Author: admin

ತುಮಕೂರು: ಕುಲ್ಲಕ ವಿಚಾರಕ್ಕೆ ಜಗಳ ನಡೆದ ಪರಿಣಾಮವಾಗಿ ಮಹಿಳೆಯೊಬ್ಬರು ಪ್ರಾಣ ತೆತ್ತಿರುವ ಘಟನೆ ನಗರದ ವೀರಸಾಗರದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಫರ್ಹಾನಾಖಾನಂ (45) ಎಂದು ಗುರುತಿಸಲಾಗಿದೆ. ಜಾಫರ್ ಮತ್ತು ಫರ್ಹಾನಾ ಖಾನಂ ಕುಟುಂಬಗಳ ಮಧ್ಯೆ ಮಕ್ಕಳ ವಿಚಾರಕ್ಕಾಗಿ ಜಗಳ ನಡೆದಿದೆ. ಇದನ್ನೇ ಮನಸ್ಸಿನಲ್ಲಿಟ್ಟುಕೊಂಡಿದ್ದ ಜಾಫರ್ ತನ್ನ ಸಂಬಂಧಿ ಬಾಬು ಖಾನ್ ಜೊತೆ ಸೇರಿಕೊಂಡು ವೀರಸಾಗರ ಮುಖ್ಯ ರಸ್ತೆಯಲ್ಲಿ ಮಗ ಹಯಾತ್ ಮೇಲೆ ಹಲ್ಲೆ ನಡೆಸುತ್ತಿದ್ದರು. ಇದನ್ನು ಕಂಡ ಫರ್ಹಾನಾ ಮತ್ತೊಬ್ಬ ಪುತ್ರನ ಜೊತೆ ಹೋಗಿ ಜಗಳ ಬಿಡಿಸಲು ಮುಂದಾದರು. ಈ ವೇಳೆ ಜಾಫರ್ ಕಬ್ಬಿಣದ ರಾಡ್‌ನಿಂದ ಫರ್ಹಾನಾ ತಲೆಗೆ ಹೊಡೆದಿದ್ದರಿಂದ ಆಕೆ ಪ್ರಜ್ಞೆ ತಪ್ಪಿ ಬಿದ್ದರು. ಕೂಡಲೇ ಆಕೆಯನ್ನು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಯಿತಾದರೂ ಅಲ್ಲಿ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟರು. ಆರೋಪಿಗಳು ತಲೆಮರೆಸಿಕೊಂಡಿದ್ದು, ಇವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಈ ಬಗ್ಗೆ ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ತುಮಕೂರು: ತುಮಕೂರು ನಗರದ 9 ಪರೀಕ್ಷಾ ಕೇಂದ್ರಗಳಲ್ಲಿ ಇಂದು ಮಧ್ಯಾಹ್ನ 1 ರಿಂದ ಸಂಜೆ 6 ಗಂಟೆಯವರೆಗೆ ಡಿಪ್ಲೋಮಾ ಸಿ.ಇ.ಟಿ.–2026, ಪಿ.ಜಿ.ಸಿ.ಇ.ಟಿ.–2026(ಎಂ.ಇ./ ಎಂ.ಟೆಕ್) ಪ್ರವೇಶ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಯನ್ನು ಯಾವುದೇ ಲೋಪದೋಷವಿಲ್ಲದಂತೆ ಹಾಗೂ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ. ಈ ನಿಷೇಧಾಜ್ಞೆಯನ್ವಯ ಪರೀಕ್ಷೆ ನಡೆಯುವ ದಿನಾಂಕದಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಮತ್ತು ಬೆರಳುಚ್ಚು ಕೇಂದ್ರಗಳನ್ನು ಮುಚ್ಚತಕ್ಕದ್ದು. ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಅನಧಿಕೃತ ವ್ಯಕ್ತಿಗಳು ಯಾರೂ ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ ಹಾಗೂ ನಿಷೇಧಾಜ್ಞೆಯನ್ನು ಉಲ್ಲಂಘನೆ ಮಾಡಿದ ವ್ಯಕ್ತಿಗಳನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಜಿಲ್ಲಾ ಪೊಲೀಸ್ ಇಲಾಖೆಗೆ ಆದೇಶಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…

Read More

ಬೆಳಕವಾಡಿ: ಸಮೀಪದ ಒಕ್ಕರಹಳ್ಳಿ ವ್ಯಾಪ್ತಿಯ ಜಮೀನಿನ ತೋಟದ ಮನೆಯೊಂದರಲ್ಲಿ ಮಂಗಳವಾರ ರಾತ್ರಿ ಚಿರತೆಯೊಂದು ಸಾಕು ನಾಯಿಯ ಮೇಲೆ ದಾಳಿ ನಡೆಸಿ, ಅದನ್ನು ಕೊಂದು ಹಾಕಿದೆ. ಅಂತರಾಯನಪುರ ದೊಡ್ಡಿ ಗ್ರಾಮದ ನಿವಾಸಿ ಶಿವಮೂರ್ತಿ ಎಂಬುವವರಿಗೆ ಸೇರಿದ ಜಮೀನಿನ ತೋಟದ ಮನೆಯಲ್ಲಿ ಈ ಘಟನೆ ನಡೆದಿದೆ. “ನಮ್ಮ ತೋಟದ ಮನೆಯಲ್ಲಿ ಸಾಕಲಾಗಿದ್ದ ನಾಯಿಗಳ ಪೈಕಿ ಇದುವರೆಗೆ ಒಟ್ಟು ಮೂರು ನಾಯಿಗಳನ್ನು ಚಿರತೆ ಕೊಂದು ಹಾಕಿದೆ. ಈ ಬಗ್ಗೆ ಈಗಾಗಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ” ಎಂದು ಶಿವಮೂರ್ತಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಬಿಜಿಪುರ ಹೋಬಳಿಯ ಸುತ್ತಮುತ್ತಲಿನ ಭಾಗಗಳಲ್ಲಿ ಚಿರತೆ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮೇಕೆ, ಕುರಿ, ನಾಯಿ ಹಾಗೂ ಕರು ಸೇರಿದಂತೆ ತಮ್ಮ ಸಾಕು ಪ್ರಾಣಿಗಳನ್ನು ರಕ್ಷಿಸಿಕೊಳ್ಳುವುದು ಸ್ಥಳೀಯ ರೈತರಿಗೆ ಮತ್ತು ಗ್ರಾಮಸ್ಥರಿಗೆ ಕಷ್ಟಕರವಾಗಿ ಪರಿಣಮಿಸಿದೆ. ಸದ್ಯ ಸುತ್ತಮುತ್ತಲಿನ ಗ್ರಾಮಗಳಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದ್ದು, ಅರಣ್ಯ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗಿ ಚಿರತೆಯನ್ನು ಸೆರೆಹಿಡಿಯಬೇಕು ಎಂದು ಗ್ರಾಮಸ್ಥರು…

Read More

ತುಮಕೂರು: ಸಮಾಜ ಕಲ್ಯಾಣ ಇಲಾಖೆಯಡಿ 2026–27ನೇ ಸಾಲಿಗೆ ತುಮಕೂರು ಜಿಲ್ಲೆಯಲ್ಲಿ ನಡೆಯುತ್ತಿರುವ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೆಬ್‌ ಸೈಟ್ www.sw.kar.nic.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಕ್ಕೆ ಅರ್ಜಿ ಸಲ್ಲಿಸಲು ಜೂನ್ 30 ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಕ್ಕೆ ಅರ್ಜಿ ಸಲ್ಲಿಸಲು ಜುಲೈ 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತುಮಕೂರು: ಉದ್ಯೋಗಿ ಪ್ರಯಾಣಿಕರು ಮೆಜೆಸ್ಟಿಕ್ ತಲುಪಲು ಅನುಕೂಲವಾಗುವಂತೆ ನಗರದಿಂದ ಬೆಳಗ್ಗೆ 8ಕ್ಕೆ ಹೊರಡುವ ತುಮಕೂರು — ಯಶವಂತಪುರ ಮೆಮು ರೈಲು ಹೊರಡುವ ಸಮಯವನ್ನು ಬೆಳಗ್ಗೆ 7.45ಕ್ಕೆ ಬದಲಾಯಿಸುವ ಸಾಧ್ಯತೆಗಳ ಬಗ್ಗೆ ಪರಿಶೀಲಿಸಲಾಗುವುದು ಎಂದು ನೈಋತ್ಯ ರೈಲ್ವೆ ಬೆಂಗಳೂರು ವಿಭಾಗದ ಪ್ರಧಾನ ವ್ಯವಸ್ಥಾಪಕ ಅಶುತೋಷ್ ಕೆ.ಸಿಂಗ್ ಭರವಸೆ ನೀಡಿದರು. ಬುಧವಾರ ಬೆಂಗಳೂರಿನಲ್ಲಿ ನಡೆದ ನೈಋತ್ಯ ರೈಲ್ವೆ ವಲಯದ ಬೆಂಗಳೂರು ವಿಭಾಗದ ರೈಲು ಪ್ರಯಾಣಿಕರ ಸಲಹಾ ಸಮಿತಿ ಸಭೆಯಲ್ಲಿ ಸಮಿತಿ ಸದಸ್ಯ ಹಾಗೂ ತುಮಕೂರು ಜಿಲ್ಲಾ ರೈಲ್ವೆ ಪ್ರಯಾಣಿಕರ ವೇದಿಕೆ ಅಧ್ಯಕ್ಷ ಕರಣಂ ರಮೇಶ್ ಅವರ ಮನವಿಗೆ ಸ್ಪಂದಿಸಿ ಮಾತನಾಡಿದರು. ಉದ್ಯೋಗಿ ಪ್ರಯಾಣಿಕರಿಗಾಗಿಯೇ ಆರಂಭಿಸಿದ ಸದರಿ ಮೆಮು ರೈಲು ಆರಂಭದಿಂದಲೂ ಕೆಎಸ್ಆರ್ ವರೆಗೆ ಸಾಗುತ್ತಿತ್ತು. ಆದರೆ ಶಿವಮೊಗ್ಗ ಜನಶತಾಬ್ದಿ ರೈಲಿಗೆ ದಾರಿ ಮಾಡಿಕೊಡಲು ಮೆಮು ರೈಲನ್ನು ಯಶವಂತಪುರಕ್ಕೆ ಸೀಮಿತಗೊಳಿಸಲಾಯಿತು. ಇದರಿಂದ ಸಾವಿರಕ್ಕೂ ಹೆಚ್ಚು ಉದ್ಯೋಗಿ ಪ್ರಯಾಣಿಕರಿಗೆ ತೊಂದರೆಯಾಗಿದೆ. ಆರ್ಥಿಕವಾಗಿಯೂ ಹೊರೆಯಾಗುತ್ತಿದೆ. ವಿಳಂಬದಿಂದ ಉದ್ಯೋಗ ಕಳೆದುಕೊಳ್ಳುವಂತಾಗಿದೆ ಎಂದು ಪ್ರಯಾಣಿಕರ ಸಮಸ್ಯೆಯನ್ನು ಬಿಡಿಸಿ ವಿವರಿಸಿ, ಈ ಹಿನ್ನೆಲೆಯಲ್ಲಿ…

Read More

ಕೊರಟಗೆರೆ: ಎಲೆರಾಮಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್.ಗೊಲ್ಲಹಳ್ಳಿ ಮಜರೆ ಹನುಮನಾಯಕನ ಪಾಳ್ಯದಲ್ಲಿ ಕಳೆದ ಹತ್ತು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ನೀರಿಲ್ಲದೆ ಹಸು ಸಾವನ್ನಪ್ಪಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಶಿಷ್ಟ ಪಂಗಡ (ಎಸ್ಟಿ) ಸಮುದಾಯದ ಕುಟುಂಬಗಳು ವಾಸಿಸುವ ಈ ಗ್ರಾಮದಲ್ಲಿ ಸುಮಾರು 8 ರಿಂದ 10 ಮನೆಗಳಿಗೆ ಕಳೆದ ಹತ್ತು ದಿನಗಳಿಂದ ನೀರು ಸರಬರಾಜು ಆಗಿಲ್ಲ. ನೀರಿಗಾಗಿ ಮಹಿಳೆಯರು ಹಾಗೂ ಮಕ್ಕಳು ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಮಾನವ ಜೀವದ ಜೊತೆ ಜಾನುವಾರುಗಳ ಬದುಕೂ ಸಂಕಷ್ಟಕ್ಕೆ ಸಿಲುಕಿದೆ ಎಂದು ಸಾರ್ವಜನಿಕರು ಅಳಲು ತೋಡಿಕೊಂಡಿದ್ದಾರೆ. ಹನುಮನಾಯಕನ ಪಾಳ್ಯದ ನರಸಿಂಹಮೂರ್ತಿ ಅವರ ಮನೆಯಲ್ಲಿ ಸಾಕಿದ್ದ ಹಸು ಹಲವು ದಿನಗಳಿಂದ ನೀರಿನ ಕೊರತೆಯಿಂದ ಬಳಲುತ್ತಿತ್ತು ಎನ್ನಲಾಗಿದ್ದು, ಕೊನೆಗೆ ಅಸ್ವಸ್ಥಗೊಂಡ ಹಸು ಪ್ರತಿನಿತ್ಯ ಮೂರ್ನಾಲ್ಕು ಬಾರಿ ನೀರಿನಿಂದ ಮೈ ತೊಳೆಯುತ್ತಿದ್ದೆವು. ಇತ್ತೀಚಿನ ನೀರಿನ ಸಮಸ್ಯೆಯಿಂದ ಕುಡಿಯಲು ನೀರಿಲ್ಲದೆ ಹಾಗೂ ಇನ್ನಿತರ ಸಮಸ್ಯೆಯಾಗಿ ಸಾವನ್ನಪ್ಪಿದೆ ಎಂದು ಮಾಲೀಕ ಹಾಗೂ ಮನೆಯವರು ಗ್ರಾಮ ಪಂಚಾಯಿತಿ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.…

Read More

ತುಮಕೂರು: ಫಿಲ್ಟ್ರೇಷನ್ ಪರಿಹಾರ ಕ್ಷೇತ್ರದಲ್ಲಿ ಜಾಗತಿಕವಾಗಿ ಮುಂಚೂಣಿಯಲ್ಲಿರುವ ಮ್ಯಾನ್+ಹುಮ್ಮೆಲ್ ತುಮಕೂರಿನಲ್ಲಿ ತನ್ನ ಹೊಸ ಅತ್ಯಾಧುನಿಕ ‘ಜಾಗತಿಕ ತಂತ್ರಜ್ಞಾನ ಮತ್ತು ನಾವೀನ್ಯತೆ ಕೇಂದ್ರ’ವನ್ನು ಆರಂಭಿಸಿದ್ದು, ಅಂತರಸನಹಳ್ಳಿಯ ಕೈಗಾರಿಕಾ ವಲಯದಲ್ಲಿನ ನೂತನ ನಾವೀನ್ಯತೆ ಕೇಂದ್ರಕ್ಕೆ ಗುರುವಾರ ನಾನ್ ಎಕ್ಸಿಕ್ಯೂಟಿವ್ ಅಧ್ಯಕ್ಷ ಥಾಮಸ್ ಫಿಷರ್‌ ಚಾಲನೆ ಕೊಟ್ಟರು. ಮ್ಯಾನ್+ಹುಮ್ಮೆಲ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕರಾದ ಸುದೀಶ್ ಕರಂಬಿಂಗಲ್ ಅವರು ಮಾತನಾಡಿ, ಜರ್ಮನಿಯ ಹೊರಗೆ ಮ್ಯಾನ್+ಹುಮ್ಮೆಲ್ ಕಂಪನಿಯ ಅತ್ಯಂತ ದೊಡ್ಡ ಅಭಿವೃದ್ಧಿ ಕೇಂದ್ರ ಇದಾಗಿದ್ದು, ಎಂಜಿನಿಯರಿಂಗ್, ನಾವೀನ್ಯತೆ ಮತ್ತು ಸುಧಾರಿತ ಫಿಲ್ಟ್ರೇಷನ್ ತಂತ್ರಜ್ಞಾನಗಳಿಗೆ ಭಾರತವನ್ನು ಒಂದು ನಿರ್ಣಾಯಕ ಕೇಂದ್ರವನ್ನಾಗಿ ಇದು ಬಲಪಡಿಸಿದೆ. ತುಮಕೂರು ಹೊಸ ಕೇಂದ್ರವು ಸುಧಾರಿತ ಸಂಶೋಧನಾ ಪ್ರಯೋಗಾಲಯಗಳು, ಪರೀಕ್ಷಾ ಮೂಲಸೌಕರ್ಯಗಳು, ಡಿಜಿಟಲ್ ಎಂಜಿನಿಯರಿಂಗ್ ಮತ್ತು ಡೇಟಾ ಅನಾಲಿಟಿಕ್ಸ್ ಎಲ್ಲವನ್ನೂ ಒಂದೇ ಸೂರಿನಡಿ ಸಂಯೋಜಿಸಿದೆ. ಈ ಕೇಂದ್ರವು ಭಾರತದ ಬಲಿಷ್ಠ ಎಂಜಿನಿಯರಿಂಗ್ ಇಕೋಸಿಸ್ಟಮ್ ಬಳಸಿಕೊಂಡು, ಮಾರುಕಟ್ಟೆಗೆ ಉತ್ಪನ್ನಗಳನ್ನು ವೇಗವಾಗಿ ತಲುಪಿಸಲು ಮತ್ತು ವಿಶ್ವಾದ್ಯಂತ ಇರುವ ಗ್ರಾಹಕರೊಂದಿಗೆ ಸಹಯೋಗ ಬಲಗೊಳಿಸಲು ಅನುವು ಮಾಡಿಕೊಡುತ್ತದೆ ಎಂದರು. ತುಮಕೂರಿನ ‘ಜಾಗತಿಕ ತಂತ್ರಜ್ಞಾನ…

Read More

ಗುಬ್ಬಿ: ಬಸವ ಜಯಂತಿ ಆಚರಣಾ ಸಮಿತಿ, ತಾಲ್ಲೂಕು ಘಟಕ ಗುಬ್ಬಿ ಇವರ ವತಿಯಿಂದ ಮೇ 25 ರಂದು ಶ್ರೀ ಗುರುಸಿದ್ದರಾಮೇಶ್ವರ ಸಮುದಾಯ ಭವನ, ಹೇರೂರು ಇಲ್ಲಿ ಬಸವ ಜಯಂತಿ ಕಾರ್ಯಕ್ರಮ ಹಮ್ಮಿ ಕೊಳ್ಳಲಾಗಿದೆ. ಇದರ ಅಂಗವಾಗಿ ಬೆಳಗ್ಗೆ 8.30 ರಿಂದ 7.30ರವರೆಗೆ ಇಷ್ಟಲಿಂಗಪೂಜೆ, 9.30 ಗಂಟೆಗೆ ಗುಬ್ಬಿ ಶ್ರೀ ಚನ್ನಬಸವೇಶ್ವರಸ್ವಾಮಿ ದೇವಸ್ಥಾನದಿಂದ ಬಸವಣ್ಣನವರ ಭಾವಚಿತ್ರದೊಂದಿಗೆ ನಂದಿಧ್ವಜ, ಲಿಂಗದವೀರರ ಕುಣಿತ, ಕರಡಿ ಮೇಳ ಮತ್ತು ವಾದ್ಯ ಮೇಳದೊಂದಿಗೆ ಗುಬ್ಬಿ ಪಟ್ಟಣದ ಮುಖ್ಯರಸ್ತೆಯಲ್ಲಿ ಮೆರವಣಿಗೆ ಹೊರಟು ಶ್ರೀ ಸಿದ್ದರಾಮೇಶ್ವರ ಸಮುದಾಯ ಭವನ, ಹೇರೂರು ಇಲ್ಲಿ ತಲುಪುವುದು. ಆನಂತರ ಬೆಳಗ್ಗೆ 11 ಗಂಟೆಗೆ ಸಮುದಾಯ ಭವನದಲ್ಲಿ ಬಸವತತ್ವ ಚಿಂತನಾ ಸಮಾರಂಭ ನಡೆಯಲಿದೆ. ಈ ಸಂದರ್ಭದಲ್ಲಿ ತಾಲ್ಲೂಕಿನ ಮಠಾಧೀಶರು, ಮಾತಾಜಿಯವರು ಮತ್ತು ಸಮಾಜದ ಮುಖ್ಯಸ್ಥರು ಭಾಗವಹಿಸುವರು. ಇದೇ ಸಂದರ್ಭದಲ್ಲಿ 2026ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ತಾಲ್ಲೂಕಿನ ವೀರಶೈವ ಲಿಂಗಾಯತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದೆ. ನಂತರ ಚಾಲುಕ್ಯ ಆಸ್ಪತ್ರೆ…

Read More

ಕೆ.ಆರ್.ಪೇಟೆ: ಸರಳ ಸಜ್ಜನಿಕೆಯ ಹಾಗೂ ಬಡವರ ಹೃದಯ ಮಿಡಿತ ಎಂದೇ ಹೆಸರಾದ ಆರ್.ಟಿ.ಓ ಮಲ್ಲಿಕಾರ್ಜುನ ಅವರ ಹುಟ್ಟುಹಬ್ಬದ ಪ್ರಯುಕ್ತ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿದ್ದ ಭವ್ಯ ‘ರಂಗ ಕುಣಿತ ಸ್ಪರ್ಧೆ’ಯು ಸಾರ್ವಜನಿಕರ ಅಪಾರ ಜನಮನ್ನಣೆ ಗಳಿಸಿತು. ಈ ಜನಪದ ಕಲಾ ಸ್ಪರ್ಧೆಯಲ್ಲಿ ಹೊಳೆನರಸೀಪುರ ತಾಲ್ಲೂಕಿನ ಶ್ರವಣೂರು ಗ್ರಾಮದ ಕಲಾತಂಡವು ಭಾಗವಹಿಸಿ, ತನ್ನ ಅದ್ಭುತ ಪ್ರದರ್ಶನದ ಮೂಲಕ ಪ್ರಥಮ ಬಹುಮಾನವನ್ನು ಮುಡಿಗೇರಿಸಿಕೊಂಡು ಗ್ರಾಮಕ್ಕೆ ಕೀರ್ತಿ ತಂದಿದೆ. ಕಣ್ಮನ ಸೆಳೆದ ಶ್ರವಣೂರು ಕಲಾತಂಡದ ಪ್ರದರ್ಶನ: ಸ್ಪರ್ಧೆಯಲ್ಲಿ ಶ್ರವಣೂರು ಗ್ರಾಮದ ಕಲಾವಿದರು ಶ್ವೇತ ವರ್ಣದ (ಬಿಳಿ) ಉಡುಪು ಧರಿಸಿ, ರೈತರ ಹೆಮ್ಮೆಯ ಸಂಕೇತವಾದ ಹಸಿರು ಶಾಲನ್ನು ಹೊತ್ತು ಸಾಂಪ್ರದಾಯಿಕ ಶೈಲಿಯಲ್ಲಿ ಕಂಗೊಳಿಸಿದರು. ತಮಟೆ ವಾದಕರ ಉದ್ವೇಗಭರಿತ ತಮಟೆ ಸದ್ದಿನ ತಾಳಕ್ಕೆ ತಕ್ಕಂತೆ ಕಾಲಿಗೆ ಗೆಜ್ಜೆ ಕಟ್ಟಿ ಇವರು ಹಾಕಿದ ಹೆಜ್ಜೆಗಳು ನೆರೆದಿದ್ದ ಸಾವಿರಾರು ಪ್ರೇಕ್ಷಕರ ಕಣ್ಮನ ಸೆಳೆದವು. ವಯಸ್ಸಿನ ಭೇದವಿಲ್ಲದ ಕಲಾ ಆರಾಧನೆ ಈ ಪ್ರದರ್ಶನದ ವಿಶೇಷತೆಯೆಂದರೆ, ಕಲಾತಂಡದಲ್ಲಿದ್ದ ಯಾವುದೇ ವಯಸ್ಸಿನ ಭೇದಭಾವವಿಲ್ಲದೆ ಹಿರಿಯರು–ಕಿರಿಯರು…

Read More

ಕೊರಟಗೆರೆ : ದೇಶದ ಶೇ.60 ಭಾಗ ಉದ್ಯೋಗ ಸೃಷ್ಠಿ ಮಾಡಿ 140 ಕೋಟಿ ಜನಸಂಖ್ಯೆಗೆ ಅನ್ನ ನೀಡುವ ಕೃಷಿ ಕ್ಷೇತ್ರ. ಸರ್ಕಾರಗಳ ಅವೈಜ್ಞಾನಿಕ ನೀತಿಯಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ನೋವಿನ ಸಂಗತಿ ಎಂದು ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾಧ್ಯಕ್ಷ ಗೋವಿಂದರಾಜು ಬೇಸರ ವ್ಯಕ್ತಪಡಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ತಾ.ಘಟಕದಿಂದ ಆಯೋಜಿಸಿಲಾದ ಕೊರಟಗೆರೆ ಘಟಕ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ನೂತನ ಪದಾಧಿಕಾರಿಗಳ ಘೋಷಿಸಿ ಸಭೆ ಉದ್ದೇಶಿಸಿ ಮಾತನಾಡಿದರು. ಸರ್ಕಾರದ ಅವೈಜ್ಞಾನಿಕ ನೀತಿಗೆ ವಿರುದ್ಧವಾಗಿ ರೈತರ ಬದುಕು, ಜಮೀನು ರಕ್ಷಣೆಯೇ ಕರ್ನಾಟಕ ರಾಜ್ಯ ರೈತ ಸಂಘಟನೆ ಉದ್ದೇಶ. ತಾಲೂಕಿನಲ್ಲಿ ಸುಮಾರು ೪೦ ವರ್ಷಗಳಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಹಲವು ಹೋರಾಟಗಳ ಮೂಲಕ ಎಚ್ಚರಿಕೆ ನೀಡಿದ್ದೇವೆ, ಕೊರಟಗೆರೆ ಘಟಕಕ್ಕೆ ಯುವಕರೇ ಹೆಚ್ಚಾಗಿ ಆಯ್ಕೆಯಾಗಿ ಸಂಘಟನೆ ಹೋರಾಟಕ್ಕೆ ಶಕ್ತಿ ತುಂಬಿದ್ದಾರೆ ಎಂದು ಹೇಳಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಂಕರಪ್ಪ ಮಾತನಾಡಿ, ಸ್ವಾತಂತ್ರ್ಯದ ನಂತರದಲ್ಲಿ ಕಳೆದ ೭೯ ವರ್ಷಗಳಲ್ಲಿ ಆಡಳಿತ…

Read More