Subscribe to Updates
Get the latest creative news from FooBar about art, design and business.
- ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ
- ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ
- ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
- ಎಸ್.ಅಪ್ಪೇನಹಳ್ಳಿ: ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ನವಿಲು ನರ್ತನ; ಗ್ರಾಮಸ್ಥರಲ್ಲಿ ಕುತೂಹಲ
- ನಾಲ್ಕು ದಶಕಗಳಿಂದ ರಸ್ತೆ ಅಭಿವೃದ್ಧಿ ಕಾಣದ ಬೆಟ್ಟಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರಂಗನಾಥ್ ಚಾಲನೆ
- ಕಳ್ಳಂಬೆಳ್ಳ ಪೊಲೀಸರಿಂದ ರಕ್ಷಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ
- ಹರ್ತಿ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ
- ಸಚಿವ ಡಿ.ಸುಧಾಕರ್ ಪಾರ್ಥಿವ ಶರೀರಕ್ಕೆ ನಮನ: ಭಾವುಕರಾದ ಕೆ.ಎನ್.ರಾಜಣ್ಣ, ಕಂಬನಿ ಮಿಡಿದ ಜಿ.ಪರಮೇಶ್ವರ್
Author: admin
ಕೋಲಾರದಲ್ಲಿ ಸಿದ್ಧರಾಮಯ್ಯ ಗೆದ್ದರೆ ಅವರು ಹೇಳಿದಂತೆ ನಾನು ಕೇಳುತ್ತೇನೆ ಎಂದು ಶಾಸಕ ಕೆಎಸ್ ಈಶ್ವರಪ್ಪ ಸವಾಲು ಹಾಕಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಬಿಜೆಪಿ ವಿಜಯಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಕೆ.ಎಸ್ ಈಶ್ವರಪ್ಪ, ಸಿದ್ಧರಾಮಯ್ಯ ಒಮ್ಮೆ ಕೋಲಾರದಿಂದ ಸ್ಪರ್ಧಿಸುತ್ತೇನೆ ಎನ್ನುತ್ತಾರೆ. ಮತ್ತೊಮ್ಮೆ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೇಳುತ್ತಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ಅವರಿಗೆ ಏನು ರೋಗ? ಎಂದು ಲೇವಡಿ ಮಾಡಿದರು. ಕೋಲಾರ ಕ್ಷೇತ್ರದ ದಲಿತರು ಸಿದ್ದರಾಮಯ್ಯರನ್ನು ಸೋಲಿಸಲು ಕಾಯುತ್ತಿದ್ದಾರೆ. ಸಿದ್ದರಾಮಯ್ಯ ಕಪಾಳಕ್ಕೆ ಹೊಡೆದು ಸೋಲಿಸಲು ಕಾಯುತ್ತಿದ್ದಾರೆ. ಜಿ ಪರಮೇಶ್ವರ್, ಮುನಿಯಪ್ಪ ಅವರನ್ನು ಸೋಲಿಸಿದ್ದನ್ನು ದಲಿತರು ಮರೆತಿಲ್ಲ ಎಂದು ಟಾಂಗ್ ನೀಡಿದರು. ಸಿದ್ದರಾಮಯ್ಯರನ್ನು ಸೋಲಿಸಲು ಬಿಜೆಪಿ ಬೇಡ, ಕಾಂಗ್ರೆಸ್ಸಿಗರೇ ಸಾಕು. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಗೆ ಜನ ಉತ್ತರ ಕೊಡುವ ಕಾಲ ಬಂದಿದೆ ಎಂದು ಕೆ.ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ಬಾಗಲಕೋಟೆ: ಪ್ರಜೆಗಳ ಹಿತಾಸಕ್ತಿ ಕಾಪಾಡುವಲ್ಲಿ ಮತ್ತು ಸಾಮಾಜಿಕ ಕೊಡುಗೆ ನೀಡುವಲ್ಲಿ ವೀರಶೈವ ರಾಜಮನೆತನಗಳ ಕೊಡುಗೆ ಅಪಾರವಾದದ್ದು. ಇದರಲ್ಲಿ ಹಂಡೆ ಅರಸು ಮನೆತನವು ಮೊದಲ ಸಾಲಿನಲ್ಲಿದೆ ಎಂದು ಶಾಸಕು ಹಾಗೂ ಬಿವಿವಿ ಸಂಘದ ಕಾರ್ಯಾಧ್ಯಕ್ಷರಾದ ಡಾ. ವೀರಣ್ಣ ಚರಂತಿಮಠ ಹೇಳಿದರು. ಬಸವೇಶ್ವರ ಶಾಲಾ ಮಹಾವಿದ್ಯಾಲಯದ ಸಭಾಭವನದಲ್ಲಿ ಕನ್ನಡ ಸ್ನಾತಕೋತ್ತರ ವಿಭಾಗ, ಬಿವಿವಿಎಸ್ ಸಂಶೋಧನಾ ಕೇಂದ್ರ ಹಾಗೂ ಕಲಬುರ್ಗಿ ಚಾಲುಕ್ಯ ಸಂಸ್ಕೃತಿ ಅಧ್ಯಯನ ಪೀಠ ಸಹಯೋಗದಲ್ಲಿ ಬುಧವಾರ ಹಮ್ಮಿಕೊಂಡ ಹಂಡೆ ಅರಸರ ಸಾಂಸ್ಕೃತಿಕ ಕೊಡುಗೆಗಳು ರಾಜ್ಯಮಟ್ಟದ ವಿಚಾರ ಸಂಕಿರಣ ಮತ್ತು ಗ್ರಂಥಗಳ ಬಿಡುಗಡೆ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಇತರ ಧರ್ಮಿಯ ರಾಜರಂತೆ ದಬ್ಬಾಳಿಕೆ ಮತ್ತು ಹಿಂಸೆಗಳನ್ನು ಪ್ರೋತ್ಸಾಹಿಸಿದೆ ಧಾರ್ಮಿಕ ನೆಲಗಟ್ಟಿನ ಮೇಲೆ ಆದರ್ಶ ಆಡಳಿತ ನೀಡಿರುವುದು ವೀರಶೈವ ರಾಜಮನೆತನಗಳು. ಇದಕ್ಕೆ ಮೈಸೂರು ಮತ್ತು ಸುರಪೂರ ರಾಜಾಡಳಿತವೆ ಸಾಕ್ಷಿಯಾಗಿದೆ ಎಂದರು. ಹಂಡೆ ಅರಸರ ಕೊಡುಗೆ ಅಪಾರವಾಗಿದ್ದು ಅವುಗಳನ್ನು ತಿಳಿದುಕೊಳ್ಳುವುದ ಅವಶ್ಯಕವಾಗಿದೆ. ಕರ್ನಾಟಕ ಇತಿಹಾಸದಲ್ಲಿ ತಮ್ಮದೆಯಾದ ಕೊಡುಗೆಕೊಟ್ಟ ಅರಸು ಮನೆತನಗಳ ಮೇಲೆ…
ಈಶಾನ್ಯ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಮೊದಲಿಗೆ ಅಂಚೆ ಮತಗಳನ್ನು ಎಣಿಕೆ ಮಾಡಲಾಯಿತು. ಮೊದಲ ಫಲಿತಾಂಶಗಳು ಲಭ್ಯವಾದಾಗ ತ್ರಿಪುರಾದಲ್ಲಿ ಬಿಜೆಪಿ ಮುನ್ನಡೆಯಲ್ಲಿದೆ. ಬುಡಕಟ್ಟು ಪಕ್ಷ ತಿಪ್ರಾ ಮೋಟಾ ಮತ್ತು ಬಿಜೆಪಿ ರಾಜ್ಯದಲ್ಲಿ ಮುನ್ನಡೆ ಸಾಧಿಸಿವೆ. ತ್ರಿಪುರಿಯಲ್ಲಿ ಪ್ರಸ್ತುತ ಬಿಜೆಪಿ-31, ಎಡ ಕಾಂಗ್ರೆಸ್-2, ತಿಪ್ರಮೋಟಾ 5, ಇತರರು 00 ಮುನ್ನಡೆ ಸಾಧಿಸಿದ್ದಾರೆ. ಪೋಸ್ಟರ್ ಮತಪತ್ರಗಳನ್ನು ಎಣಿಸಿದಾಗ ಮೇಘಾಲಯದಲ್ಲಿ ಎನ್ಪಿಪಿ (12) ಮುನ್ನಡೆ ಸಾಧಿಸಿದೆ. ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ತ್ರಿಪುರಾದ 60 ಕ್ಷೇತ್ರಗಳು, ಮೇಘಾಲಯ ಮತ್ತು ನಾಗಾಲ್ಯಾಂಡ್ನ 59 ಕ್ಷೇತ್ರಗಳ ಮತ ಎಣಿಕೆ ಮಾಡಲಾಯಿತು. ನಾಗಾಲ್ಯಾಂಡ್ನಲ್ಲಿ ಎನ್ಡಿಪಿಪಿ (ನ್ಯಾಷನಲ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ) ಅಂಚೆ ಮತಗಳಲ್ಲಿ 10, ಎನ್ಡಿಎಫ್ 1, ಕಾಂಗ್ರೆಸ್ 0 ಮತ್ತು ಇತರರು 0 ಮುನ್ನಡೆ ಸಾಧಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
“ತಮ್ಮ ಸಾಮರ್ಥ್ಯ ಮೀರಿ ದುಡಿಯುವ ಜೀವಿಗಳ ಸಾಲಿನಲ್ಲಿ ಆಟೋ ಚಾಲಕರು ಮುಂಚೂಣಿಯಲ್ಲಿರುತ್ತಾರೆ. ಚಾಲಕರ ಈ ಜನಪರ ಸೇವೆಗೆ ಹೃದಯಸ್ಪರ್ಶಿ” ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಶ್ರೀ ಹಿಂಡಲಗಾ ಗಣಪತಿ ಆಟೋ ಸ್ಟ್ಯಾಂಡ್ನಾಮಫಲಕ ಉದ್ಘಾಟಿಸಿ ಅವರು ಮಾತನಾಡಿದರು. ಮಳೆ, ಗಾಳಿ, ಬಿಸಿಲು, ಚಳಿ ಎನ್ನದೇ ಹಗಲಿರುಳು ಶ್ರಮಿಸುವ ಆಟೋ ಚಾಲಕರ ಸೇವೆ ನಿಜಕ್ಕೂ ಅದ್ಭುತ. ಆಟೋ ಚಾಲಕರ ಹಿತರಕ್ಷಣೆಗೆ ನನ್ನಿಂದಾದ ನೆರವು ನೀಡಲು ಸದಾ ಬದ್ಧವಾಗಿದ್ದೇನೆ” ಎಂದು ಅವರು ಹೇಳಿದರು. ಈ ಸಮಯದಲ್ಲಿ ಸ್ಥಳೀಯ ಆಟೋ ಚಾಲಕರು, ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೀದರ್: ಔರಾದ ತಾಲೂಕಿನ ಕೊಲ್ಲೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಬಳಿ ಮೂರು ಶೌಚಾಲಯಗಳನ್ನು ಕಟ್ಟಿಸಲಾಗಿದ್ದು, ಆದರೆ ಇಲ್ಲಿ ಪ್ರಮುಖವಾಗಿ ಬೇಕಾಗಿರುವ ನೀರಿನ ವ್ಯವಸ್ಥೆಯನ್ನೇ ಮಾಡಲಾಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಗುತ್ತಿಗೆದಾರರು ಕೇವಲ ಶೌಚಾಲಯ ಕಟ್ಟಿಸಲು ಮಾತ್ರವೇ ಉತ್ಸಾಹ ತೋರಿಸುತ್ತಿದ್ದಾರೆ. ಒಂದೇ ಪ್ರದೇಶದಲ್ಲಿ ಮೂರು ಶೌಚಾಲಯಗಳನ್ನು ಕಟ್ಟಿಸಲಾಗಿದೆ. ಆದರೆ ಇಲ್ಲಿ ನೀರಿನ ವ್ಯವಸ್ಥೆ ಇಲ್ಲದೇ ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿ ತೀವ್ರವಾಗಿ ಪರದಾಡುತ್ತಿದ್ದಾರೆ. ಗುತ್ತಿಗೆದಾರರು ಅವ್ಯವಹಾರ ಮಾಡುವ ಉದ್ದೇಶದಿಂದ ಕೇವಲ ಶೌಚಾಲಯ ಕಟ್ಟಲು ಮುಂದಾಗಿದ್ದಾರೆ ಎಂದು ಆರೋಪಿಸಿರುವ ಇಲ್ಲಿನ ನಾಗರಿಕರು ನಮಗೆ ಮೊದಲು ನೀರಿನ ವ್ಯವಸ್ಥೆ ಮಾಡಿಕೊಡಿ ಎಂದು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ವರದಿ: ಅರವಿಂದ ಮಲ್ಲಿಗೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧದ ಕದನ ಮುಂದುವರದಿದ್ದು ಇದೀಗ ನ್ಯಾಯಾಲಯದ ಮೆಟ್ಟಿಲೇರಿದ ರೂಪಾ ವಿರುದ್ಧ ರೋಹಿಣಿ ಸಿಂಧೂರಿ ಮಾನನಷ್ಟ ಮೊಕದ್ದಮೆ ಕೇಸ್ ಹಾಕಿದ್ದು ಸಾಮಾಜೀಕ ಜಾಲತಾಣದಲ್ಲಿ ಮತ್ತು ಮಾದ್ಯಮದಲ್ಲಿ ಸುಳ್ಳು ಆರೋಪದ ಮೂಲಕ ನನ್ನ ತೇಜೋವದೆ ಮಾಡಲಾಗಿದೆ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಮತ್ತು ಒಂದು ಕೋಟಿ ಹಣವನ್ನು ಪರಿಹಾರವಾಗಿ ಕೊಡಿಸಿಕೊಡಬೇಕು ಎಂದು ಪ್ರಕರಣ ದಾಖಲಿಸಿದ್ದಾರೆ. ರೋಹಿಣಿ ಸಿಂಧೂರಿ ಪರ ಹಾಜರಾದ ಹಿರಿಯ ವಕೀಲ ಸಿ.ವಿ.ನಾಗೇಶ್ ಅವರು ಆರೋಪಿ ಡಿ.ರೂಪಾ ದೂರುದಾರರ ವಿರುದ್ಧ ಕಪೋಲಕಲ್ಪಿತ ಆರೋಪ ಮಾಡಿದ್ದಾರೆ. ನ್ಯಾಯಾಧೀಶ ಬಿ.ಸಿ. ಚಂದ್ರಶೇಖರ ಅವರು ವಿಚಾರಣೆಯನ್ನು ಮಾ.3ಕ್ಕೆ ಮುಂದೂಡಿದರು. ಅಲ್ಲದೆ, ಐಎಎಸ್ ನಿಯಮಗಳಿಗೆ ವಿರುದ್ಧವಾಗಿ ಮಾಧ್ಯಮಗಳ ಮುಂದೆ ಬಹಿರಂಗವಾಗಿ ನನ್ನನ್ನು ಟೀಕೆ ಮಾಡಿದ್ದಾರೆ. ಇದು ನನಗೆ ಮಾತ್ರವಲ್ಲದೆ ಸರ್ಕಾರಕ್ಕೂ ಮುಜುಗುರ ಉಂಟು ಮಾಡಿದೆ. ಆದ್ದರಿಂದ, ನನಗಾಗಿರುವ ಮಾನನಷ್ಟಕ್ಕೆ ಒಂದು ಕೋಟಿ ರು. ಪರಿಹಾರವಾಗಿ ಕೊಡಿಸಿಕೊಡಬೇಕು. ರೂಪಾ ವಿರುದ್ಧ ಸೂಕ್ತ ದಂಡನೀಯ ಕ್ರಮ…
ಬೆಳಗಾವಿ : ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಮಾಡುತ್ತಿರುವ ಬಿಜೆಪಿಯು ಚುನಾವಣೆಗೆ ಮಾತ್ರ ಉಪಯೋಗಿಸಿಕೊಳ್ಳುತ್ತಿದೆ. ಕೋವಿಡ್ ಮತ್ತು ಪ್ರವಾಹದಂತಹ ಪರಿಸ್ಥಿತಿಯಲ್ಲಿ ಬಾರದ ಪ್ರಧಾನಿ ಮೋದಿ ಈಗ ಕರ್ನಾಟಕ್ಕೆ ಬರುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿಯಲ್ಲಿ ನಡೆಯಲಿರುವ ಪ್ರಜಾಧ್ವನಿ ರಾಲಿಯಲ್ಲಿ ಪಾಲ್ಗೊಳಲು ಆಗಮಿಸಿದ ಅವರು ಮಾದ್ಯಮಗಳೊಂದಿಗೆ ಮಾತನಾಡಿ ಬಿಜೆಪಿಗೆ ರಾಜ್ಯದ ಕಾಳಜಿ ಇಲ್ಲ ಕೇವಲ ಚುನಾವಣೆಗೋಸ್ಕರ ಕರ್ನಾಟಕ್ಕೆ ಬೇಟಿ ನೀಡುತ್ತಿರುವ ಪ್ರಧಾನಿ ಕೋವಿಡ್, ಪ್ರವಾಹದಂತಹ ಸಂಕಷ್ಟದ ಸಮಯದಲ್ಲಿ ಎಲ್ಲಿದ್ದರು ಎಂದು ಪ್ರಶ್ನಿಸಿದ್ದಾರೆ. 37 ಸಾವಿರ ಕೋಟಿ ಕರ್ನಾಟಕದ ತೆರಿಗೆ ಕೇಂದ್ರದ ಪಾಲಾದರೂ ಕರ್ನಾಟಕದ ಬಗ್ಗೆ ಯಾವುದೇ ಕಾಳಜಿ ಇಲ್ಲ ಸರಕಾರಿ ನೌಕರರ ಮುಷ್ಕರ ನಡೆಯುತ್ತಿದ್ದು ಇದರ ಕುರಿತು ಸರಕಾರಸ ಜೊತೆ ಚರ್ಚಿಸಲಿದ್ದೇವೆ. ಕರ್ನಾಟಕದಲ್ಲಿ ಕಾಂಗ್ರೆಸ ಗೆಲುವು ಖಚಿತ ಎಂದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು : ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮುಷ್ಕರಕ್ಕೆ ಮುಂದಾದ ಸರಕಾರಿ ನೌಕರರಿಗೆ ಖಡಕ್ ಎಚ್ಚರಿಕೆ ನೀಡಿರುವ ಸರಕಾರ ಪುರ್ವಾನುಮತಿ ಇಲ್ಲದೆ ಕಚೇರಿಗೆ ಗೈರುಹಾಜರಾಗುವಂತಿಲ್ಲ ಎಂದು ಸರಕಾರದ ವಿಶೇಷಾಧಿಕಾರಿ ಹಾಗೂ ಸಕ್ಷಮ ಪ್ರಾಧಿಕಾರಿ ಆದಿತ್ಯ ಆಮ್ಲನ್ ಬಿಸ್ವಾಸ್ ಈ ಸುತ್ತೋಲೆ ಹೊರಡಿಸಿದ್ದಾರೆ. ಸರಕಾರ ನೌಕರರು ಅನಿವಾರ್ಯ ಕಾರಣಗಳಿಂದ ಕಚೇರಿಗೆ ಹಾಜರಾಗದೆ ಇದ್ದಲ್ಲಿ ಪೂರ್ವಾನುಮತಿ ಪಡೆಯುವುದು ಕಡ್ಡಾಯ. ಹಾಗೊಂದು ವೇಳೆ ಸೂಚನೆ ನೀಡದೆ ಕೆಲಸಕ್ಕೆ ಗೈರಾದರೆ Dies Non ಎಂದು ಪರಿಗಣಿಸಿ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಇಬ್ಬರು ಮಹಿಳೆಯರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದಕ್ಕಾಗಿ ಟ್ರಾನ್ಸ್ ಮಹಿಳೆ ಇಸ್ಲಾ ಬ್ರೈಸನ್ಗೆ ನ್ಯಾಯಾಲಯ 8 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಈ ಸುದ್ದಿಯನ್ನು ದಿ ಗಾರ್ಡಿಯನ್ ವರದಿ ಮಾಡಿದೆ. 2016 ರಲ್ಲಿ ಕ್ಲೈಡ್ಬ್ಯಾಂಕ್ನಲ್ಲಿ ಮತ್ತು 2019 ರಲ್ಲಿ ಗ್ಲಾಸ್ಗೋದಲ್ಲಿ ಆಡಮ್ ಗ್ರಹಾಂ ಅವರು ಪೂರ್ಣ ಪುರುಷನಾಗಿದ್ದಾಗ ಇಬ್ಬರು ಮಹಿಳೆಯರ ಮೇಲೆ ಹಲ್ಲೆ ನಡೆಸಿದ್ದರು. ನಂತರ ದೂರುದಾರರು ಪೊಲೀಸರಿಗೆ ದೂರು ಸಲ್ಲಿಸಿದರು ಮತ್ತು ವಿಚಾರಣೆಯ ನಂತರ ನ್ಯಾಯಾಲಯವು ಇಸ್ಲಾಗೆ ಜೈಲು ಶಿಕ್ಷೆ ವಿಧಿಸಿತು. ಇಸ್ಲಾವನ್ನು ಆರಂಭದಲ್ಲಿ ಮಹಿಳೆಯರಿಗಾಗಿ ಕಾಂಟನ್ ವೇಲ್ ಜೈಲಿನಲ್ಲಿ ಇರಿಸಲಾಗಿತ್ತು. ತರುವಾಯ, ಅನೇಕರು ಇತರ ಮಹಿಳಾ ಕೈದಿಗಳ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್. ತೋಷಖಾನಾ ಪ್ರಕರಣದಲ್ಲಿ ಇಮ್ರಾನ್ ಖಾನ್ ವಿರುದ್ಧ ನ್ಯಾಯಾಲಯ ವಾರಂಟ್ ಜಾರಿ ಮಾಡಿದೆ. ಇನ್ನೆರಡು ಪ್ರಕರಣಗಳಲ್ಲಿ ನ್ಯಾಯಾಲಯ ಅವರಿಗೆ ಜಾಮೀನು ಮಂಜೂರು ಮಾಡಿದೆ. ನೂರಾರು ಸಂಖ್ಯೆಯಲ್ಲಿ ಇಮ್ರಾನ್ ಬೆಂಬಲಿಗರು ನ್ಯಾಯಾಲಯದ ಹೊರಗೆ ಜಮಾಯಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ವಾರಂಟ್ ಹೊರಡಿಸಿರುವ ನ್ಯಾಯಾಲಯ ವಿಚಾರಣೆಯನ್ನು ಮಾರ್ಚ್ 7ಕ್ಕೆ ಮುಂದೂಡಿದೆ. ಇಮ್ರಾನ್ ಅವರು ನ್ಯಾಯಾಲಯಕ್ಕೆ ಹಾಜರಾಗದೇ ಇದ್ದದ್ದು ಇದಕ್ಕೆ ಕಾರಣವಾಗಿತ್ತು. ಅವರು ಹಾಜರಾಗದ ಕಾರಣ ಈ ಹಿಂದೆ ಎರಡು ಬಾರಿ ಪ್ರಕರಣವನ್ನು ಮುಂದೂಡಲಾಗಿತ್ತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy