Subscribe to Updates
Get the latest creative news from FooBar about art, design and business.
- ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
- ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
- ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ
- ಬೌದ್ಧ ಧರ್ಮವು ಸಮಾನತೆ, ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ: ಹರಾ ಮಹೇಶ್
- ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಹೆಣ್ಣು ಮಕ್ಕಳಿಗೆ ಉಚಿತ ಲಸಿಕೆ: ಶಾಸಕ ಡಾ.ಎಚ್.ಡಿ.ರಂಗನಾಥ್
- ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ
- ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ
- ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
Author: admin
ಬೆಳಗಾವಿ: ವಿಧಾನ ಸಭಾ ಚುನಾವಣೆ ಘೋಷಣೆಗೆ ದಿನಗಣನೆ ಆರಂಭವಾಗಿದೆ. ಯಾವುದೇ ಕ್ಷಣದಲ್ಲಿ ಚುನಾವಣೆ ಆಯೋಗ ನೀತಿಸಂಹಿತೆ ಜಾರಿಗೊಳಿಸಬಹುದು ಎಂದು ಎಲ್ಲ ರಾಜಕಾರಣಿಗಳು ಕಾಯುತ್ತಿದ್ದಾರೆ. ಆದರೆ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಮಾತ್ರ ಅಭಿವೃದ್ಧಿ ಯೋಜನೆಗಳ ಸರಣಿ ಇನ್ನೂ ನಿಂತಿಲ್ಲ. ಮಳೆಗಾಲದ ಮಳೆಯಂತೆ ನಿರಂತರವಾಗಿ ಶಂಕುಸ್ಥಾಪನೆ ಇಲ್ಲವೇ ಉದ್ಘಾಟನೆ ಕಾರ್ಯಕ್ರಮಗಳು ಮುಂದುವರಿದಿವೆ. ಕ್ಷೇತ್ರಕ್ಕೆ ಸಾವಿರಾರು ಕೋಟಿ ರೂ.ಗಳ ಯೋಜನೆಗಳನ್ನು ತಂದಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಚುನಾವಣೆ ಅಧಿಸೂಚನೆ ಜಾರಿಗೊಳ್ಳುವ ಮುನ್ನ ಎಲ್ಲ ಕಾಮಗಾರಿಗಳಿಗೆ ಚಾಲನೆ ನೀಡುವ ತವಕದಲ್ಲಿದ್ದಾರೆ. ಶಾಸಕರಾಗಿ ಆಯ್ಕೆಯಾದ ದಿನದಿಂದಲೂ ಅವರು ಅವಿಶ್ರಾಂತವಾಗಿ ಯೋಜನೆಗಳನ್ನು ತಂದು ಚಾಲನೆ ನೀಡುತ್ತಲೇ ಇದ್ದಾರೆ. ಭಾನುವಾರ ಸಹ ಲಕ್ಷ್ಮೀ ಹೆಬ್ಬಾಳಕರ್ ಮತ್ತು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಲವು ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ಇನಾಂ ಬಡಸ್ ಗ್ರಾಮದ ಸರ್ಕಾರಿ ಹಿರಿಯ ಮರಾಠಿ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಹೊಸ ಕೊಠಡಿಯನ್ನು ಲಕ್ಷ್ಮೀ ಹೆಬ್ಬಾಳಕರ್ ಉದ್ಘಾಟಿಸಿದರು. ಈ ಸಮಯದಲ್ಲಿ ಗ್ರಾಮದ ಹಿರಿಯರು, ಮೇದಾರ್,…
ಗೋಕಾಕ್ : “ಮಾ. 15ರಂದು ಗೋಕಾಕನಲ್ಲಿ ಪ್ರಜಾಧ್ವನಿ ಸಮಾವೇಶ ಆಯೋಜಿಸಲಾಗಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯನವರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾಂಗ್ರೆಸ್ ಹಲವು ಗಣ್ಯರು ಆಗಮಿಸುತ್ತಿದ್ದಾರೆ” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಹೇಳಿದರು. ನಗರದ ಹಿಲ್ ಗಾರ್ಡನ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2023ರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ 1ನೇ ಹಂತದಲ್ಲಿ ಪ್ರಜಾಧ್ವನಿ ಯಾತ್ರೆ ಯಶಸ್ಸಿಯಾಗಿ ನಡೆಸಲಾಗಿದ್ದು, 2ನೇ ಹಂತದ ಯಾತ್ರೆಯನ್ನು ವಿಧಾನಸಭಾ ಕ್ಷೇತ್ರವಾರು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. ಪ್ರಜಾಧ್ವನಿ ಯಾತ್ರೆಯಲ್ಲಿ ಘೋಷಿಸಿದ ಯೋಜನೆಗಳನ್ನು ಮನೆ ಮನೆಗೆ ತಿಳಿಸಲಾಗುವುದು, ಇನ್ನು ಅನೇಕ ಯೋಜನೆಗಳನ್ನು ಘೋಷಿಸಲಾಗುವುದು, ಇದರಲ್ಲಿ ಜಿಲ್ಲಾವಾರು ಯೋಜನೆಗಳು ಹಂಚಿಕೆಯಾಗಿವೆ. ಜನ ಆಶೀರ್ವಾದ ಮಾಡಿದರೆ ಈ ಎಲ್ಲ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುತ್ತೇವೆ ಎಂದು ಹೇಳಿದರು ಪಕ್ಷಾಂತರ ಪರ್ವ ಸಹಜ: ಚುನಾವಣೆ ಬಂದಾಗ ಪಕ್ಷಾಂತರ ಪರ್ವ ಸಹಜವಾಗಿದೆ. ಬಿಜೆಪಿ ಆಡಳಿತ ಅವಧಿಯಲ್ಲಿ ಬೆಲೆ ಏರಿಕೆಯಿಂದ ಜನರು ತತ್ತರಿಸಿಹೋಗಿದ್ದಾರೆ. ಹೀಗಾಗಿ ಬಿಜೆಪಿ ತೊರೆದು ಕಾಂಗ್ರೆಸ್ನತ್ತ ಒಲವು ತೋರುತ್ತಿದ್ದಾರೆ. ಮತದಾರರು…
ದೇಶದ ಅತಿದೊಡ್ಡ ಟೆಲಿಕಾಂ ಕಂಪನಿ ರಿಲಯನ್ಸ್ ಜಿಯೋ ದೇಶದಲ್ಲಿ ತನ್ನ 5G ಸೇವೆಗಳನ್ನು ವೇಗವಾಗಿ ವಿಸ್ತರಿಸುತ್ತಿದೆ. ರಿಲಯನ್ಸ್ ಜಿಯೋ 749 ಮತ್ತು 899 ರೂಗಳ ಬೆಲೆಯ ಈ ಜಿಯೋ ಪ್ರಿಪೇಯ್ಡ್ ಯೋಜನೆಯು ಅನಿಯಮಿತ ಕರೆ ಮತ್ತು ಡೇಟಾ ಪ್ರಯೋಜನಗಳನ್ನು ಸುಮಾರು 3 ತಿಂಗಳ ಮಾನ್ಯತೆಯೊಂದಿಗೆ ಬರುತ್ತದೆ. ಜಿಯೋ ರೂ 899 ಯೋಜನೆ ರಿಲಯನ್ಸ್ ಜಿಯೋದ ಜನಪ್ರಿಯ ಯೋಜನೆಗಳಲ್ಲಿ ಒಳಗೊಂಡಿರುವ ಈ ಯೋಜನೆಯು 90 ದಿನಗಳ ಮಾನ್ಯತೆಯೊಂದಿಗೆ ಬರುತ್ತದೆ. ಇದರಲ್ಲಿ ಕಂಪನಿಯು ಅನಿಯಮಿತ ಕರೆ, ದೈನಂದಿನ ಡೇಟಾ ಮತ್ತು ಇತರ ಅನೇಕ ಪ್ರಯೋಜನಗಳನ್ನು ನೀಡುತ್ತದೆ. My Jio ಅಪ್ಲಿಕೇಶನ್ ಅಥವಾ Jio ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಈ ಯೋಜನೆಯನ್ನು ರೂ 899 ಕ್ಕೆ ಸಕ್ರಿಯಗೊಳಿಸಬಹುದು. ಅಲ್ಲದೆ ನೀವು ಯೋಜನೆಯಲ್ಲಿ ಪ್ರತಿದಿನ 2.5GB ಡೇಟಾವನ್ನು ಪಡೆಯುತ್ತೀರಿ. ಅಂದರೆ ಯೋಜನೆಯ ಮಾನ್ಯತೆಯವರೆಗೆ ಗ್ರಾಹಕರಿಗೆ ಸಂಪೂರ್ಣ 225GB ಡೇಟಾದ ಪ್ರಯೋಜನವನ್ನು ನೀಡಲಾಗುತ್ತದೆ. ಈ ಜಿಯೋ ಯೋಜನೆಯೊಂದಿಗೆ ಗ್ರಾಹಕರು ಪ್ರತಿದಿನ 100 SMS ಅನ್ನು…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಾವೂರಿನ ಶಾಂತಿನಗರದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ವೇಳೆ ಕಾರ್ಯಕ್ರಮವನ್ನು ಉದ್ದೇಶಿಸಿ ಕೆಎಸ್ ಈಶ್ವರಪ್ಪ ಅವರು ಮಾತನಾಡುತ್ತಿದ್ದರು. ಆದರೆ ಈಶ್ವರಪ್ಪ ಮಾತನಾಡುತ್ತಿದ್ದ ವೇಳೆ ಅಜಾನ್ ಕೇಳಿ ಬಂದಿತ್ತು. ಇದರಿಂದ ಸಿಡಿಮಿಡಿಗೊಂಡ ಈಶ್ವರಪ್ಪ ಅವರು, ನನಗೆ ಎಲ್ಲಿ ಹೋದರೂ ಇದೊಂದು ತಲೆನೋವು. ಸುಪ್ರೀಂ ಕೋರ್ಟ್ ಆದೇಶವಿದ್ದು, ಇಂದಲ್ಲ ನಾಳೆ ಇದು ಖತಂ ಆಗಲಿದೆ, ಇದರಲ್ಲಿ ಯಾವುದೇ ಅನುಮಾನ ಬೇಡ. ಎಲ್ಲಾ ಧರ್ಮಗಳಿಗೆ ಗೌರವ ಕೊಡಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳುತ್ತಾರೆ. ಆದರೆ ಮೈಕ್ನಲ್ಲಿ ಕೂಗಿದ್ದಲ್ಲಿ ಮಾತ್ರವೇ ಅಲ್ಲಾಗೆ ಕಿವಿ ಕೇಳೋದಾ? ನಮ್ಮ ದೇವಸ್ಥಾನಗಳಲ್ಲೂ ಪೂಜೆ ಮಾಡುತ್ತೇವೆ. ಶ್ಲೋಕ, ಭಜನೆಗಳನ್ನು ಹೇಳಲಾಗುತ್ತದೆ. ಅವರಿಗಿಂತ ಹೆಚ್ಚು ಭಕ್ತಿ ನಮ್ಮಲ್ಲೂ ಇದೆ. ಪ್ರಪಂಚದಲ್ಲಿ ಧರ್ಮವನ್ನು ಉಳಿಸುವಂಥಹ ದೇಶ ಭಾರತ ಮಾತ್ರ. ಆದರೆ ಮೈಕ್ ಹಿಡಿದುಕೊಂಡು ಮಾತ್ರ ಹೇಳಿದರೆ ಅವನಿಗೆ ಕಿವುಡಾ ಎಂದು ಕೇಳಬೇಕಾಗುತ್ತದೆ. ಆದ್ದರಿಂದ ಈ ಸಮಸ್ಯೆ ಆದಷ್ಟು ಬೇಗ ಪರಿಹಾರ ಆಗಬೇಕು ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…
ಯಮಕನಮರಡಿ: ಮಹಿಳೆಯರು ಪ್ರಸ್ತುತ ಪುರುಷರಷ್ಟೇ ಸಮಾನರು. ಅವರಿಲ್ಲದ ಕ್ಷೇತ್ರವಿಲ್ಲ, ಅವರು ಮಾಡದ ಸಾಧನೆ ಇಲ್ಲ. ತೊಟ್ಟಿಲನ್ನು ತೂಗುವ ಕೈ ಇಂದು ಜಗತ್ತನ್ನೇ ಆಳುತ್ತಿದೆ. ಸಣ್ಣ ಪದವಿ, ಕೆಲಸ, ಮನೆಗೆಲಸದಿಂದ ಹಿಡಿದು ಅತ್ಯುತ್ತಮ ಪದವಿಯವರೆಗೂ ಮಹಿಳೆ ಸ್ಥಾನ ಪಡೆದುಕೊಂಡಿದ್ದಾಳೆ. ಹೀಗೆ ಮಹಿಳೆಯರ ಸಾಧನೆ, ಕೊಡುಗೆ ಸ್ಮರಿಸಲು ಮಹಿಳಾ ದಿನಾಚರಣೆ ಆಚರಿಸಲಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಯಮಕನಮರಡಿ ಮತಕ್ಷೇತ್ರದ ಕುರಣಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ಪ್ರತಿ ವರ್ಷ ಮಾರ್ಚ್ 8 ರಂದು ಸಂಭ್ರಮದಿಂದ ಆಚರಣೆ ಮಾಡಲಾಗುತ್ತದೆ. ಮಹಿಳೆಯರ ತ್ಯಾಗ, ಪರಿಶ್ರಮ, ಸಾಮಾಜಿಕ, ಸಾಂಸ್ಕೃತಿಕ, ಆರ್ಥಿಕ ಕ್ಷೇತ್ರಗಳಲ್ಲಿನ ಅವರ ಸಾಧನೆ, ಸಮಾಜಕ್ಕೆ ಅವರ ಅಗತ್ಯತೆ, ಕೊಡುಗೆ, ಅವರಿಗೆ ಗೌರವ ಸಲ್ಲಿಸಲು ಹೀಗೆ ಹತ್ತಾರು ಕಾರಣಕ್ಕೆ ಈ ದಿನವನ್ನು ಮಹಿಳೆಯರಿಗಾಗಿ ಮೀಸಲಿಡಲಾಗಿದೆ ಎಂದು ತಿಳಿಸಿದರು. ಮಹಿಳಾ ದಿನಾಚರಣೆ ಮೊದಲು ರಾಷ್ಟ್ರ, ರಾಜ್ಯ, ಜಿಲ್ಲಾ ಮಟ್ಟದಲ್ಲಿ…
ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಎಐಎಡಿಎಂಕೆ ಶಾಸಕ ಪಿಆರ್ ಸೆಂಥಿಲ್ನಾಥನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮಧುರೈ ವಿಮಾನ ನಿಲ್ದಾಣದಲ್ಲಿ ಪ್ರತಿಭಟನಾ ನಿರತ ಪ್ರಯಾಣಿಕರೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಎಡಪ್ಪಾಡಿ ಕೆ ಪಳನಿಸ್ವಾಮಿ, ಪಿಆರ್ ಸೆಂಥಿಲ್ನಾಥನ್ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಪಳನಿಸ್ವಾಮಿ ಅವರ ಜೊತೆ ಪ್ರಯಾಣಿಸುತ್ತಿರುವುದಾಗಿ ವ್ಯಕ್ತಿಯೊಬ್ಬ ಫೇಸ್ಬುಕ್ನಲ್ಲಿ ಲೈವ್ ಮಾಡಿದ್ದಾನೆ. ಈ ವೇಳೆ ವ್ಯಕ್ತಿ ಅವರ ವಿರುದ್ಧ ಘೋಷಣೆ ಕೂಗಿದ್ದಾನೆ. ಇದಕ್ಕೆ ಪ್ರತಿಯಾಗಿ ಅವರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಪಳನಿಸ್ವಾಮಿ ಅವರ ಅಂಗರಕ್ಷಕರು ಫೇಸ್ಬುಕ್ನಲ್ಲಿ ಲೈವ್ನಲ್ಲಿ ಹಾಗೂ ಪಳನಿಸ್ವಾಮಿ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದ ವ್ಯಕ್ತಿಯ ಸೆಲ್ ಫೋನ್ ಕಿತ್ತುಕೊಂಡು ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ವಿಮಾನ ನಿಲ್ದಾಣದಿಂದ ಫೇಸ್ಬುಕ್ ಲೈವ್ ಸ್ಟ್ರೀಮ್ ಅನ್ನು ಶೇರ್ ಮಾಡಿದ ಆರೋಪದ ಮೇಲೆ ಪ್ರಯಾಣಿಕನನ್ನು ಸಹ ವಶಕ್ಕೆ ತೆಗೆದುಕೊಳ್ಳಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…
ಹೆಚ್ಚುತ್ತಿರುವ ಬಿಸಿಲ ತಾಪವನ್ನು ಎದುರಿಸಲು ಕರ್ನಾಟಕ,ತಮಿಳುನಾಡು, ಕೇರಳ, ಆಂಧ್ರಪ್ರದೇಶ ಹರಸಾಹಸ ಪಡುತ್ತಿದೆ. ದಿನದಿಂದ ದಿನಕ್ಕೆ ಬಿಸಿಗಾಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನೂ ಅಧಿಕಾರಿಗಳು ಹೊರಡಿಸಿದ್ದಾರೆ. ನಿಖಿಲ್ ಎಂಬಾತ ಇಂದು ಪಾಲಕ್ಕಾಡ್ ಬಸ್ಗಾಗಿ ಕಾಯುತ್ತಿದ್ದಾಗ ಸನ್ಸ್ಟ್ರೋಕ್ಗೆ ಒಳಗಾಗಿದ್ದಾನೆ. ಸನ್ ಬರ್ನ್ ಎಂದರೇನು? ಬಿಸಿಲ ಬೇಗೆಯನ್ನು ತಡೆಯುವುದು ಹೇಗೆ? ಯಾವ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಎಂಬುದನ್ನು ತಿಳಿದುಕೊಳ್ಳಿ. ಸನ್ಬರ್ನ್ ಎಂಬುದು ಸುಟ್ಟಗಾಯ ಅಥವಾ ಅಂತಹುದೇ ದದ್ದುಯಾಗಿದ್ದು ಅದು ಸೂರ್ಯನಿಂದ ಬರುವ ನೇರಳಾತೀತ ಕಿರಣಗಳಿಗೆ ಅಥವಾ ಸೂರ್ಯನ ದೀಪ ಅಥವಾ ತೀವ್ರವಾದ ಸೂರ್ಯನ ಬೆಳಕಿಗೆ ಒಡ್ಡಿಕೊಂಡಾಗ ಸಂಭವಿಸುತ್ತದೆ. ಬಿಸಿಲಿನ ಬೇಗೆಯ ಪ್ರಮಾಣವು ಅದರ ತೀವ್ರತೆ ಮತ್ತು ಒಡ್ಡಿಕೊಂಡ ವ್ಯಕ್ತಿಯ ಚರ್ಮವನ್ನು ಅವಲಂಬಿಸಿರುತ್ತದೆ. ಹಿಗ್ಗಿಸಲಾದ ಗುರುತುಗಳೊಂದಿಗೆ ಗುಳ್ಳೆಗಳು, ಗುಲಾಬಿ ಬಣ್ಣದಿಂದ ಕೆಂಪು ಚರ್ಮದ ಬಣ್ಣ, ಸುಟ್ಟಗಾಯಗಳೊಂದಿಗೆ ಸಿಪ್ಪೆ ಸುಲಿದ ಚರ್ಮವು ಬಿಸಿಲಿನ ನಂತರ ದೇಹದ ಮೇಲೆ ಕಂಡುಬರುತ್ತದೆ. ತೀವ್ರ ಬಿಸಿಲಿನ ಲಕ್ಷಣಗಳು ಇಡೀ ದೇಹದ ಮೇಲೆ ಪರಿಣಾಮ ಬೀರಬಹುದು. ಜ್ವರ, ಶೀತ, ತೀವ್ರ ತಲೆನೋವು, ವಾಕರಿಕೆ, ವಾಂತಿ ಇತ್ಯಾದಿಗಳು…
ಬೆಳಗಾವಿ: ನನ್ನ ಬಳಿ 10 ಸಿಡಿಗಳಿವೆ. ನಾವು ಯುದ್ಧ ಮಾಡುವ ಜನ, ಷಡ್ಯಂತರ ಮಾಡುವವರಲ್ಲ. ಹೀಗಾಗಿ ಬಿಡುಗಡೆ ಮಾಡುವುದಿಲ್ಲ ಎಂಬುದಾಗಿ ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯ ಗೋಕಾಕ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಓರ್ ಮಂತ್ರಿಯನ್ನು ಬರ್ತಿರೋ, ಸಿಡಿ ಬಿಡಗಡೆ ಮಾಡಲೋ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೆದರಿಸುತ್ತಾನೆ. ಸಿಡಿ ಪಾಟನರ್ ಹಾಗೂ ಆಕ್ಟರ್ ಬೆಳಗಾವಿಯಲ್ಲೇ ಇದ್ದಾನೆ. ಅದಕ್ಕೆ ಎಲ್ಲರೂ ಎಚ್ಚರಿಕೆಯಿಂದ ಇರಬೇಕು ಎಂದರು. ನಾವು ಯುದ್ಧ ಮಾಡುವ ಜನ, ಷಡ್ಯಂತ್ರ ಮಾಡುವವರು ಅಲ್ಲ. ನನ್ನ ಬಳಿ 10 ಸಿಡಿಗಳಿದ್ದಾವೆ. ಆದರೇ ಬಹಿರಂಗ ಮಾಡೋದಿಲ್ಲ. ಅವನ ಪತ್ನಿ ನನ್ನ ತಂಗಿ ಇದ್ದಂತೆ, ಮನೆ ಒಡೆಯಬಾರದು ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಗುಡುಗಿದರು. ಅಧಿಕಾರ ಬರಲು ಬಿಡಬಾರದು. ಸಿದ್ಧರಾಮಯ್ಯ, ಪರಮೇಶ್ವರ್, ಮಲ್ಲಿಕಾರ್ಜನ ಖರ್ಗೆಯಂತ ಒಳ್ಳೆಯವರು ಇದ್ದಾರೆ. ಯಾವುದೇ ಕಾರಣಕ್ಕೂ ಡಿ.ಕೆ ಶಿವಕುಮಾರ್ ಕೈಯಲ್ಲಿ ಅಧಿಕಾರ ಸಿಗಲೇ ಬಾರದು. ಬ್ಲಾಕ್ ಮೇಲರ್ ಕೈಯಲ್ಲಿ ಅಧಿಕಾರ ಸಿಕ್ಕರೇ ಕಾಂಗ್ರೆಸ್ ಪಕ್ಷದ…
ಅತ್ಯುತ್ತಮ ಮೂಲ ಗೀತೆಗಾಗಿ ಆಸ್ಕರ್ ಭಾರತೀಯ ಚಲನಚಿತ್ರ RRR ನ ನಾಟು ನಾಟುಗೆ ದಕ್ಕಿತು. ಇದು ಭಾರತದ ಐತಿಹಾಸಿಕ ಕ್ಷಣ. ಚಿತ್ರವನ್ನು ರಾಜಮೌಳಿ ನಿರ್ದೇಶಿಸಿದ್ದಾರೆ. ಈ ಹಾಡು ಗೋಲ್ಡನ್ ಗ್ಲೋಬ್ಸ್ನಲ್ಲಿ ಅದೇ ವಿಭಾಗದಲ್ಲಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿತು. ಗೋಲ್ಡನ್ ಗ್ಲೋಬ್ ಹೊರತುಪಡಿಸಿ, ಈ ಹಾಡು ಕ್ರಿಟಿಕ್ಸ್ ಚಾಯ್ಸ್ ಸೇರಿದಂತೆ ಅಂತರರಾಷ್ಟ್ರೀಯ ಪ್ರಶಸ್ತಿಗಳಿಂದ ತುಂಬಿತ್ತು. ನಾಟು ನಾಟು RRR ಗೋಲ್ಡನ್ ಗ್ಲೋಬ್ ಗೆದ್ದ ಭಾರತದ ಮೊದಲ ದೇಶೀಯ ಚಲನಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ನಾಟು ನಾಟು ಬರೆದವರು ಚಂದ್ರ ಬೋಸ್. ಖ್ಯಾತ ಸಂಗೀತ ನಿರ್ದೇಶಕ ಎಂ.ಎಂ. ನಾಲ್ಕೂವರೆ ನಿಮಿಷದ ಈ ಹಾಡಿಗೆ ಕೀರವಾಣಿ ಸಂಗೀತ ನೀಡಿದ್ದಾರೆ. ಕೀರವಾಣಿಯವರ ಮಗ ಕಾಲಭೈರವ ಮತ್ತು ರಾಹುಲ್ ಸಿಪ್ಲಿಗುಂಜ್ ಪ್ರಮುಖ ಗಾಯಕರು. ಸೂಪರ್ ಸ್ಟಾರ್ ರಾಮ್ ಚರಣ್ ತೇಜ ಮತ್ತು ಜೂನಿಯರ್ ಎನ್. ಟ್ರಂ ಹಾಡಿನಲ್ಲಿ ನಟಿಸಿದ್ದಾರೆ. ಪ್ರೇಮ್ ರಕ್ಷಿತ್ ಹತ್ತೊಂಬತ್ತು ತಿಂಗಳಲ್ಲಿ ನೃತ್ಯ ಸಂಯೋಜನೆಯನ್ನು ಪೂರ್ಣಗೊಳಿಸಿದರು. ಉಕ್ರೇನ್ನಲ್ಲಿ ಯುದ್ಧ ಪ್ರಾರಂಭವಾಗುವ ಮೊದಲು ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಯ ಅಧಿಕೃತ…
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕೋಳಿಕೊಪ್ಪ ಗ್ರಾಮದಿಂದ ರಾಷ್ಟ್ರೀಯ ಹೆದ್ದಾರಿ ನಂ.4 ರ ವರೆಗಿನ ರಸ್ತೆಯ ಅಭಿವೃದ್ಧಿಗಾಗಿ ಲೋಕೋಪಯೋಗಿ ಇಲಾಖೆಯ ವತಿಯಿಂದ 38.90 ಲಕ್ಷ ರೂ,ಗಳನ್ನು ಬಿಡುಗಡೆ ಮಾಡಿಸಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ರಸ್ತೆಯ ಡಾಂಬರೀಕರಣದ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ಕೈಗೊಂಡು ಭಾನುವಾರ ಚಾಲನೆಯನ್ನು ನೀಡಿದರು. ನಂತರ, ಕೋಳಿಕೊಪ್ಪ ಗ್ರಾಮದ ಶ್ರೀ ವಿಠ್ಠಲ ರುಕ್ಮಾಯಿ ಮಂದಿರದ ಜೀರ್ಣೋದ್ಧಾರದ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಚಾಲನೆಯನ್ನು ನೀಡಿದರು. ಮುಜರಾಯಿ, ಹಜ್ ಮತ್ತು ವಕ್ಫ್ ಇಲಾಖೆಯ ವತಿಯಿಂದ ದೇವಸ್ಥಾನ ಜೀರ್ಣೋದ್ಧಾರಕ್ಕೆ ಅವರು 15 ಲಕ್ಷ ರೂ,ಗಳನ್ನು ಮಂಜೂರು ಮಾಡಿಸಿದ್ದಾರೆ. ಈ ಸಮಯದಲ್ಲಿ ರಾಜು ಜಾಧವ್, ಬಸವರಾಜ ನಾಯ್ಕ, ತುಕಾರಾಂ ಕೊಡಚವಾಡ್, ಮನೋಹರ ಬಾಂಡಗಿ ಶಿವಾನಂದ ಬಾಂಡಗಿ, ಪರಶುರಾಮ ಪೂಜಾರಿ, ಮಾರುತಿ ಕೊಡಚವಾಡ್ ಸಂತೋಷ್ ಜಾಧವ್, ರಾಜು ನಾಯ್ಕ್, ಫಕೀರ ಕುರೇರ್, ನಾಗೇಶ್ ಕೊಡಚವಾಡ, ಸೋಮನಾಥ, ರಮೇಶ ಕುರಿ, ನಿಂಗಾನಿ ನಾಯ್ಕ್, ಸುರೇಶ ಕೊಡಚವಾಡ, ಸಂತೋಷ್ ಜಾಧವ್ ಮುಂತಾದವರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು…