Author: admin

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರದಲ್ಲಿ ರಾಜ್ಯ ಬಜೆಟ್‌ನಲ್ಲಿ ಮಹಾಲಿಂಗಪುರವನ್ನು ಹೊಸ ತಾಲೂಕನ್ನಾಗಿ ಘೋಷಿಸದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ. ಅಲ್ಲದೆ ಮಹಾಲಿಂಗಪುರ ತಾಲ್ಲೂಕು ಹೋರಾಟ ಸಮಿತಿ ಹೆಸರಿನಲ್ಲಿ ತೇರದಾಳ ಶಾಸಕ ಸಿದ್ದು ಸವದಿ ಫೋಟೊ ಮೇಲೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದೆ. ಈ ಪೋಟೊ ಕೆಳಗೆ ಜನನ 2008, ಮರಣ 2023 ಎಂದು ನಮೂದಿಸಲಾಗಿದೆ. ಸದ್ಯ ಈ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಪಟ್ಟಣವನ್ನು ತಾಲೂಕು ಕೇಂದ್ರ ಮಾಡಬೇಕೆಂದು ನಡೆದಿರುವ ಹೋರಾಟವು ಶುಕ್ರವಾರ 310 ದಿನಗಳನ್ನು ಪೂರೈಸಿದೆ. ಇನ್ನೂ ರಾಜ್ಯ ಸರ್ಕಾರ ಮಂಡಿಸಿದ ಬಜೆಟ್‌ನಲ್ಲಿ ಮಹಾಲಿಂಗಪುರ ತಾಲೂಕು ಘೋಷಣೆ ಆಗುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಈ ನಿರೀಕ್ಷೆಗಳು ಸುಳ್ಳಾದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಹೋರಾಟ ಸಮಿತಿ ಹಾಗೂ ಸಾರ್ವಜನಿಕರು ಚೆನ್ನಮ್ಮ ಸರ್ಕಲ್ ನಲ್ಲಿ ದಿಢೀರ್ ರಸ್ತೆ ತಡೆ ನಡೆಸಿ ಪ್ರತಿಭಟನೆಗಿಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…

Read More

ಬೆಳಗಾವಿ ಗ್ರಾಮೀಣ ಕ್ಷೇತ್ರದ ರಾಜಹಂಸಗಡದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಅನಾವರಣ ಮಾಡುವ ದಿನ ಪ್ರತಿಭಟನೆ ಮಾಡುವುದಾಗಿ ಹೇಳಿಕೆ ನೀಡಿರುವ ರಮೇಶ ಜಾರಕಿಹೊಳಿಗೆ ಖಡಕ್ ಎಚ್ಚರಿಕೆ ನೀಡಿರುವ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಜನರ ಭಾವನೆಗಳ ವಿರುದ್ಧ, ಬೆಂಕಿಯ ಜೊತೆ ಸರಸವಾಡುತ್ತಿದ್ದೀರಿ ಎಚ್ಚರ ಎಂದಿದ್ದಾರೆ. ಶನಿವಾರ, ಶಿವರಾತ್ರಿಯ ಸಂದರ್ಭದಲ್ಲಿ ರಾಜಹಂಸಗಡದ ಸಿದ್ದೇಶ್ವರ ದೇವಸ್ಥಾನದಲ್ಲಿ ಚನ್ನರಾಜ ಹಟ್ಟಿಹೊಳಿ ಬೆಳಗ್ಗೆ ಪೂಜೆ ಇಟ್ಟುಕೊಂಡಿದ್ದರು. ಪೂಜೆ ಮುಗಿಸಿ ಹೊರಡುವ ಸಂದರ್ಭದಲ್ಲಿ ರಮೇಶ ಜಾರಕಿಹೊಳಿ ಕಾರು ಎದುರಾಯಿತು. ಚನ್ನರಾಜ ಹಟ್ಟಿಹೊಳಿ ಕಾರಿಗೆ ಮುಂದೆ ಹೋಗದಂತೆ ರಮೇಶ ಜಾರಕಿಹೊಳಿ ಕಾರು ಅಡ್ಡ ಬಂದು ನಿಂತಿತು. ಚನ್ನರಾಜ ಹಟ್ಟಿಹೊಳಿ ತಾಳ್ಮೆಯಿಂದಲೇ ಕೆಲ ಹೊತ್ತು ಕಾದರೂ ರಮೇಶ ಜಾರಕಿಹೊಳಿ ಕಾರಿನ ಚಾಲಕ ದಾರಿ ಬಿಟ್ಟು ಕೊಡಲಿಲ್ಲ. ನಂತರ ಚನ್ನರಾಜ ಹಟ್ಟಿಹೊಳಿ ಅವರು ತಮ್ಮ ಕಾರಿನ ಹಿಂದೆ ನಿಂತ ಕಾರಿನವರಿಗೆ ವಿನಂತಿಸಿ ಹಿಂದೆ ಸರಿಸಿ ತಮ್ಮ ಕಾರನ್ನು ಪಕ್ಕದಿಂದ ತೆಗೆದುಕೊಂಡು ಹೊರಟರು. ಈ ಸಂದರ್ಭದಲ್ಲಿ ಅಲ್ಲಿದ್ದ ಜನರು ಚನ್ನರಾಜ ಹಟ್ಟಿಹೊಳಿಗೆ ಜಯವಾಗಲಿ…

Read More

ಗಡಿನಾಡ ಧ್ವನಿ ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ (ರಿ) ಇದರ ಆರನೇ ಕರ್ನಾಟಕ ಗಡಿನಾಡ ಸಮ್ಮೇಳನದಲ್ಲಿ ಸೌಮ್ಯ  ಪೆರ್ನಾಜೆ ಅವರನ್ನು ಮಧುಭೂಷಣ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪ್ರದಾನ ಮಹಾ ಸಮ್ಮೇಳನವು ಗಡಿನಾಡ ಪ್ರದೇಶವಾದ ಒಡ್ಯ ಸಹಕಾರಿ ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ಫೆಬ್ರವರಿ 25ರಂದು ನಡೆಯಲಿದೆ. ಈ ಮಹಾ ಸಮ್ಮೇಳನದಲ್ಲಿ ಗಣ್ಯರ ಸಮ್ಮುಖದಲ್ಲಿ ಮಧು ಭೂಷಣ ಪ್ರಶಸ್ತಿಯನ್ನು  ನೀಡಿ  ಗೌರವಿಸಲಾಗುವುದೆಂದು ಗಡಿನಾಡ ಧ್ವನಿಯ ಅಧ್ಯಕ್ಷರಾದ ಡಾ. ಹಾಜಿಎಸ್ ಅಬೂಬಕರ್ ಅರ್ಲಪದವು,  ಪ್ರಧಾನ ಕಾರ್ಯದರ್ಶಿ  ಈಶ್ವರ ಭಟ್ ಕಡಂದೇಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ನಾಡಿಗೆ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ನೀಡಲ್ಪಡುವ ರಾಜ್ಯ ಪ್ರಶಸ್ತಿಗೆ ವಿಶ್ವದಲ್ಲಿ ಪ್ರಪ್ರಥಮವಾಗಿ ಜೇನು ಗಡ್ಡ ತೋರಿಸಿಕೊಟ್ಟ ಸಾಧಕಿ,  ಮಹಿಳೆ ಜೇನು ಕೃಷಿ ವಿಶಿಷ್ಟ ಬರಹಗಳು, ಕಲಾಪ್ರಿಯರು ಕಲಾ ಪೋಷಕರಾಗಿ ಗುರುತಿಸಿಕೊಂಡಿರುವ ಸೌಮ್ಯ ಪೆರ್ನಾಜೆ  ಆಯ್ಕೆಯಾಗಿದ್ದಾರೆ. ಇವರಿಗೆ ಈಗಾಗಲೇ ಈಶ್ವರಮಂಗಳದಲ್ಲಿ ಗ್ರಾಮ ಗ್ರಾಮದ ಸಾಹಿತ್ಯ ಸಂಭ್ರಮ ಮೂರನೇ ಸರಣಿ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗಿದೆ. ವರದಿ: ಕುಮಾರ್ ಪೆರ್ನಾಜೆ ನಮ್ಮತುಮಕೂರು.ಕಾಂನ ಕ್ಷಣ…

Read More

ಬೆಂಗಳೂರು: ಖ್ಯಾತ ತೆಲುಗು ನಟ ನಂದಮೂರಿ ತಾರಕರತ್ನ ಅವರು ಹಲವು ದಿನಗಳ ಸಾವು ಬದುಕಿನ ಹೋರಾಟದ ಬಳಿಕ ಇದೀಗ ನಿಧನರಾಗಿದ್ದು, ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಕೊನೆಯುಸಿರೆಳೆದಿದ್ದಾರೆ. 39 ವರ್ಷದ ನಂದಮೂರಿ ತಾರಕರತ್ನ ಅವರು ಜನವರಿ 27ರಂದು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಕುಪ್ಪಂ ಬಳಿ ಟಿಡಿಪಿ ಪಾದಯಾತ್ರೆ ವೇಳೆ ಕುಸಿದುಬಿದ್ದಿದ್ದರು. ಹೃದಯಾಘಾತಕ್ಕೀಡಾಗಿದ್ದ ಅವರ ಸ್ಥಿತಿ ಚಿಂತಾಜನಕವಾಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಶಿಫ್ಟ್ ಮಾಡಲಾಗಿತ್ತು. 23 ದಿನಗಳ ಚಿಕಿತ್ಸೆಯ ಬಳಿಕವೂ ಅವರು ಚೇತರಿಸಿಕೊಳ್ಳದೇ ಇದೀಗ ಕೊನೆಯುಸಿರೆಳೆದಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ಬೆಳಗಾವಿ: ಯಾರ್ರೀ ರಮೇಶ ಜಾರಕಿಹೊಳಿ? ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೂ ಇವರಿಗೂ ಏನು ಸಂಬಂಧ? ನಿಮ್ಮ ಗೋಕಾಕ ಕ್ಷೇತ್ರವನ್ನು ನೀವು ನೋಡಿಕೊಳ್ಳಿ. ಗ್ರಾಮೀಣ ಕ್ಷೇತ್ರದ ಶಾಸಕರು ಸಮರ್ಥರಿದ್ದಾರೆ. ಉತ್ತಮ ಕೆಲಸ ಮಾಡುತ್ತಿದ್ದಾರೆ. ಜನರ ವಿಶ್ವಾಸಗಳಿಸಿದ್ದಾರೆ. ಅವರ ಕ್ಷೇತ್ರವನ್ನು ಅವರು ನೋಡಿಕೊಳ್ಳುತ್ತಾರೆ ಎಂದು ಎಂಎಲ್.ಸಿ ಚನ್ನರಾಜ ಹಟ್ಟಿಹೊಳಿ ರಮೇಶ್ ಜಾರಕಿಹೊಳಿಗೆ ಎಚ್ಚರಿಕೆ ನೀಡಿದ್ದಾರೆ. ರಾಜಹಂಸಗಡದ ಸಿದ್ದೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ನಿಮಿತ್ಯ ಹಮ್ಮಿಕೊಂಡಿದ್ದ ಪೂಜೆ ಮುಗಿಸಿದ ಬಳಿಕ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಹಂಸಗಡದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಅನಾವರಣ ಮಾಡುವ ದಿನ ಪ್ರತಿಭಟನೆ ಮಾಡುವುದಾಗಿ ಹೇಳಿಕೆ ನೀಡಿರುವ ರಮೇಶ ಜಾರಕಿಹೊಳಿ ಮಾತಿಗೆ ಪ್ರತಿಕ್ರಿಸಿ ನೂರು ವರ್ಷದಿಂದ ಬೆಳಗಾವಿ ಗ್ರಾಮೀಣ ಜನರ ಕನಸಿತ್ತು. ರಾಜಹಂಸಗಡದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿ ನಿರ್ಮಾಣವಾಗಬೇಕೆನ್ನುವ ಕನಸು ಇಂದು ಈಡೇರಿದೆ ಎಂದರು. ರಮೇಶ ಜಾರಕಿಹೊಳಿಗೆ ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಏನು ಸಂಬಂಧ? ಗೋಕಾಕ ಕ್ಷೇತ್ರದ ಶಾಸಕರು ಅವರು, ಬೆಳಗಾವಿ ತಾಲೂಕಿಗೆ ಏನು ಸಂಬಂಧ? ಈ ಭಾಗದ ಶಾಸಕರು ಲಕ್ಷ್ಮೀ ಹೆಬ್ಬಾಳಕರ್,…

Read More

ಬೆಂಗಳೂರು: ರಸ್ತೆ ಅಪಘಾತದಿಂದ ಕೋಮಾ ಸ್ಥಿತಿಯಲ್ಲಿರುವ ಅಪ್ಪಟ ಅಭಿಮಾನಿಯನ್ನು ಧ್ರುವ ಸರ್ಜಾ ನೋಡಲು ಆಗಮಿಸಿದ್ದಾರೆ. ಅಭಿಮಾನಿಯ ಮೆದುಳು ನಿಷ್ಕ್ರಿಯಗೊಂಡು ಕೋಮಾ ಸ್ಥಿತಿಯಲ್ಲಿದ್ದು, ಅಂಗಾಂಗಗಳನ್ನು ದಾನ‌ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಧ್ರುವ ಸರ್ಜಾ ಅವರ ಅಪ್ಪಟ ಅಭಿಮಾನಿ ಶಿಡ್ಲಘಟ್ಟದ ​​ ಪೃಥ್ವಿರಾಜ್ ನಾಲ್ಕು ದಿನಗಳ ಹಿಂದೆಯೇ ಬೈಕ್ ನಿಂದ ಬಿದ್ದಿದ್ದು, ಪರಿಣಾಮವಾಗಿ ತಲೆಗೆ ಗಂಭೀರವಾದ ಏಟು ಬಿದ್ದಿತ್ತು.  ಅವರನ್ನು ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮತ್ತೆ ಪೃಥ್ವಿರಾಜ್ ಸಹಜ ಸ್ಥಿತಿಗೆ ಬರುವುದು ಅನುಮಾನ ಎಂದು ವೈದ್ಯರು ತಿಳಿಸಿದ್ದು ಆತನ ಅಂಗಾಂಗ ದಾನಕ್ಕೆ ಕುಟುಂಬ ಮುಂದಾಗಿದೆ. ಮಗನ ಕೊನೆಯಾಸೆ ಸರ್ಜಾರನ್ನು ನೋಡುವುದಾಗಿತ್ತು. ಧ್ರುವ ಸರ್ಜಾ ಅವರಿಗೆ ಈ ವಿಷಯ ತಿಳಿದು ಇಂದು ಮಧ್ಯಾಹ್ನ 2 ಗಂಟೆ ಹೊತ್ತಿಗೆ ಅಭಿಮಾನಿಗಳನ್ನು ಭೇಟಿ ಮಾಡಲು ಧ್ರುವ ಆಸ್ಪತ್ರೆಗೆ ಆಗಮಿಸಿದ್ದರು. ಮಗನ ಚಿಕಿತ್ಸಾ ಖರ್ಚಿಗೆ ಸಾಲ ಮಾಡಿದ ಪೃಥ್ವಿ ತಂದೆ ಜಗದೀಶ್ ಅವರಿಗೆ ಧ್ರುವ 5 ಲಕ್ಷ ರೂಪಾಯಿ ಆಸ್ಪತ್ರೆ ನೀಡಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…

Read More

ದೂರದ ರೈಲು ಪ್ರಯಾಣವನ್ನು ಇಷ್ಟಪಡುವ ಅನೇಕರು ನಮ್ಮ ನಡುವೆ ಇದ್ದಾರೆ. ಆದರೆ ರೈಲಿನಿಂದ ಸಿಗುವ ಆಹಾರ ಹೆಚ್ಚಾಗಿ ರುಚಿ ಕೆಡಿಸುತ್ತದೆ. . ರೈಲು ಆಹಾರದ ಗುಣಮಟ್ಟ ಕ್ಷೀಣಿಸುತ್ತಿರುವ ಬಗ್ಗೆ ಹಲವು ದೂರುಗಳು ಬಂದಿವೆ. ಇತ್ತೀಚಿನ ದೂರು ಭೂಮಿಕಾ ಎಂಬ ಯುವತಿ ಟ್ವಿಟರ್‌ನಲ್ಲಿ ಎತ್ತಿರುವ ದೂರು. ಮಹಿಳೆ ಆಹಾರದ ಫೋಟೋವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ. ಭೂಮಿಕಾ ಎಂಬ ಪ್ರಯಾಣಿಕರು ಅರೆಬರೆ ತಿಂದ ಆಹಾರದ ಚಿತ್ರವನ್ನು ಶೇರ್ ಮಾಡುವ ಮೂಲಕ ರೈಲ್ವೇ ವಿರುದ್ಧ ಪ್ರತಿಭಟನೆ ನಡೆಸಿದರು. ಪ್ಲೇಟ್ ದಾಲ್, ಸಬ್ಜಿ, ರೊಟ್ಟಿ ಮತ್ತು ಅನ್ನವನ್ನು ಒಳಗೊಂಡಿರುತ್ತದೆ. ಭೂಮಿಕಾ ಅವರನ್ನು ಟ್ವಿಟ್ಟರ್ ನಲ್ಲಿ ಟೀಕಿಸಿದ್ದಾರೆ. ಭೂಮಿಕಾ ಇನ್ನೂ ಒಂದು ಹೆಜ್ಜೆ ಮುಂದಿಟ್ಟಳು, ಒಮ್ಮೆಯಾದರೂ ಈ ಊಟ ತಿಂದಿದ್ದೀಯಾ ಎಂದು ಕೇಳುತ್ತಾಳೆ ಫುಡ್ ನೀಡಿದವರನ್ನು ನೋಡಿ.ನಿಮ್ಮ ಕುಟುಂಬ ಅಥವಾ ಮಕ್ಕಳಿಗೆ ಇಂತಹ ಕೆಟ್ಟ ಆಹಾರವನ್ನು ತಿನ್ನಿಸುತ್ತೀರಾ ಎಂದು ಅವರು ಕೇಳಿದರು. ಪದೇ ಪದೇ ಟಿಕೆಟ್ ದರ ಏರಿಕೆಯಾಗುತ್ತಿದ್ದರೂ ಉತ್ತಮ ಆಹಾರ ನೀಡುವ ಕ್ರಮ…

Read More

ಆಳಂದ ತಾಲೂಕಿನ ಲಾಡ್ಲೇ ಮಶಾಕ್ ದರ್ಗಾದಲ್ಲಿ ಉರಸ್ ಮತ್ತು ಶಿವಲಿಂಗ ಪೂಜೆ ಸಲ್ಲಿಕೆಗೆ ಕೋರ್ಟ್ ಅನುಮತಿ ನೀಡಿದ್ದು ಇಂದು ಪೂಜೆ ಸಲ್ಲಿಸುವ ಕಾರಣ ಪಟ್ಟಣದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ದರ್ಗಾದ ಸುತ್ತಮುತ್ತ ಪ್ರತಿಯೊಂದು ರಸ್ತೆಗಳನ್ನು ಪೊಲೀಸರು ಬಂದ್ ಮಾಡಿದ್ದು, ನಿಷೇಧಾಜ್ಞೆ ಜಾರಿ ಮಾಡಿದ್ದಾರೆ. ಭದ್ರತೆಗೆ ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ದರ್ಗಾದಲ್ಲಿ ಪೂಜೆ ಸಲ್ಲಿಸಲು ಹಿಂದೂ, ಮುಸ್ಲಿಮರಿಗೆ ಕೋರ್ಟ್ ಅವಕಾಶ ನೀಡಿದೆ. ಬೆಳಗ್ಗೆ ಉರುಸ್ ಆಚರಿಸಲು ಅವಕಾಶ ನೀಡಿದ್ದು, ಮುಸ್ಲಿಂ ಸಮುದಾಯದ 15 ಜನರಿಗೆ ಮಾತ್ರ ಉರುಸ್​ನಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ. ಮಧ್ಯಾಹ್ನ 2ರಿಂದ ಸಂಜೆ 6ರವರೆಗೆ ಶಿವಲಿಂಗ ಪೂಜೆಗೆ ಅವಕಾಶ ಕಲ್ಪಿಸಲಾಗಿದೆ. ಹಿಂದೂ ಸಮುದಾಯದ 15 ಜನ ಪೂಜೆಯಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಮಧ್ಯೆ, ದರ್ಗಾದಲ್ಲಿ ಉರುಸ್ ಆರಂಭವಾಗಿದ್ದು, ಮುಸ್ಲಿಂ ಸಮುದಾಯದ ಜನರು ದರ್ಗಾ ಪ್ರವೇಶಿಸಿದ್ದಾರೆ. ದರ್ಗಾದ ಎರಡನೇ ಗೇಟ್ ಮೂಲಕ ಮುಸ್ಲಿಂ ಸಮುದಾಯದ ಜನರು ಒಳ ಪ್ರವೇಶಿಸಿದ್ದಾರೆ. ಪೊಲೀಸ್  ಸಿಬ್ಬಂದಿ ಪ್ರತಿಯೊಬ್ಬರನ್ನೂ ತಪಾಸಣೆಗೆ ಒಳಪಡಿಸಿ ಒಳಗೆ ಬಿಟ್ಟಿದ್ದಾರೆ.…

Read More

ಕೊಡಗಿನ ಎರಡು ಬೆಟ್ಟಗಳಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ತೊಡಗಿದ್ದಾರೆ. ಪುಷ್ಪಗಿರಿ ಅರಣ್ಯ ವ್ಯಾಪ್ತಿಯಲ್ಲಿ ಇಂದು ಸಂಜೆ ಬೆಂಕಿ ಕಾಣಿಸಿಕೊಂಡಿದೆ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿನ ಕೋಟೆಬೆಟ್ಟ, ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ನಿಶಾನಿ ಬೆಟ್ಟದಲ್ಲಿ ಕಾಡ್ಗಿಚ್ಚು ಸಂಭವಿಸಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು  ಭೇಟಿ ನೀಡಿದ್ದು, ಒಂದು ಗಂಟೆಯಿಂದಲ್ಲೂ ಬೆಂಕಿ ನಂದಿಸುವಲ್ಲಿ ಸಿಬ್ಬಂದಿಗಳು ತೊಡಗಿದ್ದಾರೆ. ಬೆಂಕಿನಂದಿಸುವ ಕಾರ್ಯಚರಣೆಯಲ್ಲಿ ಸಾರ್ವಜನಿಕರೂ ಕೂಡ ಸಾಥ್ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮೂರು ವರ್ಷಗಳ ನಂತರ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಇಂದು ಆರಂಭವಾಗಿದೆ. ರಾಯಪುರದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ರೈನೋಸ್ ಮತ್ತು ಕರ್ನಾಟಕ ಬುಲ್ಡೋಜರ್ಸ್ ತಂಡಗಳು ಮುಖಾಮುಖಿಯಾಗಲಿವೆ. ಸಿ ತ್ರೀ ಕೇರಳ ಸ್ಟ್ರೈಕರ್ಸ್ ತೆಲುಗು ವಾರಿಯರ್ಸ್ ಪಂದ್ಯ ನಾಳೆ. ಫ್ಲವರ್ಸ್ ಕೇರಳ ಸ್ಟ್ರೈಕರ್ಸ್ ಪಂದ್ಯಗಳನ್ನು ನೇರ ಪ್ರಸಾರ ಮಾಡುತ್ತಿದೆ. ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಮೂಲಕ ಭಾರತೀಯ ಚಿತ್ರರಂಗದ ವಿವಿಧ ಇಂಡಸ್ಟ್ರಿಗಳ ಸೆಲೆಬ್ರಿಟಿಗಳು ಪರಸ್ಪರ ಹೊಡೆದಾಡಿಕೊಳ್ಳುತ್ತಿದ್ದಾರೆ. ಚೆನ್ನೈ ರೈನರ್ಸ್ ಮತ್ತು ಕರ್ನಾಟಕ ಬುಲ್ಲಾರ್ಡ್ಸ್ ನಡುವಿನ ಆರಂಭಿಕ ಪಂದ್ಯದೊಂದಿಗೆ ವಿರಾಮದ ನಂತರ ಸ್ಟಾರ್ ಕ್ರಿಕೆಟ್ ಪ್ರಾರಂಭವಾಗುತ್ತದೆ. ಕುಂಚಾಕೊ ಬೋಬನ್ ನೇತೃತ್ವದ ಸೀ ತ್ರೀ ಕೇರಳ ಸ್ಟ್ರೈಕರ್ಸ್‌ನ ಮೊದಲ ಪಂದ್ಯ ತೆಲುಗು ವಾರಿಯರ್ಸ್ ವಿರುದ್ಧ.ರಾಯಪುರದಲ್ಲಿ ನಾಳೆ ನಡೆಯಲಿರುವ ಪಂದ್ಯಕ್ಕೆ ಕೇರಳ ತಂಡ ಸಂಪೂರ್ಣ ಸಜ್ಜಾಗಿದೆ. ಆಸಿಫ್ ಅಲಿ, ರಾಜೀವ್ ಪಿಳ್ಳೈ, ಉನ್ನಿ ಮುಕುಂದನ್, ಅರ್ಜುನ್ ನಂದಕುಮಾರ್, ಇಂದ್ರಜಿತ್ ಸುಕುಮಾರನ್, ಸಿದ್ಧಾರ್ಥ್ ಮೆನನ್, ಮಣಿಕುಟ್ಟನ್, ವಿಜಯ್ ಯೇಸುದಾಸ್, ಶಫೀಕ್ ರೆಹಮಾನ್, ವಿವೇಕ್ ಗೋಪನ್, ಸೈಜು ಕುರುಪ್. ವಿನು ಮೋಹನ್,…

Read More