Subscribe to Updates
Get the latest creative news from FooBar about art, design and business.
- ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು
- ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ
- ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!
- ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
- ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
- ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
- ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
- ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ: AIDSO ಆಗ್ರಹ
Author: admin
ತುಮಕೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು ತಮ್ಮ ವೃತ್ತಿ ನಿರತ ಚಟುವಟಿಕೆಗಳ ಸಂಬಂಧ ತಮ್ಮ ಜಿಲ್ಲಾದ್ಯಂತ ಉಚಿತವಾಗಿ ಸಂಚರಿಸಲು ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪತ್ರಕರ್ತರು ತಾವು ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಗಳಿಂದ ಸೇವಾ ಪ್ರಮಾಣಪತ್ರ, ಶಿಫಾರಸ್ಸು ಪತ್ರ ಮತ್ತು 11 ತಿಂಗಳುಗಳ ವೇತನಪತ್ರ (ಲೈನೇಜ್/ಸಂಭಾವನೆ/ಕಮಿಷನ್ ಪಡೆದಿರುವ ದಾಖಲೆ) ಗಳನ್ನು ಅಥವಾ ವೇತನ ಜಮಾ ಆಗಿರುವ ಮಾಹಿತಿ ಇರುವಂತಹ ಬ್ಯಾಂಕ್ ಸ್ಟೇಟ್ ಮೆಂಟ್ ಲಗತ್ತಿಸಿ ಸೇವಾಸಿಂಧು ಪೋರ್ಟಲ್ (https://sevasindhu.karnataka.gov.in) ಮೂಲಕ ಆನ್ ಲೈನ್ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಆನ್ ಲೈನ್ ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುತ್ತದೆ. ರಾಜ್ಯದ ಎಲ್ಲ ತಾಲ್ಲೂಕುಗಳ ಅರ್ಹ ಪತ್ರಕರ್ತರು ಕೂಡಲೇ ಸೇವಾಸಿಂಧು ಪೋರ್ಟಲ್ ಮೂಲಕ…
ತುಮಕೂರು: ಕ್ಯಾತ್ಸಂದ್ರ ಮೈದಾನ ರಸ್ತೆಯಲ್ಲಿ ಬುಧವಾರ ಬೆಳಂಬೆಳಿಗ್ಗೆಯೇ ವೃದ್ಧೆ ಪಾರ್ವತಮ್ಮ ಅವರ ಚಿನ್ನದ ಸರವನ್ನು ಕಳ್ಳ ಕಿತ್ತೊಯ್ದ ಘಟನೆ ನಡೆದಿದೆ. ಬೆಳಗ್ಗೆ 6.30ರ ಸಮಯದಲ್ಲಿ ಆಗತಾನೇ ಅಂಗಡಿ ತೆರೆಯುತ್ತಿದ್ದ ವೃದ್ಧೆ ಪಾರ್ವತಮ್ಮ ಅವರ ಬಳಿ ಬಂದ ಅಪರಿಚಿತ ಗುಟ್ಕಾ ಖರೀದಿಸುವ ನೆಪದಲ್ಲಿ ವೃದ್ಧೆ ಗಮನ ಬೇರೆಡೆ ಸೆಳೆದು ಅವರ ಕುತ್ತಿಗೆಯಲ್ಲಿದ್ದ ಸರ ಕೀಳಲು ಯತ್ನಿಸಿದ್ದಾನೆ. ಈ ವೇಳೆ ಕೂಗಾಡಿದರೂ ಬಿಡದ ಕಳ್ಳ ಅವರನ್ನು ನೆಲಕ್ಕೆ ಬೀಳಿಸಿ ಅರ್ಧ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದಾನೆ. ಘಟನೆ ದೃಶ್ಯಾವಳಿ ಸಿಸಿ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದ್ದು, ಕ್ಯಾತ್ಸಂದ್ರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಗುಬ್ಬಿ: ನಾನು ಯಾವ ಪಕ್ಷದಲ್ಲಿ ಬೇಕಾದರೂ ಟಿಕೆಟ್ ತರುವ ಯೋಗ್ಯತೆ ಉಳಿಸಿಕೊಂಡಿದ್ದೇನೆ ಎಂದು ಕೆಎಸ್ ಆರ್ ಟಿಸಿ ನಿಗಮ ಮಂಡಳಿ ಅಧ್ಯಕ್ಷ ಶಾಸಕ ಎಸ್.ಆರ್.ಶ್ರೀನಿವಾಸ್ ತಿಳಿಸಿದರು. ಗುಬ್ಬಿ ತಾಲೂಕಿನ ಅಡಗೂರು, ಧೂಳನಹಳ್ಳಿ ಪಾಳ್ಯ, ಕಕ್ಕೆನಹಳ್ಳಿ, ಕೊಪ್ಪ , ಸುರಿಗೇನಹಳ್ಳಿ, ತೊಂಗನಹಳ್ಳಿ, ಸಿಂಗೊನಳ್ಳಿ ಗ್ರಾಮಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಇರುವ ಕಡೆ ಆತ್ಮ ಗೌರವಕ್ಕೆ ಧಕ್ಕೆ ಬರುವಂತ ಸಂದರ್ಭದಲ್ಲಿ ಸೋಲು ಗೆಲುವು ಮುಖ್ಯ ಅಂದುಕೊಂಡಿಲ್ಲ, ರಾಜಕೀಯದಲ್ಲಿ ಬದ್ಧತೆ ಇಟ್ಟುಕೊಂಡು ಕೆಲಸ ಮಾಡುತ್ತೇನೆ. ಜನಸೇವೆ ಮುಖ್ಯ, ಮಾತನಾಡುವವರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂದ ಅವರು, ಸರ್ಕಾರ ಮತ್ತು ಮಂತ್ರಿಗಳ ಸಹಕಾರದಿಂದ ಕೆಎಸ್ ಆರ್ ಟಿಸಿಯಲ್ಲಿ ತಮ್ಮ ಕೆಲಸ ಮಾಡುತ್ತಿದ್ದೇವೆ ಎಂದರು. ವೇತನ ಪರಿಷ್ಕರಣೆ ಕುರಿತಂತೆ ಬಿಜೆಪಿ ಸರ್ಕಾರ ಇದ್ದಾಗ 23ಕ್ಕೆ ನಂತರ 27ಕ್ಕೆ ಇತ್ತು ಒಂದು ವಿಚಾರವಾಗಿ ಸರ್ಕಾರ ಮತ್ತು ನೌಕರರ ನಡುವೆ ಕೆಲವೊಂದು ಗೊಂದಲಗಳಿವೆ. ಸರ್ಕಾರದ ಗಮನಕ್ಕೆ ತಂದು ಮುಂದಿನ ದಿನಗಳಲ್ಲಿ ಸರಿಪಡಿಸಲಾಗುವುದು ಅಂತಾ ತಿಳಿಸಿದರು. ರಾಜ್ಯದಿಂದ ಅತಿ…
ಬೆಂಗಳೂರು: ರಾಜಧಾನಿಯ ಕಸ ವಿಲೇವಾರಿ ವಿಚಾರವಾಗಿ ರಾಜ್ಯ ರಾಜಕಾರಣದಲ್ಲಿ ಈಗ ‘ಕಸದ ಕಿಚ್ಚು’ ಹತ್ತಿಕೊಂಡಿದೆ. ಬೆಂಗಳೂರಿನ ಕಸವನ್ನು ದೊಡ್ಡಬಳ್ಳಾಪುರಕ್ಕೆ ಸಾಗಿಸುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಾಯಕರ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗುಡುಗಿದ್ದಾರೆ. “ಬಿಜೆಪಿ ನಾಯಕರು ಬ್ಲ್ಯಾಕ್ ಮೇಲ್ ತಂತ್ರ ಬಿಡದಿದ್ದರೆ, ಅವರ ಮನೆ ಮುಂದೆ ಹಾಗೂ ಬಿಜೆಪಿ ಕಚೇರಿ ಮುಂದೆಯೇ ಕಸ ಹಾಕಿಸಬೇಕಾಗುತ್ತದೆ” ಎಂದು ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಘಟನೆಯ ಹಿನ್ನೆಲೆ: ಬೆಂಗಳೂರಿನ ಕಸವನ್ನು ದೊಡ್ಡಬಳ್ಳಾಪುರಕ್ಕೆ ವೈಜ್ಞಾನಿಕವಾಗಿ ಸಾಗಿಸಲಾಗುತ್ತಿಲ್ಲ ಎಂದು ಆರೋಪಿಸಿ ಬಿಜೆಪಿ ಶಾಸಕರು ಮತ್ತು ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಬಿಜೆಪಿ ನಾಯಕರ ವಿರುದ್ಧ ಕೆಂಡಾಮಂಡಲವಾದರು. “ಬಿಜೆಪಿಯ ಎಲ್ಲಾ ಶಾಸಕರು ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ. ತಮ್ಮ ಕ್ಷೇತ್ರಕ್ಕೆ ಅನುದಾನ ಬೇಕು ಎಂಬ ಕಾರಣಕ್ಕೆ ಅಪಘಾತದ ವಿಚಾರವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. ಗೌರವದಿಂದ ಇದ್ದರೆ ಸರಿ, ಇಲ್ಲದಿದ್ದರೆ ಕರುಣೆ ತೋರಿಸುವುದಿಲ್ಲ” ಎಂದು ಕಿಡಿಕಾರಿದರು. “ಕಸವನ್ನು ಎಲ್ಲಾದರೂ ಒಂದು ಕಡೆ ಹಾಕಲೇಬೇಕಲ್ಲವೇ? ಅಲ್ಲೂ ಬೇಡ,…
ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರವೇಶಕ್ಕೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ಕ್ರಮವನ್ನು ಜೆಡಿಎಸ್ ತೀವ್ರವಾಗಿ ಖಂಡಿಸಿದೆ. ಸರ್ಕಾರದ ಈ ನಡೆಯು ಅದರ “ಹೇಡಿತನಕ್ಕೆ ಸಾಕ್ಷಿ” ಎಂದು ಜೆಡಿಎಸ್ ಸಾಮಾಜಿಕ ಜಾಲತಾಣ ‘ಎಕ್ಸ್’ ಮೂಲಕ ಕಿಡಿಕಾರಿದೆ. ಪತ್ರಕರ್ತರ ಕಂಡರೆ ನಡುಕವೇ?: “ಪ್ರಶ್ನೆ ಕೇಳುವ ಪತ್ರಕರ್ತರನ್ನು ಕಂಡರೆ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಇಷ್ಟೊಂದು ನಡುಕವೇ?” ಎಂದು ಜೆಡಿಎಸ್ ಪ್ರಶ್ನಿಸಿದೆ. ಸಚಿವರು ಮತ್ತು ಶಾಸಕರ ಭ್ರಷ್ಟಾಚಾರವನ್ನು ಪ್ರಶ್ನಿಸಿದರೆ ಸರ್ಕಾರಕ್ಕೆ ಭಯವೇಕೆ ಎಂದು ಲೇವಡಿ ಮಾಡಿದೆ. ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧ: ಮಾಧ್ಯಮಗಳ ಧ್ವನಿಯನ್ನು ಅಡಗಿಸುವುದು ಪ್ರಜಾಪ್ರಭುತ್ವದ ಆಶಯಗಳ ಮೇಲೆ ನಡೆಯುತ್ತಿರುವ ಪ್ರಹಾರವಾಗಿದೆ. ಮಾಧ್ಯಮಗಳು ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭವಾಗಿದ್ದು, ಅವುಗಳ ಸ್ವಾತಂತ್ರ್ಯ ಕಸಿದುಕೊಳ್ಳುವುದು ಸರಿಯಲ್ಲ ಎಂದು ಜೆಡಿಎಸ್ ಹೇಳಿದೆ. ಹಗರಣಗಳ ಭಯ: ಸರ್ಕಾರದ ಹಗರಣಗಳು, ಕಮಿಷನ್ ದಂಧೆ ಮತ್ತು ವರ್ಗಾವಣೆ ಅಕ್ರಮಗಳು ಬಯಲಾಗುತ್ತವೆ ಎಂಬ ಆತಂಕದಿಂದ ಸರ್ಕಾರ ಇಂತಹ ನಿರ್ಧಾರ ಕೈಗೊಂಡಿದೆ ಎಂದು ಆರೋಪಿಸಲಾಗಿದೆ. ಸಿದ್ದರಾಮಯ್ಯ ಅವರಿಗೆ ಪ್ರಶ್ನೆ: ಸಂವಿಧಾನ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಮಾತನಾಡುವ…
ಬೆಂಗಳೂರು: ಶಕ್ತಿಸೌಧವಾದ ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಈ ನಡೆಯನ್ನು “ನಾಲಾಯಕ್ ಮತ್ತು ಅಯೋಗ್ಯ” ಎಂದು ಅವರು ಟೀಕಿಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿರುವುದು ಪ್ರಜಾಪ್ರಭುತ್ವದ ವಿರೋಧಿ ನಡೆಯಾಗಿದೆ. ಬೆಳಗಾವಿ ಅಧಿವೇಶನದಲ್ಲಿ ದ್ವೇಷ ಭಾಷಣ ಕಾಯ್ದೆ ತಂದಾಗಿನಿಂದಲೇ ಕಾಂಗ್ರೆಸ್ ಸರ್ಕಾರ ಪ್ರಜಾಪ್ರಭುತ್ವವನ್ನು ಅಣಕಿಸಲು ಶುರುಮಾಡಿದೆ ಎಂದು ವಿಜಯೇಂದ್ರ ಕಿಡಿಕಾರಿದ್ದಾರೆ. ಭದ್ರತಾ ಲೋಪದ ನೆಪ: ಇತ್ತೀಚೆಗೆ ಸಚಿವರ ಕಚೇರಿಯಲ್ಲಿ ನಡೆದ ಕಳ್ಳತನ ಮತ್ತು ಭದ್ರತಾ ಲೋಪವನ್ನು ನೆಪವಾಗಿಟ್ಟುಕೊಂಡು ಮಾಧ್ಯಮಗಳನ್ನು ಹತ್ತಿಕ್ಕಲು ಸರ್ಕಾರ ಪ್ರಯತ್ನಿಸುತ್ತಿದೆ. ಸತ್ಯವನ್ನು ಹೊರಗೆಳೆಯುವ ಮಾಧ್ಯಮಗಳ ಮೇಲೆ ನಿರ್ಬಂಧ ಹೇರುವುದನ್ನು ನಾವು ಒಪ್ಪುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಸರ್ಕಾರದ ವಿರುದ್ಧ ವಾಗ್ದಾಳಿ: “ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದವರಿಗೆ ಪುರಾವೆ ಇಲ್ಲ ಎಂದ ಸರ್ಕಾರ ಇದು. ಅಂತಹ ದೇಶದ್ರೋಹಿ ಘೋಷಣೆಗಳನ್ನು ತಡೆಯಲಾಗದ ಈ ಅಯೋಗ್ಯ ಸರ್ಕಾರ, ಈಗ ಮಾಧ್ಯಮಗಳ ಮೇಲೆ ಸವಾರಿ ಮಾಡುತ್ತಿದೆ” ಎಂದು…
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ‘ಕಮಿಷನ್’ ಆರೋಪಗಳ ವಿಚಾರವಾಗಿ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಗುತ್ತಿಗೆದಾರರ ಸಂಘ ಮಾಡಿರುವ ಭ್ರಷ್ಟಾಚಾರದ ಆರೋಪಗಳು ಸುಳ್ಳಾಗಿದ್ದರೆ, ಅವರ ಮೇಲೆ ಮಾನನಷ್ಟ ಮೊಕದ್ದಮೆ ಹೂಡಲಿ ಎಂದು ಅವರು ಸವಾಲು ಹಾಕಿದ್ದಾರೆ. ಬುಧವಾರ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಮಿಷನ್ ಆರೋಪ ಬಂದಾಗ ಯಾವುದೇ ಸಾಕ್ಷ್ಯ ಕೇಳದ ಕಾಂಗ್ರೆಸ್ ನಾಯಕರು, ಈಗ ತಮ್ಮ ಮೇಲೆ ಆರೋಪ ಬಂದಾಗ ಸಾಕ್ಷಿ ಕೇಳುತ್ತಿರುವುದು ಏಕೆ? ಎಂದು ಅವರು ಪ್ರಶ್ನಿಸಿದರು. ಕಸದ ಟೆಂಡರ್ ಪಡೆಯಲು 7%, ಬಿಲ್ ಬಿಡುಗಡೆಗೆ 7% ಮತ್ತು ವಿಶೇಷ ಎಲ್ ಒಸಿ ಪಡೆಯಲು 7% ಹೀಗೆ ಒಟ್ಟು 21% ಕಮಿಷನ್ ನೀಡಬೇಕಾದ ಪರಿಸ್ಥಿತಿ ಇದೆ ಎಂದು ಅಶೋಕ್ ಗಂಭೀರವಾಗಿ ಆರೋಪಿಸಿದರು. ರಾಜ್ಯದ ಪ್ರಮುಖ ಟೆಂಡರ್ ಗಳು ನೆರೆಯ ಆಂಧ್ರಪ್ರದೇಶದ ಗುತ್ತಿಗೆದಾರರ ಪಾಲಾಗುತ್ತಿವೆ. ಕೆಕೆಆರ್ಡಿಬಿ ಕಾಮಗಾರಿಗಳನ್ನು…
ಚಿತ್ರದುರ್ಗ: ಪೊಲೀಸ್ ಠಾಣೆಗಳು ಕೇವಲ ಬಣ್ಣದ ಪೇಂಟಿಂಗ್, ಬ್ಯಾನರ್ ಗಳಿಂದ ಮಕ್ಕಳ ಸ್ನೇಹಿಯಾಗಲು ಸಾಧ್ಯವಿಲ್ಲ. ಅಧಿಕಾರಿಗಳು ಸಂಕಷ್ಟದಲ್ಲಿರುವ ಮಕ್ಕಳನ್ನು ಕಂಡಾಗ ತಮ್ಮದೇ ಮಗು ಎಂಬ ಭಾವನೆಯಿಂದ ಸ್ಪಂದಿಸಿದಾಗ ಮಾತ್ರ ವ್ಯವಸ್ಥೆ ಸುಧಾರಿಸಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ಕೆ.ಟಿ. ತಿಪ್ಪೇಸ್ವಾಮಿ ಅಭಿಪ್ರಾಯಪಟ್ಟರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವತಿಯಿಂದ ಜಿಲ್ಲೆಯ ಎಸ್ ಜೆಪಿಯು ಘಟಕದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಬಾಲ್ಯವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ, ಜೆ.ಜೆ.ಕಾಯ್ದೆ ಹಾಗೂ ಮಿಷನ್ ವಾತ್ಸಲ್ಯ ಯೋಜನೆಗಳ ಕುರಿತು ಏರ್ಪಡಿಸಿದ ಒಂದು ದಿನದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪೊಲೀಸ್ ಇಲಾಖೆಯಲ್ಲಿ ಸಮವಸ್ತ್ರ ಮತ್ತು ದಂಡ ಅಧಿಕಾರ ಸೂಚಿಸುತ್ತವೆ. ಆದರೆ, ಮಗುವಿನ ಪ್ರಕರಣಗಳನ್ನು ನಿರ್ವಹಿಸುವಾಗ ಅಧಿಕಾರಕ್ಕಿಂತ ಹೆಚ್ಚಾಗಿ ಸಂವೇದನಾಶೀಲತೆ ಮತ್ತು ಮಾನವೀಯತೆ…
ಊರು: ಸುರಪುರವೆಂಬ ಹಳ್ಳಿ, ಮಿತ್ರರ ಹೆಸರು: ಸೋಮ, ಭೀಮ, ವರ್ಗ: ಸ್ವಲ್ಪ ಮಧ್ಯಮ ವರ್ಗದ ಬಡತನದ ಜೀವನ, ಮಾತಿಗೆ ಸೇರುವ ಜಾಗ: ಊರ ಹೊರಗಿನ ಅರಳಿ ಕಟ್ಟೆ. ಭೀಮ:- (ಅರಳಿಕಟ್ಟೆ ಮೇಲೆ ಕುಳಿತು, ಎಲೆ ಅಡಿಕೆ ಜಗಿಯುತ್ತಾ, ಸೋಮ ಬರುವಿಕೆಯನ್ನು ಕಂಡು) ಓಹೋಹೋ ಬಾರಪ್ಪ ಸೋಮ, ಊಟ ಆಯ್ತನಪ್ಪ… ಸೋಮ:- ಹು ಭೀಮು ಊಟ ಆಯ್ತು, ನಿಂದು ಆಯ್ತನಪ್ಪ ಭೀಮ:- ಹು ಸೋಮು ನಂದು ಆಯ್ತು, ಈ ಬದಿ ಕುಂತುಕೋ, ಅಲ್ಲಿ ನಾಯಿ ಕಸ ಮಾಡದೆ. ಸೋಮ:- ಹೂ ಕಣೋ ಭೀಮು ನಾನು ನೋಡ್ಲೇ ಇಲ್ಲ ನೋಡು ಮತ್ತೆ, ನೀನು ಹೇಳದೇ ಹೋಗಿದ್ದರೆ, ಅದರ ಮೇಲೆನೇ ಕುಂತ್ಕೋತಿದ್ದೆ. ಭೀಮ:- ನೀನು ಇಂಗೆ ಮಾಡ್ತಿಯ ಅಂತ ನಂಗೆ ಮುಂದಾಗೆ ಗೊತ್ತಿತ್ತು ನೋಡು ಅದ್ಕೆ ಅಂಗೆ ಹೇಳ್ದೆ. ಸೋಮ:- ಅದೆಂಗಲಾ ಮುಂದಾಗೆ ಗೊತ್ತಿತ್ತು? ಭೀಮ:- ಅದು ಅಂಗೆಯಾ, ನಮ್ಮ ತಾತ ಭವಿಷ್ಯ ಹೇಳ್ತಿದ್ದ ನೋಡು ಅದು ಅಂಗೆ ನನ್ ತಲೆಗೆ ಬಟ್ಟಿ ಇಳ್ಕೊಂಬುಟೈತೆ. ಸೋಮ:- …
ಬಳ್ಳಾರಿ: ಹೆಚ್ ಐವಿ ಪೀಡಿತ ವ್ಯಕ್ತಿಗಳೊಂದಿಗೆ ಮಾನವೀಯತೆಯಿಂದ ವರ್ತಿಸಿ ಅವರ ಮನೋಬಲವನ್ನು ಹೆಚ್ಚಿಸಬೇಕು ಎಂದು ಹೆಚ್ ಐವಿ ಜಿಲ್ಲಾ ಮೇಲ್ವಿಚಾರಕ ಗಿರೀಶ್ ಅವರು ಹೇಳಿದರು. ನಗರದ ಸರಳಾದೇವಿ ಸತೀಶ್ಚಂದ್ರ ಅಗರ್ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ನಿರ್ವಾಹಕ ಘಟಕ ವತಿಯಿಂದ ಏಡ್ಸ್ ತಡೆ, ಹಾರೈಕೆ ಬೆಂಬಲ ಹಾಗೂ ಚಿಕಿತ್ಸೆ ಮತ್ತು ಸೇವೆಗಳ ಕುರಿತು ಮಂಗಳವಾರ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಭಾಗವಹಿಸಿ ಅವರು ಮಾತನಾಡಿದರು. ಏಡ್ಸ್ ಹರಡಲು ಪ್ರಮುಖ ಕಾರಣಗಳು ಮತ್ತು ಏಡ್ಸ್ ಹರಡದಂತೆ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಇಂದಿನ ಯುವ ಪೀಳಿಗೆಯಾದ ವಿದ್ಯಾರ್ಥಿಗಳು ವಿಶೇಷ ಜಾಗೃತಿ ಹೊಂದಬೇಕು ಎಂದರು. 18 ವರ್ಷ ತುಂಬಿದವರು ರಕ್ತದಾನ ಮಾಡಿದರೆ ಅವರ ಆರೋಗ್ಯ ಅವರ ಆಯಸ್ಸು, ನೆನಪಿನ ಶಕ್ತಿ ವೃದ್ಧಿಸುತ್ತದೆ. ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳು ತಮ್ಮ ಆರೋಗ್ಯಕ್ಕೆ ಅನುಗುಣವಾಗಿ ರಕ್ತದಾನ ಮಾಡಬೇಕೆಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಪ್ರೊ.ಇಸ್ಮಾಯಿಲ್ ಮಕಂದಾರ್, ಉಪನ್ಯಾಸಕರಾದ ಡಾ.ದಸ್ತಗಿರಿಸಾಬ್, ಬಸಪ್ಪ.ಕೆ., ಮಾರೆಪ್ಪ,…