Author: admin

ಹೈದರಾಬಾದ್: ನನ್ನ ತಂದೆಯಿಂದಲೆ ಲೈಂಗಿಕ ಕಿರುಕುಳಕ್ಕೆ ಗುರಿಯಾಗಿದ್ದೇ ಎಂಬ ಹೇಳಿಕೆ ಬಗ್ಗೆ ನನಗೆ ಯಾವುದೇ ನಾಚಿಕೆಯಾಗಿಲ್ಲ ಎಂದು ಬಿಜೆಪಿ ನಾಯಕಿ ಹಾಗೂ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್ ಹೇಳಿದ್ದಾರೆ. ಈ ಹಿಂದೆಯೂ ಖುಷ್ಬೂ ತಮ್ಮ ತಂದೆಯಿಂದಲೇ ಲೈಂಗಿಕ ಕಿರುಕುಳ ಎದುರಿಸಿದ್ದ ಬಗ್ಗೆ ಹೇಳಿಕೆ ನೀಡಿದ್ದರು. ಇದೀಗ ತಮ್ಮ ಹೇಳಿಕೆ ಕುರಿತು ಸ್ಪಷ್ಟನೆ ನೀಡಿರುವ ಖುಷ್ಬು ಅವರು, ತಂದೆಯ ನೀಚ ಕಾರ್ಯದ ಬಗ್ಗೆ ಹೇಳಿಕೆ ನೀಡಿರುವುದರಿಂದ ಮುಜುಗರವಿಲ್ಲ ಎಂದು ಹೇಳಿದ್ದಾರೆ. ನಾನು ಆಶ್ಚರ್ಯಕರವಾದ ಹೇಳಿಕೆಯನ್ನು ನೀಡಿಲ್ಲ, ಆ ಹೇಳಿಕೆ ನನ್ನಿಂದ ಹೊರಬಂದ ಪ್ರಾಮಾಣಿಕತೆ ಎಂದು ನಾನು ಭಾವಿಸುತ್ತೇನೆ. ಈ ರೀತಿ ನಾನು ಹೇಳಿದ್ದಕ್ಕೆ ನಾಚಿಕೆಪಡುವುದಿಲ್ಲ ಏಕೆಂದರೆ ಇದು ನನಗೆ ಸಂಭವಿಸಿದೆ ಮತ್ತು ಅಪರಾಧಿಯು ತನ್ನ ಬಳಿ ಇರುವುದಕ್ಕೆ ನಾಚಿಕೆಪಡಬೇಕು ಎಂದು ನಾನು ಭಾವಿಸುತ್ತೇನೆ ಎಂದು ಅವರು ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ:…

Read More

ಚಿಕ್ಕಮಗಳೂರು: ಪುರಸಭೆ ಕಂದಾಯ ಅಧಿಕಾರಿ, ಗುಮಾಸ್ತ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಕಂದಾಯ ಅಧಿಕಾರಿ ಯೋಗೀಶ್, ಗುಮಾಸ್ತ ತಮ್ಮಯ್ಯ ಲೋಕಾಯುಕ್ತ ಬಲೆಗೆ ಬಿದ್ದವರಾಗಿದ್ದಾರೆ. ಜಮೀನಿನ ಪೌತಿ ಖಾತೆ ಮಾಡಿಕೊಡಲು 8 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿಗಳು, ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ದಾಳಿ ನಡೆಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬೀರೂರು ಪುರಸಭೆ ಕಚೇರಿ ಒಳಗೆಯೇ ಲೋಕಾಯುಕ್ತ ಬಲೆಗೆ ಅಧಿಕಾರಿ, ಸಿಬ್ಬಂದಿ ಬಿದ್ದಿದ್ದಾರೆ. ಲೋಲಾಯುಕ್ತ ಡಿ.ವೈ.ಎಸ್ಪಿ. ತಿರುಮಲೇಶ್, ಪಿ.ಎಸ್.ಐ. ಅನಿಲ್ ರಾಥೋಡ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಥವಾ ವಿಶ್ವ ಮಹಿಳೆಯರ ದಿನ ಪ್ರತಿ ವರ್ಷ ಮಾರ್ಚ್ 8 ರಂದು ವಿಶ್ವದೆಲ್ಲೆಡೆ ಆಚರಿಸಲಾಗುತ್ತದೆ. ಈ ದಿನದಂದು ಮಹಿಳೆಯರ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಸಾಧನೆಗಳನ್ನು ನೆನೆಯಲಾಗುತ್ತದೆ. 1910ರ ಆಗಸ್ಟ್ ನಲ್ಲಿ ಡೆನ್ಮಾರ್ಕ್ನ ಕೋಪೆನ್ ಹೇಗನ್ ನಲ್ಲಿ ಎರಡನೆಯ ಅಂತರರಾಷ್ಟ್ರೀಯ ಸೋಷಿಯಲಿಸ್ಟ್ ಮಹಿಳಾ ಸಮ್ಮೇಳನ ನಡೆಯಿತು. ಅಲ್ಲಿನ ಕಾರ್ಮಿಕರ ಪ್ರತಿನಿಧಿ ಸಭೆಯ ಸಭಾಂಗಣದಲ್ಲಿ 17 ದೇಶಗಳ ಪ್ರತಿನಿಧಿಗಳು ಸೇರಿದ್ದರು. ಅಮೆರಿಕೆಯ ಹಲವಾರು ಕಾರ್ಮಿಕ ಸಂಘಟನೆಗಳ ನಾಯಕಿಯರು ಬಂದಿದ್ದರು. ಈ ಸಮ್ಮೇಳನಕ್ಕೆ ಅಂತರರಾಷ್ಟ್ರೀಯ ಮಹಿಳಾ ಸೆಕ್ರೆಟೇರಿಯೆಟ್ನ ಮುಖ್ಯಸ್ಥೆಯಾಗಿದ್ದ ಕ್ಲಾರಾ ಜೆಟ್ಕಿನ್ ಅಧ್ಯಕ್ಷೆಯಾಗಿದ್ದಳು. ಈ ಸಮ್ಮೇಳನದಲ್ಲಿ ಚರ್ಚಿತವಾದ ಎರಡು ವಿಷಯಗಳೆಂದರೆ ಸಾರ್ವತ್ರಿಕ ಮತದಾನದ ಹಕ್ಕು ಮತ್ತು ಮಹಿಳೆಯರ ಹೆರಿಗೆ ಭತ್ಯೆ ಮತ್ತು ಇತರ ಸೌಕರ್ಯಗಳು. ಮಹಿಳಾ ಸಮಾನತೆಯ ವಿಚಾರದಲ್ಲಿ ವಿಶ್ವದಾದ್ಯಂತ ತಾರತಮ್ಯ ನಡೆಯುತ್ತಿದೆ. ಪುರುಷನಷ್ಟೇ ಸಾಮರ್ಥ್ಯವನ್ನು ಮಹಿಳೆಯರು ಹೊಂದಿದ್ದರೂ, ಅವರನ್ನು ಕೀಳಾಗಿ ಕಾಣುವ ದುಷ್ಟ ಸಂಸ್ಕೃತಿ ನಮ್ಮ ದೇಶದಲ್ಲಿ ಇತ್ತು ಮತ್ತು ಈಗಲೂ ಅದು ಸಂಪೂರ್ಣವಾಗಿ ಕೊನೆಗೊಂಡಿಲ್ಲ. ಮನುಸ್ಮೃತಿಯ ದುಷ್ಟ…

Read More

ತಾವು ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಬಗ್ಗೆ ಹಬ್ಬಿದ್ಧ ವದಂತಿಗೆ ಸಚಿವ ನಾರಾಯಣಗೌಡ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ನಾರಾಯಣಗೌಡ, ನಾನು ಬಿಜೆಪಿಯಲ್ಲೇ ಇದ್ದೇನೆ ಇಲ್ಲೇ ಇರುತ್ತೇನೆ ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದಲೇ ಸ್ಪರ್ಧೆ ಮಾಡುತ್ತೇನೆ. ನಿನ್ನೆ ನಡೆದ ಗಲಾಟೆಗೂ ನನಗೂ ಯಾವುದೇ ಸಂಬಂಧವಿಲ್ಲ. ಈ ಬಗ್ಗೆ ಅವರನ್ನೇ ಕೇಳಿಕೊಳ್ಳಿ. ನಮ್ಮ ಪಕ್ಷ ಮತ್ತು ಪ್ರಧಾನಿ ಮೋದಿ ಬಗ್ಗೆ ಕೇಳಿ ಹೇಳುತ್ತೇನೆ ಎಂದರು. ಸಚಿವ ನಾರಾಯಣಗೌಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆ ಎಂಬ ವದಂತಿ ಹರಡಿತ್ತು. ಇನ್ನು ನಾರಾಯಣಗೌಡರು ಕಾಂಗ್ರೆಸ್ ಸೇರ್ಪಡೆಗೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಗಲಾಟೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಲೋಕಾಯುಕ್ತ ದಾಳಿ ವೇಳೆ ಪುತ್ರನ ಮನೆಯಲ್ಲಿ 8 ಕೋಟಿ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪರನ್ನ ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮುಜುಗರ ತಪ್ಪಿಸಿಕೊಳ್ಳಲು ಬಿಜೆಪಿ ಕೇಂದ್ರ ಶಿಸ್ತು ಸಮಿತಿಯು ಶಾಸಕ ಮಾಡಾಳ್ ವಿರೂಪಾಕ್ಷಪ್ಪರನ್ನ ಪಕ್ಷದಿಂದ ಉಚ್ಚಾಟನೆ ಮಾಡಿದೆ ಎನ್ನಲಾಗಿದೆ. ಈ ಕುರಿತು ಸ್ವತಃ ಮಾಡಾಳ್ ವಿರೂಪಾಕ್ಷಪ್ಪ ಅವರೇ ಪ್ರತಿಕ್ರಿಯೆ ನೀಡಿದ್ದು, ನನ್ನನ್ನ ಬಿಜೆಪಿಯಿಂದ ಉಚ್ಛಾಟನೆ ಮಾಡಿದ್ದಾರೆ. ಈ ಶಿಸ್ತು ಕ್ರಮವನ್ನ ಒಪ್ಪಿಕೊಳ್ಳುತ್ತೇನೆ ಎಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

BSNL 1198 Plan: ಟೆಲಿಕಾಂ ಕಂಪನಿ BSNL ಗ್ರಾಹಕರಿಗೆ ಅನೇಕ ಅತ್ಯುತ್ತಮ ಮತ್ತು ಬಜೆಟ್ ಯೋಜನೆಗಳನ್ನು ಹೊಂದಿದೆ. ಅದೇ ಸಮಯದಲ್ಲಿ ಬಿಎಸ್‌ಎನ್‌ಎಲ್ ಮತ್ತೊಮ್ಮೆ ತನ್ನ ಕಡಿಮೆ ಬೆಲೆಯ ಯೋಜನೆಯನ್ನು ಉತ್ತಮ ಪ್ರಯೋಜನಗಳೊಂದಿಗೆ ಹೆಚ್ಚಿನ ಡೇಟಾವನ್ನು ನೀಡುವ ರೀಚಾರ್ಜ್ ಯೋಜನೆಯನ್ನು ಪರಿಚಯಿಸಿದೆ. BSNL ತಮ್ಮ ಗ್ರಾಹಕರನ್ನು ಆಕರ್ಷಿಸಲು ಟೆಲಿಕಾಂ ಕಂಪನಿಗಳು ನಿರಂತರವಾಗಿ ಹೊಸ ಯೋಜನೆಗಳನ್ನು ನೀಡುತ್ತಲೇ ಇರುತ್ತವೆ. ಆದರೆ ಇಂದು ನಾವು ಅಂತಹ ಯೋಜನೆಯ ಬಗ್ಗೆ ನಿಮಗೆ ತಿಳಿಸಲಿದ್ದೇವೆ ಇದನ್ನು ಅಳವಡಿಸಿಕೊಳ್ಳುವ ಮೂಲಕ ನೀವು ವರ್ಷಪೂರ್ತಿ ರೀಚಾರ್ಜ್ ಅನ್ನು ತೊಡೆದುಹಾಕಬಹುದು. ಇದರೊಂದಿಗೆ ಈ ಯೋಜನೆಯಲ್ಲಿ ನಿಮ್ಮ ಮಾಸಿಕ ವೆಚ್ಚವು ಕೇವಲ 100 ರೂ ಆಗಿರುತ್ತದೆ. ಮತ್ತು ನೀವು ಅನಿಯಮಿತ ಕರೆ ಮತ್ತು ಇತರ ಪ್ರಯೋಜನಗಳ ಲಾಭವನ್ನು ಪಡೆಯಬಹುದು. ನಾವು ಮಾತನಾಡುತ್ತಿರುವ ಯೋಜನೆಯು ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ ಅಂದರೆ BSNL ನ ಯೋಜನೆಯಾಗಿದೆ. ಇದರಲ್ಲಿ ನೀವು 12 ತಿಂಗಳ ಅಂದರೆ 365 ದಿನಗಳ ಮಾನ್ಯತೆಯನ್ನು ಪಡೆಯುತ್ತೀರಿ. ಇದರೊಂದಿಗೆ ಡೇಟಾ ಮತ್ತು ಎಸ್ಎಂಎಸ್ ನ…

Read More

ದಾವಣಗೆರೆ: ನಾನು ಸರಳ ಸಜ್ಜನ ರಾಜಕಾರಣಿ, ಲೋಕಾಯುಕ್ತಕ್ಕೆ ಸೂಕ್ತ ದಾಖಲೆ ಕೊಟ್ಟು ಹಣ ವಾಪಸ್ ಪಡೆದೇ ಪಡೆಯುತ್ತೇನೆ ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹೇಳಿದ್ದಾರೆ. ಕೋರ್ಟ್ ನಿರೀಕ್ಷಣಾ ಜಾಮೀನು ಪಡೆದು ಚನ್ನಗಿರಿಯ ನಿವಾಸಕ್ಕೆ ವಾಪಸ್ ಬರುವ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ, ನಾನು ಯಾವುದೇ ತಪ್ಪು ಮಾಡಿಲ್ಲ, ಭ್ರಷ್ಟಾಚಾರ ಮಾಡಿಲ್ಲ. ಅದಕ್ಕಾಗಿ ಕೋರ್ಟ್ ನನಗೆ ಜಾಮೀನು ಕೊಟ್ಟಿದೆ ಎಂದು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಬೆಂಗಳೂರು: ರಾಜ್ಯದಲ್ಲಿ ಫಾಕ್ಸ್‌ಕಾನ್‌ ಕಂಪನಿ ಹೂಡಿಕೆ ಮಾಡುವುದು ನಿಶ್ಚಿತ. ಎಷ್ಟು ಪ್ರಮಾಣದ ಹೂಡಿಕೆ ಆಗಲಿದೆ ಎಂಬುದು ಇನ್ನಷ್ಟೇ ನಿರ್ಧಾರವಾಗಲಿದೆ ಎಂದು ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ತಿಳಿಸಿದರು. ಭಾರತೀಯ ಕೈಗಾರಿಕಾ ಒಕ್ಕೂಟದ (ಸಿಐಐ) ಕರ್ನಾಟಕ ಘಟಕದ ವಾರ್ಷಿಕ ಸಭೆಯಲ್ಲಿ ಸೋಮವಾರ ಮಾತನಾಡಿದ ಅವರು, ‘ಫಾಕ್ಸ್‌ಕಾನ್‌ ಕಂಪನಿಯ ಪ್ರಮುಖರ ಜತೆ ಶುಕ್ರವಾರ ಸುದೀರ್ಘ ಚರ್ಚೆ ನಡೆದಿದೆ. ರಾಜ್ಯದಲ್ಲಿ ಹೂಡಿಕೆ ಮಾಡಲು ಕಂಪನಿ ಸಂಪೂರ್ಣ ಒಲವು ತೋರಿದೆ. ಈವರೆಗಿನ ಬೆಳವಣಿಗೆಗಳು ಏನೇ ಇರಬಹುದು. ಆದರೆ, ಫಾಕ್ಸ್‌ಕಾನ್‌ ಇಲ್ಲಿ ಹೂಡಿಕೆ ಮಾಡಲಿದೆ ಎಂಬುದರಲ್ಲಿ ಅನುಮಾನವಿಲ್ಲ’ ಎಂದರು. ರಾಜ್ಯದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಅತ್ಯಂತ ವೇಗವಾಗಿ ನಡೆಯುತ್ತಿದೆ. ಮುಂದಿನ ಕೆಲವೇ ವರ್ಷಗಳಲ್ಲಿ 5,000 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾಗಲಿದೆ. ಎಲ್ಲ ಪ್ರಮುಖ ನಗರಗಳಿಗೂ ಹೈಸ್ಪೀಡ್‌ ರೈಲು ಸಂಪರ್ಕ ಕಲ್ಪಿಸುವ ಯೋಜನೆ ಜಾರಿಗೆ ಬರಲಿದೆ. ಹೊಸ ವಿಮಾನ ನಿಲ್ದಾಣಗಳ ನಿರ್ಮಾಣ ವೇಗವಾಗಿ ನಡೆಯುತ್ತಿದೆ. ಇವೆಲ್ಲವೂ ಕರ್ನಾಟಕವನ್ನು ಹೂಡಿಕೆದಾರರ ಆಸಕ್ತಿಯ ತಾಣವಾಗಿಸಿವೆ ಎಂದರು. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ…

Read More

ಕಲಬುರಗಿ: ವಿಜಯ ಸಂಕಲ್ಪ ಯಾತ್ರೆಗೂ ಮುನ್ನ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಈಗಿರುವ ನಾಲ್ಕರಿಂದ ಆರು ಹಾಲಿ ಶಾಸಕರಿಗೆ ಟಿಕೆಟ್‌ ಸಿಗುವುದಿಲ್ಲ. ಉಳಿದಂತೆ ಬಹುತೇಕ ಶಾಸಕರಿಗೆ ಟಿಕೆಟ್‌ ದೊರೆಯಲಿದೆ’ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ. ಮುಖ್ಯಮಂತ್ರಿ ಅಭ್ಯರ್ಥಿಗೆ ಸಂಬಂಧಿಸಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ನಾವು ಮೊದಲು ಸ್ಪಷ್ಟ ಬಹುಮತ ಪಡೆಯಬೇಕಿದೆ. ಆ ನಂತರ ಪಕ್ಷದ ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದನ್ನು ನಿರ್ಧರಿಸುತ್ತೇವೆ’ ಎಂದು ಯಡಿಯೂರಪ್ಪ ಹೇಳಿದರು. ಕರ್ನಾಟಕದಲ್ಲಿಯೂ ಗುಜರಾತ್‌ ಮಾಡೆಲ್‌? ಗುಜರಾತ್‌ನಲ್ಲಿ ಹಲವು ಬಾರಿ ಆಯ್ಕೆಯಾಗಿರುವ ಬಿಜೆಪಿ ಹಿರಿಯ ಶಾಸಕರಿಗೆ ಟಿಕೆಟ್‌ ಕೈತಪ್ಪುವ ಸಾಧ್ಯತೆ ಇದೆ ಎಂಬ ಸಂದೇಶ ಕೊಟ್ಟಿದ್ದಾರೆ‌. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ವಾಹನಗಳಿಗೆ ವಿಮೆ ಮಾಡಿಸುವುದು ಕಡ್ಡಾಯವಾಗಿದೆ. ವಾಹನ ನೋಂದಣಿ ಮಾಡಿಸಬೇಕೆಂದರೆ ವಿಮೆ ಇರಲೇಬೇಕಾಗುವ ಕಾರಣ ಆ ಸಂದರ್ಭದಲ್ಲಿ ವಿಮೆ ಮಾಡಿಸುವ ಬಹಳಷ್ಟು ಮಂದಿ ನಂತರ ರಿನಿವಲ್ ಮಾಡಲು ಮುಂದಾಗುವುದಿಲ್ಲ. ವಿಮೆ ಮಾಡಿಸಲು ಬಹುತೇಕ ವಾಹನ ಮಾಲೀಕರು ನಿರಾಸಕ್ತಿ ವಹಿಸುತ್ತಾರೆ. ಒಂದು ಅಂದಾಜಿನ ಪ್ರಕಾರ ದೇಶದಲ್ಲಿ 30 ಕೋಟಿಗೂ ಅಧಿಕ ವಾಹನಗಳಿದ್ದು, ಈ ಪೈಕಿ ಅರ್ಧದಷ್ಟು ವಾಹನಗಳಿಗೆ ವಿಮೆ ರಿನಿವಲ್ ಆಗಿಲ್ಲವೆಂದು ಹೇಳಲಾಗಿದೆ. ಇದೀಗ ಇಂತಹ ವಾಹನಗಳ ಮಾಲೀಕರಿಗೆ ಶಾಕ್ ನೀಡಲು ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವಾಲಯ ಮುಂದಾಗಿದೆ. ಯಾವ ವಾಹನಗಳಿಗೆ ವಿಮೆ ರಿನಿವಲ್ ಆಗಿಲ್ಲ ಎಂಬ ಮಾಹಿತಿ ಸಾರಿಗೆ ಸಚಿವಾಲಯದ ಬಳಿ ಇದ್ದು, ಅಂತಹ ವಾಹನಗಳ ಮಾಲೀಕರಿಗೆ ನೋಟಿಸ್ ನೀಡಲಾಗುತ್ತದೆ ಎಂದು ಮೂಲಗಳು ಹೇಳಿವೆ. ಸಾರಿಗೆ ಅಥವಾ ಪೊಲೀಸ್ ಇಲಾಖೆ ತಪಾಸಣೆ ನಡೆಸುವ ಸಂದರ್ಭದಲ್ಲಿ ವಿಮೆ ಇಲ್ಲದ ವಾಹನಗಳು ಸಿಕ್ಕಿ ಬಿದ್ದರೆ ಅಂತಹ ಸಂದರ್ಭದಲ್ಲಿ ಎರಡು ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ. ಹೀಗಾಗಿ ನೋಟಿಸ್ ನೀಡುವುದರ ಜೊತೆಗೆ ವಿಮೆ ರಿನಿವಲ್ ಮಾಡದ…

Read More