Author: admin

ಹಾವೇರಿ ಜಿಲ್ಲೆ ರಟ್ಟಿಹಳ್ಳಿ ಗ್ರಾಮದಲ್ಲಿ ಮಸೀದಿ ವ್ಯಾನ್, ಆಟೋ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಮಾರ್ಚ್ 9 ರಂದು ಹಿಂದೂಪರ ಕಾರ್ಯಕರ್ತರು ನಡೆಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮೆರವಣಿಗೆಗೆ ಮಸ್ಲಿಂ ಸಮುದಾಯದ ಯುವಕರು ಅಡ್ಡಿಪಡಿಸಿದ್ದರು ಎನ್ನಲಾಗಿತ್ತು. ಸಂಗೊಳ್ಳಿ ರಾಯಣ್ಣ ಪ್ರತಿಮೆ ಮೆರವಣಿಗೆಗೆ ತಡೆಯೊಡ್ಡಿದ್ದನ್ನ ವಿರೋಧಿಸಿ ಇಂದು ಹಿಂದೂ ಕಾರ್ಯಕರ್ತರು ರಾಲಿ  ನಡೆಸಿದ್ದರು. ಈ ವೇಳೆ ಮಸೀದಿ, ಮನೆ ಮತ್ತು ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿದೆ ಎನ್ನಲಾಗಿದೆ. ಮುಸ್ಲಿಮರ ಮನೆ, ವಾಹನಗಳ ಮೇಲೂ ಕಲ್ಲುತೂರಾಟ ಮಾಡಲಾಗಿದೆ. ಹಿಂದೂ ಕಾರ್ಯಕರ್ತರು ಕಾರು, ಓಮ್ನಿ ಕಾರಿನ ಗ್ಲಾಸ್​​​ ಒಡೆದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಇದೀಗ ಮುಸ್ಲಿಮರು ವಾಸಿಸುವ ಪ್ರದೇಶಗಳು ಹಾಗೂ ಮಸೀದಿಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ಬೆಳಗಾವಿ: ಹಿರೇ ಬಾಗೇವಾಡಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಸ್ಥಾಪಿಸಲಾಗಿರುವ ವಿಶ್ವಗುರು ಜಗಜ್ಯೋತಿ ಶ್ರೀ ಬಸವೇಶ್ವರ ಅಶ್ವಾರೂಢ ಮೂರ್ತಿಯನ್ನು ಮಾರ್ಚ್ 20ರಂದು ಲೋಕಾರ್ಪಣೆಗೊಳಿಸಲು ನಿರ್ಧರಿಸಲಾಗಿದೆ. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಮಂಗಳವಾರ ಗ್ರಾಮದ ಎಲ್ಲ ಸಮಾಜಗಳ ಹಿರಿಯರ ಜೊತೆ ನಡೆಸಿದ ಸಭೆಯಲ್ಲಿ ಒಮ್ಮತದ ಮೇರೆಗೆ ಮೂರ್ತಿಯ ಉದ್ಘಾಟನೆಯನ್ನು ಇದೇ ತಿಂಗಳು 20 ರಂದು ನಡೆಸಲು ನಿರ್ಧರಿಸಲಾಯಿತು. ಈ ಸಮಯದಲ್ಲಿ ಸುರೇಶ ಇಟಗಿ, ಸಿ ಸಿ ಪಾಟೀಲ ಅಣ್ಣ, ಅಡಿವೇಶ ಇಟಗಿ, ಶ್ರೀಕಾಂತ ಮಧುಭರಮಣ್ಣವರ, ಈರಪ್ಪ ಅರಳೀಕಟ್ಟಿ, ಪಿ ಎನ್ ಪಾಟೀಲ, ರಘು ಅಂಕಲಗಿ, ಶಿವಾನಂದ ಅಂಕಲಗಿ, ಉಳವಪ್ಪ ರೊಟ್ಟಿ, ಬಸವರಾಜ ತೋಟಗಿ, ನಾಗರಾಜ ಉಪ್ಪಾರ, ರಾಜಶೇಖರ ಸಾಲಿಮನಿ, ನಿಂಗಪ್ಪ ತಳವಾರ, ಗೌಸಮೊದ್ದಿನ ಜಾಲಿಕೊಪ್ಪ, ಮಹ್ಮದಲಿ ಕರಿದಾವಲ್, ಯಲ್ಲಪ್ಪ ಕೆಳಗೇರಿ ಹಾಗೂ ಮುಂತಾದವರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್…

Read More

ಮಧುಗಿರಿ : ಕರ್ನಾಟಕ ರಾಜ್ಯ ಜೆಡಿಎಸ್ ಪಕ್ಷ ರಾಜ್ಯಾಧ್ಯಕ್ಷರಾದ ಸಿಎಂ ಇಬ್ರಾಹಿಂ ಮಧುಗಿರಿಯ ಪಾವಗಡ ಸರ್ಕಲ್ ಬಳಿ ಇರುವ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಜೆಡಿಎಸ್ ನ ಹಾಲಿ ಶಾಸಕರಾದ ಎಂ.ವಿ.ವೀರಭದ್ರಯ್ಯ ರವರು ಪಟ್ಟಣದ ಮೊದಲನೆಯ ವಾರ್ಡ್ ಆಶುಖಾನದಲ್ಲಿ ಆಯೋಜಿಸಿದ್ದ ಅಲ್ಪಸಂಖ್ಯಾತರ ಸಮಾವೇಶದಲ್ಲಿ ಭಾಗವಹಿಸಿದರು. ಈ ವೇಳೆ ಮಾತನಾಡಿದ ಸಿಎಂ ಇಬ್ರಾಹಿಂ ಕನ್ನಡ ನಾಡು ಕನ್ನಡ ನಾಡಿನ ಜನ ಎರಡು ಹೊತ್ತು ಹೊಟ್ಟೆತುಂಭಾ ಊಟ ಮಾಡಿ ಸುಖವಾಗಿ ಜೀವಿಸಬೇಕು, ಹಿಂದೂ ಮುಸಲ್ಮಾನರು ಒಂದು ತಾಯಿಯ ಮಕ್ಕಳಂತೆ ಬಾಳಬೇಕು ಅದನ್ನ ನಾವು ಕಣ್ಣಾರೆ ನೋಡಬೇಕು, ಹಳ್ಳಿಗಾಡಲಿ ಜಾತಿ ಭೇದವಿಲ್ಲ, ಇವತ್ತು ಕೂಡ ಜನ ಹಳ್ಳಿಗಳಲ್ಲಿ ಅನ್ಯೂನತೆಯಿಂದ ಬಾಳುತ್ತಿದ್ದಾರೆ, ಆದರೆ ದುರ್ದೈವ ರಾಜಕಾರಣಿಗಳು ಮತಗಳಿಗೋಸ್ಕರ ಸಮಾಜಗಳನ್ನು ಹೊಡೆಯುತ್ತಿದ್ದಾರೆ ಎಂದು ಅವರು ಹೇಳಿದರು. ಹಿಂದೂ ಧರ್ಮದಲ್ಲೂ ಸಹ ಸರ್ವಧರ್ಮ ಸಮನ್ವಯ ಸರ್ವೇ ಜನಾ ಸುಖಿನೋ ಭವಂತು ಎಂಬ ಒಳ್ಳೆಯ ಸಂದೇಶವಿದೆ ಇದರ ಅರ್ಥವನ್ನು ಎಲ್ಲಾ ರಾಜಕಾರಣಿಗಳು ಅರ್ಥಮಾಡಿಕೊಳ್ಳಬೇಕು, ಕರ್ನಾಟಕ ರಾಜ್ಯದಲ್ಲಿ ಟಿಪ್ಪು ಸುಲ್ತಾನ್ ರವರ…

Read More

ನಿಮಗೆ ತಿಳಿದಿರುವಂತೆ ಶಿವಶಕ್ತಿ ಬಾಲಾಜಿ ಎಂಬ ವ್ಯಕ್ತಿ ಸಂವಾದ ಎಂಬ ಯುಟ್ಯೂಬ್ ಫೇಸ್ಬುಕ್ ಚಾನಲ್ ನಲ್ಲಿ ಕ್ರೈಸ್ತ ಸಭಾ ಪಾಲಕರ ದೇವರ ಹಾಗೂ ಬೈಬಲ್ ವಿರುದ್ಧವಾಗಿ ಮಾತನಾಡುತ್ತಾ ವಿಷ ಬೀಜ ಬಿತ್ತುವ ಕಾರ್ಯವನ್ನು ಮಾಡುತ್ತಿದ್ದ . ಇದು ರಾಜ್ಯದ ಕ್ರೈಸ್ತರಲ್ಲಿ ಬಹಳ ನೋವುಂಟು ಮಾಡಿದ್ದು.. ಈ ಸಂದರ್ಭದಲ್ಲಿ *ಅಖಿಲ ಭಾರತ ಕ್ರೈಸ್ತ ಮಹಾಸಭಾ (ರಿ) ಸಂಸ್ಥೆಯ ನೇತೃತ್ವದಲ್ಲಿ ಈ ವ್ಯಕ್ತಿಯ ಮೇಲೆ ಮಾನ್ಯ ಪೊಲೀಸ್ ಮಹಾ ನಿರ್ದೇಶಕರು (ಡಿಜಿಪಿ) ರವರಿಗೆ ದೂರು ನೀಡಲಾಗಿತ್ತು. ಹಾಗೂ ಚಿತ್ರದುರ್ಗ ಬಡಾವಣೆ ಪೊಲೀಸ್ ಠಾಣೆಯಲ್ಲಿ ನಮ್ಮ ಜಿಲ್ಲಾಧ್ಯಕ್ಷರಾದ ರವಿಕುಮಾರ್ ಹಾಗೂ ಸಲೋಮಾನ್ ರವರಿಂದ ಅವನ ಮೇಲೆ ದೂರು ದಾಖಲು ಮಾಡಲಾಗಿತ್ತು. ಈ ಸಂದರ್ಭದಲ್ಲಿ ಮಾನ್ಯ ಜಿಲ್ಲಾ ವರಿಷ್ಠಾಧಿಕಾರಿಗಳು ಆತನ ಮೇಲೆ ಕ್ರಮವನ್ನು ಕೈಗೊಂಡಿದ್ದರು ಅದಾಗಿಯೂ ಮತ್ತೆ ಕ್ರೈಸ್ತರನ್ನು ನಿಂದಿಸುವ ಕಾರ್ಯ ಮುಂದುವರಿಸಿದಾಗ ದಿನಾಂಕ.02.03.2023 ರಂದು ಮಾನ್ಯ ಡಿಜಿಪಿ ರವರಿಗೆ ದೂರು ನೀಡಲಾಗಿತ್ತು. ಈ ಸಂದರ್ಭದಲ್ಲಿ ಸ್ಪಂದಿಸಿದ ಪೊಲೀಸ್ ಇಲಾಖೆ ಹಾಗೂ ದಂಡಾಧಿಕಾರಿಗಳು 5, ಲಕ್ಷದ ಬಾಂಡ್…

Read More

ಬೆಂಗಳೂರು ಮೈಸೂರು ದಶಪಥ ರಸ್ತೆ ನಿರ್ಮಾಣದ ಬಗ್ಗೆ ಕ್ರೆಡಿಟ್ ವಾರ್ ಮುಂದುವರೆದಿದ್ದು, ಈ ಸಂಬಂಧ ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ಕಾಂಗ್ರೆಸ್ ಪರ ಬ್ಯಾಟ್ ಬೀಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್.ವಿಶ್ವನಾಥ್, ದಶಪಥ ರಸ್ತೆ ಬಗ್ಗೆ ಸಾಮಾನ್ಯ ಜನರಿಗೆ ಗೊತ್ತಿಲ್ಲ. ನಿಮ್ಮ ಮೂಲಕ ತಿಳಿಸುವ ಪ್ರಯತ್ನವಾಗಬೇಕು. ಒಂದು ಕಡೆ ಪ್ರತಾಪ್ ಸಿಂಹ ನಾನೇ ಇದರ ರುವಾರಿ ಅಂತಾರೆ. 2014 ರಲ್ಲಿ ನಾನು, ಧ್ರುವನಾರಾಯಣ್ ಎಂಪಿ ಆಗಿದ್ದ ಮೊದಲು ಇದು 4 ಪಥದ ರಸ್ತೆಯನ್ನು ಎಸ್. ಎಂ ಕೃಷ್ಣ ಅವರ ಕಾಲಾವಧಿಯಲ್ಲಿ ಅನುಮೋದನೆ ಸಿಕ್ಕಿತ್ತು. ನಂತರ ಎಚ್.ಸಿ ಮಹಾದೇವಪ್ಪ ಅವರು ಪಿಡಬ್ಲ್ಯುಡಿ ಸಚಿವರಾಗಿದ್ದಾಗ ಈ ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಸಲಾಯಿತು. ಯುಪಿಎ ಸರ್ಕಾರದ ಮನಮೋಹನ್ ಸಿಂಗ್ ಈ ರಸ್ತೆ ಅಭಿವೃದ್ಧಿಗೆ ಅನುಮೋದನೆ ಕೊಟ್ಟಿದ್ದರು. ಈಗ ಇವರು ನಾವು ಮಾಡಿಸಿದ್ದು ಅಂತ ಬೊಗಳೆ ಹೊಡೆಯುತ್ತಿದ್ದಾರೆ. ಯಾರಪ್ಪನ ದುಡ್ಡು ತಂದು ಕೊಟ್ಟಿದ್ದೀರೀ.? ಜನರ ಬೆವರಿನ ದುಡ್ಡಿನಿಂದ ಮಾಡಿಸಿದ್ದು ಇದು ನಿಮ್ಮ…

Read More

ಚುನಾವಣೆ ಸಮೀಪಿಸುತ್ತಿದೆ ಎಂದು ಪ್ರಧಾನಿ ಮೋದಿಯನ್ನ ಕರೆ ತಂದು ತರಾತುರಿಯಲ್ಲಿ ಬೆಂಗಳೂರು -ಮೈಸೂರು ದಶಪಥ ಹೆದ್ಧಾರಿ ಉದ್ಘಾಟನೆ ಮಾಡಿಸಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಟೀಕಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ಧರಾಮಯ್ಯ, ಬೆಂಗಳೂರು- ಮೈಸೂರು ಹೈವೇ ಕಾಮಗಾರಿ ಪೂರ್ಣವಾಗಿಲ್ಲ. ಹೈವೇ ಸರ್ವಿಸ್ ರಸ್ತೆ ಮಾಡದೇ ಟೋಲ್ ಸಂಗ್ರಹ ಮಾಡುವಂತಿಲ್ಲ ಎಕ್ಸ್ ಪ್ರೆಸ್ ಹೈವೇನಲ್ಲಿ ಬೈಪಾಸ್, ಅಂಡರ್ ಪಾಸ್ ಮಾಡಿಲ್ಲ ಇಷ್ಟೆಲ್ಲಾ ಕೆಲಸ ಬಾಕಿ ಇದ್ದರೂ ಬಿಜೆಪಿಯವರು ಮೋದಿ ಕರೆಸಿ ಉದ್ಘಾಟನೆ ಮಾಡಿದ್ದಾರೆ. ಚುನಾವಣೆ ಸಮೀಪಿಸುತ್ತಿದೆ ಎಂದು  ತರಾತುರಿಯಲ್ಲಿ ಉದ್ಘಾಟನೆ ಮಾಡಿಸಿದ್ದಾರೆ ಎಂದು ಕಿಡಿಕಾರಿದರು. ಮೈಸೂರು-ಬೆಂಗಳೂರು ಹೆದ್ದಾರಿ ರಾಷ್ಟ್ರೀಯ ಹೆದ್ದಾರಿಯಾಗಿ ಮಾಡಿದ್ದು ನಾವು. ದಶಪಥ ರಸ್ತೆ ಮಾಡಬೇಕೆಂದು ಅನುಮೋದನೆ ಮಾಡಿದ್ದು ನಾವು. ನಾವು ಮಾಡಿದ ಕೆಲಸವನ್ನ ಅವರು ಬಂದು ಉದ್ಘಾಟನೆ ಮಾಡಿದ್ದಾರೆ ಎಂದು ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL…

Read More

ಪ್ರಧಾನಿ ಮೋದಿ ಮಂಡ್ಯ ಭೇಟಿ ವೇಳೆ ಉರಿಗೌಡ ಮತ್ತು ನಂಜೇಗೌಡ ಮಹಾದ್ವಾರ ನಿರ್ಮಿಸಿ ನಂತರ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೆ ಅದನ್ನ ತೆರವುಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಸರ್ಕಾರಕ್ಕೆ ಹೆಚ್.ಡಿ ಕುಮಾರಸ್ವಾಮಿ ತರಾಟೆ ತೆಗೆದುಕೊಂಡಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿ ಬಿಜೆಪಿ ವಿರುದ್ಧ ಹರಿಹಾಯ್ದಿರುವ ಹೆಚ್.ಡಿ ಕುಮಾರಸ್ವಾಮಿ, ಇತಿಹಾಸ ತಿರುಚಿ ಕಪೋಲಕಲ್ಪಿತ ಪಾತ್ರಗಳನ್ನು ಸೃಷ್ಟಿಸಿ, ಕೋಮುದ್ವೇಷದ ವಿಷಬೀಜ ಬಿತ್ತಿ, ಅದನ್ನು ಹೆಮ್ಮರವಾಗಿ ಬೆಳೆಯಲು ತನು-ಮನ-ಧನವನ್ನೆಲ್ಲ ಅರ್ಪಿಸುವ ಪಕ್ಷವೇ ಬಿಜೆಪಿ. ಈಗ ಒಕ್ಕಲಿಗರ ಹೆಗಲ ಮೇಲೆ ಕೋವಿ ಇಟ್ಟು ಹೊಸ ಸುಳ್ಳಿನಕಥೆ ಸೃಷ್ಟಿ ಮಾಡಿ ಅಸಲಿ ಇತಿಹಾಸವನ್ನು ಕೊಲ್ಲುವ ಹುನ್ನಾರ ನಡೆಸಿದೆ ಎಂದು ಕಟು ಟೀಕೆ ಮಾಡಿದ್ದಾರೆ. ಟಿಪ್ಪುವನ್ನು ಕೊಂದವರೆಂದು ಚರಿತ್ರೆಯಲ್ಲಿ ಇಲ್ಲದ ಉರಿಗೌಡ, ನಂಜೇಗೌಡರೆಂಬ ಒಕ್ಕಲಿಗ ಕಾಲ್ಪನಿಕ ಹೆಸರುಗಳನ್ನು ಸೃಷ್ಟಿಸಿ ಪ್ರಧಾನಿ ನರೇಂಧ್ರ ಮೋದಿ ಅವರ ರೋಡ್ ಶೋ ನಡೆಸಿದ ಮಹಾದ್ವಾರಕ್ಕೆ ಇಟ್ಟಿದ್ದು ಮಂಡ್ಯಕ್ಕೆ, ಅದರಲ್ಲೂ ಸಮಸ್ತ ಒಕ್ಕಲಿಗರ ಕುಲಕ್ಕೆ ಮಾಡಿದ ಘೋರ ಅಪಮಾನ. ಮೇಲಾಗಿ, ಮಹಾದ್ವಾರಕ್ಕೆ ಮೊದಲೇ ಇದ್ದ…

Read More

ರಾಮನಗರ ಕ್ಷೇತ್ರದಿಂದ ಡಿ.ಕೆ ಸುರೇಶ್ ಸ್ಪರ್ಧೆ ಬಗ್ಗೆ ಪ್ರಸ್ತಾಪವಿದೆ. ಆದರೆ ನಾವು ಯಾವುದೇ ತೀರ್ಮಾನಿಸಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದರು. ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಶಿವಕುಮಾರ್, ಡಿಕೆ ಸುರೇಶ್ ಸ್ಪರ್ಧೆ ಬಗ್ಗೆ  ಹೈಕಮಂಡ್ ನಿಂದ ಒತ್ತಡ ಬಂದಿದ್ದು ನಿಜ. ಪಾರ್ಟಿ ಹೇಳುತ್ತಿದೆ. ಆದರೆ ನಾವಿನ್ನೂ ತೀರ್ಮಾನ ಮಾಡಿಲ್ಲ ಎಂದರು. ಈ ಹಿಂದೆಯೂ ಡಿಕೆ ಸುರೇಶ್ ಸ್ಪರ್ಧೆಗೆ ಕಾರ್ಯಕರ್ತರು ಒತ್ತಾಯ ಮಾಡಿದ್ದರು. ಆದರೆ ಮತ್ತೆ ಬೈಎಲೆಕ್ಷನ್ ಎಲ್ಲಾ ಮಾಡುವುದಕ್ಕೆ ಇಷ್ಟಿವಿಲ್ಲ. ಸ್ಪರ್ಧೆಗೆ ಡಿಕೆ ಸುರೇಶ್ ಅರ್ಜಿ ಹಾಕಿಲ್ಲ. ಚರ್ಚೆಯೂ ಮಾಡಿಲ್ಲ ಎಂದು ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರು: ಬೆಂಗಳೂರಿನ ಹೈಕೋರ್ಟ್ ಪೀಠದಲ್ಲಿ ಖಾಲಿ ಇರುವ 39 ಚಾಲಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಹಾಕಲು ಏಪ್ರಿಲ್ 6, 2023 ಕೊನೆಯ ದಿನಾಂಕವಾಗಿದೆ. ಕರ್ನಾಟಕ ಉಚ್ಛ ನ್ಯಾಯಾಲಯ​ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ/ SSLC ಪಾಸಾಗಿರಬೇಕು. ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 6, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು ಎಂದು ತಿಳಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರು: ಅಭಿವೃದ್ಧಿಯ ಮೇಲೆ ಚುನಾವಣೆಯಲ್ಲಿ ಮತ ಕೇಳಬೇಕಿದ್ದ ಬಿಜೆಪಿ ಮತ ಫಸಲಿಗೆ ಅಡ್ಡದಾರಿಗಳನ್ನು ಕಂಡುಕೊಂಡು ಸಮುದಾಯ, ಧರ್ಮಗಳ ಜತೆ ಚೆಲ್ಲಾಟ ಆಡುತ್ತಿದೆ. ಸ್ವಾಭಿಮಾನಿ ಒಕ್ಕಲಿಗರ ಆತ್ಮಾಭಿಮಾನವನ್ನು ಕೆಣಕಿ ಬಿಜೆಪಿ ಬಹುದೊಡ್ಡ ತಪ್ಪು ಮಾಡಿದೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಇತಿಹಾಸ ತಿರುಚಿ ಕಪೋಲಕಲ್ಪಿತ ಪಾತ್ರಗಳನ್ನು ಸೃಷ್ಟಿಸಿ, ಕೋಮುದ್ವೇಷದ ವಿಷಬೀಜ ಬಿತ್ತಿ, ಅದನ್ನು ಹೆಮ್ಮರವಾಗಿ ಬೆಳೆಯಲು ತನು-ಮನ-ಧನವನ್ನೆಲ್ಲ ಅರ್ಪಿಸುವ ಪಕ್ಷವೇ ಬಿಜೆಪಿ. ಈಗ ಒಕ್ಕಲಿಗರ ಹೆಗಲ ಮೇಲೆ ಕೋವಿ ಇಟ್ಟು ಹೊಸ ಸುಳ್ಳಿನಕಥೆ ಸೃಷ್ಟಿ ಮಾಡಿ ಅಸಲಿ ಇತಿಹಾಸವನ್ನು ಕೊಲ್ಲುವ ಹುನ್ನಾರ ನಡೆಸಿದೆ. ಟಿಪ್ಪುವನ್ನು ಕೊಂದವರೆಂದು ಚರಿತ್ರೆಯಲ್ಲಿ ಇಲ್ಲದ ಉರಿಗೌಡ, ನಂಜೇಗೌಡರೆಂಬ ಒಕ್ಕಲಿಗ ಕಾಲ್ಪನಿಕ ಹೆಸರುಗಳನ್ನು ಸೃಷ್ಟಿಸಿ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ನಡೆಸಿದ ಮಹಾದ್ವಾರಕ್ಕೆ ಇಟ್ಟಿದ್ದು ಮಂಡ್ಯಕ್ಕೆ, ಅದರಲ್ಲೂ ಸಮಸ್ತ ಒಕ್ಕಲಿಗರ ಕುಲಕ್ಕೆ ಮಾಡಿದ ಘೋರ ಅಪಮಾನ. ಮೇಲಾಗಿ, ಮಹಾದ್ವಾರಕ್ಕೆ ಮೊದಲೇ ಇದ್ದ ಪರಮಪೂಜ್ಯ ಗುರುಗಳಾದ ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಗಳವರ ಹೆಸರನ್ನು ಮುಚ್ಚಿಟ್ಟು, ಅವರ ಜಾಗದಲ್ಲಿ ಈ ಕಾಲ್ಪನಿಕ…

Read More