Author: admin

ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣಕ್ಕೆ ಶಿವಸೇನಾ ಪಕ್ಷದ ಚಿಹ್ನೆ ಮತ್ತು ಹೆಸರನ್ನು ನೀಡಿರುವುದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಕೆಂಪುಕೋಟೆಯಲ್ಲಿ ನಿಂತು ಪ್ರಜಾಪ್ರಭುತ್ವ ಮೃತಪಟ್ಟಿದೆ ಎಂದು ಘೋಷಿಸಬಹುದು ಎಂದು ಉದ್ದವ ಠಾಕ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿಂಧೆ ಅವರು ಬಂಡಾಯವೆದ್ದು ಬಿಜೆಪಿ ಜತೆ ಕೈಜೋಡಿಸಿದ ಸುಮಾರು 8 ತಿಂಗಳ ನಂತರ ಚುನಾವಣಾ ಆಯೋಗ ಪಕ್ಷದ ಹೆಸರು ಮತ್ತು ಚಿಹ್ನೆಗೆ ಸಂಬಂಧಿಸಿದ ನಿರ್ಧಾರವನ್ನು ಶುಕ್ರವಾರ ಪ್ರಕಟಿಸಿತ್ತು. ಅವರು ಶಿವಸೇನಾ ಚಿಹ್ನೆಯನ್ನು ಕಳವು ಮಾಡಿದ್ದಾರೆ. ನಾವು ಭರವಸೆ ಕಳೆದುಕೊಳ್ಳುವುದಿಲ್ಲ. ಹೋರಾಟ ಮುಂದುವರಿಸಲಿದ್ದೇವೆ ಎಂದರು. ಕೇಂದ್ರ ಚುನಾವಣಾ ಆಯೋಗ ‘ಶಿವಸೇನಾ’ ಎಂಬ ಹೆಸರು ಮತ್ತು ಪಕ್ಷದ ಚಿಹ್ನೆಯಾದ ‘ಬಿಲ್ಲು ಬಾಣ’ವನ್ನು ಶಿಂಧೆ ಬಣಕ್ಕೆ ನೀಡಿತ್ತು. ಉದ್ಧವ್ ಠಾಕ್ರೆ ಬಣವು ‘ಶಿವಸೇನಾ ಉದ್ಧವ್ ಬಾಳಾಸಾಹೇಬ್ ಠಾಕ್ರೆ’ ಎಂದು ಗುರುತಿಸಿಕೊಳ್ಳಬಹುದು ಎಂಬುದಾಗಿ ಸೂಚಿಸಿತ್ತು. ಈ ನಿರ್ಧಾರ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ಠಾಕ್ರೆ ಟೀಕಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ…

Read More

ತುಮಕೂರು: ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ವೈ.ಸಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಟಿಕೆಟ್ ಕೊಡಿ ನನ್ನ ಕಿಡ್ನಿ ಮಾರಿ ಚುನಾವಣಾ ಖರ್ಚು ಹೊಂದಿಸುತ್ತೇನೆ ಎಂದು ಯುವಕನೋರ್ವ ಹುಚ್ಚಾಟದ ಹೇಳಿಕೆ ನೀಡಿದ್ದು ಭಾರಿ ವೈರಲ್ ಆಗಿದೆ. ಕೆಂಕೆರೆ ಗ್ರಾಮದ ಪ್ರಭುಕುಮಾರ್ ಹುಚ್ಚಾಟದ ಹೇಳಿಕೆ ನೀಡಿದ್ದು ತುಮಕೂರು ಜಿಲ್ಲೆಯಲ್ಲಿ ಸದ್ದು ಮಾಡುತ್ತಿದೆ. ಈಗಾಗಲೇ ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ 7 ಮಂದಿ ಕಾಂಗ್ರೆಸ್ ಪಕ್ಷದ ಟಿಕೆಟ್ ರೇಸ್‌ನಲ್ಲಿದ್ದಾರೆ. ವೈ.ಸಿ ಸಿದ್ದರಾಮಯ್ಯ ಕೂಡ ಪ್ರಭಲ ಆಕಾಂಕ್ಷಿಯಾಗಿದ್ದು ಅವರಿಗೆ ಟಿಕೇಟ್ ನೀಡುವಂತೆ ಮನವಿ ಮಾಡಿಕೊಂಡಿರುವ ಯುವಕ ತಾನು ಕಳೆದ ಬಾರಿ ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದ. ಈ ವೇಳೆ ಚುನಾವಣೆಗೆ ನಿಲ್ಲಲು ಸಿದ್ದರಾಮಯ್ಯ ಸಾಕಷ್ಟು ಸಹಾಯ ಮಾಡಿದ್ದರು ಎಂಬುದಾಗಿಯೂ ಯುವಕ ವೀಡಿಯೋನಲ್ಲಿ ಹೇಳಿಕೊಂಡಿದ್ದಾನೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ದೇಶಾದ್ಯಂತ ಭಾರಿ ಸದ್ದು ಮಾಡುತ್ತಿರುವ ಆರ್ ಚಂದ್ರು ನಿರ್ದೇಶನದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ನಾಯಕರಾಗಿ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ವಿಶೇಷ ಪಾತ್ರದಲ್ಲಿ  ಅಭಿನಯಿಸಿರುವ ಕನ್ನಡದ ಸಿನಿಮಾ ‘ಕಬ್ಜ’ ಚಿತ್ರದಿಂದ ಮಹಾಶಿವರಾತ್ರಿಗೆ ಮಹಾಶಿವನನ್ನು ಕೊಂಡಾಡುವ ‘ನಮಾಮಿ ನಮಾಮಿ’ ಎಂಬ ಸುಮಧುರ ಗೀತೆ ಬಿಡುಗಡೆಯಾಗಿದೆ. ಕಿನಾಲ್ ರಾಜ್ ಬರೆದಿರುವ ಈ ಹಾಡನ್ನು ಖ್ಯಾತ ಗಾಯಕಿ ಐಶ್ವರ್ಯ ರಂಗರಾಜನ್ ಸುಶ್ರಾವ್ಯವಾಗಿ ಹಾಡಿದ್ದಾರೆ. ಖ್ಯಾತ ನಟಿ ಶ್ರೇಯಾ ಶರಣ್ ಈ ಹಾಡಿನಲ್ಲಿ ನಟಿಸಿದ್ದಾರೆ. ರವಿ ಬಸ್ರೂರ್ ಸಂಗೀತ ನೀಡಿರುವ ಈ ಹಾಡು ಐದು ಭಾಷೆಗಳಲ್ಲಿ ಬಿಡುಗಡೆಯಾಗಿದೆ. ಈ ಹಾಡಿನ ಬಿಡುಗಡೆ ಸಮಾರಂಭ ಇತ್ತೀಚೆಗೆ ಚೆನ್ನೈನಲ್ಲಿ ಅದ್ದೂರಿಯಾಗಿ ನಡೆಯಿತು. ಸಾಕಷ್ಟು ಗಣ್ಯರು ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾದರು. ಚಿತ್ರ ಸಾಗಿ ಬಂದ ಬಗ್ಗೆ ಹಾಗೂ ಹಾಡಿನ ಕುರಿತು ಮಾಹಿತಿ ನೀಡಿದ ನಿರ್ದೇಶಕ ಆರ್ ಚಂದ್ರು, ‘ಕಬ್ಜ’ ಚಿತ್ರದ ಹಾಡುಗಳನ್ನು ಹೈದರಾಬಾದ್, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಬಿಡುಗಡೆ ಮಾಡುತ್ತಿದ್ದೇವೆ. ಹೋದ ಕಡೆ ಚಿತ್ರದ ಕುರಿತು…

Read More

ರಾಮನಗರ ಜಿಲ್ಲೆಯ ಕನಕಪುರ ನಗರದಲ್ಲಿ ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮೇಲೆ ಆಸಿಡ್ ದಾಳಿ ನಡೆಸಿದ ಅಮಾನುಷ ಘಟನೆ ನಡೆದಿದೆ. ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿರುವ ಪಾಗಲ್ ಪ್ರೇಮಿ ಸುಮಂತ್ (30) ಎಂಬಾತ ಕೃತ್ಯವೆಸಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೈಪಾಸ್ ರಸ್ತೆಗೆ ಮಾತನಾಡಬೇಕಿದೆ ಎಂದು ಯುವತಿಯನ್ನು ಕರೆಸಿಕೊಂಡಿದ್ದಾನೆ. ಕಾಲ್ ಮಾಡಿದ ಕಾರಣ ತಮ್ಮನ ಜೊತೆಗೆ ಯುವತಿ ಹೋಗಿದ್ದಾಳೆ. ಈ ವೇಳೆ ಮುಖಕ್ಕೆ ಆಸಿಡ್ ಎರಚಿ ಸುಮಂತ್ ಬೈಕ್ ನಲ್ಲಿ ಪರಾರಿಯಾಗಿದ್ದಾನೆ. ಯುವತಿಗೆ ಕನಕಪುರ ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಕಳುಹಿಸಲಾಗಿದೆ. ಕನಕಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಸಿಡ್ ದಾಳಿ ನಡೆಸಿದ ಸುಮಂತ್ ನ್ನು ಕನಕಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಬೆಳಗಾವಿ: ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಮಂಡಿಸಿರುವ ರಾಜ್ಯದ ಬಜೆಟ್ “ಚುನಾವಣೆ ದೃಷ್ಟಿಯಿಂದ ಹೆಣೆಯಲಾದ ತಳಬುಡವಿಲ್ಲದ ಬಜೆಟ್” ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಜಂಟಿಯಾಗಿ ಪ್ರತಿಕ್ರಿಯಿಸಿದ್ದಾರೆ. ಈ ಬಜೆಟ್ ನಲ್ಲಿ ನಿರುದ್ಯೋಗ ನಿವಾರಣೆಗೆ ಯಾವ ಕ್ರಮವೂ ಇಲ್ಲ. ತಾಂಡವಾಡುತ್ತಿರುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಸಹ ಯಾವುದೇ ಕ್ರಮಗಳಿಲ್ಲ. ಈ ಬಜೆಟ್ ನಲ್ಲಿ ಎಲ್ಲರ ಮೂಗಿಗೆ ಬರಿ ತುಪ್ಪ ಸವರುವ ಕೆಲಸವಾಗಿದೆ ಎಂದು ಲೆವಡಿ ಮಾಡಿದ್ದಾರೆ. “ಈ ಬಜೆಟ್ ನಿಂದ ಕೆಳ ಅಥವಾ ಮಧ್ಯಮ ವರ್ಗದವರಿಗೆ ಯಾವುದೇ ಪ್ರಯೋಜನವಿಲ್ಲ ಎಂಎಸ್‌ಎಂಇಗಳನ್ನು ಸ್ಥಾಪಿಸುವ ಅಥವಾ ಉದ್ಯೋಗ ಸೃಷ್ಟಿಸುವ ಕ್ಷೇತ್ರಗಳಲ್ಲಿ ಹೂಡಿಕೆ ಹೆಚ್ಚಿಸುವ ಕ್ರಮಗಳ ಬಗ್ಗೆ ಯಾವುದೇ ಉಲ್ಲೇಖವೇ ಇಲ್ಲದಿರುವುದು ಆಶ್ಚರ್ಯಕರ” ಎಂದು ಅವರು ಹೇಳಿದರು. ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಯಂತಹ ಪ್ರಾಥಮಿಕ ಕ್ಷೇತ್ರಗಳಿಗೆ ಬಜೆಟ್ ನಲ್ಲಿ ಯಾವುದೇ ಪ್ರಾಮುಖ್ಯತೆಯನ್ನು ನೀಡಿಲ್ಲ. ಹೆಚ್ಚಿನ ಹೊಸ ಯೋಜನೆಗಳನ್ನು ಘೋಷಿಸುವುದಕ್ಕಿಂತ ಹಳೆಯ ಯೋಜನೆಗಳಿಗೆ ಹೊಳಪು ನೀಡುವ ಕೆಲಸ ಈ…

Read More

ಪಾವಗಡ: ವೈದ್ಯಕೀಯ ದೃಢೀಕರಣ ಹಾಗೂ ಪರವಾನಗಿ ರಹಿತವಾಗಿ ಸಾಗಿಸುತ್ತಿದ್ದ 8 ಎಮ್ಮೆ ಕರುಗಳನ್ನು ಪಾವಗಡ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಗುಡಿಬಂಡೆ ಸಂತೆಯಿಂದ ಪೆನುಕೊಂಡ ಕಡೆಗೆ ಬೊಲೆರೋ ವಾಹನದಲ್ಲಿ ಎಮ್ಮೆ ಕರುಗಳನ್ನು ಸಾಗಿಸಲಾಗುತ್ತಿತ್ತು. 8ಎಮ್ಮೆ ಕರುಗಳು ಸಾಗಾಟ ಮಾಡುತಿದ್ದ ಖಚಿತ ಮಾಹಿತಿ ಮೇರೆಗೆ ಬಜರಂಗದಳದ ಜಿಲ್ಲಾ ಸಹ ಸಂಯೋಜಕ್ ಸುಮನ್ ತಾಲೂಕು ಸಂಯೋಜಕ್ ವಾಸು ಗೋರಕ್ಷ ಪ್ರಮುಖ್ ರಾಕೇಶ್ ಸುರಕ್ಷಾ ಪ್ರಮುಖ್ ರವಿ, ಹರ್ಷ ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಜರಂಗದಳದ ಮಾಹಿತಿಯನ್ವಯ ಕಾರ್ಯಾಚರಣೆ ನಡೆಸಿದ ಪೊಲೀಸರು, ಎಮ್ಮೆ ಕರುಗಳನ್ನು ವಶಪಡಿಸಿಕೊಂಡು ಗೋ ಹತ್ಯೆ ನಿಷೇಧ ಕಾನೂನಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ವರದಿ: ನಂದೀಶ್ ನಾಯ್ಕ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಹೊಳೆನರಸೀಪುರ: ತಾಲೂಕಿನ ಶ್ರವಣೂರು ಗ್ರಾಮ ಪಂಚಾಯಿತಿಯ ದೇವರ ಮುದ್ದನಹಳ್ಳಿ ಗ್ರಾಮದಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ರಾಜ ಸತ್ಯವ್ರತ ಅಥವಾ ಶನಿ ಪ್ರಭಾವ ಎಂಬ ಪೌರಾಣಿಕ ನಾಟಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾಯರ್ಯಕ್ರಮ ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯ ಜವರೇಗೌಡರು ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ಉದ್ಘಾಟನೆ ಮಾಡಿದರು. ಬಳಿಕ ಮಾತನಾಡಿದ ಅವರು, ಇಂತಹ ನಾಟಕಗಳು ಗ್ರಾಮೀಣ ಭಾಗದಲ್ಲಿ ಉಳಿದುಕೊಂಡಿವೆ ಎಂದರೆ ಪ್ರೇಕ್ಷಕರಿಂದ ಮಾತ್ರ ಎಂದು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿಸಮಾಜ ಸೇವಕ ದಿವಾಕರ್ ಗೌಡ, ದಿನೇಶ್ ಬೈರೆಗೌಡ, ಎ.ಮಂಜು, ಪುಟೇಗೌಡ, ಕಾಳೆಗೌಡ, ಶ್ರೀಧರ್ ಗೌಡ, ಮದುಸೂದನ್, ನಾಗೇಶ್, ಡಿ.ಕೆ.ರಮೇಶ್, ಮಂಜು, ಗಣೇಶ್, ಪುನೀತ್, ದೇವರಮುದ್ದನಹಳ್ಳಿ ಗ್ರಾಮಸ್ಥರು ಹಾಗೂ ಸುತ್ತ ಮುತ್ತ ಹಳ್ಳಿ ಸಾರ್ವಜನಿಕರು ಉಪಸ್ಥಿತರಿದ್ದರು. ವರದಿ: ಮಂಜು ಶ್ರವಣೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

Read More

ಮೂಡಲಗಿ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು 2023-2024ನೇ ಸಾಲಿನ ಬಜೆಟ್ ಮುಂದಿನ 25 ವರ್ಷಗಳ ದೂರದೃಷ್ಠಿ ಹೊಂದಿರುವ ಸಮಚಿತ್ತದ ಸಮತೊಲನದ ಬಜೆಟ್‌ನ್ನು ರೈತಾಪಿ ವರ್ಗಕ್ಕೆ ಶೂನ್ಯ ಬಡ್ಡಿದರದಲ್ಲಿ ರೂ 5 ಲಕ್ಷ ಸಾಲ ಸೌಲಭ್ಯ ನೀಡುವ ಮೂಲಕ ಕೃಷಿ, ನೀರಾವರಿ, ಆರೋಗ್ಯ, ಶಿಕ್ಷಣ, ಕೈಗಾರಿಕೆ, ಮಹಿಳೆಯರಿಗೆ, ಪ್ರವಾಸೋದ್ಯಮ ಹೀಗೆ ಎಲ್ಲ ಕ್ಷೇತ್ರಗಳಿಗೂ ಆದ್ಯತೆ ನೀಡಲಾಗಿದೆ ಎಂದು ರಾಜ್ಯಸಭಾ ಸದಸ್ಯರು ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಬಜೆಟ್ ಕುರಿತು ಹರ್ಷ ವಕ್ತಪಡಿಸಿದರು. ಈ ವರ್ಷದ ಒಟ್ಟು ಬಜೆಟ್ ಗಾತ್ರ 3.9 ಲಕ್ಷ ಕೋಟಿ ರೂ, ಕೃಷಿ ಕ್ಷೇತ್ರಕ್ಕೆ 39,031 ಕೋಟಿ ಅನುದಾನ ನೀಡಲಾಗಿದೆ. ಕಿಸಾನ್ ಕ್ರೇಡಿಟ್ ಕಾರ್ಡ ಹೊಂದಿರುವ 50 ಲಕ್ಷ ರೈತರಿಗೆ ‘ಭೂ ಸಿರಿ’ ನೂತನ ಯೋಜನೆಯನ್ನು ಜಾರಿಗೆ ತಂದಿದ್ದು ಬಿತ್ತನೆ ಬೀಜ, ಗೋಬ್ಬರಕ್ಕೆ ಹೆಚ್ಚುವರಿಯಾಗಿ ರೂ 10 ಸಾವಿರ ಸಹಾಯಧನ ನೀಡಲಾಗುವುದು. ರಾಜ್ಯದ 56 ಲಕ್ಷ ಸಣ್ಣ ಮತ್ತು ಅತಿಸಣ್ಣ ರೈತ ಕುಟುಂಬಗಳಿಗೆ ಆರೋಗ್ಯ ಸೇವೆ ಒದಗಿಸಲು…

Read More

ದೊಡ್ಡಬಳ್ಳಾಪುರ : ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೆರಡು ತಿಂಗಳು ಮಾತ್ರ ಬಾಕಿ ಉಳಿದಿದೆ, ಚುನಾವಣಾ ಪ್ರಚಾರಕ್ಕೆ ಇಳಿದಿರು ಅಭ್ಯರ್ಥಿಗಳು ಕ್ರಿಕೆಟ್ ಟೂರ್ನಮೆಂಟ್ ನಡೆಸೋದು ಈಗ ಸಾಮಾನ್ಯವಾಗಿ ಬಿಟ್ಟಿದೆ, ಹೀಗೇ ನಡೆದ ಕ್ರಿಕೆಟ್ ಟೂರ್ನಮೆಂಟ್ ಇಬ್ಬರು ಯುವಕರ ಸಾವಿಗೆ ಕಾರಣವಾಗಿದೆ, ಕ್ಷುಲ್ಲಕ ವಿಚಾರಕ್ಕೆ ನಡೆದ ಜಗಳದಲ್ಲಿ ಇಬ್ಬರು ಯುವಕರ ಗುಪ್ತಾಂಗಗಳಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಲಾಗಿದೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ಶಿವರಾತ್ರಿ ಹಬ್ಬದ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿಯನ್ನ ಆಯೋಜಿಸಿದ್ದರು, ಕ್ರಿಕೆಟ್ ಪಂದ್ಯದ ವೇಳೆ ಕ್ಷುಲ್ಲಕ ವಿಚಾರಕ್ಕೆ ನಡೆದ ಜಗಳದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಈ ವೇಳೆ ಚಾಕುವಿನಿಂದ ಇಬ್ಬರು ಯುವಕರು ಗುಪ್ತಾಂಗಗಳಿಗೆ ಇರಿಯಲಾಗಿದ್ದು, ಚಾಕು ಇರಿತಕ್ಕೆ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಮೃತ ಯುವಕರನ್ನ ದೊಡ್ಡಬೆಳವಂಗಲದ ಭರತ್ (23), ಪ್ರತೀಕ್ (17) ಎಂದು ಗುರುತಿಸಲಾಗಿದೆ. ಶುಕ್ರವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಘಟನೆ ನಡೆದಿದ್ದು, ಮೊದಲಿಗೆ ಮೈದಾನದಲ್ಲಿ ವಾಹನ ಪಾರ್ಕಿಂಗ್ ಮಾಡುವ ವಿಚಾರಕ್ಕೆ ಸಂಬಂಧಿಸಿ ದೊಡ್ಡಬೆಳವಂಗಲ ಹಾಗೂ…

Read More

ಬೆಂಗಳೂರು: ರೈತರ ಸಮಸ್ಯೆಗಳನ್ನು ಮನಗಂಡು ಪರಿಹಾರ ನೀಡುವ ಯೋಜನೆಗಳನ್ನು ಆಯವ್ಯಯದಲ್ಲಿ ಘೋಷಿಸಿರುವುದು ನಮ್ಮ ಸರ್ಕಾರ ರೈತರ ಪರವಾಗಿದೆ ಎನ್ನುವುದನ್ನು ಸ್ಪಷ್ಟಪಡಿಸುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ 2023-24 ರ ಆಯವ್ಯಯ ಕುರಿತಂತೆ ಇಂದು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ರೈತರಿಗೆ ಭೂ ಸಿರಿ: ಕೃಷಿಗೆ ರೈತರ ಸಾಲದ ಮಿತಿಯನ್ನು 3 ರಿಂದ 5ಲಕ್ಷದ ವರೆಗೂ ಶೂನ್ಯ ಬಡ್ಡಿದರದಲ್ಲಿ ಸಾಲದಲ್ಲಿ ಹೆಚ್ಚಳವಾಗದಿದ್ದು 30 ಲಕ್ಷಕ್ಕಿಂತ ಹೆಚ್ಚು ರೈತರಿಗೆ ಲಾಭವಾಗಲಿದೆ. ಇನ್ನು ಖಾಸಗಿ ವ್ಯಕ್ತಿಗಳ ಬಳಿ ಸಾಲ ಪಡೆಯುವ ಅಗತ್ಯವಿಲ್ಲ. ಅಗತ್ಯವಿದ್ದಾಗ ಬೀಜ ಗೊಬ್ಬರ ಖರೀದಿಗೆ ಭೂಸಿರಿ ಎಂಬ ಯೋಜನೆಯಡಿ 10ಸಾವಿರ ರೂ. ನೀಡಲಾಗುವುದು. 2500 ರೂ.ರಾಜ್ಯ ಸರ್ಕಾರ, 7500 ರೂ. ನಬಾರ್ಡ್ ಮೂಲಕ ಶೂನ್ಯ ಬಡ್ಡಿ ದರದಲ್ಲಿ ನೀಡಲಾಗುವುದು ಎಂದರು. ಜೀವನ ಜ್ಯೋತಿ ಜೀವ ವಿಮೆ ಯೋಜನೆ: ರೈತ ಯಾವುದೇ ಕಾರಣದಿಮದ ಸಾವನ್ನಪ್ಪಿದರೆ ಅವನ ಕುಟುಂಬಕ್ಕೆ ತೊಂದರೆಯಾದಬಾರದೆಂದು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಜೀವನ…

Read More