Subscribe to Updates
Get the latest creative news from FooBar about art, design and business.
- ಪಾವಗಡ: ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ
- ಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಹರಿಂದ ಅರ್ಜಿ ಆಹ್ವಾನ
- ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
- ಎಸ್.ಅಪ್ಪೇನಹಳ್ಳಿ: ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ನವಿಲು ನರ್ತನ; ಗ್ರಾಮಸ್ಥರಲ್ಲಿ ಕುತೂಹಲ
- ನಾಲ್ಕು ದಶಕಗಳಿಂದ ರಸ್ತೆ ಅಭಿವೃದ್ಧಿ ಕಾಣದ ಬೆಟ್ಟಹಳ್ಳಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರಂಗನಾಥ್ ಚಾಲನೆ
- ಕಳ್ಳಂಬೆಳ್ಳ ಪೊಲೀಸರಿಂದ ರಕ್ಷಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ
- ಹರ್ತಿ ಪತ್ತಿನ ಸಹಕಾರ ಸಂಘದ ಕಟ್ಟಡಕ್ಕೆ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ
- ಸಚಿವ ಡಿ.ಸುಧಾಕರ್ ಪಾರ್ಥಿವ ಶರೀರಕ್ಕೆ ನಮನ: ಭಾವುಕರಾದ ಕೆ.ಎನ್.ರಾಜಣ್ಣ, ಕಂಬನಿ ಮಿಡಿದ ಜಿ.ಪರಮೇಶ್ವರ್
Author: admin
ಬೆಂಗಳೂರು: ಕರ್ನಾಟಕದ ಮಾಜಿ ಸ್ಪೀಕರ್, ಶಾಸಕ ರಮೇಶ್ ಕುಮಾರ್ ಅವರ ಪತ್ನಿ ವಿಜಯಮ್ಮ ಅನಾರೋಗ್ಯದಿಂದಾಗಿ ಇಂದು ಮಧ್ಯಾಹ್ನ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 69 ವರ್ಷ ವಯಸ್ಸಿನ ವಿಜಯಮ್ಮನವರು ಕಳೆದ 2 ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. 2 ದಿನಗಳ ಹಿಂದೆಯಷ್ಟೇ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಮಧ್ಯಾಹ್ನ ಅವರು ನಿಧನರಾಗಿದ್ದಾರೆ ಎಂದು ವರದಿಗಳಿಂದ ತಿಳಿದು ಬಂದಿದೆ. ಮೃತರು ಪತಿ, ಓರ್ವಳು ಮಗಳು, ಓರ್ವ ಮಗ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಬೆಂಗಳೂರು: ರಾಜ್ಯ ಸರಕಾರಿ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಈಗಾಗಲೇ ಹಿಂದಿನ ಮುಖ್ಯ ಕಾರ್ಯದರ್ಶಿ ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚಿಸಲಾಗಿದ್ದು, ಇದಕ್ಕಾಗಿಯೇ ಬಜೆಟ್ ನಲ್ಲಿಯೇ 6 ಸಾವಿರ ಕೋಟಿ ರೂ.ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಹೆಚ್ಚುವರಿ ಹಣ ಅವಶ್ಯವಿದ್ದಲ್ಲಿ ಪೂರಕ ಬಜೆಟ್ ನಲ್ಲಿ ಒದಗಿಸಲಾಗುವುದು ಎಂದು ವರದಿ ಶೀಘ್ರ ಬರಲಿದ್ದು,ಅದರನುಸಾರ ಕ್ರಮವಹಿಸಲಾಗುವುದು ಎಂದ ಮುಖ್ಯಮಂತ್ರಿಗಳು, 2023-24ನೇ ಸಾಲಿನಲ್ಲಿಯೇ ವೇತನ ಆಯೋಗದ ವರದಿಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದರು. ಆಯೋಗ ಮಧ್ಯಂತರ ವರದಿ ನೀಡುವುದೋ ಅಥವಾ ಪೂರ್ಣ ವರದಿ ಸಲ್ಲಿಸುವುದೋ ಅದರನುಸಾರ ಸರಕಾರ ಶೀಘ್ರ ಕ್ರಮ ಕೈಗೊಳ್ಳಲಿದೆ.ಇದಕ್ಕಾಗಿ ಅನುದಾನ ಮೀಸಲಿಟ್ಟಿರುವುದರಿಂದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್…
ನಮ್ಮ ತುರುವೇಕೆರೆ ತಾಲ್ಲೂಕು ಅನೇಕ ಕಲಾವಿದರನ್ನು ನಮ್ಮ ಚಿತ್ರರಂಗಕ್ಕೆ ಕೊಡುಗೆಯಾಗಿ ಕೊಟ್ಟಿದೆ, ಇಂತಹ ಜಾಗದಲ್ಲಿ ನಾನು ಒಬ್ಬ ಕಲಾವಿದನಾಗಿ ಈ ತಾಲೂಕಿನಲ್ಲಿ ಕೆಲಸ ಮಾಡಲು ಅವಕಾಶ ಸಿಗುವ ನಿರೀಕ್ಷೆಯಲ್ಲಿದ್ದೇನೆ ಎಂದು ಚಿತ್ರ ನಟ, ಎಎಪಿ ಪಕ್ಷದ ಟಿಕೆಟ್ ಆಕಾಂಕ್ಷಿ ಟೆನ್ನಿಸ್ ಕೃಷ್ಣ ಹೇಳಿದರು. ತುರುವೇಕೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಎಎಪಿ ಪಕ್ಷದಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಎಪಿ ಪಕ್ಷದ ನಾಯಕರಾದ ಅರವಿಂದ ಕೇಜ್ರಿವಾಲ್ ಅವರ ಅಭಿವೃದ್ಧಿಯ ಚಿಂತನೆಯ ಎಎಪಿ ಪಕ್ಷವು ಬಡವರ ಪರವಾಗಿ ಇರುವ ಒಳ್ಳೆಯ ನಾಯಕತ್ವದ ಪಕ್ಷವಾಗಿದ್ದು, ಜನರ ಕಷ್ಟಗಳಿಗೆ ಸ್ಪಂದಿಸುವ ಪಕ್ಷವಾಗಿದೆ ಎಂದರು. ಕೇಜ್ರಿವಾಲ್ ಅವರ ನಾಯಕತ್ವದಲ್ಲಿ ನಾವುಗಳು ಈ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುತ್ತೇವೆ. ಜೊತೆಗೆ ಮುಂದಿನ ದಿನಗಳಲ್ಲಿ ಯಾವುದೇ ಕಾರಣಕ್ಕೂ ಸರ್ಕಾರಿ ಶಾಲೆಗಳನ್ನು ಮುಚ್ಚುವುದಕ್ಕೆ ಬಿಡುವುದಿಲ್ಲ, ಜೊತೆಗೆ 5,000 ರೂ. ಬೆಂಬಲ ಬೆಲೆಯನ್ನು ಕೊಬ್ಬರಿಗೆ ನೀಡಬೇಕು ಎಂದು ಸರ್ಕಾರಕ್ಕೆ ನಮ್ಮ ಪಕ್ಷದಿಂದ ಒತ್ತಾಯಿಸುತ್ತೇವೆ ಎಂದರು. ಈ ಸಂದರ್ಭದಲ್ಲಿ ಎಎಪಿ ಪಕ್ಷದ ರಾಜ್ಯ ಉಪಾಧ್ಯಕ್ಷರು ಹಾಗೂ ತುಮಕೂರು…
ಮಧುಗಿರಿ: ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಗಳು ಸೌಹಾರ್ದ ಕೇಂದ್ರಗಳಾಗಿ ಪರಿವರ್ತನೆಯಾಗಬೇಕಾದರೆ ಸಾಮೂಹಿಕ ವಿವಾಹದಂತಹ ಸಮಾಜಮುಖಿ ಕಾರ್ಯಕ್ರಮಗಳನ್ನು ಹೆಚ್ಚೆಚ್ಚು ನಡೆಸಬೇಕೆಂದು ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್ ಹೇಳಿದರು. ಹಳೆ ತಿಮ್ಮನಹಳ್ಳಿ ಗ್ರಾಮದಲ್ಲಿ ಶ್ರೀಗಾಳಿ ಆಂಜನೇಯ ಸೇವಾ ಸಮಿತಿ ವತಿಯಿಂದ ಏರ್ಪಡಿಸಲಾಗಿದ್ದ ಹತ್ತನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ನಡೆದ ಸಾಮೂಹಿಕ ವಿವಾಹದಲ್ಲಿ ಮಾತನಾಡಿದ ಅವರು, ಸಾಮೂಹಿಕ ವಿವಾಹಗಳಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿಯ ಬದುಕು ಕಂಡುಕೊಳ್ಳಬಹುದು. ಜೊತೆಗೆ ಪರಸ್ಪರ ಪ್ರೀತಿ, ವಿಶ್ವಾಸ ವೃದ್ಧಿಸುತ್ತದೆ. ಮನುಷ್ಯ ಜೀವನದಲ್ಲಿ ಸರಳತೆ ಪಾಲಿಸಬೇಕು. ಅಂದಾಗ ಮಾತ್ರ ಜೀವನದಲ್ಲಿ ಸುಖ, ಶಾಂತಿ, ನೆಮ್ಮದಿ ಕಾಣಲು ಸಾಧ್ಯ ಜೊತೆಗೆ ಸಮಾಜದಲ್ಲಿ ಆರ್ಥಿಕ ಹೊರೆಯಿಂದ ಬಳಲುತ್ತಿರುವರ ಹಿತಕಾಯಲು ಹಾಗೂ ನೆಮ್ಮದಿ ಜೀವನ ನಡೆಸಲು ಸಾಮೂಹಿಕ ವಿವಾಹಗಳು ಹೆಚ್ಚಾಗಿ ನಡೆಯಬೇಕಾಗಿದೆ ಎಂದರು. ಸಮಾಜದಲ್ಲಿನ ಉಳ್ಳವರು ಸಾಮೂಹಿಕ ವಿವಾಹಗಳನ್ನು ಏರ್ಪಡಿಸುವ ಮೂಲಕ ಶ್ರೀಸಾಮಾನ್ಯರ ಕಲ್ಯಾಣಕ್ಕೆ ನೆರವಾಗಬೇಕು. ಅಂದಾಗ ಮಾತ್ರ ಸಮಾಜದಲ್ಲಿನ ಕೀಳರಿಮೆ ಕಣ್ಮರೆಯಾಗಲು ಸಾಧ್ಯ ಎಂದರು. ಇದೇ ಸಂದರ್ಭದಲ್ಲಿ 6 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಂತಹ ಪ್ರತಿ…
ಪಾವಗಡ: ಪಟ್ಟಣದಲ್ಲಿ ತಾಲ್ಲೂಕು ಆಡಳಿತ ವರ್ಗದವರು ಹಾಗೂ ಗೋರ್ಸೇದಾ ತಾಲ್ಲೂಕು ಘಟಕ ಮತ್ತು ತಾಲ್ಲೂಕಿನ ಬಂಜಾರ ಸಂಘಟನೆಗಳ ಒಕ್ಕೂಟದಿಂದ ದೈವಿ ಅವತಾರ ಪುರುಷ ಸಂತ ಸೇವಾಲಾಲ್ 284 ನೇ ಜಯಂತಿಯನ್ನು ಆಚರಿಸಲಾಯಿತು. ಸಂತ ಸೇವಾಲಾಲ್ ಒರ್ವ ಪವಾಡ ಪುರುಷ ಬಂಜಾರ ಸಮಾಜದ ಕುಲ ದೈವರಾಗಿದ್ದಾರೆ. ಇವರು ಅನೇಕ ಚಮತ್ಕಾರ, ಪವಾಡಗಳ ಮೂಲಕನೇ ಜನರಲ್ಲಿ ಜಾಗೃತಿ ಮೂಡಿಸುವ ಅವತಾರಿ ಪುರುಷಯೆನಿಸಿಕೊಂಡಿದ್ದವರು. ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಸೂರಗೊಂಡನ ಕೊಪ್ಪ ಎಂಬಲ್ಲಿ ಭೀಮ ನಾಯಕ್, ಧರ್ಮಿಣಿ ಯಾಡಿ ಯವರ ಮಗನಾಗಿ 15 ಫೆಬ್ರವರಿ 1739ರಲ್ಲಿ ಜನಿಸಿದರು. ಇವರು ಜನನವಾದ ಸೂರಗೊಂಡನ ಕೊಪ್ಪವನ್ನು ಭಾಯಗಢ ಎಂದು ಕರೆಯಲಾಗುತ್ತದೆ. ಸೇವಾಲಾಲರು ತಮ್ಮ ಲೀಲೆಗಳ ಹಾಗೂ ಪವಾಡಗಳ ಮೂಲಕ ಜನರ ಮನಸ್ಸಿನಲ್ಲಿ ಗುರುವಿನ ಸ್ಥಾನವನ್ನು ಪಡೆದು ಅಜ್ಞಾನವನ್ನು ಹೋಗಲಾಡಿಸಿ ಸುಜ್ಞಾನದ ಜ್ಯೋತಿ ಬೆಳಗಿಸಿದ ಶ್ರೇಷ್ಟ ಸಂತರೆನಿಸಿದ್ದಾರೆ. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಲಂಬಾಣಿ ಸಮಾಜದ ಯುವ ಮುಖಂಡ ಕೃಷ್ಣನಾಯ್ಕ, ಶಕುಂತಲಬಾಯಿ, ತಾಲ್ಲೂಕಿನಲ್ಲಿ 30 ತಾಂಡಗಳಿವೆ ಸುಮಾರು 26 ಸಾವಿರ ಜನಸಂಖ್ಯೆಯಿದೆ. ಆದರೂ…
ಮಧುಗಿರಿ: ಅಟಲ್ ಭೂಜಲ ಪಕ್ವಾಡ ಯೋಜನೆ ಕಾರ್ಯಕ್ರಮದಡಿಯಲ್ಲಿ ಡಿ.ವಿ. ಹಳ್ಳಿ ಗ್ರಾಮಪಂಚಾಯತಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಸಸಿ ನೆಡುವ ಮೂಲಕ ಉದ್ಘಾಟಿಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಸಿಬ್ಬಂದಿಗೆ ಹಾಗೂ ಸಾರ್ವಜನಿಕರಿಗೆ ಅಟಲ್ ಭೋಜನ ಯೋಜನೆ ಅಡಿಯಲ್ಲಿ ನೀರಿನ ಉಪಯೋಗ ಕುರಿತು ಅರಿವು ಮೂಡಿಸಲಾಯಿತು. ಕಾರ್ಯಕ್ರಮದಲ್ಲಿ ಕಮ್ಯುನಿಟಿ ಮೊಬೈಲೈಸರ್ ಸ್ವಾತಿ ಮಲ್ಲಿಕ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಬಾಣದ ರಂಗಯ್ಯ, ಕಾರ್ಯದರ್ಶಿ ನವೀನ್ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿ , ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ವರದಿ: ದೊಡ್ಡೇರಿ ಮಹಾಲಿಂಗಯ್ಯ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಪತಿಯ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದರೂ ಸಹ ಪೊಲೀಸರು ಆರೋಪಿಗಳ ವಿರುದ್ಧ ಸೂಕ್ತ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಿಲ್ಲವೆಂದು ನ್ಯಾಯ ಕೋರಿ ಗಾಯಾಳು ಪತಿಯನ್ನು ಹೆಗಲ ಮೇಲೆ ಹೊತ್ತು ಮಹಿಳೆಯೋರ್ವಳು, ಜಿಲ್ಲಾ ರಕ್ಷಣಾಧಿಕಾರಿ ಕಚೇರಿಗೆ ಬಂದ ಘಟನೆ ಮಧ್ಯಪ್ರದೇಶದ ಶಾದೂಲ್ ಜಿಲ್ಲೆಯಲ್ಲಿ ನಡೆದಿದೆ. ಸೋಹಾಗ್ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಹರಿ ಗ್ರಾಮದ ಗೆಂಡಲಾಲ್ ಯಾದವ್ ಎಂಬ ವ್ಯಕ್ತಿ ಕೆಲಸ ಮುಗಿಸಿಕೊಂಡು ಬರುವಾಗ ಮೂವರು ದುಷ್ಕರ್ಮಿಗಳು ಹಲ್ಲೆ ನಡೆಸಿ ಹಣ ಕಿತ್ತುಕೊಂಡು ಹೋಗಿದ್ದರು. ಇನ್ನೂ ಮಾರಣಾಂತಿಕ ಹಲ್ಲೆ ನಡೆಸಿದರೂ ಸಹ ಪೊಲೀಸರು ಆರೋಪಿಗಳ ವಿರುದ್ಧ ಸೂಕ್ತ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಿಲ್ಲವೆಂದು ಆಕ್ರೋಶಗೊಂಡ ಗೆಂಡಲಾಲ್ ಪತ್ನಿ ತನ್ನ ಗಾಯಾಳು ಪತಿಯನ್ನು ಹೆಗಲ ಮೇಲೆ ಹೊತ್ತು ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿಗೆ ಕರೆತಂದಿದ್ದಾರೆ. ಬಳಿಕ ಇವರ ದೂರು ಆಲಿಸಿದ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಮುಕೇಶ್ ವೈಶ್ಯ, ಮೂವರು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು…
ಹೆಚ್.ಡಿ.ಕೋಟೆ: ಬೆಂಗಳೂರು ಜೈನ್ ವಿಶ್ವ ವಿದ್ಯಾನಿಲಯ ಬ್ಯಾನ್ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ಹೆಚ್.ಡಿ.ಕೋಟೆ ಪಟ್ಟಣದ ಮಿನಿ ವಿಧಾನ ಸೌದದ ಎದುರು ತಾಲ್ಲೂಕು ಪ್ರಗತಿ ಪರ ದಲಿತ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ಕುರಿತು ಮಾತನಾಡಿ ರಾಜ್ಯ ಸಂಶೋದಕರ ಸಂಘದ ಅದ್ಯಕ್ಷ ಮರಿದೇವಯ್ಯ , ಜೈನ ವಿಶ್ವವಿದ್ಯಾನಿಲಯ ಅಂಬೇಡ್ಕರ್ ರವರಿಗೆ ಅಪಮಾನ ಮಾಡುವ ಸಲುವಾಗಿಯೇ ಕಾರ್ಯಕ್ರಮ ರೂಪಿಸಿ ಅಂಬೇಡ್ಕರ್ ರವರಿಗೆ ಅಪಮಾನ ಮಾಡುವ ಪಿತೂರಿ ನಡೆಸಿದ್ದಾರೆ. ಸಮಾಜಘಾತುಕ ಕೆಲಸಗಳನ್ನು ಮಾಡುವ ಜೈನ ವಿಶ್ವವಿದ್ಯಾಲಯನ್ನು ಈ ಕೂಡಲೇ ರದ್ದುಗೊಳಿಸಿ ತಪ್ಪಿತಸ್ಥರನ್ನು ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು. ಜೀವಿಕ ಬಸವರಾಜು ಮಾತನಾಡಿ, ಇತ್ತೀಚೆಗೆ ಬೆಂಗಳೂರು ಜೈನ ವಿಶ್ವವಿದ್ಯಾನಿಲಯದಲ್ಲಿ ಕಿರುನಾಟಕ ಪ್ರದರ್ಶನ ಮಾಡಿ, ಅಲ್ಲಿನ ಆಯೋಜಕರು ಮತ್ತು ಸಮಿತಿಯವರು ಅಂಬೇಡ್ಕರ್ ರವರಿಗೆ ಅಪಮಾನ ಮಾಡಿದ್ದಾರೆ. ಆದ್ದರಿಂದ ತಪ್ಪಿತಸ್ಥರನ್ನು ಗಡಿಪಾರು ಮಾಡಿ ಜೈನ್ ವಿಶ್ವವಿದ್ಯಾಲಯದ ರದ್ದುಪಡಿಸಬೇಕೆಂದು ಒತ್ತಾಯಿಸಿದರು. ಆದಿಕರ್ನಾಟ ಮಹಾಸಭಾ ಅದ್ಯಕ್ಷ ಹೆಚ್.ಸಿ.ನರಸಿಂಹಮೂರ್ತಿ ಮಾತನಾಡಿ, ವಿಶ್ವ ವಿದ್ಯಾನಿಲಯವನ್ನು ಮೊದಲು ರದ್ದುಗೊಳಿಸಬೇಕು. ಅಂಬೇಡ್ಕರ್ ರವರಿಗೆ ಅಪಮಾನ ಇಡೀ ಮಾನವನ ಕುಲವೇ…
ಕೃಷಿ ವಲಯವನ್ನು ಉತ್ತೇಜಿಸುವ ಸಲುವಾಗಿಯೇ, ಶೂನ್ಯ ಬಡ್ಡಿ ಕೃಷಿ ಸಾಲದ ಮಿತಿಯನ್ನು ರೂ.3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸಲಾಗಿದೆ. 56 ಲಕ್ಷ ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ರೂ.180 ಕೋಟಿ ವೆಚ್ಚದಲ್ಲಿ “ಜೀವನ್ ಜ್ಯೋತಿ ಯೋಜನೆಯನ್ನು” ಜಾರಿಗೊಳಿಸಲಾಗುತ್ತಿದೆ. “ಸಹಸ್ರ ಸರೋವರ” ಕಾರ್ಯಕ್ರಮದಡಿ ರಾಜ್ಯದಲ್ಲಿ 1 ಸಾವಿರ ಸರೋವರಗಳನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದ್ದು, ಇದು ಕೃಷಿ ವಲಯದ ನೀರಾವರಿ ಯೋಜನೆಗಳಿಗೆ ಅನುಕೂಲವಾಗುತ್ತದೆ. ಕಿಸಾನ್ ಕಾರ್ಡ್ ಹೊಂದಿರುವ ರೈತರಿಗೆ “ಭೂ ಸಿರಿ ಯೋಜನೆಯಡಿ” 10 ಸಾವಿರ ರೂಪಾಯಿಗಳ ಧನ ಸಹಾಯವನ್ನು ಒದಗಿಸಲಾಗುವುದು ಒಟ್ಟಾರೆಯಾಗಿ ಕೃಷಿ ಮತ್ತು ಅದಕ್ಕೆ ಪೂರಕ ಚಟುವಟಿಗಳ ವಲಯಕ್ಕೆ 2023-24ನೇ ಸಾಲಿನಲ್ಲಿ ಒಟ್ಟಾರೆಯಾಗಿ 39031 ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಲಾಗಿದೆ. “ಅಮೃತ್ ಸ್ವಾಭಿಮಾನಿ ಕುರಿಗಾಹಿ ಯೋಜನೆ” ಅಡಿಯಲ್ಲಿ 20 ಸಾವಿರ ಫಲಾನುಭವಿಗಳಿಗೆ 355 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ಘಟಕಗಳನ್ನು ಸ್ಥಾಪಿಸುವ ಯೋಜನೆ ಜಾರಿಗೊಳಿಸಲಾಗುತ್ತಿದೆ. ಕೇಂದ್ರ ಪುರಸ್ಕೃತ ಅಮೃತ್-2.0 ಯೋಜನೆ ಅಡಿಯಲ್ಲಿ ರಾಜ್ಯದ 287 ನಗರ ಪ್ರದೇಶಗಳಲ್ಲಿ…
ಕೊಟ್ಟಿಗೆಹಾರ: ಧರ್ಮಸ್ಥಳಕ್ಕೆ ಭಕ್ತಾಧಿಗಳು ಪಾದಯಾತ್ರೆಯಲ್ಲಿ ಸಾಗುತ್ತಿದ್ದು ಚಾರ್ಮಾಡಿ ಘಾಟ್ ನಲ್ಲಿ ಕುಡುಕನೊಬ್ಬ ಪಾದಯಾತ್ರಿಗಳಿಗೆ ಕಾಟಕೊಟ್ಟ ಘಟನೆ ನಡೆದಿದೆ. ಚನ್ನರಾಯಪಟ್ಟಣ ಮೂಲದ ವ್ಯಕ್ತಿಯೊಬ್ಬ ಪಾದಯಾತ್ರೆ ನೆಪದಲ್ಲಿ ಬಂದು ಕುಡಿದು ಅಸಭ್ಯವಾಗಿ ವರ್ತಿಸುತ್ತಿದ್ದ. ಪಾದಯಾತ್ರಿಗರು ಕುಡಿದು ಪಾದಯಾತ್ರೆಗೆ ಬಂದ ವ್ಯಕ್ತಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಚಾರ್ಮಾಡಿ ಘಾಟ್ ನಲ್ಲಿ ರಸ್ತೆ ಬದಿಯ ಪ್ರಪಾತಕ್ಕೆ ಕಾಲು ಜಾರಿ ಬೀಳುವ ಅಪಾಯವಿರುವುದರಿಂದ ಪಾನಮತ್ತನಾಗಿ ಚಾರ್ಮಾಡಿ ಘಾಟ್ ನಲ್ಲಿದ್ದ ವ್ಯಕ್ತಿಗೆ ಸ್ಥಳೀಯರು ಹಾಗೂ ಪಾದಯಾತ್ರಿಗರು ಬುದ್ದಿ ಹೇಳಿ ಕಳಿಸಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1 ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA