Subscribe to Updates
Get the latest creative news from FooBar about art, design and business.
- ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ
- ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ
- ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
- ಎಸ್.ಅಪ್ಪೇನಹಳ್ಳಿ: ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ನವಿಲು ನರ್ತನ; ಗ್ರಾಮಸ್ಥರಲ್ಲಿ ಕುತೂಹಲ
- ನಾಲ್ಕು ದಶಕಗಳಿಂದ ರಸ್ತೆ ಅಭಿವೃದ್ಧಿ ಕಾಣದ ಬೆಟ್ಟಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರಂಗನಾಥ್ ಚಾಲನೆ
- ಕಳ್ಳಂಬೆಳ್ಳ ಪೊಲೀಸರಿಂದ ರಕ್ಷಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ
- ಹರ್ತಿ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ
- ಸಚಿವ ಡಿ.ಸುಧಾಕರ್ ಪಾರ್ಥಿವ ಶರೀರಕ್ಕೆ ನಮನ: ಭಾವುಕರಾದ ಕೆ.ಎನ್.ರಾಜಣ್ಣ, ಕಂಬನಿ ಮಿಡಿದ ಜಿ.ಪರಮೇಶ್ವರ್
Author: admin
ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೇ ದಕ್ಷಿಣ ಭಾರತದಲ್ಲಿ ಕರ್ನಾಟಕ ನಂ.1 ಮಾಡುತ್ತೇವೆ. ಮುಂದಿನ 5 ವರ್ಷ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುತ್ತೇವೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಭರವಸೆ ನೀಡಿದ್ದಾರೆ. ಬಳ್ಳಾರಿ ಜಿಲ್ಲೆ ಸಂಡೂರಿನಲ್ಲಿ ನಡೆದ ಬಿಜೆಪಿ ಜನಸಂಕಲ್ಪಯಾತ್ರೆಯಲ್ಲಿ ಮಾತನಾಡಿದ ಅಮಿತ್ ಶಾ, ಸಂಡೂರಿನ ಕುಮಾರಸ್ವಾಮಿ ದೇವರಿಗೆ ನನ್ನ ನಮಸ್ಕಾರಗಳು . ಕಾಂಗ್ರೆಸ್ ಜೆಡಿಎಸ್ ಎರಡೂ ಪರಿವಾರವಾದಿ ಪಕ್ಷಗಳು. ಪರಿವಾರವಾದಿ ಪಕ್ಷಗಳಿಂದ ಬಡವರ ಕಲ್ಯಾಣವಾಗುವುದಿಲ್ಲ. ಸಿದ್ಧರಾಮಯ್ಯ ಅವಧಿಯಲ್ಲಿ ಕರ್ನಾಟಕ ಕಾಂಗ್ರೆಸ್ ನ ಹೈಕಮಾಂಡ್ ಗೆ ಎಟಿಎಂ ಆಗಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೇ ಕರ್ನಾಟಕ ದೆಹಲಿಯ ಎಟಿಎಂ ಆಗುತ್ತದೆ ಎಂದು ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ ಪಿಎಫ್ ಐ ಸಂಘಟನೆ ನಿಷೇಧ ಮಾಡಿದರು. ಕಾಂಗ್ರೆಸ್ ಅವಧಿಯಲ್ಲಿ ಪಿಎಫ್ ಐ ಮೇಲಿನ ಕೇಸ್ ಗಳನ್ನ ಹಿಂಪಡೆದರು. ಹಲವು ಬಾರಿ ಪಾಕ್ ನಿಂದ ದಾಳಿಯಾದರೂ ಯುಪಿಎ ಮೌನ ವಹಿಸಿತ್ತು. ಆದರೆ ಮೋದಿ ಸರ್ಕಾರ ಬಂದ ಮೇಳೆ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದೇವೆ . ವೈರಿ…
ನಕಲಿ ಪ್ರಮಾಣಪತ್ರಗಳನ್ನು ತೋರಿಸಿ ಲೈಂಗಿಕ ಉದ್ದೀಪನ ಮದ್ದುಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಎಸ್ಟಿಎಫ್ ತಂಡ ಬಂಧಿಸಿದೆ. ಉತ್ತರ ಪ್ರದೇಶದ ಪ್ಯಾರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ಈ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮೊರಾದಾಬಾದ್ನ ಧರ್ಮ ಸಿಂಗ್, ಧ್ಯಾನ್ ಸಿಂಗ್, ವೀರ್ ಸಿಂಗ್ ಮತ್ತು ಸಂಭಾಲ್ನ ಲಾಲ್ ಸಿಂಗ್ ಅಲಿಯಾಸ್ ಗುಲಾಬ್ ಸಿಂಗ್ ಅವರನ್ನು ಬಂಧಿಸಲಾಗಿದೆ. ಪೊಲೀಸರು ಅವರಿಂದ ನಾಲ್ಕು ಮೊಬೈಲ್ ಫೋನ್, ನಗದು ಪುಸ್ತಕ, ಎರಡು ನಕಲಿ ಪ್ರಮಾಣಪತ್ರಗಳು, ಆಯುರ್ವೇದ ಮಾತ್ರೆ ತುಂಬಿದ 22 ಸಣ್ಣ ಬಾಟಲಿಗಳು ಮತ್ತು 2,640 ರೂಗಳನ್ನು ವಶಪಡಿಸಿಕೊಳ್ಳಲಾಗಿದೆ. ನಕಲಿ ಕಾಮೋತ್ತೇಜಕ ಔಷಧಗಳನ್ನು ಮಾರಾಟ ಮಾಡುವ ಹೆಚ್ಚಿನ ಗ್ಯಾಂಗ್ಗಳ ಪತ್ತೆಗೆ ತಂಡವನ್ನು ರಚಿಸಲಾಗಿದೆ ಎಂದು ಎಸ್ಟಿಎಫ್ ಹೆಚ್ಚುವರಿ ಎಸ್ಪಿ ವಿಶಾಲ್ ವಿಕ್ರಮ್ ಹೇಳಿದ್ದಾರೆ. ಅಕ್ರಮ ಲೈಂಗಿಕ ಉತ್ತೇಜಕಗಳನ್ನು ಮಾರಾಟ ಮಾಡುವ ಗ್ಯಾಂಗ್ ಬಗ್ಗೆ ತನಿಖಾ ತಂಡಕ್ಕೆ ಸುಳಿವು ಸಿಕ್ಕಿದೆ. “ನಾವು ಅವರನ್ನು ಬಲೆಯ ಮೂಲಕ ಹಿಡಿದೆವು. ಅಪರಾಧಿಗಳು ಸೈಬರ್ ಕೆಫೆಯ ಮಾಲೀಕರಿಗೆ 750 ರೂಪಾಯಿ…
ಉಡುಪಿ ಜಿಲ್ಲೆಯ ಮಣಿಪಾಲದ ಹೆರ್ಗ ಗ್ರಾಮದ ಸಮೀಪ ಅನೈತಿಕ ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್ವೊಂದಕ್ಕೆ ಪೊಲೀಸರು ದಾಳಿ ನಡೆಸಿ ಇಬ್ಬರು ಮಹಿಳೆ ಸೇರಿ ಮೂವರು ವಶಕ್ಕೆ ಪಡೆದ ಘಟನೆ ನಡೆದಿದೆ. ಲಾಡ್ಜ್ನ ಮ್ಯಾನೇಜರ್ ಸಂಪತ್’ಕುಮಾರ್ ಮತ್ತು ರೂಮ್’ಬಾಯ್ ದಿನೇಶ್ ಲಾಡ್ಜ್ನಲ್ಲಿ ಅಕ್ರಮ ಚಟುವಟಿಕೆ ನಡೆಸುತ್ತಿದ್ದ ಆರೋಪ ಹೊತ್ತಿದ್ದಾರೆ. ಇನ್ನು ಎರಡು ಪ್ರತ್ಯೇಕ ಕೊಠಡಿಗಳಲ್ಲಿದ್ದ ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳ ಬಳಿ ಇದ್ದ ಬೆಲೆಬಾಳುವ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಳಗಾವಿ ಜಿಲ್ಲೆಯ ಅಥಣಿ ಮತಕ್ಷೇತ್ರಕ್ಕೆ ಪೋಲಿಸ್ ಅಧಿಕಾರಿಯೊಬ್ಬರು ರಾಜಕಾರಣದ ಅಖಾಡಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಅಥಣಿಯಲ್ಲಿ ಪಿಎಸ್ಐ ಆಗಿದ್ದ ಸಂದರ್ಭದಲ್ಲಿ ಖಡಕ್ ಪೊಲೀಸ್ ಅಧಿಕಾರಿ ಎಂದೇ ಗುರುತಿಸಿಕೊಂಡಿದ್ದು, ಸದ್ಯ ವಿಜಯಪುರ ಪೊಲೀಸ್ ಠಾಣೆಯಲ್ಲಿ ಸಿಪಿಐ ಆಗಿ ಕರ್ತವ್ಯ ನಿರ್ವಹಿಸಿದ ಬಸವರಾಜ ಬಿಸನಕೊಪ್ಪ ಈಗ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಹಿಂದೆಯೇ ಬಸವರಾಜ ತಮ್ಮ ಪೊಲೀಸ್ ವೃತ್ತಿ ತೊರೆದು ರಾಜಕೀಯಕ್ಕೆ ಬರುತ್ತಾರೆ ಎಂಬ ಮಾತು ಕೇಳಿಬಂದಿತ್ತು. ಸದ್ಯ ಅಥಣಿ ಮತಕ್ಷೇತ್ರದಿಂದ ಸ್ಪರ್ಧಿಸುವ ಕುರಿತು ನಿರ್ಧರಿಸಿರುವ ಅವರು ಈಗಾಗಲೇ ತಮ್ಮ ಸಿಪಿಐ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ. ಮಾಜಿ ಡಿಸಿಎಂ ಲಕ್ಷಣ ಸವದಿ, ಶಾಸಕ ಮಹೇಶ್ ಕುಮಠಳ್ಳಿ ಅವರಂತಹ ಘಟಾನುಘಟಿ ರಾಜಕಾರಣಿಗಳನ್ನು ಹೊಂದಿರುವ ಅಥಣಿ ಕ್ಷೇತ್ರಕ್ಕೆ ಸದ್ಯ ಖಡಕ್ ಪೊಲೀಸ್ ಅಧಿಕಾರಿ ಅಥಣಿಯ ಸಿಂಗಂ ಎಂದೇ ಖ್ಯಾತಿ ಹೊಂದಿರುವ ಬಸವರಾಜ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದು ಚುನಾವಣೆಯ ಕಾವು ರಂಗೇರುವಂತೆ ಮಾಡಿದೆ. ಇನ್ನೂ ಬಸವರಾಜ ಬಿಸನಕೊಪ್ಪ ಮೂಲತಃ ರಾಯಬಾಗ ತಾಲೂಕಿನ ಸವಸುದ್ದಿ ಗ್ರಾಮದವರಾಗಿದ್ದು,…
ಡಾ.ಬಿ.ಆರ್. ಅಂಬೇಡ್ಕರ್ ಯಾವುದೇ ಒಂದು ಸಮುದಾಯಕ್ಕೆ ಸಂವಿಧಾನ ರಚನೆ ಮಾಡಿಲ್ಲ. ಎಲ್ಲಾ ಸಮುದಾಯದವರ ಏಳಿಗೆಗೆ ದುಡಿದ ಮಹಾನಾಯಕ, ಸಮಾನತೆಯ ಸಂದೇಶದ ಸಂವಿಧಾನ ನಿರ್ಮಿಸಿದ ಕಾರಣಕ್ಕೆ ಡಾ.ಅಂಬೇಡ್ಕರ್ ಇಡೀ ಜಾಗತಿಕ ಮಟ್ಟದಲ್ಲಿ ವಿಶೇಷ ಗೌರವಕ್ಕೆ ಪಾತ್ರರಾಗಿದ್ದಾರೆ ಎಂದು ಮಾಜಿ ಸಂಸದರು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ತಿಳಿಸಿದರು. ತಾಲ್ಲೂಕಿನ ಕಳಸೂರು ಗ್ರಾಮದಲ್ಲಿ ಗುರುವಾರ ರಂದು ಡಾ.ಬಿ.ಆರ್. ಅಂಬೇಡ್ಕರ್ ಯುವಕ ಸಂಘದಿಂದ ಹಮ್ಮಿಕೊಂಡಿದ್ದ ಅಂಬೇಡ್ಕರ್ ಪುತ್ಥಳಿ ಹಾಗೂ ಭವನ ಅನಾವರಣಗೊಳಿಸಿ ಮಾತನಾಡಿದರು. ದೇಶದಲ್ಲಿ ಪ್ರತಿಯೊಬ್ಬರಿಗೂ ಸಮಾನತೆಯ ಬದುಕು ಸಾಗಿಸುವ ನಿಟ್ಟಿನಲ್ಲಿ ಅಂಬೇಡ್ಕರ್ ಅವರು ಸಂವಿಧಾನವನ್ನು ರಚನೆ ಮಾಡಿದ್ದಾರೆ. ಅವರು ಯಾವುದೇ ಒಂದು ಸಮುದಾಯಕ್ಕೆ ಸಂವಿಧಾನ ರಚನೆ ಮಾಡಿಲ್ಲ. ಎಲ್ಲಾ ಸಮುದಾಯದವರು ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಹಾಗೂ ರಾಜಕೀಯವಾಗಿ ಮೀಸಲಾತಿಯಲ್ಲಿ ಅನುಕೂಲ ಕಲ್ಪಿಸುವಂತೆ ರಚನೆ ಮಾಡಿದ್ದಾರೆ ಡಾ ಬಿ ಆರ್ ಅಂಬೇಡ್ಕರ್ ಮಹಾನ್ ವ್ಯಕ್ತಿ ಎಂದರು. ಸಂವಿಧಾನಾತ್ಮಕ ಮಾರ್ಗಗಳ ಹಾದಿಯಲ್ಲಿ ಹೆಜ್ಜೆ ಹಾಕಿದಾಗಲೇ ಸಾಮಾಜಿಕ ಮತ್ತು ಆರ್ಥಿಕ ಧ್ಯೇಯಗಳ ಸಾಧನೆ ಸಾಧ್ಯ’ ಎನ್ನುವಂತಹ ಅನೇಕ ಮಹತ್ತರ ಸಮಾಜಮುಖಿ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆಶಯ ಎಲ್ಲಾರಿಗೂ ಎಲ್ಲೆಡೆ ಶಿಕ್ಷಣ ಎಂಬುದು, ಅದರ ಅನ್ವಯ ಕೆಲಸದ ಜೊತೆ ಶಿಕ್ಷಣ ಪಡೆಯಬೇಕೆಂಬ ಆಸೆಯಿರುವ ವ್ಯಕ್ತಿಗಳಿಗೆ ಅನುಕೂಲಕರವಾಗುವಂತೆ ಕೆಲಸದ ನಡುವೆ ಕಾಲೇಜಿಗೆ ಹಾಜರಾಗಲು ಸಾಧ್ಯವಾಗದಿರುವವರು ಕರಾಮುವಿ ಮೂಲಕ ಪದವಿಗಳನ್ನು ಪಡೆದುಕೊಳ್ಳಬಹುದು. 18 ವರ್ಷದಿಂದ 80 ವರ್ಷ ವಯೋಮಾನದ ವರಗಿನ 10+2 (ಪದವಿ ಪೂರ್ವ)., 10+2+3 (ಸ್ನಾತಕ ಪದವಿ) ವಿದ್ಯಾರ್ಹತೆ ಹೊಂದಿರುವ ಎಲ್ಲಾ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಮಾಡಿಕೊಂಡು ಕರಾಮುವಿಯಲ್ಲಿ ಪ್ರವೇಶಾತಿ ಪಡೆಯಬಹುದು. ಕರಾಮುವಿಯು ಪ್ರಸಕ್ತ 2022-23ನೇ (ಜನವರಿ ಆವೃತ್ತಿ) ಶೈಕ್ಷಣಿಕ ಸಾಲಿನ ಪ್ರವೇಶಾತಿ ಆರಂಭವಾಗಿದ್ದು, ಸ್ನಾತಕ/ ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ/ಬಿ.ಕಾಂ/ಬಿ.ಬಿ.ಎ/ಬಿ.ಸಿ.ಎ/ಬಿ.ಎಲ್.ಐ.ಎಸ್ಸಿ ಹಾಗೂ ಬಿ.ಎಸ್ಸಿ(General, IT, Home Science)., ಎಂ.ಎ/ಎಂ.ಸಿ.ಜೆ/ಎಂ.ಕಾಂ(Dual Specialization)., ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ., ಎಂ.ಬಿ.ಎ(AICTE Approved)., ಪಿ.ಜಿ. ಡಿಪ್ಲೋಮಾ., ಡಿಪ್ಲೋಮಾ., ಸರ್ಟಿಫಿಕೇಟ್ ಪ್ರೋಗ್ರಾಮ್ ಗಳಿಗೆ ಪ್ರವೇಶಾತಿ ಆರಂಭಗೊಂಡಿದೆ. “ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಾತ್ರ ರಾಜ್ಯದಲ್ಲಿ ದೂರ ಶಿಕ್ಷಣ ನೀಡುವ ಏಕ ಮಾತ್ರ ವಿಶ್ವವಿದ್ಯಾನಿಲಯವಾಗಿರುತ್ತದೆ”. ಕೆಎಸ್ಒಯು ವಿಶ್ವವಿದ್ಯಾಲಯ ಧನಸಹಾಯ ಅಯೋಗದ…
ತಿಪಟೂರು: ತಾಲೂಕಿನ ಕಸಬಾ ಹೋಬಳಿಯ ಹೊಸಹಳ್ಳಿಯ ಶ್ರೀ ಬೀರಲಿಂಗೇಶ್ವರ ಸ್ವಾಮಿಯವರ ನೂತನ ದೇವಾಲಯ ಪ್ರವೇಶ ಮತ್ತು ಗೋಪುರದ ಕಳಶ ಪ್ರತಿಷ್ಠಾಪನಾ ಮಹೋತ್ಸವ ಹಾಗೂ ಧಾರ್ಮಿಕ ಸಮಾರಂಭ ಫೆಬ್ರವರಿ 28ರಿಂದ ಮಾರ್ಚ್ 1ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಪಂ ಸದಸ್ಯ ಹೆಚ್.ಎಸ್. ವಿಶ್ವನಾಥ್ ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಕರೆದಿದ್ದ, ಪತ್ರಿಕಾಗೋಷ್ಠಿಯಲ್ಲಿ ಕುರಿತು ಮಾತನಾಡಿದ ವಿಶ್ವನಾಥ್, ಕೆರಗೋಡಿ-ರಂಗಪುರ ಸುಕ್ಷೇತ್ರಾ ಧ್ಯಕ್ಷರಾದ ಶ್ರೀ ಗುರು ಪರದೇಶಿಕೇಂದ್ರ ಮಹಾಸ್ವಾಮೀಜಿರವರು, ಕನಕ ಗುರು ಪೀಠ ಕಾಗಿನೆಲೆ ಶ್ರೀ ಗುರು ರೇವಣಸಿದ್ದೇಶ್ವರ ಸಿಂಹಾಸನ ನಿರಂಜನಂದ ಪುರಿ ಮಹಾಸ್ವಾಮೀಜಿಯವರು ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆಯವರ ಕೃಪಾಶೀರ್ವಾದದೊಂದಿಗೆ ಕಾರ್ಯಕ್ರಮ ನೆರವೇರಲಿದೆ ಎಂದರು. ಧಾರ್ಮಿಕ ಸಮಾರಂಭದಲ್ಲಿ ಸಚಿವರು, ಮಾಜಿ ಸಚಿವರು, ಶಾಸಕರು ಚುನಾಯಿತ ಜನಪ್ರತಿನಿಧಿಗಳು, ಜನಾಂಗದ ಮುಖಂಡರುಗಳು ವಿವಿಧ ಪಕ್ಷದ ಮುಖಂಡರುಗಳು,ನೌಕರವರ್ಗ ಸೇರಿದಂತೆ ಗ್ರಾಮಸ್ಥರು ಹಾಗೂ ಸುತ್ತಮುತ್ತಲ ಗ್ರಾಮಸ್ಥರು ಭಾಗವಹಿಸಲಿದ್ದು, ಮೂರು ದಿನಗಳ ಕಾಲ ದಾಸೋಹದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ದೇವಾಲಯದ ಗೌರವಾಧ್ಯಕ್ಷರಾದ ನಿವೃತ್ತ ಪ್ರಾಂಶುಪಾಲ ಹೆಚ್.ಎಸ್.…
ಧಾರವಾಡ : ದಿನನಿತ್ಯದ ಆಹಾರದಲ್ಲಿ ಸಂಪೂರ್ಣ ಪೋಷಕಾಂಶಗಳು ಲಭ್ಯವಾಗದೇ ಇರುವ ಕಾರಣದಿಂದಾಗಿ, ಹೆಚ್ಚಾಗಿ ಮಹಿಳೆಯರು ಹಾಗೂ ಮಕ್ಕಳು ಅಪೌಷ್ಠಿಕತೆಗೆ ಬಲಿಯಾಗುತ್ತಾರೆ. ಈ ನಿಟ್ಟಿನಲ್ಲಿ ಜನಸಾಮಾನ್ಯರಲ್ಲಿನ ಅಪೌಷ್ಠಿಕತೆ ಹೋಗಲಾಡಿಸಿ, ಆರೋಗ್ಯ ವೃದ್ಧಿಸುವ ಉದ್ದೇಶದಿಂದ ಸಾರ್ವಜನಿಕ ವಿತರಣಾ ಪದ್ಧತಿಯ ಅನ್ನಭಾಗ್ಯ ಯೋಜನೆಯಡಿ ವಿತರಣೆ ಮಾಡಲಾಗುವ ಪ್ರತಿ 50 ಕೆ.ಜಿ. ಅಕ್ಕಿಯ ಚೀಲದಲ್ಲಿ ಅರ್ಧ ಕೆ.ಜಿ.ಯಷ್ಟು ಪೋಷಕಾಂಶ (ವಿಟಾಮಿನ್ ಎ ಮತ್ತು ಡಿ, ಐರನ್, ಫೋಲಿಕ್ ಆಸಿಡ್, ಬಿಕಾಂಪ್ಲೇಕ್ಸ, ಜಿಂಕ್ ಹಾಗೂ ಐಯೋಡಿನ್) ಭರಿತ ಸಾರವರ್ಧಿತ ಅಕ್ಕಿಯನ್ನು ಬೆರೆಸಿ ನ್ಯಾಯಬೆಲೆ ಅಂಗಡಿಯಲ್ಲಿ ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದೆ. ಸಾರವರ್ಧಿತಗೊಳಿಸಿರುವ (ಪೋರ್ಟಿಫೈಡ್) ಅಕ್ಕಿಯಲ್ಲಿ ಕೆಲವೊಂದು ಅಕ್ಕಿಯ ಕಾಳುಗಳು ಹೊಳಪಿನಿಂದ ನೋಡಲು ಪ್ಲಾಸ್ಟಿಕ್ ರೀತಿಯಲ್ಲಿ ಕಾಣಿಸುತ್ತಿದ್ದು, ಸಾರ್ವಜನಿಕರು ಆತಂಕಗೊಳ್ಳಬಾರದು. ವಿತರಣೆ ಮಾಡಲಾಗುತ್ತಿರುವ ಸಾರವರ್ಧಿತ ಅಕ್ಕಿಯನ್ನು ಉಪಯೋಗಿಸಿ, ಆರೋಗ್ಯವಂತರಾಗಲು ತಿಳಿಸಿದ್ದಾರೆ. ಸಾರ್ವಜನಿಕ ವಿತರಣಾ ಪದ್ಧತಿಯಡಿ ಬಿಡುಗಡೆ ಮಾಡುವ ಅಕ್ಕಿಯನ್ನು ಸ್ವಂತಕ್ಕೆ ಉಪಯೋಗಿಸತಕ್ಕದ್ದು, ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವುದು ಕಂಡುಬಂದಲ್ಲಿ ಅಂತಹ ಕುಟುಂಬಕ್ಕೆ ನೀಡಿದ ಬಿಪಿಎಲ್ ಪಡಿತರ ಚೀಟಿಯನ್ನು ರದ್ದುಪಡಿಸಲಾಗುವುದೆಂದು ಎಂದು ಆಹಾರ, ನಾಗರಿಕ…
ಹಿರಿಯ ನಟ ಅನಂತ್ ನಾಗ್ ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂದು ನಿನ್ನೆ ಸುದ್ದಿ ಹಬ್ಬಿತ್ತು. ಆದರೆ ಈ ಸುದ್ದಿಗೆ ಸ್ವತಃ ನಟ ಆನಂತ್ ನಾಗ್ ಅವರೇ ತೆರೆ ಎಳೆದಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿ ಸ್ಪಷ್ಟನೆ ನೀಡಿರುವ ನಟ ಅನಂತ್ ನಾಗ್, ನಾನು ಯಾವುದೇ ರಾಜಕೀಯ ಪಕ್ಷ ಸೇರಲ್ಲ, ಬಿಜೆಪಿಯನ್ನೂ ಸೇರಲ್ಲ, ಯಾವುದೇ ಪಕ್ಷಕ್ಕೆ ಹೋಗಲ್ಲ. ರಾಜಕೀಯದಲ್ಲಿ ಸಕ್ರಿಯವಾಗಿರಲು ಆಸಕ್ತಿ ಇಲ್ಲ ಎಂದಿದ್ದಾರೆ. ನಿನ್ನೆ ಸಂಜೆ ಅನಂತ್ ನಾಗ್ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿತ್ತು. ನಂತರ ಬಿಜೆಪಿ ಸೇರ್ಪಡೆ ಕಾರ್ಯಕ್ರಮ ಮುಂದೂಡಿಕೆಯಾಗಿದೆ ಎಂದು ವರದಿಯಾಗಿತ್ತು. ಇದೀಗ ಇದೆಲ್ಲದಕ್ಕೂ ಅನಂತ್ ನಾಗ್ ಅವರೇ ತೆರೆ ಎಳೆದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ನಮ್ಮ ಸಣ್ಣ ಯಶಸ್ಸಿನಿಂದ ಹೆಚ್ಚು ಸಂತೋಷವಾಗಿರುವವರು ಪ್ರೀತಿಸುವವರು ಜಗತ್ತಿನಲ್ಲಿ ತಾಯಿ ಒಬ್ಬರೆ. ಭಾರತೀಯ ಮಹಿಳಾ ರಾಷ್ಟ್ರೀಯ ಫುಟ್ಬಾಲ್ ತಂಡದ ಸ್ಟ್ರೈಕರ್ ಸಂಧ್ಯಾ ರಂಗನಾಥನ್ ಅವರು ತಮ್ಮ ತಾಯಿಯ ಬಗ್ಗೆ ಪೋಸ್ಟ್ ಮಾಡಿರುವುದು ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆಯುತ್ತಿದೆ. ಸಂಧ್ಯಾ ರಂಗನಾಥನ್ ಅವರು ಟ್ವಿಟ್ಟರ್ ನಲ್ಲಿ ಹೃದಯಸ್ಪರ್ಶಿ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಸಂಧ್ಯಾ ತನ್ನ ತಾಯಿಯೊಂದಿಗೆ ಪೋಸ್ ನೀಡುತ್ತಿರುವ ಚಿತ್ರವನ್ನು ಲಗತ್ತಿಸಲಾಗಿದೆ. ಶೀರ್ಷಿಕೆಯಲ್ಲಿ, ಸಂಧ್ಯಾ ತನ್ನ ತಾಯಿಯನ್ನು ಹೀರೋ ಎಂದು ಬಣ್ಣಿಸಿದ್ದಾರೆ. ಇಂದು ನಾನು ಭಾರತೀಯ ಮಹಿಳಾ ರಾಷ್ಟ್ರೀಯ ಫುಟ್ಬಾಲ್ ತಂಡದ ಸ್ಟ್ರೈಕರ್ ಆಗಲು ನನ್ನ ತಾಯಿಯೇ ಕಾರಣ. ಇಬ್ಬರು ಹೆಣ್ಣುಮಕ್ಕಳ ಒಂಟಿ ತಾಯಿಯಾಗುವುದು ಎಂದಿಗೂ ಸುಲಭವಲ್ಲ. ಆದರೆ ಅವರು ನಮ್ಮ ಜೀವನವನ್ನು ಅತ್ಯುತ್ತಮವಾಗಿಸಲು ಶ್ರಮಿಸಿದರು. ನನ್ನ ಬೆಂಬಲದ ಪ್ರಬಲ ಮೂಲ. ಕೊನೆಗೂ ನಾನು ದೇಶಕ್ಕಾಗಿ ಆಡುವುದನ್ನು ನೋಡುವ ಅದೃಷ್ಟ ಅಮ್ಮನಿಗೆ ಸಿಕ್ಕಿತು. ಅದರಲ್ಲಿ ಬಹಳ ಸಂತೋಷ ಮತ್ತು ಹೆಮ್ಮೆ ಇದೆ. ನನ್ನ ತಾಯಿಯೇ ನನ್ನ ಹೀರೋ’ ಎಂದು ಸಂಧ್ಯಾ ಟ್ವೀಟ್…