Subscribe to Updates
Get the latest creative news from FooBar about art, design and business.
- ಹಲವಾರು ಭಾಷೆಗಳಿಗೆ ನಮ್ಮ ಕನ್ನಡ ತಾಯಿ: ವೈ.ಡಿ.ರಾಜಣ್ಣ
- ಏಕತಾ ನಡಿಗೆಗೆ ಸಂಸದ ಗೋವಿಂದ ಕಾರಜೋಳ ಚಾಲನೆ!
- ಹೊಸದಾಗಿ 30 ಕೊಳವೆ ಬಾವಿ ಕೊರೆಸಲು ಜಿ.ಪಂ. ಸಿಇಒ ಜಿ.ಪ್ರಭು ಅನುಮೋದನೆ
- ಕಲ್ಪತರು ತಾಂತ್ರಿಕ ಮಹಾವಿದ್ಯಾಲಯ: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ
- ಬಡ ಕೂಲಿ ಕಾರ್ಮಿಕರ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸದಿದ್ದರೆ ಹೋರಾಟ: ಭಾರತೀಯ ಕಿಸಾನ್ ಸಂಘ
- ಹುಲಿ ಸೆರೆಗೆ ಕೂಂಬಿಂಗ್ ಕಾರ್ಯಾಚರಣೆ: ಪತ್ತೆಯಾಗದ ಹುಲಿಯ ಗುರುತು!
- ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ನಿಧನ
- ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!
Author: admin
ಹುಬ್ಬಳ್ಳಿ : ಖ್ಯಾತ ವಿ ಆರ್ ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ್ ಜೀವನಧಾರಿತ ಸಿನಿಮಾ ವಿಜಯಾನಂದ ಇಂದು (ಡಿ. 9) ರಂದು ಬಿಡುಗಡೆಯಾಗಿದ್ದು, ಭಾರತದ 1000 ಹಾಗೂ ವಿದೇಶದ 200 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ಪ್ರದರ್ಶನಗೊಳ್ಳಲಿದೆ. ಕನ್ನಡಿಗರೊಬ್ಬರ ಮೊಟ್ಟಮೊದಲ ಪಾನ್ ಇಂಡಿಯಾ ಬಯೋಪಿಕ್ ಎಂಬ ಹೆಗ್ಗಳಿಕೆಗೆ ವಿಜಯಾನಂದ ಚಿತ್ರ ಪಾತ್ರವಾಗಿದ್ದು, ಕೇವಲ ಒಂದು ಟ್ರಕ್ ನಿಂದ ಆರಂಭವಾದ ವಿ ಆರ್ ಎಲ್ ಲಾಜಿಸ್ಟಿಕ್ ಇಂದು ದೇಶದ ಅತಿ ದೊಡ್ಡ ಲಾಜಿಸ್ಟಿಕ್ ಸಂಸ್ಥೆಯಾಗಿ ಬೆಳೆದ ಯಶೋಗಾಥೆಯನ್ನು ಪ್ರೇಕ್ಷಕರ ಮುಂದೆ ತೆರೆದಿಡಲಿದೆ. ಈ ಚಿತ್ರದಲ್ಲಿ ಹಿರಿಯ ನಟ ಅನಂತನಾಗ್, ರವಿಚಂದ್ರನ್, ವಿನಯ ಪ್ರಸಾದ್, ಪ್ರಕಾಶ್ ಬೆಳವಾಡಿ, ನಿಹಾಲ್, ಸಿರಿ ಪ್ರಹ್ಲಾದ್, ಶೈನ್ ಶೆಟ್ಟಿ, ಭರತ್ ಬೋಪಣ್ಣ, ಅರ್ಚನಾ ಕೊಟ್ಟಿಗೆ, ರಮೇಶ್ ಭಟ್, ದಯಾಳ್ ಪದ್ಮನಾಭ ಸೇರಿದಂತೆ ಹಲವು ದಿಗ್ಗಜರು ನಟಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್…
ಬೆಂಗಳೂರು: ವಿಧಾನಪರಿಷತ್ ಸಭಾಪತಿಯಾಗಿದ್ದ ಬಸವರಾಜ ಹೊರಟ್ಟಿ ರಾಜೀನಾಮೆ ನೀಡಿದ ಬಳಿಕ, ಆ ಸ್ಥಾನ ತೆರವಾಗಿತ್ತು. ಹೀಗಾಗಿ ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲ್ಕಾಪುರೆ ಅವರನ್ನು ನೇಮಕ ಮಾಡಲಾಗಿತ್ತು. ಇದೀಗ ಈ ಸ್ಥಾನಕ್ಕೆ ಚುನಾವಣೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ವಿಧಾನ ಪರಿಷತ್ತಿನ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮಗಳ ನಿಯಮ7ರ ಉಪ ನಿಯಮ(1)ರಂತೆ ದಿನಾಂಕ ಡಿಸೆಂಬರ್ 12ರಂದು ಸಭಾಪತಿಯವರ ಚುನಾವಣೆಯನ್ನು ನಡೆಸಲು ದಿನಾಂಕ ನಿಗದಿ ಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ ದಿನಾಂಕ ಡಿಸೆಂಬರ್ ರಂದು ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿರುವಂತ ಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಪಾವಗಡ: ಪಟ್ಟಣದಲ್ಲಿ ಇರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಪಾವಗಡ ಘಟಕದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುಣ್ಯಸ್ಮರಣೆ ಆಚರಣೆ ಮಾಡಲಾಗಿತ್ತು. ಇದೇ ಸಂದರ್ಭದಲ್ಲಿ ಪ್ರಾಂಶುಪಾಲರಾದ ಬಸಲಿಂಗಪ್ಪ, ಉಪನ್ಯಾಸಕರಾದ ನರಸಿಂಹಮೂರ್ತಿ,ಸುಲಕ್ಷ ಎಬಿವಿಪಿ ಕಾರ್ಯಕರ್ತರಾದ ಪ್ರದೀಪ್ ಕುಮಾರ್, ಕಲ್ಯಾಣ್ ಮನೋಜ್, ಹಳೆಯ ಎಬಿವಿಪಿ ಕಾರ್ಯಕರ್ತರಾದ ನಂದೀಶ್ ನಾಯ್ಕ ಪಿ ಹಾಗೂ ರಾಮಕೃಷ್ಣ ನಾಯ್ಕ ಹಾಜರಾಗಿದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz
ಸರಗೂರು: ಮಾದಿಗ ಸಮುದಾಯ ಜನರಿಗೆ ನ್ಯಾಯಮೂರ್ತಿ ಎ ಜೆ ಸದಾಶಿವ ಆಯೋಗದ ವರದಿ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯಿಂದ ಡಿ.11 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ಹಮ್ಮಿಕೊಂಡಿರುವ ಬೃಹತ್ ಸಮಾವೇಶದಲ್ಲಿ ತಾಲೂಕಿನ ಪರಿಶಿಷ್ಟರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಬೆಂಬಲ ಸೂಚಿಸುವಂತೆ ಬಾಬು ಜಗಜೀವನರಾಂ ವಿಚಾರ ವೇದಿಕೆ ಅಧ್ಯಕ್ಷ ಕಲ್ಲಂಬಾಳುನಾಗಣ್ಣ ಮನವಿ ಮಾಡಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಎ ಜೆ ಸದಾಶಿವ ಆಯೋಗದ ವರದಿ ಜಾರಿ ಮಾಡುವಂತೆ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಸುಮಾರು ವರ್ಷಗಳಿಂದ ಮಾದಿಗ ಜನಾಂಗದವರಾದ ನಾವು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ರಾಜಕೀಯವಾಗಿ ವಂಚಿತರಾಗಿದ್ದು, ನಮ್ಮ ಸೌಲಭ್ಯಕ್ಕಾಗಿ ವಿವಿಧ ರೀತಿಯಲ್ಲಿ ಹಲವಾರು ಪ್ರತಿಭಟನೆಗಳನ್ನು ಸರ್ಕಾರದ ವಿರುದ್ಧ ಕೈಗೊಂಡರು ಸಹ ಯಾವುದೇ ಪ್ರಯೋಜನವಾಗಿಲ್ಲ ಎಂದರು. ಬಾಬು ಜಗಜೀವನರಾಂ ವಿಚಾರ ವೇದಿಕೆ ಉಪಾಧ್ಯಕ್ಷ ಮತ್ತು ಗ್ರಾಪಂ ಸದಸ್ಯ ಸಂವಿಧಾನ ಸಂರಕ್ಷಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಕುರ್ಣೆಗಾಲ…
ಹೆಚ್.ಡಿ.ಕೋಟೆ: ಪಟ್ಟಣದ ಸರ್ಕಾರಿ ಬಸ್ ನಿಲ್ದಾಣದಲ್ಲಿ ರಾಜಾರೋಷವಾಗಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವುದು ಪತ್ತೆಯಾಗಿದ್ದು, ಬಾರ್ ಗಳು ತೆರೆಯುವುದಕ್ಕೂ ಮೊದಲೇ ಅಕ್ರಮ ಮದ್ಯ ಮಾರಾಟಗಾರರು ಫೀಲ್ಡಿಗಿಳಿಯುತ್ತಿದ್ದು, ಬೆಳಗ್ಗೆ 6 ಗಂಟೆಯಿಂದಲೇ ಮದ್ಯ ಮಾರಾಟ ಆರಂಭಿಸುತ್ತಿದ್ದಾರೆ. ಬೆಳ್ಳಂಬೆಳಗ್ಗೆ ಕುಡುಕರು ಮದ್ಯ ಖರೀದಿಗಾಗಿ ಮುಗಿ ಬೀಳುತ್ತಿರುವ ದೃಶ್ಯ ಕಂಡು ಬಂದಿದೆ. ತಾಲೋಕು ಕೇಂದ್ರ ಸ್ಥಾನದ ಬಸ್ ನಿಲ್ದಾಣದ ಎದುರಿನಲ್ಲೇ ಇಂತಹ ದೃಶ್ಯ ಕಂಡು ಬಂದರೆ, ಹಳ್ಳಿಗಳಲ್ಲಿ ಏನು ಸ್ಥಿತಿ ಇರಬಹುದು ಅನ್ನೋ ಮಾತುಗಳು ಘಟನೆಯ ಬೆನ್ನಲ್ಲೇ ಕೇಳಿ ಬಂದಿದೆ. ಅಕ್ರಮ ಮದ್ಯ ಮಾರಾಟವನ್ನು ಕಂಡೂ ಕಾಣದಂತೆ ಅಬಕಾರಿ ಇಲಾಖೆ ಕುಳಿತಿದೆ ಅನ್ನೋ ಮಾತುಗಳು ಕೇಳಿ ಬಂದಿವೆ. ಖಾಸಗಿ ವಾಹನಗಳ ನಿಲ್ದಾಣ ಬದಿಯಲ್ಲಿರುವ ರಸ್ತೆ ಬದಿ ಹೋಟೆಲ್ ಆಸುಪಾಸಿನಲ್ಲೇ ಅಕ್ರಮ ಮದ್ಯ ಮಾರಾಟ ನಡೆಯುತ್ತಿದೆ. ಈ ಬಗ್ಗೆ ಅಬಕಾರಿ ಅಧಿಕಾರಿಗಳು, ಪೊಲೀಸರಿಗೆ ಮಾಹಿತಿ ನೀಡಿದರೂ ಕ್ರಮಕೈಗೊಳ್ಳುತ್ತಿಲ್ಲ ಅನ್ನೋ ಆರೋಪ ಕೇಳಿ ಬಂದಿದೆ. ವರದಿ: ಮಲಾರ ಮಹದೇವಸ್ವಾಮಿ, ಹೆಚ್.ಡಿ.ಕೋಟೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…
ಕೊರಟಗೆರೆ: ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಬೂದಗವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇಗಲಾಲ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆ ನೂತನ ಕಟ್ಟಡವು ಲೋಕಾರ್ಪಣೆಗೊಳ್ಳಲು ಸಜ್ಜಾಗಿದೆ. ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿಯ ಮುಖ್ಯ ಅಧಿಕಾರಿಗಳ ನೇತೃತ್ವದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕರಾದ ಡಾ.ಜಿ.ಪರಮೇಶ್ವರ್ ಉಪಸ್ಥಿತಿಯಲ್ಲಿ ಶ್ರೀ ಇಂದಿರಾ ಗಾಂಧಿ ವಸತಿ ಶಾಲೆಯ ನೂತನ ಕಟ್ಟಡವು ಇಂದು ಉದ್ಘಾಟನೆಗೊಳ್ಳಲಿದೆ. ಈ ಸಂದರ್ಭದಲ್ಲಿ ಗೃಹ ಸಚಿವ ಹಾಗೂ ತುಮಕೂರು ಉಸ್ತುವಾರಿ ಸಚಿವರಾದ ಅರಗ ಜ್ಞಾನೇಂದ್ರ, ಸಮಾಜ ಕಲ್ಯಾಣ ಇಲಾಖೆ ಮತ್ತು ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ, ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ ಜಿ ಪರಮೇಶ್ವರ್, ತುಮಕೂರು ಲೋಕಸಭಾ ಸದಸ್ಯರಾದ ಜಿ.ಎಸ್. ಬಸವರಾಜ್, ಸಚಿವರಾದ ಬಿ.ಸಿ.ನಾಗೇಶ್ ಮಾಧುಸ್ವಾಮಿ, ಜಿಲ್ಲಾಧಿಕಾರಿಗಳಾದ ವೈ.ಎಸ್. ಪಾಟೀಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿದ್ಯಾ ಕುಮಾರಿ, ಕೊರಟಗೆರೆ ತಹಸೀಲ್ದಾರ್ ನಾಹೀದಾ ಜಮ್…
ಬೆಂಗಳೂರು: ಲಂಚ ಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಹಾಗೂ ಕರ್ನಾಟಕ ರಾಷ್ಟ್ರ ಸಮಿತಿ ವತಿಯಿಂದ ಡಿಸೆಂಬರ್ 9ರಂದು ಪೂರ್ವಾಹ್ನ 11 ಗಂಟೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ‘ಅಂತಾರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನ’ ಆಯೋಜಿಸಲಾಗಿದೆ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ನಿವೃತ್ತ ಐಎಎಸ್ ಅಧಿಕಾರಿಗಳಾದ ವಿ. ಬಾಲಸುಬ್ರಮಣ್ಯನ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕೆ.ಆರ್.ಎಸ್. ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಲಂಚ ಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಅಧ್ಯಕ್ಷ ಬಿ.ಎಸ್.ಮಲ್ಲಿಕಾರ್ಜುನಯ್ಯ, ಲಂಚ ಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಕಾರ್ಯದರ್ಶಿ ವಿ.ಆರ್.ಮರಾಠೆ ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದಲ್ಲಿ ಸಮಾಜ ಪರಿವರ್ತನಾ ಸಮುದಾಯ ಧಾರವಾಡ ಇದರ ಎಸ್.ಎ.ಮಕ್ಕಾಭಿ, ತುಮಕೂರು ಜಿಲ್ಲಾ ಸಾಮಾಜಿಕ ಹೋರಾಟಗಾರ ಹಂದ್ರಾಳ್ ನಾಗಭೂಷಣ್, ಬೆಂಗಳೂರು ಜನಾಧಿಕಾರ ಸಂಘರ್ಷ ಪರಿಷತ್ ನ ಪ್ರಕಾಶ್ ಬಾಬು, ಚಾಮರಾಜನಗರ ಭ್ರಷ್ಟಾಚಾರ ವಿರೋಧಿ ಮತ್ತು ಸಾಮಾಜಿಕ ಹೋರಾಟಗಾರರಾದ ದೊರೆಸ್ವಾಮಿ, ಬೆಂಗಳೂರಿನ ನಿವೃತ್ತ ಸರ್ಕಾರಿ ನೌಕರ ಪಾಪೇಗೌಡ ಅವರನ್ನು ಸನ್ಮಾನಿಸಲಾಗುವುದು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…
ಆಂಟೋನಿ ಬೇಗೂರು ಪ್ರತಿ ವರ್ಷ ಡಿಸೆಂಬರ್ 9 ರಂದು, UN ನಿಂದ ಅಂತರರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನವನ್ನು ಆಚರಿಸಲಾಗುತ್ತದೆ. ಇಂದು ಆಚರಿಸಲಾಗುವ ಈ ವಿಶೇಷ ದಿನದ ಮಾಹಿತಿ. ಅಕ್ಟೋಬರ್ 31, 2003 ರಂದು, ವಿಶ್ವಸಂಸ್ಥೆಯು ಅಂತರರಾಷ್ಟ್ರೀಯ ಮಟ್ಟದಲ್ಲಿ ಭ್ರಷ್ಟಾಚಾರವನ್ನು ಎದುರಿಸಲು ನಿರ್ಣಯವನ್ನು ಅಂಗೀಕರಿಸಿತು. ಕೌನ್ಸಿಲ್ ಡಿಸೆಂಬರ್ 9 ಅನ್ನು ಅಂತರರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನ ಎಂದು ಘೋಷಿಸಿದೆ. ಅಂದಿನಿಂದ, ಈ ದಿನವನ್ನು ವಿಶ್ವಸಂಸ್ಥೆಯಿಂದ ವಾರ್ಷಿಕವಾಗಿ ಆಚರಿಸಲಾಗುತ್ತದೆ. ಭ್ರಷ್ಟಾಚಾರ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮತ್ತು ಭ್ರಷ್ಟಾಚಾರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ. ಟ್ರಾನ್ಸ್ಪರೆನ್ಸಿ ಇಂಟರ್ನ್ಯಾಷನಲ್ ವಿಶ್ವದ 180 ದೇಶಗಳನ್ನು ಅಧ್ಯಯನ ಮಾಡಿದ ನಂತರ ಅತ್ಯಂತ ಭ್ರಷ್ಟ ದೇಶಗಳ ಪಟ್ಟಿಯನ್ನು ಪ್ರಕಟಿಸುತ್ತದೆ. ಭಾರತವು 2016 ರಲ್ಲಿ 79 ನೇ, 2017 ರಲ್ಲಿ 81 ನೇ ಮತ್ತು 2018 ರಲ್ಲಿ 78 ನೇ ಸ್ಥಾನದಲ್ಲಿತ್ತು. ಭ್ರಷ್ಟಾಚಾರವು ಒಂದು ದೇಶದ ಸಂಘಟನೆಯ ತಳದಿಂದ ನಾಯಕತ್ವ, ಆಡಳಿತಾತ್ಮಕ ಅವ್ಯವಸ್ಥೆ ಮತ್ತು ಅಸ್ತವ್ಯಸ್ತತೆಯವರೆಗೆ ಕ್ಯಾನ್ಸರ್ನಂತೆ…
ಪ್ರೀತಿಸಿ ಮದುವೆಯಾಗಿರುವ ತಮ್ಮ ಆನಂದ್ ಚಾಲಕನಾಗಿದ್ದು ಇತ್ತೀಚೆಗೆ ಕಾಣೆಯಾಗಿದ್ದಾನೆಂದು ಸೋದರ ವೆಂಕಟೇಶ್ ಮಾಲೂರು ತಾಲೂಕು ಮಾಸ್ತಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಬೆನ್ನತ್ತಿ ಹೋದ ಪೊಲೀಸರಿಗೆ ಈ ನಾಪತ್ತೆ ಪ್ರಕರಣದ ಸುಳಿವು ಆರಂಭದಲ್ಲಿ ಸಿಗಲಿಲ್ಲ. ದೂರು ನೀಡಿದ್ದ ವೆಂಕಟೇಶ್ ಮತ್ತೆ ಠಾಣೆಗೆ ಹೋಗಿ ಕಾಣೆಯಾಗಿದ್ದ ಆನಂದ್ ಪತ್ನಿ ಹಾಗೂ ಆಕೆಯ ಕೆಲವು ಸ್ನೇಹಿತರ ಮೇಲೆಯೇ ಅನುಮಾನ ವ್ಯಕ್ತಪಡಿಸಿದ್ದರು. ಅಷ್ಟರಲ್ಲಿ ಹೊಸಕೋಟೆ ನಂದಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿ.ಮಾಕನಹಳ್ಳಿ ಗ್ರಾಮದ ಬಳಿಯ ನೀರಿನ ಹಳ್ಳದಲ್ಲಿ ಕೊಲೆ ಮಾಡಿ ಬಿಸಾಡಿದ್ದ ಅಪರಿಚಿತ ಶವವೊಂದು ಪತ್ತೆಯಾಗಿತ್ತು. ಪರಿಶೀಲಿಸಿದಾಗ ಆನಂದ್ ಕೊಲೆಯಾಗಿರುವುದು ಖಚಿತವಾಗಿದೆ. ಆನಂದ್ ಅಣ್ಣ ವೆಂಕಟೇಶ್ ಅನುಮಾನ ವ್ಯಕ್ತಪಡಿಸಿದ್ದಂತೆ ಆತನ ಪತ್ನಿ ಚೈತ್ರಾ ಸೇರಿದಂತೆ ಆಕೆಯ ಮೂರು ಸ್ನೇಹಿತರನ್ನು ವಶಕ್ಕೆ ಪಡೆದ ನಂದಗುಡಿ ಪೊಲೀಸರು ವಿಚಾರಣೆ ನಡೆಸಿದ ವೇಳೆ ಆಕೆಯೇ ಪ್ರಿಯಕನ ಜೊತೆಗೆ ಸೇರಿ ಗಂಡನನ್ನು ಕೊಲೆ ಮಾಡಿರುವುದು ತಿಳಿದು ಬಂದಿದೆ. ಡ್ರೈವರ್ ಆನಂದ್ ಕಾರಂಗುಟ್ಟೆ ಗ್ರಾಮದ ಚೈತ್ರಾ ಎಂಬ ಹುಡುಗಿಯನ್ನು ಪ್ರೀತಿಸಿ ಆರು…
ಮೈಸೂರು ಜಿಲ್ಲೆ ವರುಣ ವಿಧಾನಸಭಾ ಕ್ಷೇತ್ರದ ಚಟ್ನಳ್ಳಿ ಪಾಳ್ಯ ಗ್ರಾಮದ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿದ್ದ ಬಸವಭವನ ಹಾಗೂ ರಸ್ತೆ ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯತಿಂದ್ರ ಸಿದ್ದರಾಮಯ್ಯನವರು ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಯತೀಂದ್ರ ಸಿದ್ಧರಾಮಯ್ಯ, ನಮ್ಮ ವರುಣಾ ವಿಧಾನಸಭಾ ಕ್ಷೇತ್ರಕ್ಕೆ ಸುಮಾರು ಹದಿಮೂರು ಕೋಟಿಗೂ ಹೆಚ್ಚು ರೂಗಳ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು ಮೊದಲಿಗೆ ನಮ್ಮ ಕ್ಷೇತ್ರಕ್ಕೆ ಸೇರುವ ಹಳ್ಳಿಕೆರೆಹುಂಡಿ ಚಟ್ನಳ್ಳಿ ಪಾಳ್ಯ ವಾಜಮಂಗಲ ಎಂ.ಸಿ ಹುಂಡಿ ಗ್ರಾಮಗಳ ರಸ್ತೆಯ ಅಭಿವೃದ್ಧಿ ಸೇರಿದಂತೆ ಸಮುದಾಯ ಭವನಗಳಿಗೆ ಸುಮಾರು ಎರಡುವರೆ ಕೋಟಿ ರೂಗಳ ವೆಚ್ಚದಲ್ಲಿ ಭೂಮಿ ಪೂಜೆ ನೆರವೇಸಲಾಗಿದೆ. ಇನ್ನುಳಿದ ಅಭಿವೃದ್ಧಿ ಕಾಮಗಾರಿಗಳನ್ನು ಸದ್ಯದಲ್ಲೇ ಕೈಗೆತ್ತಿಕೊಳ್ಳುತ್ತೇವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ವರುಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಮುದ್ದೇಗೌಡ, ಉಪಾಧ್ಯಕ್ಷ ರವಿ, ಮಲೆಯ ಮಾದೇಶ್ವರ ಬೆಟ್ಟದ ಮಾಜಿ ಧರ್ಮದರ್ಶಿ ಕೀಳನಪುರ ಮಹಾದೇವಪ್ಪ, ಮೆಲ್ಲಹಳ್ಳಿ ಗಂಗತಿಮ್ಮಯ್ಯ ,ಚಿಕ್ಕದೇವಯ್ಯ, ಕಾಂಗ್ರೆಸ್ ಪಕ್ಷದ ಕಾನೂನು ವಿಭಾಗದ ಪಾಳ್ಯ ಸ್ವಾಮಿ…