Author: admin

ರಾಜ್ಯ ಪೊಲೀಸ್ ಇಲಾಖೆಯ ಪ್ರಕಾರ ರಾಜ್ಯದಲ್ಲಿ ಕಳೆದ 4 ವರ್ಷಗಳಲ್ಲಿ 112 ಕೋಮು ಗಲಭೆ ಪ್ರಕರಣಗಳು ದಾಖಲಾಗಿದ್ದು, ಈ ಸಂಬಂಧ ಸರಣಿ ಟ್ವೀಟ್ ಮಾಡಿ ರಾಜ್ಯ ಬಿಜೆಪಿ ಸರ್ಕಾರವನ್ನ ಜೆಡಿಎಸ್ ಘಟಕ ತರಾಟೆ ತೆಗೆದುಕೊಂಡಿದೆ. ಈ ಕುರಿತು ಟ್ವೀಟ್ ಮಾಡಿರುವ ಜೆಡಿಎಸ್, ಸೌಹಾರ್ದತೆ, ಸಹಬಾಳ್ವೆಗೆ ಹೆಸರಾದ ಕರ್ನಾಟವು ರಾಜ್ಯ ಬಿಜೆಪಿ ಸರ್ಕಾರದ ನಾಲ್ಕು ವರ್ಷದ ಅವಧಿಯಲ್ಲಿ  ರಾಜ್ಯ ಪೊಲೀಸ್ ಇಲಾಖೆಯ ಪ್ರಕಾರ ಕೋಮು ಗಲಭೆ, ಕೋಮು ಹಿಂಸೆಯ 122 ಪ್ರಕರಣಗಳು ದಾಖಲಾಗಿವೆ. ಶಿವಮೊಗ್ಗ, ದಕ್ಷಿಣ ಕನ್ನಡ, ದಾವಣಗೆರೆ ಜಿಲ್ಲೆಗಳಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಕರಾವಳಿ ಪ್ರದೇಶ ಮತ್ತು ಮಧ್ಯ ಕರ್ನಾಟಕವನ್ನು ಕೋಮು ದ್ವೇಷದ ಪ್ರಯೋಗಶಾಲೆ ಮಾಡಿಕೊಂಡ ಬಿಜೆಪಿ ಪಕ್ಷದ ಬಳುವಳಿ ಇದು. ರಾಜಕೀಯ ಲಾಭಕ್ಕಾಗಿ ರಾಜ್ಯ ಕಾಂಗ್ರೆಸ್ ಪಕ್ಷದ ಕುತಂತ್ರದ ಮೌನಕ್ಕೂ ಇದರಲ್ಲಿ‌ ಪಾಲಿದೆ ಎಂದು ಕಿಡಿಕಾರಿದೆ. ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಅರಗಜ್ಞಾನೇಂದ್ರ ಅವರೆ, ಕಳೆದ ಎರಡು ವರ್ಷಗಳಲ್ಲಿ 85 ಕೋಮು ಹಿಂಸೆಯ ಪ್ರಕರಣಗಳು ನಡೆಯಲು…

Read More

ಮಧುಗಿರಿ: ಕ್ಷೇತ್ರದಲ್ಲಿ ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರು ಸಾಕಷ್ಟು ಆರ್ಥಿಕ ನೆರವು ನೀಡಿದ್ದಾರೆ ಎಂದು ಕೆಜಿಎಫ್ ವಿಧಾನಸಭಾ ಕ್ಷೇತ್ರದ ಶಾಸಕರಾದ ರೂಪ ಶಶಿಧರ್  ತಿಳಿಸಿದರು. ಪಟ್ಟಣದ ಎಪಿಎಂಸಿ ಹಿಂಭಾಗ ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ತಾಲೂಕು ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಬೂತ್ ಮಟ್ಟದ ಮಹಿಳಾ ಮುಖಂಡರ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರು ಸ್ವಾವಲಂಬಿಯಾಗಿ ಬದುಕಲು ಅವರಿಗೆ ಆರ್ಥಿಕ ನೆರವು ನೀಡುವುದು ಅತ್ಯಗತ್ಯ, ಈ ನಿಟ್ಟಿನಲ್ಲಿ ಜಿಲ್ಲಾ ಬ್ಯಾಂಕ್ ನ ಅಧ್ಯಕ್ಷರಾಗಿರುವ ಕೆ.ಎನ್.ರಾಜಣ್ಣನವರು ಅನೇಕ ಸವಲತ್ತುಗಳನ್ನು ಒದಗಿಸಿ ಅವರಿಗೆ ಸ್ವಾಭಿಮಾನದಿಂದ ಬದುಕಲು ಅನುವು ಮಾಡಿಕೊಟ್ಟಿದ್ದಾರೆ ಎಂದರು. ಕಾಂಗ್ರೆಸ್ ಈ ಬಾರಿ ಅಧಿಕಾರ ಚುಕ್ಕಾಣಿ ಹಿಡಿಯುವುದು ಖಚಿತ,  ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಹೆಣ್ಣು ಮಕ್ಕಳಿಗೆ ಪ್ರತಿ ತಿಂಗಳು 2000 ಹಣ ನೀಡಲಾಗುವುದರ ಜೊತೆ ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದು ಹಾಗೂ ಪ್ರತಿಯೊಬ್ಬರಿಗೂ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ…

Read More

ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇರುವ 23 ಸರಕಾರಿ ಶಾಲೆಗಳ ವಿದ್ಯಾರ್ಥಿಗಳ ನೆರವಿಗೆ ಇಂಡೋಮಿಮ್ ಕಂಪನಿಯ ವತಿಯಿಂದ 70 ಸ್ಮಾರ್ಟ್ ಟಿ.ವಿ.ಗಳನ್ನು ವಿತರಿಸಲಾಯಿತು. ಗುರುವಾರ ಇದರ ಅಂಗವಾಗಿ ಶಾಸಕ ಮತ್ತು ಸಚಿವ ಡಾ.ಸಿ ಎನ್ ಅಶ್ವತ್ ನಾರಾಯಣ್ ಅವರ ಅಧ್ಯಕ್ಷತೆಯಲ್ಲಿ ಮತ್ತೀಕೆರೆ ಸರಕಾರಿ ಶಾಲೆಯ ಆವರಣದಲ್ಲಿ ಕಾರ್ಯಕ್ರಮ ನಡೆಯಿತು. ಕಂಪನಿಯ ಅಧ್ಯಕ್ಷ ಜಯರಾಂ ಅವರು ಈ ಸಾಧನಗಳನ್ನು ಸಚಿವರ ಮೂಲಕ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಅಶ್ವಥ್ ನಾರಾಯಣ್, “ಜಯರಾಂ ಅವರು ಈಗ ಕೊಟ್ಟಿರುವುದು ಸೇರಿದಂತೆ ಇದುವರೆಗೆ ಒಂದು ಕೋಟಿ ರೂಪಾಯಿ ಮೊತ್ತದ ಟ್ಯಾಬ್ ಮತ್ತು ಲ್ಯಾಪ್‌ಟಾಪ್ ಗಳನ್ನು ಕ್ಷೇತ್ರದ ಶಾಲೆಗಳಿಗೆ ಕೊಟ್ಟಿದ್ದಾರೆ. ಈಗ ಬಡವರ ಮಕ್ಕಳ ಸುಗಮ ಕಲಿಕೆಗೆ 50 ಇಂಚಿನ ಐವತ್ತು ಟಿ.ವಿ.ಗಳನ್ನು ಕೊಟ್ಟಿದ್ದಾರೆ. ಇದು ಅನುಕರಣಯೋಗ್ಯ ಸಂಗತಿಯಾಗಿದೆ” ಎಂದರು. ಮಲ್ಲೇಶ್ವರ ಕ್ಷೇತ್ರದ ವ್ಯಾಪ್ತಿಯಲ್ಲಿನ ಸರಕಾರಿ ಶಾಲೆಗಳಲ್ಲಿ ಈವರೆಗೆ 1,400 ಟ್ಯಾಬ್ ಮತ್ತು 23 ಸ್ಮಾರ್ಟ್ ಬೋರ್ಡ್ ಕೊಡಲಾಗಿದೆ. ಇದರಿಂದ ಆಧುನಿಕ ಮತ್ತು ವೈಜ್ಞಾನಿಕ ಕಲಿಕೆ ಸಾಧ್ಯವಾಗಿದೆ.…

Read More

ಬೆಳಗಾವಿ: ಕನ್ನಡ ಮಹಿಳಾ ಸಂಘದ ಸಾಹಿತ್ಯ ಕಲಾ ವೇದಿಕೆ ವತಿಯಿಂದ ಮಾರ್ಚ್ 19ರಂದು ಬೆಳಗಾವಿಯಲ್ಲಿ ಕನ್ನಡ ಗೀತೆಗಳ ಸ್ಪರ್ಧೆ ರಾಗ ರಂಜನಿ ಆಯೋಜಿಸಲಾಗಿದೆ. ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಟಿಳಕವಾಡಿ 2ನೇ ರೈಲ್ವೆ ಗೇಟ್ ಬಳಿಯ ವರೇರ್ಕರ್ ಸಭಾಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ದಾಸರ ಪದಗಳನ್ನು ಹಾಡುವ ಸ್ಪರ್ಧೆ ಇದಾಗಿದ್ದು, ಸ್ಪರ್ಧೆಗೆ 5 ಜನ ಮಹಿಳೆಯರ ಅಥವಾ 5 ಜನ ಪುರುಷರ ಗುಂಪು ಇರಬೇಕು. ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವವರು ಮಾರ್ಚ್ 17ರ ಒಳಗೆ ತಮ್ಮ ಹೆಸರುಗಳನ್ನು ನೋಂದಾಯಿಸಬೇಕು ಎಂದು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಮೊಬೈಲ್ ನಂಬರ್ ಗಳನ್ನು ಸಂಪರ್ಕಿಸಿ: ಶುಭದಾ ಕೋಟೂಳಕರ – 9902852367 ಸಂಗೀತ ಪಾಟೀಲ -9980070771 ಗೌರಿ ಸರನೋಬತ್ -948139055 ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಕಲಬುರಗಿ: ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಶೀಘ್ರಲಿಪಿಕಾರರು -08, ಬೆರಳಚ್ಚುಗಾರರು-09, ಬೆರಳಚ್ಚು ನಕಲುಗಾರರು- 01, ಆದೇಶಜಾರಿಕಾರ- 13, ಜವಾನರು- 29 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶೀಘ್ರಲಿಪಿಕಾರರು, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು ಹುದ್ದೆಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ವರ್ಷದ ಪದವಿ ಪೂರ್ವ ಶಿಕ್ಷಣ ಕೋರ್ಸಿನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಭಾಷೆಯ ಬೆರಳಚ್ಚು ಹಿರಿಯ ದರ್ಜೆ ಮತ್ತು ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ಹಿರಿಯ ದರ್ಜೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಆದೇಶ ಜಾರಿಕಾರ ಹಾಗೂ ಜವಾನರ ಹುದ್ದೆಗಳಿಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಲಘುವಾಹನ ಚಾಲನಾ ಪರವಾನಿಗೆ ಪತ್ರ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಮಾರ್ಚ್ 25 ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಾಲತಾಣ https://districts.ecourts.gov.in/kalaburagi ನ್ನು ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ನಮ್ಮತುಮಕೂರು.ಕಾಂನ ಕ್ಷಣ…

Read More

ಬೈಲಹೊಂಗಲ : ಬೈಲಹೊಂಗಲ ತಾಲೂಕಿನ ಗದ್ದಿಕೊರವಿನಕೊಪ್ಪ ಗ್ರಾಮದ ರೈತರ ಹೊಲವೊಂದರಲ್ಲಿ ಬೃಹತ್ ಗಾತ್ರದ ಬಿಳಿ ಬಣ್ಣ ದ ಬಲೂನ್ ಒಂದು ಪತ್ತೆಯಾಗಿದ್ದು ಸ್ಥಳದಲ್ಲಿ ಆತಂಕ ಸೃಷ್ಟಿಸಿದೆ‌. ಪತ್ತೆಯಾದ ವಿಚಿತ್ರ ಬಲೂನ್ ಹವಾಮಾನ ಇಲಾಖೆಗೆ ಸಂಭಂದಿಸಿದ ಬೃಹತ್ ಗಾತ್ರದ ಬಲೂನಾಗಿದ್ದು ರೈತರ ಹೊಲದಲ್ಲಿ ಹಾರಿಬಂದು ಬಿದ್ದಿದೆ. ಇದು ಕಂಡುಬರುತ್ತಿದ್ದಂತೆ ರೈತರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಈಗಾಗಲೇ ಬಲೂನ್ ಕುರಿತು ಮಾಹಿತಿ ಪಡೆಯಲಾಗಿದ್ದು ಅವುಗಳಲ್ಲಿ ಬಳಸಲಾದ ಇಲೆಕ್ಟ್ರಾನಿಕ್ ವಸ್ತುಗಳು ಹವಾಮಾನ ಇಲಾಖೆಯಲ್ಲಿ ಬಳಸುವ ಸಾಧನಗಳಾಗಿವೆ ಎಂದು ತಿಳಿಸಿದ್ದಾರೆ. ಸಾಮಾನ್ಯವಾಗಿ ಈ ವಸ್ತುಗಳನ್ನು, ಎತ್ತರದ ತಾಪಮಾನದ ಆರ್ದ್ರತೆ, ಗಾಳಿಯ ವೇಗ, ಗಾಳಿಯ ಒತ್ತಡ ಇತ್ಯಾದಿಗಳನ್ನು ಮೇಲ್ವಿಚಾರಣೆ ಮಾಡಲು ಬಳಸುವ ಏಕೈಕ ಸಾಧನವಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ್ ಪಾಟೀಲ್ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ಆದಾಯ ತೆರಿಗೆ ಇಲಾಖೆಯು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 71 ಮೆರಿಟೋರಿಯಸ್ ಸ್ಪೋರ್ಟ್ಸ್‌ ಪರ್ಸನ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದರಲ್ಲಿ ಆಯ್ಕೆಯಾದ ಅಭ್ಯರ್ಥಿಯು 2 ವರ್ಷಗಳ ಪ್ರೊಬೇಷನ್ ಅವಧಿಯನ್ನು ಪೂರೈಸಬೇಕು. ಅರ್ಜಿ ಸಲ್ಲಿಸುವ ಆರಂಭ ದಿನಾಂಕ -ಫೆಬ್ರವರಿ 14 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ -ಮಾರ್ಚ್ .24 ಹುದ್ದೆಯ ಹೆಸರು ಮತ್ತು ಸಂಖ್ಯೆ ಆದಾಯ ತೆರಿಗೆ ನಿರೀಕ್ಷಕ-10 ತೆರಿಗೆ ಸಹಾಯಕ -32 ಬಹು ಕಾರ್ಯ ಸಿಬ್ಬಂದಿ -29 ಅರ್ಹತಾ ಮಾನದಂಡಗಳು: ಆದಾಯ ತೆರಿಗೆ ನಿರೀಕ್ಷಕ -ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ಪಡೆದಿರಬೇಕು. ತೆರಿಗೆ ಸಹಾಯಕ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ಪಡೆದಿರಬೇಕು. ಪ್ರತಿ ಗಂಟೆಗೆ 8000 ಪ್ರಮುಖ ಡಿಪ್ರೆಶನ್‌ಗಳ ಡೇಟಾ ಎಂಟ್ರಿ ಮಾಡುವ ಕೌಶಲ್ಯ ಹೊಂದಿರಬೇಕು. ಬಹು ಕಾರ್ಯ ಸಿಬ್ಬಂದಿ: ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಮೆಟ್ರಿಕ್ಯುಲೇಷನ್ ಅಥವಾ ತತ್ಸಮಾನ ಪಡೆದಿರಬೇಕು. ವೇತನ: ಆದಾಯ ತೆರಿಗೆ ಇನ್ಸ್‌ಪೆಕ್ಟರ್‌ – 44900- 142400…

Read More

ಬೆಳಗಾವಿ: “ಕೇವಲ ನಾಲ್ಕುವರೆ ವರ್ಷದ ಅವಧಿಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕೈಗೊಂಡ  ಅಭಿವೃದ್ಧಿ ಕಾರ್ಯಗಳು ಸಮಾಧಾನ ತಂದಿದ್ದು ಇದಕ್ಕೆ ಕ್ಷೇತ್ರದ ಜನತೆ ನೀಡಿದ ಸಹಕಾರ ಮಾದರಿಯಾಗಿದೆ” ಎಂದು ಶಾಸಕಿ ಲಕ್ಷ್ಮೀ  ಹೆಬ್ಬಾಳಕರ್  ಹೇಳಿದರು. ಅವರು, ಹಿಂಡಲಗಾ ಗ್ರಾಮದ ಸಿಂಡಿಕೇಟ್ ಕಾಲೋನಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಪೇವರ್ಸ್ ರಸ್ತೆ ಉದ್ಘಾಟಿಸಿ ಅವರು ಮಾತನಾಡಿದರು. ಇದೇ ಕಾಲೋನಿಯಲ್ಲಿ ನೂತನ ಉದ್ಯಾನ ನಿರ್ಮಾಣಕ್ಕಾಗಿ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ 25 ಲಕ್ಷ ರೂ. ವೆಚ್ಚದ ಉದ್ಯಾನ ನಿರ್ಮಾಣದ ಕಾಮಗಾರಿಗಳಿಗೆ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ರಾಮಕೃಷ್ಣ ಭಟ್, ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ, ಶೋಭಾ , ವಿಜಯಾ ಆಚಾರ್ಯ, ರಾಹುಲ್ ಉರಣಕರ್, ವಿಠ್ಠಲ ದೇಸಾಯಿ, ಚೇತನಾ ಅಗಸ್ಗೆಕರ್, ಸೀಮಾ ದೇವಕರ್, ಗಜಾನಂದ ಕಾಕತ್ಕರ್, ಸಂತೋಷ ಫರ್ನಾಂಡಿಸ್, ಅಶೋಕ ಕಾಂಬಳೆ ಮತ್ತಿತರರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…

Read More

ಬರ್ಲಿನ್: ಅಪರಿಚಿತರು ನಡೆಸಿದ ಗುಂಡಿನ ದಾಳಿಯಲ್ಲಿ 7 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡ ಘಟನೆ ಜರ್ಮನಿಯ ಹ್ಯಾಮ್‍ಬರ್ಗ್‍ನ ಯೆಹೋವ್‌ನ ವಿಟ್‍ನೆಸ್ ಚರ್ಚ್‍ನಲ್ಲಿ ನಡೆದಿದೆ. ಘಟನೆಯಲ್ಲಿ 8 ಜನರಿಗೆ ಗಂಭೀರ ಗಾಯಗಳಾಗಿವೆ. ಹಲವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಂಡಿನ ದಾಳಿ ನಡೆಸಿದವರು ಪರಾರಿಯಾಗಿರುವ ಅಥವಾ ಸಾವಿಗೀಡಾದ ಬಗ್ಗೆ ಮಾಹಿತಿ ಇಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾತ್ರಿ 9:15ರ ಸಮಯದಲ್ಲಿ ಪೊಲೀಸರಿಗೆ ತುರ್ತು ಕರೆಯೊಂದು ಬಂದಿದೆ. ಕರೆಯ ಆಧಾರದ ಮೇಲೆ ಚರ್ಚ್ ಬಳಿಗೆ ತೆರಳಿದ ಪೊಲೀಸರು ಗಾಯಗೊಂಡವರ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಗುಂಡಿನ ದಾಳಿ ನಡೆಸಿದ ಆರೋಪಿಗಳಿಗಾಗಿ ಪೊಲೀಸರು ಹೆಲಿಕಾಪ್ಟರ್ ಮೂಲಕ ಥರ್ಮಲ್ ಇಮ್ಯಾಜಿಂಗ್ ಕ್ಯಾಮೆರಾ ಬಳಸಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಕಾರ್ಯಾಚರಣೆಗೆ ಅನುಕೂಲವಾಗುವಂತೆ ಸ್ಥಳೀಯ ನಿವಾಸಿಗಳಿಗೆ ಬೇರೆ ಸ್ಥಳಗಳಿಗೆ ತೆರಳುವಂತೆ ಸೂಚಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್…

Read More

ಬೆಳಗಾವಿ: ಬಿಜಗರಣಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ ಆರ್. ಅಂಬೇಡ್ಕರ್ ಅವರ ನೂತನ ಮೂರ್ತಿ ಪ್ರತಿಷ್ಠಾಪನೆಯ ಸಲುವಾಗಿ ಅಡಿಪಾಯಕ್ಕೆ ಕಾಂಕ್ರೀಟ್ ಹಾಕುವ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಗುರುವಾರ ಚಾಲನೆಯನ್ನು ನೀಡಿದರು. ಈ ಸಮಯದಲ್ಲಿ ಗ್ರಾಮದ ಹಿರಿಯರು, ಪೂಜಾ ಸುತಾರ, ಮನೋಹರ್ ಬೆಳಗಾಂವ್ಕರ್ ಚಂದ್ರಭಾಗ ಜಾಧವ್, ಲಕ್ಷ್ಮೀ ಪಾಟೀಲ, ಮಂಜುಳಾ ಕೌಶಿಕ್, ಭಾರಕು ತಾರಿಹಾಳ್ಕರ್, ಸಾಗರ ನಾಯ್ಕ್, ಮಲ್ಲಪ್ಪ ಚೌಗುಲೆ ಹಾಗೂ ಮುಂತಾದವರು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More