Author: admin

ಮಂಡ್ಯ: ಮುಂದಿನ ವಿಧಾನಸಭೆ ಚುನಾವಣೆ ರಣತಂತ್ರ ರೂಪಿಸುತ್ತಿರೋ ಬೆನ್ನಲ್ಲೆ ಸುಮಲತಾ ಅಂಬರೀಷ್‌ ಬಿಜೆಪಿ ಸೇರ್ಪಡೆ ಬಗ್ಗೆ ಮಹತ್ವದ ತೀರ್ಮಾನವಾಗಲಿದೆ ಎಂದು ವರದಿಯಾಗಿದ್ದು, ಈ ಬಗ್ಗೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸುಮಲತಾ ಬಿಜೆಪಿ ಸೇರ್ಪಡೆಗೆ ಹೈಕಮಾಂಡ್‌ನಿಂದ ಗ್ರೀನ್‌ ಸಿಗ್ನಲ್ ನೀಡುವ ಬಗ್ಗೆ ನಾಳೆ ಸುಮಲತಾ ನಿವಾಸದಲ್ಲೇ ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿ ಸುಮಲತಾ ಅಂಬರೀಷ್‌ ಮಹತ್ವದ ಘೋಷಣೆಯನ್ನು ಮಾಡಲಿದ್ದಾರೆ. ಸುಮಲತಾ ಅಂಬರೀಷ್‌ ಬಿಜೆಪಿ ಸೇರ್ಪಡೆ ಬಗ್ಗೆ ಆಪ್ತರೊಳಗಡೆ ಒಮ್ಮತ ತೀರ್ಮಾನ ಸಾಧ್ಯತೆಯಿದೆ. ಮಂಡ್ಯದ ಸುಮಲತಾ ತಮ್ಮ ನಿವಾಸದಲ್ಲೇ ಅಧಿಕೃತವಾಗಿ ಬಿಜೆಪಿ ಸೇರುವ ಬಗ್ಗೆ ಘೋಷಣೆ ಮಾಡಲಿದ್ದಾರೆ. ಮಂಡ್ಯ ಹಾಗೂ ಬೆಂಗಳೂರಿನ ಆಪ್ತರ ಜೊತೆ ಸಭೆ ನಡೆಸಿ ಚರ್ಚೆ ನಡೆಸಿ ಈ ನಿರ್ಧಾರ ತೆಗೆದುಕೊಂಡ ಬಗ್ಗೆ ಮಾಹಿತಿ  ಬಹಿರಂಗವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ತುರುವೇಕೆರೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಎನ್.ಎಚ್.ಎಂ. ಅಡಿಯಲ್ಲಿ ಒಳಗುತ್ತಿಗೆ ಆಧಾರದಲ್ಲಿ ನೌಕರರಾಗಿ ಕೆಲಸ ಮಾಡುತ್ತಿರುವ ಸಿಬ್ಬಂದಿ ತಮ್ಮ ಹುದ್ದೆಗಳ ಖಾಯಂಗಾಗಿ ಕಳೆದ 25 ದಿನಗಳಿಂದ ರಾಜ್ಯಾದ್ಯಂತ ಮುಷ್ಕರ ನಡೆಸುತ್ತಿದ್ದು ತುರುವೇಕೆರೆ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬರುವ ರೋಗಿಗಳು ಪರದಾಡುವಂತೆ ಆಗಿದೆ. ಈ ಸಾರ್ವಜನಿಕ ಆಸ್ಪತ್ರೆಯಲ್ಲಿ ಎನ್ ಹೆಚ್ ಎಂ ,ಅಡಿಯಲ್ಲಿ ಒಳಗುತ್ತಿಗೆ ಆಧಾರದ ಮೇಲೆ ಸುಮಾರು 25 ಸಿಬ್ಬಂದಿ ಕೆಲಸ ಮಾಡುತ್ತಿದ್ದು, ಐ ಸಿ ಯು, ಲೇಬರ್ ವಾರ್ಡ್, ಎಕ್ಸರೇ, ಬ್ಲಡ್ ಬ್ಯಾಂಕ್, ರಕ್ತ ಪರೀಕ್ಷಾ ಕೇಂದ್ರ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯಂತಹ ವಿವಿಧ ವಿಭಾಗಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದು 24/7 ಸೇವೆ ದೊರೆಯುವ ಈ ಆಸ್ಪತ್ರೆಗೆ ಚಿಕಿತ್ಸೆಗಾಗಿ ಹಾಗೂ ಕಾಯಿಲೆಗಳ ಪರೀಕ್ಷೆಗಳಿಗಾಗಿ ಬರುವ ರೋಗಿಗಳಿಗೆ ಸರಿಯಾದ ಸೌಲಭ್ಯ  ಸಿಗುತ್ತಿಲ್ಲ. ಇದರಿಂದಾಗಿ ಸಾರ್ವಜನಿಕರು ಖಾಸಗಿ ಆಸ್ಪತ್ರೆಗಳಿಗೆ ಹಾಗೂ ರಕ್ತ ಪರೀಕ್ಷಾ ಕೇಂದ್ರಗಳಿಗೆ ಹೆಚ್ಚಿನ ಹಣ ನೀಡಿ,  ಖಾಸಗಿ ಕ್ಲಿನಿಕ್ ಮತ್ತು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ಸ್ಥಿತಿ ನಿರ್ಮಾಣವಾಗಿದೆ. ಬಡತನದ ಬೇಗೆಯಲ್ಲಿ ಹಾಗೂ…

Read More

ಪಾವಗಡ: ನಿಡಗಲ್ಲು ಹೋಬಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಸಿ.ಕೆಪುರ ಕ್ಲಸ್ಟರ್ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಸಮಾರಂಭ ನಡೆಯಿತು. ಇದೇ ವೇಳೆ ಮಾತನಾಡಿದ ದೈಹಿಕ ಶಿಕ್ಷಕರಾದ ಲಕ್ಷ್ಮೀ ನಾರಾಯಣ, ಶಾಲೆಯಲ್ಲಿ ಉತ್ತಮವಾದ ಗುಣಮಟ್ಟದ ಬೋಧನೆ ಕ್ರೀಡೆ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಿರುತ್ತಾರೆ. ಇದನ್ನು ತಮ್ಮ ಮಕ್ಕಳು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು ಮುಖ್ಯವಾಗಿ ಸರ್ಕಾರಿ ಶಾಲೆಯಲ್ಲಿ ನಮ್ಮ ಮಕ್ಕಳು ಓದುವುದರಿಂದ ಕನ್ನಡ ಉಳಿಸುವಂತೆ ಮಾಡಬಹುದು ಎಂದು ತಿಳಿಸಿಕೊಟ್ಟರು. ಇದೇ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷರಾದ ರತ್ನಮ್ಮ ಕೊಂಡಪ್ಪನವರು ಈ ಸರ್ಕಾರಿ ಶಾಲೆಗೆ ಧ್ವನಿ ವರ್ಧಕ  ಉಚಿತವಾಗಿ ನೀಡಿದರು. ಇದೇ ಶಾಲೆಯ ಶಿಕ್ಷಕರಾದ ಪೃಥ್ವಿ ಮೌನಿಕ ಇವರ ಕುಟುಂಬದಿಂದ ಅನ್ನ ದಾನ ಮಾಡಿದರು. ಕಾರ್ಯಕ್ರಮದಲ್ಲಿ ಚಿದಾನಂದ ಸ್ವಾಮಿ ದೈಹಿಕ ಶಿಕ್ಷಣ ಪರಿವೀಕ್ಷಕರು ಪಾವಗಡ,  ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಪವನ್ ಕುಮಾರ್ ರೆಡ್ಡಿ, ಚಿದಾನಂದ ಸ್ವಾಮಿ ಟಿ.ಪಿ.ಇ.ಓ. ಪಾವಗಡ, ರಂಗನಾಥ ಇ ಸಿ ಓ., ದೇವರಾಜು ಬಿ.ಆರ್.ಸಿ.,  ಎಲ್ ಮೂರ್ತಿ. ಸಿ.ಆರ್. ಪಿ., ಎಚ್.ನಾಗರಾಜು ತಾ.ದೈ.ಶಿ. ಸಂಘದ ಅದ್ಯಕ್ಷರು,…

Read More

ರಾಜ್ಯದಲ್ಲಿ ಸರ್ಕಾರದಲ್ಲಿ ನಡೆಯುವ ಅವ್ಯವಹಾರದ ಬಗ್ಗೆ  ಅಂದರೆ ಮರಳುಮಾಫಿಯ, ಸರ್ಕಾರಿ ಇಲಾಖೆಗಳಲ್ಲಿ ನಡಿವ ಅವ್ಯವಹಾರಗಳ ಬಗ್ಗೆ ಪ್ರಾಮಾಣಿಕ ಸಾಮಾಜಿಕ ಕಾರ್ಯಕರ್ತರು, ಆರ್‌ಟಿಐ ಕಾಯ್ದೆಯ ಸದುಪಯೋಗ ಮಾಡಿಕೊಂಡು ಈ ಕಾಯ್ದೆಯಿಂದ ಮಾಹಿತಿ ಪಡೆದುಕೊಂಡು, ಮಾಧ್ಯಮಗಳಿಗೆ ಬಿಡುಗಡೆ ಹಾಗೂ ಸರ್ಕಾರಗಳ ಮೇಲೆ ಒತ್ತಡ ತರುವ ಸಂದರ್ಭದಲ್ಲಿ  ರಾಜಕಾರಣಿಗಳು ಹಾಗೂ ಅಧಿಕಾರಿಗಳು ತಮ್ಮ ಪಟಲಂ ಕಟ್ಟಿಕೊಂಡು ಸಾಮಾಜಿಕ ಕಾರ್ಯಕರ್ತರ ಮೇಲೆ ಹಲ್ಲೆ, ಹಾಗೂ ಅನೇಕ ಕಾರ್ಯಕರ್ತರನ್ನು ಕೊಲೆಗೈದಿರುವುದು ಮಾಧ್ಯಮಗಳಲ್ಲಿ ನೋಡಿದ್ದೇವೆ, ಆದರೆ ಸಾಮಾಜಿಕ ಕಾರ್ಯಕರ್ತರು ಜನಸಾಮಾನ್ಯರ ಅನುಕೂಲಕ್ಕಾಗಿ ಹಾಗೂ ಕಾನೂನುಗಳನ್ನು ರಕ್ಷಣೆ ಮಾಡುವ ಉದ್ದೇಶದಿಂದ ಸಾಮಾಜಿಕ ಕಾರ್ಯಕರ್ತರು ತಮ್ಮ ಪ್ರಾಣ ಭಯ ಬಿಟ್ಟು, ಹೋರಾಟ ಮಾಡುವ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡಾಗಲು, ಯಾವುದೇ ರಾಜಕೀಯ ಪಕ್ಷಗಳಾಗಲಿ ಅಥವಾ ಸಂಘಟನೆಗಳಾಗಲಿ ಇವರ ಪರ ಹೋರಾಟ ಮಾಡಿದ್ದು ಆಗಲಿ ಅಥವಾ ಹೇಳಿಕೆ ಕೊಟ್ಟಿದ್ದು ಆಗಲಿ ಕಂಡುಬಂದಿರುವುದಿಲ್ಲ ಎಂಬುದು ಹಲವಾರು ಪ್ರಜ್ಞಾವಂತರಿಂದ ಕೇಳಿ ಬರುತ್ತದೆ. ರಾಜಕಾರಣಿಗಳ ಮೇಲೆ ಅಧಿಕಾರಿಗಳ ಮೇಲೆ ತನಿಖಾ ಸಂಸ್ಥೆಗಳು ದಾಳಿ ಮಾಡಿ, ಇವರ ಆದಾಯ ಮೀರಿ ಬಂಡವಾಳ…

Read More

ಸರಗೂರು: ತಾಲ್ಲೂಕಿನ ದೊಡ್ಡಬರಗಿ ಗ್ರಾಮದಲ್ಲಿ ಚಿಕ್ಕತಾಯಮ್ಮ ಎಂಬುವರು ಮನೆ ಕಳೆದುಕೊಂಡ ನೋವಿನಿಂದ  ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದೊಡ್ಡಬರಗಿ ಗ್ರಾಮದಲ್ಲಿ ನಡೆದಿದೆ‌. ಸರಗೂರು ತಾಲ್ಲೂಕಿನ ಎಂ ಸಿ ತಳಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಬರಗಿ ಗ್ರಾಮದಲ್ಲಿ ನೆರೆ ಸಂತ್ರಸ್ತ ಮಹಿಳೆ ಚಿಕ್ಕತಾಯಮ್ಮ  ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ. 2022ರಲ್ಲಿ ಮಳೆಯಿಂದಾಗಿ ಇವರ ಮನೆ ಕುಸಿದು ಬಿದ್ದು ಸಂಪೂರ್ಣವಾಗಿ ನಾಶಗೊಂಡಿತ್ತು. ಮತ್ತೆ ಮನೆ ನಿರ್ಮಾಣಕ್ಕಾಗಿ ಕಂದಾಯ ಇಲಾಖೆಗೆ ಅರ್ಜಿಸಲ್ಲಿಸಿದ್ದರು. ಈ ವೇಳೆ ತಾಯಮ್ಮ ಕುಟುಂಬ ಫಲಾನುಭವಿ ಎಂದು ಬಿ2 ಗ್ರೇಡ್ ನೀಡಲಾಗಿತ್ತು. ನಂತರ ಆದ ಬೆಳವಣಿಗೆಯಲ್ಲಿ ಅಧಿಕಾರಿಗಳು ಫಲಾನುಭವಿಗಳ ಪಟ್ಟಿಯಿಂದ ಚಿಕ್ಕತಾಯಮ್ಮ ಅವರನ್ನು ಬಿಡಲಾಗಿತ್ತು. ಮನೆ ಕಳೆದುಕೊಂಡಿದ್ದ ತಾಯಮ್ಮ ಸರ್ಕಾರದ ಆಸರೆಯ ಭರವಸೆಯಲ್ಲಿದ್ದರು. ಆದರೆ, ಅವರನ್ನು ಫಲಾನುಭವಿಗಳ ಪಟ್ಟಿಯಿಂದ ಕೈ ಬಿಟ್ಟ ಹಿನ್ನೆಲೆಯಲ್ಲಿ ತೀವ್ರವಾಗಿ ನೊಂದಿದ್ದರು. ಈ ಬಾರಿ ಮಳೆಯ ಸಂದರ್ಭದಲ್ಲಿ ತಾನೆಲ್ಲಿ ವಾಸ ಮಾಡಬೇಕು ಎಂದು ತೋಚದೇ ತೀವ್ರ ಚಿಂತೆಯಲ್ಲಿದ್ದರು ಎನ್ನಲಾಗಿದೆ. ಇದನ್ನು ಆತ್ಮಹತ್ಯೆ ಎನ್ನಬೇಕೋ, ಅಧಿಕಾರಿಗಳ, ಸರ್ಕಾರಿ ಪ್ರಾಯೋಜಿತ ಕೊಲೆ ಎನ್ನಬೇಕೋ…

Read More

ತುಮಕೂರು: ಇಂದು ರಾಜ್ಯವ್ಯಾಪಿ ದ್ವಿತೀಯ ಪಿಯು ಪರೀಕ್ಷೆ ಬರೆಯುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಎಐಡಿಎಸ್ ಓ ದಿಂದ ಶುಭಾಶಯ ಕೋರಲಾಯಿತು. ಎಐಡಿಎಸ್ಓ ಸಂಘಟನೆಯ ಜಿಲ್ಲಾಧ್ಯಕ್ಷರು ಅಶ್ವಿನಿ, ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ ಇಂದು ತುಮಕೂರಿನ  ವಿವಿಧ ಪರೀಕ್ಷಾ ಕೇಂದ್ರಗಳಿಗೆ ತೆರಳಿ, “ಶಿಕ್ಷಣವೆಂದರೆ ಕೇವಲ ಮಾಹಿತಿ ಹೊಂದುವುದಲ್ಲ, ಬದಲಿಗೆ ಚಿಂತನೆಗಾಗಿ ಮೆದುಳನ್ನು ತರಬೇತುಗೊಳಿಸುವುದು” ಎಂಬ ಆಲ್ಬರ್ಟ್ ಐನ್ಸ್ಟಿನ್ನರ ಸೂಕ್ತಿಯನ್ನು ಹೊಂದಿರುವ ಬಿತ್ತಿ ಪತ್ರವನ್ನು ಹಿಡಿದು ವಿದ್ಯಾರ್ಥಿಗಳಿಗೆ ಒತ್ತಡಕ್ಕೆ ಒಳಗಾಗದೆ ನಿರಾಳವಾಗಿ ಪರೀಕ್ಷೆಗಳನ್ನು ಬರೆಯುವಂತೆ ಸಲಹೆ ನೀಡಿದರು. ತುಮಕೂರಿನಲ್ಲಿ, ಸರ್ಕಾರಿ ಪಿಯು ಕಾಲೇಜು, ಸಿದ್ದಾಗಂಗ ಪಿಯು ಕಾಲೇಜು, ಎಂಪ್ರೆಸ್ ಪಿಯು ಕಾಲೇಜು  ಹಾಗು ಇನ್ನಿತರ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಲಾಯಿತು ಎಂದು ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪನವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಸರಗೂರು: ಬದುಕಿನಲ್ಲಿ ಆಸ್ತಿ, ಅಂತಸ್ತು ಮುಖ್ಯ ಅಲ್ಲ. ಪ್ರೀತಿ — ವಿಶ್ವಾಸವೇ ಮುಖ್ಯ. ಬಡತನ — ಸಿರಿತನ ಶಾಶ್ವತವಲ್ಲ. ಪ್ರೀತಿ–ವಿಶ್ವಾಸವಿಲ್ಲದಿದ್ದರೆ ಬದುಕಿಗೆ ಅರ್ಥವಿಲ್ಲ ಎಂದು ಗುರುಮಲ್ಲೇಶ್ವರ ದಾಸೋಹ ಮಹಾಸಂಸ್ಥಾನ ಮಠಾಧ್ಯಕ್ಷರು ಶ್ರೀ ಮಹಾಂತಸ್ವಾಮಿ ತಿಳಿಸಿದರು . ಸರಗೂರು ತಾಲ್ಲೂಕಿನ ಪಟ್ಟಣದ ಪಡುವಲು ವಿರಕ್ತ ಮಠದಲ್ಲಿ 8 ನೇ ವರ್ಷದ ಶ್ರೀ ಕಾಳ ಒಡೆಯ ಗುರುಗಳ ಆರಾಧನೆ ಮಹೋತ್ಸವ ಮತ್ತು ವೀರಶೈವ ಲಿಂಗಾಯತ ವಧು–ವರರ ಉಚಿತ ಸಾಮೂಹಿಕ ವಿವಾಹ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಉದ್ಘಾಟಿಸಿ ಮಾತನಾಡಿದರು. ಗಂಡ — ಹೆಂಡತಿ ಸದಾ ಪರಸ್ಪರ ಅರ್ಥೈಸಿಕೊಂಡು ಪ್ರೀತಿ–ವಿಶ್ವಾಸದಿಂದ ಸಾರ್ಥಕ ಜೀವನ ನಡೆಸಬೇಕು ಎಂದು  ನೂತನ ದಂಪತಿಗಳಿಗೆ ಕಿವಿಮಾತು ಹೇಳಿದ ಅವರು,  ಸತ್ಯ, ಧರ್ಮ, ನ್ಯಾಯ ಮತ್ತು ನೀತಿಗೆ ಪ್ರಸಿದ್ಧವಾದುದು.  ಸಂಸಾರ ಸಾಗರಕ್ಕೆ ಧುಮುಕಿದ ನವದಂಪತಿಗಳು ಶ್ರೀ ಸ್ವಾಮಿಯ ಅನುಗ್ರಹದಿಂದ ಸುಖ – ಶಾಂತಿ ಮತ್ತು ನೆಮ್ಮದಿಯ ಜೀವನ ನಡೆಸುವಂತಾಗಲಿ ಎಂದು ಹಾರೈಸಿದರು. ಸಮಾರಂಭ ಬಳಿಕ ಕಾಳ ಒಡೆಯ ಗುರುಗಳ ಮಹಾವಿದ್ಯಾಪೀಠ ಪಡುವಲು ವಿರಕ್ತ ಮಠದ…

Read More

ಮಧುಗಿರಿ: ದೊಡ್ಡೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿಮ್ಮಲಾಪುರ ಗ್ರಾಮದ ಮಾಜಿ ಗ್ರಾಮ ಪಂಚಾಯಿತಿ ಸದಸ್ಯರಾದ ವೆಂಕಟರಮಣಪ್ಪನವರು ಗುರುವಾರ ನಿಧನ ಹೊಂದಿದರು. ದೊಡ್ಡೇರಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯ 25/11/22ರ ನಿರ್ಣಾಯದಂತೆ ಗ್ರಾಮ ಪಂಚಾಯಿತಿ ಹಾಲಿ ಮತ್ತು ಮಾಜಿ ಸದಸ್ಯರು ನಿಧನ ಹೊಂದಿದಲ್ಲಿ ಗ್ರಾಮ ಪಂಚಾಯತ್ ವತಿಯಿಂದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಪಂಚಾಯತ್ ಅಭಿವೃದ್ಧಿಅಧಿಕಾರಿಗಳು, ಸಿಬ್ಬಂದಿಗಳು ಸೇರಿದಂತೆ ಮೃತ ಗ್ರಾಮ ಪಂಚಾಯತ್ ಮಾಜಿ ಸದಸ್ಯ ವೆಂಕಟರಮಣಪ್ಪ ರವರ ಮೃತ ದೇಹಕ್ಕೆ ಪುಷ್ಪಮಾಲಿಕೆ ಗೌರವ ಸಲ್ಲಿಸಲಾಯಿತು. ಬಳಿಕ ಮೃತರ ಕುಟುಂಬಕ್ಕೆ ಅಂತ್ಯಕ್ರಿಯೆ ಖರ್ಚಿಗೆ ಐದು ಸಾವಿರ ಸಹಾಯಧನ ವರ್ಗ 1 ಅನುಧಾನದಲ್ಲಿ ಚೆಕ್ ವಿತರಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷರು ನಾಗಮಣಿ ರಂಗಸ್ವಾಮಿ, ಉಪಾಧ್ಯಕ್ಷ ಹರೀಶ್, ಸದಸ್ಯರಾದ ವಿಜಯ್ ಪ್ರಕಾಶ್, ಶ್ರೀದೇವಮ್ಮ, ಶಾರದಮ್ಮ, ಮಂಜಮ್ಮ ಗಂಗಾಧರ್ ಕಾರ್ಯದರ್ಶಿ ದಿವಾಕರ್ ಬಿಲ್ ಕಲೆಕ್ಟರ್ ವಿಜಯ್ ಕುಮಾರ್, DEO ಕರಿಯಣ್ಣ ವಾಟರ್ ಮ್ಯಾನ್ ಪ್ರಭಾಕರ್, ಹಾಗೂ ಗ್ರಾಮಸ್ಥರು ಇದ್ದರು. ವರದಿ: ದೊಡ್ಡೇರಿ ಮಹಾಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…

Read More

ತುಮಕೂರು: ದ್ವಿತೀಯ ಪಿಯು ಪರೀಕ್ಷೆ ಇಂದಿನಿಂದ ಆರಂಭಗೊಂಡಿದ್ದು ಗುರುವಾರ ಬೆಳಗ್ಗೆ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳತ್ತ ಆಗಮಿಸಿದರು. ಜಿಲ್ಲೆಯಲ್ಲಿ 27,857 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. 12,889 ಗಂಡು ಮಕ್ಕಳು, 14,968 ಹೆಣ್ಣು ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ. 35 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆ ನಡೆಸಲು ಸಕಲ ಸಿದ್ಧತೆಗಳನ್ನು ಕೈಗೊಂಡಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದೆ.ಪರೀಕ್ಷೆಗಾಗಿ ಪಿಯು ಬೋರ್ಡ್ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಯಾವುದೇ ಲೋಪದೋಷ ಆಗದಂತೆ ಎಚ್ಚರಿಕೆ ವಹಿಸಲಾಗಿದೆ. ಪಿಯುಸಿ ಪರೀಕ್ಷೆಗಳು ಮಾರ್ಚ್ 9, 2023 ರಿಂದ ಮಾರ್ಚ್ 29, 2023 ರವರೆಗೆ ನಡೆಯಲಿವೆ. ಪದವಿ ಪೂರ್ವ ಶಿಕ್ಷಣ ಇಲಾಖೆಯು ಈಗಾಗಲೇ ವಿದ್ಯಾರ್ಥಿಗಳಿಗೆ ಹಾಲ್ ಟಿಕೆಟ್‌ ಗಳನ್ನು ಬಿಡುಗಡೆ ಮಾಡಿದೆ. ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ 1,109 ಕೇಂದ್ರಗಳಲ್ಲಿ ನಡೆಯಲಿದ್ದು, 7,26,213 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ ಹೊಸದಾಗಿ 6.29 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 25,847 ಖಾಸಗಿ, 70,586 ಪುನರಾವರ್ತಿತ ವಿದ್ಯಾರ್ಥಿಗಳಾಗಿದ್ದಾರೆ. ಒಟ್ಟು 3,62,509 ಬಾಲಕಿಯರು, ಮತ್ತು 3,63,704 ಬಾಲಕರು ಸೇರಿದ್ದಾರೆ. ಕಲಾ ವಿಭಾಗದಿಂದ 2,34,815, ವಾಣಿಜ್ಯದಲ್ಲಿ 2,47,269 ಮತ್ತು ವಿಜ್ಞಾನ ವಿಭಾಗದಿಂದ 2,44,129 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ ಎಂಬ ಮಾಹಿತಿ  ಲಭ್ಯವಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL…

Read More