Subscribe to Updates
Get the latest creative news from FooBar about art, design and business.
- ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
- ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
- ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ
- ಬೌದ್ಧ ಧರ್ಮವು ಸಮಾನತೆ, ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ: ಹರಾ ಮಹೇಶ್
- ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಹೆಣ್ಣು ಮಕ್ಕಳಿಗೆ ಉಚಿತ ಲಸಿಕೆ: ಶಾಸಕ ಡಾ.ಎಚ್.ಡಿ.ರಂಗನಾಥ್
- ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ
- ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ
- ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
Author: admin
ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಪ್ರತಿ ಗ್ರಾಮಪಂಚಾಯಿತಿಗೆ ಎರಡು ವಿವೇಕಾನಂದ ಸ್ವಸಹಾಯ ಗುಂಪುಗಳ ರಚನೆ ಮಾಡುವ ಸಂಬಂಧ ಆದೇಶ ಹೊರಡಿಸಿದೆ. ರಾಜ್ಯದ ಪ್ರತಿ ಗ್ರಾಮಪಂಚಾಯತ್ ನಲ್ಲಿ ಸ್ವಾಮಿ ವಿವೇಕಾನಂದರ ಹೆಸರಿನಲ್ಲಿ ಯುವ ಸ್ವಸಹಾಯ ಸಂಘ ಸ್ಥಾಪಿಸಿ, ಸ್ವಯಂ ಉದ್ಯೋಗ ಕೈಗೊಳ್ಳುವುದಕ್ಕೆ ನೆರವು ನೀಡಲು ರಾಜ್ಯ ಸರ್ಕಾರ ಆದೇಶಿಸಿದ್ದು, ಪ್ರತಿ ಗ್ರಾಮಪಂಚಾಯಿತಿಗೆ ಎರಡರಂತೆ 12 ಸಾವಿರ ಸ್ವಾಮಿ ವಿವೇಕಾನಂದ ಸ್ವಸಹಾಯ ಸಂಘಗಳನ್ನು ರಚಿಸುವುದಾಗಿ ಸಿಎಂ ಬೊಮ್ಮಾಯಿ ಘೋಷಿಸಿದ್ದರು.ಅದರಂತೆ ಇದೀಗ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಪ್ರತಿ ಗುಂಪಿಗೆ 10 ಸಾವಿರ ರೂ. ನಿಧಿ, 1 ಲಕ್ಷ ರೂ. ಸಬ್ಸಿಡಿಯೊಂದಿಗೆ 5 ಲಕ್ಷ ರೂ. ಸಾಲಸೌಲಭ್ಯ ಒದಗಿಸಲಾಗುತ್ತದೆ. ಸ್ಥಳೀಯ ಬೇಡಿಕೆಗಳನ್ನು ಆಧರಿಸಿ ಎಲ್ಲಾ ಸ್ವಸಹಾಯಗಳ ಕಾರ್ಯಚಟುವಟಿಕೆ ಆರಂಭಿಸಿ 12 ಸಾವಿರ ಯುವ ಸಂಘಗಳನ್ನು ನವೋದ್ಯಮಗಳಾಗಿ ಪರಿವರ್ತಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ಧಾರವಾಡ: ರಾಜ್ಯದ ಮೊದಲ ಐಐಟಿ ಗ್ರೀನ್ ಕ್ಯಾಂಪಸ್ ನ್ನು ವಿದ್ಯಾಕಾಶಿ ಧಾರವಾಡದಲ್ಲಿ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದಾರೆ. 852 ಕೋಟಿ ವೆಚ್ಚದಲ್ಲಿ 535 ಎಕರೆ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ಐಐಟಿ ಗ್ರೀನ್ ಕ್ಯಾಂಪಸ್ ನ್ನು ರಿಬ್ಬನ್ ಕಟ್ ಮಾಡುವ ಮೂಲಕ ಲೋಕಾರ್ಪಣೆಗೊಳಿಸಿದರು. ಹುಬ್ಬಳ್ಳಿ-ಧಾರವಾಡ ಜನರ ಪ್ರೀತಿ ಎಂದಿಗೂ ಮರೆಯಲು ಸಾಧ್ಯವಿಲ್ಲ, ಕರ್ನಾಟಕದ ಪ್ರತಿ ವ್ಯಕ್ತಿ ಜೀವನ ಸಮೃದ್ಧಗೊಳಿಸುವ ಅವಕಾಶ ಸಿಕ್ಕಿದೆ. ಜಗದ್ಗುರು ಬಸವೇಶ್ವರರಿಗೆ ನನ್ನ ಪ್ರಣಾಮಗಳು. ಧಾರವಾಡ ಕರ್ನಾಟಕ ಮಾತ್ರವಲ್ಲ ಭಾರತದ ಜೀವಂತ ಪ್ರತಿಬಿಂಬ ಎಂದು ಹೇಳಿದರು. ಪಂಡಿತ್ ಭೀಮಸೇನ್ ಜೋಶಿ, ದ.ರಾ.ಬೇಂದ್ರೆಯವರನ್ನು ಸ್ಮರಿಸಿದ ಪ್ರಧಾನಿ ಮೋದಿ, ಸಾಹಿತ್ಯ, ಸಂಗೀತ ಕ್ಷೇತ್ರಕ್ಕೂ ಧಾರವಾಡ ಕೊಡುಗೆ ಸಾಕಷ್ಟಿದೆ. ಬೆಂಗಳೂರು-ಮೈಸೂರು ಹೈವೆ ಉದ್ಘಾಟನೆ ನನ್ನ ಸೌಭಾಗ್ಯ. ಇತ್ತೀಚೆಗೆ ಶಿವಮೊಗ್ಗದಲ್ಲಿ ಏರ್ ಪೋರ್ಟ್ ಉದ್ಘಾಟಿಸಲಾಗಿದೆ. ಬೆಳಗಾವಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗೆ ಚಾಲನೆ ನೀಡಲಾಗಿದೆ. ಧಾರವಾಡದಲ್ಲಿ ಐಐಟಿ ಲೋಕಾರ್ಪಣೆ ಮಾಡಲಾಗಿದೆ. ಡಬಲ್ ಎಂಜಿನ್ ಸರ್ಕಾರದಿಂದ ವೇಗವಾಗಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ ಎಂದರು. ಕಳೆದ 9 ವರ್ಷಗಳಲ್ಲಿ ದೇಶದಲ್ಲಿ…
ಮಂಡ್ಯ: ರಾಜ್ಯದ ಎರಡು ಪ್ರಮುಖ ನಗರಗಳಾದ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಗೆ ಅಡಿಗಲ್ಲು ಹಾಕಿದ್ದು ನಾವೇ. ಇಂದು ಹೆದ್ದಾರಿ ಉದ್ಘಾಟನೆ ಮಾಡುತ್ತಿರುವುದು ನಾವೇ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಪಕ್ಷಗಳಿಗೆ ತಿರುಗೇಟು ನೀಡಿದರು. ಪ್ರಧಾನಮಂತ್ರಿಗಳ ಮಂಡ್ಯ ಭೇಟಿ ಹಾಗೂ ಎಕ್ಸಪ್ರೆಸ್ವೇ ಮದ್ದೂರು ತಾಲೂಕಿನ ಗೆಜ್ಜಲಗೆರೆ ಕಾಲೋನಿಯಲ್ಲಿ ಭಾನುವಾರ ನಡೆದ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ನರೇಂದ್ರ ಮೋದಿ ಅವರು ಪ್ರಧಾನಿಯಾಗಿದ್ದ 2015ರಲ್ಲಿ ಹೆದ್ದಾರಿಯ ಡಿಪಿಆರ್ ಸಿದ್ಧವಾಯಿತು. 2016ಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ವರ್ಗಾವಣೆಯಾಯಿತು. ಅಂದಾಜು ವೆಚ್ಚ ಹೆಚ್ಚಾಗಿದ್ದರಿಂದ ಅದು ಮತ್ತೆ ಮೋದಿ ಅವರ ಬಳಿಗೆ ಹೋಯಿತು. ತಡ ಮಾಡದೆ ಮಂಜೂರಾತಿ ನೀಡಿದರು. ಹೀಗಾಗಿ ಈ ದಶಪಥ ಹೆದ್ದಾರಿ ನಮ್ಮ ಕೊಡುಗೆ ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಿಗೆ ಬೊಮ್ಮಾಯಿ ಟಾಂಗ್ ನೀಡಿದರು. ಬೆಂಗಳೂರು-ಮೈಸೂರು ಹೆದ್ದಾರಿಯು 2019ರಲ್ಲಿ ಶಂಕುಸ್ಥಾಪನೆಯಾಗಿ 2023ರಲ್ಲಿ ಉದ್ಘಾಟನೆ ಆಗುತ್ತಿದೆ. ಯೋಜನೆ ಆರಂಭದಿಂದ ಹಿಡಿದು ಕೊನೆಯವರೆಗೂ ಯೋಜನೆಯನ್ನು ಮುನ್ನಡೆಸಿದ್ದು ನಾವೇ ಎಂದು ಗಟ್ಟಿ ಧ್ವನಿಯಲ್ಲಿ ಮುಖ್ಯಮಂತ್ರಿಗಳು ಪುನರುಚ್ಚರಿಸಿದರು.…
ಬೆಂಗಳೂರು–ಮೈಸೂರು ದಶಪಥ ಎಕ್ಸ್ ಪ್ರೆಸ್ ವೇಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ ದ ಬೆನ್ನಲ್ಲೇ ದಶಪಥ ಹೆದ್ದಾರಿಯಲ್ಲಿ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಮೋದಿ ಆಗಮನದ ಹಿನ್ನಲೆಯಲ್ಲಿ ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ವರೆಗೆ ಸಂಚಾರ ನಿರ್ಬಂಧಕ್ಕೆ ಆದೇಶ ನೀಡಲಾಗಿತ್ತು. ಆದರೆ ಮೋದಿ ಕಾರ್ಯಕ್ರಮ ಮುಗಿಸಿ ತೆರಳುತ್ತಿದ್ದ ಬೆನ್ನಲ್ಲೇ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಮದ್ದೂರು ತಾಲೂಕು ಗೆಜ್ಜಲಗೆರೆ ಕಾಲೋನಿ ಬಳಿ ಹೆದ್ದಾರಿ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಹೀಗಾಗಿ ಇಂದು ಬೆಳಗ್ಗೆ ಅಗತ್ಯಸೇವೆ ಮತ್ತು ಹಾಲಿನ ವಾಹನಗಳಿಗೆ ಮಾತ್ರ ಬೆಳಗ್ಗೆ 9 ಗಂಟೆಯವರೆಗೆ ಸವೀರ್ಸ್ ರಸ್ತೆಯಲ್ಲಿ ತೆರಳಲು ಅವಕಾಶ ಕಲ್ಪಿಸಲಾಗಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬುರ್ಹಾನ್ಪುರ: 40 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ಮೂವರು ಪುತ್ರಿಯರನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಮಧ್ಯಪ್ರದೇಶದ ಬುರ್ಹಾನ್ಪುರ ಜಿಲ್ಲೆಯಲ್ಲಿ ನೇಪಾನಗರದ ದವಾಲಿಖುರ್ದ್ ಗ್ರಾಮದಲ್ಲಿ ನಡೆದಿದೆ. 40 ವರ್ಷದ ಮನೋಜ್, ಅವರ ಪತ್ನಿ ಸಾಧನಾ ಮತ್ತು ಮೂವರು ಪುತ್ರಿಯರಾದ ಅಕ್ಷರ, ನೇಹಾ ಮತ್ತು ತನು ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮನೋಜ್ ಮತ್ತು ಸಾಧನಾ ಅವರ ಶವಗಳು ಮಲಗುವ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದರೆ, ಮೂವರು ಹುಡುಗಿಯರ ಶವಗಳು ಹೊರಗಿನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿವೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸ್ಥಳೀಯರ ಪ್ರಕಾರ, ಕಳೆದ ಕೆಲವು ದಿನಗಳಿಂದ ಮನೋಜ್ ಮತ್ತು ಅವರ ಕುಟುಂಬ ಸದಸ್ಯರು ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಬಗ್ಗೆ ಪೊಲೀಸರು ವಿವರವಾದ ತನಿಖೆ ಆರಂಭಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚಾಮರಾಜನಗರ: ಕೆಪಿಸಿಸಿ ಕಾರ್ಯಧ್ಯಕ್ಷ, ಮಾಜಿ ಸಂಸದ ಆರ್. ಧ್ರುವನಾರಾಯಣ್ ತಮ್ಮ ಹುಟ್ಟೂರಿನ ಜನ್ಮದಾತರ ಸಮಾಧಿಯ ಬಳಿಯೇ ಮಣ್ಣಲ್ಲಿ ಮಣ್ಣಾದರು. ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಿಂದ ಎರಡು ಭಾರಿ ಸಂಸದರಾಗಿ ಜನ ಮನ್ನಣೆ ಪಡೆದಿದ್ದ ಆರ್. ಧ್ರುವನಾರಾಯಣ್ ಅವರು ಶನಿವಾರ ಬೆಳಗ್ಗೆ ಮೈಸೂರಿನ ಸ್ವಗೃಹದಲ್ಲಿ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗದ ಮಧ್ಯೆ ಮೃತಪಟ್ಟಿದ್ದರು. ಅವರ ಅಂತ್ಯಕ್ರಿಯೆ ಕುಟುಂಬದರ ಬಯಕೆಯಂತೆ ಹುಟ್ಟೂರಾದ ಚಾಮರಾಜನಗರ ತಾಲ್ಲೂಕಿನ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಹೆಗ್ಗವಾಡಿ ಗ್ರಾಮದ ತೋಟದಲ್ಲಿ ಹಿಂದೂ ಸಂಪ್ರದಾಯದಂತೆ ನೇರವೇರಿತು. ಸಾವಿರಾರು ಅಭಿಮಾನಿಗಳು, ಬಂಧು ಬಳಗದವರ ಸಮ್ಮುಖದಲ್ಲಿ ಧ್ರುವನಾರಾಯಣ್ ಅವರ ಅಂತ್ಯಕ್ರಿಯೆ ನೆರವೇರಿತು. ಧ್ರುವನಾರಾಯಣ ಅವರ ಹಿರಿಯ ಪುತ್ರ ದರ್ಶನ್ ದೃವ ಧಾರ್ಮಿಕ ವಿಧಿವಿಧಾನ ಕಾರ್ಯಗಳನ್ನು ನೆರವೇರಿಸಿದರು. ಜನ್ಮದಾತರ ಸಮಾಧಿಯ ಬಳಿ ಆರ್. ಧ್ರುವನಾರಾಯಣ್ ಅಜರಾಮರರಾದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ನವದೆಹಲಿ: ನವದೆಹಲಿ ಬಾರ್ ಅಸೋಸಿಯೇಷನ್ ಆಯೋಜಿಸಿದ್ದ ಹೋಳಿ ಮಿಲನ್ ಕಾರ್ಯಕ್ರಮದಲ್ಲಿ ಮಹಿಳೆಯೊಬ್ಬರು ಬಾಲಿವುಡ್ ಹಾಡಿಗೆ ಅಶ್ಲೀಲವಾಗಿ ನೃತ್ಯ ಮಾಡಿದ್ದು, ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ. ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಆವರಣದಲ್ಲಿ ಮಾರ್ಚ್ 6 ರಂದು ಹೋಳಿ ಮಿಲನ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ವೃತ್ತಿಪರ ನೃತ್ಯಗಾರರು ಬಾಲಿವುಡ್ ಹಾಡಿಗೆ ಅಶ್ಲೀಲವಾಗಿ ನೃತ್ಯ ಮಾಡಿದ್ದು, ಈ ಬಗ್ಗೆ ಸಂದೀಪ್ ಪಾಂಡೆ ಎಂಬ ಬಳಕೆದಾರರು ಟ್ವಿಟ್ಟರ್ ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದರು. ಈ ವಿಡಿಯೋ ಇದೀಗ ವ್ಯಾಪಕವಾಗಿ ವೈರಲ್ ಆಗಿದ್ದು, ಘಟನೆಯನ್ನು ದೆಹಲಿ ಹೈಕೋರ್ಟ್ “ಅನುಚಿತ” ನೃತ್ಯ ಪ್ರದರ್ಶನ ಎಂದು ಹೇಳಿದೆ. ಜೊತೆಗೆ ಘಟನೆಯು ವಕೀಲ ವೃತ್ತಿಯ ಉನ್ನತ ನೈತಿಕ ಮತ್ತು ನೈತಿಕ ಮಾನದಂಡಗಳಿಗೆ ಅನುಗುಣವಾಗಿಲ್ಲ. ನ್ಯಾಯಾಂಗ ಸಂಸ್ಥೆಯ ಪ್ರತಿಷ್ಠೆಗೆ ಕಳಂಕ ತರುವ ಪರಿಣಾಮವನ್ನು ಹೊಂದಿದೆ ಎಂದು ಖಂಡಿಸಿದೆ. NDBA ಗೆ ಶೋಕಾಸ್ ನೋಟಿಸ್ ನೀಡಲಿದ್ದು, ಮುಂದಿನ ಆದೇಶದವರೆಗೆ ಯಾವುದೇ ಕಾರ್ಯಕ್ರಮಕ್ಕಾಗಿ ನ್ಯಾಯಾಲಯದ ಆವರಣವನ್ನು ಹೊಸದಿಲ್ಲಿ ಬಾರ್ ಅಸೋಸಿಯೇಶನ್ನ ಪ್ರಸ್ತುತ ಕಾರ್ಯನಿರ್ವಾಹಕರು ಬಳಸಲು…
ಹೈದರಾಬಾದ್ : ಆಂತರಿಕ ಭದ್ರತೆಗೆ ಸಂಬಂಧಿಸಿದ ಹಲವಾರು ಸವಾಲುಗಳನ್ನು ಕಳೆದ ಒಂಬತ್ತು ವರ್ಷಗಳಲ್ಲಿ ಕೇಂದ್ರ ಸರ್ಕಾರವು ಯಶಸ್ವಿಯಾಗಿ ನಿರ್ವಹಿಸಿದೆ, ಭಯೋತ್ಪಾದನೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಶೂನ್ಯ ಸಹಿಷ್ಣು ನೀತಿಯು ಮುಂದುವರೆಯಲಿದೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ತೆಲಂಗಾಣದ ಹಕೀಂಪೇಟ್ನಲ್ಲಿಯ ರಾಷ್ಟ್ರೀಯ ಕೈಗಾರಿಕಾ ಭದ್ರತಾ ಅಕಾಡೆಮಿಯಲ್ಲಿ ನಡೆದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ 54ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಪ್ರತ್ಯೇಕತಾವಾದ, ಭಯೋತ್ಪಾದನೆ ಮತ್ತು ದೇಶ ವಿರೋಧಿ ಚಟುವಟಿಕೆಗಳು ದೇಶದ ಯಾವುದೇ ಭಾಗದಲ್ಲಿ ನಡೆದರೂ ಅದನ್ನು ದೃಢವಾಗಿ ನಿಭಾಯಿಸಲಾಗುತ್ತದೆ ಎಂದಿದ್ದಾರೆ. ಭಯೋತ್ಪಾದನೆ ವಿರುದ್ಧ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್) ಮತ್ತು ರಾಜ್ಯ ಪೊಲೀಸರು ‘ಮಹತ್ವ’ದ ಪಾತ್ರ ವಹಿಸುತ್ತಿದ್ದಾರೆ ಎಂದು ಒತ್ತಿ ಹೇಳಿದ ಅವರು, ಕಳೆದ ಒಂಬತ್ತು ವರ್ಷಗಳಲ್ಲಿ ಭದ್ರತೆ ವಿಚಾರದಲ್ಲಿ ಅವರ ಪಾತ್ರ ರುಜವಾತಾಗಿದೆ ಎಂದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ತೆಲಂಗಾಣ ಸಿಎಂ ಚಂದ್ರಶೇಖರ ರಾವ್ ಹೊಟ್ಟೆ ಹುಣ್ಣಿನ ಸಮಸ್ಯೆಯಿಂದಾಗಿ ಭಾನುವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಸಿಆರ್ ಅವರ ಹೊಟ್ಟೆಯಲ್ಲಿ ಸಣ್ಣ ಹುಣ್ಣು ಕಾಣಿಸಿಕೊಂಡಿದ್ದು, ಚಿಕಿತ್ಸೆ ಪ್ರಾರಂಭಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚಂದ್ರಶೇಖರ ರಾವ್ ಅವರನ್ನು ಎಐಜಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರನ್ನು ಗ್ಯಾಸ್ಟ್ರೋಎಂಟರಾಲಜಿ ಮುಖ್ಯಸ್ಥರೂ ಆಗಿರುವ ಆಸ್ಪತ್ರೆಯ ಅಧ್ಯಕ್ಷ ಡಾ. ಡಿ. ನಾಗೇಶ್ವರ ರೆಡ್ಡಿ ಪರೀಕ್ಷಿಸಿದ ನಂತರ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಲ್ಲಿ ಅವರಿಗೆ ಕೆಲವು ವೈದ್ಯಕೀಯ ಪರೀಕ್ಷೆಗಳಿಗೆ ಒಳಪಡಿಸಲಾಯಿತು ಎಂದು ಅವರು ಮಾಹಿತಿ ನೀಡಿದ್ದಾರೆ. ಆಸ್ಪತ್ರೆಯಲ್ಲಿ ಅವರಿಗೆ ಸಿಟಿ ಸ್ಕ್ಯಾನ್ ಮತ್ತು ಎಂಡೋಸ್ಕೋಪಿ ನಡೆಯಲಾಗಿದೆ ಎಂದು ಆಸ್ಪತ್ರೆ ಮಾಹಿತಿ ನೀಡಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಚಾಮರಾಜನಗರ: ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಮಹೇಶ್ ಅವರಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದರಿಂದ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಆ್ಯಂಜಿಯೋಗ್ರಾಂ ಮಾಡಲಾಗಿದೆ ಎಂದು ತಿಳಿದುಬಂದಿದೆ. 1 ದಿನ ವಿಶ್ರಾಂತಿ ಪಡೆಯಲು ವೈದ್ಯರು ಸಲಹೆ ಕೊಟ್ಟಿದ್ದು ಸದ್ಯ ಮಹೇಶ್ ಆಸ್ಪತ್ರೆಯಲ್ಲೇ ಇದ್ದಾರೆ. ಇನ್ನು, ಈ ಸಂಬಂಧ ಶಾಸಕ ಮಹೇಶ್ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದು “ನನಗೆ ಏನು ತೊಂದರೆ ಇಲ್ಲ, ದಯಮಾಡಿ ಯಾರು ಆಸ್ಪತ್ರೆ ಕಡೆಗೆ ಬರೋದಕ್ಕೆ ಹೋಗ್ಬೇಡಿ, ಅದರಿಂದ ಬೇರೆ ರೋಗಿಗಳಿಗೆ ತೊಂದರೆಯಾಗುತ್ತದೆ. ನಾಳೆ ನಿಮ್ಮನ್ನು ಭೇಟಿ ಮಾಡ್ತೀನಿ ಎಂದು ಮಾಹಿತಿ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy