Author: admin

ಬಾಗಲಕೋಟೆ:‌ ನರೇಂದ್ರ ಮೋದಿಜಿ ಮುಂದೆ ರಾಹುಲ್ ಗಾಂಧಿ ಸಮಾ ಆಗಲು ಸಾಧ್ಯನಾ? ಎಲ್ಲಿಯಾ ನರೇಂದ್ರ ಮೋದಿ, ಎಲ್ಲಿಯ ರಾಹುಲ್ ಗಾಂಧಿ. ? ಎಂದು ಬಿ.ಎಸ್.ಯಡಿಯೂರಪ್ಪ ಪ್ರಶಿಸಿದ್ದಾರೆ. ಈ ಕುರಿತು ಬಾಗಲಕೋಟೆಯಲ್ಲಿ ಮಂಗಳವಾರ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸೋತು ವಿಸರ್ಜನೆ ಹಂತಕ್ಕೆ ಬಂದಿದೆ.ಭಾರತ ಭವಿಷ್ಯದಲ್ಲಿ ಕಾಂಗ್ರೆಸ್ ಮುಕ್ತವಾಗಲಿದೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರೇ ನಿಮ್ಮ ನಾಯಕರು ಯಾರಿದ್ದಾರೆ.? ನೀವು ತಬ್ಬಲಿ ಆಗಿದ್ದೀರಿ ಎಂದು ವ್ಯಂಗ್ಯವಾಡಿದ್ದಾರೆ. ತಬ್ಬಲಿಯಾಗಿರುವ ಕಾಂಗ್ರೆಸ್ ಪಕ್ಷದವರು ನರೇಂದ್ರ ಮೋದಿಯವರಿಗೆ ಹೇಗೆ ಸಮ ಎಂದರಲ್ಲದೆ, ಮೂರು ರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಸೋತು ಸುಣ್ಣವಾಗಿದೆ. ಕರ್ನಾಟಕದಲ್ಲಿ ಪಕ್ಷವನ್ನ ಸಂಘಟಿಸಿ ಅಧಿಕಾರಕ್ಕೆ ತರುವುದೇ ನನ್ನ ಗುರಿ. ಮೋದಿ ಅವರಿಗೆ ಸಾಟಿ ಆಗುತ್ತೀರೇನು.? ಮೂರು ರಾಜ್ಯಗಳಲ್ಲಿ ದೂಳಿಪಟ ಆದ್ರೂ ಬುದ್ದಿ ಕಲಿಯಲಿಲ್ಲ. ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರೋದು ನಿಶ್ಚಿತ. ನನಗೆ 81 ವರ್ಷಕ್ಕೆ ಕಾಲಿಟ್ಟಿದ್ದೇನೆ, ದೇವರು ಆರೋಗ್ಯ ಕೊಟ್ಟರೆ ಈ ಸಲ ಮಾತ್ರವಲ್ಲ,…

Read More

ಕಾಮಗಾರಿ ಪೂರ್ಣಗೊಳ್ಳದೇ ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ಸಂಗ್ರಹ ಆರಂಭಿಸಿದಕ್ಕೆ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ವಿರುದ್ದ ಕಂದಾಯ ಸಚಿವ ಆರ್.ಅಶೋಕ್ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ಆರ್.ಅಶೋಕ್, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ಕಂಡು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಿಗೆ ಹೊಟ್ಟೆ ಉರಿ ಉಂಟಾಗಿದೆ. ಬೆಂಗಳೂರು-ಮೈಸೂರು ದಶಪಥ ರಸ್ತೆ ಕಂಡು ಅವರ ಹೊಟ್ಟೆಕಿಚ್ಚು ಮತ್ತಷ್ಟು ಹೆಚ್ಚಾಗಿದೆ. ಈ ಬಾರಿ ನಡೆಯುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಜನರು ಬೆಂಬಲಿಸಲಿದ್ದಾರೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಹಾಗೆಯೇ ಜೆಡಿಎಸ್ ಕುರಿತು ವ್ಯಂಗ್ಯವಾಡಿದ ಸಚಿವ ಆರ್.ಅಶೋಕ್, ವಿಧಾನಸಭೆಯ ಚುನಾವಣೆಯಲ್ಲಿ ಮತ್ತೆ ಲಾಟರಿ ಹೊಡೆಯುತ್ತದೆ ಎಂದು ಜೆಡಿಎಸ್ ಪಕ್ಷದವರು ಕಾಯುತ್ತಿದ್ದಾರೆ. ಜೆಡಿಎಸ್​ ಪಕ್ಷದವರ ಮಂತ್ರಕ್ಕೆ ಮಾವಿನ ಕಾಯಿ ಉದುರುವುದಿಲ್ಲ. ಈ ಬಾರಿ ಹೋಮ ಹವನಕ್ಕೆ ಲಾಟರಿ ಹೊಡೆಯುವುದಿಲ್ಲ. ಅವರು ಗೆಲ್ಲುವುದು 20 ಅಂತೆ ಹೇಳಿಕೊಳ್ಳುವುದು 120 ಅಂತೆ ಎಂದು ಲೇವಡಿ…

Read More

ಬೆಳಗಾವಿ: “ಕ್ಷೇತ್ರದ ವಿವಿಧೆಡೆ ಸರಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಸೇವೆ ಪ್ರಾರಂಭಿಸಲು ಸಾಕಷ್ಟು ಅನುದಾನ ನೀಡಲಾಗುತ್ತಿದ್ದು ಮುಂಬರುವ ದಿನಗಳಲ್ಲಿ ಬಹುತೇಕ ಎಲ್ಲ ಶಾಲೆಗಳೂ ಸ್ಮಾರ್ಟ್ ಕ್ಲಾಸ್ ಹೊಂದುವ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟದ ಸ್ವರೂಪವೇ ಬದಲಾದರೆ ಅಚ್ಚರಿಯಿಲ್ಲ” ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಮುತಗಾ ಗ್ರಾಮದ ಸರ್ಕಾರಿ ಹಿರಿಯ ಮರಾಠಿ ಪ್ರಾಥಮಿಕ ಶಾಲೆಗೆ ಒದಗಿಸಿರುವ ನೂತನ ಸ್ಮಾರ್ಟ್ ಕ್ಲಾಸ್ ಸೇವೆ ಉದ್ಘಾಟಿಸಿ ಅವರು ಮಾತನಾಡಿದರು. ಸ್ಮಾರ್ಟ್ ಕ್ಲಾಸ್ ಸೇವೆಯಲ್ಲಿ ಪ್ರೊಜೆಕ್ಟರ್, ಎಸಿ, ಬೆಂಚ್, ಯುಪಿಎಸ್‌ ಮತ್ತು ಇನ್ವರ್ಟರ್, ಕಂಪ್ಯೂಟರ್, ಪ್ರಿಂಟರ್, ಟ್ಯಾಬ್, ಸ್ಮಾರ್ಟ್ ಕ್ಯಾಬಿನೆಟ್, ಪೋಡಿಯಮ್, ವಿಂಡೋ ಕರ್ಟನ್ಸ್, ಡೋರ್, ಮ್ಯಾಟ್ಸ್, ಡಿಜಿಟಲ್ ಕಂಟೆಂಟ್, ಎಲೆಕ್ಟ್ರಿಷಿಯನ್, ವಾಲ್ ಕ್ಲಾಕ್, ನೇಮ್ ಪ್ಲೇಟ್, ಪೇಂಟಿಂಗ್, ಟೈಲ್ಸ್ ಹಾಗೂ ಮುಂತಾದ ಸಾಮಗ್ರಿಗಳನ್ನು ಅಳವಡಿಸಲಾಗಿದೆ. ಈ ಸಮಯದಲ್ಲಿ ಗ್ರಾಮದ ಹಿರಿಯರು, ಗಜಾನನ ಮುತಗೇಕರ, ಶ್ಯಾಮ ಮುತಗೇಕರ್, ಗಜಾನನ ಕಣಬರ್ಕರ್, ಪಿಂಟು ಮಲ್ಲವ್ವಗೋಳ, ಸಂದೀಪ ಪಾಟೀಲ, ಶ್ಯಾಮ ಪಾಟೀಲ, ಗಜಾನನ ಪಾಟೀಲ,…

Read More

ಜೆಡಿಎಸ್ ಬಗ್ಗೆ ಡಾ. ಜಿ.ಪರಮೇಶ್ವರ್ ಹಗುರವಾಗಿ ಮಾತನಾಡಿದ್ದಾರೆ. ನಾನು ಸರ್ಕಾರ ನಡೆಸುವುದನ್ನ ಇವರಿಂದ ಕಲಿಯಬೇಕಿಲ್ಲ ಎಂದು  ಹೆಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದರು. ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಸ್ವತಂತ್ರ ಸರ್ಕಾರ ತರಬೇಕೆಂದು ನಾನು ಹೋರಾಟ ಮಾಡುತ್ತಿದ್ದೇನೆ. ಪಂಚರತ್ನ ಯೋಜನೆ ಜಾರಿಗಾಗಿ ಸ್ವತಂತ್ರ ಸರ್ಕಾರ ಕೇಳುತ್ತಿದ್ದೇನೆ. ಜೆಡಿಎಸ್ ಗೆ ಬೇಕಿರುವುದು 25 ಸ್ಥಾನ ಎಂದು ಪರಮೇಶ್ವರ್ ಹೇಳಿದ್ದಾರೆ. ಜೆಡಿಎಸ್ ಬಗ್ಗೆ ಪರಮೇಶ್ವರ್ ಲಘುವಾಗಿ ಮಾತನಾಡಿದ್ದಾರೆ. ನನಗೆ 2 ಬಾರಿ ಅವಕಾಶ ನೀಡಿದಾಗಲೂ ನಾನು ಜನಪರ ಕೆಲಸ ಮಾಡಿದ್ದೇನೆ. ಸರ್ಕಾರ ನಡೆಸುವುದನ್ನ ನಾನು ಇವರಿಂದ ಕಲಿಯಬೇಕಿಲ್ಲ. ನಾನು ಗ್ರೌಂಡ್ ರಿಯಾಲಿಟಿಯಿಂದ ಯೋಜನೆ ಸಿದ್ದಪಡಿಸಿದ್ದೇನೆ ಎಂದರು. ಹಾಸನ ವಿಧಾನಸಭಾ ಕ್ಷೇತ್ರಕ್ಕೆ ಬೇರೆ ಬೇರೆ ಹೆಸರುಗಳು ಓಡಾಡುತ್ತಿದೆ. ಹೆಚ್.ಡಿ ದೇವೇಗೌಡರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ. ಹಾಸನ ಜಿಲ್ಲೆಯ ಸಂಪೂರ್ಣ ನರನಾಡಿ ನನಗೆ ಗೊತ್ತಿಲ್ಲ . ಹಾಸನ ಜಿಲ್ಲೆ ರಾಜಕಾರಣದ ಬಗ್ಗೆ ದೇವೇಗೌಡರಿಗೆ ಇಂಚಿಂಚೂ ಗೊತ್ತು ಎಂದು ಹೆಚ್.ಡಿಕೆ ತಿಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಆಧುನಿಕತೆ ಭರಾಟೆಯಲ್ಲಿ ಮೈಸೂರಿನ ಸಿನಿಮಾ ಮಂದಿರಗಳು ಇತಿಹಾಸದ ಪುಟ ಸೇರುತ್ತಿದ್ದು, ನಗರದ ಬಹುತೇಕ ಚಿತ್ರಮಂದಿರಗಳು ಅಳಿವಿನ ಅಂಚಿನಲ್ಲಿವೆ. ಅಂತೆಯೇ ಗತಕಾಲದ ಇತಿಹಾಸ ಹೊಂದಿದ್ದ ಮೈಸೂರಿನ ‘ಲಕ್ಷ್ಮಿ ಟಾಕೀಸ್’ ತೆರವು ಕಾರ್ಯಾಚರಣೆ ಆರಂಭವಾಗಿದೆ. ಅಂಗೈಯಲ್ಲೇ ಸಿನಿಮಾ ನೋಡುವ ಕಾಲ ಬಂದ ನಂತರ ಸಿನಿಪ್ರಿಯರು ಸಿನಿಮಾ ಥಿಯೇಟರ್ ಗಳತ್ತ ಬರುವುದನ್ನ ಕಡಿಮೆ ಮಾಡಿದ್ದು, ಮೈಸೂರಿನಲ್ಲಿ ಒಂದೊಂದಾಗಿ ಚಿತ್ರಮಂದಿರಗಳು ಬಾಗಿಲು ಮುಚ್ಚಿ ಅವನತಿಯತ್ತ ಸಾಗಿತ್ತಿವೆ. ಈಗಾಗಲೇ ಶಾಂತಲ, ನಾಗರಾಜ, ಲಕ್ಷ್ಮಿ, ತಿಬ್ಬಾದೇವಿ ಸೇರಿದಂತೆ ನಗರದ ಹತ್ತಾರು ಚಲನಚಿತ್ರ ಮಂದಿರ ಬಾಗಿಲು ಮುಚ್ಚಿವೆ. ಈಗ ಅದೇ ಸಾಲಿಗೆ ಲಕ್ಷ್ಮಿ ಟಾಕೀಸ್ ಸೇರಿದ್ದು 75 ವರ್ಷಗಳ ಹಳೆಯದಾದ ಲಕ್ಷ್ಮಿ ಟಾಕೀಸ್ ಅನ್ನು ತೆರವುಗೊಳಿಸಲಾಗುತ್ತಿದೆ. ಲಕ್ಷ್ಮಿ ಟಾಕೀಸ್ ನಗರದ ಹೃದಯ ಭಾಗದಲ್ಲಿದ್ದು ಒಂದು ಕಾಲದ ಪ್ರಸಿದ್ದ ಸಿನಿಮಾ ಮಂದಿರವಾಗಿತ್ತು. ಇಂದಿನಿಂದ ಲಕ್ಷ್ಮಿ ಥಿಯೇಟರ್ ತೆರವು ಕಾರ್ಯ ನಡೆಯುತ್ತಿದೆ . ಲಕ್ಷ್ಮಿ ಟಾಕೀಸ್ ಮಾಲೀಕರು ಬೆಂಗಳೂರು ಮೂಲದ ವ್ಯಕ್ತಿಗೆ ಮಾರಾಟ ಮಾಡಿದ್ದು, ಹಳೇ ಕಟ್ಟಡ ಕೆಡವಿ ಹೊಸದಾಗಿ ವಾಣಿಜ್ಯ ಕಟ್ಟಡ ನಿರ್ಮಾಣ…

Read More

ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಇತಿಹಾಸ ತಿರುಚಲು ಉರಿಗೌಡ, ನಂಜೇಗೌಡ ದ್ವಾರ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿರುವ ಡಿಜಿಪಿ ಪ್ರವೀಣ್ ಸೂದ್ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ. ನಗರರದ ಪೂರ್ಣಿಮಾ ಪ್ಯಾಲೇಸ್ ನಲ್ಲಿ ಮಂಗಳವಾರ ತಿಗಳರ ಸಮಾವೇಶದಲ್ಲಿ ಭಾಗವಹಿಸುವ ಮುನ್ನ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ ಶಿವಕುಮಾರ್, ನಾನು ಡಿಜೆಪಿ ಪ್ರವೀಣ್ ಸೂದ್ ಒಳ್ಳೆಯವರು, ನಿಷ್ಪಕ್ಷಪಾತ ವ್ಯಕ್ತಿ ಅಂದುಕೊಂಡಿದ್ದೆ. ಆದರೆ ಬಿಜೆಪಿಯ ಬಾಲಬಡುಕರಾಗಿ ಕೆಲಸ ಮಾಡುತ್ತಿದ್ದಾರೆ. ಆ ದ್ವಾರ ನಿರ್ಮಾಣಕ್ಕೆ ಇವರು ಹೇಗೆ ಅನುಮತಿ ಕೊಟ್ಟರು? ಎಂದು ಪ್ರಶ್ನಿಸಿದರು. ‘ಬಿಜೆಪಿಯವರು ಮೊದಲಿಂದಲೂ ಇತಿಹಾಸ ತಿರುಚಲು ಪ್ರಯತ್ನಿಸುತ್ತಿದ್ದಾರೆ. ಕುವೆಂಪು, ಬಸವಣ್ಣ, ನಾರಾಯಣ ಗುರು, ಅಂಬೇಡ್ಕರ್, ಶ್ರೀ ಬಾಲಗಂಗಾಧರ ಸ್ವಾಮಿಜಿ, ಶ್ರೀ ಶಿವಕುಮಾರ ಸ್ವಾಮೀಜಿ – ಹೀಗೆ ಯಾರನ್ನೂ ಬಿಡದೇ ಇತಿಹಾಸ ತಿರುಚುತ್ತಿದ್ದಾರೆ. ಈಗ ಉರಿಗೌಡ, ನಂಜೇಗೌಡರ ಹೆಸರು ತೆಗೆದುಕೊಂಡಿದ್ದಾರೆ. ಇವರ ಇತಿಹಾಸ ಎಲ್ಲಿದೆ? ಇವರ ಹೆಸರು ಸೃಷ್ಟಿಸಿ ಇಡೀ…

Read More

ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆ ರೈತ ಸಂಘಟನೆಗಳಿಂದ ಪ್ರಣಾಳಿಕೆ ಬಿಡುಗಡೆ ಮಾಡಲಾಯಿತು. ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ರೈತ ಸಂಘಟನೆ ಪ್ರಣಾಳಿಕೆ ಬಿಡುಗಡೆ ಮಾಡಲಾಯಿತು. ಬಳಿಕ ಮಾತನಾಡಿದ ಕುರುಬೂರು ಶಾಂತಕುಮಾರ್, ರೈತರ ಹೆಸರನ್ನ ಹೇಳಿಕೊಂಡು ರಾಜಕೀಯ ಪಕ್ಷಗಳು ಅಧಿಕಾರಕ್ಕೆ ಬರುತ್ತವೆ. ಬಳಿಕ ನಮ್ಮ ಸಮಸ್ಯೆಗಳನ್ನ ಬಗೆಹರಿಸುವಲ್ಲಿ ವಿಫಲವಾಗುತ್ತಾರೆ. ಆಗಾಗಿ ಈ ಬಾರಿಯ ಚುನಾವಣೆಯಲ್ಲಿ ನಾವು ಸಹ ರೈತರ ಸಮಸ್ಯೆ ಮತ್ತು ಬೇಡಿಕೆಯ ಕುರಿತು ಪ್ರಣಾಳಿಕೆಯನ್ನ ಬಿಡುಗಡೆ ಮಾಡುತ್ತಿದ್ದೇವೆ. ನಮ್ಮ ಪ್ರಣಾಳಿಕೆಯನ್ನ ಯಾರು ಒಪ್ಪಿಕೊಂಡು ಬೆಂಬಲ ಸೂಚಿಸುತ್ತಾರೆ. ಅಂತಹ ಪಕ್ಷಗಳಿಗೆ ನಾವು ಬೆಂಬಲ ನೀಡುತ್ತೇವೆ ಎಂದರು. ಇನ್ನು ಇದೆ ವೇಳೆ ಮೈಸೂರು ಬೆಂಗಳೂರು ಟೋಲ್ ವಿಚಾರವಾಗಿ ಮಾತನಾಡಿದ ಕುರುಬೂರು ಶಾಂತಕುಮಾರ್, ಹೈವೇ ಕಾಮಗಾರಿ ಇನ್ನ ಪೂರ್ಣಗೊಂಡಿಲ್ಲ. ರೈತರ ಭೂಮಿ ಪಡೆದ ಮೇಲೆ ಕೆಲ ರೈತರಿಗೆ ಪರಿಹಾರವನ್ನೇ ನೀಡಿಲ್ಲ. ರೈತರ ವಾಹನಗಳಿಗೆ ಶುಲ್ಕ ತೆಗೆದುಕೊಳ್ಳಬಾರದು ಎಂದು ಆಗ್ರಹಿಸಿದರು. ನಮ್ಮತುಮಕೂರು.ಕಾಂನ ಕ್ಷಣ…

Read More

ಬೆಳಗಾವಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ರಚಿಸಲಾಗಿರುವ ತಂಡಗಳು ಕಾರ್ಯೋನ್ಮುಖರಾಗಿ ಚುರುಕಿನಿಂದ ಕೆಲಸ ಮಾಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಮುಂಬರುವ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ (ಮಾ.13) ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗಡಿಭಾಗದ ಚೆಕ್ ಪೋಸ್ಟ್ ಗಳಲ್ಲಿ ಈಗಾಗಲೇ ನಿಯೋಜಿಸಲಾಗಿರುವ ತಂಡಗಳು ಪ್ರತಿಯೊಂದು ವಾಹನಗಳ ಮೇಲೆ ನಿಗಾ ವಹಿಸಬೇಕು.ಪ್ರತಿಯೊಂದು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸದ್ಯಕ್ಕೆ ಒಂದು ತಂಡ ಇಪ್ಪತ್ನಾಲ್ಕು ಗಂಟೆ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು. ಗೊದಾಮು, ಕಾರ್ಖಾನೆ, ಭವನಗಳು, ಮನೆಗಳಲ್ಲಿ ಅಕ್ರಮ ದಾಸ್ತಾನು ಕಂಡುಬಂದರೆ ಸಂಬಂಧಿಸಿದ ಇಲಾಖೆಯ ತಂಡಗಳು ಪರಿಶೀಲನೆ ನಡೆಸಬೇಕು ಎಂದು ಸೂಚನೆ ನೀಡಿದರು. ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳು ಕೂಡ ತಮ್ಮ ವ್ಯಾಪ್ತಿಯಲ್ಲಿನ ಮತಗಟ್ಟೆಗಳು, ಮಸ್ಟರಿಂಗ್, ಡಿಮಸ್ಟರಿಂಗ್ ಕೇಂದ್ರಗಳು, ಚೆಕ್ ಪೋಸ್ಟ್ ಮತ್ತಿತರ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಚುನಾವಣಾ ಆಯೋಗದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಯಾವುದೇ ರೀತಿಯ…

Read More

ಹಿರಿಯ ಪತ್ರಕರ್ತ, ಲೇಖಕ ಅಂಶಿ ಪ್ರಸನ್ನಕುಮಾರ್ ಅವರ ಎರಡು ಕೃತಿಗಳು ಮಾರ್ಚ್ 19 ರಂದು ಲೋಕಾರ್ಪಣೆಯಾಗಲಿವೆ. ವಿಸ್ಮಯ ಬುಕ್‌ಹೌಸ್ ಹಾಗೂ ಸಾಹಿತ್ಯ ಲೋಕ ಸಂಸ್ಥೆಯು ಅಂದು ಸಂಜೆ 4.30ಕ್ಕೆ ಹುಣಸೂರು ರಸ್ತೆಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ’ಸಾಹಿತ್ಯ ಸಂಪದ’ ಹಾಗೂ ‘ಸಾಹಿತ್ಯ ಸಂಗಮ’ ಕೃತಿಗಳನ್ನು ಖ್ಯಾತ ಚಲನಚಿತ್ರ ನಿರ್ದೇಶಕ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಟಿ.ಎಸ್. ನಾಗಾಭರಣ ಬಿಡುಗಡೆ ಮಾಡುವರು. ಪಂಪ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಪ್ರೊ.ಸಿ.ಪಿ. ಕೃಷ್ಣಕುಮಾರ್ ಅಧ್ಯಕ್ಷತೆ ವಹಿಸುವರು. ಅಂಕಣಕಾರ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ಎನ್‌ಎಸ್‌ಎಸ್ ರಾಜ್ಯ ಸಂಯೋಜನಾಧಿಕಾರಿ ಡಾ.ಗುಬ್ಬಿಗೂಡು ರಮೇಶ್ ಮುಖ್ಯ ಅತಿಥಿಯಾಗಿರುವರು. ಸಂಜೆ 4ಕ್ಕೆ ಖ್ಯಾತ ಗಾಯಕ ಅಮ್ಮ ರಾಮಚಂದ್ರ ಮತ್ತು ತಂಡದಿಂದ ಗೀತಗಾಯನ ಕಾರ್ಯಕ್ರಮ ಇರುತ್ತದೆ. ಕಾರ್ಯಕ್ರಮಕ್ಕೆ ಸಾಹಿತ್ಯಾಸಕ್ತರು ಆಗಮಿಸುವಂತೆ ಸಾಹಿತ್ಯ ಲೋಕ ಸಂಸ್ಥೆಯ ಅಧ್ಯಕ್ಷ ಡಾ.ವೈ.ಡಿ. ರಾಜಣ್ಣ ಹಾಗೂ ವಿಸ್ಮಯ ಬುಕ್‌ ಹೌಸ್‌ ನ ಪ್ರಕಾಶ್ ಚಿಕ್ಕಪಾಳ್ಯ ಕೋರಿದ್ದಾರೆ. ‘ಸಾಹಿತ್ಯ ಸಂಪದದಲ್ಲಿ ಸುಮಾರು 160…

Read More

5 ಮತ್ತು 8ನೇ ತರಗತಿ ಬೋರ್ಡ್ ಎಕ್ಸಾಮ್ ರದ್ಧು ಆದೇಶ ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿ ಅರ್ಜಿ ವಿಚಾರಕ್ಕೆ ಸಂಬಂಧಿಸಿದಂತೆ ಅಫಿಡವಿಟ್ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸೂಚಿಸಿ ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ಮುಂದೂಡಿದೆ. ರಾಜ್ಯ ಸರ್ಕಾರದ 5 ಮತ್ತು 8ನೇ ತರಗತಿ ಬೋರ್ಡ್ ಎಕ್ಸಾಮ್ ಆದೇಶವನ್ನ ಹೈಕೋರ್ಟ್ ಏಕಸದಸ್ಯ ಪೀಠ ರದ್ದುಗೊಳಿಸಿತ್ತು. ಇದನ್ನ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿ ಅರ್ಜಿ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ನರೇಂದರ್ ಮತ್ತು ನ್ಯಾ. ಅಶೋಕ್ ಅವರ ನೇತೃತ್ವದ ವಿಭಾಗೀಯ ಪೀಠ, ಈ ಸಂಬಂಧ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪ್ರಮಾಣ ಪತ್ರ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನ ನಾಳೆಗೆ ಮುಂದೂಡಿತು. ಸರ್ಕಾರ ಪರವಾಗಿ ಎಎಜಿ ವಾದ ಮಂಡನೆ ಮಾಡಿದರು. ಸರ್ಕಾರದ5 ಮತ್ತು 8ನೇ ತರಗತಿ ಬೋರ್ಡ್ ಎಕ್ಸಾಮ್ ಆದೇಶ ರದ್ದುಪಡಿಸುವಂತೆ ಕೋರಿ ಪೋಷಕರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಸರ್ಕಾರದ ಆದೇಶವನ್ನ ರದ್ದುಪಡಿಸಿತ್ತು. ನಮ್ಮತುಮಕೂರು.ಕಾಂನ ಕ್ಷಣ…

Read More