Subscribe to Updates
Get the latest creative news from FooBar about art, design and business.
- ನಾಲ್ಕು ತಿಂಗಳಿನಿಂದ ಗೌರವಧನವಿಲ್ಲ: ರಾಜ್ಯ, ಕೇಂದ್ರ ಸರ್ಕಾರಗಳಿಂದ ವಿಳಂಬ ನೀತಿ: ಆಶಾಕಾರ್ಯಕರ್ತೆಯರಿಂದ ಪ್ರತಿಭಟನೆ
- ತುಮಕೂರು: ಅಮ್ಲಾಪುರದ ಮದರಸಾದಲ್ಲಿ ಹೊರ ರಾಜ್ಯದ ಮಕ್ಕಳಿಗೆ ಹಿಂಸೆ: ಓಡಿಬಂದ 24 ಮಕ್ಕಳ ರಕ್ಷಣೆ
- ವಡೇರಹಳ್ಳಿಯಲ್ಲಿ ಬಫರ್ ಡ್ಯಾಂ ವಿರೋಧಿಸಿ ರೈತರು, ಗ್ರಾಮಸ್ಥರಿಂದ ಪ್ರತಿಭಟನೆ
- ಬೌದ್ಧ ಧರ್ಮವು ಸಮಾನತೆ, ಸೌಹಾರ್ದತೆ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ: ಹರಾ ಮಹೇಶ್
- ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಹೆಣ್ಣು ಮಕ್ಕಳಿಗೆ ಉಚಿತ ಲಸಿಕೆ: ಶಾಸಕ ಡಾ.ಎಚ್.ಡಿ.ರಂಗನಾಥ್
- ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ
- ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ
- ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
Author: admin
ಹೆಚ್.ಡಿ.ಕೋಟೆ: ತಾಲ್ಲೂಕಿನ ಮಲಾರ ಕಾಲೋನಿ ಗ್ರಾಮದಲ್ಲಿ ಚಾಮರಾಜನಗರ ಲೋಕಸಭಾ ಮಾಜಿ ಸಂಸದರಾದ ಆರ್.ಧ್ರುವನಾರಾಯಣ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು ನಂತರ ಮಾತನಾಡಿದ ಧ್ರುವನಾರಾಯಣರವರ ಅಭಿಮಾನಿ, ಗ್ರಾಮದ ಮುಖಂಡ ಮಲಾರ ಮಹದೇವು ಅವರು, ಧ್ರುವನಾರಾಯಣರವರು ಮಿನುಗುವ ನಕ್ಷತ್ರದಂತೆ ಇಡೀ ಸಮಾಜಕ್ಕೆ ಬೆಳಕನ್ನು ಚೆಲ್ಲಿದ ಒಬ್ಬ ಪ್ರತಿಭಾನ್ವಿತ ರಾಜಕಾರಣಿ, ಅವರನ್ನು ಕಳೆದುಕೊಂಡಿರುವುದರಿಂದ ಇಡೀ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ತಮ್ಮ ದುಗುಡವನ್ನು ಹೊರಹಾಕಿದರು ಮಲಾರ ಕಾಲೋನಿ ಗ್ರಾಮದಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿತ್ತು. ಗ್ರಾಮದ ಅಕ್ಷರಸ್ಥ ಯುವಕರು, ಧ್ರುವನಾರಾಯಣ್ ರವರಿಂದ ಸಹಾಯ ಪಡೆದ ಎಷ್ಟೋ ಬಡಕುಟುಂಬಗಳು ಕಂಬನಿ ಮಿಡಿಯುತಿದ್ದದ್ದು ಎದ್ದು ಕಾಣುತಿತ್ತು. ಶ್ರದ್ಧಾಂಜಲಿ ಸಭೆಯಲ್ಲಿ ಗ್ರಾಮದ ಮುಖಂಡರಾದ ಚಂದ್ರಶೇಖರಮೂರ್ತಿ, ಬಿ.ಟಿ.ಕೃಷ್ಣಮೂರ್ತಿ, ಮಿಲ್ ನಾಗಯ್ಯ, ಮಹದೇವಪ್ರಸಾದ್, ಸಣ್ಣಸ್ವಾಮಯ್ಯ, ಪದ್ಮರಾಜು, ಮಹದೇವು, ತಮ್ಮಯ್ಯ, ಪಿ ಮಲಿಯಯ್ಯ, ಮದೇವು, ಎಲ್.ಮಲ್ಲಿಕ್, ಮೂರ್ತಿ, ಬಸವರಾಜು, ನೂರಾರು ಧ್ರುವನಾರಾಯಣ ರವರ ಅಭಿಮಾನಿಗಳು ಹಾಜರಿದ್ದರು. ವರದಿ: ಮಲಾರ ಮಹದೇವಸ್ವಾಮಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್…
ಬೇಸಿಗೆ ಬಂದಂತರೆ ಎಷ್ಟೇ ಹುಷಾರಾಗಿದ್ದರು ಅಗ್ನಿ ಅವಘಡಗಳು ಸಂಭವಿಸುತ್ತಿರುತ್ತವೆ. ಅದೇ ರೀತಿ ತಿಪಟೂರಿನ ಗಡಿ ಗ್ರಾಮವಾದ ಹೆಗ್ಗಟ್ಟ ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದೆ. ಇಲ್ಲಿನ ನಿವಾಸಿ ನಟರಾಜ್ ಎಂಬವರ ಮನೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಂಪೂರ್ಣ ಸುಟ್ಟುಹೋಗಿದೆ. ಒಂದು ವರ್ಷದ ಹಿಂದೆ 8 ಲಕ್ಷ ರೂಪಾಯಿಗೆ ಈ ಮನೆಯನ್ನು ಖರೀದಿ ಮಾಡಿದ್ದರು. ಅವರಿವರ ಬಳಿ ಸಾಲ ಮಾಡಿ, ಜಮೀನು ಮಾರಿ ಹಣ ಹೊಂದಿಸಿ ಮನೆ ಮಾಡಿದ್ದರು. ಆದರೆ ಇವೆಲ್ಲವೂ ಕೆಲವೇ ಕ್ಷಣಗಳಲ್ಲಿ ಸುಟ್ಟು ಹೋಗಿದೆ. ಅಗ್ನಿ ಅನಾಹುತ ಹಿನ್ನೆಲೆಯಲ್ಲಿ ಮನೆಯಲ್ಲಿ ಸಾಕಿದ್ದ 15 ನಾಟಿ ಕೋಳಿ, ಏಳು ಕುರಿಗಳು, 11 ಸಾವಿರ ಕೊಬ್ಬರಿ 150 ಗ್ರಾಂ ಚಿನ್ನ ಹಾಗೂ ಬೆಳ್ಳಿ, ಎಲ್ಇಡಿ ಟಿವಿ ಮನೆಯಲ್ಲಿ ಬೆಲೆ ಬಾಳುವ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ಕೂಲಿ ನಾಲಿ ಮಾಡಿ ಜೀವನ ಸಾಗಿಸುವುದಕ್ಕೆ ಇದ್ದ ಒಂದು ಮನೆಯು ಸುಟ್ಟು ಹೋಗಿರುವುದರಿಂದ ಈ ಕೂಡಲೇ ಸರ್ಕಾರ ನಮ್ಮ ನೆರವಿಗೆ ಬರಬೇಕೆಂದು ನಟರಾಜು ಹಾಗೂ ಗ್ರಾಮಸ್ಥರು…
ಮಧುಗಿರಿ : ಶ್ರೀ ಬಸವೇಶ್ವರ ವಿದ್ಯಾಸಂಸ್ಥೆ, ಪ್ರಾರ್ಥನಾ ಪಬ್ಲಿಕ್ ಸ್ಕೂಲ್, ದಂಡಿನ ದಿಬ್ಬ ಶಾಲೆಯಲ್ಲಿ 2022-23 ನೇ ಸಾಲಿನ ಕಲಿನಲಿ ಸಮಾರಂಭ ಶನಿವಾರ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ವಿಜಯ್ ಪ್ರಕಾಶ್, ಕರ್ನಾಟಕದಲ್ಲಿ ಬದುಕಲು ಕನ್ನಡ ಭಾಷೆ ಚೆಂದ, ಆದರೆ ನಮ್ಮ ಕರ್ನಾಟಕದಲ್ಲೂ ಉತ್ತಮವಾದ ಹುದ್ದೆಗಳಿಗೆ ಆಯ್ಕೆಯಾಗಲು ತುಂಬ ಆಂಗ್ಲ ಭಾಷೆಯು ಮುಖ್ಯವಾಗಿದೆ ಎಂದು ತಿಳಿಸಿದರು ಅಧ್ಯಕ್ಷತೆಯ ಡಿ.ವಿ.ದ್ವಾರಕೀಶ್ ರವರು ವಹಿಸಿದರು, ಮುಖ್ಯ ಅತಿಥಿಗಳಾಗಿ ಚನ್ನಬಸಪ್ಪ, ದೊಡ್ಡೇರಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ನಾಗಮಣಿ ರಂಗಸ್ವಾಮಿ, ಉಪಾಧ್ಯಕ್ಷರಾದ ಹರೀಶ್, ಸದಸ್ಯರು ಶೈಲಕುಮಾರ ವರದರಾಜು, ಕಲಾವತಿ ವೆಂಕಟಪ್ಪ, ಗೋಪಾಲಕೃಷ್ಣ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ದೊಡ್ಡೇರಿ ಕ್ಲಸ್ಟರ್ ಬಸವೇಶ್ವರ, ಆಡಳಿತ ಮಂಡಳಿಯ ಸದಸ್ಯರುಗಳು ಹಾಗೂ ಪೋಷಕರು ಭಾಗವಹಿಸಿದರು. ಅಧ್ಯಕ್ಷರು ಹೊನ್ನೇಶಪ್ಪ, ಮುಖ್ಯೋಪಾದ್ಯರಾದ ಲಕ್ಷ್ಮಮ್ಮ, ಈ ಶಾಲೆಯ ಸಂಸ್ಥಾಪಕರಾದ ಕಾರ್ಯದರ್ಶಿ ಎಂ.ಎಸ್.ವಿಜಯಪ್ರಕಾಶ್ ರವರು ಹಾಜರಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಂದ ನೃತ್ಯ ಪ್ರದರ್ಶನ ನಡೆಯಿತು. ವರದಿ: ದೊಡ್ಡೇರಿ ಮಹಾಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…
ಬದುಕು ಎಂಬುದು ಹರಿಯುವ ನೀರಿನ ಕೊನೆ ಇಲ್ಲದ ಹಾಗೆ. ಇಲ್ಲಿ ಯಾವುದು ಶಾಶ್ವತವಲ್ಲ. ಉಳಿಯುವುದು ಒಂದೇ, ಹೃದಯವಂತಿಕೆ. ಈ ಬದುಕೊಂದು ಗೊಂಬೆಯಾಟ. ನಾವು ಕೆಲವು ಗೊಂಬೆಗಳ ಆಡಿಸಿದರೆ ನಮ್ಮನ್ನಾಡಿದುತ ಕಾಣಸಿಗನು. ಮಾನವನ ಬದುಕು ಕಾಯಕ, ಹುಡುಕು ಕಲ್ಲು ಕಲ್ಲುಗಳಲ್ಲು ಮಣಿ ಮಣಿಗಳಂತೆ ಎಲ್ಲೆಲ್ಲೋ ಇಟ್ಟ ಬಣ್ಣ ಬಣ್ಣದ ಮಣಿಗಳಂತೆ ಪೋಣಿಸಿದ ಕಾಯಕ ಕುಸುರಿ ಕೆಲಸ ನೋಡಿದಾಗ ಬಣ್ಣ ಬಣ್ಣದ ಬದುಕಿನಲ್ಲಿ ನಿಜವಾದ ಬದುಕಿನ ಕಷ್ಟ ಅರಿವಾಗಲೇಬೇಕು. ಕಲಾ ಮಿತ್ರ ತನ್ನ ಕೈಚಳಕದ ಕಾವೇರಿ ಮಾತೆಯನ್ನು ಜಲಲ ಧಾರೆಯಲ್ಲಿ ಸುಂದರವಾದ ಪ್ರಕೃತಿಯ ಚಿತ್ರಣವನ್ನು ಅದ್ಭುತವಾಗಿ ಪ್ರದರ್ಶಿಸಿ ಪುತ್ತೂರು ತಾಲೂಕು ಕಬಕ ಗ್ರಾಮದ ನೂಜೀ ವೇ. ಮೂ ರಾಮಕೃಷ್ಣ ಭಟ್ ನೂತನವಾಗಿ ಕಟ್ಟಿಸಿರುವ ಮನೆಯ ಶ್ರೀ ಕೃಷ್ಣ ಮಂಟಪದ ಒಳಭಾಗದಲ್ಲಿ ನಿಜವಾದ ಬದುಕಿನ ಕಷ್ಟ ಅರಿವಾಗಲೇ ಬೇಕು. ಕಾವೇರಿ ಮಾತೆ ಹರಸು ನಮ್ಮನೆಲ್ಲ…… ನಮನ ನಮ್ಮ…..!! ಕಾಲಕಾಲಕ್ಕೆ ಮಳೆ ಸಮೃದ್ಧಿಸಲಿ ಇಳೆ….! ಎಂಬಂತಿದೆ ಅಲ್ಲವೇ ಕೃಷಿಕನ ಮಾರ್ಮಿಕ ನುಡಿ. ಚಿತ್ರ: ಸವಿತಾ ಕೋಡಂದೂರ್ ಬರಹ:ಕುಮಾರ್…
ಬೆಳಗಾವಿ: “ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು ನೆಮ್ಮದಿ ತಂದಿವೆ. ಆದರೆ ಅಭಿವೃದ್ಧಿ ಎಂಬುದಕ್ಕೆ ಕೊನೆಯಿಲ್ಲ. ಅದಕ್ಕೆ ಮುಕ್ತಾಯವೆಂಬುದಿಲ್ಲ. ನಿರಂತರ ಅಭಿವೃದ್ಧಿಗೆ ನಾನು ಬದ್ಧವಾಗಿದ್ದು ಜನರ ಸಹಕಾರ ಅಗತ್ಯ” ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದ ಕರಡಿಗುದ್ದಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಅರಿಷಿಣ-ಕುಂಕುಮ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಗ್ರಾಮಸ್ಥರ ಕುಶಲೋಪರಿ ವಿಚಾರಿಸಿ ಮಾತನಾಡಿದರು. ಈ ಸಮಯದಲ್ಲಿ ಕಳೆದ ನಾಲ್ಕೂವರೆ ವರ್ಷಗಳಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕೆಲಸಗಳ ಮೆಲುಕು ಹಾಕಲಾಯಿತು. “ಜನತೆಯ ಪ್ರೀತಿ, ಪ್ರೋತ್ಸಾಹ, ಆಶೀರ್ವಾದಗಳ ಮೂಲಕ ಶಾಸಕಿಯಾಗಿ ನಿಸ್ವಾರ್ಥ ಭಾವನೆಯಿಂದ ನಿಮ್ಮೆಲ್ಲರ ಸೇವೆಗಳನ್ನು ಅಚ್ಚುಕಟ್ಟಾಗಿ ಮಾಡಿದ್ದೇನೆ. ಎಂದಿನಂತೆ ಎಲ್ಲರ ಪ್ರೀತಿ, ಪ್ರೋತ್ಸಾಹ, ಆಶೀರ್ವಾದ ಇರಲಿ” ಎಂದು ಲಕ್ಷ್ಮೀ ಹೆಬ್ಬಾಳಕರ್ ಕೋರಿದರು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಶಂಕರಗೌಡ ಪಾಟೀಲ, ಮಹಾಂತೇಶ ರಾಚಣ್ಣವರ, ಶಿವಾಜಿ ಕುರಿ, ಸೋಮಪ್ಪ ಮೂಕನವರ, ಅಂಜನಾ ಅರಬಳ್ಳಿ, ರೂಪಾ ಬೋರನ್ನವರ, ಪಾರವ್ವ ಅರಬಳ್ಳಿ, ಸದಾನಂದ ರಾಚನ್ನವರ, ರೂಪಾ ಸೊಗಲದ, ಸದಾಶಿವ ಮೂಕನವರ, ಹಾಲಪ್ಪ…
ಬೆಳಗಾವಿ: ಕರ್ನಾಟಕ ವಿಧಾನ ಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ನಿದ್ದೆಯಿಂದ ಎಚ್ಚೆತ್ತಿರುವ ನಾಡದ್ರೋಹಿ ಮಹಾರಾಷ್ಟ್ರ ಏಕೀಕರಣ ಸಮಿತಿ, ಲಕ್ಷಾಂತರ ಛತ್ರಪತಿ ಶಿವಾಜಿ ಅನುಯಾಯಿಗಳಿಗೆ ಮತ್ತು ಛತ್ರಪತಿ ಶಿವಾಜಿ ವಂಶಸ್ಥರಿಗೆ ಅವಮಾನ ಮಾಡಲು ಮುಂದಾಗಿದೆ. ಛತ್ರಪತಿ ಶಿವಾಜಿಯ ವಂಶಸ್ಥರೇ ಆಗಿರುವ ಯುವರಾಜ ಸಂಭಾಜಿರಾಜೇ ಛತ್ರಪತಿಯವರೇ ಲೋಕಾರ್ಪಣೆ ಮಾಡಿರುವ ಮೂರ್ತಿಯನ್ನು ಮಾರ್ಚ್ 19ರಂದು ಶುದ್ಧೀಕರಣ ಮಾಡುವುದಾಗಿ ಘೋಷಿಸುವ ಮೂಲಕ ಎಂಇಎಸ್ ಛತ್ರಪತಿ ಶಿವಾಜಿ ವಂಶಸ್ಥರಿಗೇ ಅವಮಾನ ಮಾಡಲು ಮುಂದಾಗಿದೆ. ಅಲ್ಲದೆ, ಛತ್ರಪತಿ ಶಿವಾಜಿ ಮೂರ್ತಿ ಪ್ರತಿಷ್ಠಾಪನೆಯಿಂದಾಗಿ ಖುಷಿಯಲ್ಲಿದ್ದ ಶಿವ ಭಕ್ತರಿಗೂ ಎಂಇಎಸ್ ಮುಖಂಡರು ಅವಮಾನ ಮಾಡುತ್ತಿದ್ದಾರೆ. ಲಕ್ಷಾಂತರ ಜನರ ಬಹುವರ್ಷದ ಕನಸಾಗಿದ್ದ ರಾಜಹಂಸಗಡ ಕೋಟೆಯ ಮೇಲೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರ ನಿರಂತರ ಪ್ರಯತ್ನದಿಂದಾಗಿ ಛತ್ರಪತಿ ಶಿವಾಜಿ ಮೂರ್ತಿ ಇದೀಗ ಸ್ಥಾಪನೆಯಾಗಿದೆ. ಅದರಲ್ಲೂ, ಛತ್ರಪತಿ ಶಿವಾಜಿಯ 13ನೇ ವಂಶಸ್ಥರಾಗಿರುವ ಯುವರಾಜ ಸಂಭಾಜಿರಾಜೇ ಛತ್ರಪತಿ ಸ್ವತಃ ಆಗಮಿಸಿ ಮೂರ್ತಿಯನ್ನು ಲೋಕಾರ್ಪಣೆ ಮಾಡಿದ್ದಾರೆ. 2 ದಿನಗಳ ಕಾಲ ಶಾಸ್ತ್ರೋಕ್ತ ವಿಧಿವಿಧಾನಗಳ ಮೂಲಕ, ರಾಜದರ್ಭಾರದಲ್ಲಿ ನಡೆಯುವ ಪಟ್ಟಾಭಿಷೇಕದ ಮಾದರಿಯಲ್ಲಿ…
ಸಚಿವ ವಿ.ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ಬಗ್ಗೆ ವದಂತಿಗಳು ಹಬ್ಬಿದ್ದು ಈ ಮಧ್ಯ ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಮತ್ತು ಚುನಾವಣಾ ನಿರ್ವಹಣಾ ಸಮಿತಿಯಿಂದ ಸೋಮಣ್ಣಗೆ ಕೋಕ್ ನೀಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ವಿ. ಸೋಮಣ್ಣ, ನಾನು ನಿಂತ ನೀರಲ್ಲ, ಹರಿಯುವ ನೀರು ಎಂದು ಹೇಳಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸೋಮಣ್ಣ, ಕ್ಷೇತ್ರದ ಜನರು ನನ್ನನ್ನು ಮನೆ ಮಗನಾಗಿ ನೋಡಿಕೊಂಡಿದ್ದಾರೆ. ನಾನು ಯಾರ ಬಗ್ಗೆಯೂ ಮಾತನಾಡಿಲ್ಲ. ರಾಜ್ಯಾಧ್ಯಕ್ಷರು, ಸಿಎಂ ಜತೆ ಕೆಲವು ವಿಷಯಗಳ ಬಗ್ಗೆ ಚರ್ಚಿಸಿದ್ದೇನೆ. ನನಗೆ ಈಗ 72 ವರ್ಷ, ಆಗಬೇಕಿರುವುದು ಏನೂ ಇಲ್ಲ. ಆದರೆ ಸೋಮಣ್ಣ ನಿಂತ ನೀರಲ್ಲ, ಹರಿಯುವ ನೀರು ಎಂದರು. ನಾನು ಯಾರ ಬಗ್ಗೆಯೂ ಒಂದು ಸಣ್ಣ ಅಪಚಾರವೂ ಮಾಡಿಲ್ಲ. ರಾಜ್ಯಾಧ್ಯಕ್ಷರು, ಸಿಎಂ ನನಗೆ ಏನು ಹೇಳಿದ್ದಾರೆ ಅಂತ ನನಗೆ ಮಾತ್ರ ಗೊತ್ತಿದೆ. ಆದರೆ ಅವರ ಭಾವನೆಗಳನ್ನು ನಾನು ಅರ್ಥ ಮಾಡಿಕೊಂಡು, ನನ್ನ ಹೊಟ್ಟೆಪಾಡಿಗೋಸ್ಕರ ಏನು ಮಾಡಬೇಕು, ಅದನ್ನು ಮಾಡಿಕೊಂಡು ಹೋಗುತ್ತಿದ್ದೇನೆ. ಕ್ಷೇತ್ರದ…
ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧೃವನಾರಾಯಣ್ ನಿಧನದ ಸುದ್ಧಿ ತಿಳಿದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಣ್ಣೀರಿಟ್ಟಿದ್ದಾರೆ. ಆರ್.ಧೃವನಾರಾಯಣ್ ನೆನೆದು ಕಣ್ಣೀರಿಟ್ಟಿರುವ ಡಿ.ಕೆ ಶಿವಕುಮಾರ್, ನನ್ನ ಸ್ವಂತ ಸಹೋದರನನ್ನೇ ಕಳೆದುಕೊಂಡಷ್ಟು ದುಃಖ ಆಗುತ್ತಿದೆ. ದೇವರು ಇದ್ದಾನೋ ಇಲ್ಲವೂ ಅನ್ನಿಸುತ್ತಿದೆ. ಧ್ರುವ ನಾರಾಯಣ್ ನಿಧನ ನನಗಷ್ಟೆ ಅಲ್ಲ. ಯಾರಿಗೂ ನಂಬಲಾಗುತ್ತಿಲ್ಲ. ಈ ಸಾವಿನ ಸುದ್ದಿ ಎಐಸಿಸಿ ಅಧ್ಯಕ್ಷರಿಗೂ ನಂಬಲು ಆಗುತ್ತಿಲ್ಲ ಪಕ್ಷಕ್ಕೆಷ್ಟೇ ಅಲ್ಲ ಇಡೀ ರಾಜ್ಯಕ್ಕೆ ನಷ್ಟ ಎಂದು ಭಾವುಕರಾದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಅಫ್ಘಾನಿಸ್ತಾನದ ಮಹಿಳೆ ರಜಿಯಾ ಮೊರಾಡಿ ಅವರು ಶೈಕ್ಷಣಿಕ ಶ್ರೇಷ್ಠತೆಗಾಗಿ ಭಾರತದಿಂದ ಚಿನ್ನದ ಪದಕವನ್ನು ಗೆದ್ದಿದ್ದಾರೆ. ಗುಜರಾತ್ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರಿಂದ ರಜಿಯಾ ಚಿನ್ನದ ಪದಕ ಪಡೆದರು. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಜಿಯಾ ಮುರಾದ್ ಅವರು ಶಿಕ್ಷಣ ನಿರಾಕರಿಸಿದ ಅಫ್ಘಾನಿಸ್ತಾನದ ಹುಡುಗಿಯರನ್ನು ನೆನಪಿಸಿಕೊಳ್ಳುತ್ತಾರೆ ಎಂದು ಹೇಳಿದರು. ರಜಿಯಾ ಸಾರ್ವಜನಿಕ ಆಡಳಿತದಲ್ಲಿ 8.60 ರ ಸಂಚಿತ ಗ್ರೇಡ್ ಪಾಯಿಂಟ್ ಸರಾಸರಿಯನ್ನು ಹೊಂದಿದ್ದಾರೆ. ಇದು ವಿಶ್ವವಿದ್ಯಾನಿಲಯದಲ್ಲಿ ಅತ್ಯುನ್ನತ ಶ್ರೇಣಿಯ ಅಂಕವಾಗಿದೆ. ರಜಿಯಾ ಅವರು ಗುಜರಾತ್ ವಿಶ್ವವಿದ್ಯಾನಿಲಯದಿಂದ ಸಾರ್ವಜನಿಕ ಆಡಳಿತದಲ್ಲಿ ಪದವಿ ಪಡೆದಿರುವ ಕಾರಣ ಪ್ರಶಸ್ತಿಗೆ ಅರ್ಹರಾಗಿದ್ದಾರೆ. 27 ವರ್ಷದ ರಜಿಯಾ ಮುರಡಿ ಎರಡು ವರ್ಷಗಳಿಂದ ಭಾರತದಲ್ಲಿ ಓದುತ್ತಿದ್ದಾರೆ. ರಜಿಯಾ ಮೊರಾಡಿ ಪ್ರಸ್ತುತ ಅದೇ ಕಾಲೇಜಿನಲ್ಲಿ ಸಾರ್ವಜನಿಕ ಆಡಳಿತದಲ್ಲಿ ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದಾರೆ. ಆಗಸ್ಟ್ 2021 ರಲ್ಲಿ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಮತ್ತೆ ಅಧಿಕಾರಕ್ಕೆ ಬಂದ ನಂತರ, ಮಹಿಳೆಯರ ಹಕ್ಕುಗಳನ್ನು ಸಂಪೂರ್ಣವಾಗಿ ನಿರಾಕರಿಸಲಾಯಿತು. ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಿದ್ದು ಖುಷಿಯಾಗಿದೆ. ಕಳೆದ ಎರಡು ವರ್ಷಗಳಿಂದ ನನ್ನ ಕುಟುಂಬವನ್ನು…
ಮಾರ್ಚ್ 12 ರಂದು ಮೈಸೂರು –ಬೆಂಗಳೂರು ದಶಪಥ ಹೆದ್ಧಾರಿ ಉದ್ಘಾಟನೆಗೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ ಹಿನ್ನೆಲೆ ಕಾರ್ಯಕ್ರಮಗಳ ಬಗ್ಗೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಮಾಹಿತಿ ನೀಡಿದರು. ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ನಾಳಿದ್ದು ನರೇಂದ್ರ ಮೋದಿಯವರು ಮೈಸೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಾರೆ. ಬಳಿಕ ಅಲ್ಲಿಂದ ಮಂಡ್ಯದತ್ತ ಹೇಳಿಕಾಪ್ಟರ್ ನಲ್ಲಿ ತೆರಳುತ್ತಾರೆ. ಮಂಡ್ಯದ ಪಿಇಎಸ್ ಕಾಲೇಜು ಮೈದಾನದಲ್ಲಿ ಹೆಲಿಕಾಪ್ಟರ್ ಲ್ಯಾಂಡ್ ಆಗಲಿದೆ. ಬಳಿಕ ಅಧಿಕೃತವಾಗಿ ಮೋದಿಯವರು ಮೈಸೂರು-ಬೆಂಗಳೂರು ಹೈವೇ ಉದ್ಘಾಟನೆ ಮಾಡಲಿದ್ದಾರೆ ಎಂದು ತಿಳಿಸಿದರು. ಪ್ರಧಾನಿ ನರೇಂದ್ರಮೋದಿ ಕಾರ್ಯಕ್ರಮಕ್ಕೆ ಸುಮಾರು ಒಂದೂವರೆ ಲಕ್ಷ ಜನ ಸೇರಲಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿಗಳು ಮಂಡ್ಯದಲ್ಲೇ 2.60 ಲಕ್ಷ ಮಂದಿ ಇದ್ದಾರೆ. ಜೊತೆಗೆ ಅಮೃತ್, ಜಲ ಜೀವನ್, ಆಯುಷ್ಮಾನ್ ಭಾರತ್ ಸೇರಿದಂತೆ ಹಲವು ಯೋಜನೆಗಳ ಫಲಾನುಭವಿಗಳು ಇದ್ದಾರೆ. ಅವರನ್ನು ಸೇರಿಸಿ 1.50 ಲಕ್ಷ ಜನ ಸೇರುತ್ತಾರೆ. 12 ಗಂಟೆಗೆ…