Subscribe to Updates
Get the latest creative news from FooBar about art, design and business.
- ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ
- ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ
- ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
- ಎಸ್.ಅಪ್ಪೇನಹಳ್ಳಿ: ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ನವಿಲು ನರ್ತನ; ಗ್ರಾಮಸ್ಥರಲ್ಲಿ ಕುತೂಹಲ
- ನಾಲ್ಕು ದಶಕಗಳಿಂದ ರಸ್ತೆ ಅಭಿವೃದ್ಧಿ ಕಾಣದ ಬೆಟ್ಟಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರಂಗನಾಥ್ ಚಾಲನೆ
- ಕಳ್ಳಂಬೆಳ್ಳ ಪೊಲೀಸರಿಂದ ರಕ್ಷಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ
- ಹರ್ತಿ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ
- ಸಚಿವ ಡಿ.ಸುಧಾಕರ್ ಪಾರ್ಥಿವ ಶರೀರಕ್ಕೆ ನಮನ: ಭಾವುಕರಾದ ಕೆ.ಎನ್.ರಾಜಣ್ಣ, ಕಂಬನಿ ಮಿಡಿದ ಜಿ.ಪರಮೇಶ್ವರ್
Author: admin
ದಕ್ಷಿಣಕನ್ನಡ: ಕಾಡಾನೆಯ ದಾಳಿಗೆ ದಕ್ಷಿಣ ಕನ್ನಡ ಜಿಲ್ಲೆ ಬೆಚ್ಚಿ ಬಿದ್ದ ಘಟನೆ ಸೋಮವಾರ ಬೆಳ್ಳಂ ಬೆಳಗ್ಗೆ ನಡೆದಿದ್ದು, ಯುವತಿ ಸೇರಿದಂತೆ ಇಬ್ಬರು ಕಾಡಾನೆಗೆ ಬಲಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರಂಜಿತಾ (21) ಹಾಗೂ ರಮೇಶ್ ರೈ ನೈಲ (55) ಎಂಬ ಇಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಮೃತ ಯುವತಿ ರಂಜಿತಾ ಹಾಲು ಸೊಸೈಟಿಯಲ್ಲಿ ಉದ್ಯೋಗಿಯಾಗಿದ್ದಳು ಬೆಳಗ್ಗೆ ಸೊಸೈಟಿಗೆ ತೆರಳುವ ವೇಳೆ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ಆಕೆಯ ಕಿರುಚಾಟ ಕೇಳಿ ರಕ್ಷಣೆಗಾಗಿ ಸ್ಥಳಕ್ಕೆ ಬಂದ ರಮೇಶ್ ಅವರ ಮೇಲೆಯೂ ಕಾಡಾನೆ ದಾಳಿ ನಡೆಸಿದೆ. ಕಾಡಾನೆಯ ದಾಳಿಗೆ ರಮೇಶ್ ಸ್ಥಳದಲ್ಲೇ ಸಾವನ್ನಪ್ಪಿದರೆ, ರಂಜಿತಾ ಆಸ್ಪತ್ರೆಗೆ ಸಾಗಿಸುತ್ತಿದ್ದ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಈ ಭಾಗದಲ್ಲಿ ಹಲವು ತಿಂಗಳುಗಳಿಂದ ಕಾಡಾನೆ ಓಡಾಡವಿದ್ದು, ಈ ಬಗ್ಗೆ ಅರಣ್ಯ ಇಲಾಖೆಯ ತೀವ್ರ ನಿರ್ಲಕ್ಷ್ಯದಿಂದಾಗಿ ಇದೀಗ ಎರಡು ಅಮಾಯಕ ಜೀವ ಬಲಿಯಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…
ರಿಲಯನ್ಸ್ ಇಂಡಸ್ಟ್ರೀಸ್ ಎಂಡಿ ಮುಖೇಶ್ ಅಂಬಾನಿ ಮತ್ತು ಮಗ ಆಕಾಶ್ ಅಂಬಾನಿ ಶಿವರಾತ್ರಿಯ ಸಂದರ್ಭದಲ್ಲಿ ಸೋಮನಾಥ ದೇವಾಲಯಕ್ಕೆ 1.51 ಕೋಟಿ ದೇಣಿಗೆ ನೀಡಿದ್ದಾರೆ. ಇಬ್ಬರೂ ಇಂದು ಬೆಳಗ್ಗೆ ಗುಜರಾತ್ನ ಪ್ರಭಾಸ್ ಪಟಾನ್ನಲ್ಲಿರುವ ಸೋಮನಾಥ ದೇವಾಲಯವನ್ನು ತಲುಪಿದರು. ದೇವಸ್ಥಾನಕ್ಕೆ ಆಗಮಿಸಿದ ಅಂಬಾನಿಯವರನ್ನು ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಪಿ.ಕೆ.ಲಹರಿ ಮತ್ತು ಕಾರ್ಯದರ್ಶಿ ಯೋಗೇಂದ್ರ ದೇಸಾಯಿ ಬರಮಾಡಿಕೊಂಡರು. ದೇವಸ್ಥಾನಕ್ಕೆ ಆಗಮಿಸಿದ ಮುಖೇಶ್ ಅಂಬಾನಿ ಮತ್ತು ಅವರ ಪುತ್ರನನ್ನು ದೇವಾಲಯದ ಅರ್ಚಕರು ಸನ್ಮಾನಿಸಿ ಶ್ರೀಗಂಧ ಮತ್ತು ರೇಷ್ಮೆಯನ್ನು ಅರ್ಪಿಸಿದರು. ನಂತರ ದೇವಸ್ಥಾನದ ಅಧಿಕಾರಿಗಳಿಗೆ 1.51 ಕೋಟಿ ದೇಣಿಗೆ ಹಸ್ತಾಂತರಿಸಲಾಯಿತು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಸೋನಿಯಾ ಗಾಂಧಿ ಅವರನ್ನು ಉಳಿಸಿಕೊಳ್ಳಲು ಕಾರ್ಯಕಾರಿ ಸಮಿತಿಯ ಸಂಯೋಜನೆಯನ್ನು ಬದಲಾಯಿಸಲಾಗುವುದು. ಕಾರ್ಯಕಾರಿ ಸಮಿತಿಯ ರಚನೆಯು ಅಧ್ಯಕ್ಷ ಮತ್ತು 23 ಸದಸ್ಯರಿಂದ ಅಧ್ಯಕ್ಷ ಮತ್ತು 28 ಸದಸ್ಯರಿಗೆ ಬದಲಾಗಲಿದೆ. ಹೊಸ ಸಂಯೋಜನೆಯು ಕಾಂಗ್ರೆಸ್ ಅಧ್ಯಕ್ಷರು ಮತ್ತು ಮಾಜಿ ರಾಷ್ಟ್ರಪತಿ, ಸಂಸದೀಯ ಪಕ್ಷದ ಅಧ್ಯಕ್ಷರು, ಮಾಜಿ ಪ್ರಧಾನಿ, ಮಾಜಿ ಕಾಂಗ್ರೆಸ್ ಅಧ್ಯಕ್ಷರು, ಲೋಕಸಭೆ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಸೇರಿದಂತೆ 23 ಸದಸ್ಯರನ್ನು ಒಳಗೊಂಡಿರುತ್ತದೆ. ಇದೇ ವೇಳೆ ಎ.ಐ.ಸಿ.ಯ ಕಾರ್ಯಕಾರಿ ಸಮಿತಿ ಚುನಾಯಿತ ಸದಸ್ಯರ ಸಂಖ್ಯೆ 12 ಉಳಿಯುತ್ತದೆ. 11 ಸದಸ್ಯರನ್ನು ಕಾಂಗ್ರೆಸ್ ಅಧ್ಯಕ್ಷರು ನಾಮನಿರ್ದೇಶನ ಮಾಡುತ್ತಾರೆ. ಕಾಂಗ್ರೆಸ್ ಅಧ್ಯಕ್ಷ, ಮಾಜಿ ಅಧ್ಯಕ್ಷ, ಸಂಸದೀಯ ಪಕ್ಷದ ಅಧ್ಯಕ್ಷ, ಮಾಜಿ ಪ್ರಧಾನಿ, ಲೋಕಸಭೆ ಮತ್ತು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಸ್ಥಾನಗಳನ್ನು ಹೊಂದಿರುವವರು ನೇರವಾಗಿ ಕಾರ್ಯಕಾರಿ ಸಮಿತಿಯನ್ನು ತಲುಪುತ್ತಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತಮಿಳುನಾಡಿನ ಕೊಡೈಕೆನಾಲ್ನಲ್ಲಿ ಇದು ಪಕ್ಷಿಗಳಿಗೆ ಹಬ್ಬದ ಸಮಯ. ಜನಪ್ರಿಯ ಪ್ರವಾಸಿ ತಾಣವಾಗಿರುವ ಬೆಟ್ಟಗಳಿಗೆ ಈಗ ಪಕ್ಷಿಗಳು ಬಣ್ಣ ತುಂಬುತ್ತಿವೆ. ಕೋವಿಡ್ ಅವಧಿಯ ನಂತರ ಪಕ್ಷಿಗಳ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗಿದೆ ಎಂದು ಪಕ್ಷಿ ವೀಕ್ಷಕರು ಹೇಳುತ್ತಾರೆ. ಬಾಂಬೆ ಓಯಸಿಸ್, ಸಂಗತನ್ ಓಯಸಿಸ್, ಟೈಗರ್ ಓಯಸಿಸ್, ಲಾಫಿಂಗ್ ಥ್ರಷ್, ಅಳಿವಿನಂಚಿನಲ್ಲಿರುವ ಗುಬ್ಬಚ್ಚಿಗಳು, ಹೀಗೆ ಕೊಡೈಕೆನಾಲ್ನಲ್ಲಿ ಹಬ್ಬ ಮಾಡುವ ಪಕ್ಷಿಗಳ ಹಿಂಡುಗಳ ಹೆಸರುಗಳು. ಕೊಡೈಕೆನಾಲ್ ನಲ್ಲಿ ಯಥೇಚ್ಛವಾಗಿ ಕಾಣಸಿಗುತ್ತಿದ್ದ ಮಾರುಕಟ್ಟೆ ಗುಬ್ಬಚ್ಚಿಗಳು ಒಂದು ಹಂತದಲ್ಲಿ ಮಾಯವಾಗಿದ್ದವು. ಆದರೆ ಈಗ ಅವುಗಳ ಸಂಖ್ಯೆಯೂ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಸ್ಥಗಿತಗೊಂಡ ನಂತರ ಈ ಬದಲಾವಣೆಯು ಬರುತ್ತದೆ. ಕಡಿಮೆ ವಾಯು ಮಾಲಿನ್ಯವೇ ಇದಕ್ಕೆ ಪ್ರಮುಖ ಕಾರಣ ಎನ್ನುತ್ತಾರೆ ಪಕ್ಷಿ ವೀಕ್ಷಕರು ಹಾಗೂ ಪರಿಸರ ತಜ್ಞರು. ಕೊಡೈಕೆನಾಲ್ ನ ಸೊಬಗನ್ನು ಕಣ್ತುಂಬಿಕೊಳ್ಳಲು ಬರುವ ಪ್ರವಾಸಿಗರ ಕಣ್ಣು ಮತ್ತು ಮನಸ್ಸಿಗೆ ಈ ವರ್ಣರಂಜಿತ ಪಕ್ಷಿಗಳು ಉಲ್ಲಾಸಕರ ದೃಶ್ಯವಾಗುತ್ತವೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ರಾಜಮನೆತನದ ಇತಿಹಾಸದ ಕುರುಹಾಗಿ ಪಾಲಕ್ಕಾಡ್ನ ವಿಕ್ಟೋರಿಯಾ ಕಾಲೇಜು ರಸ್ತೆಯಲ್ಲಿ ತಲೆ ಎತ್ತಿರುವ ದೇವಿ ವಿಲಾಸಂ ಅರಮನೆ ಈಗ ನೆನಪಾಗಿದೆ. ಅರಣ್ಯದಂಚಿನಲ್ಲಿ ಕುಸಿದು ಬೀಳುವ ಹಂತದಲ್ಲಿದ್ದ ಅರಮನೆ ಸಂಪೂರ್ಣ ನೆಲಸಮವಾಗಿದೆ. ಒಮ್ಮೆ ಜಿಲ್ಲೆಗೆ ಬಂದಿದ್ದ ಎಲ್ಲ ಗಣ್ಯರು ತಂಗಿದ್ದ ಐತಿಹಾಸಿಕ ಸ್ಥಳ ನೆನಪಾಗಿ ಮರೆಯಾಗಿದೆ.ದೇವಿ ವಿಲಾಸಂ ಅರಮನೆಯು ಕೊಲ್ಲಂಗೋಡು ರಾಜವಂಶದ ಒಂದು ಭಾಗವಾಗಿದೆ. ದೇವಿ ವಿಲಾಸಂ ಅರಮನೆಯ ಹೆಗ್ಗಳಿಕೆಯನ್ನು ಪ್ರಾಚೀನರು ಕಾಲೇಜ್ ರಸ್ತೆ ಪ್ರದೇಶವನ್ನು ಐಷಾರಾಮಿ ಕಟ್ಟಡಗಳ ನಗರ ಎಂದು ಕರೆಯುತ್ತಿದ್ದರು. ಒಲವಕೋಟ್ ಸಾಯಿ ಮಂದಿರದ ಶಂಕುಸ್ಥಾಪನೆ ಸಮಾರಂಭಕ್ಕೆ ಬಂದಾಗ ಸಾಯಿಬಾಬಾ ಎರಡು ದಿನಗಳ ಕಾಲ ಅರಮನೆಯಲ್ಲಿ ತಂಗಿದ್ದರು ಎಂದು ಇತಿಹಾಸಕಾರರು ಹೇಳುತ್ತಾರೆ. ಶತಮಾನದಿಂದ ಕಾಲೇಜ್ ರಸ್ತೆಯಲ್ಲಿ ತಲೆ ಎತ್ತಿರುವ ಅರಮನೆಗೆ ಇನ್ನೂ ಹಲವು ವೈಶಿಷ್ಟ್ಯಗಳಿವೆ, ನಿವಾಸಿಗಳು ಹೋದಾಗ ಅರಮನೆ ಪಾಳುಬಿದ್ದಿದೆ.ನಿರ್ವಹಣೆ ಕೊರತೆಯಿಂದ ಕಟ್ಟಡ ಯಾವ ಕ್ಷಣದಲ್ಲಾದರೂ ಬೀಳುವ ಸ್ಥಿತಿಯಲ್ಲಿತ್ತು.ಹೀಗಿರುವಾಗ ಅದನ್ನು ಕೆಡವಲು ನಿರ್ಧರಿಸಲಾಯಿತು..ಹೀಗೆ ಒಂದು ಯುಗದ ಪ್ರೌಡಿಯ ಗುರುತು ಈಗ ನೆನಪುಗಳಲ್ಲಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್…
ರಾಜಹಂಸಗ ಕೋಟೆಗೆ ಕಾಂಗ್ರೆಸ್ಸಿನ ಕಾರ್ಯಕರ್ತರು ಭೇಟಿ ನೀಡಿದರು ವಿಧಾನಪರಿಷತ್ ಸದಸ್ಯರು ಚನ್ನರಾಜ ಹಟ್ಟಿ ಹೊಳಿ ಕಾಂಗ್ರೆಸ್ ಪಕ್ಷದ ಯುವ ನಾಯಕರಾದ ಮೃಣಾಲ್ ಹೆಬ್ಬಾಳ್ಕರ್ ನೇತೃತ್ವದಲ್ಲಿ ಹಾಗೂ ಕಾಂಗ್ರೆಸ್ ಪಕ್ಷದ ದಕ್ಷಿಣ ಮತಕ್ಷೇತ್ರದ ಆಕಾಂಕ್ಷಿ ಮುಖಂಡರಾದ ಸಾತೇರಿ ಬೆಳವಟ್ಕರ್ ಕಾರ್ಯಕರ್ತರೊಂದಿಗೆ ಆಗಮಿಸಿ ಕೋಟೆ ಪರಿಸರದಲ್ಲಿರುವ ಶಿವಾಲಯದಲ್ಲಿ ಶಿವರಾತ್ರಿಯ ನಿಮಿತ ಪೂಜೆ ಸಲ್ಲಿಸಿ ನಂತರ ಭವ್ಯ ದಿವ್ಯ ವಾದ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಗೆ ಪೂಜೆ ಸಲ್ಲಿಸಿದರು. ಇದೆ ವೇಳೆ ಬೆಳವಟ್ಕರ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ ಈ ಕ್ಷೇತ್ರ ವನ್ನು ಅಭಿವೃದ್ಧಿಪಡಿಸಬೇಕು. ಕೋಟೆ ಆವರಣದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಭವ್ಯ ದಿವ್ಯವಾದ ಮೂರ್ತಿಯನ್ನು ನಿರ್ಮಾಣ ಮಾಡಬೇಕು ಎಂದು ನಮ್ಮ ನಾಯಕಿಯಾದ ಗ್ರಾಮೀಣ ಮತಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಂಕಲ್ಪ ಮಾಡಿದರು. ಕೋಟೆ ಸಂರಕ್ಷಿಸುವ ನಮ್ಮೆಲ್ಲರ ಜವಾಬ್ದಾರಿಯಾಗಿತ್ತು. ಸುತ್ತಮುತ್ತಲಿನ ಗ್ರಾಮಗಳು ಕಳೆದ 15 ವರ್ಷಗಳಿಂದ ಕೋಟೆ ಅವರನ್ನು ಸಂರಕ್ಷಿಸುವ ಕಾರ್ಯದಲ್ಲಿ ತೊಡಗಿದ್ದವು ಆದರೆ ಈಗ ಅದರ ಭಯ ಇಲ್ಲದಂತಾಗಿದೆ ಕಾರಣ ಈ ಕ್ಷೇತ್ರಕ್ಕೆ ದೃಢ…
ಮದುವೆ ಸಮಾರಂಭದಲ್ಲಿ ಡಿಜೆ ಹಾಕಿದ್ದಕ್ಕಾಗಿ ಮೌಲ್ವಿಯೊಬ್ಬರು ಧಾರ್ಮಿಕ ವಿಧಿವಿಧಾನಗಳನ್ನು ನಿಲ್ಲಿಸಿದ ಘಟನೆ ನಡೆದಿದ್ದು, ಡಿಜೆ ನಿಲ್ಲಿಸಿದ ಬಳಿಕವೇ ಅವರು ಮತ್ತೆ ಮದುವೆ ಕಾರ್ಯಕ್ರಮವನ್ನು ನಡೆಸಿಕೊಟ್ಟಿದ್ದಾರೆ. ಈ ಘಟನೆ ನಡೆದಿರೋದು ಮಧ್ಯಪ್ರದೇಶದಲ್ಲಿ. ಮದುವೆ ಕಾರ್ಯಕ್ರಮದ ವೇಳೆ ಕುಟುಂಬಸ್ಥರು ಡಿಜೆ ಹಾಕಿದ್ದಾರೆ. ಡಿಜೆ ಸದ್ದು ಕೇಳುತ್ತಿದ್ದಂತೆಯೇ ಮೌಲ್ವಿ ಮದುವೆ ಕಾರ್ಯಕ್ರಮವನ್ನು ನಿಲ್ಲಿಸಿದ್ದು, ಡಿಜೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಇಸ್ಲಾಮ್ ನಲ್ಲಿ ದುಂದು ವೆಚ್ಚ ಮಾಡಬಾರದು ಅನ್ನೋ ನಿಯಮವಿದೆ. ಹಾಡು, ಸಂಗೀತ, ನೃತ್ಯಕ್ಕೆ ನಿಷೇಧವಿದೆ ಎಂದು ಮೌಲ್ವಿ ಮದುವೆ ಮನೆಯಲ್ಲಿ ಕ್ಲಾಸ್ ತೆಗೆದುಕೊಂಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ನವದೆಹಲಿ: ದೆವ್ವ ಬಿಡಿಸುವ ನೆಪದಲ್ಲಿ ಮಂತ್ರವಾದಿಯೋರ್ವ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭೀಣಿಯಾಗಿಸಿದ ಘಟನೆ ನೈಋತ್ಯ ದೆಹಲಿಯ ಬಾಬಾ ಹರಿದಾಸ್ ನಗರದಲ್ಲಿ ಈ ಘಟನೆ ನಡೆದಿದೆ ಸಂತ್ರಸ್ತೆಯ ತಾಯಿ ದೆವ್ವ ಬಿಡಿಸಲು ಮಂತ್ರವಾದಿಯ ಬಳಿಗೆ ಬಾಲಕಿಯನ್ನು ಕರೆದೊಯ್ದಿದ್ದು, ಈ ವೇಳೆ ದೆವ್ವ ಬಿಡಿಸುವ ನೆಪದಲ್ಲಿ ಬಾಲಕಿಯ ಮೇಲೆ ಪದೇ ಪದೇ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಹಿರಿಯ ಪೊಲೀಸ್ ಅಧಿಕಾರಿಯ ಪ್ರಕಾರ ಬಾಲಕಿ 2 ತಿಂಗಳ ಗರ್ಭಿಣಿಯಾಗಿದ್ದಾಳೆ. ಪೊಲೀಸರು ಸಂತ್ರಸ್ತೆ ತಾಯಿಯಿಂದ ಮಾಹಿತಿ ಪಡೆದು ಪರಿಶೀಲಿಸುತ್ತಿದ್ದಾರೆ. ವಿಷಯ ಪೊಲೀಸರಿಗೆ ವರದಿಯಾದ ನಂತರ ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಬೆಂಗಳೂರು: ಫೆ.20 ಹಾಗೂ 21ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ರಾಜ್ಯದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ನಡೆಯಲಿರುವ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವುದು ನಡ್ಡಾ ಅವರ ಪ್ರವಾಸದ ಉದ್ದೇಶ. ಈ ಕಾರಣ ಪಕ್ಷಕ್ಕೆ ಸಂಬಂಧಿಸಿದ ವಿವಿಧ ಚಟುಚಟಿಕೆಗಳಲ್ಲಿ ಅವರು ಭಾಗವಹಿಸಲು ಬರುತ್ತಿದ್ದಾರೆ ಎಂದು ಬಿಜೆಪಿ ತಿಳಿಸಿದೆ. ಮಂಗಳೂರಿಗೆ ಭಾನುವಾರ ರಾತ್ರಿ ಆಗಮಿಸಲಿರುವ ನಡ್ಡಾ ಅವರು ಅಲ್ಲೇ ತಂಗಲಿದ್ದಾರೆ. ಮರುದಿನ ಉಡುಪಿ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳ ಭಾಗಗಳಲ್ಲಿ ಎರಡು ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಮುಂಬೈ: ಫ್ಲಿಪ್ ಕಾರ್ಟ್ ಕೆಲಸ ಮಾಡುತ್ತಿದ್ದ ಡೆಲಿವರಿ ಬಾಯ್ ವೋರ್ವ 40ಕ್ಕೂ ಹೆಚ್ಚು ಮಹಿಳೆಯರಿಗೆ ಅಶ್ಲೀಲ ವಿಡಿಯೋ ಕರೆ ಮಾಡಿದ ಆರೋಪ ಕೇಳಿ ಬಂದಿದ್ದು, ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಜ್ಯೋತಿರಾಮ್ ಬಾಬುರಾವ್ ಮನ್ಸುಲೆ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ. ಈತ ಫೇಸ್ ಬುಕ್ ನಲ್ಲಿ ಉದ್ಯೋಗ ಅಥವಾ ನೇಮಕಾತಿ ಅವಕಾಶಗಳನ್ನು ನೋಡಿದ ನಂತರ ವಾಟ್ಸಾಪ್ ಗುಂಪುಗಳಿಗೆ ಸೇರ್ಪಡೆಗೊಂಡಿದ್ದು, ವಾಟ್ಸಾಪ್ ನಲ್ಲಿ ಮಹಿಳೆಯರ ಡಿಪಿ ನೋಡಿ ಅಶ್ಲೀಲ ವಿಡಿಯೋ ಕರೆಗನ್ನು ಮಾಡಿ ಕಿರುಕುಳ ನೀಡಿದ್ದ. ಈ ಬಗ್ಗೆ ಮಲಾಡ್ ನಿವಾಸಿಯೊಬ್ಬರು ಕಳೆದ ವಾರ ಮಲಾಡ್ ಪೊಲೀಸರಿಗೆ ದೂರು ನೀಡಿದ ಬಳಿಕ ಘಟನೆ ಬೆಳಕಿಗೆ ಬಂದಿದೆ. ಆರೋಪಿಯನ್ನು ಸದ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA