೂರು ವಂದೇಭಾರತ್ ರೈಲು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಸಂಜೆ 4:00 ಗಂಟೆಗೆ ಫ್ಲ್ಯಾಗ್ ಆಫ್ ಆಗಲಿದೆ. ಸಂಜೆ 4.45ಕ್ಕೆ ಶ್ರೀರಾಮಕೃಷ್ಣ ಮಠದ 125ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲೂ ಪ್ರಧಾನಿ ಭಾಗವಹಿಸಲಿದ್ದಾರೆ. ಅವರು 6:30 ಕ್ಕೆ ಅಲ್‌ಸ್ಟ್ರಾಮ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಸಾರ್ವಜನಿಕ…

Read More

ಎನ್‌ಸಿಪಿ ಮುಖ್ಯಸ್ಥ ಶರತ್ ಪವಾರ್ ಅದಾನಿಯನ್ನು ಬೆಂಬಲಿಸಿದ್ದಾರೆ. ಅದಾನಿ ವಿವಾದದಲ್ಲಿ ಜೆಪಿಸಿ ತನಿಖೆ ಅಗತ್ಯವಿಲ್ಲ ಎಂದು ಶರತ್ ಪವಾರ್ ಹೇಳಿದ್ದಾರೆ. ಹಿಂಡೆನ್‌ಬರ್ಗ್ ವರದಿಯ ವಿಶ್ವಾಸಾರ್ಹತೆಯನ್ನು ಪವಾರ್ ಪ್ರಶ್ನಿಸಿದ್ದಾರೆ. ಸುಪ್ರೀಂ ಕೋರ್ಟ್ ಈ ಬಗ್ಗೆ ತನಿಖೆಯನ್ನು ಘೋಷಿಸಿದೆ ಮತ್ತು ಅದಕ್ಕಾಗಿ ಸಮಿತಿಯನ್ನು ನೇಮಿಸಲಾಗಿದೆ ಮತ್ತು ಈ ಪರಿಸ್ಥಿತಿಯಲ್ಲಿ ಜೆಪಿಸಿ ತನಿಖೆ ಪ್ರಸ್ತುತವಲ್ಲ ಎಂದು ಪವಾರ್ ಹೇಳಿದರು. ಎನ್‌ಸಿಪಿ ಮುಖ್ಯಸ್ಥರು ವಿರೋಧ ಪಕ್ಷಗಳು ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸುತ್ತಿಲ್ಲ ಮತ್ತು ಸಾಮಾನ್ಯ ಜನರ ಅನೇಕ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಿವೆ ಎಂದು ಟೀಕಿಸಿದರು. 2024ರಲ್ಲಿ ಬಿಜೆಪಿಯನ್ನು ಕಡೆಗಣಿಸಲು ಸಾಧ್ಯವಿಲ್ಲ, ಸ್ಪಷ್ಟ ಮಾರ್ಗಸೂಚಿಗಳೊಂದಿಗೆ ಪ್ರತಿಪಕ್ಷಗಳು ಒಟ್ಟಾಗಿ ಕೆಲಸ ಮಾಡದಿದ್ದರೆ ಒಗ್ಗಟ್ಟಿನಿಂದ ಯಾವುದೇ ಪ್ರಯೋಜನವಾಗದು. ವಿರೋಧ ಪಕ್ಷಗಳ ನಡುವೆ ಒಮ್ಮತ ಅತ್ಯಗತ್ಯ ಎಂದು ಪವಾರ್ ಹೇಳಿದ್ದಾರೆ. ಇದೇ ವೇಳೆ ಪವಾರ್‌ಗೆ ಉತ್ತರ ನೀಡಲು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಮುಂದಾದರು. ಎನ್‌ಸಿಪಿ ಅವರ ದೃಷ್ಟಿಕೋನವನ್ನು ಹೊಂದಿರಬಹುದು, ಆದರೆ ಅದಾನಿ ಗ್ರೂಪ್ ವಿರುದ್ಧದ ಆರೋಪವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಂಬಂಧಿಸಿದೆ ಮತ್ತು…

Read More

ಇಂಡಿಗೋ ವಿಮಾನದಲ್ಲಿ ಮತ್ತೆ ಪ್ರಯಾಣಿಕರ ಅನುಚಿತ ವರ್ತನೆ. ಕುಡಿದ ಮತ್ತಿನಲ್ಲಿದ್ದ ಪ್ರಯಾಣಿಕನೊಬ್ಬ ಇಂಡಿಗೋ ವಿಮಾನದ ತುರ್ತು ಬಾಗಿಲು ತೆರೆಯಲು ಯತ್ನಿಸುತ್ತಿದ್ದ. ದೆಹಲಿ-ಬೆಂಗಳೂರು ವಿಮಾನದಲ್ಲಿ ಈ ಘಟನೆ ನಡೆದಿದೆ. ಪ್ರಯಾಣಿಕರನ್ನು ಬೆಂಗಳೂರಿನ ಸಿಐಎಸ್‌ಎಫ್‌ಗೆ ಹಸ್ತಾಂತರಿಸಲಾಗಿದೆ. ಘಟನೆಯ ಕುರಿತು ಇಂಡಿಗೋ ತನಿಖೆ ಆರಂಭಿಸಿದೆ. ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ 6ಇ 308 ವಿಮಾನದಲ್ಲಿ ಪಾನಮತ್ತ ಪ್ರಯಾಣಿಕನೊಬ್ಬ ತುರ್ತು ಬಾಗಿಲು ತೆರೆಯಲು ಯತ್ನಿಸಿದ್ದಾನೆ. ಇದನ್ನು ಗಮನಿಸಿದ ವಿಮಾನ ಸಿಬ್ಬಂದಿ ಕ್ಯಾಪ್ಟನ್‌ಗೆ ಮಾಹಿತಿ ನೀಡಿ ನಂತರ ಪ್ರಯಾಣಿಕರನ್ನು ಸ್ಥಳಾಂತರಿಸುತ್ತಾರೆ. ಇದರಿಂದಾಗಿ ವಿಮಾನದ ಸುರಕ್ಷಿತ ಕಾರ್ಯಾಚರಣೆಗೆ ಯಾವುದೇ ತೊಂದರೆಯಾಗಿಲ್ಲ ಮತ್ತು ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಏರ್ ಲೈನ್ ವಕ್ತಾರರು ಸ್ಪಷ್ಟಪಡಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More